Author: admin
ಮಂಗಳೂರು: ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ, ಪದ್ಮಶ್ರೀ ಪುರಸ್ಕೃತ ಪರಮಪೂಜ್ಯ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರು ಮಂಗಳವಾರ ಆತ್ಮಶಕ್ತಿ ಸಹಕಾರ ಸಂಘದ ಪ್ರಧಾನ ಕಚೇರಿಗೆ ಭೇಟಿ ನೀಡಿದರು. https://chat.whatsapp.com/FCEnlTkAKCC0MGPhXtX4i4 ಕೇರಳದ ಅಲಪುಳ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 45ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧಕ್ಕೆ ಅವರು ಭೇಟಿ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸಂಘದ ವತಿಯಿಂದ ವಿಶುದ್ಧಾನಂದ ಸ್ವಾಮೀಜಿಯವರನ್ನು ಸತ್ಕರಿಸಿ, ಗೌರವಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕ ವಿಶ್ವನಾಥ, ಹಿರಿಯ ಶಾಖಾಧಿಕಾರಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…
ಮಂಗಳೂರು: ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ, ಪದ್ಮಶ್ರೀ ಪುರಸ್ಕೃತ ಪರಮಪೂಜ್ಯ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರು ಮಂಗಳವಾರ ಆತ್ಮಶಕ್ತಿ ಸಹಕಾರ ಸಂಘದ ಪ್ರಧಾನ ಕಚೇರಿಗೆ ಭೇಟಿ ನೀಡಿದರು. https://chat.whatsapp.com/FCEnlTkAKCC0MGPhXtX4i4 ಕೇರಳದ ಅಲಪುಳ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ ೪೮ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧಕ್ಕೆ ಅವರು ಭೇಟಿ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸಂಘದ ವತಿಯಿಂದ ವಿಶುದ್ಧಾನಂದ ಸ್ವಾಮೀಜಿಯವರನ್ನು ಸತ್ಕರಿಸಿ, ಗೌರವಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕ ವಿಶ್ವನಾಥ, ಹಿರಿಯ ಶಾಖಾಧಿಕಾರಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ…
ಪಕ್ಷಿಕೆರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆರೋಗ್ಯ ಶಿಬಿರ ಉದ್ಘಾಟಿಸಿ ಧನಂಜಯ ಶೆಟ್ಟಿಗಾರ್ ಅಭಿಪ್ರಾಯ ಮಂಗಳೂರು: ನಾವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬೇಕು. ನಾವು ಆರೋಗ್ಯವಾಗಿ ಇದ್ದರೆ ಸಮಾಜವೂ ಆರೋಗ್ಯ ಪೂರ್ಣವಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ-ಸಂಸ್ಥೆಗಳ ಜೊತೆ ಸೇರಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿದೆ. ಈ ಶಿಬಿರದ ಪ್ರಯೋಜನ ಊರಿಗೆ ಸಿಗಲಿ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನಷ್ಟು ಬೆಳವಣಿಗೆ ಕಾಣಲಿ ಎಂದು ಪಕ್ಷಿಕೆರೆ ವಿನಾಯಕ ಮಿತ್ರ ಮಂಡಳಿಯ ಗೌರವಾಧ್ಯಕ್ಷ ಧನಂಜಯ ಶೆಟ್ಟಿಗಾರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಪಕ್ಷಿಕೆರೆಯ ಕೋರ್ದಬ್ಬು ದೈವಸ್ಥಾನದ ಬಳಿಯ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇಲ್ಲಿನ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಕೆ.ಎಂ.ಸಿ.…
ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು. ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಪಿ.ಎಫ್.ಎಕ್ಸ್. ಸಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಿ, ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿಯನ್ನು ಗೌರವಿಸಲಾಯಿತು. ಪಿ.ಎಫ್.ಎಕ್ಸ್. ಸಲ್ದಾನ್ಹ ಅವರ ಭಾವಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆ.ಡಾ.ಪ್ರವೀಣ್ ಮಾರ್ಟಿಸ್, ಕರ್ಣಾಟಕ ಬ್ಯಾಂಕಿನ ಮಾಜಿ ಮಹಾಪ್ರಬಂಧಕ ಹಾಗೂ ಮುಖ್ಯ ಅನುಸರಣಾಧಿಕಾರಿ ಡಾ| ಮೀರಾ ಅರಾನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಚನಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಐಸಾಕ್ ವಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು. ಬ್ಯಾಂಕ್ ಅಧ್ಯಕ್ಷ…
ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಜೈರಾಜ್ ಬಿ. ರೈ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯರ ಮಕ್ಕಳಿಗೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪಿ.ಯು.ಸಿ ಉತ್ತೀರ್ಣರಾಗಿ, 2026-27ನೇ ಶೈಕ್ಷಣಿಕ ಸಾಲಿನಲ್ಲಿ 1. ಎಂ.ಬಿ.ಬಿ.ಎಸ್/ಬಿಡಿಎಸ್/ಆಯುಷ್/ವೆಟರ್ನರಿ ಮುಂತಾದ ವೈದ್ಯಕೀಯ ಶಿಕ್ಷಣ ಪದವಿ/ಸ್ನಾತಕೋತ್ತರ ವ್ಯಾಸಂಗವನ್ನು ರಾಷ್ಟ್ರೀಯ NEET ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ ಪಡೆದ ವಿದ್ಯಾರ್ಥಿಗಳಿಗೆ, 2. ಇಂಜಿನಿಯರಿಂಗ್ ಪದವಿ/ಸ್ನಾತಕೋತ್ತರ ವ್ಯಾಸಂಗವನ್ನು ರಾಜ್ಯ ಮತ್ತು ರಾಷ್ಟ್ರೀಯ ಪ್ರವೇಶ ಪರೀಕ್ಷೆ (CET/JEE) ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ ನಂತರ ಇಂಜಿನಿಯರಿಂಗ್ ಪದವಿಯ ವ್ಯಾಸಂಗವನ್ನು ರಾಜ್ಯ…
ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಮೇ 10ರಂದು ಭಾನುವಾರ ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಪಕ್ಷಿಕೆರೆಯ ಕೋರ್ದಬ್ಬು ದೈವಸ್ಥಾನ ಬಳಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ಶಿಬಿರದಲ್ಲಿ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸನ್ ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಈ ವೈದ್ಯಕೀಯ ಶಿಬಿರವನ್ನು…
ಬೆಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ 2025-26ನೇ ಸಾಲಿನಲ್ಲಿ ಒಟ್ಟು ರೂ 1.17 ಕೋಟಿ ಲಾಭ ಗಳಿಸಿದೆ. https://chat.whatsapp.com/FCEnlTkAKCC0MGPhXtX4i4 ಬ್ಯಾಂಕಿನ ಅಧ್ಯಕ್ಷರಾದ ನಂಜೇಗೌಡರವರು ಈ ಬಗ್ಗೆ ಮಾಹಿತಿ ನೀಡಿದ್ದು, 31 ಮಾರ್ಚ್ 2026ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಠೇವಣಿ ರೂ 100 ಕೋಟಿ ದಾಟಿದ್ದು, ಒಟ್ಟು ಸಾಲ ರೂ 69.35 ಕೋಟಿ ಇದೆ. ಇದೆಲ್ಲ ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳ ಪ್ರರಿಶ್ರಮ ಹಾಗು ಸದಸ್ಯರು, ಗ್ರಾಹಕರು ಬ್ಯಾಂಕಿನ ಮೇಲೆ ಇಟ್ಟಿರುವ ನಂಬಿಕೆಯಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ಬ್ಯಾಂಕು ಸುಮಾರು 54 ವರ್ಷಗಳಿಂದ ತನ್ನ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಹಲವು ಸೇವೆಗಳನ್ನು ನೀಡುತ್ತ ಬಂದಿದೆ. ಬ್ಯಾಂಕು ಈಗಾಗಲೇ ಮೂರು ಶಾಖೆಗಳನ್ನು ಹೊಂದಿದ್ದು ಸದಸ್ಯರು ಹಾಗೂ ಗ್ರಾಹಕರಿಗೆ ಇನ್ನು ಹೆಚ್ಚಿನ ಸೇವೆ ಒದಗಿಸಲು ಮತ್ತೊಂದು ಶಾಖೆಯನ್ನು ತೆರೆಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯಪ್ರವೃತವಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷರಾದ ಸಿ.ಎಚ್ ಶ್ರೀನಿವಾಸ್ ಜೊತೆಗಿದ್ದರು. ನಿಮ್ಮ ಸಂಸ್ಥೆಗಳ…
ಮಂಗಳೂರು: ಚುನಾವಣೆಯಲ್ಲಿ ಚಲಾಯಿಸಲ್ಡುವ ಪ್ರತಿಯೊಂದು ಮತವೂ ಬಹು ಅಮೂಲ್ಯವಾದುದು ಎಂಬುದು ಎಲ್ಲ ಮತದಾನ ಪ್ರಕ್ರಿಯೆಗಳಲ್ಲೂ ಕೇಳಿ ಬರುವ ಮಾತು. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲೂ ಈ ಮಾತು ದೃಢಪಟ್ಟಿದೆ. ತಮಿಳುನಾಡಿನ ಸಹಕಾರ ಸಚಿವರಾಗಿದ್ದ ಕೆ.ಆರ್. ಪೆರಿಯಕುರುಪ್ಪನ್ ಅವರು ಕೇವಲ ಒಂದು ಮತದಿಂದ ಸೋತು ವಿಧಾನಸಭಾ ಸದಸ್ಯತ್ವವನ್ನು ಕಳೆದುಕೊಂಡಿರುವುದು ಐತಿಹಾಸಿಕ ದಾಖಲೆ ಎನಿಸಿದೆ. https://chat.whatsapp.com/FCEnlTkAKCC0MGPhXtX4i4 ತಮಿಳುನಾಡಿನಲ್ಲಿ ಚುನಾವಣಾ ಫಲಿತಾಂಶ ಘೋಷಣೆಗೆ ಮೊದಲು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧಿಕಾರದಲ್ಲಿತ್ತು. ಆ ಪಕ್ಷದ ಕೆ.ಆರ್. ಪೆರಿಯಕುರುಪ್ಪನ್ ಅವರು ಸಹಕಾರ ಸಚಿವರಾಗಿದ್ದರು. ಅವರ ಎದುರಾಳಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶ್ರೀನಿವಾಸ ಸೇತುಪತಿ ಆರ್. ಕೇವಲ ಒಂದೇ ಮತದ ಅಂತರದಲ್ಲಿ ಪೆರಿಯಕುರುಪ್ಪನ್ ಅವರನ್ನು ಸೋಲಿಸಿದರು. ತಿರುಪತ್ಪೆತೂರು ವಿಧಾನಸಭಾ ಕ್ಷೇತ್ರದಲ್ಲಿ ಪೆರಿಯಕುರುಪ್ಪನ್ 83,374 ಮತಗಳನ್ನು ಪಡೆದರೆ, ಸೇತುಪತಿ 83,375 ಮತಗಳನ್ನು ಪಡೆದು ವಿಜಯಿಯಾದರು.
ನವದೆಹಲಿ: ಸಹಕಾರಿ ವಲಯದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಬಲಪಡಿಸುವ ಗುರಿ ಹೊಂದಿರುವ ಮಹತ್ವದ ಕ್ರಮವೊಂದರಲ್ಲಿ, ಕೇಂದ್ರ ಸಹಕಾರ ಸಚಿವಾಲಯದ ಅಡಿಯಲ್ಲಿ ಸಹಕಾರಿ ಸಂಘಗಳ ಕೇಂದ್ರ ನೋಂದಣಿ ಕೇಂದ್ರವು (CRCS), 2025–26ರ ಹಣಕಾಸು ವರ್ಷಕ್ಕೆ ಪರಿಷ್ಕೃತ ಲೆಕ್ಕಪರಿಶೋಧಕರ ಸಮಿತಿಗೆ ಸೂಚನೆ ನೀಡಿದೆ. https://chat.whatsapp.com/FCEnlTkAKCC0MGPhXtX4i4 ಈ ಆದೇಶವು 2023, 2024 ಮತ್ತು 2025ರಲ್ಲಿ ಹೊರಡಿಸಲಾದ ಎಲ್ಲಾ ಹಿಂದಿನ ಸಮಿತಿಗಳನ್ನು ರದ್ದುಗೊಳಿಸುತ್ತದೆ ಮತ್ತು ಬಹು-ರಾಜ್ಯ ಸಹಕಾರಿ ಸಂಘಗಳು (MSCS) ಮತ್ತು ಸಹಕಾರಿ ಬ್ಯಾಂಕುಗಳ ಶಾಸನಬದ್ಧ ಮತ್ತು ಏಕಕಾಲೀನ ಲೆಕ್ಕಪರಿಶೋಧನೆಗಾಗಿ ಸಮಗ್ರ ಚೌಕಟ್ಟನ್ನು ರೂಪಿಸುತ್ತದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಬಹು-ರಾಜ್ಯ ಸಹಕಾರಿ ಬ್ಯಾಂಕುಗಳ ಶಾಸನಬದ್ಧ ಲೆಕ್ಕಪರಿಶೋಧನೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಮಾಡುವುದನ್ನು ಮುಂದುವರಿಸಲಿದ್ದಾರೆ. ಇದು ಬ್ಯಾಂಕಿಂಗ್ ನಿಯಂತ್ರಕ ಮಾನದಂಡಗಳೊಂದಿಗೆ ಹೊಂದಾಣಿಕೆಯನ್ನು ಖಚಿತಪಡಿಸುತ್ತದೆ. ಬ್ಯಾಂಕುಗಳನ್ನು ಹೊರತುಪಡಿಸಿ MSCSಗಳಿಗೆ, 9,248 ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಗಳ ಏಕೀಕೃತ ಸಮಿತಿಗೆ ಸೂಚಿಸಲಾಗಿದೆ, ಆದರೆ ಬ್ಯಾಂಕುಗಳು ಸೇರಿದಂತೆ ಎಲ್ಲಾ MSCSಗಳಲ್ಲಿ ಏಕಕಾಲಿಕ ಲೆಕ್ಕಪರಿಶೋಧನೆಗಾಗಿ 33,375 ಸಂಸ್ಥೆಗಳ ದೊಡ್ಡ ಸಮಿತಿಯನ್ನು ನೇಮಿಸಲಾಗಿದೆ. ಈ…
ಶಾಂತಿಯುತ ಜಗತ್ತಿಗಾಗಿ ಸಹಕಾರಿ (Cooperative for a Peaceful World): ಅಂತಾರಾಷ್ಟ್ರೀಯ ಸಹಕಾರಿ ದಿನದ ಧ್ಯೇಯವಾಕ್ಯ
ಜುಲೈ 4ರಂದು ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆ ನವದೆಹಲಿ: ಪ್ರತಿವರ್ಷದ ಜುಲೈ ಮೊದಲ ಶನಿವಾರ ಆಚರಿಸಲ್ಪಡುವ ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆಯು ಈ ಬಾರಿ 2026ರ ಜುಲೈ 4ರಂದು ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟದ (ಐಸಿಎ) ವತಿಯಿಂದ ಆಚರಿಸಲ್ಪಡಲಿದೆ. ಈ ವಿಶೇಷ ದಿನಕ್ಕೆ ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟವು ಶಾಂತಿಯುತ ಜಗತ್ತಿಗಾಗಿ ಸಹಕಾರಿ (Cooperative for a Peaceful World) ಎಂಬ ಧ್ಯೇಯವಾಕ್ಯವನ್ನು ಬಿಡುಗಡೆ ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಶಾಂತಿಯುತ ಜಗತ್ತಿಗೆ ಸಹಕಾರಿ ಎಂಬ ಧ್ಯೇಯವಾಕ್ಯದ ಮೂಲಕ ಹೆಚ್ಚುತ್ತಿರುವ ವಿಭಜಿತ ಜಾಗತಿಕ ಬಿಕ್ಕಟ್ಟಿನ ಸಮಯದಲ್ಲಿ ಸಾಮಾಜಿಕ ಒಗ್ಗಟ್ಟು, ಸಂವಾದ ಮತ್ತು ಸ್ಥಿರತೆಯನ್ನು ಬೆಳೆಸುವಲ್ಲಿ ವಲಯದ ಬೆಳೆಯುತ್ತಿರುವ ಪಾತ್ರದ ಮೇಲೆ ಬೆಳಕು ಚೆಲ್ಲುತ್ತದೆ. ಸಾಮೂಹಿಕ ಮಾಲೀಕತ್ವ, ಪ್ರಜಾಸತ್ತಾತ್ಮಕ ಭಾಗವಹಿಸುವಿಕೆ ಮತ್ತು ಸಾಮೂಹಿಕ ಲಾಭದ ಮೂಲಕ ವ್ಯಕ್ತಿ ಮತ್ತು ಸಮುದಾಯಗಳನ್ನು ಒಗ್ಗೂಡಿಸುವ, ಏಕೀಕರಿಸುವ ಶಕ್ತಿಯಾಗಿ ಕಾರ್ಯನಿರ್ವಹಿಸುವ ಸಹಕಾರಿ ಮಾದರಿಯ ವಿಶಿಷ್ಟ ಸಾಮರ್ಥ್ಯವನ್ನು ಈ ಧ್ಯೇಯವಾಕ್ಯವು ಒತ್ತಿಹೇಳುತ್ತದೆ. ಅನೇಕ ಪ್ರದೇಶಗಳು ಸಂಘರ್ಷ, ಹೆಚ್ಚುತ್ತಿರುವ ಅಸಮಾನತೆ, ಆರ್ಥಿಕ ಅನಿಶ್ಚಿತತೆ ಮತ್ತು ಕ್ಷೀಣಿಸುತ್ತಿರುವ ಸಾರ್ವಜನಿಕ ನಂಬಿಕೆಯೊಂದಿಗೆ…
