Author: admin
ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯ ಉದ್ಘಾಟನಾ ಸಮಾರಂಭ
ಮಂಗಳೂರು: ಬಿ.ಸಿ. ರೋಡ್ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ. ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಂಡಿದ್ದು ಮಾರ್ಚ್ 6ರಂದು ಶುಕ್ರವಾರ ಸಂಜೆ 4.35ಕ್ಕೆ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಸ್ಥಳೀಯ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಸಾಕಾರಗೊಳಿಸುವ ಮುಖ್ಯ ಉದ್ದೇಶದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್ವೆಲ್ನಲ್ಲಿ 30-01-2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ. ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಸಜ್ಜಿತವಾದ ಹವಾನಿಯಂತ್ರಿತ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ.…
ಬೆಂಗಳೂರು: ಸೌಹಾರ್ದ ಸಹಕಾರ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20ರಷ್ಟು ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು. ಬ್ಯಾಂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ಘೋಷಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹಾಗೂ 12 ಸಹಕಾರ ಸಂಘಗಳು ಸಲ್ಲಿಸಿದ ಈ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿದೆ. ಹೊಸ ಕಾಯ್ದೆಯು ಠೇವಣಿಯ ಶೇ.20ರಷ್ಟು ಮೊತ್ತವನ್ನು ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು ಮತ್ತು ಪದಾಧಿಕಾರಿಗಳು ಪ್ರತಿವರ್ಷ ಆಸ್ತಿ ಘೋಷಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಈ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಅರ್ಜಿ…
ಮಹಿಳಾ ಹಗ್ಗಜಗ್ಗಾಟದಲ್ಲಿ ಪ್ರಥಮ, ವೈಯಕ್ತಿಕ ಸ್ಪರ್ಧೆಗಳಲ್ಲೂ ಹಲವು ಪ್ರಶಸ್ತಿ ಪುತ್ತೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವತಿಯಿಂದ ಭಾನುವಾರ ಅಡ್ಯಾರ್ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಕಾವು ಘಟಕ ಹಲವು ಪ್ರಶಸ್ತಿಗಳನ್ನು ಗೆದ್ದಿದೆ. https://chat.whatsapp.com/FCEnlTkAKCC0MGPhXtX4i4 ಮಹಿಳಾ ಹಗ್ಗಜಗ್ಗಾಟದಲ್ಲಿ ಕ್ಯಾಂಪ್ಕೊ ಕಾವು ತಂಡ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡಿದೆ. ಹರಿಣಾಕ್ಷಿ ಕೆ, ವಿನೋಧಿನಿ, ಜ್ಯೋತಿ, ಮಮತಾ ಎನ್, ವಿನುತಾ ಎಸ್., ಶೈಲಜಾ ಸಿ.ಎಚ್., ದಿವ್ಯಾ ಡಿ ಅವರಿದ್ದ ತಂಡ ಎದುರಾಳಿ ತಂಡವನ್ನು ಸೋಲಿಸಿ ಬಹುಮಾನ ಗೆದ್ದುಕೊಂಡಿತು. ಆಶುಭಾಷಣ ಸ್ಪರ್ಧೆಯಲ್ಲಿ ಹರಿಣಾಕ್ಷಿ ಕೆ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡರು. 35 ವರ್ಷದವರೊಳಗಿನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಹರಿಣಾಕ್ಷಿ ಡಿ ಪ್ರಥಮ ಬಹುಮಾನ ಪಡೆದರೆ, ಅಕ್ಷತಾ ತೃತೀಯ ಸ್ಥಾನ ಪಡೆದರು. 200 ಮೀಟರ್ ಓಟದ 35 ವರ್ಷದ ಕೆಳಗಿನವರ ವಿಭಾಗದಲ್ಲಿ ಹರಿಣಾಕ್ಷಿ ಡಿ ಪ್ರಥಮ ಬಹುಮಾನ ಪಡೆದರೆ, ಅಕ್ಷತಾ ತೃತೀಯ ಸ್ಥಾನ ಪಡೆದರು. 35-50…
ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಭಾನುವಾರ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಮೂರು ಸುತ್ತುಗಳಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ್ಪರ್ಧಿಸಿದ್ದ ಸಂಘದ ಅಧ್ಯಕ್ಷರಾದ ಸುರೇಶ್ ಓಡಬಾಯಿ ಹಾಗೂ ವಿನಯ್ ಕುಮಾರ್ ಅವರು ಪ್ರಥಮ ಸ್ಥಾನ ಪಡೆದರು. ಮಂಗಳೂರು ಯೆಯ್ಯಾಡಿಯ ಪ್ರಣವ ಸೌಹಾರ್ದ ಸಹಕಾರಿ ಸಂಘವು ದ್ವಿತೀಯ ಸ್ಥಾನ ಪಡೆಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘ ತೃತೀಯ ಸ್ಥಾನ ಪಡೆಯಿತು. ಒಟ್ಟು ಹದಿನೇಳು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಹಕಾರಿ ಕ್ಷೇತ್ರ, ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ಜ್ಞಾನದ ವಿಷಯದಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಮೋಹನ್ದಾಸ್ ಮರಕಡ ಕ್ವಿಜ್ ಮಾಸ್ಟರ್ ಆಗಿ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಬಹುಮಾನ ವಿತರಣಾ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ…
ಬೋಳೂರಿನಲ್ಲಿ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಸ್ವಂತ ಕಚೇರಿ ಉದ್ಘಾಟಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿಕೆ ಮಂಗಳೂರು: ವಾಣಿಜ್ಯ ಬ್ಯಾಂಕ್ಗಳು ಸಂಕುಚಿತವಾಗಿ ವಿಲೀನವಾಗುವ ಪರಿಸ್ಥಿತಿಗೆ ಬಂದಿವೆ. ಸಿರಿವಂತರಿಗೆ ಮಾತ್ರ ಅಲ್ಲಿ ಸಾಲ ಸಿಗುವ ಪರಿಸ್ಥಿತಿ ಇದೆ. ಆದರೆ, ಸಹಕಾರಿ ಬ್ಯಾಂಕುಗಳು ಇಂದು ಊರಿನ ಪ್ರತಿಯೊಬ್ಬರಿಗೂ ಸುಲಭದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಪ್ರತೀ ಮನೆಗೂ ಬೆಳಕಾಗಿದೆ ಹಾಗೂ ಮಹಿಳೆಯರಿಗೆ ಸ್ವಾವಲಂಬಿ ಬದುಕು ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ ‘ಸಹಕಾರ ಸೌಧʼವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಸಾಲ ಅತೀ ಹೆಚ್ಚು ನೀಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ಅದ್ವಿತೀಯ ಸಾಧನೆ ಮಾಡಿದೆ. ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರುಪಾವತಿ ಮಾಡುವ ಮೂಲಕ…
ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯ ಮೂಡುಬಿದಿರೆ: ಜನರ ವಿಶ್ವಾಸವೇ ಸಹಕಾರಿ ಕ್ಷೇತ್ರದ ನಿಜವಾದ ಶಕ್ತಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ನೆತ್ತೋಡಿ–ಮಾರೂರಿನ ಎ.ಪಿ. ಗಾರ್ಡನ್ನಲ್ಲಿ ಶನಿವಾರ ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಾಣಿಜ್ಯ ಬ್ಯಾಂಕ್ಗಳು ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಮುಚ್ಚುತ್ತಿರುವ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ಗಳು ಜನರಿಗೆ ಇನ್ನಷ್ಟು ಹತ್ತಿರವಾಗುತ್ತಿವೆ. ಕೃಷಿಕರು, ಕೂಲಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಸ್ಥರ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಲ ಸೌಲಭ್ಯ ಒದಗಿಸುವುದು ಸಹಕಾರಿ ಬ್ಯಾಂಕ್ಗಳ ಬದ್ಧತೆಯಾಗಿದೆ. ಸಹಕಾರಿ ಸಂಘಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಸವಿನೆನಪಿಗಾಗಿ 100 ಕೋಟಿ ರೂ. ಗಿಂತ ಅಧಿಕ ವ್ಯವಹಾರದ ಗುರಿ ಹೊಂದುವಂತೆ ಯೋಜನೆ ರೂಪಿಸಬೇಕು. ಆಡಳಿತ ಮಂಡಳಿ ದೃಢಸಂಕಲ್ಪದಿಂದ ಶ್ರಮಿಸಿದರೆ ಈ ಗುರಿ ಕೆಲವೇ ವರ್ಷಗಳಲ್ಲಿ ಸಾಧಿಸಬಹುದು ಎಂದರು. ದಕ್ಷಿಣ…
ಬಂಟ್ವಾಳ: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವತಿಯಿಂದ ಭಾನುವಾರ ಅಡ್ಯಾರ್ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಕ್ರಿಕೆಟ್ನಲ್ಲಿ ದ್ವಿತೀಯ ಸ್ಥಾನ ಪಡೆದ ಸಮಾಜ ಸೇವಾ ಸಹಕಾರಿ ಸಂಘ, ಪುರುಷರ ಹಗ್ಗಜಗ್ಗಾಟದಲ್ಲಿ ಕೂಡ ದ್ವಿತೀಯ ಸ್ಥಾನ ಪಡೆಯಿತು. ವಾಲಿಬಾಲ್ನಲ್ಲಿ ತೃತೀಯ ಸ್ಥಾನ ಪಡೆಯಿತು. ಮಕ್ಕಳ ಚಿತ್ರಕಲೆ ಸ್ಪರ್ಧೆಯ ಒಂದರಿಂದ ನಾಲ್ಕನೇ ತರಗತಿ ವಿಭಾಗದಲ್ಲಿ ಸಮಾಜ ಸೇವಾ ಸಹಕಾರಿ ಸಂಘವನ್ನು ಪ್ರತಿನಿಧಿಸಿದ್ದ ವಿದ್ಯಾ ಪಿ.ಬಿ, 5-7 ತರಗತಿ ವಿಭಾಗದಲ್ಲಿ ಆದ್ಯಾ ಪಿ.ಬಿ ಪ್ರಥಮ ಸ್ಥಾನ ಪಡೆದರೆ, 8-10ನೇ ತರಗತಿ ವಿಭಾಗದಲ್ಲಿ ಚಿರಾಗ್ ತೃತೀಯ ಸ್ಥಾನ ಪಡೆದರು. ವೇಗದ ನಡಿಗೆಯಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ಸವಿತಾ ದ್ವಿತೀಯ ಸ್ಥಾನ ಪಡೆದರು. ಕ್ರೀಡೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಾದ ಸಮಾಜ ಸೇವಾ ಸಹಕಾರಿ ಸಂಘದ ಎಲ್ಲ ಸಿಬ್ಬಂದಿ, ಆಡಳಿತ ಮಂಡಳಿ ಸದಸ್ಯರನ್ನು ಬ್ಯಾಂಕಿನ ಅಧ್ಯಕ್ಷರಾದ…
ಸಹಕಾರಿ ಕ್ರೀಡೋತ್ಸವ ಉದ್ಘಾಟಿಸಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಭಿಪ್ರಾಯ ಮಂಗಳೂರು: ಸಹಕಾರಿ ಕ್ಷೇತ್ರವು ಜನ ಜೊತೆ ನಿಕಟ ಸಂಪರ್ಕ ಸಾಧಿಸುವ ಸಾಧನದಂತೆ ಕೆಲಸ ಮಾಡುತ್ತಿದೆ. ಸಹಕಾರ ಭಾರತಿಯು ಸಹಕಾರಿ ಕ್ಷೇತ್ರದಲ್ಲಿ ರಾಷ್ಟ್ರೀಯತೆಯ ಚಿಂತನೆ ಹರಡಿಸುವ ಕೆಲಸ ಮಾಡುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಸಹಕಾರ ಭಾರತಿ ಮಂಗಳೂರು ಮಹಾನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ಅಡ್ಯಾರ್ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ದ.ಕ. ಜಿಲ್ಲಾ ಮಟ್ಟದ `ಸಹಕಾರಿ ಕ್ರೀಡೋತ್ಸವದಲ್ಲಿ ದ್ವಜಾರೋಹಣ ಮಾಡಿ, ಉದ್ಘಾಟಿಸಿ ಮಾತನಾಡಿದರು. ಸಹಕಾರ ಮನೋಭಾವ ಎಲ್ಲರಲ್ಲೂ ಇರಬೇಕು. ಸಹಕಾರಿ ಸಂಸ್ಥೆಯ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿ ಸಮಾಜದ ಜೊತೆ ಸಹಕಾರಿ ಮನೋಭಾವದಿಂದ ಕೆಲಸ ಮಾಡಬೇಕು. ಕೇಂದ್ರದಲ್ಲಿ ಸಹಕಾರ ಸಚಿವಾಲಯ ಆರಂಭವಾಗಿ ಸಹಕಾರ ಸಚಿವರಾದ ನಂತರ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು…
ಎಂಸಿಸಿ ಬ್ಯಾಂಕ್ ಬೆಳ್ಮಣ್ ಶಾಖೆ ವಾರ್ಷಿಕೋತ್ಸವ, ಒಂದೇ ವರ್ಷ ರೂ.10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ
ಬೆಳ್ಮಣ್: ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ ಬೆಳ್ಮಣ್ ಶಾಖೆಯಲ್ಲಿ ಆಚರಿಸಲಾಯಿತು. ಒಂದು ವರ್ಷದ ಯಶಸ್ವಿ ಕಾರ್ಯ ಹಾಗೂ ರೂ. 10 ಕೋಟಿಯ ವ್ಯವಹಾರದ ಮೈಲಿಗಲ್ಲು ದಾಟಿದ ಸಾಧನೆಯನ್ನು ಸಂಕೇತಿಸುವಂತೆ ಸಂಸ್ಥೆಯ ಅಧ್ಯಕ್ಷರು, ಅತಿಥಿಗಳು, ಬೆಳ್ಮಣ್ ಶಾಖೆಯ ಎಲ್ಲಾ ಗ್ರಾಹಕರ ಪರವಾಗಿ ಬೆಳ್ಮಣ್ ಶಾಖೆಯ ಸ್ಥಾಪಕ ಗ್ರಾಹಕರು, ಶಾಖಾ ವ್ಯವಸ್ಥಾಪಕರು ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಹಂಚಿಕೊಂಡರು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಬೆಳ್ಮಣ್ ಶಾಖೆಯ ಆರಂಭದಿಂದಲೂ ಬ್ಯಾಂಕಿನ ಮೇಲೆ ಗ್ರಾಹಕರು ತೋರಿಸಿದ ವಿಶ್ವಾಸ, ನಂಬಿಕೆ ಮತ್ತು ಬೆಂಬಲವನ್ನು ಗೌರವಿಸಿ ಸ್ಥಾಪಕ ಗ್ರಾಹಕರನ್ನು ಸನ್ಮಾನಿಸಿ ಮಾತನಾಡಿ, ಮೊದಲ ವರ್ಷದೊಳಗೆ ಸಾಧಿಸಲಾದ ರೂ.10 ಕೋಟಿ ಮೈಲಿಗಲ್ಲು ಸಾಮೂಹಿಕ ಪ್ರಯತ್ನ, ದೂರದೃಷ್ಟಿಯ ಯೋಜನೆ ಮತ್ತು ಗ್ರಾಹಕರ ಅಚಲ ನಂಬಿಕೆಯ ಫಲಿತಾಂಶವಾಗಿದೆ. ಗ್ರಾಹಕರಿಗೆ ತ್ವರಿತ ಮತ್ತು ಪರಿಣಾಮಕಾರಿ…
ಮಳೆಮಾಪನ ಕೇಂದ್ರಗಳ ಸುಸ್ಥಿತಿಗೆ ಕ್ರಮ ಕೈಗೊಳ್ಳಲು ಸಿದ್ದಕಟ್ಟೆ ಪಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಮನವಿ
ಬಂಟ್ವಾಳ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸಲು ಗ್ರಾಂ ಪಂಚಾಯತ್ಗಳಲ್ಲಿರುವ ಮಳೆಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿ ಇಡುವಂತೆ ಕ್ರಮ ಕೈಗೊಳ್ಳಲು ತೋಟಗಾರಿಕಾ ಇಲಾಖೆಗೆ ಸಿದ್ದಕಟ್ಟೆ ಪಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರು ಮನವಿ ಮಾಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 2024-25ನೇ ಸಾಲಿಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರೀಮಿಯಂ ಪಾವತಿಸಿದ ರೈತರಿಗೆ ಬಿಡುಗಡೆಯಾದ ಪರಿಹಾರದಲ್ಲಿ ತುಂಬಾ ಗೊಂದಲಗಳು ಆಗಿರುತ್ತವೆ. ಈ ಬಗ್ಗೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಟೆಂಡರ್ ವಹಿಸಿದ ಏಜೆನ್ಸಿಗಳಲ್ಲಿ ವಿಚಾರಿಸಿದಾಗ ಮಳೆಮಾಪನ ಕೇಂದ್ರಗಳಲ್ಲಿ ಬಿದ್ದಿರುವ ಮಳೆಯ ಪ್ರಮಾಣವನ್ನು ಆಧರಿಸಿ ಪರಿಹಾರ ನೀಡಲಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆಮಾಪನ ಕೇಂದ್ರಗಳು ಚಲಾವಣೆ ಇಲ್ಲದೇ ದುಸ್ಥಿತಿಯಲ್ಲಿ ಇರುವುದಾಗಿ ತಿಳಿದುಬಂದಿದೆ. ಇದರಿಂದ ಕರಾವಳಿಯ ಕೆಲವೊಂದು ತಾಲೂಕುಗಳಲ್ಲಿ ರೈತರು ಪಾವತಿಸಿದ ಪ್ರೀಮಿಯಂಗಿಂತಲೂ ಕಡಿಮೆ ಪರಿಹಾರ ದೊರೆತಿದೆ. ಇದರಿಂದ ಸಾವಿರಾರು ರೈತರಿಗೆ ಸಮರ್ಪಕ ಪರಿಹಾರ ದೊರಕದೇ ರೈತರು ಸರಕಾರದ ಅಸಮರ್ಪಕ…
