Author: admin

ಮಂಗಳೂರು: ಸಹಕಾರ ಭಾರತಿ ಮತ್ತು ಕ್ಯಾಂಪ್ಕೋ ಸಹಯೋಗದಲ್ಲಿ ಮೇ 7ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಮಿಶನ್‌ ಸ್ಟ್ರೀಟ್‌ ವಾರಣಾಸಿ ಟವರ್ಸ್‌ನಲ್ಲಿರುವ ಕ್ಯಾಂಪ್ಕೋದ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಹೊಸ ಸಹಕಾರಿ ನೀತಿ ಮತ್ತು ವಿಕಸಿತ ಭಾರತ ಎಂಬ ವಿಷಯದ ಬಗ್ಗೆ ಸಹಕಾರಿ ಸಂವಾದ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಹಿರಿಯ ಸಹಕಾರಿ, ಸಹಕಾರ ಭಾರತಿಯ ಮಾಜಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಕೊಂಕೋಡಿ ಪದ್ಮನಾಭ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿ ಮಾಜಿ ರಾಷ್ಟ್ರೀಯ ಅಧ್ಯಕ್ಷ, ನಬಾರ್ಡ್‌ ಆಡಳಿತ ಮಂಡಳಿ ಸದಸ್ಯ ಹಾಗೂ ಭಾರತೀಯ ರಿಸರ್ವ್‌ ಬ್ಯಾಂಕಿನ ನಿರ್ದೇಶಕ ಸತೀಶ್‌ ಮರಾಠೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ, ಸಹಕಾರ ಭಾರತಿಯ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಎಸ್‌.ಆರ್‌ ಸತೀಶ್ಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಭಾರತಿ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಗ್ರಾಹಕರುಗಳಾದ ಕಮಲಾಕ್ಷ, ಪುಷ್ಪರಾಜ್ ಕೆ, ಶಿವಣ್ಣ ಎಸ್. ಎಸ್., ಪ್ರಕಾಶ್, ಪ್ರದೀಪ್, ಅಬ್ದುಲ್ ರಜಾಕ್‌ ಮತ್ತು ಅಬ್ದುಲ್ ರಿಯಾಜ್ ಎನ್ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಮಾಣಿ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲ ನೀಡಲಾಗಿದೆ. ಶಾಖೆಯು ಲಾಭದಾಯಕವಾಗಿ ಕಾರ್ಯಾಚರಿಸುತ್ತಿದೆ. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಎಲ್ಲಾ ಕಂಪನಿಗಳ ವಿಮಾ ಸೌಲಭ್ಯಗಳು ಕೂಡ ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು. ಸದಸ್ಯರಾದ ಪುಷ್ಪರಾಜ್ ಕೆ ಮಾತನಾಡಿ, ಸಂಘದ ಸಿಬ್ಬಂದಿಗಳ ಸೇವೆ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಾಡೂರು ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯರಾದ ಬಿ.ಎಸ್. ಭಾಸ್ಕರ್, ಸೀತಾರಾಮ ಪೂಜಾರಿ, ಗೋಪಾಲ ಯು. ಹಾಗೂ ಇಸ್ಮಾಯಿಲ್ ಅಚ್ಚಬ್ಬ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಬಿ.ಎಸ್. ಭಾಸ್ಕರ್ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ನಮ್ಮೆಲ್ಲರ ಅಚ್ಚುಮೆಚ್ಚಿನ ಸಂಘವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದಸ್ಯರಾದ ಗೋಪಾಲ ಯು ಮಾತನಾಡಿ “ಸೇವಾ ಮನೋಭಾವದ ಉದ್ದೇಶದಿಂದ ಸಹಕಾರಿ ಕ್ಷೇತದಲ್ಲಿ ಸೇವೆ ಸಲ್ಲಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನೂ ಹೆಚ್ಚಿನ ಉನ್ನತ ಸ್ಥಾನಕ್ಕೆ ಏರಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ಗಣೇಶ್ ಭಂಡಾರಿ ಮಾತನಾಡಿ “ಸಿಬ್ಬಂದಿಗಳು ಗ್ರಾಹಕರಿಗೆ ಉತ್ತಮ ಸೇವೆ…

Read More

ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. https://chat.whatsapp.com/FCEnlTkAKCC0MGPhXtX4i4 ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಗೋವಾ ಬೀನೌಲಿಂನ ಕ್ಯಾಟೆಕೆಟಿಕ್ಸ್ ಆಯೋಗದ ಕಾರ್ಯದರ್ಶಿ ವಂದನೀಯ ಫಾ|ವಿಜಯ ಮಚಾದೊ, ಗೋವಾ ಅರ್ಬನ್ ಸಹಕಾರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ವೈ ನಾಯಕ್, IIM Kozhikodeನ ವಿಸಿಟಿಂಗ್ ಪ್ರೊಫೆಸರ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಸಿಜೆ ಲಾಯ್ನಲ್ ಅರಾನ್ಹಾ, ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಪ್ರಾಂಶುಪಾಲರಾದ ಡಾ| ವಿನ್ಸೆಂಟ್ ಅಳ್ವ ಹಾಗೂ ಎಂಸಿಸಿ…

Read More

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆಯು ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯಲ್ಲಿ ಮೇ 3ರಂದು ಬೆಳಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲಿಸುವರು. ಭದ್ರತಾ ಕೋಶವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸುವರು. ಠೇವಣೆ ಪತ್ರವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್‌ ಬಿಡುಗಡೆಗೊಳಿಸುವರು. ಪ್ರಮುಖರಾದ ಸೋಮನಾಥ ಶಾಂತಿ, ಪಿ.ಕೆ.ರಾಜು ಪೂಜಾರಿ ಕಾಶಿಪಟ್ಣ, ಸಂಪತ್ ಸಾಮ್ರಾಜ್ಯ, ಫೆಡ್ರಿಕ್ ಪಿಂಟೋ, ಸತೀಶ್ ವಿ.ಶೆಟ್ಟಿ, ಪ್ರವೀಣ್ ಕುಮಾರ್ ಜೈನ್, ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಮಹಮ್ಮದ್ ದೋಣಿಬಾಗಿಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಉಪಾಧ್ಯಕ್ಷ ವಿಟ್ಟಲ ಬೆಳ್ಳಾಡ ಚೇಳೂರು, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾ‌ರ್ ಪೆರ್ವ, ಜಯಶಂಕ‌ರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿವಸಂತ, ಆಶಿಶ್ ಪೂಜಾರಿ, ಚಿದಾನಂದ…

Read More

ಮಂಗಳೂರು: ಧವಳ ಕೋ ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸುಮಾರು ರೂ. 200 ಕೋಟಿ ವ್ಯವಹಾರ ನಡೆಸಿದ್ದು, ರೂ. 50.95 ಲಕ್ಷ ನಿವ್ವಳ ಲಾಭ ಗಳಿಸಿದೆ. https://chat.whatsapp.com/FCEnlTkAKCC0MGPhXtX4i4 ಮೂರು ವರ್ಷಗಳ ಹಿಂದೆ 2022ನೇ ಜೂನ್ ತಿಂಗಳಲ್ಲಿ ಕಾರ್ಯ ಆರಂಭಗೊಂಡ ಈ ಸಂಸ್ಥೆಯು 2025-2026ನೇ ಸಾಲಿನಲ್ಲಿ ಸುಮಾರು ರೂ. 200 ಕೋಟಿ ಅಷ್ಟು ವ್ಯವಹಾರ ನಡೆಸಿ ರೂ. 50.95 ರಷ್ಟು ನಿವ್ವಳ ಲಾಭ ಗಳಿಸಿದೆ. ಮಂಗಳೂರಿನ ಹೃದಯಭಾಗದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಹಾಗೂ ಕಾರ್ಕಳ ತಾಲೂಕಿನ ಹೊಸ್ಮಾರ್‌ನಲ್ಲಿ ಶಾಖೆ ತೆರೆದಿದೆ. ಸಂಸ್ಥೆಯು 31.03.2026ಕ್ಕೆ ರೂ. 22.75 ಕೋಟಿ ಠೇವಣಿಯೊಂದಿಗೆ ರೂ. 20.80 ಕೋಟಿಯಷ್ಟು ಮುಂಗಡ ಸಾಲ ಸೌಲಭ್ಯ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಂಸ್ಥೆಯು ತನ್ನ ಕೇಂದ್ರ ಕಚೇರಿ ಮತ್ತು ಶಾಖೆಗಳಲ್ಲಿ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲದೇ, ಚಿನ್ನಾಭರಣ ಭದ್ರತಾ ಸಾಲ, ಇ ಸ್ಟ್ಯಾಂಪ್ ಮಾರಾಟ ವ್ಯವಸ್ಥೆ,…

Read More

ಕಾರ್ಕಳ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ಭಾನುವಾರ ಕಾರ್ಕಳ ಜೋಡು ರಸ್ತೆಯಲ್ಲಿ ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಗೋವಾದ ಶ್ರೀ ಸಂಸ್ಥಾನ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಹಕಾರ ಸಂಘಗಳು ಕೇವಲ ಹಣಕಾಸಿನ ವಹಿವಾಟಿಗೆ ಸೀಮಿತವಾಗದೆ, ಸಮಾಜದ ಆತ್ಮನಿರ್ಭರತೆಗೆ ಭದ್ರ ಬುನಾದಿಯಾಗುತ್ತಿವೆ. ಒಗ್ಗಟ್ಟಿನ ಸಹಯೋಗವೇ ಸಮಾಜದ ನಿಜವಾದ ಶಕ್ತಿಯಾಗಿದ್ದು, ಸೇವೆಯೇ ಅದರ ಮೂಲಮಂತ್ರವಾಗಲಿ’ ಎಂದು ಹೇಳಿದರು. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದ್ದು, ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದರು. ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿ, 1996ರಲ್ಲಿ ಕಡ್ತಲ ರವೀಂದ್ರ ನಾಯಕ್ ಅವರೊಂದಿಗೆ ಭದ್ರ ಬುನಾದಿ ಹಾಕಿ ಆರಂಭಿಸಿದ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೆ.ಸಿ ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಉಚ್ಚಿಲಸ್ ಕಾಂಪ್ಲೆಕ್ಸ್, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ. ರೋಡ್ (ಶಾಖೆಯ ಆವರಣ) ದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಈ ಶಿಬಿರವನ್ನು ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣನಗರ, ತಲಪಾಡಿ ಇದರ ಅಧ್ಯಕ್ಷರಾದ ಚಂದ್ರಶೇಖರ ಉದ್ಘಾಟಿಸಿ ಮಾತನಾಡಿ “ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುತ್ತಿರುವುದು ಶ್ಲಾಘನೀಯ” ಎಂದು ಶಿಬಿರಕ್ಕೆ ಶುಭ ಹಾರೈಸಿದರು. ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ| ಉತ್ಕರ್ಷ್ ಮಾತನಾಡಿ, “ಆರೋಗ್ಯದ ಸಮಸ್ಯೆ ಯಾವ ರೀತಿ ಬರುತ್ತದೆ, ಇದರ ಮುಂಜಾಗ್ರತೆಯನ್ನು ಯಾವ ರೀತಿ ಮಾಡಬಹುದು ಹಾಗೂ ಉಚಿತ ವೈದ್ಯಕೀಯ ಶಿಬಿರದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಕೆ.ಸಿ ರೋಡ್‌ನ ಉಚ್ಚಿಲಸ್ ಕಾಂಪ್ಲೆಕ್ಸನ ಮಾಲಕರಾದ ಅಬ್ಬಾಸ್…

Read More

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು ಒಟ್ಟು ರೂ. 3.07 ಕೋಟಿ ಲಾಭ ದಾಖಲಿಸಿದೆ. ಬ್ಯಾಂಕು 2025 26ನೇ ಸಾಲಿನಲ್ಲಿ ಒಟ್ಟು 2028.64 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, ಗಣನೀಯ ಏರಿಕೆ ಕಂಡಿದೆ. ಕಳೆದ ಸಾಲಿಗಿಂತ ಠೇವಣಿಯಲ್ಲಿ 16% ಹಾಗೂ ಸಾಲ ನೀಡುವಿಕೆಯಲ್ಲಿ 25% ವೃದ್ಧಿ ಸಾಧಿಸಿರುವ ಬ್ಯಾಂಕ್, ಅನುತ್ಪಾದಕ ಆಸ್ತಿ NPA ಪ್ರಮಾಣವನ್ನು 1.13% ಇಳಿಸುವಲ್ಲಿ ಯಶಸ್ವಿಯಾಗಿದೆ. https://chat.whatsapp.com/FCEnlTkAKCC0MGPhXtX4i4 ನೂರು ವರ್ಷಗಳ ಪ್ರಾಮಾಣಿಕ ಸೇವೆಯೊಂದಿಗೆ ಗ್ರಾಹಕರ ನಂಬಿಕಸ್ತ ಬ್ಯಾಂಕ್ ಎನಿಸಿಕೊಂಡಿರುವ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್, 17 ಶಾಖೆಗಳ ಮೂಲಕ ಗ್ರಾಹಕರಿಗೆ ಅತ್ಯಾಧುನಿಕ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಡಿಜಿಟಲ್ ತಂತ್ರಜ್ಞಾನಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ವಿಶೇಷವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಹಕರಿಗೆ ಯುಪಿಐ (UPI) ಸೌಲಭ್ಯ ಪರಿಚಯಿಸಿದ ಮೊದಲ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಏಪ್ರಿಲ್‌ 26ರಂದು ಭಾನುವಾರ 9.30ರಿಂದ ಮಧ್ಯಾಹ್ನ 12.30ರ ತನಕ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು “ಉಚ್ಚಿಲಸ್ ಕಾಂಪ್ಲೆಕ್ಸ್”, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ.ರೋಡ್ (ಶಾಖೆಯ ಆವರಣ) ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇದರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿತ್ವ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಅನಾರೋಗ್ಯಕರ ಹಲ್ಲುಗಳನ್ನು ಕೀಳಿಸುವುದು, ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಬಿ.ಪಿ. ತಪಾಸಣೆ, ಮಧುಮೇಹ ತಪಾಸಣೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ…

Read More