Author: admin

ಕಾರ್ಕಳ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ ಭಾನುವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಜೈರಾಜ್ ಬಿ ರೈ, ದೈವಸ್ಥಾನ ಪ್ರಗತಿಯಲ್ಲಿ ವಾಣಿಜ್ಯ ಅಭಿವೃದ್ಧಿಯು ಅಗತ್ಯ. ಹಣಕಾಸು ವ್ಯವಹಾರ ಪ್ರಗತಿಯಾದಂತೆ ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು. ಹಣಕಾಸು ಸೇವೆ ಹಾಗೂ ಸಾಮಾಜಿಕ ಕಾರ್ಯಗಳ ಉಪಯೋಗವನ್ನು ಊರ ಜನರು ಪಡೆದುಕೊಳ್ಳುವಂತೆ ಕೋರಿದರು. ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನ ತಮ್ಮ ಆರೋಗ್ಯದ ಕಾಳಜಿಯನ್ನು ತಾವೇ ವಹಿಸಿಕೊಳ್ಳುವಂತಾಗಬೇಕು. ಮಾತ್ರವಲ್ಲದೆ ಪೌಷ್ಟಿಕಯುಕ್ತ ಆಹಾರ ಸೇವಿಸಿದಲ್ಲಿ ದೈಹಿಕ ಉತ್ತಮ ಬೆಳವಣಿಗೆ ಸಾಧ್ಯ ಎಂದರು. ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ತೀರ್ಥಬೆಟ್ಟುಗುತ್ತು ಕೆ.ಪೃಥ್ವಿರಾಜ್ ಬಿ ರೈ ಸಾಂದರ್ಭಿಕವಾಗಿ…

Read More

ಮಂಗಳೂರು: ಪಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇವರು ನೀಡುತ್ತಿರುವ Higher Diploma in Co-Operative Management (HDCM) ದೂರ ಶಿಕ್ಷಣ ಕೋರ್ಸ್‌ ಅನ್ನು ಮಂಗಳೂರು ಕೇಂದ್ರಿತವಾಗಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಸಹಭಾಗಿತ್ವದಲ್ಲಿ ಮುಂದಿನ ಬ್ಯಾಚ್‌ಗೆ ನೋಂದಣಿ ಪ್ರಕ್ರಿಯೆಯನ್ನು ದಿನಾಂಕ: 22/12/2025ರಿಂದ ಪ್ರಾರಂಭಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ Higher Diploma in Co-Operative Management ಕೋರ್ಸ್‌ ಅನ್ನು ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣದ ಅಗತ್ಯವಿರುತ್ತದೆ. ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘವು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇದರ ಸಹಯೋಗದೊಂದಿಗೆ ಈಗಾಗಲೇ ಒಟ್ಟು ಎಂಟು ಬ್ಯಾಚ್‌ಗಳನ್ನು ಯಶಸ್ವಿಯಾಗಿ ನಡೆಸುತ್ತ ಬಂದಿದ್ದು, ೮೦೦ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಇದರ ಪ್ರಾಯೋಜನ ಪಡೆದಿದ್ದು, ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ದೂರ ಶಿಕ್ಷಣ…

Read More

ಮಂಗಳೂರು: ಗ್ರಾಮೀಣ ಕರಕುಶಲ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು, ಕೇಂದ್ರ ಸರಕಾರದ ಜವಳಿ ಸಚಿವಾಲಯದ ಆಶ್ರಯದಲ್ಲಿ ಪಿಲಿಕುಳ ನಿಸರ್ಗಧಾಮದಲ್ಲಿ ಏಳು ದಿನಗಳ ಕಾಲ ಗಾಂಧಿ ಶಿಲ್ಪ ಬಜಾರ್ 2025 ಕರಕುಶಲ ಮೇಳ ಹಮ್ಮಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಈ ಕರಕುಶಲ ಮೇಳದಲ್ಲಿ ದೇಶದಾದ್ಯಂತ ಇರುವ ಪ್ರಮುಖ ಕರಕುಶಲಕಾರರು ತಾವು ಉತ್ಪಾದಿಸಿದ ಉತ್ಪನ್ನಗಳನ್ನು ಪ್ರದರ್ಶನ ಮಾರಾಟ ಮಾಡಲಿದ್ದಾರೆ. ಕರಕುಶಲ ಕಲೆಗಳು ಈ ದೇಶದ ಪಾರಂಪರೀಕತೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕುಂಬಾರಿಕೆ, ಬಿದಿರಿನ ಉತ್ಪನ್ನಗಳು, ಕಸೂತಿ ಬಟ್ಟೆ, ಚರ್ಮದ ಉತ್ಪನ್ನಗಳು, ಲೋಹ ಕಲಾಕಾರರು, ಮರದ ಕೆತ್ತನೆಗಳು, ಅಲಂಕಾರಿಕ ಆಭರಣಗಳು ಇತ್ಯಾದಿ ಹಲವಾರು ಕಲಾಕರರು ತಾವು ಮಾಡಿದ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ. 1958ನೇ ವರ್ಷದಲ್ಲಿ ಕುಂಬಾರಿಕೆ ಕೈಗಾರಿಕೆಯ ಬೆಳವಣಿಗೆಗಾಗಿ ಪ್ರಾರಂಭವಾದ ಸಹಕಾರ ಸಂಘವು ಹಂತಹಂತವಾಗಿ ಬೆಳವಣಿಗೆ ಹೊಂದಿ ತನ್ನ ಕಾರ್ಯಕ್ಷೇತ್ರವನ್ನು ನಾಲ್ಕು ಜಿಲ್ಲೆಗಳಿಗೆ ವಿಸ್ತರಿಸಿಕೊಂಡಿದೆ. ಕುಂಬಾರಿಕೆ ಕೈಗಾರಿಕೆಯ ಬೆಳವಣಿಗೆ ಅಲ್ಲದೆ ಇತರ ಎಲ್ಲಾ ಕರಕುಶಲ ವಸ್ತುಗಳಿಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ…

Read More

ಮುಡಿಪುವಿನಲ್ಲಿ ಉಚಿತ ನೇತ್ರ ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಪ್ರಶಾಂತ್ ಕಾಮತ್ ಅಭಿಪ್ರಾಯ ಮುಡಿಪು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಇವರ ಜಂಟಿ ಸಹಯೋಗದೊಂದಿಗೆ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ಗೋಪಾಲಕೃಷ್ಣ ಸಭಾಗೃಹ ಅಮ್ಮೆಂಬಳ ಮುಡಿಪು ಇಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಕುರ್ನಾಡ್ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪ್ರೇಮಾ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕದ ಅಧ್ಯಕ್ಷರಾದ ಮಮತಾ ಮಾತನಾಡಿ, ಗ್ರಾಮೀಣ ಪ್ರದೇಶ ಹಾಗೂ ಹಿಂದುಳಿದ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರ ಆಯೋಜನೆ ಮಾಡುವುದು ಒಳ್ಳೆಯ ವಿಷಯ. ಆತ್ಮಶಕ್ತಿ ಸಹಕಾರಿ ಸಂಘವು ಇಂತಹ ಗುಣಮಟ್ಟದ ಶಿಬಿರಗಳನ್ನು ಆಯೋಜಿತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು. ಮಂಗಳ ಕಾಲೇಜು, ಮಂಗಳ ಆಸ್ಪತ್ರೆ…

Read More

ಹಳೆಯಂಗಡಿ: 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯ ಸಂಧರ್ಭದಲ್ಲಿ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಮ್ಮಿಕೊಂಡ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಚಿತ್ರವನ್ನು ಸೋಮವಾರ ಡಾ.ರಾಜೇಂದ್ರ ಕುಮಾರ್ ಅವರಿಗೆ ಹಸ್ತಾಂತರ ಮಾಡಲಾಯಿತು. https://chat.whatsapp.com/FCEnlTkAKCC0MGPhXtX4i4 ದ.ಕ ಮತ್ತು ಉಡುಪಿ ಜಿಲ್ಲಾಮಟ್ಟದಲ್ಲಿ ಹೈಸ್ಕೂಲ್ ಮಕ್ಕಳಿಗೆ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಭಾವಚಿತ್ರ ರಚಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಚಿತ್ರಕಲೆಯನ್ನು ಅವರಿಗೆ ನೀಡಲಾಯಿತು. ಚಿತ್ರಕಲೆಯನ್ನು ಸ್ವೀಕರಿಸಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, ಪ್ರಿಯದರ್ಶಿನಿ ಸೊಸೈಟಿಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆಯ ಅಭಿವೃದ್ಧಿಗೆ ಎಸ್ಸಿಡಿಸಿಸಿ ಬ್ಯಾಂಕಿನ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದರು. ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ಹೆಚ್ ವಸಂತ್ ಬೆರ್ನಾರ್ಡ್, ಸಿಇಒ ಸುದರ್ಶನ್ ಹಾಗೂ ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ…

Read More

ಮಂಗಳೂರು: ಸಹಕಾರಿ ಸಂಘಗಳು ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಳ್ಳುತ್ತವೆ ಎಂಬ ಮಾದರಿ ಸಂದೇಶದೊಂದಿಗೆ ಇಲ್ಲಿನ ಮಿರಾಕಲ್ಸ್ ಆಫ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಕ್ರಿಸ್‌ಮಸ್‌ ಹಬ್ಬದ ವಿಶೇಷವಾಗಿ ಆಹಾರ ವಿತರಣಾ ಸೇವಾ ಕಾರ್ಯ ಹಮ್ಮಿಕೊಂಡಿತ್ತು. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ವೆನ್‌ಲಾಕ್‌ ಮತ್ತು ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳ ಸುಮಾರು 600ರಷ್ಟು ಪರಿಚಾರಕರಿಗೆ ಶನಿವಾರ ಆಹಾರ ವಿತರಣಾ ಸೇವೆಯ ಮೂಲಕ ಊಟದ ವ್ಯವಸ್ಥೆ ಮಾಡಿತ್ತು. ಎಂ ಫ್ರೆಂಡ್ಸ್‌ ತಂಡ ಸಹಯೋಗ ನೀಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ. ಭಟ್ ಆಗಮಿಸಿದ್ದರು. ಎಂ ಫ್ರೆಂಡ್ಸ್‌ನ ಕಾರ್ಯಕರ್ತರಾದ ಹನೀಫ್ ಹಾಜಿ, ರಶೀದ್, ಸಲೀಮ್ ಉಳ್ಳಾಲ, ಮಿರಾಕಲ್ಸ್ ಸಹಕಾರಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಜ್ಯೂಸ್ ಪಾಲ್ ಬಿ.ವೇಗಸ್, ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಇಕ್ಬಾಲ್ ಶೇಖ್, ಶಾಖಾ ವ್ಯವಸ್ಥಾಪಕರಾದ ಜೈಸನ್ ಆಲ್ವಿನ್ ಪಿಂಟೋ ಹಾಗೂ ಸಹಕಾರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ…

Read More

ಪರಿಸರ ಸ್ವಚ್ಛತೆಗಾಗಿ ಎಲ್ಲರಲ್ಲೂ ಜಾಗೃತಿ: ಡಾ. ಎಸ್‌ ಆರ್‌ ಹರೀಶ್ ಆಚಾರ್ಯ ಅಭಿಪ್ರಾಯ ಕಾರ್ಕಳ: ಸ್ವಚ್ಛತೆಯ ಜಾಗೃತಿ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಬೇಕು. ನಮ್ಮ ಮನೆಯ ಕಸದ ನಿರ್ವಹಣೆಯ ಜವಾಬ್ದಾರಿಯನ್ನು ನಾವು ಕಸ ಹುಟ್ಟುವ ಮೂಲದಲ್ಲೇ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಆಗ ನಮ್ಮ ಪರಿಸರ ಸ್ವಚ್ಛ ಪರಿಸರವಾಗುತ್ತದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 13ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಕಾರ್ಕಳ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವದಿಸಿದರು. ಜೈನ್ ಮಿಲನ್ ಕಾರ್ಕಳದ ಅಧ್ಯಕ್ಷರಾದ ಅಶೋಕ್ ಎಚ್ ಎಂ., ಜೆಸಿಐ ಕಾರ್ಕಳದ ಅಧ್ಯಕ್ಷರಾದ ಶ್ವೇತಾ ಎಸ್ ಜೈನ್ ಮತ್ತು ರೋಟರಿ ಕ್ಲಬ್ ಕಾರ್ಕಳದ ಪಬ್ಲಿಕ್ ಇಮೇಜ್ ಇದರ ಅಧ್ಯಕ್ಷರಾದ ರೊಟೇರಿಯನ್ ಪಿಹೆಚ್ಎಫ್ ರೇಖಾ ಉಪಾಧ್ಯಾಯ ಇವರು ಹಸಿರು…

Read More

ವಿಶ್ವಕರ್ಮ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಕಾರ್ಕಳ: ಸ್ವಚ್ಛತೆಯ ಜಾಗೃತಿ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಬೇಕು. ನಮ್ಮ ಮನೆಯ ಕಸದ ನಿರ್ವಹಣೆಯ ಜವಾಬ್ದಾರಿಯನ್ನು ನಾವು ಕಸ ಹುಟ್ಟುವ ಮೂಲದಲ್ಲಿಯೇ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಆಗ ನಮ್ಮ ಪರಿಸರ ಸ್ವಚ್ಛ ಪರಿಸರವಾಗುತ್ತದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 13ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮವನ್ನು ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು. ಜೈನ್ ಮಿಲನ್ ಕಾರ್ಕಳದ ಅಧ್ಯಕ್ಷರಾದ ಅಶೋಕ್ ಎಚ್ ಎಮ್, ಜೆಸಿಐ ಕಾರ್ಕಳದ ಅಧ್ಯಕ್ಷರಾದ ಶ್ವೇತಾ ಎಸ್ ಜೈನ್ ಮತ್ತು ರೋಟರಿ ಕ್ಲಬ್ ಕಾರ್ಕಳದ ಪಬ್ಲಿಕ್ ಇಮೇಜ್ ಇದರ ಅಧ್ಯಕ್ಷರಾದ ರೋಟೇರಿಯನ್ ಪಿ…

Read More

ವಿಶ್ವಕರ್ಮ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಕಾರ್ಕಳ: ಸ್ವಚ್ಛತೆಯ ಜಾಗೃತಿ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಬೇಕು. ನಮ್ಮ ಮನೆಯ ಕಸದ ನಿರ್ವಹಣೆಯ ಜವಾಬ್ದಾರಿಯನ್ನು ನಾವು ಕಸ ಹುಟ್ಟುವ ಮೂಲದಲ್ಲಿಯೇ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಆಗ ನಮ್ಮ ಪರಿಸರ ಸ್ವಚ್ಛ ಪರಿಸರವಾಗುತ್ತದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 13ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮವನ್ನು ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು. ಜೈನ್ ಮಿಲನ್ ಕಾರ್ಕಳದ ಅಧ್ಯಕ್ಷರಾದ ಅಶೋಕ್ ಎಚ್ ಎಮ್, ಜೆಸಿಐ ಕಾರ್ಕಳದ ಅಧ್ಯಕ್ಷರಾದ ಶ್ವೇತಾ ಎಸ್ ಜೈನ್ ಮತ್ತು ರೋಟರಿ ಕ್ಲಬ್ ಕಾರ್ಕಳದ ಪಬ್ಲಿಕ್ ಇಮೇಜ್ ಇದರ ಅಧ್ಯಕ್ಷರಾದ ರೋಟೇರಿಯನ್ ಪಿ…

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೊಯ್ಲದ ಅಣ್ಣಳಿಕೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಗುರುಪುರ ಕೈಕಂಬದಲ್ಲಿ ಡಿ.21ರಂದು ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 9ಕ್ಕೆ ಗುರುಪುರ ಕೈಕಂಬದ ಅಜೀಜ್‌ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಡಾ.ವೈ ಭರತ್‌ ಶೆಟ್ಟಿ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸಿಲ್ವೆಸ್ಟರ್‌ ಡಿಸೋಜ ಅಧ್ಯಕ್ಷತೆ ವಹಿಸಲಿದ್ದಾರೆ. ಓಷಿನ್‌ ಕನ್‌ಸ್ಟ್ರಕ್ಷನ್‌ ಆಡಳಿತ ನಿರ್ದೇಶಕರಾದ ಇನಾಯತ್‌ ಅಲಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಧಾರ್ಮಿಕ ಪರಿಷತ್‌ ಮಾಜಿ ಸದಸ್ಯರಾದ ಪದ್ಮನಾಭ ಕೋಟ್ಯಾನ್‌ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದ್ಯಮಿ ರಾಜೇಶ್‌ ಕೊಟ್ಟಾರಿ ಕಂಪ್ಯೂಟರ್‌ ಉದ್ಘಾಟಿಸಲಿದ್ದಾರೆ. ಪಡುಪೆರಾರ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಮೀನಾಕ್ಷಿ ಷೇರು ಪತ್ರ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಂಧೇರಿ ಸಂಸ್ಥೆಯ ಪ್ರಾದೇಶಿಕ ಅಧಿಕಾರಿ ಇಮ್ಯಾನುಯೆಲ್‌ ಮೋನಿಸ್‌, ದ.ಕ. ಜಿಲ್ಲಾ ಒಕ್ಕೂಟ…

Read More