Author: admin
ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ 2026-2031ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಎಸ್ ಆರ್ ಸತೀಶ್ಚಂದ್ರ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಳ್ಯ ನೆಲ್ಲೂರು ಕೆಮ್ರಾಜೆಯ ಉಮೇಶ್ ಪ್ರಭು ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಆಡಳಿತ ಮಂಡಳಿಯ ನಿರ್ದೇಶಕರುಗಳಾಗಿ ಸುಳ್ಯ ತಾಲೂಕು ಕಳಂಜ ಗ್ರಾಮದ ಚಂದ್ರಶೇಖರ ಭಟ್, ಮಂಗಳೂರು ತಾಲೂಕು ಉಲ್ಲಾಳದ ದಯಾನಂದ ನಾಯಕ್ ಕೆ, ಬಂಟ್ವಾಳ ತಾಲೂಕು ಪುಣಚ ಗ್ರಾಮದ ರವೀಶ ಪಿ, ಪುತ್ತೂರು ತಾಲೂಕು ಇರ್ದೆ ಗ್ರಾಮದ ರಾಜಗೋಪಾಲ ಬಿ, ಪುತ್ತೂರು ತಾಲೂಕು ನೆಹರು ನಗರದ ವಸಂತ ಶಂಕರ್, ಬೆಂಗಳೂರಿನ ಮಾಚೋಹಳ್ಳಿಯ ವೇದವ್ಯಾಸ ಕೆ, ಸುಳ್ಯ ತಾಲೂಕು ಸೋಣಂಗೇರಿಯ ಸಂಜೀವ ನಾಯಕ್, ಪುತ್ತೂರು ತಾಲೂಕು ನಿಡಳ್ಳಿ ಗ್ರಾಮದ ಕೆ ಹರೀಶ್ ಬೋರ್ಕರ್, ಪುತ್ತೂರಿನ ಆರ್ಯಾಪು ಗ್ರಾಮದ ದೇವಕಿ ಕೆ, ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ರಂಜಿತ ಆರ್ ಪ್ರಭು ಆಯ್ಕೆಯಾಗಿದ್ದಾರೆ. ಚುನಾವಣಾ…
ಮಂಗಳೂರು: ದೇಶಭಕ್ತಿ ಉದ್ದೀಪನಗೊಳಿಸುವ ಬಾರ್ಡರ್ -2 ಚಲನಚಿತ್ರವನ್ನು ಮಂಗಳೂರಿನ ಶ್ರೀಶಾ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಉಚಿತ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಂ ಎಸ್ ಗುರುರಾಜ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ನಮ್ಮ ಹೆಮ್ಮೆಯ ಸೈನಿಕರು ನಮ್ಮ ದೇಶದ ಗಡಿಗಳನ್ನು ಹಗಲಿರುಳು ಜೀವದ ಹಂಗು ತೊರೆದು ಕಾಯುತ್ತಿದ್ದಾರೆ. 1971ರಲ್ಲಿ ಬಾಂಗ್ಲಾದೇಶ ವಿಮೋಚನೆಯ ಸಂದರ್ಭದಲ್ಲಿ ಪಶ್ಚಿಮದ ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಸೈನ್ಯ ಭಾರತದ ಒಳಗೆ ನುಗ್ಗಲು ಯತ್ನಿಸಿತ್ತು. ಅದನ್ನು ವೀರಾವೇಶದಿಂದ ಎದುರಿಸಿ, ಹಿಮ್ಮೆಟ್ಟಿಸಿ ಗಡಿಯನ್ನು ಒಂದಿಂಚೂ ಬಿಡದೆ ಕಾಪಾಡಿದ ನಮ್ಮ ಸೈನ್ಯದ ವೀರ ಗಾಥೆಯ ಚಿತ್ರಣವೇ *ಬಾರ್ಡರ್ 2* ಚಲನಚಿತ್ರ. ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಈ ಚಲನಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆ. ಇಂತಹ ಚಿತ್ರವನ್ನು ಸೊಸೈಟಿಯ ಹಿತೈಷಿಗಳು ವೀಕ್ಷಿಸಬೇಕೆಂಬುದು ಶ್ರೀಶಾ ಅಪೇಕ್ಷೆ – ನಿರೀಕ್ಷೆ. ಇದಕ್ಕಾಗಿ ಶ್ರೀಶಾ ಸೌಹಾರ್ದ ಸೊಸೈಟಿಯು ಈ “ಬಾರ್ಡರ್ 2” ಚಲನಚಿತ್ರ ಪ್ರದರ್ಶನವನ್ನು ಆಸಕ್ತರಿಗೆ ಉಚಿತವಾಗಿ ಫೆಬ್ರವರಿ 8ರ ಭಾನುವಾರ ಸಂಜೆ 4 ಗಂಟೆಗೆ ಭಾರತ್ ಮಾಲ್ ನಲ್ಲಿರುವ ಭಾರತ್…
ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಟಿತ, ರಾಜ್ಯ ಪ್ರಶಸ್ತಿ ವಿಜೇತ ಸಹಕಾರ ಸಂಸ್ಥೆ ಗಂಗೊಳ್ಳಿ ಟೌನ್ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾಗಿ ಯುವ ಸಹಕಾರಿ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಂಘದ ಎಚ್.ಎಲ್. ಕಾಮತ್ ಆಡಳಿತ ಮಂಡಳಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಚುನಾವಣಾ ರಿಟರ್ನಿಂಗ್ ಅಧಿಕಾರಿ, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಹಿರಿಯ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ.ಎಮ್ ಅವಿರೋಧ ಆಯ್ಕೆಯನ್ನು ಘೋಷಿಸಿದರು. ವೆಂಕಟೇಶ್ ಭಾಸ್ಕರ ಶೆಣೈಯವರು ಕಳೆದ 10 ವರ್ಷಗಳಿಂದ ಸಹಕಾರಿಯ ನಿರ್ದೇಶಕರಾಗಿ, ಕಳೆದ 18 ತಿಂಗಳುಗಳಿಂದ ಅಧ್ಯಕ್ಷರಾಗಿ ಸಂಘದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಸಂಘದ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಸುಂದರ ಕಟ್ಟಡವನ್ನು ಸಂಘಕ್ಕೆ ನಿರ್ಮಿಸಿಕೊಡುವುದರಲ್ಲಿ ಮಹತ್ವದ ಪಾತ್ರ ವಹಿಸಿರುತ್ತಾರೆ. ಆಡಳಿತ ಮಂಡಳಿ ಸದಸ್ಯರ ಸಹಕಾರದೊಂದಿಗೆ ಸಂಘದ ಠೇವಣಿಯನ್ನು 100 ಕೋಟಿಯ ಗಡಿ ದಾಟಿಸಿದ್ದು, ಪ್ರತಿ ತಿಂಗಳು ಆಧಾರ್ ಕಾರ್ಡ್ ಪರಿಷ್ಕರಣೆ ಶಿಬಿರ ಸೇರಿದಂತೆ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು…
ಸಹಕಾರಿ ಕ್ಷೇತ್ರದಲ್ಲಿ ಯಾವ ರೀತಿಯ ಪರಿವರ್ತನೆ ಮಾಡಬಹುದೆಂದು ತೋರಿಸಿಕೊಟ್ಟವರು ಸಹಕಾರ ರತ್ನ ಚಿತ್ತರಂಜನ್ ಬೋಳಾರ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಆರೋಗ್ಯ ಸೇವಾ ಸಂಗಮದ ಸಮಾರೋಪ ಹಾಗೂ ಸಂಘದ 14ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ ಮಂಗಳೂರು: ಸ್ಥಾಪನೆಯಾಗಿ 14 ವರ್ಷಗಳಲ್ಲಿ ಭಾರಿ ವೇಗದಲ್ಲಿ ಅಭಿವೃದ್ಧಿ ಸಾಧಿಸುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಪರಿವರ್ತನೆ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ತೋರಿಸಿಕೊಟ್ಟಿದ್ದಾರೆ. ಜೊತೆಗೆ ಜಿಲ್ಲೆಯಲ್ಲೂ ಆತ್ಮಶಕ್ತಿ ಸಹಕಾರ ಸಂಘಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಶ್ಲಾಘಿಸಿದರು. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ಪಡೀಲಿನ ಬೈರಾಡಿ ಕೆರೆ ಸಮೀಪದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ನಡೆದ ಆರೋಗ್ಯ ಸೇವಾ ಸಂಗಮದ ಸಮಾರೋಪ ಹಾಗೂ ಸಂಘದ 14ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ತುಳುನಾಡಿನ ಹಲವಾರು ಸಹಕಾರಿ ಸಂಘಗಳು ಸ್ಥಾಪನೆಯಾಗಿ 50 ವರ್ಷ ಕಳೆದರೂ ದುಡಿಯುವ ಬಂಡವಾಳ, ಠೇವಣಾತಿ ಸಂಗ್ರಹ, ಗಳಿಸಿದ ಲಾಭ,…
ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಹೆಚ್ ಕೆ ಹೊಸಗದ್ದೆ, ಉಪಾಧ್ಯಕ್ಷರಾಗಿ ಅಜಿತ್ ಕುಮಾರ್ ಹೆಚ್ ಆರ್ ಆಯ್ಕೆ
ಶಿವಮೊಗ್ಗ: ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ ಹೆಚ್ ಕೆ ಹೊಸಗದ್ದೆ, ಉಪಾಧ್ಯಕ್ಷರಾಗಿ ಅಜಿತ್ ಕುಮಾರ್ ಹೆಚ್ ಆರ್ ಹಿರೇಬೈಲ್ ಅವರು ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಜನವರಿ 18ರಂದು ಚುನಾವಣೆ ನಡೆದು 11 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದರು. ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆದಿದ್ದು, ಅಧ್ಯಕ್ಷರಾಗಿ ಮಂಜುನಾಥ ಹೆಚ್ ಕೆ ಹೊಸಗದ್ದೆ ಮತ್ತು ಉಪಾಧ್ಯಕ್ಷರಾಗಿ ಅಜಿತ್ ಕುಮಾರ್ ಹೆಚ್ ಆರ್ ಹಿರೇಬೈಲ್ ಅವರನ್ನು ಸಹಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಂಜುನಾಥ ಹೆಚ್ ಕೆ ಹೊಸಗದ್ದೆ ಮೂರನೇ ಅವಧಿಗೆ ಆಯ್ಕೆಯಾಗಿದ್ದಾರೆ. ಜಿ.ಎಚ್ ಲಕ್ಷ್ಮಣ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್ ಸಂತೋಷ್ ಸಹಕರಿಸಿದರು. ನಿರ್ದೇಶಕರಾಗಿ ಸುಧೀರ್ ಕುಮಾರ್ ಎಸ್ ಎಸ್ ಸುಳುಗೋಡು, ರಮೇಶ್ ಅಚ್ಚುಮನೆ, ಮಂಜುನಾಥ್ ಹಿರೇಬೈಲ್, ಕುಂಞ ಅಹಮದ್ ಸುಳುಗೋಡು, ಸರಸ್ವತಿ ರತ್ನಾಕರ್ ಕೊಳವಾಡಿ, ಯಶೋದಾ ಚಂದ್ರಶೇಖರ್ ಸುಳುಗೋಡು, ಸತೀಶ್ ಹಿರೇಬೈಲು, ರಾಘವೇಂದ್ರ ಪ್ರಸಾದ್ ಸುಳುಗೋಡು, ಶೋಭಾ ಮಾನಿಗದ್ದೆ ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ…
ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ, ದೀಪಕ ಶಿಂತ್ರೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ
ವಿಜಯಪುರ: ಇಲ್ಲಿನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. https://chat.whatsapp.com/FCEnlTkAKCC0MGPhXtX4i4 ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು. ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿ ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಹಾಗೂ ಸುಮಾರು ೨೫ ವರ್ಷಗಳ ಕಾಲ ಸಹಕಾರ ಕ್ಷೇತ್ರದ ಅನುಭವವಿರುವ ದೀಪಕ ಶಿಂತ್ರೆ ಇವರುಗಳನ್ನು ಒಕ್ಕೂಟದ ಆಡಳಿತ ಮಂಡಳಿಗೆ ನಾಮನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕವಟಗಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ್ ವಾರದ, ಅರುಣ್ ಮಠ , ಬಾಲಚಂದ್ರ ಮುಂಜಾಣೆ, ಯಮನಪ್ಪ ಸಾತಿಹಾಳ, ಕಾಂತುಗೌಡ ಪಾಟೀಲ,(ಚಂದ್ರಕಾಂತ ), ರಾಜು ಹಂಚಾಟೆ, ಮಲ್ಕಪ್ಪ ರೊಟ್ಟಿ, ಆರ್ ಡಿ…
ಬಳ್ಳಾರಿ: ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಸೋಮವಾರ ಸ್ವೀಕರಿಸಿದ್ದಾರೆ. ಸುಕೋ ಬ್ಯಾಂಕಿನ ಉಪಾಧ್ಯಕ್ಷರಾಗಿ ಮುರಳೀಧರ ರೆಡ್ಡಿಯವರು ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್ ರವಿ ಸುಧಾಕರ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮೋಹಿತ್ ಮಸ್ಕಿ ಅವರು ಸುಕೋ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಕಳೆದ ಎರಡು ಅವಧಿಗಳಲ್ಲಿ ಅಧ್ಯಕ್ಷರಾಗಿದ್ದು ಗ್ರಾಹಕರ ವಿಶ್ವಾಸ ಪಡೆದು ಬ್ಯಾಂಕನ್ನು ಆರ್ಥಿಕವಾಗಿ ಸದೃಢವಾಗಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ ರಿಸರ್ವ್ ಬ್ಯಾಂಕ್ ಸೂಚನೆ, ನಿರ್ದೇಶನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಿ, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಯುಪಿಐ ಬ್ಯಾಂಕಿಂಗ್ ಸೇವೆ ಇತ್ಯಾದಿ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ನವದೆಹಲಿ: ಕೇಂದ್ರ ಸಹಕಾರ ಸಚಿವಾಲಯವು ಸಹಕಾರಿ ಆಧಾರಿತ ಭಾರತ್ ಟ್ಯಾಕ್ಸಿಯನ್ನು ಫೆಬ್ರವರಿ 5ರಂದು (ಇಂದು) ನವದೆಹಲಿಯ ವಿಜ್ಞಾನ ಭವನದಲ್ಲಿ ಲೋಕಾರ್ಪಣೆ ಮಾಡಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಕಾರ್ಯಕ್ರಮ ಉದ್ಘಾಟಿಸಿ ಭಾರತ್ ಟ್ಯಾಕ್ಸಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಭಾರತ್ ಟ್ಯಾಕ್ಸಿ ಲೋಕಾರ್ಪಣಾ ಕಾರ್ಯಕ್ರಮವು ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಚಿವಾಲಯದ ಅಧಿಕೃತ ಯೂಟ್ಯೂಬ್ ಮತ್ತು ಫೇಸ್ಬುಕ್ ವೇದಿಕೆಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಸಹಕಾರಿ ಆಂದೋಲನವನ್ನು ಉದಯೋನ್ಮುಖ ಮತ್ತು ತಂತ್ರಜ್ಞಾನ ಆಧಾರಿತ ಸೇವಾ ವಲಯಗಳಿಗೆ, ವಿಶೇಷವಾಗಿ ನಗರ ಮತ್ತು ಅರೆ-ನಗರ ಚಲನಶೀಲತೆಗೆ ವಿಸ್ತರಿಸುವ ಸರ್ಕಾರದ ಪ್ರಯತ್ನಗಳಲ್ಲಿ ಭಾರತ್ ಟ್ಯಾಕ್ಸಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಸಹಕಾರ ಸಚಿವಾಲಯದ ಈ ಕ್ರಮವು ಚಾಲಕ-ಸದಸ್ಯರಿಗೆ ಕೈಗೆಟುಕುವಿಕೆ, ಪಾರದರ್ಶಕತೆ ಮತ್ತು ಸಮಾನ ಆದಾಯದ ಅವಕಾಶಗಳ ಮೇಲೆ ಕೇಂದ್ರೀಕರಿಸುವ ಮೂಲಕ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಪರಿಸರ ವ್ಯವಸ್ಥೆಯೊಳಗೆ ಸಹಕಾರಿ ನೇತೃತ್ವದ ಪರ್ಯಾಯವನ್ನು ಪರಿಚಯಿಸುವ ನಿರೀಕ್ಷೆಯಿದೆ. ಸಹಕಾರ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಭಾರತ್ ಟ್ಯಾಕ್ಸಿ ಸರ್ಕಾರದ “ಸಹಕಾರ್ ಸೆ…
Chubbsafes and Steelage ಕಂಪನಿಯ ಚಾನಲ್ ಪಾರ್ಟ್ನರ್ ವಸುಧಾ ಆಟೋಮೇಶನ್ನ ಹುಬ್ಬಳ್ಳಿ ಡಿಸ್ಪ್ಲೇ ಸೆಂಟರ್ ನಾಳೆ ಉದ್ಘಾಟನೆ
ಹುಬ್ಬಳ್ಳಿ: ಸಹಕಾರಿ ಸಂಘಗಳು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುರಕ್ಷಿತ ಮತ್ತು ದೀರ್ಘಕಾಲ ಬಾಳಿಕೆ ಬರುವ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ Chubbsafes and Steelage ಕಂಪನಿಯ ಚಾನಲ್ ಪಾರ್ಟ್ನರ್ ವಸುಧಾ ಆಟೋಮೇಶನ್ನ “ಗೇಟ್ವೇ ಆಫ್ ನಾರ್ತ್ ಕರ್ನಾಟಕ” ಹುಬ್ಬಳ್ಳಿ ಘಟಕದ ಶೋರೂಮ್ ಲೋಕಾರ್ಪಣಾ ಕಾರ್ಯಕ್ರಮ ನಾಳೆ (ಫೆ.4) ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯ ಸ್ಟೇಶನ್ ರಸ್ತೆಯ ಲಕ್ಷ್ಮೀ ಬಾಲಕೃಷ್ಣ ಸ್ಕ್ವೇರ್ನ ಹರ್ಷ ಶೋರೂಮ್ನ ಕೆಳಗಿರುವ ಕರ್ನಾಟಕ ಕ್ಲಾತ್ ಸೆಂಟರ್ನ ಎದುರು ವಸುಧಾ ಆಟೋಮೇಶನ್ನ ಶೋರೂಮ್ ಉದ್ಘಾಟನೆಯಾಗಲಿದೆ. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಜಿ.ನಂಜನ ಗೌಡ ಹಾಗೂ Gunnebo India Pvt.Ltd ಇದರ ಸೇಲ್ಸ್ ಆಂಡ್ ಸರ್ವೀಸ್ ಉಪಾಧ್ಯಕ್ಷರಾದ ವಿಶಾದ್ ಮಿಶ್ರಾ ಶೋರೂಮ್ ಲೋಕಾರ್ಪಣೆಗೊಳಿಸಲಿದ್ದಾರೆ. 2018ರಲ್ಲಿ ಸ್ಥಾಪಿತವಾದ ವಸುಧಾ ಆಟೋಮೇಶನ್ ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಉತ್ತಮ ಗುಣಮಟ್ಟದ ಸೆಕ್ಯುರಿಟಿ ಪ್ರಾಡಕ್ಟ್ಸ್ಗಳ ವಿಶ್ವಾಸಾರ್ಹ ಪೂರೈಕೆದಾರರಾಗಿದ್ದು, ಗ್ರಾಹಕರಿಂದ ಉತ್ತಮ ಮೆಚ್ಚುಗೆ ಗಳಿಸಿದೆ. ಸ್ಟ್ರಾಂಗ್ರೂಮ್ ಬಾಗಿಲುಗಳು (Strong Room Doors), ಜುವೆಲ್ಲರಿ ಲಾಕರ್ಗಳು…
ವಿಶ್ವಕರ್ಮ ಬ್ಯಾಂಕ್ ಉಡುಪಿ ಶಾಖೆ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಭಾಕರ ಪೂಜಾರಿ ಆಶಯ ಉಡುಪಿ: ಸ್ವಚ್ಛತೆ ಎಂಬುದು ಒಂದು ದಿನಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಅದು ನಿತ್ಯ ನಿರಂತರ ಮುಂದುವರಿದು ಪ್ರತಿಯೊಬ್ಬರ ದಿನನಿತ್ಯದ ಜೀವನ ಶೈಲಿಯಾಗಬೇಕು. ಸಮಾಜದ ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಜಾಗೃತರಾಗಬೇಕೆಂಬ ಉದ್ದೇಶದಿಂದ ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರಂತರವಾಗಿ ಇಂತಹ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಉತ್ತಮ ವಿಚಾರ ಎಂದು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ಆಯೋಜಿಸಿದ 24ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು. ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ ಕರಂಬಳ್ಳಿ, ಹಾಗೂ ನಮೋ ಫ್ರೆಂಡ್ಸ್ ದೊಡ್ಡಣಗುಡ್ಡೆ ಇದರ ಅಧ್ಯಕ್ಷ ರಾಜೇಶ್ ಕುಮಾರ್ ಹಸಿರು ನಿಶಾನೆ ತೋರಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರದ ದೊಡ್ಡನಗುಡ್ಡೆ ಹುಡ್ಕೋ ಕಾಲನಿ ಪರಿಸರದಲ್ಲಿ…
