Author: admin
ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ಅಂಬಲಪಾಡಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ರಕ್ತ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ರಕ್ತ ಪರೀಕ್ಷೆ ಮಾಡುವವರಿಗೆ ವಿಶೇಷ ರಿಯಾಯಿತಿ ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ರಾಜು ಸಿ.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿಯ ಉಪಾಧ್ಯಕ್ಷರಾದ ಗೋವಿಂದ ಭಂಡಾರಿ ಪ್ರಾಸ್ತಾವಿಕ ಮಾತನಾಡಿದರು. ಸೊಸೈಟಿಯ ನಿರ್ದೇಶಕರಾದ ಶೇಖರ್ ಸಾಲಿಯಾನ್ ಆದಿ ಉಡುಪಿ, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಲತಿ ಅಶೋಕ್ ಭಂಡಾರಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಕಾಯ್ದೆಯು ಜಾರಿಯಾದ ದಿನದ ಅಂಗವಾಗಿ ಜನವರಿ ಒಂದರಂದು ಆಚರಿಸುವ ಸೌಹಾರ್ದ ಸಹಕಾರಿ ದಿನದ ಪ್ರಯುಕ್ತ ಗುರುವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸಹಕಾರಿ ಧ್ವಜಾರೋಹಣ ಮಾಡಲಾಯಿತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ ಎಸ್, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಗೌರವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕೊಟ್ಟಾರಿ, ಯುವ ಸ್ಪಂದನ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಅತ್ಯಾಡಿ, ಗೋವರ್ಧನ ಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತೇಶ್, ಸಿಬ್ಬಂದಿ ಭವಿತ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಆತ್ಮಶಕ್ತಿ ಸಹಕಾರಿ ಸಂಘದ ಆರೋಗ್ಯ ಶಿಬಿರದಲ್ಲಿ ಬ್ರಹ್ಮಕುಮಾರಿ ಬಿ.ಕೆ ವಿಶ್ವೇಶ್ವರಿ ಅಭಿಪ್ರಾಯ ಮಂಗಳೂರು: ಶಾರೀರಿಕ ಆರೋಗ್ಯದ ಜೊತೆಗೆ ಮನುಷ್ಯನ ಮನಸ್ಥಿತಿಯೂ ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿ. ಉತ್ತಮ ಆರೋಗ್ಯಕ್ಕಾಗಿ ಔಷಧಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದೂ ಉಪಯುಕ್ತವಾದುದು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮಂಗಳೂರು ವಿಭಾಗ ಮುಖ್ಯಸ್ಥರಾದ ಬಿ.ಕೆ ವಿಶ್ವೇಶ್ವರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್ನೆಸ್ ಸೆಂಟರ್ ಉರ್ವಸ್ಟೋರ್ ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿಂದ ಉರ್ವಸ್ಟೋರ್ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್ನೆಸ್ ಸೆಂಟರ್ನಲ್ಲಿ ಭಾನುವಾರ ಆಯೋಜಿಸಿದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಹಿರಿಯ ಧಾರ್ಮಿಕ ಮುಖಂಡ ಯು.ಮಾಧವ ಸುವರ್ಣ ಮಾತನಾಡಿ…
ಲಾಭದಾಯಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಖ್ಯೆ 49,238ಕ್ಕೆ ಏರಿಕೆ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI), 2023-24ರಲ್ಲಿ ಭಾರತದಲ್ಲಿ ಬ್ಯಾಂಕಿಂಗ್ ಪ್ರವೃತ್ತಿ ಮತ್ತು ಪ್ರಗತಿಯ ಕುರಿತಾದ ತನ್ನ ವರದಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕಾರ್ಯಗಳು ಹಾಗೂ ಅವುಗಳ ಪ್ರಗತಿಯ ಹಿನ್ನೋಟವನ್ನು ನೀಡಿದೆ. https://chat.whatsapp.com/FCEnlTkAKCC0MGPhXtX4i4 ಮಾರ್ಚ್ 2024ರ ಅಂತ್ಯದ ವೇಳೆಗೆ, ಪ್ಯಾಕ್ಸ್ಗಳಲ್ಲಿ ಒಟ್ಟು 16.37 ಕೋಟಿ ಸದಸ್ಯತ್ವವಿದೆ. 4.95 ಕೋಟಿ ಸಾಲಗಾರರಿಗೆ ಸಾಲ ನೀಡಲಾಗಿದೆ. ಒಟ್ಟು ಸದಸ್ಯತ್ವದ ಒಟ್ಟು ಶೇಕಡಾ 44.2ರಷ್ಟು ಸಣ್ಣ ರೈತರು. ಶೇಕಡಾ 24.9ರಷ್ಟು ಜನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರು. ಸಾಲಗಾರ-ಸದಸ್ಯರ ಅನುಪಾತವು ಮಾರ್ಚ್ 2024ರ ಅಂತ್ಯಕ್ಕೆ ಶೇಕಡಾ 30.2ರಷ್ಟಿದ್ದು, ಅದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 30.7ರಷ್ಟಿತ್ತು. 2023-24ರ ಅವಧಿಯಲ್ಲಿ, ಪ್ಯಾಕ್ಸ್ಗಳಲ್ಲಿ ಒಟ್ಟು ಸಂಪನ್ಮೂಲಗಳಲ್ಲಿನ ಬೆಳವಣಿಗೆಯು ಹಿಂದಿನ ವರ್ಷದಲ್ಲಿ ಶೇಕಡಾ 14.2ರಿಂದ ಶೇಕಡಾ 9.8ಕ್ಕೆ ಇಳಿದಿದೆ. ಬಾಕಿ ಉಳಿದಿರುವ ಒಟ್ಟು ಸಾಲಗಳು ಮತ್ತು ಮುಂಗಡಗಳಲ್ಲಿ ಶೇಕಡಾ 80ಕ್ಕಿಂತ…
ಬಂಟ್ವಾಳ: ಕರಾವಳಿ ಜಿಲ್ಲೆಗಳ ಬಹುತೇಕ ಅಡಕೆ ಮರಗಳಿಗೆ ಎಲೆಚುಕ್ಕೆ ರೋಗ ಬಾಧಿಸಿದ್ದು ಇದನ್ನೇ ನಂಬಿಕೊಂಡಿರುವ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರು ಬ್ಯಾಂಕ್ಗಳಲ್ಲಿ ಸಾಲ ಮಾಡಿದ ಹಣ ತೀರಿಸಲಾಗದೆ ಪರದಾಡುತ್ತಿದ್ದು, ಇಂಥ ಸಂಕಷ್ಟ ಸ್ಥಿತಿಯಲ್ಲಿರುವ ರೈತರಿಗೆ ಸರಕಾರ ನಷ್ಟ ಪರಿಹಾರ ಒದಗಿಸಿಕೊಡಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಅಡಕೆ ಮರಗಳಿಗೆ ಎಲೆಚುಕ್ಕೆ ರೋಗವು ಕಾಣಿಸಿಕೊಂಡಿದ್ದು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಸಾವಿರಾರು ಅಡಕೆ ಮರಗಳು ಸಾಯುತ್ತಿದ್ದು, ಅಡಕೆ ಇಳುವರಿ ಸಹ ಗಣನೀಯವಾಗಿ ಇಳಿಮುಖವಾಗಿದೆ. ಈ ವರ್ಷ ನಿರಂತರವಾಗಿ ಸುರಿದ ಮಳೆಯ ಪ್ರಭಾವದಿಂದ ಕೊಳೆರೋಗದಿಂದಾಗಿ ಕಂಗೆಟ್ಟಿರುವ ಅಡಕೆ ಬೆಳೆಗಾರರಿಗೆ ಎಲೆಚುಕ್ಕೆ ರೋಗದಿಂದಾಗಿ ಅಡಕೆ ಮರಗಳೇ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಅಡಕೆ ಬೆಳೆಗಾರರು ಪರ್ಯಾಯ ಮಾರ್ಗವಿಲ್ಲದೆ ಚಿಂತೆಯಲ್ಲಿ ತೊಡಗಿದ್ದಾರೆ. ಕರಾವಳಿ ಜಿಲ್ಲೆಗಳ ಬಹುತೇಕ ಆರ್ಥಿಕ ವ್ಯವಹಾರವು ಅಡಕೆ ಬೆಳೆಗಾರರಿಂದಲೇ ಅವಲಂಬಿತವಾಗಿದ್ದು, ಅಡಿಕೆ ಬೆಳೆಯನ್ನೇ ನಂಬಿರುವ ರೈತರು…
ಭಾರತದ ಟ್ಯಾಕ್ಸಿ ಮಾರುಕಟ್ಟೆಯಲ್ಲಿ ಬದಲಾವಣೆಯ ಗಾಳಿ: ಸಹಕಾರ್ ಟ್ಯಾಕ್ಸಿ ಕೋ ಆಪರೇಟಿವ್ ಲಿಮಿಟೆಡ್ ಅಡಿ ಕಾರ್ಯ ನವದೆಹಲಿ: ಹೊಸ ವರ್ಷ ಸಮೀಪಿಸುತ್ತಿದ್ದಂತೆ, ಟ್ಯಾಕ್ಸಿ ಮಾರುಕಟ್ಟೆ(Marketg) ದೊಡ್ಡ ಬದಲಾವಣೆಯ ಅಂಚಿನಲ್ಲಿ ನಿಂತಿದೆ. ವರ್ಷಗಳಿಂದ ಓಲಾ ಮತ್ತು ಉಬರ್ನಂತಹ ಖಾಸಗಿ ಕ್ಯಾಬ್ ಕಂಪನಿಗಳ ಹಿಡಿತದಲ್ಲಿದ್ದ ಟ್ಯಾಕ್ಸಿ(Taxi) ಕ್ಷೇತ್ರಕ್ಕೆ ಈಗ ಹೊಸ ಸ್ಪರ್ಧಿಯ ಆಗಮನವಾಗುತ್ತಿದ್ದು, ಜನವರಿ 1ರಿಂದ ದೆಹಲಿಯಲ್ಲಿ ಸಹಕಾರ ಕ್ಷೇತ್ರದ ಮಹತ್ವಾಕಾಂಕ್ಷೆಯ ಭಾರತ್ ಟ್ಯಾಕ್ಸಿ (Bharat Taxi) ಅಧಿಕೃತ ಓಡಾಟ ನಡೆಸಲಿದೆ. ಸಹಕಾರ ಮಾದರಿಯ ಈ ಭಾರತ್ ಟ್ಯಾಕ್ಸಿ ಚಾಲಕರ ಬದುಕನ್ನೇ ಬದಲಾಯಿಸುವ ಮಾದರಿಯನ್ನು ಮುಂದಿಟ್ಟುಕೊಂಡು ಗಮನ ಸೆಳೆಯುತ್ತಿದೆ. ಇದು ದೇಶಾದ್ಯಂತ ವಿಸ್ತರಿಸಿದರೆ ದೇಶದ ಟ್ಯಾಕ್ಸಿ ವಲಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. https://chat.whatsapp.com/FCEnlTkAKCC0MGPhXtX4i4 ಪ್ರಸ್ತುತ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುತಿರುವ ಓಲಾ, ಉಬರ್ನಂಥ ಖಾಸಗಿ ಕಂಪನಿಗಳಿಗೆ ಪರ್ಯಾಯವಾಗಿ ಸರಕಾರವೇ ಭಾರತ್ ಟ್ಯಾಕ್ಸಿ ಎಂಬ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಇದು ಕೇಂದ್ರ ಸರಕಾರದ ಸಹಕಾರ ಸಚಿವಾಲಯ ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಮಾರ್ಗದರ್ಶನದಲ್ಲಿ ಆರಂಭವಾಗಿರುವ…
ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ ಸಮಾರೋಪ ಉದ್ಘಾಟಿಸಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ಬೆಳಗಾವಿ: ‘ರಾಜ್ಯದಲ್ಲಿನ ಸೌಹಾರ್ದ ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನಾವು ನೀತಿ ರೂಪಿಸುತ್ತೇವೆ. ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಗೆ ಸಹಕರಿಸಲು ನಾವು ಬದ್ಧರಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಬೆಳಗಾವಿಯ ಕೆಎಲ್ಇ ಸೆಂಟೇನರಿ ಕನ್ವೆನ್ಸನ್ ಸೆಂಟರ್ನಲ್ಲಿ ಭಾನುವಾರ ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರಿ ಸಂಸ್ಥೆಗಳ ಮೇಲೆ ಒಂದಿಷ್ಟಾದರೂ ಸರ್ಕಾರದ ನಿಯಂತ್ರಣವೂ ಬೇಕಾಗುತ್ತದೆ. ಹಾಗೆಂದು ನಾವು ತೊಂದರೆ ಕೊಡುವುದಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ಗ್ರಾಹಕರು ಠೇವಣಿ ಇರಿಸುವ ಹಣ ಸುರಕ್ಷಿತವಾಗಿ ಇರಬೇಕು ಎಂಬುದಷ್ಟೇ ನಮ್ಮ ಕಳಕಳಿ. ಸೌಹಾರ್ದ ಸಹಕಾರಿಗಳ ಬೇಡಿಕೆಗಳ ಕುರಿತಾಗಿ ವಿಸ್ತೃತವಾಗಿ ಚರ್ಚೆ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನಿಯೋಗ ಕರೆದುಕೊಂಡು ಹೋಗಿ, ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಸೌಹಾರ್ದ ಸಹಕಾರಿ ಸಂಸ್ಥೆಗಳು ಗ್ರಾಹಕರ ವಿಶ್ವಾಸ ಗಳಿಸಿವೆ. ಮನೆ-ಮನೆಗೆ…
ಮೂಲ್ಕಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದೆ. ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರವನ್ನು ಭಾನುವಾರ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪ್ರಧಾನಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಎಂ. ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ.ದೇವಿಪ್ರಸಾದ್ ಶೆಟ್ಟಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ…
ಕೊಟ್ಟಾರ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು ಇವರ ಸಹಯೋಗದೊಂದಿಗೆ ಯೇನೇಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇದರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ ಡಿಸೆಂಬರ್ 28ರಂದು ಭಾನುವಾರ ಬೆಳಗ್ಗೆ 9.30ರಿಂದ ಅಪರಾಹ್ನ 12.30ರ ವರೆಗೆ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್ನೆಸ್ ಸೆಂಟರ್, ನಿಲ್ಗಿರಿಸ್ನ್ ಹತ್ತಿರ ಕ್ಯಾನೋಪಿ ಬಿಲ್ಡಿಂಗ್, ಅಶೋಕನಗರ ರೋಡ್, ಉರ್ವಸ್ಟೋರ್ ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ತ ಹಲ್ಲು ಗಳನ್ನು ಕೀಳುವುದು, ಹಲ್ಲುಗಳ…
ಬೆಳ್ತಂಗಡಿ: ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ 14ನೇ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಶನಿವಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಗೌಡರ ಯಾನೆ ಒಕ್ಕಲಿಗರ ಸಂಘ ಉಜಿರೆ ಇದರ ಗೌರವಾಧ್ಯಕ್ಷ ಗೋಪಾಲಕೃಷ್ಣ ಜಿ.ಕೆ, ಬಂಟರ ಸಂಘ ಉಜಿರೆ ಇದರ ನಿರ್ದೇಶಕರಾದ ವೆಂಕಟರಮಣ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಉಜಿರೆಯ ಬೆಳಾಲು ಕ್ರಾಸ್ ಹಾಗೂ ಕುವೆಂಪುನಗರ ಪರಿಸರಗಳಲ್ಲಿ ಸ್ವಯಂಸೇವಕರು ಶ್ರಮದಾನ ನಡೆಸಿ, ಪರಸರ ಸ್ವಚ್ಛತಾ ಕಾರ್ಯ ಮಾಡಿದರು. ಉಜಿರೆ ಬಂಟರ ಸಂಘದ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಳಂಜ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಬ್ಯಾಂಕಿನ ಸಾಮಾಜಿಕ ಬದ್ಧತೆಗೆ ಹಿಡಿದ ಕೈಗನ್ನಡಿ ಎಂದು ಶ್ಲಾಘಿಸಿದರು. ಉಜಿರೆಯ ನಂದಗೋಕುಲ ಗೋಶಾಲೆಯ ಅಧ್ಯಕ್ಷರಾದ ಡಾ.…
