Author: admin

ಕಾಪುವಿನಲ್ಲಿ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶುಭಾಷಯ ಕಾಪು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಕಾಪು ಹಾಗೂ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಕಾಪು ಇವರ ಜಂಟಿ ಸಹಯೋಗದೊಂದಿಗೆ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಹಾಗೂ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರವು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಹತ್ತಿರದ ವಿವೇಕ್ ಕಾಂಪ್ಲೆಕ್ಸ್‌ನಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್…

Read More

​ಕ್ಯಾಂಪ್ಕೊ ಸಂಸ್ಥೆಗೆ ನೂತನ ಸಾರಥ್ಯ: ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಆಯ್ಕೆ ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಆಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು – ಇದರ ನೂತನ ಅಧ್ಯಕ್ಷರಾಗಿ ಎಸ್. ಆರ್ ಸತೀಶ್ಚಂದ್ರ, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t 2025-2030ರ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ, ಎಸ್. ಆರ್. ಸತೀಶ್ಚ0ದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ಹಾಗೂ ಶ್ರೀ ಪದ್ಮರಾಜ್ ಪಟ್ಟಾಜೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರಾದ ಎಸ್. ಆರ್. ಸತೀಶ್‌ಚಂದ್ರ ಅವರು ಸಹಕಾರಿ ಕ್ಷೇತ್ರದಲ್ಲಿ ಹಿರಿಯರಾಗಿದ್ದು ಎರಡೂವರೆ ದಶಕಗಳಿಗೂ ಹೆಚ್ಚಿನ ಸುದೀರ್ಘ ಅನುಭವ ಹೊಂದಿದ್ದಾರೆ. ಇವರು 2015-2020ರ ಅವಧಿಯಲ್ಲೂ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ನಿರ್ಗಮಿತ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು. ಕೃಷಿ ಹಾಗೂ ಸಹಕಾರಿ ವಲಯದಲ್ಲಿ ಇವರ ನಾಯಕತ್ವಕ್ಕೆ ಅಪಾರ ಮನ್ನಣೆಯಿದೆ. ಕಾಸರಗೋಡಿನ ಪಟ್ಟಾಜೆ-ಬದಿಯಡ್ಕ ಮೂಲದ ಪ್ರಗತಿಪರ ಕೃಷಿಕರಾದ ಪದ್ಮರಾಜ್ ಪಟ್ಟಾಜೆ ಅವರು ದೀರ್ಘಕಾಲದಿಂದ…

Read More

ಪುತ್ತೂರು: ಬೊಳುವಾರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ರೋಯಲ್‌ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆಯ ಉದ್ಘಾಟನಾ ಸಮಾರಂಭ ಡಿಸೆಂಬರ್‌ 6ರಂದು ಶನಿವಾರ ಬೆಳಗ್ಗೆ 11ಕ್ಕೆ ಕೆಯ್ಯೂರಿನ ಬ್ರಹ್ಮಶ್ರೀ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶಾಸಕ ಅಶೋಕ್‌ ಕುಮಾರ್‌ ರೈಯವರು ಕಚೇರಿ ಉದ್ಘಾಟಿಸಲಿದ್ದಾರೆ. ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈಯವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ರಾಮಜಾಲು ಗರಡಿ ಪರ್ಪುಂಜ ಇದರ ಆಡಳಿತ ಮೊಕ್ತೇಸರರಾದ ಸಂಜೀವ ಪೂಜಾರಿ ಕೂರೇಲು ಗಣಕಯಂತ್ರ ಮತ್ತು ಕೋರ್‌ ಬ್ಯಾಂಕಿಂಗ್‌ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೋಯಲ್‌ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಎ.ಕೆ ಜಯರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಪ್ರಥಮ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ದ್ವಾರಕಾ ಕಾರ್ಪೊರೇಶನ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಗೋಪಾಲಕೃಷ್ಣ ಭಟ್‌ ಸ್ವಸಹಾಯ ಸಂಘಗಳ ಪುಸ್ತಕ ಹಸ್ತಾಂತರಿಸಲಿದ್ದಾರೆ. ರೋಯಲ್‌…

Read More

ಸ್ವಚ್ಛತಾ ಶ್ರಮದಾನ ಉದ್ಘಾಟಿಸಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಬಂಟ್ವಾಳ: ಸ್ವಚ್ಛ ಪರಿಸರದ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು. ಅದು ಸಾರ್ವತ್ರಿಕಗೊಂಡು ಜನಸಾಮಾನ್ಯರ ಚಳುವಳಿಯಾಗಬೇಕು. ಹಾಗಾದಾಗ ಮಾತ್ರ ಎಲ್ಲರ ಜವಾಬ್ದಾರಿಯುತ ಭಾಗೀದಾರಿಕೆಯಿಂದ ಸ್ವಚ್ಛ ಭಾರತ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ನಡೆದ ಹತ್ತನೇ ಸ್ವಚ್ಛ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀ ವೀರ ವಿಠ್ಠಲ ವೆಂಕಟ್ರಮಣ ದೇವಸ್ಥಾನ ಪಾಣೆಮಂಗಳೂರು ಇದರ ಆಡಳಿತ ಮೊಕ್ತೇಸರರಾದ ಎನ್.ಪ್ರಮೋದ್ ಭಟ್ ಮಾತನಾಡಿ, ಬ್ಯಾಂಕಿಂಗ್ ಸೇವೆಯೊಂದಿಗೆ ವಿಶ್ವಕರ್ಮ ಬ್ಯಾಂಕ್ ಸಮಾಜಮುಖಿಯಾಗಿ ಸ್ವಚ್ಛ ಭಾರತದಂತಹ ಶ್ರಮದಾನದ ಕಾರ್ಯಕ್ರಮವನ್ನು ನಿರಂತರ ಸಂಘಟಿಸುತ್ತಿರುವುದು ಪ್ರಶಂಸನೀಯ. ಇದರಲ್ಲಿ ಪರಿಸರದ ಪ್ರತೀ ಮನೆಯವರೂ ಕೈ ಜೋಡಿಸಿ ಸಹಕರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು…

Read More

ಮೂಲ್ಕಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಹರಿಶ್ಚಂದ್ರ ಪಿ.ಸಾಲ್ಯಾನ್ ಶ್ಲಾಘನೆ ಮೂಲ್ಕಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲ್ಕಿ ಶಾಖೆಯ ವತಿಯಿಂದ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪೈರ್‌ ಹಾಗೂ ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಇವರ ಜಂಟಿ ಸಹಯೋಗದೊಂದಿಗೆ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ನೇತ್ರ ತಪಾಸಣಾ ಶಿಬಿರವು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆಯ ನಾಗರಾಜ ಟವರ್ಸ್‌ನಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶಿಬಿರವನ್ನು ಮೂಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ.ಸಾಲ್ಯಾನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿದ್ದು, ಬಹಳಷ್ಟು ಜನರಿಗೆ ಉದ್ಯೋಗವಕಾಶ ಒದಗಿಸಿಕೊಟ್ಟಿದೆ. ಪಿಗ್ಮಿ ಸಂಗ್ರಾಹಕರಿಗೂ ವಿಮಾ ಸೇವಾ ಸೌಲಭ್ಯ ಒದಗಿಸಿದೆ. ಪ್ರತಿವರ್ಷ…

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್‌ ಅಭಿಯಾನದ ಹತ್ತನೇ ಕಾರ್ಯಕ್ರಮ ನವೆಂಬರ್‌ 30ರಂದು ಭಾನುವಾರ ಮೆಲ್ಕಾರ್‌ನಲ್ಲಿ ಬೆಳಗ್ಗೆ 7.30ರಿಂದ 9ರ ತನಕ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯದಡಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಐದೂ ಶಾಖೆಗಳ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುತ್ತಿದೆ. ಭಾನುವಾರ ಮೆಲ್ಕಾರ್ ಶಾಖೆಯ ನೇತೃತ್ವದಲ್ಲಿ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಶ್ರೀ ವೀರ ವಿಠ್ಠಲ ದೇವಸ್ಥಾನ ಪಾಣೆಮಂಗಳೂರು ಪರಿಸರದಲ್ಲಿ ಸ್ವಚ್ಛತಾ ಶ್ರಮದಾದನ ಜರುಗಲಿದ್ದು, ಈ ಸಾಮಾಜಿಕ ಕಾರ್ಯದಲ್ಲಿ ಭಾಗವಹಿಸಿ ಸ್ವಚ್ಛಂದ ಪರಿಸರದ ರಾಯಭಾರಿಗಳಾಗಬೇಕೆಂದು ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ನವದೆಹಲಿ: ಹಿರಿಯ ಭಾರತೀಯ ಸಹಕಾರಿ ಡಾ.ಚಂದ್ರಪಾಲ್ ಸಿಂಗ್ ಯಾದವ್ ಅವರು ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟ-ಏಷ್ಯಾ ಪೆಸಿಫಿಕ್ (ಐಸಿಎ-ಎಪಿ) ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಗುರುವಾರ ಕೊಲಂಬೊದಲ್ಲಿ ನಡೆದ ಪ್ರಾದೇಶಿಕ ಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮಂಡಳಿಯ ಸದಸ್ಯರ ಚುನಾವಣಾ ಪ್ರಕ್ರಿಯೆ ನಡೆಯಿತು. ಇದರಲ್ಲಿ ಡಾ.ಚಂದ್ರಪಾಲ್‌ ಸಿಂಗ್‌ ಯಾದವ್‌ ಅವರ ಆಯ್ಕೆಯನ್ನು ಪ್ರಕಟಿಸಲಾಗಿದೆ. ಇಬ್ಬರು ಉಪಾಧ್ಯಕ್ಷರನ್ನು ಆರಿಸಲಾಗಿದ್ದು, ಚೀನಾದ ಆದಿಲಿ ವುಬುಲಿ ಮತ್ತು ಮಲೇಷ್ಯಾದ ಡಾಟುಕ್ ಸೆರಿ ಡಾ. ಅಬ್ದುಲ್ ಫತ್ತಾಹ್ ಅಬ್ದುಲ್ಲಾ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಚುನಾವಣೆಯಲ್ಲಿ ಜೋರ್ಡಾನ್‌ನ ಅಬ್ದುಲ್ಫತ್ತಾಹ್ ಎಂ.ಕ್ಯೂ. ಅಲ್-ಶಲಾಬಿ ಅವರು ಪರಾಭವಗೊಂಡರು. ಚುನಾವಣಾ ಪ್ರಕ್ರಿಯೆಯ ಪ್ರಕಾರ, ನಿರ್ದೇಶಕರ ಮಂಡಳಿಯನ್ನು ಮೊದಲು ಆಯ್ಕೆ ಮಾಡಲಾಗುತ್ತದೆ, ನಂತರ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳ ಆಯ್ಕೆ ನಡೆಯುತ್ತದೆ. ಐಸಿಎ-ಎಪಿ ಮಂಡಳಿಯ 11 ಸ್ಥಾನಗಳಿಗೆ, 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಹುದ್ದೆಯ ಘೋಷಣೆಯ ನಂತರ ಮಾತನಾಡಿದ ಡಾ.ಚಂದ್ರಪಾಲ್ ಸಿಂಗ್ ಯಾದವ್ ತಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯ ರಾಷ್ಟ್ರಗಳ…

Read More

ಬಳ್ಳಾರಿ: ಪ್ರತಿಷ್ಠಿತ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ 29 ಶಾಖೆಗಳನ್ನು ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಶಾಖೆಗಳಿವೆ. ಬ್ಯಾಂಕಿನಲ್ಲಿ ಪ್ರೊಬೇಶನರಿ ಆಫೀಸರ್‌, ಚೀಫ್‌ ಇನ್‌ಫಾರ್ಮೇಶನ್‌ ಸೆಕ್ಯುರಿಟಿ ಆಫೀಸರ್‌, ಸೀನಿಯರ್‌ ಮ್ಯಾನೇಜ್‌ಮೆಂಟ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಇದೇ ಭಾನುವಾರ 30-11-2025ರೊಳಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ www.sucobank.com ಸಂಪರ್ಕಿಸಬಹುದು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಉಡುಪಿ: ಛಾಯಾಗ್ರಹಣ ವಿಭಾಗದಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿರುವ ಮಣಿಪಾಲ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಹಿರೇಬೆಟ್ಟು ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೋಡಿಕನ್ಯಾಣ ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ಸಿಇಒ ರಾಘವೇಂದ್ರ ಕರ್ಕೇರ ಕೋಡಿ ಇವರ ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ಕಚೇರಿ ಸಹಾಯಕ ಅರುಣ್ ಕುಮಾರ್, ಉಡುಪಿ ಸೌಹಾರ್ದ ಒಕ್ಕೂಟದ ಸಿಇಒ ಲೋಹಿತ್ ಸಾಲ್ಯಾನ್, ಅಗ್ರಜ ಸೌಹಾರ್ದ ಉಡುಪಿ ಇದರ ಗಣೇಶ್ ಕೋಟ್ಯಾನ್, ಭಾರತಿ ಸೌಹಾರ್ದ ಕಾಪು ಇದರ ಶಶಿಧರ ಕೋಟ್ಯಾನ್, ವೀರಭದ್ರ ಸೌಹಾರ್ದ ಪರ್ಕಳ ಇದರ‌ ರತ್ನ ಶೆಟ್ಟಿ, ಪಂಚಮಿ ಸೌಹಾರ್ದ ಉಡುಪಿಯ ಸ್ವಾತಿ ಪ್ರಭು, ನಿರ್ಮಾಣ್ ಸೌಹಾರ್ದ ಉಡುಪಿ ಇದರ ಪ್ರದೀಪ ಕೆ., ಮಲ್ಪೆ ಮೀನು ವ್ಯಾಪಾರಸ್ಥ ಸೌಹಾರ್ದ ಸಹಕಾರಿ ಇದರ‌ ಜೀವನ್…

Read More

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಳಿಯ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯು ಬುಧವಾರ ಲೋಕಾರ್ಪಣೆಗೊಂಡಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶಾಖೆಯ ಉದ್ಘಾಟನೆಯನ್ನು ನೇರವೇರಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮಾನವೀಯತೆ, ಸಹಕಾರ, ಪ್ರೀತಿ, ಸೌಹಾರ್ದಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಸಹಕಾರ ಕ್ಷೇತ್ರವು ಬಡವರ ಬಂಧು ಎನಿಸಿದೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸಹಕಾರಿ ಸಂಘವು ಅತ್ಯುತ್ತಮ ಸೇವೆಯಿಂದ ಜನಸಾಮಾನ್ಯರ ಮನಸ್ಸು ಗೆದ್ದಿದೆ. ಗ್ರಾಮೀಣ ಪ್ರದೇಶದ ಜನರ ಹೃದಯ ಶ್ರೀಮಂತಿಕೆ, ಕೃಷಿ, ಹೈನುಗಾರಿಕೆ ದೇಶದ ಪ್ರಗತಿಯ ಬೆನ್ನೆಲುಬಾಗಿದೆ ಎಂದರು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ…

Read More