Author: admin

ಇಂದಿನಿಂದಲೇ ಜಾರಿ, ದೈನಂದಿನ ಜೀವನದ ಮೇಲೆ ಪರಿಣಾಮ ಬೀರುವ ಹಲವಾರು ಅಂಶಗಳು ಜಾರಿ ನವದೆಹಲಿ: ಹೊಸ ಆದಾಯ ತೆರಿಗೆ ನೀತಿ, ರೈಲ್ವೆ ಟಿಕೆಟ್‌ ಫಂಡ್‌ ನಿಯಮದಲ್ಲಿ ಬದಲಾವಣೆ, ಎಟಿಎಂಗಳ ನೀತಿಯಲ್ಲಿ ಬದಲಾವಣೆ ಸೇರಿದಂತೆ ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬಿರುವ ಹಲವಾರು ವಿಷಯಗಳು ಹೊಸ ಹಣಕಾಸು ವರ್ಷದ ಆರಂಭದಿಂದ ಜಾರಿಗೆ ಬರುವಂತೆ ಬದಲಾಗಲಿವೆ. https://chat.whatsapp.com/FCEnlTkAKCC0MGPhXtX4i4 ಡಿಜಿಟಲ್‌ ಪಾವತಿಗೆ ಡಬಲ್‌ ದೃಢೀಕರಣ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹೊಸ ನಿಯಮಗಳ ಅನ್ವಯ ಎಲ್ಲಾ ಡಿಜಿಟಲ್‌ ಪಾವತಿಗಳು ಇನ್ಮುಂದೆ ಎರಡು ಹಂತದ ದೃಢೀಕರಣಕ್ಕೆ ಒಳಪಡಬೇಕು. ಹಾಲಿ ಎಸ್‌ಎಂಎಸ್‌ ಆಧಾರಿತ ಒಟಿಪಿ ವ್ಯವಸ್ಥೆ ಜಾರಿಯಲ್ಲಿದೆ. ಇದರ ಜೊತೆಗೆ ಇನ್ನೊಂದು ಹಂತದ ದೃಢೀಕರಣವೂ ಅಗತ್ಯವಾಗಲಿದೆ. ಪಾನ್‌ ಪಡೆಯಲು ಹೆಚ್ಚುವರಿ ದಾಖಲೆ ಇದುವರೆಗೆ ಕೇವಲ ಆಧಾರ್‌ ದೃಢೀಕರಿಸುವ ಮೂಲಕ ಹೊಸ ಪಾನ್‌ ಪಡೆಯಬಹುದಿತ್ತು. ಏ.1ರಿಂದ ಹೊಸ ಪಾನ್‌ ಪಡೆಯಲು ಹೆಚ್ಚುವರಿ ದಾಖಲೆ ಸಲ್ಲಿಸಬೇಕು. ಜೊತೆಗೆ ಆಧಾರ್‌ ಕಾರ್ಡ್‌ನಲ್ಲಿ ಇರುವಂತೆಯೇ ಪಾನ್‌ನಲ್ಲೂ ಹೆಸರು ಬರಲಿದೆ. ಹೀಗಾಗಿ ಆಧಾರ್‌ನಲ್ಲಿ ಸರಿಯಾದ ಹೆಸರು…

Read More

ಮುಂಬೈ: ರಾಷ್ಟ್ರೀಯ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟೀಸ್ ಒಕ್ಕೂಟ ಲಿಮಿಟೆಡ್ (NAFCUB) ಭಾನುವಾರ ದೆಹಲಿಯಲ್ಲಿ ಸಭೆ ಸೇರಿದ್ದು, ಮುಂದಿನ ಬೆಳವಣಿಗೆಗಳು ಮತ್ತು ಭವಿಷ್ಯದ ಯೋಜನೆಗಳ ಮೇಲೆ ಗಮನ ಹರಿಸಿ ವಿಸ್ತೃತ ಚರ್ಚೆ ನಡೆಸಿದೆ. ಇದರ ಜೊತೆಗೆ ಸಂಸ್ಥೆಯು ಮುಂದಿನ ವರ್ಷ 50 ವರ್ಷಗಳನ್ನು ಪೂರೈಸಲಿದ್ದು, NAFCUBನ ಸುವರ್ಣ ಮಹೋತ್ಸವ ಆಚರಣೆ ಬಗ್ಗೆಯೂ ಚರ್ಚೆ ನಡೆಸಿದೆ. https://chat.whatsapp.com/FCEnlTkAKCC0MGPhXtX4i4 ನಗರ ಸಹಕಾರಿ ಬ್ಯಾಂಕುಗಳ ನಿರ್ದೇಶಕ ಮಂಡಳಿಯೆ ಸದಸ್ಯರಿಗೆ ಹತ್ತು ವರ್ಷಗಳ ಅಧಿಕಾರಾವಧಿಯ ಮಿತಿಯನ್ನು ಹೇರಿರುವ ಕ್ರಮದ ಬಗ್ಗೆ ವ್ಯಾಪಕ ಚರ್ಚೆ ನಡೆದಿದ್ದು, ಸಂಪೂರ್ಣ ಮಂಡಳಿಯನ್ನು ಒಂದೇ ಬಾರಿಗೆ ಬದಲಾಯಿಸುವ ಬದಲು ಸಹಕಾರಿ ಬ್ಯಾಂಕುಗಳ ಮಂಡಳಿಗಳಲ್ಲಿ ಕ್ರಮೇಣ ಬದಲಾವಣೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚೆ ನಡೆಯಿತು. NUCFDC ಅಧ್ಯಕ್ಷ ಜ್ಯೋತಿಂದ್ರ ಮೆಹ್ತಾ ಅವರು ನವದೆಹಲಿಯಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಸುಧಾರಣೆಗಳಿಗೆ ಹೆಚ್ಚು ಸಮತೋಲಿತ ಮತ್ತು ಪ್ರಾಯೋಗಿಕ ವಿಧಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಸಹಕಾರಿ ಬ್ಯಾಂಕುಗಳ ಸ್ವಾಯತ್ತತೆ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆರೋಗ್ಯ ಶಿಬಿರದಲ್ಲಿ ಲಿಲ್ಲಿ ಮೇರಿ ಸಲಹೆ ಬಜ್ಪೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ರೋಟರಿ ಕ್ಲಬ್ ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜ್ಪೆ ಕರಂಬಾರು ಹಾಗೂ ಎನ್.ಜಿ. ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಜ್ಪೆ ಇಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಎನ್.ಜಿ. ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸದಸ್ಯರಾದ ಲಿಲ್ಲಿ ಮೇರಿ ಉದ್ಘಾಟಿಸಿ ಮಾತನಾಡಿ ಆರೋಗ್ಯದ ರಕ್ಷಣೆ ತುಂಬಾ ಮಹತ್ವದ್ದಾಗಿದೆ. ನಾವು ಆರೋಗ್ಯವಾಗಿ ಇದ್ದರೆ ಎಲ್ಲವನ್ನು ಸಂಪಾದಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ನಿಯಮಿತವಾಗಿ ಆರೋಗ್ಯದ ತಪಾಸಣೆ ಮಾಡುವುದು ಅಗತ್ಯ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಇಂತಹ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ರೋಟರಿ ಕ್ಲಬ್ ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜ್ಪೆ, ಕರಂಬಾರು ಹಾಗೂ ಎನ್.ಜಿ. ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾರ್ಚ್‌ 29ರ ಭಾನುವಾರ, ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಜ್ಪೆ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ.ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಂಡ್‌ ಡೆಂಟಲ್ ಸೈನ್ಸ್‌ ಮಂಗಳೂರು ಹಾಗೂ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇವರ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು…

Read More

ಕ್ಯೂಆರ್ ಕೋಡ್ ಸೌಲಭ್ಯಕ್ಕೆ ಚಾಲನೆ ಪುತ್ತೂರು: ಸಹಕಾರಿ ಕ್ಷೇತ್ರದಲ್ಲಿ 120 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪುತ್ತೂರಿನ ಹೆಮ್ಮೆಯ ‘ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್’, ತನ್ನ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಭಾಗವಾಗಿ ಗ್ರಾಹಕರ ಖಾತೆಗೆ ನೇರವಾಗಿ ಹಣ ಪಾವತಿಸಲು ಅನುಕೂಲವಾಗುವ ಕ್ಯೂಆರ್ ಕೋಡ್ (QR Code) ಸೌಲಭ್ಯವನ್ನು ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ಅನಾವರಣಗೊಳಿಸಲಾಯಿತು. ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮಿ ಗ್ರಾಹಕರಿಗೆ ಕ್ಯೂಆರ್ ಕೋಡ್ ಕಾರ್ಡ್ ಮತ್ತು ಸೌಂಡ್ ಬಾಕ್ಸ್‌ ನೀಡಿ ಚಾಲನೆ ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಈಗಾಗಲೇ ಸಿಟಿಎಸ್ ಕ್ಲಿಯರಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಇನ್‌ವರ್ಡ್ ಮತ್ತು ಔಟ್‌ವರ್ಡ್ ತ್ವರಿತ ಕ್ಲಿಯರಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ನೇರ ಹಣ ವರ್ಗಾವಣೆಗಾಗಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ವ್ಯವಸ್ಥೆ, ಬ್ಯಾಂಕ್ ಐಎಫ್‌ಎಸ್‌ಸಿ ಕೋಡ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಆಪ್ ಕೂಡ ಬಿಡುಗಡೆಯಾಗಿದೆ. ಇದೀಗ…

Read More

ಬೋಳಾರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಶಾಖೆ ಉದ್ಘಾಟಿಸಿ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್‌ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ಎಂದರೆ ಧೈರ್ಯ. ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಠೇವಣಿ ಇಟ್ಟರೆ ಧೈರ್ಯ ಸಿಗುತ್ತದೆ. ಆತ್ಮಶಕ್ತಿಯ ಆತ್ಮಸ್ಥೈರ್ಯದಿಂದಲೇ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್‌ ಅಭಿಪ್ರಾಯಪಟ್ಟರು. ಮಂಗಳಾದೇವಿ ಸಮೀಪದ ಬೋಳಾರ ಜೆಪ್ಪು ಮಾರ್ಕೆಟ್ ಭಗಿನಿ ಸಮಾಜದ ಬಳಿಯ ಯುನಿಕ್ ಸ್ಟಿಕ್ ಕಾಂಪ್ಲೆಕ್ಸ್‌ನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಬೋಳಾರ ಶಾಖೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್‌ ಬೋಳಾರ್‌ ಅವರ ಪ್ರತಿಯೊಂದು ನಡೆಯಲ್ಲಿ ಏನಾದರೊಂದು ವಿಶೇಷತೆ ಇರುತ್ತದೆ. ಆತ್ಮಶಕ್ತಿ ಎಂಬ ಹೆಸರೇ ವಿಶೇಷವಾದುದು. ಈ ಹೆಸರು ಇಟ್ಟವರನ್ನೂ ಸನ್ಮಾನಿಸಬೇಕು. ಒಂದು ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ವೇಳೆ ಸಹಕಾರಿ ಕ್ಷೇತ್ರದ ಅಧಿಕಾರಿಗಳು ಹಾಜರಿರುವುದು ಎಂದರೆ ಆತ್ಮಶಕ್ತಿ…

Read More

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೋಮವಾರ ಕಾವು ಶಾಖೆಯಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಕ್ಯಾಂಪ್ಕೋ ಸಂಸ್ಥೆ ಕಾವು ಶಾಖೆಯ ಸದಸ್ಯರಾದ ಸುಂದರ ಪೂಜಾರಿ ಕೆರೆಮಾರು ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆಗೆ ಸಹಾಯಧನದ ಮೊತ್ತ ರೂ. 50,000 ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಮುರಳೀಕೃಷ್ಣ ಕೆ. ಎನ್ ಸುಂದರ ಪೂಜಾರಿಯವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕರಾದ ಗೋವಿಂದ ಭಟ್, ಶಾಖೆಯ ಪ್ರಬಂಧಕರಾದ ಅಮರೇಶ್ ಪಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಬೋಳಾರ ಶಾಖೆಯು ಮಾರ್ಚ್ 25ರಂದು ಉದ್ಘಾಟನೆಗೊಳ್ಳಲಿದೆ. ಆತ್ಮಶಕ್ತಿ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಯುನಿಕ್ ಸ್ಟಿಕ್ ಕಾಂಪ್ಲೆಕ್ಸ್ ಭಗಿನಿ ಸಮಾಜದ ಬಳಿ ಜೆಪ್ಪು ಮಾರ್ಕೆಟ್, ಬೋಳಾರ, ಮಂಗಳೂರು, ಇಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ನೂತನ ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾಜ ಸೇವಕಿ ತಾರಾ ಹೇಮಚಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಸೀತಾರಾಮ್ ಎ. ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಸಿ. ಪ್ರಸಾದ್ ರೆಡ್ಡಿ ಗಣಕೀಕೃತ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಕಾರ್ಯಕ್ಕೆ ಡಾ| ಆತ್ಮರಂಜನ್ ರೈ ಶ್ಲಾಘನೆ ಬಂಟ್ವಾಳ: ವಿಶ್ವಕರ್ಮ ಸಹಕಾರ ಬ್ಯಾಂಕ್ ಆರ್ಥಿಕ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಅವಶ್ಯ ಪರಿಸರ ಜಾಗೃತಿಯ ಕಾರ್ಯವನ್ನು ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸೇರಿಸಿಕೊಂಡು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 36ನೇ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಆಡಳಿತ ಸದಸ್ಯರಾದ ಪ್ರತಿಭಾ ಎ. ರೈ ಹಾಗೂ ಯುವಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ನರಹರಿ ಪರ್ವತ ಸದಾಶಿವ…

Read More

ವಿಜಯಪುರ: ಬೆಳಗಾವಿ ವಿಭಾಗದಲ್ಲಿ ಸೌಹಾರ್ದ ಸಹಕಾರಿಗಳ ಗಟ್ಟಿ ಧ್ವನಿಯಾಗಿರುವ ಸಂಜಯ ಪಾಟೀಲ ಕನಮಡಿ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಯುಕ್ತ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಪಾಟೀಲ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ವಿಜಯಪುರ ಜಿಲ್ಲೆಯಲ್ಲಿ ನೂತನ ಸೌಹಾರ್ದ ಸಹಕಾರಿಗಳ ಒಕ್ಕೂಟ ರಚನೆ ಮಾಡಲಾಗಿದ್ದು, ಸಂಜಯ ಪಾಟೀಲ ಕನಮಡಿ ಅವರು ಅಧ್ಯಕ್ಷರಾಗಿದ್ದಾರೆ. ಇದೀಗ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಇದರ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಗೆ ಇನ್ನಷ್ಟು ಬಲ ಬಂದಂತಾಗಿದೆ. ಬೆಳಗಾವಿ ವಿಭಾಗದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಗಟ್ಟಿ ಧ್ವನಿಯಾಗಿ ಸೌಹಾರ್ದ ಸಹಕಾರಿಗಳ ಸೇವೆಗೆ ಹಾಗೂ ಸರ್ವ ಸೌಹಾರ್ದ ಸಹಕಾರಿ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸಂಜಯ ಪಾಟೀಲರು ತಿಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಚಿರಋಣಿಯಾಗಿದೇನೆ, ನೇಮಕ ಮಾಡಿದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಸಹಕಾರ…

Read More