Author: admin
ಮಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ ಸಂಸ್ಥೆಗಳಿಗೆ ಅನ್ವಯಿಸುತ್ತಿದ್ದವು. ಈ ಬಾರಿ ಅವುಗಳ ಸದಸ್ಯರು ಬೆಳೆಸಿದ ಅಥವಾ ಬೆಳೆದ ಜಾನುವಾರು ಮೇವು ಮತ್ತು ಹತ್ತಿ ಬೀಜಗಳನ್ನು ಪೂರೈಸುವ ಪ್ರಾಥಮಿಕ ಸಹಕಾರಿ ಸಂಸ್ಥೆಗಳನ್ನು ಸಹ ಸೇರಿಸಿ ತೆರಿಗೆ ಕಡಿತದ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗಳಿಗೂ ಹೆಚ್ಚುವರಿ ಬೆಂಬಲ ನೀಡಲು ಬಜೆಟ್ ನಲ್ಲಿ ಪ್ರಸ್ತಾಪವನ್ನು ಮಾಡಲಾಗಿದೆ. ಆಡಳಿತವು ಹೊಸ ರೀತಿಯ ತೆರಿಗೆ ಸುಧಾರಣೆಗೆ ಪ್ರಮುಖ ಅಂಶಗಳನ್ನು…
ಕಂಪನಿಗಳಲ್ಲಿ ಮಾಡಿದ ಹೂಡಿಕೆ ಮೇಲಿನ ಲಾಭಾಂಶಕ್ಕೆ ವಿನಾಯಿತಿ: ಕೇಂದ್ರ ಬಜೆಟ್ ಘೋಷಣೆ ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ನಲ್ಲಿ ಸಹಕಾರಿ ವಲಯಕ್ಕೆ ಒಂದಷ್ಟು ಪೂರಕವಾದ ಅಂಶಗಳನ್ನು ಹೊಂದಿದೆ. ಸಹಕಾರಿ ವಲಯದ ಬೆನ್ನಿಗೆ ನಿಂತಿರುವ ಕೇಂದ್ರ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ. https://chat.whatsapp.com/FCEnlTkAKCC0MGPhXtX4i4 ಇಷ್ಟರವರೆಗೆ ತೆರಿಗೆ ವಿನಾಯಿತಿಯನ್ನು ಪ್ರಾಥಮಿಕ ಸಹಕಾರಿ ಸಂಘಗಳ ಸದಸ್ಯರು ಉತ್ಪಾದಿಸಿದ ಹಾಲು, ಎಣ್ಣೆಬೀಜಗಳು, ಹಣ್ಣುಗಳು ಅಥವಾ ತರಕಾರಿಗಳನ್ನು ಪೂರೈಸುವಲ್ಲಿ ತೊಡಗಿರುವ ಸಂಘಕ್ಕೆ ಮತ್ತು ಅದೇ ಚಟುವಟಿಕೆಗಳಲ್ಲಿ ತೊಡಗಿರುವ ಇತರರಿಗೆ ನೀಡಲಾಗುತ್ತಿತ್ತು. ಪ್ರಸ್ತುತ ಇದರ ವ್ಯಾಪ್ತಿಯನ್ನು ಸದಸ್ಯರು ಉತ್ಪಾದಿಸುವ ಪಶು ಆಹಾರ ಮತ್ತು ಹತ್ತಿ ಬೀಜ ಪೂರೈಕೆಗೂ ವಿಸ್ತರಿಸಲಾಗುತ್ತಿದೆ. ಹೊಸ ತೆರಿಗೆ ಪದ್ಧತಿಯಡಿ ಸಹಕಾರಿ ಸಂಘದ ಲಾಭಾಂಶದ ಮೇಲೆಯೂ ತೆರಿಗೆ ವಿನಾಯಿತಿಯನ್ನು ವಿಸ್ತರಿಸಲಾಗಿದೆ. ಒಂದು ಸಹಕಾರ ಸಂಘವು ಬೇರೊಂದು ಸಹಕಾರ ಸಂಘದಿಂದ ಪಡೆಯುವ ಲಾಭಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದನ್ನು ಸದಸ್ಯರಿಗೆ ವಿತರಿಸಿದರೂ ಈ ಸೌಲಭ್ಯ ಲಭಿಸಲಿದೆ. ರಾಷ್ಟ್ರೀಯ ಸಹಕಾರ ಒಕ್ಕೂಟಗಳು ಜ.31ರವರೆಗೆ ಕಂಪನಿಗಳಲ್ಲಿ ಮಾಡಿದ…
ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜನೆಯ 23ನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರೋಳಿ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರನಾಥ ಅತ್ತಾವರ ಅಭಿಪ್ರಾಯ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ’ ಧ್ಯೇಯದೊಂದಿಗೆ 23ನೇ ಸ್ವಚ್ಛತಾ ಹೀ ಸೇವಾ ಶ್ರಮದಾನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಪರಿಸರದಲ್ಲಿ ಭಾನುವಾರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಮರೋಳಿ ಗ್ರಾಮ ಸಮಿತಿ ಅಧ್ಯಕ್ಷರಾದ ಚಂದ್ರನಾಥ ಅತ್ತಾವರ ಮಾತನಾಡಿ, ಸಮಾಜದಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರೆ ಸ್ವಸ್ಥ ಹಾಗೂ ಆರೋಗ್ಯಕರ ಸಮಾಜ ನಿರ್ಮಿಸುವುದಕ್ಕೆ ಸಾಧ್ಯ. ಪರಿಸರ ಸ್ವಚ್ಛವಾಗಿದ್ದರೆ ನಾವೂ ಆರೋಗ್ಯಯುತ ಹಾಗೂ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯವಿದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಸೇವಾಕಾರ್ಯ ಸಮಾಜಕ್ಕೆ ಉತ್ತಮ ಮಾದರಿ ಎಂದು ಶ್ಲಾಘಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕೇಶವ ಮರೋಳಿ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಸ್ವಚ್ಛತಾ ಕಾರ್ಯಕ್ರಮ ಅನೇಕ ಸಂಘಟನೆಗಳಿಗೆ ಪ್ರೇರಣಾ ಶಕ್ತಿಯಾಗಲಿ ಹಾಗೂ ಇದು ಸ್ವಚ್ಛ ಭಾರತ ಪರಿಕಲ್ಪನೆಯ ಆಶಯಕ್ಕೆ ಹಸಿರು ನಿಶಾನೆಯಾಗಲಿ ಎಂದು ಆಶಿಸಿದರು.…
ಉತ್ತಮ ನಾಯಕತ್ವ, ಸಾಮಾಜಿಕ ಚಿಂತನೆಯ ಆಡಳಿತ ಮಂಡಳಿ, ಸಿಬ್ಬಂದಿಯಿಂದ ಆತ್ಮಶಕ್ತಿ ಸಹಕಾರಿ ಸಂಘಕ್ಕೆ ಜನಮೆಚ್ಚುಗೆ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 100ನೇ ಉಚಿತ ಆರೋಗ್ಯ ಶಿಬಿರದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅಭಿಪ್ರಾಯ ಮಂಗಳೂರು: ಸಹಕಾರ ಕ್ಷೇತ್ರದ ವಿವಿಧ ಚಿಂತನೆಯಿಟ್ಟುಕೊಂಡು ಸಾಮಾಜಿಕವಾದ ಚಿಂತನೆ ಇಟ್ಟುಕೊಂಡು ಆ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಅದ್ಭುತವಾದುದನ್ನು ಸಾಧಿಸಿ ಜನರ ಪ್ರೀತಿಗೆ ಪಾತ್ರವಾಗಿ ಯಶಸ್ವಿಯಾಗಿ ಕೆಲಸ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ತೋರಿಸಿದೆ. ಸ್ಪಷ್ಟವಾದ ನಾಯಕತ್ವ, , ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸಾಮಾಜಿಕ ಚಿಂತನೆಯ ಮನೋಭಾವ, ಪರಸ್ಪರ ಸಹಕಾರ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ಉಚಿತ ಆರೋಗ್ಯ ಶಿಬಿರದ 100ನೇ ಶಿಬಿರ ಆರೋಗ್ಯ ಸೇವಾ ಸಂಗಮದ ಅಂಗವಾಗಿ ಹಮ್ಮಿಕೊಂಡ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಹಾಗೂ ರಕ್ತದಾನ ಶಿಬಿರ ಮತ್ತು ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ…
ಸ್ಥಾಪನಾ ದಿನಾಚರಣೆ ಪ್ರಯುಕ್ತ ಆರೋಗ್ಯ ಸೇವಾ ಸಂಗಮ, ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ ಮಂಗಳೂರು: ನಗರದ ಪಡೀಲ್ನಲ್ಲಿ ಆಡಳಿತ ಕಚೇರಿ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಆರೋಗ್ಯ ಸೇವಾ ಸಂಗಮ “ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ , ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವ ಸಮಾರಂಭʼʼ ಫೆಬ್ರವರಿ 1ರ ಭಾನುವಾರ ಬೆಳಗ್ಗೆ 9ರಿಂದ ಆತ್ಮಶಕ್ತಿ ಸೌಧ ಪಡೀಲ್, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ…
ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಎಚ್.ಎನ್ ರಮೇಶ್ ಕಿವಿಮಾತು ಮಂಗಳೂರು: ಯಾವುದೇ ಸಹಕಾರಿ ಸಂಸ್ಥೆಗಳು ಸಾಲಗಳನ್ನು ಕೊಡುವಾಗ ಅವುಗಳಿಗೆ ಸಾಲ ತೆಗೆದುಕೊಳ್ಳುವವರು ಕೊಡುವ ದಾಖಲೆಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕು. ಹಿಂದಿನ ವರದಿಗಳನ್ನು ಗಮನಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ದಕ್ಷಿಣ ಕನ್ನಡ ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ವತಿಯಿಂದ ಮಂಗಳೂರು, ಮೂಲ್ಕಿ, ಉಳ್ಳಾಲ ಹಾಗೂ ಮೂಡುಬಿದರೆ ತಾಲೂಕಿನ ಸೌಹಾರ್ದ ಸಹಕಾರಿಗಳಿಗಾಗಿ ಆಯೋಜಿಸಿದ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರಿಗೇ ಆಗಲಿ ಸಾಲ ಕೊಡುವಾಗ ಕನಿಷ್ಠ ದಾಖಲೆಗಳನ್ನು ಪಡೆದುಕೊಳ್ಳಲೇಬೇಕು. ಸಾಲ ತೆಗೆದುಕೊಳ್ಳವವ ಅದನ್ನು ಮರುಪಾವತಿ ಮಾಡುವಷ್ಟು ಶಕ್ತನಾಗಿದ್ದಾನೆಯೇ ಎಂದು ಗಮನಿಸಿಕೊಳ್ಳಬೇಕು. ಸಾಲ ತೆಗೆದುಕೊಳ್ಳುವವ ಮರುಪಾವತಿ ಮಾಡುವಷ್ಟು ಶಕ್ತನಲ್ಲದಿದ್ದರೆ ಮುಂದೆ ಸಮಸ್ಯೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಕಾನೂನು ಚೌಕಟ್ಟು ಬಿಗಿಯಾಗಿರುವ ಕಾರಣ ಎಲ್ಲ ಅಂಶಗಳ ಬಗ್ಗೆಯೂ ಗಮನ ಹರಿಸುವುದು ಮುಖ್ಯವಾಗುತ್ತದೆ ಎಂದು ಹೇಳಿದರು. ಈಗೀಗ…
ಹತ್ತು ವರ್ಷ: ಶತ ಶಿಬಿರ; ಆರೋಗ್ಯ ರಕ್ಷಣೆಗೆ ಆತ್ಮಶಕ್ತಿ ಸಹಕಾರಿ ಸಂಸ್ಥೆ ಕಾಳಜಿ: ಫೆ.೧ರಂದು ೧೦೦ನೇ ಬೃಹತ್ ಆರೋಗ್ಯ ಶಿಬಿರ -ಆರೋಗ್ಯ ಸೇವಾ ಸಂಗಮ ಮಂಗಳೂರು: ಜಗತ್ತು ಆಧುನಿಕ ಕಾಲಘಟ್ಟದ ನಾಗಾಲೋಟದಲ್ಲಿ ಓಡುತ್ತಿದೆ. ಆಧುನಿಕ ಸಲಕರಣೆಗಳು, ತಂತ್ರಜ್ಞಾನಗಳ ಉಪಯೋಗಗಳ ಭರಾಟೆಯಲ್ಲಿ ಮನುಷ್ಯ ಸ್ವಂತ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವ ತನಕ ಕಾಲ ಮುಂದುವರಿದಿದೆ. ಯಾವುದೇ ಒಬ್ಬ ವ್ಯಕ್ತಿ ತನಗೆ ಬೇಕಾದಷ್ಟು ಹಣ, ಯಶಸ್ಸು ಅಥವಾ ಭೌತಿಕ ಸೌಕರ್ಯಗಳನ್ನು ಹೊಂದಿದರೂ, ಆತ ಅನಾರೋಗ್ಯಕ್ಕೀಡಾದರೆ ಸಂತೋಷದ ಜೀವನ ನಡೆಸಲು ಸಾಧ್ಯವಿಲ್ಲ. ಆರೋಗ್ಯವು ಉತ್ತಮವಾಗಿದ್ದರಷ್ಟೇ ಮನುಷ್ಯ ಚೆನ್ನಾಗಿ ಅಧ್ಯಯನ ಮಾಡಲು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಅಥವಾ ಯಾವುದೇ ಸವಾಲುಗಳನ್ನು ವಿಶ್ವಾಸದಿಂದ ಎದುರಿಸಲು ಶಕ್ತನಾಗುತ್ತಾನೆ. https://chat.whatsapp.com/FCEnlTkAKCC0MGPhXtX4i4 ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಕಷ್ಟದ ಕೆಲಸವೇನೂ ಅಲ್ಲ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ದೈಹಿಕ ವ್ಯಾಯಾಮ, ಸರಿಯಾದ ವಿಶ್ರಾಂತಿ, ಸ್ವಚ್ಛ ಪರಿಸರ ಇವೆಲ್ಲವೂ ಸಿಕ್ಕರೆ ಆರೋಗ್ಯ ಚೆನ್ನಾಗಿರುತ್ತದೆ. ಆದರೆ ವರ್ತಮಾನದ ತಲ್ಲಣಗಳು ಈ ಮೇಲಿನ ಅಂಶಗಳನ್ನು ನಿಯಮಿತವಾಗಿ ಮಾಡುವುದಕ್ಕೆ ತಡೆಯೊಡ್ಡುತ್ತಲೇ…
ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮೇಘರಾಜ್ ಜೈನ್ ಅವರು ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಅವರು ನಡೆಸಿಕೊಟ್ಟರು. ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಡಾ। ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ, ಮೋನಪ್ಪ ಶೆಟ್ಟಿ, ಸುನೀಲ್ ಕುಮಾರ್, ನಜೀರ್ ಹುಸೈನ್, ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಎಂ. ವಾದಿರಾಜ ಶೆಟ್ಟಿ, ಮೇಘರಾಜ್…
ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ: ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಏಕರೂಪದ ಪರಿಹಾರದ ಗುರಿ ನವದೆಹಲಿ: ಪ್ರವಾಹ, ಚಂಡಮಾರುತ, ಬರ ಮತ್ತು ಇತರ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಸಾಲಗಾರರಿಗೆ ಹೊರೆಯಾಗದಂತೆ ಸಾಲ ಮರುಪಾವತಿ ಮಾಡಲು ಪರಿಹಾರ ಕ್ರಮಗಳನ್ನು ಪ್ರಸ್ತಾಪಿಸುವ ಕರಡು ಮಾರ್ಗಸೂಚಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬಿಡುಗಡೆ ಮಾಡಿದೆ. ಪ್ರಸ್ತಾವಿತ ಮಾರ್ಗಸೂಚಿಗಳು ನೈಸರ್ಗಿಕ ವಿಕೋಪಗಳಾದಂಥ ಸಂದರ್ಭದಲ್ಲಿ ಮರುಪಾವತಿ ಸಾಮರ್ಥ್ಯವು ತಾತ್ಕಾಲಿಕವಾಗಿ ಪರಿಣಾಮ ಬೀರುವ ಗ್ರಾಹಕರನ್ನು ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕ್ಗಳಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ. https://chat.whatsapp.com/FCEnlTkAKCC0MGPhXtX4i4 ಕರಡು ಮಾರ್ಗಸೂಚಿಗಳು ಗ್ರಾಮೀಣ ಸಹಕಾರಿ ಬ್ಯಾಂಕ್ಗಳು ಮತ್ತು ಪಟ್ಟಣ ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸಲಿದ್ದು, ನಿಯಂತ್ರಿತ ಘಟಕಗಳಲ್ಲಿ ಪರಿಹಾರ ಕ್ರಮಗಳಲ್ಲಿ ಹೆಚ್ಚಿನ ಏಕರೂಪತೆಯನ್ನು ತರಲು ಪ್ರಯತ್ನಿಸಲಿವೆ. ಸಾರ್ವಜನಿಕ ಸಮಾಲೋಚನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ 1, 2026ರಿಂದ ಈ ಮಾರ್ಗಸೂಚಿಗಳನ್ನು ಜಾರಿಗೆ ಬರಲು ಯೋಜಿಸಲಾಗಿದೆ. ಕರಡು ಮಾನದಂಡಗಳ ಪ್ರಕಾರ, ಸಾಲ ಖಾತೆಗಳನ್ನು ಪ್ರಮಾಣಿತ ಎಂದು ವರ್ಗೀಕರಿಸಿ, ಪ್ರಕೃತಿ ವಿಕೋಪ ಸಂಭವಿಸಿದ…
ಗುರುವಾಯನಕೆರೆ: ಇಲ್ಲಿನ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 21ನೇ ನೂತನ ಶಾಖೆ ವಾಮಂಜೂರಿನಲ್ಲಿ ಆರಂಭವಾಗಲಿದ್ದು ಫೆಬ್ರವರಿ 5ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ವಾಮಂಜೂರಿನ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ನ ಒಂದನೇ ಮಹಡಿಯಲ್ಲಿ ಫೆ.5ರ ಗುರುವಾರ ಬೆಳಗ್ಗೆ 10.30ಕ್ಕೆ ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಲಿದ್ದಾರೆ. ವಾಮಂಜೂರು ಚರ್ಚ್ನ ಧರ್ಮಗುರುಗಳಾದ ರೆವರೆಂಡ್ ಫಾದರ್ ಜೇಮ್ಸ್ ಡಿಸೋಜ, ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೆಡ್ಡೆ ಮಂಜುನಾಥ ಭಂಡಾರಿ, ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎಸ್.ಶಿವರಾಮ ಮಲ್ಲಿ, ಗುರುಪುರ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಶೆಡ್ಡೆ, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಓಂಪ್ರಕಾಶ್ ಶೆಟ್ಟಿ ವಾಮಂಜೂರು, ನಿಕಟಪೂರ್ವ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಜೆ.ಕರ್ಕೇರ ಸಾನದ…
