Author: admin

162 ಕೋಟಿ ರೂ. ವ್ಯವಹಾರ, 63 ಲಕ್ಷ ರೂ. ಲಾಭ, ಶೇ.10 ಡಿವಿಡೆಂಡ್‌ ಘೋಷಣೆ ಸುಳ್ಯ: ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಿಷ್ಣು ಭಟ್ ಮೋಲೆತೋಟ ಅವರ ಅಧ್ಯಕ್ಷತೆಯಲ್ಲಿ ಶ್ರೀ ಗೋಪಾಲಕೃಷ್ಣ ಗೌಡ ಕೇಪಳಕಜಿ ಸಭಾಭವನದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂತೋಷ್ ಎನ್. ಸ್ವಾಗತಿಸಿ, ವರದಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೋಲೆತೋಟ ಮಾತನಾಡಿ, ಈ ಬಾರಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 162.31 ಕೋಟಿ ರೂ. ವ್ಯವಹಾರ ನಡೆಸಿದೆ. 63,40,332 ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್‌ ನೀಡಲಾಗುತ್ತಿದೆ ಎಂದು ಘೋಷಿಸಿದರು. https://chat.whatsapp.com/FCEnlTkAKCC0MGPhXtX4i4 ಸಂಘದ ಉಪಾಧ್ಯಕ್ಷ ದೇವಿಪ್ರಸಾದ್‌ ಸುಳ್ಳಿ, ನಿರ್ದೇಶಕರಾದ ಜಯಪ್ರಸಾದ್‌ ಸುಳ್ಳಿ, ಶುಭಕರ ನಾಯಕ್‌ ಬೊಳ್ಳಾಜೆ, ಸತ್ಯೇಶ್‌ ಕುಮಾರ್‌ ಚಂದ್ರೋಡಿ, ಉಮೇಶ್‌ ಪ್ರಭು ಕೆ., ಹರೀಶ್‌ ಸುಳ್ಳಿ, ಹರಿಪ್ರಸಾದ್‌ ಬಿ.ವಿ., ಕುಲದೀಪ್‌ ಎಚ್‌., ಚಂದ್ರಶೇಖರ್‌ ನಾಯಕ್‌, ಇಂದಿರಾ ಕೆ., ಸಂಧ್ಯಾ ಕೆ.ಎಲ್‌,…

Read More

ರೋಟರಿ ಕ್ಲಬ್‌ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ದೇವದಾಸ್ ರೈ ಸಲಹೆ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಆಶ್ರಯದಲ್ಲಿ ರೋಟರಿ ಕ್ಲಬ್‌ ಮಂಗಳೂರು ಸೆಂಟ್ರಲ್‌ ಸಹಯೋಗದಲ್ಲಿ ಮಂಗಳವಾರ ವಿಶ್ವಕರ್ಮ ಬ್ಯಾಂಕಿನ ಬಿ.ಹರಿಶ್ಚಂದ್ರ ಆಚಾರ್ಯ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಉಚಿತ ಥೈರಾಯ್ಡ್‌ ಮತ್ತು ಹಿಮೋಗ್ಲೋಬಿನ್‌ ಪರೀಕ್ಷಾ ಶಿಬಿರ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ರೋಟರಿ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ದೇವದಾಸ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರೀಕ್ಷೆ ಮಾಡದೇ ಯಾವುದೇ ರೋಗವನ್ನು ಪತ್ತೆ ಮಾಡುವುದು ಸಾಧ್ಯವಿಲ್ಲ. ರೋಟರಿ ಕ್ಲಬ್‌ನಿಂದ ಸುಮಾರು 50,000 ಜನರ ಮಧುಮೇಹ ಪರೀಕ್ಷೆ ಮಾಡಲಾಗಿದೆ. ಇದರಿಂದ ಬಹಳಷ್ಟು ಜನರಿಗೆ ಉಪಯೋಗವಾಗಿದೆ. ಥೈರಾಯ್ಡ್‌ ರೋಗ ಪತ್ತೆಗಾಗಿ ಟಿಸಿಎಚ್‌ ಪರೀಕ್ಷೆ ಮಾಡಲಾಗುತ್ತಿದೆ. ಈ ಪರೀಕ್ಷೆಯ ವರದಿಯನ್ನು ಫ್ಯಾಮಿಲಿ ಡಾಕ್ಟರ್ ಬಳಿ ತೋರಿಸಿದರೆ ಏನಾದರೂ ಸಮಸ್ಯೆ ಇದ್ದರೆ ಆ ಬಗ್ಗೆ ವೈದ್ಯರು ಸಲಹೆ ನೀಡುತ್ತಾರೆ. ಇಂದು ಇಲ್ಲಿ ಆಯೋಜಿಸಿರುವ ಶಿಬಿರದ ಸದುಪಯೋಗವನ್ನು ವಿಶ್ವಕರ್ಮ ಬ್ಯಾಂಕಿನ ಸಿಬ್ಬಂದಿ, ಜನಸಾಮಾನ್ಯರು ಪಡೆದುಕೊಳ್ಳಬೇಕು. ಈ ಶಿಬಿರ ಆಯೋಜನೆಗೆ ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದಗಳು…

Read More

ಮಂಗಳೂರು: ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿ ಲಿಮಿಟೆಡ್‌ನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಕುಂಬ್ಳೇಕರ್‌, ಉಪಾಧ್ಯಕ್ಷರಾಗಿ ಗಣೇಶ್ ಕುಮಾರ್ ಪರಕಟ್ಟ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹು-ರಾಜ್ಯ ಸಹಕಾರಿ ಸಂಘವಾಗಿರುವ ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿ ಸಂಘವು 18.03.2004ರಂದು ನೋಂದಾಯಿಸಲ್ಪಟ್ಟು ಗೋವಾ, ಕೇರಳ ಮತ್ತು ಕರ್ನಾಟಕದಲ್ಲಿ ಸದಸ್ಯತ್ವ ಹೊಂದಿದೆ. ಮೇ 17ರಂದು ನಿರ್ದೇಶಕರ ಮಂಡಳಿಗೆ ಚುನಾವಣೆ ನಡೆದಿದ್ದು, ಮೇ 25ರಂದು ಪದಾಧಿಕಾರಿಗಳಿಗೆ ಚುನಾವಣೆ ನಡೆಯಿತು. 2026-2031ರ ಸಾಲಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರು: ಮೋಹನ್ ಕುಮಾರ್ ಕುಂಬ್ಳೇಕರ್, ಉಪಾಧ್ಯಕ್ಷರು: ಗಣೇಶ್ ಕುಮಾರ್ ಪರಕಟ್ಟ, ನಿರ್ದೇಶಕರು: ಗಣೇಶ್ ಶೆಣೈ, ನರಸಿಂಹ ಕಾಮತ್, ಭಾರತಿ ಜಿ.ಭಟ್, ಸೋಮಪ್ಪ ನಾಯ್ಕ್ ಎ, ಕೈಲಾಸಮಣಿ ಯು, ಸತ್ಯನ್ ಪಿ, ನಾರಾಯಣನ್ ಪಿ.ವಿ, ಸ್ವಾತಿ ಎ ಪ್ರಭು, ಸುಭಾಷ್ ಎಸ್ ಹಳರಂಕರ್, ಸುರೇಶ್ ಬಿ ಬೋರ್ಕರ್, ಸಾಗರ್ ಎಂ ಭಟ್, ಸುರೇಶ್ ಡಿ ಡಿಚೋಲ್ಕರ್, ಜಾನು ಜಿ ಗೌಡೆ. ಸಂಸ್ಥೆಯ…

Read More

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ಹಳೆಯಂಗಡಿ: ಪಂಜದಗುತ್ತು ಶಾಂತಾರಾಮ ಶೆಟ್ಟಿಯವರು ಶಿಕ್ಷಣ ಪ್ರೇಮಿಯಾಗಿದ್ದು, ಇದರ ಕಾರಣದಿಂದಲೇ ಗ್ರಾಮೀಣ ಪ್ರದೇಶದ ಪಂಜ ಎಂಬಲ್ಲಿ ಪ್ರೌಢಶಾಲೆ ಪ್ರಾರಂಭಗೊಳ್ಳಲು ಕಾರಣವಾಯಿತು. ತನ್ನ ಜೀವಿತದುದ್ದಕ್ಕೂ ಶಿಕ್ಷಣ ವಂಚಿತರ ಬಗ್ಗೆ ಚಿಂತನೆ ಮಾಡಿದ ಅಪರೂಪದ ವ್ಯಕ್ತಿತ್ವದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಅವರನ್ನು ಸ್ಮರಣೆ ಮಾಡುವುದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆದ್ಯ ಕರ್ತವ್ಯವೆಂದು ಎನಿಸುತ್ತಾ ಸೊಸೈಟಿಯ ಪ್ರೇರಣಾಶಕ್ತಿಯಾಗಿದ್ದ ಇವರ ಹೆಸರಿನಲ್ಲಿ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಇದರ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲು ಸಂತೋಷವಾಗುತ್ತದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾರ್ಡ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹಳೆಯಂಗಡಿ ಇದರ ವತಿಯಿಂದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ದಿ. ಶಾಂತಾರಾಮ ಶೆಟ್ಟಿಯವರ ಮಗಳು ಸರಿತಾ ಶೆಟ್ಟಿ…

Read More

ಎಂ.ಸಿ.ಸಿ ಬ್ಯಾಂಕ್ “ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್” ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜ ಸಲಹೆ ಉಡುಪಿ: ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಗಳ ಬಳಕೆ ಇಂದು ಮಹಳ ಮಹತ್ವಪೂರ್ಣವಾದುದಾಗಿದ್ದು, ಅವುಗಳು ಮಾನವ ಕಲ್ಯಾಣಕ್ಕಾಗಿ ಬಳಸಲ್ಪಡಬೇಕು. “ಸ್ವಾರ್ಥವಲ್ಲ ಸೇವೆ”, “ವಹಿವಾಟಲ್ಲ ವಿಶ್ವಾಸ”, “ಲಾಭವಲ್ಲ ವ್ಯಕ್ತಿ” ಎಂಬ ಮೌಲ್ಯಗಳನ್ನು ಸಂಸ್ಥೆಗಳು ಅಳವಡಿಸಿಕೊಳ್ಳಬೇಕು. ಈ ತತ್ವಗಳನ್ನು ನಿಷ್ಠೆಯಿಂದ ಅನುಸರಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಎರ್ಮಾಳಿನ ಪೆನಿನ್ಸುಲಾ ಡೆಲ್‌ಮಾರ್‌ನಲ್ಲಿ ಹಮ್ಮಿಕೊಂಡ “ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮದಲ್ಲಿ ಅವರು ಉಡುಪಿ ಧರ್ಮಪ್ರಾಂತ್ಯ ಮತ್ತು ಸಮಾಜದ ಕುರಿತ ತಮ್ಮ ಕನಸುಗಳು ಹಾಗೂ ಆಶಯಗಳನ್ನು ಹಂಚಿಕೊಂಡರು. ಉಡುಪಿಯಲ್ಲಿ ಬಿಷಪ್ ಕಾರ್ಯಾಲಯದ ಸ್ಥಾಪನೆ, ಭವಿಷ್ಯದ ಆಧ್ಯಾತ್ಮಿಕ ನಾಯಕರನ್ನು ರೂಪಿಸುವುದು, ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಹಾಗೂ ಬಡವರು ಮತ್ತು ಹಿಂದುಳಿದವರಿಗೆ ಸೇವೆ ಸಲ್ಲಿಸುವ ಆಸ್ಪತ್ರೆ ನಿರ್ಮಾಣದ ಕನಸು ಇರುವುದಾಗಿ ತಿಳಿಸಿದ…

Read More

ಕಾರ್ಕಳ: ಬೆಳ್ಳಿಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಶ್ರೀ ದುರ್ಗಾಪಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ರೂ. 52.10ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ರಾವ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಂಘವು 2025-26ನೇ ಆರ್ಥಿಕ ಸಾಲಿನಲ್ಲಿ 218.26 ಕೋಟಿ ವ್ಯವಹಾರ ನಡೆಸಿ, ವಾರ್ಷಿಕ ಅಂತ್ಯಕ್ಕೆ 36.69 ಲಕ್ಷ ಪಾಲು ಬಂಡವಾಳ ಹೊಂದಿದೆ. 48.10 ಕೋಟಿ ಠೇವಣಿ ಸಂಗ್ರಹವಾಗಿದ್ದು, 38.48 ಕೋಟಿ ಸಾಲ ವಿತರಿಸಿದ್ದು, 54.09 ಕೋಟಿ ದುಡಿಮೆ ಬಂಡವಾಳ ಹೊಂದಿದೆ. ಬೆಳೆಯುತ್ತಿರುವ ಜೋಡುರಸ್ತೆಯ ಕೇಂದ್ರಭಾಗದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಚೇರಿ ಹಾಗೂ ಕೆಳ ಅಂತಸ್ತಿನಲ್ಲಿ ಮುಖ್ಯ ಶಾಖೆಯನ್ನು ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘವು ಹೆಬ್ರಿ, ಮುನಿಯಾಲು, ಬಜಗೋಳಿ, ಬೆಳ್ಮಣ್, ಬೈಲೂರು, ಸಾಣೂರು, ಇನ್ನಾಗಳಲ್ಲಿ ಶಾಖೆಗಳನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಮೂಲಕ ಸಹಕಾರಿಗಳ ವಿಶ್ವಾಸಕ್ಕೆ ಪಾತ್ರವಾಗಿ ಲಾಭಾಂಶ ಹಾಗೂ ಠೇವಣಿ ವೃದ್ಧಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರ್ಥಿಕ ಪ್ರಗತಿ: 2024-2025ನೇ ಸಾಲಿನಲ್ಲಿ 175.33 ಕೋಟಿ ರೂ. ವಾರ್ಷಿಕ…

Read More

ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳೂರು: ನಗರದ ಪ್ರತಿಷ್ಠಿತ ಸೌಹಾರ್ದ ಸಹಕಾರಿ ಸಂಘ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಮಂಗಳೂರು ತಾಲೂಕು ವ್ಯಾಪ್ತಿಯ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳಲ್ಲಿ 2026ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಿಸುವ ಮೂಲಕ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದೆ. https://chat.whatsapp.com/FCEnlTkAKCC0MGPhXtX4i4 ಜೂನ್‌ 7ರಂದು ಭಾನುವಾರ ಭಾನುವಾರ ಬೆಳಗ್ಗೆ 10.30 ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್, ಶ್ರೀ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನದ ಶಿಲೆಶಿಲೆ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಗಳು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಮಂಗಳೂರು ಉತ್ತರ…

Read More

ಬಡ ಕುಟುಂಬಕ್ಕೆ ಮನೆ ಕೊಡುಗೆ ಅದ್ಭುತ ಮಾದರಿ ಕಾರ್ಯ; ಶಶಿಕುಮಾರ್‌ ರೈ ಬಾಲ್ಯೊಟ್ಟು ಶ್ಲಾಘನೆ ಕಾಣಿಯೂರು: ಸಮಾಜಮುಖ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ವಿವಿಧ ಯೋಜನೆಗಳನ್ನು ಹಾಕಿಕೊಂಡು ಎಲ್ಲಾ ರೈತಾಪಿ ವರ್ಗದವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿರುವಂತಹ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಒಂದು ಮಾದರಿ ಸಂಘವಾಗಿ ಹೊರಹೊಮ್ಮಿದೆ. ಯಾವುದೇ ರೀತಿಯಿಂದಲೂ ಸರಕಾರಿ ಯೋಜನೆಯಡಿಯಲ್ಲಿ ಸವಲತ್ತುಗಳನ್ನು ನೀಡುವುದಕ್ಕೆ ಸಾಧ್ಯವಾಗದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವ ಸಂಘದ ಕೆಲಸ ಕಾರ್ಯ ಅದ್ಭುತವಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. https://chat.whatsapp.com/FCEnlTkAKCC0MGPhXtX4i4 ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವದ ಸವಿನೆನಪಿಗೆ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ ಮತ್ತು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ (ನಿರ್ವಹಣೆ ಪ್ರಸಾದ್ ನೇತ್ರಾಲಯ), ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ವತಿಯಿಂದ ಉಚಿತ…

Read More

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳ ಪೈಕಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸರಕಾರದಿಂದ ಅತಿ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಿದ ಕೀರ್ತಿ ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ ಅವರಿಗೆ ಸಲ್ಲುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಳೆನೇರೆಂಕಿ ಶಾಖಾ ಕಛೇರಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಮಾದರಿಯಾಗಿದೆ. ಹಲವಾರು ವರ್ಷಗಳಿಂದ ನಿರಂತರವಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪಡೆಯುತ್ತ ಬಂದಿದೆ. ಪುತ್ತೂರು ತಾಲೂಕಿನಲ್ಲಿ ಪ್ರಥಮವಾಗಿ ರಾಜ್ಯ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿ ಪಡೆದ ಸಂಘ ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘ. ಈ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಗ್ರಾಹಕರಾದ ಪುಟ್ಟಸ್ವಾಮಿ ಎಚ್., ಶ್ರೀಧರ, ರಾಜೇಶ್, ಶಶಿಪ್ರಭಾ ಹಾಗೂ ನಾರಾಯಣ ಪೂಜಾರಿ ದೀಪ ಪ್ರಜ್ವಲನೆ ಮಾಡಿದರು. ಪುಟ್ಟಸ್ವಾಮಿ ಎಚ್. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀರುಮಾರ್ಗ ಪರಿಸರದಲ್ಲಿರುವ ಉತ್ತಮ ಸೊಸೈಟಿಯಾಗಿದ್ದು, ಇಲ್ಲಿನ ಜನರ ಅಚ್ಚುಮೆಚ್ಚಿನ ಸೊಸೈಟಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಶಿಪ್ರಭಾ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸೇವಾ ಮನೋಭಾವದ ಸಿಬ್ಬಂದಿಯಿಂದ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಎರಡು ಮಾತಿಲ್ಲ ಎಂದು ಶ್ಲಾಘಿಸಿದರು. ಸದಸ್ಯರಾದ ಪ್ರಮೀಳಾ ಸದಾಶಿವ ಶೆಟ್ಟಿ ಮಾತನಾಡಿ ಸಂಘದ ಶಾಖೆಗಳಲ್ಲಿ ಸಿಬ್ಬಂದಿಗಳ ಸಹಕಾರವು ಅತ್ಯುತ್ತಮವಾಗಿದ್ದು ದೈನಂದಿನ ವ್ಯವಹಾರಕ್ಕೆ ತುಂಬಾ ಉಪಯುಕ್ತ ಸಂಘವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ…

Read More