Author: admin
ಮಣಿಪಾಲ: ಸಾರಸ್ವತ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಮಣಿಪಾಲ, ಕೆ.ಎಂ.ಸಿ ಆಸ್ಪತ್ರೆಯ ಸಹಯೋಗ ಮತ್ತು ಮಾಹೆ-ಮಣಿಪಾಲ ಇವರ ಸಹಕಾರದೊಂದಿಗೆ ಅತ್ಯುನ್ನತ ಸೌಲಭ್ಯಗಳೊಂದಿಗೆ ರೂಪಿಸಲಾದ ಆಕರ್ಷಕ ಯೋಜನೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ನೋಂದಣಿ ಪಾರಂಭಗೊಂಡಿದ್ದು ಜನವರಿ 31 ನೋಂದಣಿ ಕೊನೆಯ ದಿನವಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ಸೌಲಭ್ಯವು ಮಣಿಪಾಲ ಸಮೂಹದ ಆಸ್ಪತ್ರೆಗಳಲ್ಲಿ ಮಾತ್ರ ಈ ಯೋಜನೆ ಸೀಮಿತವಾಗಿದ್ದು, ಈ ಸುರಕ್ಷಾ ಕಾರ್ಡ್ನ ಸೌಲಭ್ಯ ಪಡೆಯುವ ಅವಧಿ 15 ಫೆಬ್ರವರಿ 2026ರಿಂದ ಪ್ರಾರಂಭವಾಗಲಿದೆ. ಈ ಹಿಂದೆ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ (ಕೊಂಕಣಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್) ಹೊಂದಿದ್ದವರು ಹಾಗೂ ಹೊಸತಾಗಿ ಕಾರ್ಡ್ ಮಾಡಲಿಚ್ಚಿಸುವ ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಕುಟುಂಬದ ರೇಷನ್ ಕಾರ್ಡ್ ಪ್ರತಿಯೊಂದಿಗೆ ಸಾರಸ್ವತ ಸೌಹಾರ್ದ ಸಹಕಾರಿ ಸಂಘಕ್ಕೆ ಬಂದು ನೋಂದಣಿ ಮಾಡಬಹುದು. ಈ ಆರೋಗ್ಯ ಸುರಕ್ಷಾ ಯೋಜನೆಯು ಮಣಿಪಾಲದ ಸಮೂಹ ಸಂಸ್ಥೆಯ ಆಸ್ಪತ್ರೆಗಳಾದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇಲ್ಲಿ…
ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ
ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ತೋಟಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಸಾಧಾರಣ 200ಕ್ಕೂ ಅಧಿಕ ನಿವಾಸಿಗಳು ಪ್ರಯೋಜನ ಪಡೆದುಕೊಂಡರು. ಅಗತ್ಯ ಇದ್ದವರಿಗೆ ಉಚಿತ ಕನ್ನಡಕ ವಿತರಣೆ ಮತ್ತು ಔಷಧ ವಿತರಣೆ ಮಾಡಲಾಯಿತು. ಕೆ.ಎಸ್ ಹೆಗಡೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಬಿ ಶೆಟ್ಟಿ ದಂತ ಆಸ್ಪತ್ರೆಗಳ ನುರಿತ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿಕೊಟ್ಟರು. ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ರವರು ಕಾರ್ಯಕ್ರಮದ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ ಪೈ ಮತ್ತು ಇತರ ನಿರ್ದೇಶಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಸಂಜಯ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಸಂಸ್ಥೆಯ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು. ಉಮೇಶ ಪಂಬದ (ಜಾನಪದ…
ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ತೋಟಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. https://chat.whatsapp.com/FCEnlTkAKCC0MGPhXtX4i4 ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಸಾಧಾರಣ 200ಕ್ಕೂ ಅಧಿಕ ನಿವಾಸಿಗಳು ಪ್ರಯೋಜನ ಪಡೆದುಕೊಂಡರು. ಅಗತ್ಯ ಇದ್ದವರಿಗೆ ಉಚಿತ ಕನ್ನಡಕ ವಿತರಣೆ ಮತ್ತು ಔಷಧ ವಿತರಣೆ ಮಾಡಲಾಯಿತು. ಕೆ.ಎಸ್ ಹೆಗಡೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಬಿ ಶೆಟ್ಟಿ ದಂತ ಆಸ್ಪತ್ರೆಗಳ ನುರಿತ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿಕೊಟ್ಟರು. ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ರವರು ಕಾರ್ಯಕ್ರಮದ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ ಪೈ ಮತ್ತು ಇತರ ನಿರ್ದೇಶಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಸಂಜಯ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಸಂಸ್ಥೆಯ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು. ಉಮೇಶ ಪಂಬದ…
ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಜನವರಿ 25ರಂದು ನಿಗದಿಯಾಗಿದೆ. https://chat.whatsapp.com/FCEnlTkAKCC0MGPhXtX4i4 ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಚುನಾವಣೆ ನಡೆಯಲಿದ್ದು ತ್ರಿವೇಣಿ ರಾವ್ ಚುನಾವಣಾಧಿಕಾರಿಯಾಗಿದ್ದಾರೆ. 2001ರಲ್ಲಿ ಸ್ಥಾಪನೆಯಾಗಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಸದ್ಯ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಇದುವರೆಗೆ ಎಸ್.ಆರ್ ಸತೀಶ್ಚಂದ್ರ ಅವರು ಸಂಸ್ಥೆಯ ಅಧ್ಯಕ್ಷರಾಗಿದ್ದು ಇದೇ ಮೊದಲ ಬಾರಿ ಇಲ್ಲಿ ಚುನಾವಣೆ ನಿಗದಿಯಾಗಿದೆ. ಒಟ್ಟು 19 ಮಂದಿ ಕಣದಲ್ಲಿದ್ದು, ಈ ಪೈಕಿ ಉಮೇಶ್ ಪ್ರಭು ಕುಂಟಿಹಿತ್ಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್.ಆರ್ ಸತೀಶ್ಚಂದ್ರ, ಹರೀಶ್ ಬೋರ್ಕರ್, ರಾಜಗೋಪಾಲ ಬಾಳೆಗುಳಿ, ರವೀಶ ಪೊಸವಳಿಕೆ, ಬಿ.ವಸಂತಶಂಕರ್, ವೇದವ್ಯಾಸ ಕಟ್ಟೆ, ಸಂಜೀವ ನಾಯಕ್ ಸುಳ್ಯ, ಚಂದ್ರಶೇಖರ್ ಮುಂಡುಗಾರು, ದಯಾನಂದ ನಾಯಕ್ ಕುಂಟಿಕಾನ, ದೇವಕಿ ಎಚ್.ನಾಯಕ್, ರಂಜಿತಾ ಆರ್ ಪ್ರಭು ಗೋಳಿತ್ತಡಿ,…
ರಾಮನಗರದಲ್ಲಿ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆಯಲ್ಲಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ರಾಮನಗರ ತಾಲೂಕಿನ ಸಹಕಾರ ಭಾರತಿಯ ನೂತನ ತಾಲೂಕು ಪದಾಧಿಕಾರಿಗಳ ಘೋಷಣೆ ಮತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸೋಮವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ರಾಜಕೀಯರಹಿತ, ಸರಕಾರೇತರ ಸ್ವಯಂಸೇವಾ ಸಂಸ್ಥೆಯಾಗಿರುವ ಸಹಕಾರ ಭಾರತಿ ಕಳೆದ 46 ವರ್ಷಗಳಲ್ಲಿ ದೇಶದ 28 ರಾಜ್ಯಗಳ 650 ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಕಾರವಿಲ್ಲದೆ ಸಹಕಾರವಿಲ್ಲ ಮತ್ತು ಸಹಕಾರವಿಲ್ಲದೆ ಉದ್ಧಾರವಿಲ್ಲ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರ ಭಾರತಿಯು ನಿರಂತರವಾಗಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಂಘಟನಾತ್ಮಕವಾಗಿ, ರಚನಾತ್ಮಕವಾಗಿ, ಆಂದೋಲನಾತ್ಮಕವಾಗಿ ಮತ್ತು ಪ್ರಾತಿನಿಧ್ಯಾತ್ಮಕವಾಗಿ ನಾಲ್ಕು ಆಯಾಮಗಳಲ್ಲಿ ಸೇವೆ, ಸಂಪರ್ಕ ಮತ್ತು ಸಮರ್ಪಣಾ ಭಾವದಿಂದ ಕಾರ್ಯತತ್ಪರವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಮನಗರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವೈ.ಎಚ್ ಮಂಜು ಮಾತನಾಡಿ, ಕೇಂದ್ರ ಸರಕಾರ ಜಾರಿಗೆ…
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆಇಲ್ಲಿನ ವೈದ್ಯರ ತಂಡದಿಂದ ಮಡಂತ್ಯಾರು ಮುಖ್ಯರಸ್ತೆಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ಕಲಾ (ಆಶೀರ್ವಾದ್) ಸಭಾಂಗಣದಲ್ಲಿ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಭಾನುವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಮ್ಯಾಕ್ಸಿಮ್ ಆಲ್ಬುಕರ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು. ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಸಾಯಿಸುಮ ಎಂ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ…
ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಮೈಸೂರು ಕುವೆಂಪುನಗರದಲ್ಲಿರುವ ಪ್ರಮತಿ ಹಿಲ್ ವ್ಯೂ ಅಕಾಡೆಮಿ ಪಿ. ಯು ಕಾಲೇಜಿನಲ್ಲಿ ಭಾನುವಾರ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಮಾಜಿ ಅಧ್ಯಕ್ಷರೂ, ಶಿಕ್ಷಣ ಸಲಹಾ ಸಮಿತಿಯ ಸದಸ್ಯರೂ ಆಗಿರುವ ಹೆಚ್.ವಿ. ರಾಜೀವ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕರಾದ ಬಿ.ಮಹದೇವಸ್ವಾಮಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಎಸ್. ಆರ್. ನಾರಾಯಣ ರಾವ್ ವಹಿಸಿದ್ದರು. ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ಆರ್. ಎಸ್. ಸುರೇಶ್ ಹಾಗೂ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಭಗೀರಥ ಉಪಸ್ಥಿತರಿದ್ದರು. ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸುಮಾರು ಹತ್ತು ವಿವಿಧ ಆಟೋಟ…
18ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿಕೆ ಮಂಗಳೂರು: ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರವಾಗುವುದಕ್ಕೆ ಶ್ರಮದಾನವು ಸಮಾಜ ಜಾಗೃತಿಯ ಮೂಲ ಸಾಧನವಾಗಿದೆ. ನಿರಂತರ ಮಾಡುವ ಸ್ವಚ್ಛತೆಯ ಶ್ರಮದಾನವು ನಾಗರಿಕ ಸಮಾಜದ ಮಧ್ಯೆ ಜಾಗೃತಿ ಮೂಡಿಸುತ್ತದೆ. ಇದರಿಂದ ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆ ಸ್ವಚ್ಛತಾ ಹೀ ಸೇವಾ ಧ್ಯೇಯದೊಂದಿಗೆ ಆಯೋಜಿಸಿದ 18ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕಾರ್ಕಳ ತಾಲೂಕು ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಎಂ.ರಮೇಶ್ ಆಚಾರ್ಯ, ಪುರಸಭೆ ಸದಸ್ಯರಾದ ನಳಿನಿ ವಿಜೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾರ್ಕಳದ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಹಾಗೂ ಕರಿಯಕಲ್ಲು ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ…
ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಜನವರಿ 18ರಂದು ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಸೌಹಾರ್ದ ರಜತ ಸಂಭ್ರಮದ ಅಂಗವಾಗಿ ದೇಶೀಯ ಹಾಗೂ ತಮಾಷೆಯ ಆಟೋಟ ಸ್ಪರ್ಧೆ, ಗೀತಗಾಯನ ಸ್ಪರ್ಧೆ, ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಮೈಸೂರು ಕುವೆಂಪುನಗರದ ಉದಯರವಿ ರಸ್ತೆಯ ಪ್ರಮತಿ ಹಿಲ್ವ್ಯೂ ಅಕಾಡೆಮಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರಿ ಧುರೀಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ಸಲಹಾ ಸಮಿತಿಯ ಸದಸ್ಯರಾದ ಹೆಚ್.ವಿ ರಾಜೀವ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತತಿಪರ ನಿರ್ದೇಶಕ ಬಿ.ಮಹದೇವಸ್ವಾಮಿ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್.ಆರ್ ನಾರಾಯಣರಾವ್, ಉಪಾಧ್ಯಕ್ಷ ಇ.ಕೆ ರಾಜನ್ ಬಾಬು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆ ವತಿಯಿಂದ ಜನವರಿ 18ರಂದು ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಜನವರಿ 18ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ಕಲಾ (ಆಶೀರ್ವಾದ್) ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್, ಮುಖ್ಯರಸ್ತೆ, ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಶಿಬಿರ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿಂದ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಶುಚಿಗೊಳಿಸುವುದು, ರೋಗಗ್ರಸ್ತ ಹಲ್ಲುಗಳನ್ನು ಕೀಳುವುದು ಹಾಗೂ ಇತರ…
