Author: admin

ಕಾರ್ಕಳ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗದಲ್ಲಿ ಬೋಳ ಸದಾಶಿವ ಶೆಟ್ಟಿ ಅಭಿಪ್ರಾಯ ಕಾರ್ಕಳ: ಕಳೆದ 46 ವರ್ಷಗಳಿಂದ ದೇಶಾದ್ಯಂತ ಎಲ್ಲಾ ರಾಜ್ಯಗಳ ಸುಮಾರು 700 ಜಿಲ್ಲೆಗಳಲ್ಲಿ ಸಂಘಟನಾ ಜಾಲವನ್ನು ವಿಸ್ತರಿಸಿರುವ ಸಹಕಾರ ಭಾರತಿ, ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖವಾಗಿದೆ ಎಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾದ ಬೋಳ ಸದಾಶಿವ ಶೆಟ್ಟಿ ಹೇಳಿದರು. https://chat.whatsapp.com/Ge11n7QCiMj5QyPvCc0H19 ಕಾರ್ಕಳ ಜೋಡುರಸ್ತೆಯ ರಾಜಾಪುರ ಸಾರಸ್ವತ ಸೊಸೈಟಿಯ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಕಳ ತಾಲೂಕು ಅಧ್ಯಕ್ಷರಾದ ನೀರೆ ರವೀಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು, ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀಶ್ ನಾಯಕ್ ಉಪಸ್ಥಿತರಿದ್ದರು. ಸಹಕಾರ ಭಾರತಿ ಪರಿಚಯ, ಸಹಕಾರಿ ಕಾಯ್ದೆಗಳು ಮತ್ತು ನಿರ್ದೇಶಕರ ಜವಾಬ್ದಾರಿ” ಈ ವಿಷಯದ ಬಗ್ಗೆ ಸಹಕಾರ ಭಾರತಿ ರಾಜ್ಯ ಪ್ರಧಾನ…

Read More

ಪ್ರತಿಪಕ್ಷದ ಶಾಸಕ ಸುನೀಲ್‌ ಕುಮಾರ್‌ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಉತ್ತರ ಬೆಳಗಾವಿ: ರಾಜ್ಯದಲಿರುವ ಹಾಲು ಉತ್ಪಾದಕ ಸಹಕಾರ ಸಂಘಗಳೂ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿರುವ 47,736 ಸಹಕಾರ ಸಂಘಗಳ ಪೈಕಿ 14,798 ಸಹಕಾರ ಸಂಘಗಳು ನಷ್ಟದಲ್ಲಿವೆ! ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ಈ ವಿವರವನ್ನು ಸೋಮವಾರ ವಿಧಾನಸಭೆಯಲ್ಲಿ ಲಿಖಿತ ಉತ್ತರದ ಮೂಲಕ ನೀಡಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ರಾಜ್ಯದಲ್ಲಿ 47,736 ಸಹಕಾರ ಸಂಘಗಳಿದ್ದು ಇವುಗಳಲ್ಲಿ 28,145 ಸಂಸ್ಥೆಗಳು ಮಾತ್ರ ಲಾಭದಲ್ಲಿ ನಡೆಯುತ್ತಿವೆ. ಸಹಕಾರ ಕ್ಷೇತ್ರದ ಆಡಳಿತಾತ್ಮಕ ವೆಚ್ಚಗಳಿಂದಾಗಿ ಸಂಘಗಳ ಲಾಭಾಂಶ ಕಡಿಮೆಯಾಗಿವೆ ಎಂದು ಸರ್ಕಾರವೇ ಸದನಕ್ಕೆ ತಿಳಿಸಿದೆ. ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಅತಿಹೆಚ್ಚು ಸಹಕಾರ ಸಂಘಗಳು ನಷ್ಟದಲಿವೆ ಎಂದೂ ಸರ್ಕಾರ ಮಾಹಿತಿ ನೀಡಿದೆ. ಬಿಜೆಪಿ ಶಾಸಕ ಕಾರ್ಕಳದ ಸುನೀಲ್‌ ಕುಮಾರ್‌ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ರಾಜ್ಯದ ಮುಖ್ಯಮಂತ್ರಿಯೂ ಆಗಿರುವ ಸಹಕಾರ ಸಚಿವರಾದ ಸಿದ್ದರಾಮಯ್ಯ ಈ ಮಾಹಿತಿ ಒದಗಿಸಿದ್ದು ಬೆಳಗಾವಿಯಲ್ಲಿ 2661 ಸಹಕಾರ ಸಂಘಗಳು ನಷ್ಟದಲ್ಲಿವೆ. ಕಲಬುರಗಿಯಲ್ಲಿ ಲಾಭದಲ್ಲಿರುವ ಸಹಕಾರ ಸಂಘಗಳ ಸಂಖ್ಯೆಗಿಂತ…

Read More

ಮುಂದಿನ ವರ್ಷದ ಜೂನ್‌ 15ಕ್ಕೆ ಅಂತಿಮ ವಿಚಾರಣೆಗೆ ದಿನ ನಿಗದಿ ಮುಂಬೈ: 2025ರಲ್ಲಿ ತಿದ್ದುಪಡಿ ಮಾಡಲಾದ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಅಡಿಯಲ್ಲಿ ಪರಿಷ್ಕೃತ ಅಧಿಕಾರಾವಧಿಯ ಮಾನದಂಡಗಳ ಅನುಷ್ಠಾನವನ್ನು ಪ್ರಶ್ನಿಸಿ ಸಹಕಾರಿ ಬ್ಯಾಂಕುಗಳು ಮತ್ತು ಅವುಗಳ ನಿರ್ದೇಶಕರಿಗೆ ಮಧ್ಯಂತರ ಪರಿಹಾರ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಮುಂಬರುವ ಸಹಕಾರಿ ಬ್ಯಾಂಕ್ ಚುನಾವಣೆಗಳಲ್ಲಿ ನಿರ್ದೇಶಕರ ಅರ್ಹತೆಯ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊರಡಿಸಿದ ನಿರ್ದೇಶನಗಳನ್ನು ಪ್ರಶ್ನಿಸಿ ಕೊಲ್ಹಾಪುರ ಜಿಲ್ಲಾ ನಗರ ಬ್ಯಾಂಕುಗಳ ಸಹಕಾರ ಸಂಘ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ರಿಟ್ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ.ಎಸ್. ಕಾರ್ಣಿಕ್ ಮತ್ತು ನ್ಯಾಯಮೂರ್ತಿ ಅಜಿತ್ ಬಿ. ಕಡೆತಂಕರ್ ಅವರ ವಿಭಾಗೀಯ ಪೀಠವು ಸೋಮವಾರ ಈ ಆದೇಶವನ್ನು ನೀಡಿದೆ. ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರಿಗೆ ಗರಿಷ್ಠ 10 ವರ್ಷಗಳ ನಿರಂತರ ಅಧಿಕಾರಾವಧಿ ನಿಗದಿಪಡಿಸುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಕಾಯ್ದೆ, 2025 ಅನ್ನು ಆಗಸ್ಟ್ 1, 2025ರಿಂದ ಜಾರಿಗೆ ಬರುವಂತೆ ಹಿಂದಿನಿಂದಲೂ ಅನ್ವಯಿಸಲಾಗುತ್ತಿದೆ ಎಂದು ಅರ್ಜಿದಾರರು…

Read More

ನವದೆಹಲಿ: ಸಹಕಾರಿ ಬ್ಯಾಂಕಿಂಗ್ ವಲಯಕ್ಕೆ ಸಂಬಂಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ನಿರ್ದೇಶಕರ ಅವಧಿಯ ಕುರಿತ ಆದೇಶ/ಸುತ್ತೋಲೆ ಹೊಸ ಚರ್ಚೆ ಹುಟ್ಟುಹಾಕಿದೆ. ಆಗಸ್ಟ್‌ 1ರಿಂದ ಜಾರಿಗೊಂಡಿರುವ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ (ತಿದ್ದುಪಡಿ) 2025, ಸೆಕ್ಷನ್ 10ಎ(2)(ಜಿ)ಯ ಪ್ರಕಾರ ರಾಜ್ಯ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ (ಡಿಸಿಸಿ) ಹಾಗೂ ಪಟ್ಟಣ ಸಹಕಾರ ಬ್ಯಾಂಕ್‌ಗಳ ನಿರ್ದೇಶಕರ ಆಡಳಿತ ಮಂಡಳಿಗೆ ನಿರಂತರ 10 ವರ್ಷ ಮಾತ್ರ ನಿರ್ದೇಶಕರಾಗಲು ಅವಕಾಶ ಮಾಡಿಕೊಡಲಾಗಿದೆ. ಈ ತಿದ್ದುಪಡಿ ಅನ್ವಯ ಆರ್‌ಬಿಐ ಆದೇಶ/ಸುತ್ತೋಲೆ ಹೊರಡಿಸಿದೆ. ತಿದ್ದುಪಡಿ ಕಾಯ್ದೆ ಪ್ರಕಾರ 10 ವರ್ಷ ಅವಧಿ ಮೀರಿ ನಿರ್ದೇಶಕರಾದವರು ಅನರ್ಹರಾಗುತ್ತಾರೆ. ಆರ್‌ಬಿಐ ಈಗಾಗಲೇ ದೇಶದ ಎಲ್ಲ ರಾಜ್ಯಗಳಂತೆ ಕರ್ನಾಟಕದ ಅಪೆಕ್ಸ್, ಡಿಸಿಸಿ ಹಾಗೂ ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸುತ್ತೋಲೆ ಕಳುಹಿಸಿ, 2025ರ ಆಗಸ್ಟ್ 1ಕ್ಕೆ ಪರಿಚಯಿಸಿದ ತಿದ್ದುಪಡಿ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಚಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕೇಂದ್ರ ಸರ್ಕಾರ ತಂದ ತಿದ್ದುಪಡಿ, ಅರ್‌ಬಿಐ ಸೂಚನೆಯ ಬಾಣದಿಂದ ಬಚಾವಾಗಲು ರಾಜ್ಯ ಸಹಕಾರಿ ಕಾಯ್ದೆಯನ್ನು ಮುನ್ನೆಲೆಗೆ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ ನಿರ್ದೇಶಕರಾದ ಭರತ್ ನಿಡ್ಪಳ್ಳಿ ಆಶಯ ಮಂಗಳೂರು: ಸ್ವಚ್ಛತೆಯು ಮನೆ ಮನೆಯಿಂದ ಸ್ವಯಂಜಾಗೃತಿಯೊಂದಿಗೆ ಪ್ರಾರಂಭವಾಗಬೇಕು. ಅದು ಸಾಮೂಹಿಕವಾಗಿ ಪರಿವರ್ತನೆಗೊಂಡು ರಾಷ್ಟ್ರೀಯ ಜಾಗೃತಿಯನ್ನು ಉಂಟು ಮಾಡುತ್ತದೆ. ಆವಾಗ ಮಹಾತ್ಮ ಗಾಂಧೀಜಿಯವರು ಕಂಡ ಸ್ವಚ್ಛ ಭಾರತ್ ಪರಿಕಲ್ಪನೆಯು ಸಾಕಾರಗೊಳ್ಳುತ್ತದೆ ಎಂದು ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಭರತ್ ನಿಡ್ಪಳ್ಳಿ ಹೇಳಿದರು. ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ ಭಾನುವಾರ “ಸ್ವಚ್ಛತಾ ಹೀ ಸೇವಾ” ದ್ಯೇಯದೊಂದಿಗೆ ನಡೆದ ಹನ್ನೆರಡನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರವೀಣ್ ಶೇಟ್ ನಾಗ್ವೇಕರ್, ವಿಶ್ವಕರ್ಮ ಬ್ಯಾಂಕ್ ಬ್ಯಾಂಕಿಂಗ್ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛ ಭಾರತ್‌ನಂತಹ ಗುರುತರವಾದ ಕಿಷ್ಟಕರ ಕಾರ್ಯವನ್ನು ಸಮಾಜದ ಎಲ್ಲರನ್ನೂ ಸೇರಿಸಿಕೊಂಡು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹವೆಂದು ಹೇಳಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಸ್ ಆರ್ ಹರೀಶ್ ಆಚಾರ್ಯ, ಕುದ್ರೋಳಿ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕುದ್ರೋಳಿ, ಅಂಜನ ಪಟೇಲ್…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಚಟುವಟಿಕೆಗಳು ರಾಜಕೀಯರಹಿತವಾಗಿ ನಡೆಯುತ್ತದೆ. ಸಹಕಾರಿ ಕ್ಷೇತ್ರದಲ್ಲಿ ಮಾತ್ರ ರಾಜಕೀಯರಹಿತವಾಗಿ ಜನರ ಸೇವೆ ಮಾಡಲು ಸಾಧ್ಯವಿದ್ದು ಎಲ್ಲರೂ ಇಲ್ಲಿ ಜೊತೆಯಾಗಿ ಕೆಲಸ ಮಾಡೋಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ಶನಿವಾರ ಬಿ.ಸಿ. ರೋಡಿನಲ್ಲಿ ಸಹಕಾರ ರತ್ನ ಟಿ.ಜಿ. ರಾಜಾರಾಮ್ ಭಟ್ ಅಭಿನಂದನಾ ಸಮಿತಿ ವತಿಯಿಂದ ನಡೆದ ಟಿ.ಜಿ ರಾಜಾರಾಮ್ ಭಟ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷಾತೀತವಾಗಿ ಸಹಕಾರಿ ರತ್ನ ಪ್ರಶಸ್ತಿ ನೀಡಿದರೆ ಅದಕ್ಕೆ ಬೆಲೆ ಬರುತ್ತದೆ. ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಬಂದಿದೆ. ಇವರಿಗೆ ಎಲ್ಲಾ ಸಹಕಾರಿಗಳು ಗೌರವಿಸಿದಾಗ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ದ.ಕ. ಜಿಲ್ಲೆಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಜನರಿಗೆ ರಕ್ತಗತವಾಗಿದೆ. ದೇಶಕ್ಕೆ ನಾಲ್ಕು ರಾಷ್ಟ್ರೀಕೃತ ಬ್ಯಾಂಕುಗಳನ್ನು ನೀಡಿದ…

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ರಥಬೀದಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಹೀ ಸೇವಾ ಸ್ವಚ್ಛ ಭಾರತ್ ಕಾರ್ಯಕ್ರಮದ ಭಾಗವಾಗಿ ನಾಳೆ (14-12-2025) ಡೊಂಗರಕೇರಿ ಮತ್ತು ಅಳಕೆ ಪರಿಸರದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ “ಸ್ವಚ್ಚ ಭಾರತ್”ನ 12ನೇ ಶ್ರಮದಾನ ಇದಾಗಿದ್ದು ಬೆಳಿಗ್ಗೆ 7.30ಕ್ಕೆ ಸರಿಯಾಗಿ “ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನ” ಇಲ್ಲಿ ಉದ್ಘಾಟನೆಗೊಂಡು ಡೊಂಗರಕೇರಿ ಹಾಗೂ ಅಳಕೆ ಪರಿಸರದಲ್ಲಿ ಜರುಗಲಿದ್ದು, ಸಹೃದಯಿ ಭಾಂದವರು ಈ ಶ್ರಮದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ: 8884433622, 9945067427 ಸಂಪರ್ಕಿಸಬಹುದು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಪುತ್ತೂರು: ಕ್ಯಾಂಪ್ಕೊ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಆರ್. ಸತೀಶ್ಚಂದ್ರರವರಿಗೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಅಭಿನಂದನಾ ಸಮಾರಂಭವನ್ನು ಬ್ಯಾಂಕಿನ ಸಭಾಂಗಣದಲ್ಲಿ ಶುಕ್ರವಾರ ನಡೆಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು ಅಧ್ಯಕ್ಷತೆ ವಹಿಸಿ, ವಿಶೇಷ ಅಭಿನಂದನಾ ಭಾಷಣದ ಮೂಲಕ ಪುತ್ತೂರು ಟೌನ್ ಬ್ಯಾಂಕ್ ಮತ್ತು ಸತೀಶ್ಚಂದ್ರರವರ ನಡುವಿನ ಅವಿನಾಭಾವ ಬಾಂಧವ್ಯವನ್ನು ಸ್ಮರಿಸಿದರು. ಬ್ಯಾಂಕಿನ ಅಭಿವೃದ್ಧಿ ಹಾಗೂ ಪ್ರಗತಿಪರ ಚಟುವಟಿಕೆಗಳಲ್ಲಿ ಅವರು ನೀಡಿರುವ ಮಾರ್ಗದರ್ಶನವನ್ನು ಉಲ್ಲೇಖಿಸಿ, ಬ್ಯಾಂಕಿನ ಪರವಾಗಿ ಅಭಿನಂದನೆಗಳನ್ನು ಅರ್ಪಿಸಿದರು. ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವ ಉದ್ದೇಶ ಹೊಂದಿದ್ದು, ಬ್ಯಾಂಕಿನ ಡಿಜಿಟಲೀಕರಣಕ್ಕೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದೆ. ಈ ವರ್ಷಾಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಸ್.ಆರ್. ಸತೀಶ್ಚಂದ್ರ, ತಮ್ಮ ಬಾಲ್ಯದಿಂದಲೂ ಪುತ್ತೂರು ಟೌನ್ ಬ್ಯಾಂಕಿನೊಂದಿಗೆ ಹೊಂದಿರುವ ಭಾವನಾತ್ಮಕ ಹಾಗೂ ನಿಕಟವಾದ ಸಂಬಂಧವನ್ನು ನೆನೆದು ಸಂತಸ ವ್ಯಕ್ತಪಡಿಸಿದರು. ಸಹಕಾರಿ ಕ್ಷೇತ್ರದಲ್ಲಿ ಸತ್ಯ,…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ಆರು ತಿಂಗಳ ಅವಧಿಯ ರೆಗ್ಯುಲರ್‌ ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ -ಜೂನ್‌ ತಿಂಗಳ ಬ್ಯಾಚ್‌ಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 31-12-2025. ಕೋರ್ಸ್‌ ಅವಧಿ ಆರು ತಿಂಗಳದ್ದಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t * ಆಸಕ್ತಿ ಇರುವ ಅಭ್ಯರ್ಥಿಗಳು, ಸಹಕಾರ ಸಂಘಗಳ, ಸಂಸ್ಥೆಗಳ, ಸಹಕಾರ ಇಲಾಖೆ ಮತ್ತು ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೂಡ ಅರ್ಜಿ ಸಲ್ಲಿಸಬಹುದು. * ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ‌ ಪರೀಕ್ಷೆ ಉತ್ತೀರ್ಣರಾಗಿರಬೇಕು. * ಅರ್ಜಿಯನ್ನು ದಿನಾಂಕ: 31-12-2025ರ ಒಳಗಾಗಿ ಸಲ್ಲಿಸುವುದು. * ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯವೇತನ ನೀಡಲಾಗುವುದು. * ಈ ತರಬೇತಿಯು ಕೆ.ಎ.ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ಸಹಕಾರ…

Read More

ಬೆಳ್ತಂಗಡಿ: ಬೆಳ್ತಂಗಡಿ ರಾಮನಗರದ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿಯ ಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಉದ್ಘಾಟನಾ ಸಮಾರಂಭ ಡಿಸೆಂಬರ್‌ 13ರಂದು ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿಯ ಧರ್ಮದರ್ಶಿ ಹರೀಶ್‌ ಅರಿಕೋಡಿ ಉದ್ಘಾಟಿಸುವರು. ಮಂಜೊಟ್ಟಿ ಹೋಲಿ ಕ್ರಾಸ್‌ ಚರ್ಚ್‌ನ ಧರ್ಮಗುರು ಅತಿ ವಂದನೀಯ ಪೌಲ್‌ ಸೆಬೆಸ್ಟಿಯನ್‌ ಡಿಸೋಜ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ದೀಪ ಪ್ವಜ್ವಲನೆ ಮಾಡಲಿದ್ದಾರೆ. ಪೆರಾಡಿ ಪ್ಯಾಕ್ಸ್‌ ಅಧ್ಯಕ್ಷ, ಸಹಕಾರ ರತ್ನ ಸತೀಶ್‌ ಕೆ ಕಾಶಿಪಟ್ಣ, ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘಗಳ ಪುತ್ತೂರು ಉಪವಿಭಾಗದ ಉಪನಿಬಂಧಕರಾದ ರಘು ಎಸ್‌.ಎಂ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಅಭಿವೃದ್ಧಿ ಅಧಿಕಾರಿ ನಂದನ್‌ ಬಿ.ಎಸ್‌, ಬೆಳ್ತಂಗಡಿ ಹೋಲಿ ರೆಡಿಮೀರ್‌…

Read More