Author: admin

ನಿರ್ದೇಶಕರ ಪದಚ್ಯುತಿ ನಿರ್ಧರಿಸಲು ‘ಡ್ರಾ’ ಕಡ್ಡಾಯ ನವದೆಹಲಿ: ಸಹಕಾರಿ ಬ್ಯಾಂಕ್‌ಗಳಲ್ಲಿ ಅನರ್ಹ ನಿರ್ದೇಶಕರನ್ನು ಗುರುತಿಸಲು ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿನ ನಿರ್ದೇಶಕರಲ್ಲಿ ಯಾರನ್ನು ಕೈಬಿಡಬಹುದು ಎಂಬುದನ್ನು ನಿರ್ಧರಿಸಲು ಹಣಕಾಸು ಸಚಿವಾಲಯವು ಬ್ಯಾಂಕಿಂಗ್ ನಿಯಂತ್ರಣ (ಸಹಕಾರಿ ಸಂಘಗಳು) ನಿಯಮಗಳು -1966ಕ್ಕೆ ಪ್ರಮುಖ ತಿದ್ದುಪಡಿಗಳನ್ನು ಮಾಡಿದೆ. ಈ ತಿದ್ದುಪಡಿಗಳು ಸಹಕಾರಿ ಬ್ಯಾಂಕ್‌ಗಳಲ್ಲಿನ ಅನರ್ಹ ನಿರ್ದೇಶಕರನ್ನು ಗುರುತಿಸಲು ಸ್ಪಷ್ಟವಾದ ಕಾರ್ಯವಿಧಾನಗಳನ್ನು ನಿಗದಿಪಡಿಸುತ್ತದೆ. ಬ್ಯಾಂಕಿಂಗ್ ನಿಯಂತ್ರಣ (ಸಹಕಾರಿ ಸಂಘಗಳು) ತಿದ್ದುಪಡಿ ನಿಯಮಗಳು -2025 ಎಂಬ ಹೊಸ ನಿಯಮಗಳು ಡಿಸೆಂಬರ್ 15ರಿಂದ ಜಾರಿಗೆ ಬರಲಿವೆ. ಈ ತಿದ್ದುಪಡಿಗಳು ನಗರ, ರಾಜ್ಯ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು ಸೇರಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ -1949ರ ಅಡಿಯಲ್ಲಿ ನಿಯಂತ್ರಿಸಲ್ಪಡುವ ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. ಈ ತಿದ್ದುಪಡಿಗಳು “ಅನರ್ಹ ನಿರ್ದೇಶಕ” ಎಂಬ ಪದದ ಹೊಸ ವ್ಯಾಖ್ಯಾನವನ್ನು ಸೇರಿಸಿದ್ದು, ಇದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 10-ಎ(2)(ಎ) ಮತ್ತು (ಬಿ) ಅಡಿಯಲ್ಲಿ ನಿರ್ದಿಷ್ಟಪಡಿಸಿದ ಅವಶ್ಯಕತೆಗಳನ್ನು ಪೂರೈಸದ ನಿರ್ದೇಶಕರನ್ನು ಉಲ್ಲೇಖಿಸುತ್ತದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ…

Read More

ತುಮಕೂರಿನಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಹೆಚ್ ಕೃಷ್ಣಾ ರೆಡ್ಡಿ ಅಭಿಪ್ರಾಯ ತುಮಕೂರು: ದೇಶದ ಎಲ್ಲಾ ರಾಜ್ಯಗಳ 700ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಸಹಕಾರ ಭಾರತಿ ಸಂಘಟನೆಯು ಮುಂದಿನ ದಿನಗಳಲ್ಲಿ ಸರ್ವವ್ಯಾಪಿ ಮತ್ತು ಸರ್ವಸ್ಪರ್ಶಿಯಾಗಿ ವ್ಯಾಪಿಸಿ ಸಹಕಾರಿ ಕ್ಷೇತ್ರದಲ್ಲಿ ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಸಹಕಾರ ಭಾರತಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿ. ಹೆಚ್ ಕೃಷ್ಣಾ ರೆಡ್ಡಿ ಕರೆ ನೀಡಿದರು. ಅವರು ಮಂಗಳವಾರ ಸಹಕಾರ ಭಾರತಿಯ ತುಮಕೂರು ಜಿಲ್ಲಾ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುರೇಶ ರಾವ್ ವಹಿಸಿದ್ದರು, https://chat.whatsapp.com/JVAtKKe2M19AFO3W5629ZS?mode=ems_copy_t ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಸಂಘಚಾಲಕರಾದ ನಾಗೇಂದ್ರ ಪ್ರಸಾದ್, ಹಿರಿಯ ಸಹಕಾರಿಗಳಾದ ಗಂಗಾಧರಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಬಿ.ಆರ್. ಮತ್ತು ಬೆಂಗಳೂರು ವಿಭಾಗ ಸಂಘಟನಾ ಪ್ರಮುಖ್ ಮಾಲತೇಶ್ ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ ತುಮಕೂರು…

Read More

ಮೈಸೂರು: ಮೈಸೂರಿನ ಜಯನಗರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸೋಮವಾರ ಸಂಘದ ದಿನಚರಿ ಪಂಚಾಂಗ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್‌ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸನ್ನದು ಲೆಕ್ಕಪರಿಶೋಧಕರಾದ ಕೆ.ಎಸ್.ಸದಾಶಿವ ಇವರು 2026ನೇ ಸಾಲಿನ ಸಹಕಾರಿಯ ದಿನಚರಿ ಪಂಚಾಂಗವನ್ನು ಬಿಡುಗಡೆ ಮಾಡಿದರು. ಸಹಕಾರಿಯ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ, ಗೌರವ ಖಜಾಂಚಿಗಳಾದ ಕೃಷ್ಣವೇಣಿ ಎಂ.ಜಿ, ಮಾಜಿ ಕಾರ್ಪೊರೇಟರ್ ಮತ್ತು ಕೃಷ್ಣರಾಜೇಂದ್ರ ಕೋ-ಆಪರೇಟಿವ್ ಬ್ಯಾಂಕ್‌ನ ಹಾಲಿ ನಿರ್ದೇಶಕರಾದ ಪಾರ್ಥಸಾರಥಿ, ಸಹಕಾರಿಯ ನಿರ್ದೇಶಕರುಗಳು, ಸದಸ್ಯರು, ಕಾನೂನು ಸಲಹೆಗಾರರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಸಂದರ್ಭದಲ್ಲಿ ಸಹಕಾರಿಯ ಸ್ಥಾಪಕ ಅಧ್ಯಕ್ಷರಾದ ಬಿ.ಎಸ್.ನಾಗರಾಜರಾವ್‌ ಅವರ ಪುತ್ಥಳಿಗೆ ಹಾರ ಹಾಕಿ ಸ್ಮರಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ರೋಯಲ್‌ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸವಣೂರು ಸೀತಾರಾಮ ರೈ ಹೇಳಿಕೆ ಪುತ್ತೂರು: ಆರ್ಥಿಕ ವ್ಯವಸ್ಥೆಯನ್ನು ಗಮನಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲಿ ಶೇ.38ರಷ್ಟು ವ್ಯವಸ್ಥೆಗಳು ಸಹಕಾರಿ ಕ್ಷೇತ್ರದಿಂದಲೇ ನಡಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಸಹಕಾರಿ ಕ್ಷೇತ್ರವು ಪ್ರಮುಖ ಪಾತ್ರ ವಹಿಸುತ್ತದೆ. ಒಬ್ಬ ವ್ಯಕ್ತಿ ಸೇರಿದಂತೆ ಊರಿನ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ ಮಹತ್ತರವಾಗಿದೆ ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಡಿ.6ರಂದು ಕೆಯ್ಯೂರು ಬ್ರಹ್ಮಶ್ರೀ ಕಾಂಪ್ಲೆಕ್ಸ್‌ನಲ್ಲಿ ರಾಜ್ಯಮಟ್ಟದ ಸೌಹಾರ್ದ ಸಹಕಾರ ಸಂಘ ರೋಯಲ್‌ ಸೌಹಾರ್ದ ಸಹಕಾರಿ ಸಂಘದ ಕೆಯ್ಯೂರು ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಕಚೇರಿ ಹಾಗೂ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯಮಟ್ಟದ ಸಹಕಾರಿ ಸಂಘವಾಗಿರುವ ರೋಯಲ್‌ ಸೌಹಾರ್ದ ಸೌಹಾರ್ದ ಸಹಕಾರಿಯ ಎರಡನೇ ಶಾಖೆಯು ಕೆಯ್ಯೂರಿನಲ್ಲಿ ಆರಂಭವಾಗಿರುವುದು ಈ ಗ್ರಾಮದ ಜನರಿಗೆ ಸಿಕ್ಕಿದ ಭಾಗ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳು ಆರಂಭಗೊಳ್ಳಲಿ…

Read More

ಗುಜರಾತ್‌ನಲ್ಲಿ ಭೂ ಶೃಂಗಸಭೆ ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಬಣ್ಣನೆ ಗಾಂಧಿನಗರ: ಮಹಾತ್ಮ ಗಾಂಧಿಯವರ ಗ್ರಾಮ ಕೇಂದ್ರಿತ ಅಭಿವೃದ್ಧಿಯ ದೃಷ್ಟಿಕೋನದ ಹೊರತಾಗಿಯೂ, ಸ್ವಾತಂತ್ರ್ಯಾನಂತರದ ನೀತಿಗಳು ಕೃಷಿ, ಪಶುಸಂಗೋಪನೆ ಮತ್ತು ಸಹಕಾರಿ ಕ್ಷೇತ್ರಗಳನ್ನು ಕಡೆಗಣಿಸಿದ್ದವು. ಇದರಿಂದ ಈ ಕ್ಷೇತ್ರಗಳು ದಶಕಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಯಿತು. 2014ರಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಮೂರೂ ಕ್ಷೇತ್ರಗಳಲ್ಲೂ ಹೊಸದಾದ ಚಟುವಟಿಕೆಗಳೊಂದಿಗೆ ಬದಲಾವಣೆಯಾಯಿತು. 2014ರ ನಂತರ ಗ್ರಾಮೀಣಾಭಿವೃದ್ಧಿಯನ್ನು ರಾಷ್ಟ್ರೀಯ ಬೆಳವಣಿಗೆಯ ಕೇಂದ್ರಸ್ತಂಭವಾಗಿ ಮರುಸ್ಥಾಪಿಸಲಾಯಿತು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಷಾ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿ-ಚಾಲಿತ ರೂಪಾಂತರದ ಮೂಲಕ ಭಾರತದ ಗ್ರಾಮೀಣ ಅಭಿವೃದ್ಧಿ ಚೌಕಟ್ಟನ್ನು ಬಲಪಡಿಸುವ ಮತ್ತು ಪುನರ್ರೂಪಿಸುವ ಗುರಿಯನ್ನು ಹೊಂದಿರುವ ರಾಷ್ಟ್ರವ್ಯಾಪಿ ಸರಣಿಯ ಭೂಮಿ ಶೃಂಗಸಭೆಯನ್ನು ಗಾಂಧಿನಗರದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಮೂರು ಹಂತದ ಭೂಮಿಯ ಶೃಂಗಸಭೆ ಸರಣಿಯನ್ನು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸಲು ಮಾತ್ರವಲ್ಲದೆ ಅಭಿವೃದ್ಧಿ ತಂತ್ರಗಳನ್ನು ಪುನರ್ವಿಮರ್ಶಿಸಲು, ಪ್ರಾಯೋಗಿಕ ಪರಿಹಾರಗಳನ್ನು ಪಡೆಯಲು ಮತ್ತು…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿಕೆ ಉಡುಪಿ: ಸ್ವಚ್ಛ ಗಾಳಿ, ನೀರು, ಬೆಳಕು ಹಾಗೂ ಪರಿಸರವನ್ನು ನಿರ್ಮಿಸಿಕೊಳ್ಳುವುದು ನಮ್ಮ ಕರ್ತವ್ಯದ ಭಾಗವಾಗಿದೆ. ಇದು ಸರಕಾರದ ಜವಾಬ್ದಾರಿಯಲ್ಲ. ನಮ್ಮ ಮೂಲಭೂತ ಜವಾಬ್ದಾರಿ. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ, ನಮ್ಮ ಹೊಣೆ ಎಂಬ ಸಾಮಾಜಿಕ ಜವಾಬ್ದಾರಿಯನ್ನು ನಾವು ನಿಭಾಯಿಸಬೇಕು ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದಂತೆ ನಡೆದ 11ನೇ “ಸ್ವಚ್ಛ ಭಾರತ್” ಶ್ರಮದಾನದ ಸಂದರ್ಭದಲ್ಲಿ ಅವರು ಮಾತನಾಡಿದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ ಇದರ ಮೊಕ್ತೇಸರರಾದ ಮುರಹರಿ ಕೆ ಆಚಾರ್ಯ ಹಾಗೂ ಗಂಗಾಧರ ಆಚಾರ್ಯ, ಇವರು ಹಸಿರು ನಿಶಾನೆ ತೋರಿಸಿ ಶ್ರಮದಾನಕ್ಕೆ ಚಾಲನೆ ನೀಡಿದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ  ಪರಿಸರದಲ್ಲಿ ಸ್ವಚ್ಛತೆಯ ಕಾರ್ಯ ನಡೆಯಿತು. ವಿಶ್ವಕರ್ಮ ಬ್ಯಾಂಕಿನ ಉಪಾಧ್ಯಕ್ಷರಾದ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿಕೆ ಉಡುಪಿ: ಸ್ವಚ್ಛ ಗಾಳಿ, ನೀರು, ಬೆಳಕು ಹಾಗೂ ಪರಿಸರವನ್ನು ನಿರ್ಮಿಸಿಕೊಳ್ಳುವುದು ನಮ್ಮ ಕರ್ತವ್ಯದ ಭಾಗವಾಗಿದೆ. ಇದು ಸರಕಾರದ ಜವಾಬ್ದಾರಿಯಲ್ಲ. ನಮ್ಮ ಮೂಲಭೂತ ಜವಾಬ್ದಾರಿ. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ, ನಮ್ಮ ಹೊಣೆ ಎಂಬ ಸಾಮಾಜಿಕ ಜವಾಬ್ದಾರಿಯನ್ನು ನಾವು ನಿಭಾಯಿಸಬೇಕು ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದಂತೆ ನಡೆದ 11ನೇ “ಸ್ವಚ್ಛ ಭಾರತ್” ಶ್ರಮದಾನದ ಸಂದರ್ಭದಲ್ಲಿ ಅವರು ಮಾತನಾಡಿದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ ಇದರ ಮೊಕ್ತೇಸರರಾದ ಮುರಹರಿ ಕೆ ಆಚಾರ್ಯ ಹಾಗೂ ಗಂಗಾಧರ ಆಚಾರ್ಯ, ಇವರು ಹಸಿರು ನಿಶಾನೆ ತೋರಿಸಿ ಶ್ರಮದಾನಕ್ಕೆ ಚಾಲನೆ ನೀಡಿದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ  ಪರಿಸರದಲ್ಲಿ ಸ್ವಚ್ಛತೆಯ ಕಾರ್ಯ ನಡೆಯಿತು. ವಿಶ್ವಕರ್ಮ ಬ್ಯಾಂಕಿನ ಉಪಾಧ್ಯಕ್ಷರಾದ…

Read More

ಹಣದುಬ್ಬರ ಇಳಿಕೆ, ನಿರೀಕ್ಷೆಗಿಂತ ಬಲವಾದ ಆರ್ಥಿಕ ವೇಗದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಧಾರ ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇದರಿಂದ ವಾಹನ ಮತ್ತು ಗೃಹ ಸಾಲಗಾರರಿಗೆ ಲಾಭವಾಗಲಿದೆ. ಹಣದುಬ್ಬರ ಇಳಿಕೆ ಮತ್ತು ನಿರೀಕ್ಷೆಗಿಂತ ಬಲವಾದ ಆರ್ಥಿಕ ಆವೇಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ಚಿಲ್ಲರೆ ಹಣದುಬ್ಬರವು ಐತಿಹಾಸಿಕ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, ಬೆಲೆ ಸ್ಥಿರತೆಗೆ ಧಕ್ಕೆ ತರದೆ ಬೇಡಿಕೆಯನ್ನು ಬೆಂಬಲಿಸಲು ಆರ್‌ಬಿಐಗೆ ಸಾಕಷ್ಟು ಅವಕಾಶ ನೀಡಿದ್ದು, ಇದೇ ವೇಳೆ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಿ, ಎರಡನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯು ಶೇಕಡಾ 8.2ರಷ್ಟು ವಿಸ್ತರಣೆಯನ್ನು ದಾಖಲಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ದರ ಕಡಿತವನ್ನು ತಕ್ಷಣದಿಂದ ಜಾರಿಗೆ ತರುವ ಸರ್ವಾನುಮತದ ನಿರ್ಧಾರಕ್ಕೆ ಬರುವ ಮೊದಲು, ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಭವಿಷ್ಯದ ದೃಷ್ಟಿಕೋನಗಳ ವಿವರವಾದ ಮೌಲ್ಯಮಾಪನವನ್ನು ವಿತ್ತೀಯ ನೀತಿ ಸಮಿತಿ(MPC) ತೆಗೆದುಕೊಂಡಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್‌ ಮಲ್ಹೋತ್ರಾ ತಿಳಿಸಿದ್ದಾರೆ.…

Read More

ಮಂಗಳೂರು: ಎಂಸಿಸಿ ಬ್ಯಾಂಕ್ ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಗುರುವಾರ ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ.ಕ್ರಾಸ್ತಾ, ಬೆಂದೂರಿನ ಸೇವಾನಿಲಯ ಕಾನ್ವೆಂಟ್‌ನ ಸುಪೀರಿಯರ್‌ನ ಸಿಸ್ಟರ್ ಸಿಂತಿಯಾ ಡಿಸೋಜ, ಮತ್ತು ಕೊಂಕಣಿ ಸಾಂಸ್ಕೃತಿಕ ಸಂಸ್ಥೆ (ಕೆಸಿಒ) ಅಧ್ಯಕ್ಷ ಲಿಯೋ ರೋಡ್ರಿಗಸ್ ಮುಖ್ಯ ಅತಿಥಿಗಳಾಗಿದ್ದರು. ಅಧ್ಯಕ್ಷರಾದ ಅನಿಲ್ ಲೋಬೊ ಅವರು ಮಾತನಾಡಿ, ಕಂಕನಾಡಿ ಶಾಖೆಯ ನವೀಕರಣದ ಹಿಂದಿನ ಉದ್ದೇಶ ಮತ್ತು ದೃಷ್ಟಿಕೋನವನ್ನು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನಿಕ ಮತ್ತು ಹೊಸಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಅದನ್ನು ಹೇಗೆ ಸಾಧಿಸುವುದು ಎಂಬುದರ…

Read More

ಬಂಟ್ವಾಳ: ಬಿ.ಸಿ. ರೋಡಿನ ವಿವೇಕ ನಗರದ, ಶಕ್ತಿ ಕಾಂಪೌಂಡಿನಲ್ಲಿ ಕಾರ್ಯಾಚರಿಸುತ್ತಿರುವ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿಯ ಅಧ್ಯಕ್ಷರಾದ ರೋಹಿಣಿ ಉದಯ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್, ಡೈಜಿವರ್ಲ್ಡ್ ಟಿ.ವಿ ವಾಹಿನಿಯ ಪ್ರೊಡಕ್ಷನ್ ಡೈರೆಕ್ಟರ್ ಸ್ಟ್ಯಾನಿ ಬೇಳ, ನಿರ್ದೇಶಕರಾದ ಜಯಾನಂದ ಆಚಾರ್ಯ, ಪರಮೇಶ್ವರ ಮೊಯ್ಲಿ, ಪ್ರಜ್ವಲ್ ಪ್ರಸಾದ್, ಜಯಲಕ್ಷ್ಮಿ, ಅನಿತಾ ನಾಯಕ್, ಬಿಂದು ಕುಡ್ವ, ರೂಪಕಲಾ, ವಸಂತ ಆಚಾರ್ಯ, ಕೃಷ್ಣಪ್ರಸಾದ್, ಶ್ರದ್ಧಾ, ಸಿಬ್ಬಂದಿ ವಿಘ್ನೇಶ್ ಮತ್ತು ಶ್ರಾಮ್ಯ ಹಾಗೂ ಪಿಗ್ಮಿ ಸಂಗ್ರಾಹಕರಾದ ಯೋಗೀಶ್ ಪ್ರಭು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More