Author: admin

ಬಂಟ್ವಾಳ: 2024-25ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಕರಾವಳಿ ಜಿಲ್ಲೆಗಳಲ್ಲಿನ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಬೆಳೆಗಾರರಿಗೆ ಸಿಗಬೇಕಾದ ಹಣಕಾಸಿನ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಅಡಕೆ ಬೆಳೆಗಾರರು ತಮ್ಮ ಜಮೀನಿನಲ್ಲಿರುವ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಅನುಗುಣವಾಗಿ ಬೆಳೆ ಸಾಲ ಹೊಂದಿರುವ ರೈತರು ಬೆಳೆವಿಮೆ ಕುರಿತು ಪ್ರೀಮಿಯಂ ಪಾವತಿಸಿದ್ದಾರೆ. ಅದರಂತೆ ಈ ವರ್ಷ ಬೆಳೆ ವಿಮೆ ಪರಿಹಾರ ಮೊತ್ತ ದೊರಕುವ ನಿರೀಕ್ಷೆಯಲ್ಲಿದ್ದು ಈ ಹಣದಿಂದಾಗಿ ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ವಿನಿಯೋಗಿಸುವ ನಿಟ್ಟಿನಲ್ಲಿದ್ದಾರೆ. ಪ್ರತಿ ವರ್ಷದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತವು ಆಕ್ಟೋಬರ್ ತಿಂಗಳ ಕೊನೆಯಲ್ಲಿ ಅಥವಾ ನವೆಂಬರ್ ತಿಂಗಳ ಮೊದಲ ವಾರದಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದ್ದು ಈ ವರ್ಷ ನವೆಂಬರ್ ಮೂರನೇ ವಾರ ಕಳೆದರೂ ರೈತರಿಗೆ ಪರಿಹಾರ ಮೊತ್ತ ಬಿಡುಗಡೆಯಾಗಿರುವುದಿಲ್ಲ ಎಂದು…

Read More

ಮಂಗಳೂರು: ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಬುಧವಾರ ಪ್ರಕಟವಾಗಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿರಿಯ ಸಹಕಾರಿ ಭಾಸ್ಕರ ಕೋಟ್ಯಾನ್‌ ಇರ್ವತ್ತೂರು ಸೇರಿದಂತೆ ಏಳು ಮಂದಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಹಕಾರಿ, ಬೆಳುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ, ಕಂಬಳದ ಸಂಘಟಕರಾದ ಭಾಸ್ಕರ ಕೋಟ್ಯಾನ್‌ ಕೊಳಕೆ ಇರ್ವತ್ತೂರು, ಸುಳ್ಯದ ಹಿರಿಯ ಸಹಕಾರಿ ವೆಂಕಟರಮಣ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಮಾಜಿ ಅಧ್ಯಕ್ಷರಾದ ಪಿ.ಸಿ ಜಯರಾಮ, ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್‌ ಕೆ. ಪೆರಾಡಿ, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಟಿ.ಜಿ ರಾಜಾರಾಮ ಭಟ್‌, ಮಂಗಳೂರು ಟ್ರಾಲ್ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಚೇತನ್‌ ಬೆಂಗ್ರೆ ಇವರುಗಳನ್ನು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಕಡಾರಿ ರವೀಂದ್ರ ಪ್ರಭು, ಉಪ್ಪೂರು ವ್ಯವಸಾಯ…

Read More

ಒಂದು ವಾರ ವಿಶೇಷ ಕಾರ್ಯಕ್ರಮಗಳ ಆಯೋಜನೆ ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ “ವಿಶಿಷ್ಟ ಸಾಧನಾ ಪ್ರಶಸ್ತಿ”ಯನ್ನು ಸತತ ಎರಡು ಬಾರಿ ಪಡೆದಿರುವ ಹಳೆಯಂಗಡಿಯ ಪ್ರಿಯದಶಿನಿ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ 2025ರ ಅಂಗವಾಗಿ ಒಂದು ವಾರದ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ನ.14ರಂದು ಸೊಸೈಟಿಯ ಹಳೆಯಂಗಡಿಯ ಪ್ರಧಾನ ಕಚೇರಿಯಲ್ಲಿ ಸಹಕಾರ ಸಪ್ತಾಹ ಧ್ವಜಾರೋಹಣವನ್ನು ಮುಲ್ಕಿ ವಿವಿಧೋದ್ದೇಶ ಸಹಕಾರ ಸಂಘ ( ಕ್ಷೀರಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ ಪಡಂಗ ನೆರವೇರಿಸಲಿರುವರು. ಹಿರಿಯ ಸಹಕಾರಿಗಳಾದ ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಶರ್ಲಿ ಬಂಗೇರ ಮತ್ತು ಈ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜೈಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಗುವುದು. ನ.15ರಂದು ಹಳೆಯಂಗಡಿ ಇಂದಿರಾನಗರದ ಇಂದಿರಾ ಗಾಂಧಿ ಸಭಾಭವನದಲ್ಲಿ ಸಂಗಮ ಮಹಿಳಾ ಮಂಡಲ ಇಂದಿರಾನಗರ ಸಹಯೋಗದೊಂದಿಗೆ ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು…

Read More

ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಹುಣಸೂರು ಶಾಸಕ ಜಿ.ಡಿ.ಹರೀಶ್‌ ಗೌಡ ಅಭಿಪ್ರಾಯ ಮೈಸೂರು: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಲದ ವತಿಯಿಂದ ಮೈಸೂರಿನಲ್ಲಿ ಕ್ರೆಸ್ಟ್ ಇನ್ಫೋ ಮೀಡಿಯಾ ಸಹಯೋಗದೊಂದಿಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ಈ ವಿಚಾರ ಸಂಕಿರಣದಲ್ಲಿ ದಕ್ಷಿಣಭಾರತ ಮಟ್ಟದ ನಗರ ಸಹಕಾರಿ ಬ್ಯಾಂಕಿಂಗ್ ಶೃಂಗಸಭೆ (South India Urban Cooperative Banking Summit) ಕಾರ್ಯಕ್ರಮ ಆಯೋಜಿಸಲಾಗಿತ್ತು. ಹುಣಸೂರು ಶಾಸಕ ಹಾಗೂ ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಉದ್ಘಾಟಿಸಿ ಮಾತನಾಡಿ, ಇಂದು ಬ್ಯಾಂಕಿಂಗ್ ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನ ಮಹತ್ವ ಪಡೆದಿದೆ. ತಂತ್ರಜ್ಞಾನದ ಸಹಕಾರದಿಂದ ಬ್ಯಾಂಕಿಂಗ್‌ ಕ್ಷೇತ್ರವು ದೇಶದ ಮುಖ್ಯಸ್ಥಾನದಲ್ಲಿದ್ದು ಎಲ್ಲೋ ಮೂಲೆಯಲ್ಲಿರುವ ಶಾಖಾ ಕಚೇರಿಯ ವಹಿವಾಟುಗಳನ್ನು ಡೇಟಾ ಮೂಲಕ ತಿಳಿದುಕೊಳ್ಳುವ ಉತ್ತಮ ವ್ಯವಸ್ಥೆಯಿದೆ. ಇದರಿಂದಾಗಿ ಬ್ಯಾಂಕುಗಳು ಯಶಸ್ವಿಯಾಗಿ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ಪಟ್ಟಣ ಸಹಕಾರ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಸುಲಭವಾಗಿ ಸಾಲ ನೀಡುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಎನ್‌ಪಿಎ ವಸೂಲಾತಿಯಲ್ಲೂ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಸದಸ್ಯರಾದ ಜಗದೀಶ್ ಸನಿಲ್, ಶ್ರೀಧರ್ ಪೂಜಾರಿ, ದಯಾನಂದ ಕುಮಾರ್, ಗಣೇಶ್ ಸನಿಲ್ ಹಾಗೂ ಮೋಲಿ ಫೆರ್ನಾಂಡಿಸ್ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯ ಕನಕದಾಸ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸದಸ್ಯರಾದ ಫಾತಿಮತುಲ್ ಜೋಹರ ಮಾತನಾಡಿ ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಪಂಜಿಮೊಗರು ಶಾಖೆಯು ಒಂಬತ್ತನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹದೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ…

Read More

ಮೂಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ದಿನಾಚರಣೆ ಮಂಗಳವಾರ ಸಂಘದ ಸಭಾಭವನದಲ್ಲಿ ನಡೆಯಿತು. ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಮುಖ್ಯವಾಗಿದ್ದು,ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ ಸಹಕಾರಿ ಸಂಘ ಬೆಳೆಯಲು ಮಹಿಳೆಯರ ಪಾತ್ರ ಪ್ರಮುಖವಾಗಿದ್ದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸಂಘವು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಮೂಲಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿ ಶುಭ ಹಾರೈಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮುಕ್ಕ ಮೆಸ್ಕಾಂ ಸೆಕ್ಷನ್ ಆಫೀಸರ್ ಯಶೋಧರ್ ಸಾಲ್ಯಾನ್, ಸೊಸೈಟಿ ನಿರ್ದೇಶಕರಾದ ಉಮಾನಾಥ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್, ನವೀನ್ ಸಾಲ್ಯಾನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಸಹಾಯ ಗುಂಪುಗಳ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು. ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವವು ಭಾನುವಾರ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ಪದ್ಮನಾಭ ಎಂ ಇವರ ಉಪಸ್ಥಿತಿಯಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿಯ ಅಧ್ಯಕ್ಷರಾದ ಕೆ.ಭಾಸ್ಕರ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. 2026ರ ಹೊಸ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಪದ್ಮನಾಭ ಎಂ, ಮಂಗಳೂರು ಸೌಹಾರ್ದ ಸಹಕಾರಿ ಸಂಘವು ಹಲವು ಉತ್ತಮ ಕಾರ್ಯಗಳನ್ನು ಸದಸ್ಯರಿಗೆ ನೀಡುತ್ತಾ ಉತ್ತಮ ಸೇವೆ ಮಾಡುತ್ತಿದೆ. ಈ ಸಹಕಾರಿಗೆ ತನ್ನಿಂದ ಆಗುವ ಹೆಚ್ಚಿನ ಸಲಹೆಗಳನ್ನು ನೀಡುತ್ತ ಸಹಕಾರಿಯ ಎಲ್ಲಾ ಆಗುಹೋಗುಗಳ ಬಗ್ಗೆ ಸಹಕಾರ ನೀಡುವ ಭರವಸೆ ನೀಡಿದರು. ಸಂಘದ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ವಂದಿಸಿದರು. ಜಾನ್ಸನ್ ಮಾಟಿನ, ರತನ್ ಕುಮಾರ್, ರಾಜಶೇಖರ್, ಸದಾಶಿವ ಅಮೀನ್ ಕಾರ್ಯಕ್ರಮ ನಡೆಸಿಕೊಟ್ಟರು. ಉಪಾಧ್ಯಕ್ಷರಾದ ಕೃಷ್ಣ ಭಟ್, ನಿರ್ದೇಶಕರದ ಕೆ.ವಿಜೇತಾ ರಾವ್, ಲತಾ ಎನ್ ಆಳ್ವ, ಸುಪ್ರೀತ ಜೆ.ಕೆ, ಸುಂದರ ಸಾಲ್ಯಾನ್, ಜೆ.ಸದಾಶಿವ ಅಮೀನ್, ಪೂರ್ಣಿಮಾ ಬಿ.ರಾವ್‌, ಜಯಪ್ರಕಾಶ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL:…

Read More

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ನೂತನ ಶಾಖೆ ಧರ್ಮಸ್ಥಳದಲ್ಲಿ ನವೆಂಬರ್‌ 13ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ನವೆಂಬರ್‌ 13ರ ಗುರುವಾರ ಬೆಳಿಗ್ಗೆ 10.30ಕ್ಕೆ ಅಂಚೆ ಕಚೇರಿ ಬಳಿಯ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಮೊದಲನೇ ಮಹಡಿಯಲ್ಲಿ ಶಾಖಾ ಕಛೇರಿ ಉದ್ಘಾಟನೆಯಾಗಲಿದೆ. ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೊರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಎಂ.ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್., ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ,…

Read More

ಮಂಗಳೂರು: ಸ್ವಾತಂತ್ಯ ಹೋರಾಟದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮಸ್ಥೈರ್ಯ ತುಂಬಿದ್ದ, ಶಾಂತಿಯ ಕ್ರಾಂತಿಗೆ ಧ್ವನಿ ತುಂಬಿದ್ದ ವಂದೇ ಮಾತರಂ ರಾಷ್ಟ್ರೀಯ ಗೀತೆಗೆ ಈಗ 150ರ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ರಾಮಕೃಷ್ಣ ಮಠದ ಸಹಯೋಗದೊಂದಿಗೆ ನವೆಂಬರ್‌ 16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ ಪ್ರಸ್ತುತಪಡಿಸಲಾಗುತ್ತಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದ ಅಂಗವಾಗಿ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 5ರಿಂದ ನಾಡಿನ ಹೆಮ್ಮೆಯ ಹೆಸರಾಂತ ಸುಮಧುರ ಕಂಠದ ಗಾಯಕ ಶಂಕರ್ ಶಾನಭಾಗ್ ಬೆಂಗಳೂರು, ಇವರಿಂದ ದೇಶಭಕ್ತಿ ಉದ್ದೀಪನಗೊಳಿಸುವ ವಂದೇ ಮಾತರಂ (ತಾಯೇ ವಂದಿಸುವೆ) ದೇಶಭಕ್ತಿ ಗೀತೆಗಳ ಗಾಯನ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶಭಕ್ತ ನಾಗರಿರು ಪಾಲ್ಗೊಳ್ಳುವಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್‌ ಗುರುರಾಜ್‌ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL:…

Read More

ರಾಷ್ಟ್ರೀಯ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ಒಕ್ಕೂಟದ ಸಮಾವೇಶದಲ್ಲಿ ಕರ್ನಾಟಕದ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅಭಿಪ್ರಾಯ ನವದೆಹಲಿ: ಇಲ್ಲಿನ ವಿಜ್ಞಾನ ಭವನದಲ್ಲಿ ಸೋಮವಾರ ಆರಂಭವಾದ ಕೂಪ್ ಕುಂಭ – 2025 ಅಂತಾರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕದ ಕಾನೂನು, ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮತ್ತು ರಾಷ್ಟ್ರೀಯ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ಒಕ್ಕೂಟ (NAFCUB)ದ ಅಧ್ಯಕ್ಷರಾದ ಹೆಚ್.ಕೆ. ಪಾಟೀಲ್, ಭಾರತದ ನಗರ ಸಹಕಾರಿ ಬ್ಯಾಂಕಿಂಗ್ ವಲಯವನ್ನು ಬಲಪಡಿಸಲು ಹೊಸದಾದ ನೀತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಷಾ ಅವರ ಸಮ್ಮುಖದಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ ಹೆಚ್‌.ಕೆ ಪಾಟೀಲ್‌ ಅವರು, ಸಹಕಾರಿ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಬಾಕಿ ಇರುವ ಸವಾಲುಗಳನ್ನು ಪರಿಹರಿಸುವಲ್ಲಿ NAFCUB ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ಸಹಕಾರ ಸಚಿವಾಲಯವು ಕೂಡ ತೊಡಗಿಸಿಕೊಂಡಿರುವುದನ್ನು ಶ್ಲಾಘಿಸಿ, ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದು ಕೇವಲ ಆರಂಭ…

Read More