Author: admin

ಉಡುಪಿ: ಛಾಯಾಗ್ರಹಣ ವಿಭಾಗದಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿರುವ ಮಣಿಪಾಲ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಹಿರೇಬೆಟ್ಟು ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೋಡಿಕನ್ಯಾಣ ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ಸಿಇಒ ರಾಘವೇಂದ್ರ ಕರ್ಕೇರ ಕೋಡಿ ಇವರ ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ಕಚೇರಿ ಸಹಾಯಕ ಅರುಣ್ ಕುಮಾರ್, ಉಡುಪಿ ಸೌಹಾರ್ದ ಒಕ್ಕೂಟದ ಸಿಇಒ ಲೋಹಿತ್ ಸಾಲ್ಯಾನ್, ಅಗ್ರಜ ಸೌಹಾರ್ದ ಉಡುಪಿ ಇದರ ಗಣೇಶ್ ಕೋಟ್ಯಾನ್, ಭಾರತಿ ಸೌಹಾರ್ದ ಕಾಪು ಇದರ ಶಶಿಧರ ಕೋಟ್ಯಾನ್, ವೀರಭದ್ರ ಸೌಹಾರ್ದ ಪರ್ಕಳ ಇದರ‌ ರತ್ನ ಶೆಟ್ಟಿ, ಪಂಚಮಿ ಸೌಹಾರ್ದ ಉಡುಪಿಯ ಸ್ವಾತಿ ಪ್ರಭು, ನಿರ್ಮಾಣ್ ಸೌಹಾರ್ದ ಉಡುಪಿ ಇದರ ಪ್ರದೀಪ ಕೆ., ಮಲ್ಪೆ ಮೀನು ವ್ಯಾಪಾರಸ್ಥ ಸೌಹಾರ್ದ ಸಹಕಾರಿ ಇದರ‌ ಜೀವನ್…

Read More

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಳಿಯ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯು ಬುಧವಾರ ಲೋಕಾರ್ಪಣೆಗೊಂಡಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶಾಖೆಯ ಉದ್ಘಾಟನೆಯನ್ನು ನೇರವೇರಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮಾನವೀಯತೆ, ಸಹಕಾರ, ಪ್ರೀತಿ, ಸೌಹಾರ್ದಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಸಹಕಾರ ಕ್ಷೇತ್ರವು ಬಡವರ ಬಂಧು ಎನಿಸಿದೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸಹಕಾರಿ ಸಂಘವು ಅತ್ಯುತ್ತಮ ಸೇವೆಯಿಂದ ಜನಸಾಮಾನ್ಯರ ಮನಸ್ಸು ಗೆದ್ದಿದೆ. ಗ್ರಾಮೀಣ ಪ್ರದೇಶದ ಜನರ ಹೃದಯ ಶ್ರೀಮಂತಿಕೆ, ಕೃಷಿ, ಹೈನುಗಾರಿಕೆ ದೇಶದ ಪ್ರಗತಿಯ ಬೆನ್ನೆಲುಬಾಗಿದೆ ಎಂದರು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ…

Read More

ಡಾ. ಕುರಿಯನ್ ಕೊಡುಗೆ ಸ್ಮರಣೆಯೇ ಈ ದಿನದ ಪ್ರಮುಖ ಉದ್ದೇಶ ಸ್ನೇಹಿತರೆ, ಪ್ರತಿವರ್ಷ ನವೆಂಬರ್ 26ರಂದು ಭಾರತದಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆಯನ್ನು (National Milk Day) ಆಚರಿಸಲಾಗುತ್ತದೆ. ಈ ದಿನವು ಭಾರತದಲ್ಲಿ ‘ಶ್ವೇತಕ್ರಾಂತಿ’ಯ ಪಿತಾಮಹ ಎಂದು ಪ್ರಸಿದ್ಧರಾದ ಡಾ.ವರ್ಗೀಸ್ ಕುರಿಯನ್ ಅವರ ಜನ್ಮದಿನದ ಸವಿನೆನಪಿಗಾಗಿ ಆಚರಿಸಲಾಗುತ್ತದೆ. ಹಾಲು ಮತ್ತು ಡೈರಿ ಉತ್ಪನ್ನಗಳ ಮಹತ್ವವನ್ನು ಎತ್ತಿ ಹಿಡಿಯುವುದು ಹಾಗೂ ಈ ಕ್ಷೇತ್ರದಲ್ಲಿ ಡಾ.ಕುರಿಯನ್ ಅವರ ಕೊಡುಗೆಯನ್ನು ಸ್ಮರಿಸುವುದು ಈ ದಿನದ ಪ್ರಮುಖ ಉದ್ದೇಶ. ತಮಗೆಲ್ಲ ಗೊತ್ತಿರುವ ಹಾಗೆ ಡಾ. ವರ್ಗೀಸ್ ಕುರಿಯನ್ ಶ್ವೇತಕ್ರಾಂತಿಯ ರೂವಾರಿ. ಡಾ. ವರ್ಗೀಸ್ ಕುರಿಯನ್ (ನವೆಂಬರ್ 26, 1921 – ಸೆಪ್ಟೆಂಬರ್ 9, 2012) ರವರು ಒಬ್ಬ ಮಹಾನ್ ಸಾಮಾಜಿಕ ಉದ್ಯಮಿ ಮತ್ತು ವೃತ್ತಿಯಲ್ಲಿ ಒಬ್ಬ ಇಂಜಿನಿಯರ್. ಇಂಜಿನಿಯರಿಂಗ್ ವೃತ್ತಿಯನ್ನು ತೊರೆದು ಭಾರತಕ್ಕೆ ಬಂದ ಇವರು, ಆಗಿನ ಅಗತ್ಯತೆಗೆ ಅನುಗುಣವಾಗಿ ಭಾರತದ ಕ್ಷೀರ ಉದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದರು. https://chat.whatsapp.com/JVAtKKe2M19AFO3W5629ZS?mode=ems_copy_t ಗುಜರಾತಿನ ಆನಂದ್‌ನಲ್ಲಿ ಸಹಕಾರಿ ಹಾಲಿನ ಉತ್ಪಾದಕರು ಮತ್ತು…

Read More

ಸಾಂವಿಧಾನಿಕ ಮೌಲ್ಯಗಳಿಗೆ ಗೌರವ, ಜಾಗೃತಿ ಹೆಚ್ಚಿಸಲು ದಿನದ ಆಚರಣೆ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಭಾರತ ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿ 1947ರ ಆಗಸ್ಟ್‌ 15ರಂದು ಮೊದಲನೇ ಸ್ವಾತಂತ್ರ್ಯ ದಿನ ಆಚರಿಸಿತು. ಅದಾದ ಸುಮಾರು ಎರಡೂವರೆ ವರ್ಷಗಳ ಬಳಿಕ ದೇಶದ ಪ್ರಥಮ ಪ್ರಜಾಪ್ರಭುತ್ವ ದಿನವನ್ನು 1950ರ ಜನವರಿ 26ರಂದು ಆಚರಿಸಲಾಯಿತು. ನಮ್ಮ ದೇಶದಲ್ಲಿ ಸಾಂವಿಧಾನಿಕವಾಗಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಭಾರತದ ಸಂವಿಧಾನ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ. ಆದರೆ ವರ್ತಮಾನ ಕಾಲದಲ್ಲಿ ಸಂವಿಧಾನಕ್ಕೆ ಅಪಚಾರ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಎಂಬ ಆರೋಪಗಳು ಕೇಳುತ್ತಲೇ ಇದ್ದು ಪ್ರತಿಪಕ್ಷಗಳಂತೂ ಸಂವಿಧಾನ ಪ್ರತಿಯನ್ನು ಹಿಡಿದು ತಿರುಗುಷ್ಟರ ಮಟ್ಟಿಗೆ ಭಾರತದ ಸಂವಿಧಾನವನ್ನೇ ಪ್ರಶ್ನಿಸುವಷ್ಟರ ಮಟ್ಟಿಗೆ ಕಾಲ ಮುಂದುವರಿದಿದೆ. ಆದರೆ ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿಕೊಡುವ ದಿನವೊಂದಿದೆ ಎಂದು…

Read More

ವಿಜಯಪುರ: ನೂತನವಾಗಿ ನೋಂದಣಿಯಾಗಿರುವ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ (ಯೂನಿಯನ್) ಕಚೇರಿ ನಗರದ ಸೋಲಾಪುರ ರಸ್ತೆಯ ಚಾಲುಕ್ಯ ನಗರದಲ್ಲಿ ಆರಂಭಗೊಂಡಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬುಧವಾರ ಬೆಳಗ್ಗೆ ಮಹಾಲಕ್ಷ್ಮೀ ಪೂಜೆಯೊಂದಿಗೆ ಕಚೇರಿ ಶುಭಾರಂಭಗೊಂಡಿತು. ಒಕ್ಕೂಟದ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ , ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ, ಸುರೇಶ ಬಿರಾದಾರ್, ಸಿದ್ದು ಮಲ್ಲಿಕಾರ್ಜುನ ಮಠ, ಅರುಣ ಮಠ, ಮೌನೇಶ ಪತ್ತಾರ, ಸತೀಶ ಶಿಂತ್ರೆ, ವಿವೇಕಾನಂದ ಶಿರೋಳ್ಕರ್ , ಯಮನಪ್ಪ ಸಾತಿಹಾಳ (ವಿಜಯಪುರ ಗ್ರಾಮಾಂತರ) ಭಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ), ರಾಜು ಹಂಚಾಟೆ (ತಾಳಿಕೋಟ್ / ಮುದ್ದೇಬಿಹಾಳ), ಚಂದ್ರಶೇಖರ ಪಾಟೀಲ (ಚಡಚಣ ಇಂಡಿ ) ಮಲಕಪ್ಪ ರೊಟ್ಟಿ (ತಾಂಬಾ, ಇಂಡಿ), ಹಾಗೂ ಸಹಕಾರ ಭಾರತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ , ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಮತ್ತಿತರರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಭಾರತದಲ್ಲಿ ಕ್ಷೀರೋತ್ಪಾದನೆ ಹೆಚ್ಚಿಸಿ, ಹಾಲಿನ ಅರಿವು ಮೂಡಿಸಿದ ಸಾಧನೆ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಹಾಲು ಎಂದರೆ ಅದು ಸಂಪೂರ್ಣ ಆಹಾರ ಎಂದು ಪರಿಗಣಿಸಲಾಗುತ್ತದೆ. ಹಸುವಿನ ಹಾಲಿನಲ್ಲಿ ದೇಹವನ್ನು ಪೋಷಿಸುವ ಎಲ್ಲಾ ಪೂರಕ ಅಂಶಗಳಿವೆ ಎಂಬುದು ಜನಜನಿತ. ಹಸುವಿನ ಹಾಲು ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಗತ್ಯ ಆಹಾರ. ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ವೈದ್ಯರು ಪ್ರತಿನಿತ್ಯ ಹಾಲು ಕುಡಿಯಲು ಶಿಫಾರಸು ಮಾಡುತ್ತಾರೆ. ಹಾಲಿನಿಂದ ನಮಗೆ ಸಿಗಬಹುದಾದ ಆರೋಗ್ಯ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ತಿಳಿಸಲು ಮತ್ತು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸಲು ಕ್ಷೀರಕ್ರಾಂತಿಯ ಪಿತಾಮಹರಾದ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನವಾದ ನವೆಂಬರ್ 26ರಂದು ಭಾರತದಲ್ಲಿ ರಾಷ್ಟ್ರೀಯ ಹಾಲು ದಿನ ಎಂದು ಆಚರಿಸಲಾಗುತ್ತಿದೆ. 2023-24ರ ಅಂಕಿ ಅಂಶಗಳ ಪ್ರಕಾರ, ಭಾರತವು ವಿಶ್ವದ ಅತಿ ದೊಡ್ಡ ಹಾಲು ಉತ್ಪಾದಕ ರಾಷ್ಟ್ರವಾಗಿ ಮೂಡಿಬಂದಿದೆ. ಜಾಗತಿಕ ಹಾಲು ಉತ್ಪಾದನೆಯಲ್ಲಿ ಶೇಕಡಾ 24ರಷ್ಟು ಪಾಲು ಭಾರತದ್ದೇ ಆಗಿದೆ. 2023-24ರ ಅವಧಿಯಲ್ಲಿ ಹಾಲು ಉತ್ಪಾದನೆಯು ಸುಮಾರು 4%…

Read More

ಮಂಗಳೂರು: ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವತಿಯಿಂದ 14ನೇ ಎಟಿಎಂ ಅನ್ನು ಶನಿವಾರ ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್‌ನಲ್ಲಿ ಉದ್ಘಾಟಿಸಲಾಯಿತು. ಗುರುವಾಯೆನೆಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಉದ್ಘಾಟಿಸಿದರು. ಎಟಿಎಂ ಅನ್ನು ಬದ್ಯಾರ್‌ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ ಫಾ| ರೋಶನ್ ಕ್ರಾಸ್ತ ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಉಜಿರೆಯ ಅನುಗ್ರಹ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ಫಾ| ವಿಜಯ್ ಲೋಬೊ ನೆರವೇರಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಹೋಲಿ ರೆಡಿಮರ್ ಅಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ಕ್ಲಿಫರ್ಡ್ ಪಿಂಟೊ ಅತಿಥಿಯಾಗಿದ್ದರು. ಸಹಕಾರ ರತ್ನ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬೆಳ್ತಂಗಡಿ ಶಾಖೆಯ ಗ್ರಾಹಕರು ಶಾಖೆಯ ಪ್ರಾರಂಭದ ವರ್ಷದಲ್ಲಿ 10 ಕೋಟಿ ರೂ. ವಹಿವಾಟು ಸಾಧಿಸಲು ನೀಡಿದ ಬೆಂಬಲಕ್ಕಾಗಿ ಧನ್ಯವಾದ…

Read More

ಉಡುಪಿಯಲ್ಲಿ ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನಅನಿಲ್‌ ಲೋಬೊ ಅಭಿಪ್ರಾಯ ಮಂಗಳೂರು: ಎಂಸಿಸಿ ಬ್ಯಾಂಕಿನ ಉಡುಪಿ ಶಾಖೆಯ ಗ್ರಾಹಕರ ನಿರಂತರ ಬೆಂಬಲದಿಂದ ಶಾಖೆಯ ಪ್ರಗತಿ ದಾಖಲಾಗಿದ್ದು, ಇದು ಇಲ್ಲಿ ಎಟಿಎಂ ಸೌಲಭ್ಯವನ್ನು ನೀಡಲು ಪ್ರಮುಖ ಪಾತ್ರ ವಹಿಸಿದೆ. ಈ ಬೆಳವಣಿಗೆಯನ್ನು ಗ್ರಾಹಕರು ಮತ್ತು ಬ್ಯಾಂಕಿನ ಸಾಮೂಹಿಕ ಶಕ್ತಿ, ಏಕತೆ ಮತ್ತು ನಂಬಿಕೆಯ ಮೂಲಕ ಸಾಧಿಸಲಾಗಿದೆ. ಪ್ರೀತಿ, ಸಮರ್ಪಣಾ ಭಾವ ಮತ್ತು ಪ್ರಾಮಾಣಿಕತೆ ಇರುವಲ್ಲಿ ಯಶಸ್ಸು ಸ್ವಾಭಾವಿಕವಾಗಿರುತ್ತದೆ ಎಂದು ಎಂಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್‌ ಲೋಬೊ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಎಂಸಿಸಿ ಬ್ಯಾಂಕಿನ 15ನೇ ಎಟಿಎಂ ಅನ್ನು ಭಾನುವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್ ಭವಿಷ್ಯದ ಬಗ್ಗೆ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದು, ಜನರ ಹಣದ ಜವಾಬ್ದಾರಿ ಮತ್ತು ಹಣಕಾಸಿನ ವಹಿವಾಟುಗಳನ್ನು ವಿವೇಕದಿಂದ ನಿರ್ವಹಿಸುವುದನ್ನು ನೋಡಿಕೊಳ್ಳುಲಾಗುತ್ತಿದೆ. ಸಾಲವನ್ನು ಎಚ್ಚರಿಕೆಯಿಂದ ನೀಡಬೇಕು ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸಾಲಗಳ ನಿಯಮಿತ…

Read More

ಮಂಗಳೂರು: ಬಹುನಿರೀಕ್ಷಿತ ಕ್ಯಾಂಪ್ಕೋ ಚುನಾವಣಾ ಪ್ರಕ್ರಿಯೆಯು ಮುಗಿದು ಮತ ಎಣಿಕೆ ಮಂಗಳವಾರ ನಡೆದಿದ್ದು ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಭಾರತಿಯಿಂದ ಸ್ಪರ್ಧಿಸಿದ್ದ ಮುರಳಿಕೃಷ್ಣ ಕೆ.ಎನ್(2261 ಮತ), ಪುರುಷೋತ್ತಮ್ ಭಟ್(2249), ಮಹೇಶ್ ಚೌಟ(2216), ಎಸ್ ಆರ್ ಸತೀಶ್ಚಂದ್ರ (2181), ದಯಾನಂದ ಹೆಗ್ಡೆ (2163) ಮತ್ತು ಎ.ವಿ.ತೀರ್ಥರಾಮ(2052) ಮೇಲುಗೈ ಸಾಧಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಸತ್ಯನಾರಾಯಣ ಎಂ.ಜಿ 620, ರಾಮ ಪ್ರತೀಕ್ 623 ಮತ ಪಡೆದಿದ್ದಾರೆ. ಇಂದು ಮತ ಎಣಿಕೆ ನಡೆದರೂ, ಫಲಿತಾಂಶದ ಅಧಿಕೃತ ಘೋಷಣೆ ಶುಕ್ರವಾರ ನಡೆಯಲಿದೆ. ಕ್ಯಾಂಪ್ಕೋ ಆಡಳಿತ ಮಂಡಳಿಯ 19 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಉಳಿದ ಆರು ಸಾಮಾನ್ಯ ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು. ಕರ್ನಾಟಕ ರಾಜ್ಯದ 10 ಹಾಗೂ ಕೇರಳ ರಾಜ್ಯದ ಒಂಬತ್ತು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಕೇರಳದ ಎಲ್ಲಾ ಒಂಬತ್ತು ಹಾಗೂ ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಕರ್ನಾಟಕದಿಂದ…

Read More

ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್‌ 26ರ ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್‌ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ…

Read More