Author: admin

ಭಾರತದ ಟ್ಯಾಕ್ಸಿ ಮಾರುಕಟ್ಟೆಯಲ್ಲಿ ಬದಲಾವಣೆಯ ಗಾಳಿ: ಸಹಕಾರ್‌ ಟ್ಯಾಕ್ಸಿ ಕೋ ಆಪರೇಟಿವ್‌ ಲಿಮಿಟೆಡ್‌ ಅಡಿ ಕಾರ್ಯ ನವದೆಹಲಿ: ಹೊಸ ವರ್ಷ ಸಮೀಪಿಸುತ್ತಿದ್ದಂತೆ, ಟ್ಯಾಕ್ಸಿ ಮಾರುಕಟ್ಟೆ(Marketg) ದೊಡ್ಡ ಬದಲಾವಣೆಯ ಅಂಚಿನಲ್ಲಿ ನಿಂತಿದೆ. ವರ್ಷಗಳಿಂದ ಓಲಾ ಮತ್ತು ಉಬರ್‌ನಂತಹ ಖಾಸಗಿ ಕ್ಯಾಬ್ ಕಂಪನಿಗಳ ಹಿಡಿತದಲ್ಲಿದ್ದ ಟ್ಯಾಕ್ಸಿ(Taxi) ಕ್ಷೇತ್ರಕ್ಕೆ ಈಗ ಹೊಸ ಸ್ಪರ್ಧಿಯ ಆಗಮನವಾಗುತ್ತಿದ್ದು, ಜನವರಿ 1ರಿಂದ ದೆಹಲಿಯಲ್ಲಿ ಸಹಕಾರ ಕ್ಷೇತ್ರದ ಮಹತ್ವಾಕಾಂಕ್ಷೆಯ ಭಾರತ್ ಟ್ಯಾಕ್ಸಿ (Bharat Taxi) ಅಧಿಕೃತ ಓಡಾಟ ನಡೆಸಲಿದೆ. ಸಹಕಾರ ಮಾದರಿಯ ಈ ಭಾರತ್‌ ಟ್ಯಾಕ್ಸಿ ಚಾಲಕರ ಬದುಕನ್ನೇ ಬದಲಾಯಿಸುವ ಮಾದರಿಯನ್ನು ಮುಂದಿಟ್ಟುಕೊಂಡು ಗಮನ ಸೆಳೆಯುತ್ತಿದೆ. ಇದು ದೇಶಾದ್ಯಂತ ವಿಸ್ತರಿಸಿದರೆ ದೇಶದ ಟ್ಯಾಕ್ಸಿ ವಲಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. https://chat.whatsapp.com/FCEnlTkAKCC0MGPhXtX4i4 ಪ್ರಸ್ತುತ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುತಿರುವ ಓಲಾ, ಉಬರ್‌ನಂಥ ಖಾಸಗಿ ಕಂಪನಿಗಳಿಗೆ ಪರ್ಯಾಯವಾಗಿ ಸರಕಾರವೇ ಭಾರತ್ ಟ್ಯಾಕ್ಸಿ ಎಂಬ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಇದು ಕೇಂದ್ರ ಸರಕಾರದ ಸಹಕಾರ ಸಚಿವಾಲಯ ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಮಾರ್ಗದರ್ಶನದಲ್ಲಿ ಆರಂಭವಾಗಿರುವ…

Read More

ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ ಸಮಾರೋಪ ಉದ್ಘಾಟಿಸಿ ಸಚಿವ ಸತೀಶ್‌ ಜಾರಕಿಹೊಳಿ ಭರವಸೆ ಬೆಳಗಾವಿ: ‘ರಾಜ್ಯದಲ್ಲಿನ ಸೌಹಾರ್ದ ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನಾವು ನೀತಿ ರೂಪಿಸುತ್ತೇವೆ. ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಗೆ ಸಹಕರಿಸಲು ನಾವು ಬದ್ಧರಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಬೆಳಗಾವಿಯ ಕೆಎಲ್‌ಇ ಸೆಂಟೇನರಿ ಕನ್ವೆನ್ಸನ್ ಸೆಂಟರ್‌ನಲ್ಲಿ ಭಾನುವಾರ ಸೌಹಾರ್ದ ಸಹಕಾರ ಚಳವಳಿಯ ‘ರಜತ ಮಹೋತ್ಸವ’ದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರಿ ಸಂಸ್ಥೆಗಳ ಮೇಲೆ ಒಂದಿಷ್ಟಾದರೂ ಸರ್ಕಾರದ ನಿಯಂತ್ರಣವೂ ಬೇಕಾಗುತ್ತದೆ. ಹಾಗೆಂದು ನಾವು ತೊಂದರೆ ಕೊಡುವುದಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ಗ್ರಾಹಕರು ಠೇವಣಿ ಇರಿಸುವ ಹಣ ಸುರಕ್ಷಿತವಾಗಿ ಇರಬೇಕು ಎಂಬುದಷ್ಟೇ ನಮ್ಮ ಕಳಕಳಿ. ಸೌಹಾರ್ದ ಸಹಕಾರಿಗಳ ಬೇಡಿಕೆಗಳ ಕುರಿತಾಗಿ ವಿಸ್ತೃತವಾಗಿ ಚರ್ಚೆ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನಿಯೋಗ ಕರೆದುಕೊಂಡು ಹೋಗಿ, ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಸೌಹಾರ್ದ ಸಹಕಾರಿ ಸಂಸ್ಥೆಗಳು ಗ್ರಾಹಕರ ವಿಶ್ವಾಸ ಗಳಿಸಿವೆ. ಮನೆ-ಮನೆಗೆ…

Read More

ಮೂಲ್ಕಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದೆ. ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಿಂದ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರವನ್ನು ಭಾನುವಾರ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪ್ರಧಾನಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಎಂ. ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ.ದೇವಿಪ್ರಸಾದ್ ಶೆಟ್ಟಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ‌ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ…

Read More

ಕೊಟ್ಟಾರ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು ಇವರ ಸಹಯೋಗದೊಂದಿಗೆ ಯೇನೇಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇದರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ ಡಿಸೆಂಬರ್ 28ರಂದು ಭಾನುವಾರ ಬೆಳಗ್ಗೆ 9.30ರಿಂದ ಅಪರಾಹ್ನ 12.30ರ ವರೆಗೆ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್, ನಿಲ್‌ಗಿರಿಸ್‌ನ್ ಹತ್ತಿರ ಕ್ಯಾನೋಪಿ ಬಿಲ್ಡಿಂಗ್, ಅಶೋಕನಗರ ರೋಡ್, ಉರ್ವಸ್ಟೋರ್ ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ತ ಹಲ್ಲು ಗಳನ್ನು ಕೀಳುವುದು, ಹಲ್ಲುಗಳ…

Read More

ಬೆಳ್ತಂಗಡಿ: ಮಂಗಳೂರಿನ ಕಾರ್‌ಸ್ಟ್ರೀಟ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ 14ನೇ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಶನಿವಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಗೌಡರ ಯಾನೆ ಒಕ್ಕಲಿಗರ ಸಂಘ ಉಜಿರೆ ಇದರ ಗೌರವಾಧ್ಯಕ್ಷ ಗೋಪಾಲಕೃಷ್ಣ ಜಿ.ಕೆ, ಬಂಟರ ಸಂಘ ಉಜಿರೆ ಇದರ ನಿರ್ದೇಶಕರಾದ ವೆಂಕಟರಮಣ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಉಜಿರೆಯ ಬೆಳಾಲು ಕ್ರಾಸ್ ಹಾಗೂ ಕುವೆಂಪುನಗರ ಪರಿಸರಗಳಲ್ಲಿ ಸ್ವಯಂಸೇವಕರು ಶ್ರಮದಾನ ನಡೆಸಿ, ಪರಸರ ಸ್ವಚ್ಛತಾ ಕಾರ್ಯ ಮಾಡಿದರು. ಉಜಿರೆ ಬಂಟರ ಸಂಘದ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಳಂಜ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಬ್ಯಾಂಕಿನ ಸಾಮಾಜಿಕ ಬದ್ಧತೆಗೆ ಹಿಡಿದ ಕೈಗನ್ನಡಿ ಎಂದು ಶ್ಲಾಘಿಸಿದರು. ಉಜಿರೆಯ ನಂದಗೋಕುಲ ಗೋಶಾಲೆಯ ಅಧ್ಯಕ್ಷರಾದ ಡಾ.…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ಆರು ತಿಂಗಳ ಅವಧಿಯ ರೆಗ್ಯುಲರ್‌ ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ -ಜೂನ್‌ ತಿಂಗಳ ಬ್ಯಾಚ್‌ಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 31-12-2025. https://chat.whatsapp.com/FCEnlTkAKCC0MGPhXtX4i4 ಆಸಕ್ತ ಅಭ್ಯರ್ಥಿಗಳು, ಸಹಕಾರ ಸಂಘಗಳ, ಸಂಸ್ಥೆಗಳ, ಸಹಕಾರ ಇಲಾಖೆ ಮತ್ತು ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೂಡ ಅರ್ಜಿ ಸಲ್ಲಿಸಬಹುದು. * ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ‌ ಪರೀಕ್ಷೆ ಉತ್ತೀರ್ಣರಾಗಿರಬೇಕು. * ಅರ್ಜಿಯನ್ನು ದಿನಾಂಕ: 31-12-2025ರ ಒಳಗಾಗಿ ಸಲ್ಲಿಸುವುದು. * ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯವೇತನ ನೀಡಲಾಗುವುದು. * ಈ ತರಬೇತಿಯು ಕೆ.ಎ.ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ಸಹಕಾರ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಆದ್ಯತೆ ಇರುತ್ತದೆ. *…

Read More

ಬೆಳ್ತಂಗಡಿ: ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಈ ವಾರದ ಕಾರ್ಯಕ್ರಮ ಡಿಸೆಂಬರ್‌ 27ರಂದು ಶನಿವಾರ ಬೆಳಗ್ಗೆ 7.30ರಿಂದ 9.30ರ ತನಕ ಉಜಿರೆ ಬೆಳಾಲು ಕ್ರಾಸ್‌ ರಸ್ತೆಯಿಂದ ಕುವೆಂಪು ನಗರ ರಸ್ತೆ ತನಕ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಈ ವಾರದ ಸ್ವಚ್ಛತಾ ಅಭಿಯಾನ ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಲಿದ್ದು, ಆಸಕ್ತರು, ಬ್ಯಾಂಕಿನ ಹಿತೈಷಿಗಳು, ಸಂಘ ಸಂಸ್ಥೆಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಪ್ರಕಟಣೆ ಮೂಲಕ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಕಾರ್ಕಳ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ ಭಾನುವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಜೈರಾಜ್ ಬಿ ರೈ, ದೈವಸ್ಥಾನ ಪ್ರಗತಿಯಲ್ಲಿ ವಾಣಿಜ್ಯ ಅಭಿವೃದ್ಧಿಯು ಅಗತ್ಯ. ಹಣಕಾಸು ವ್ಯವಹಾರ ಪ್ರಗತಿಯಾದಂತೆ ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು. ಹಣಕಾಸು ಸೇವೆ ಹಾಗೂ ಸಾಮಾಜಿಕ ಕಾರ್ಯಗಳ ಉಪಯೋಗವನ್ನು ಊರ ಜನರು ಪಡೆದುಕೊಳ್ಳುವಂತೆ ಕೋರಿದರು. ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನ ತಮ್ಮ ಆರೋಗ್ಯದ ಕಾಳಜಿಯನ್ನು ತಾವೇ ವಹಿಸಿಕೊಳ್ಳುವಂತಾಗಬೇಕು. ಮಾತ್ರವಲ್ಲದೆ ಪೌಷ್ಟಿಕಯುಕ್ತ ಆಹಾರ ಸೇವಿಸಿದಲ್ಲಿ ದೈಹಿಕ ಉತ್ತಮ ಬೆಳವಣಿಗೆ ಸಾಧ್ಯ ಎಂದರು. ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ತೀರ್ಥಬೆಟ್ಟುಗುತ್ತು ಕೆ.ಪೃಥ್ವಿರಾಜ್ ಬಿ ರೈ ಸಾಂದರ್ಭಿಕವಾಗಿ…

Read More

ಮಂಗಳೂರು: ಪಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇವರು ನೀಡುತ್ತಿರುವ Higher Diploma in Co-Operative Management (HDCM) ದೂರ ಶಿಕ್ಷಣ ಕೋರ್ಸ್‌ ಅನ್ನು ಮಂಗಳೂರು ಕೇಂದ್ರಿತವಾಗಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಸಹಭಾಗಿತ್ವದಲ್ಲಿ ಮುಂದಿನ ಬ್ಯಾಚ್‌ಗೆ ನೋಂದಣಿ ಪ್ರಕ್ರಿಯೆಯನ್ನು ದಿನಾಂಕ: 22/12/2025ರಿಂದ ಪ್ರಾರಂಭಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ Higher Diploma in Co-Operative Management ಕೋರ್ಸ್‌ ಅನ್ನು ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣದ ಅಗತ್ಯವಿರುತ್ತದೆ. ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘವು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇದರ ಸಹಯೋಗದೊಂದಿಗೆ ಈಗಾಗಲೇ ಒಟ್ಟು ಎಂಟು ಬ್ಯಾಚ್‌ಗಳನ್ನು ಯಶಸ್ವಿಯಾಗಿ ನಡೆಸುತ್ತ ಬಂದಿದ್ದು, ೮೦೦ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಇದರ ಪ್ರಾಯೋಜನ ಪಡೆದಿದ್ದು, ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ದೂರ ಶಿಕ್ಷಣ…

Read More

ಮಂಗಳೂರು: ಗ್ರಾಮೀಣ ಕರಕುಶಲ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು, ಕೇಂದ್ರ ಸರಕಾರದ ಜವಳಿ ಸಚಿವಾಲಯದ ಆಶ್ರಯದಲ್ಲಿ ಪಿಲಿಕುಳ ನಿಸರ್ಗಧಾಮದಲ್ಲಿ ಏಳು ದಿನಗಳ ಕಾಲ ಗಾಂಧಿ ಶಿಲ್ಪ ಬಜಾರ್ 2025 ಕರಕುಶಲ ಮೇಳ ಹಮ್ಮಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಈ ಕರಕುಶಲ ಮೇಳದಲ್ಲಿ ದೇಶದಾದ್ಯಂತ ಇರುವ ಪ್ರಮುಖ ಕರಕುಶಲಕಾರರು ತಾವು ಉತ್ಪಾದಿಸಿದ ಉತ್ಪನ್ನಗಳನ್ನು ಪ್ರದರ್ಶನ ಮಾರಾಟ ಮಾಡಲಿದ್ದಾರೆ. ಕರಕುಶಲ ಕಲೆಗಳು ಈ ದೇಶದ ಪಾರಂಪರೀಕತೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕುಂಬಾರಿಕೆ, ಬಿದಿರಿನ ಉತ್ಪನ್ನಗಳು, ಕಸೂತಿ ಬಟ್ಟೆ, ಚರ್ಮದ ಉತ್ಪನ್ನಗಳು, ಲೋಹ ಕಲಾಕಾರರು, ಮರದ ಕೆತ್ತನೆಗಳು, ಅಲಂಕಾರಿಕ ಆಭರಣಗಳು ಇತ್ಯಾದಿ ಹಲವಾರು ಕಲಾಕರರು ತಾವು ಮಾಡಿದ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ. 1958ನೇ ವರ್ಷದಲ್ಲಿ ಕುಂಬಾರಿಕೆ ಕೈಗಾರಿಕೆಯ ಬೆಳವಣಿಗೆಗಾಗಿ ಪ್ರಾರಂಭವಾದ ಸಹಕಾರ ಸಂಘವು ಹಂತಹಂತವಾಗಿ ಬೆಳವಣಿಗೆ ಹೊಂದಿ ತನ್ನ ಕಾರ್ಯಕ್ಷೇತ್ರವನ್ನು ನಾಲ್ಕು ಜಿಲ್ಲೆಗಳಿಗೆ ವಿಸ್ತರಿಸಿಕೊಂಡಿದೆ. ಕುಂಬಾರಿಕೆ ಕೈಗಾರಿಕೆಯ ಬೆಳವಣಿಗೆ ಅಲ್ಲದೆ ಇತರ ಎಲ್ಲಾ ಕರಕುಶಲ ವಸ್ತುಗಳಿಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ…

Read More