Author: admin

ಎರಡು ಆ್ಯಪ್ ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಹೇಳಿಕೆ ನವದೆಹಲಿ: ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾ‌ರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್‌ ಆ್ಯಪ್‌ಗಳಿಗೆ ಸೋಮವಾರ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಚಾಲನೆ ನೀಡಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಸಕ್ತ ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕುಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕುಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಅಮಿತ್ ಷಾ ಹೇಳಿದರು. ದೇಶದ ಸಹಕಾರ ವಲಯದ ಅನುತ್ಪಾದಕ ಆಸ್ತಿ (ಎನ್‌ಪಿಎ) ಕಳೆದ ಎರಡು ವರ್ಷದ ಹಿಂದೆ ಶೇಕಡ 2.8ರಷ್ಟಿತ್ತು. ಈಗ ಶೇ.0.6ಕ್ಕೆ ಇಳಿದಿದೆ. ಬ್ಯಾಂಕ್‌ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದು ಅಮಿತ್ ಷಾ ವಿವರಿಸಿದರು. ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು…

Read More

ಬೆಳಗಾವಿ: ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ ಜೊಲ್ಲೆ, ರಾಜು ಕಾಗೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, ರಾಜು ಕಾಗೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಆ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕಿಗೆ ಆಗಮಿಸಿ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ನೂತನ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಬ್ಯಾಂಕ್ ನಂ.1 ಸ್ಥಾನಕ್ಕೆ ಹೋಗಲಿದೆ-ಬಾಲಚಂದ್ರ ಜಾರಕಿಹೊಳಿ ವಿಶ್ವಾಸ: ಅಣ್ಣಾಸಾಹೇಬ ಜೊಲ್ಲೆ ಬೆಳಗಾವಿಯ ಮನಮೋಹನ್ ಸಿಂಗ್ ಇದ್ದಂತೆ. ಆರ್ಥಿಕ ತಜ್ಞರೂ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರ ಆಡಳಿತದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಲ್ಲಿ 6,500 ಕೋಟಿ ರೂ. ಇರುವ ಠೇವಣಿಯನ್ನು 10 ಸಾವಿರ ಕೋಟಿಗೆ ಹೆಚ್ಚಿಸಲಿದ್ದು, ರಾಜ್ಯದಲ್ಲೇ ನಂ.1 ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ಬೆಳಗಾವಿ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…

Read More

ಮಂಗಳೂರು: ಎಂಸಿಸಿ ಬ್ಯಾಂಕ್ ತನ್ನ ಅರ್ಧವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ಶನಿವಾರ ಮಂಗಳೂರಿನ ಆಡಳಿತ ಕಚೇರಿಯಲ್ಲಿ ನಡೆಸಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸಮರ್ಪಿತ ಪ್ರಯತ್ನಗಳಿಂದ ನಿರ್ದಿಷ್ಟ ಗುರಿ ಸಾಧಿಸಿದ ಬ್ಯಾಂಕಿನ ಶಾಖೆಯ ಸಿಬ್ಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ನಿರಂತರ ಬೆಳವಣಿಗೆ ಸಾಧಿಸಲು ಗಮನ ಹರಿಸಬೇಕಾದ ವಿಷಯಗಳ ಬಗ್ಗೆ ಗಮನ ಸೆಳೆದ ಅವರು, ಸಿಬ್ಬಂದಿಗಳ ಕಾರ್ಯಾಚರಣೆಯ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುವ ಅಸಮರ್ಥತೆಯನ್ನು ಗುರುತಿಸಿ ಸರಿಪಡಿಸುವಂತೆ ಸಲಹೆ ನೀಡಿದರು. ಬ್ಯಾಂಕಿನ ನ್ಯೂನತೆಗಳನ್ನು ಗುರುತಿಸುವಲ್ಲಿ ಮತ್ತು ಸಿಬ್ಬಂದಿಯನ್ನು ಹೆಚ್ಚಿನ ದಕ್ಷತೆಯತ್ತ ಕೊಂಡೊಯ್ಯುವಲ್ಲಿ ಮಾರ್ಗದರ್ಶನ ನೀಡಿದ ಆಡಳಿತ ಕಛೇರಿಯ ಎಲ್ಲಾ ವಿಭಾಗದ ಮುಖ್ಯಸ್ಥರ ಪ್ರಯತ್ನಗಳನ್ನು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿಗೆ ಅನುಗುಣವಾಗಿ ಬೆಳವಣಿಗೆ ಖಚಿತಪಡಿಸಿಕೊಳ್ಳಲು ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ತಮ್ಮ ಶಾಖೆಯ ಸಿಬ್ಬಂದಿಗೆ ಸಂಪೂರ್ಣವಾಗಿ ತರಬೇತಿ ನೀಡಬೇಕೆಂದು ಅವರು ಶಾಖಾ…

Read More

ಅರ್ಬನ್‌ ಕೋ ಆಪರೇಟಿವ್‌ ಸೊಸೈಟಿಯ ಅಂತಾರಾಷ್ಟ್ರೀಯ ಸಮ್ಮೇಳನ ಕೋ ಆಪ್‌ ಕುಂಭ್‌ -2025 ಉದ್ಘಾಟಿಸಿ ಸಹಕಾರ ಸಚಿವ ಅಮಿತ್‌ ಷಾ ಘೋಷಣೆ ನವದಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಅಡಿಯಲ್ಲಿ ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕುಗಳು ಮತ್ತು ಸಹಕಾರಿ ಸಾಲ ಸಂಘಗಳು ಹೊಸ ಉತ್ಸಾಹದಿಂದ ಕಾರ್ಯನಿರತವಾಗಿವೆ. ಮುಂದಿನ ಐದು ವರ್ಷಗಳಲ್ಲಿ, ಎರಡು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪ್ರತಿ ನಗರಗಳಲ್ಲೂ ಅರ್ಬನ್‌ ಸಹಕಾರಿ ಬ್ಯಾಂಕುಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಹೇಳಿದರು. ನವದೆಹಲಿಯಲ್ಲಿ ಸೋಮವಾರ ಆರಂಭವಾದ ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕುಗಳ ಮತ್ತು ಕ್ರೆಡಿಟ್‌ ವಲಯದ ಸೊಸೈಟಿಗಳ ಅಂತಾರಾಷ್ಟ್ರೀಯ ಸಮ್ಮೇಳನ “ಕೋ-ಆಪ್ ಕುಂಭ್ 2025” ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ವಲಯವನ್ನು ಆಧುನೀಕರಿಸಲು, ಅದರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಹಕಾರ ಸಚಿವಾಲಯವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ ಸಚಿವರು, ಈ ಅಂತಾರಾಷ್ಟ್ರೀಯ ಸಮ್ಮೇಳನದ ‘ದೆಹಲಿ…

Read More

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತಗೊಂಡ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಇವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಸೋಮವಾರ ಗೌರವಿಸಿ ಅಭಿನಂದಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ಪುಷ್ಪಲತಾ ಎಸ್.ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

Read More

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತಗೊಂಡ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಇವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಸೋಮವಾರ ಗೌರವಿಸಿ ಅಭಿನಂದಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ಪುಷ್ಪಲತಾ ಎಸ್.ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

Read More

ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಶುಭ ಹಾರೈಕೆ ಮಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಾ ಶುಭ ಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಮಂದಿ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಶುಭ ಹಾರೈಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ನವೀಕೃತ ಕೇಂದ್ರ ಕಚೇರಿ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾನುವಾರ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಎಸ್.ಕೆ ಗೋಲ್ಡ್ ಸ್ಮಿತ್ಸ್ ಸೊಸೈಟಿಯ ನೂತನ ಕಟ್ಟಡಕ್ಕೆ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದರು. ಶ್ರೀಮದ್…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಮೂಲಭೂತವಾಗಿ ಒಂದು ಆರ್ಥಿಕ ಸಂಸ್ಥೆ. ಆದರೆ ಆರ್ಥಿಕ ಕಾರ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿಯಾಗಿಯೂ ಕಾರ್ಯತತ್ಪರವಾಗಿರುವುದು ಅತ್ಯಂತ ಸಂತಸದ ವಿಚಾರ. ಸ್ವಚ್ಛತೆಯಂತಹ ಸಮಾಜದ ಮೂಲಭೂತ ಸಂಗತಿಗಳನ್ನು ಕೈಗೆತ್ತಿಕೊಂಡು ಸಾಮಾಜಿಕ ಜಾಗೃತಿಯ ಸ್ವಚ್ಛ ಭಾರತ್ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ರೊಟೇರಿಯನ್ ಪಿಡಿಜಿ ಡಾ. ದೇವದಾಸ್ ರೈ ಹೇಳಿದರು. ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ “ಸ್ವಚ್ಛತಾ ಹೀ ಸೇವಾ” ಧೈಯದೊಂದಿಗೆ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ರೋಟರಿ ಕ್ಲಬ್ ಮಂಗಳೂರು ಕೇಂದ್ರ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ ಅವರು ಸ್ವಚ್ಛ ಭಾರತ್ ನಂತಹ ಸಾಮಾಜಿಕ ಕಾರ್ಯಗಳು ಜನರ ಪರಿಣಾಮಕಾರಿ ಭಾಗೀದಾರಿಕೆಯಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ. ಅದುದರಿಂದ ವಿಶ್ವಕರ್ಮ ಬ್ಯಾಂಕ್ ಆಯೋಜಿಸಿರುವ ಈ ಸಾಮಾಜಿಕ ಕಾರ್ಯದಲ್ಲಿ ನಮ್ಮಂತಹ ಸಂಘಟನೆಗಳು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ…

Read More

ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಎರಡು ದಿನಗಳ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕಡಬ ತಾಲೂಕು ಪತ್ರಕರ್ತರ ಸಂಘ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಸಮಾಜಕ್ಕೆ ಹತ್ತಿರವಾಗಿದೆ, ಪತ್ರಕರ್ತರು ಅಂಚೆ ಇಲಾಖೆಯ ಸಹಯೋಗದೊಂದಿಗೆ ಆಧಾರ್ ಮೇಳ ಮಾಡುತ್ತಿರುವುದು ಉತ್ತಮ ಕಾರ್ಯ, ಅಂಚೆ ಇಲಾಖೆ ಮುಂಚೆಯಿಂದಲೂ ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ, ಇದೀಗ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಆಧಾರ್ ನೋಂದಣಿ, ತಿದ್ದುಪಡಿ , ವಿಮಾ ಯೋಜನೆಗಳನ್ನು ಜನರಿಗೆ ನೀಡುತ್ತಾ ಜನಸ್ನೇಹಿ ಇಲಾಖೆಯಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

Read More

ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ವಿಧಾನ ಪರಿಷತ್‌ ಮಾಜಿ ಸದಸ್ಯ, ಹಿರಿಯ ವಕೀಲರಾದ ಮೋನಪ್ಪ ಭಂಡಾರಿ ಅಭಿಪ್ರಾಯ ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ತನ್ನ ಸ್ಥಾಪನಾ ದಿನದ ಅಂಗವಾಗಿ ಜನರಿಗೆ ಉಪಯೋಗವಾಗುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕೆಲಸ. ತಮ್ಮ ಸಾಮಾಜಿಕ ಕೆಲಸದ ನಿಟ್ಟಿನಲ್ಲಿ ಶ್ರೀ ಪೂರ್ಣಾನಂದ ಸಹಕಾರಿ ಸಂಘವು ವೈದ್ಯಕೀಯ ಶಿಬಿರ ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಹಿರಿಯ ವಕೀಲರಾದ ಮೋನಪ್ಪ ಭಂಡಾರಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಹಂಪನಕಟ್ಟೆಯ ಮಿನಿ ವಿಧಾನಸೌಧ ಸಮೀಪದ ಎನ್‌ಜಿಒ ಕಟ್ಟಡದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಅಂಗವಾಗಿ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ಶಿಬಿರ ಹಾಗೂ ಅಂಚೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂಚೆ ಅಪಘಾತ ಮತ್ತು ಆರೋಗ್ಯ ವಿಮೆ ನೋಂದಣಿ…

Read More