Author: admin

ಮಂಗಳೂರು: ಎಂಸಿಸಿ ಬ್ಯಾಂಕ್‌ನ ಸಂತೆಕಟ್ಟೆ ಶಾಖೆ ಪ್ರಾರಂಭವಾದ ಕೇವಲ ಏಳು ತಿಂಗಳ ಅವಧಿಯಲ್ಲೇ ರೂ. 10 ಕೋಟಿ ವ್ಯವಹಾರ ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈ ಮಹತ್ವದ ಸಾಧನೆಯನ್ನು ಸ್ಮರಿಸಲು, ಶಾಖೆಯ ವತಿಯಿಂದ ಸಂತೆಕಟ್ಟೆ ಶಾಖಾ ಆವರಣದಲ್ಲಿ ಸಂಭ್ರಮಾಚರಣೆ ಹಾಗೂ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತೊಟ್ಟಂನ ಸಂತ ಅನ್ನಾ ಚರ್ಚ್‌ ಧರ್ಮಗುರು ವಂದನೀಯ ಫಾ. ಹೆನ್ರಿ ಮಸ್ಕರೇನ್ಹಸ್ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಸಮಾಜಸೇವಕ ರೇಮಂಡ್ ವಾಲ್ಟರ್ ಕ್ರಾಸ್ತಾ ಹಾಗೂ ಕಿನ್ನಿಮೂಲ್ಕಿಯ ಕಿದಿಯೂರು ಸಹಕಾರಿ ಸಂಘದ ನಿರ್ದೇಶಕ ನಿತಿನ್ ಪೂಜಾರಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಶಾಖಾ ಸಹಾಯಕ ನಿರ್ದೇಶಕ ಡಾ| ಜೆರಾಲ್ಡ್ ಪಿಂಟೊ, ಮಹಾಪ್ರಬಂಧಕರಾದ ಸುನಿಲ್ ಮಿನೇಜಸ್, ಸಂತೆಕಟ್ಟೆ ಶಾಖೆಯ ಸ್ಥಾಪಕ ವ್ಯವಸ್ಥಾಪಕ ಅಜಿತ್ ಡಿಸೋಜ ಹಾಗೂ ಶಾಖಾ ವ್ಯವಸ್ಥಾಪಕರಾದ ಜ್ಯೋತಿ ಬ್ಯಾರೆಟ್ಟೊ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಸಂತೆಕಟ್ಟೆ ಶಾಖೆಯ ಹತ್ತು ಸ್ಥಾಪಕ ಗ್ರಾಹಕರಿಂದ ವಿಶೇಷ…

Read More

ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅಭಿಪ್ರಾಯ ಪುತ್ತೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನವು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದೆ. ಗ್ರಾಹಕರಿಗೆ ಅತ್ಯುತ್ತಮ ಹಾಗೂ ಅತ್ಯಂತ ಕ್ಷಿಪ್ರವಾದ ಸೇವೆ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಬ್ಯಾಂಕಿನ ಸಿಬ್ಬಂದಿಗಳು ಇಂತಹ ಕಾರ್ಯಾಗಾರಗಳಲ್ಲಿ ಪಡೆಯುವ ಮಾಹಿತಿಯನ್ನು ಸದುಪಯೋಗ ಪಡಿಸಿಕೊಂಡು ಗ್ರಾಹಕರಿಗೆ ನಿರಂತರ ಮತ್ತು ಗುಣಮಟ್ಟದ ಸೇವೆ ನೀಡಬೇಕು ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ ಕೊಳತ್ತಾಯ ಅಭಿಪ್ರಾಯಪಟ್ಟರು.‌ https://chat.whatsapp.com/FCEnlTkAKCC0MGPhXtX4i4 ಅವರು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗಾಗಿ ಆಯೋಜಿಸಲಾಗಿದ್ದ ಮೂರು ದಿನಗಳ ನೂತನ ತಂತ್ರಜ್ಞಾನ ಮಾಹಿತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ನಮ್ಮ ಬ್ಯಾಂಕಿನ ವತಿಯಿಂದ ಸಿಬ್ಬಂದಿಗಳಿಗೆ ಅಗತ್ಯವಿರುವ ತರಬೇತಿ ಹಾಗೂ ತಾಂತ್ರಿಕ ವ್ಯವಸ್ಥೆಗಳನ್ನು ಕಾಲಕಾಲಕ್ಕೆ ಮಾಡಿಕೊಡಲು ಬ್ಯಾಂಕ್ ಸದಾ ಸಿದ್ಧವಿದೆ. ತಂತ್ರಜ್ಞಾನ ಬದಲಾದಂತೆ ಸಿಬ್ಬಂದಿಗಳು ಕೂಡ…

Read More

ಮೂಡುಬಿದಿರೆ: ಕಳೆದ ಒಂದೂವರೆ ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕೊನೆಗೂ ನ್ಯಾಯಾಲಯ ಅನುಮತಿ ನೀಡಿದೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ 11.30ಕ್ಕೆ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ 2025ರ ಜುಲೈ 10ರಂದು ಚುನಾವಣೆ ನಡೆದಿತ್ತು. ಆದರೆ ಸಂಘದ ಉಪನಿಯಮಾವಳಿ ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆಗೆ ತಡೆ ವಿಧಿಸಲಾಗಿತ್ತು. ಆಡಳಿತಾಧಿಕಾರಿಗಳ ಅವಧಿಯಲ್ಲೇ ಚುನಾವಣೆ ನಡೆದಿದ್ದರೂ, ಕಾನೂನು ಹೋರಾಟದ ಕಾರಣದಿಂದ ಫಲಿತಾಂಶವನ್ನು ಕಾಯ್ದಿರಿಸಲಾಗಿತ್ತು. ಈ ನಡುವೆ, ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯದಲ್ಲಿ ದಾಖಲಾಗಿದ್ದ ದಾವೆ ಪ್ರಕರಣದ…

Read More

ಹೊಸ ನಿಯಮಗಳು ತಕ್ಷಣ ಜಾರಿಗೆ ನವದೆಹಲಿ: ಸಹಕಾರಿ ಬ್ಯಾಂಕಿಂಗ್ ವಲಯದಲ್ಲಿ ಆಡಳಿತ ಮಾನದಂಡಗಳನ್ನು ಬಲಪಡಿಸುವ ಮಹತ್ವದ ಕ್ರಮವೊಂದರಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್, ನಗರ ಸಹಕಾರಿ ಬ್ಯಾಂಕುಗಳು ಮತ್ತು ಗ್ರಾಮೀಣ ಸಹಕಾರಿ ಬ್ಯಾಂಕುಗಳಿಗೆ ಅಂತಿಮ ತಿದ್ದುಪಡಿ ನಿರ್ದೇಶನಗಳನ್ನು ಹೊರಡಿಸಿದ್ದು, ಒಂದೇ ಬ್ಯಾಂಕಿನ ಮಂಡಳಿಯಲ್ಲಿ 10 ವರ್ಷಗಳ ನಿರಂತರ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ನಿರ್ದೇಶಕರಿಗೆ ಕಡ್ಡಾಯವಾಗಿ ಮೂರು ವರ್ಷಗಳ ಕೂಲಿಂಗ್-ಆಫ್ ಅವಧಿಯನ್ನು ಪರಿಚಯಿಸಿದೆ. https://chat.whatsapp.com/FCEnlTkAKCC0MGPhXtX4i4 ಈ ಬಗ್ಗೆ ಅಭಿಪ್ರಾಯಗಳನ್ನು ಕೋರಿ ಆರ್‌ಬಿಐ ಜನವರಿ 8ರಂದು ಕರಡು ತಿದ್ದುಪಡಿ ನಿರ್ದೇಶನಗಳನ್ನು ಬಿಡುಗಡೆ ಮಾಡಿತ್ತು. ಈ ಬಗ್ಗೆ ಸ್ವೀಕರಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ರಿಸರ್ವ್‌ ಬ್ಯಾಂಕ್ ಈಗ ಸೂಕ್ತ ಮಾರ್ಪಾಡುಗಳೊಂದಿಗೆ ಅಂತಿಮ ನಿರ್ದೇಶನಗಳನ್ನು ನೀಡಿದೆ. ಹೊಸ ಮಾನದಂಡಗಳು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 10A(2A)(i) ನ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಕೆಲವೊಮ್ಮೆ ನಿರ್ದೇಶಕರು ಸಂಕ್ಷಿಪ್ತವಾಗಿ ರಾಜೀನಾಮೆ ನೀಡುವ ಮೂಲಕ ಮತ್ತು ನಂತರ ಮಂಡಳಿಗೆ ಮರು ಆಯ್ಕೆಯಾಗುವ ಅಥವಾ ಮರು ನೇಮಕಗೊಳ್ಳುವ ಮೂಲಕ ಕಾನೂನಿನ…

Read More

ಶಿರ್ತಾಡಿ: ಶಿರ್ತಾಡಿಯ ಮೈತ್ರಿ ಸೌಧದಲ್ಲಿ ಪ್ರಧಾನ ಕಚೇರಿ ಹೊಂದಿರುವ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಶನಿವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸೌಹಾರ್ದ ಸಹಕಾರಿಗಳ ಮಾತೃಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಸೌಹಾರ್ದ ಸಹಕಾರಿ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಾತ್ಮಕ, ಶಿಕ್ಷಣ, ತರಬೇತಿ ಮತ್ತು ಪ್ರಚಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ಇದರ ಭಾಗವಾಗಿ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಲಾಗಿದೆ. ಭೇಟಿಯ ಸಂದರ್ಭದಲ್ಲಿ ಸಂಯುಕ್ತ ಸಹಕಾರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ನಾರಾಯಣ ಹೆಗ್ಡೆ, ತರಬೇತಿ ಅಧಿಕಾರಿ ವಿ.ಜೆ ಕಾರಕೋನ್, ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜಶೇಖರ ಹೂಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಶ್ರೀಧರ್, ಸಹಕಾರ ಇಲಾಖೆಯ ನಿವೃತ್ತ ಅಪರ ನಿಬಂಧಕ ನಾಗರಾಜಯ್ಯ ಭಾಗವಹಿಸಿದ್ದರು. ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ ಶೆಟ್ಟಿ, ಉಪಾಧ್ಯಕ್ಷ ವಿನಯ ಹೆಗ್ಡೆ, ನಿರ್ದೇಶಕರಾದ ಮಹಾವೀರ…

Read More

ವಿಶ್ವಕರ್ಮ ಸಹಕಾರ ಬ್ಯಾಂಕಿನ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎ ಶಾಂತಾರಾಮ ಶೆಟ್ಟಿ ಶ್ಲಾಘನೆ ಮಂಗಳೂರು: ಐವತ್ತು ವರ್ಷಗಳ ಹಿಂದೆ ಬಿ.ಹರೀಶ್ಚಂದ್ರ ಆಚಾರ್ಯ ಅವರು ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಸಹಯೋಗದೊಂದಿಗೆ ನೆಟ್ಟ ಸಣ್ಣ ಸಸಿ ಇಂದು ವಿಶ್ವಕರ್ಮ ಸಹಕಾರ ಬ್ಯಾಂಕ್‌ ಎಂಬ ಹೆಸರಿನೊಂದಿಗೆ ವಿಶಾಲವಾಗಿ ಬೆಳೆದು ನಿಂತಿದೆ. ಮೂಲಭೂತವಾಗಿ ಒಂದು ಆರ್ಥಿಕ ಸಂಸ್ಥೆಯಾಗಿದ್ದರೂ, ಕೇವಲ ಹಣಕಾಸಿನ ವ್ಯವಹಾರವಷ್ಟೇ ಅಲ್ಲದೆ, ನಿರಂತರ ಸ್ವಚ್ಛ ಭಾರತ ಅಭಿಯಾನ, ಸದಸ್ಯರ ಮರಣ, ಅಪಘಾತ ಹಾಗೂ ಇನ್ನಿತರ ಸಂದರ್ಭದಲ್ಲಿ ಸಾಂತ್ವನ ಯೋಜನೆಯ ಹೆಸರಿನಲ್ಲಿ ನಿಧಿ ಸ್ಥಾಪಿಸಿ ಸಮಾಜಮುಖಿಯಾಗಿಯೂ ಮುಂಚೂಣಿಯಲ್ಲಿ ನಿಂತು ವಿಶ್ವಕರ್ಮ ಬ್ಯಾಂಕ್‌ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಜೊತೆ, ತಮ್ಮ ಸದಸ್ಯರ ಜೊತೆ ನಾವಿದ್ದೇವೆ ಎಂಬ ಭಾವನೆ ಮೂಡಿಸಿ ಸದಸ್ಯರ ಸಮಗ್ರ ಕಲ್ಯಾಣದ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷರಾದ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಮಲ್ಲಿಕಟ್ಟೆಯ ಲಯನ್ಸ್‌ ಸೇವಾ ಮಂದಿರದಲ್ಲಿ ಶನಿವಾರ ವಿಶ್ವಕರ್ಮ ಸಹಕಾರ ಬ್ಯಾಂಕಿನ ಸ್ವರ್ಣ…

Read More

ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ “ವಿಶ್ವಸೌಧ”ಕ್ಕೆ ಇತ್ತೀಚೆಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಐಎಎಸ್‌ ಭೇಟಿ ನೀಡಿದರು. https://chat.whatsapp.com/FCEnlTkAKCC0MGPhXtX4i4 ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರು ಕೆ.ಎಸ್. ಪ್ರಭಾಕರ್ ಅವರನ್ನು ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದರು. ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳನ್ನು ಮತ್ತು ನಡೆದು ಬಂದ ದಾರಿಯನ್ನು ಪರಿಶೀಲಿಸಿ ದಕ್ಷಿಣ ಕನ್ನಡದಲ್ಲಿ ತನ್ನ ವಿಶಿಷ್ಟ ಛಾಪು ಮೂಡಿಸಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಕಾರ್ಯಾಚರಣೆ ಮತ್ತು ಪ್ರಮುಖ ಸಾಮರ್ಥ್ಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಕೆ.ಎಸ್. ಪ್ರಭಾಕರ್ ಅವರು ಶ್ಲಾಘಿಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ದಿ| ಪಾಲ್ಕೆ ಬಾಬುರಾಯ ಆಚಾರ್ಯರ ನೇತೃತ್ವದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಹೆಸರು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು. ಸೊಸೈಟಿಯ ನಿರ್ದೇಶಕರಾದ ವಿ.ಜಯ ಆಚಾರ್, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್…

Read More

ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಆಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ జిಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ 2025-26ನೇ ಸಾಲಿನಲ್ಲೂ ಎಪಿವೈ ರಾಷ್ಟ್ರೀಯ ವಾರ್ಷಿಕ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ಐದನೇ ಬಾರಿಗೆ ತನ್ನ ಮುಡಿಗೇರಿಸಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಕೇಂದ್ರ ಸರಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ 11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ಬ್ಯಾಂಕ್‌ನ ಪ್ರತೀ ಶಾಖೆಯಲ್ಲೂ ಅಟಲ್ ಪಿಂಚಣಿ ಚಂದಾದಾರರನ್ನು ನೊಂದಾಯಿಸುವ ಗುರಿಯನ್ನು ಪ್ರತಿವರ್ಷ ನೀಡುತ್ತ ಬಂದಿದೆ. 2025-26ನೇ ಸಾಲಿಗೆ ಬ್ಯಾಂಕ್ ಪ್ರತೀ ಶಾಖೆಗೆ 20 ಚಂದಾದಾರರ ದಾಖಲಾತಿಯನ್ನು ನೀಡಿದ್ದು ಅದರಂತೆ ತನ್ನ 111 ಶಾಖೆಗಳಿಗೆ ಒಟ್ಟು 2,260 ಚಂದಾದಾರರನ್ನು ನೊಂದಾಯಿಸುವ ಗುರಿ ನೀಡಿತ್ತು. ಎಲ್ಲ ಶಾಖೆಗಳ ಮುಖಾಂತರ ಒಟ್ಟು 3,790 ಚಂದಾದಾರರನ್ನು ನೊಂದಾಯಿಸಿ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕ್ ತನ್ನ ಸಾಮೂಹಿಕ ಪ್ರಯತ್ನ ಮತ್ತು…

Read More

ಮಂಗಳೂರು: ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ಸದಸ್ಯರು ಶುಕ್ರವಾರ ಎಂಸಿಸಿ ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. https://chat.whatsapp.com/FCEnlTkAKCC0MGPhXtX4i4 ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳುವುದು, ಬ್ಯಾಂಕಿಂಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಕಾರ್ಯಾಚರಣ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ೧೩ ಮಂದಿ ಆಡಳಿತ ಮಂಡಳಿಯ ಹಿರಿಯ ನಿರ್ದೇಶಕರು ಭೇಟಿಯಲ್ಲಿ ಪಾಲ್ಗೊಂಡಿದ್ದರು. ಡ್ಯಾಶೆನ್ ಬ್ಯಾಂಕ್ ದೇಶದಾದ್ಯಂತ ೯೦೦ಕ್ಕೂ ಅಧಿಕ ಶಾಖೆಗಳು, ೯ ವಿದೇಶಿ ವಿನಿಮಯ ಕೇಂದ್ರಗಳು, ೧೧೦೦ಕ್ಕೂ ಅಧಿಕ ಎಟಿಎಂಗಳು ಹಾಗೂ ೨,೦೦೦ಕ್ಕೂ ಅಧಿಕ ಪಾಯಿಂಟ್-ಆಫ್-ಸೇಲ್ (POS) ಟರ್ಮಿನಲ್‌ಗಳ ಜಾಲವನ್ನು ಹೊಂದಿದೆ. ಎಂಸಿಸಿ ಬ್ಯಾಂಕಿನ ಐಟಿ ವಿಭಾಗದ ಮುಖ್ಯಸ್ಥ ಆಲ್ವಿನ್ ಡಿಸೋಜ ಸ್ವಾಗತಿಸಿ, ಈ ಭೇಟಿ…

Read More

ಬ್ಯಾಂಕಿಂಗ್ ಕಾರ್ಯದ ಜೊತೆ ಸಮಾಜಮುಖಿ ಕೆಲಸಕ್ಕೆ ಸ್ಪೀಕರ್ ಯು.ಟಿ ಖಾದರ್ ಶ್ಲಾಘನೆ ಹಳೆಯಂಗಡಿ: ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಹಳೆಯಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಆರಂಭಗೊಂಡಿದ್ದು ಕೇವಲ ಐದು ವರ್ಷಗಳಲ್ಲಿ ಜನರ ವಿಶ್ವಾಸ ಗಳಿಸಿ ನಾಲ್ಕು ಶಾಖೆಯನ್ನು ಆರಂಭಿಸಿದೆ. ಬ್ಯಾಂಕಿಂಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವ ಸಂಸ್ಥೆಯು ಮುಂದಿನ 25ನೇ ವರ್ಷಕ್ಕೆ ನೂರು ಶಾಖೆಯನ್ನು ಹೊಂದಲಿ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್ ಹಾರೈಸಿದರು. https://chat.whatsapp.com/FCEnlTkAKCC0MGPhXtX4i4 ಹಳೆಯಂಗಡಿಯ ಹರಿಓಂ ಕಟ್ಟಡದ ಆವರಣದಲ್ಲಿ ಬುಧವಾರ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ವರ್ಷದ ಸಂಭ್ರಮಾಚರಣೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮೂಲ್ಕಿಸೀಮೆ ಅರಸರು ಹಾಗೂ ಬಪ್ಪನಾಡು ಕ್ಷೇತ್ರದ ಆನುವಂಶಿಕ ಮೊಕ್ತೇಸರ ಎಂ.ದುಗ್ಗಣ್ಣ ಸಾವಂತರು ಮಾತನಾಡಿ ಬಡವರಿಗಾಗಿ ರಾಷ್ಟ್ರೀಕರಣ ಮೂಲಕ ಬ್ಯಾಂಕ್ ಬಾಗಿಲನ್ನು ತೆರೆಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪ್ರಿಯದರ್ಶಿನಿ ಎಂಬ ಹೆಸರಿನಲ್ಲಿ ಕೋವಿಡ್ ಸಂದರ್ಭದಲ್ಲಿ ಸರಳವಾಗಿ ಆರಂಭಗೊಂಡ ಬ್ಯಾಂಕ್ ಇಂದು 5ನೇ…

Read More