Author: admin
ಮೂಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ದಿನಾಚರಣೆ ಮಂಗಳವಾರ ಸಂಘದ ಸಭಾಭವನದಲ್ಲಿ ನಡೆಯಿತು. ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಮುಖ್ಯವಾಗಿದ್ದು,ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ ಸಹಕಾರಿ ಸಂಘ ಬೆಳೆಯಲು ಮಹಿಳೆಯರ ಪಾತ್ರ ಪ್ರಮುಖವಾಗಿದ್ದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸಂಘವು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಮೂಲಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿ ಶುಭ ಹಾರೈಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮುಕ್ಕ ಮೆಸ್ಕಾಂ ಸೆಕ್ಷನ್ ಆಫೀಸರ್ ಯಶೋಧರ್ ಸಾಲ್ಯಾನ್, ಸೊಸೈಟಿ ನಿರ್ದೇಶಕರಾದ ಉಮಾನಾಥ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್, ನವೀನ್ ಸಾಲ್ಯಾನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಸಹಾಯ ಗುಂಪುಗಳ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು. ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ…
ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವವು ಭಾನುವಾರ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ಪದ್ಮನಾಭ ಎಂ ಇವರ ಉಪಸ್ಥಿತಿಯಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿಯ ಅಧ್ಯಕ್ಷರಾದ ಕೆ.ಭಾಸ್ಕರ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. 2026ರ ಹೊಸ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಪದ್ಮನಾಭ ಎಂ, ಮಂಗಳೂರು ಸೌಹಾರ್ದ ಸಹಕಾರಿ ಸಂಘವು ಹಲವು ಉತ್ತಮ ಕಾರ್ಯಗಳನ್ನು ಸದಸ್ಯರಿಗೆ ನೀಡುತ್ತಾ ಉತ್ತಮ ಸೇವೆ ಮಾಡುತ್ತಿದೆ. ಈ ಸಹಕಾರಿಗೆ ತನ್ನಿಂದ ಆಗುವ ಹೆಚ್ಚಿನ ಸಲಹೆಗಳನ್ನು ನೀಡುತ್ತ ಸಹಕಾರಿಯ ಎಲ್ಲಾ ಆಗುಹೋಗುಗಳ ಬಗ್ಗೆ ಸಹಕಾರ ನೀಡುವ ಭರವಸೆ ನೀಡಿದರು. ಸಂಘದ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ವಂದಿಸಿದರು. ಜಾನ್ಸನ್ ಮಾಟಿನ, ರತನ್ ಕುಮಾರ್, ರಾಜಶೇಖರ್, ಸದಾಶಿವ ಅಮೀನ್ ಕಾರ್ಯಕ್ರಮ ನಡೆಸಿಕೊಟ್ಟರು. ಉಪಾಧ್ಯಕ್ಷರಾದ ಕೃಷ್ಣ ಭಟ್, ನಿರ್ದೇಶಕರದ ಕೆ.ವಿಜೇತಾ ರಾವ್, ಲತಾ ಎನ್ ಆಳ್ವ, ಸುಪ್ರೀತ ಜೆ.ಕೆ, ಸುಂದರ ಸಾಲ್ಯಾನ್, ಜೆ.ಸದಾಶಿವ ಅಮೀನ್, ಪೂರ್ಣಿಮಾ ಬಿ.ರಾವ್, ಜಯಪ್ರಕಾಶ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL:…
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ನೂತನ ಶಾಖೆ ಧರ್ಮಸ್ಥಳದಲ್ಲಿ ನವೆಂಬರ್ 13ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ನವೆಂಬರ್ 13ರ ಗುರುವಾರ ಬೆಳಿಗ್ಗೆ 10.30ಕ್ಕೆ ಅಂಚೆ ಕಚೇರಿ ಬಳಿಯ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಮೊದಲನೇ ಮಹಡಿಯಲ್ಲಿ ಶಾಖಾ ಕಛೇರಿ ಉದ್ಘಾಟನೆಯಾಗಲಿದೆ. ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೊರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಎಂ.ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್., ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ,…
ಮಂಗಳೂರು: ಸ್ವಾತಂತ್ಯ ಹೋರಾಟದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮಸ್ಥೈರ್ಯ ತುಂಬಿದ್ದ, ಶಾಂತಿಯ ಕ್ರಾಂತಿಗೆ ಧ್ವನಿ ತುಂಬಿದ್ದ ವಂದೇ ಮಾತರಂ ರಾಷ್ಟ್ರೀಯ ಗೀತೆಗೆ ಈಗ 150ರ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ರಾಮಕೃಷ್ಣ ಮಠದ ಸಹಯೋಗದೊಂದಿಗೆ ನವೆಂಬರ್ 16ರಂದು ವಂದೇ ಮಾತರಂ ವಿಶೇಷ ಕಾರ್ಯಕ್ರಮ ಪ್ರಸ್ತುತಪಡಿಸಲಾಗುತ್ತಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದ ಅಂಗವಾಗಿ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 5ರಿಂದ ನಾಡಿನ ಹೆಮ್ಮೆಯ ಹೆಸರಾಂತ ಸುಮಧುರ ಕಂಠದ ಗಾಯಕ ಶಂಕರ್ ಶಾನಭಾಗ್ ಬೆಂಗಳೂರು, ಇವರಿಂದ ದೇಶಭಕ್ತಿ ಉದ್ದೀಪನಗೊಳಿಸುವ ವಂದೇ ಮಾತರಂ (ತಾಯೇ ವಂದಿಸುವೆ) ದೇಶಭಕ್ತಿ ಗೀತೆಗಳ ಗಾಯನ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶಭಕ್ತ ನಾಗರಿರು ಪಾಲ್ಗೊಳ್ಳುವಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್ ಗುರುರಾಜ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL:…
ರಾಷ್ಟ್ರೀಯ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ಒಕ್ಕೂಟದ ಸಮಾವೇಶದಲ್ಲಿ ಕರ್ನಾಟಕದ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಅಭಿಪ್ರಾಯ ನವದೆಹಲಿ: ಇಲ್ಲಿನ ವಿಜ್ಞಾನ ಭವನದಲ್ಲಿ ಸೋಮವಾರ ಆರಂಭವಾದ ಕೂಪ್ ಕುಂಭ – 2025 ಅಂತಾರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕದ ಕಾನೂನು, ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮತ್ತು ರಾಷ್ಟ್ರೀಯ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ಒಕ್ಕೂಟ (NAFCUB)ದ ಅಧ್ಯಕ್ಷರಾದ ಹೆಚ್.ಕೆ. ಪಾಟೀಲ್, ಭಾರತದ ನಗರ ಸಹಕಾರಿ ಬ್ಯಾಂಕಿಂಗ್ ವಲಯವನ್ನು ಬಲಪಡಿಸಲು ಹೊಸದಾದ ನೀತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಅವರ ಸಮ್ಮುಖದಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ ಹೆಚ್.ಕೆ ಪಾಟೀಲ್ ಅವರು, ಸಹಕಾರಿ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಬಾಕಿ ಇರುವ ಸವಾಲುಗಳನ್ನು ಪರಿಹರಿಸುವಲ್ಲಿ NAFCUB ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ನೊಂದಿಗೆ ಸಹಕಾರ ಸಚಿವಾಲಯವು ಕೂಡ ತೊಡಗಿಸಿಕೊಂಡಿರುವುದನ್ನು ಶ್ಲಾಘಿಸಿ, ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದು ಕೇವಲ ಆರಂಭ…
ಎರಡು ಆ್ಯಪ್ ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಹೇಳಿಕೆ ನವದೆಹಲಿ: ನಗರ ಸಹಕಾರಿ ಬ್ಯಾಂಕ್ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್ ಆ್ಯಪ್ಗಳಿಗೆ ಸೋಮವಾರ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಚಾಲನೆ ನೀಡಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಸಕ್ತ ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕುಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕುಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಅಮಿತ್ ಷಾ ಹೇಳಿದರು. ದೇಶದ ಸಹಕಾರ ವಲಯದ ಅನುತ್ಪಾದಕ ಆಸ್ತಿ (ಎನ್ಪಿಎ) ಕಳೆದ ಎರಡು ವರ್ಷದ ಹಿಂದೆ ಶೇಕಡ 2.8ರಷ್ಟಿತ್ತು. ಈಗ ಶೇ.0.6ಕ್ಕೆ ಇಳಿದಿದೆ. ಬ್ಯಾಂಕ್ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದು ಅಮಿತ್ ಷಾ ವಿವರಿಸಿದರು. ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು…
ಬೆಳಗಾವಿ: ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ ಜೊಲ್ಲೆ, ರಾಜು ಕಾಗೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, ರಾಜು ಕಾಗೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಆ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕಿಗೆ ಆಗಮಿಸಿ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ನೂತನ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಬ್ಯಾಂಕ್ ನಂ.1 ಸ್ಥಾನಕ್ಕೆ ಹೋಗಲಿದೆ-ಬಾಲಚಂದ್ರ ಜಾರಕಿಹೊಳಿ ವಿಶ್ವಾಸ: ಅಣ್ಣಾಸಾಹೇಬ ಜೊಲ್ಲೆ ಬೆಳಗಾವಿಯ ಮನಮೋಹನ್ ಸಿಂಗ್ ಇದ್ದಂತೆ. ಆರ್ಥಿಕ ತಜ್ಞರೂ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರ ಆಡಳಿತದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಲ್ಲಿ 6,500 ಕೋಟಿ ರೂ. ಇರುವ ಠೇವಣಿಯನ್ನು 10 ಸಾವಿರ ಕೋಟಿಗೆ ಹೆಚ್ಚಿಸಲಿದ್ದು, ರಾಜ್ಯದಲ್ಲೇ ನಂ.1 ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ಬೆಳಗಾವಿ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…
ಮಂಗಳೂರು: ಎಂಸಿಸಿ ಬ್ಯಾಂಕ್ ತನ್ನ ಅರ್ಧವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ಶನಿವಾರ ಮಂಗಳೂರಿನ ಆಡಳಿತ ಕಚೇರಿಯಲ್ಲಿ ನಡೆಸಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸಮರ್ಪಿತ ಪ್ರಯತ್ನಗಳಿಂದ ನಿರ್ದಿಷ್ಟ ಗುರಿ ಸಾಧಿಸಿದ ಬ್ಯಾಂಕಿನ ಶಾಖೆಯ ಸಿಬ್ಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ನಿರಂತರ ಬೆಳವಣಿಗೆ ಸಾಧಿಸಲು ಗಮನ ಹರಿಸಬೇಕಾದ ವಿಷಯಗಳ ಬಗ್ಗೆ ಗಮನ ಸೆಳೆದ ಅವರು, ಸಿಬ್ಬಂದಿಗಳ ಕಾರ್ಯಾಚರಣೆಯ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುವ ಅಸಮರ್ಥತೆಯನ್ನು ಗುರುತಿಸಿ ಸರಿಪಡಿಸುವಂತೆ ಸಲಹೆ ನೀಡಿದರು. ಬ್ಯಾಂಕಿನ ನ್ಯೂನತೆಗಳನ್ನು ಗುರುತಿಸುವಲ್ಲಿ ಮತ್ತು ಸಿಬ್ಬಂದಿಯನ್ನು ಹೆಚ್ಚಿನ ದಕ್ಷತೆಯತ್ತ ಕೊಂಡೊಯ್ಯುವಲ್ಲಿ ಮಾರ್ಗದರ್ಶನ ನೀಡಿದ ಆಡಳಿತ ಕಛೇರಿಯ ಎಲ್ಲಾ ವಿಭಾಗದ ಮುಖ್ಯಸ್ಥರ ಪ್ರಯತ್ನಗಳನ್ನು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿಗೆ ಅನುಗುಣವಾಗಿ ಬೆಳವಣಿಗೆ ಖಚಿತಪಡಿಸಿಕೊಳ್ಳಲು ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ತಮ್ಮ ಶಾಖೆಯ ಸಿಬ್ಬಂದಿಗೆ ಸಂಪೂರ್ಣವಾಗಿ ತರಬೇತಿ ನೀಡಬೇಕೆಂದು ಅವರು ಶಾಖಾ…
ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ಅಂತಾರಾಷ್ಟ್ರೀಯ ಸಮ್ಮೇಳನ ಕೋ ಆಪ್ ಕುಂಭ್ -2025 ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಘೋಷಣೆ ನವದಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಅಡಿಯಲ್ಲಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕುಗಳು ಮತ್ತು ಸಹಕಾರಿ ಸಾಲ ಸಂಘಗಳು ಹೊಸ ಉತ್ಸಾಹದಿಂದ ಕಾರ್ಯನಿರತವಾಗಿವೆ. ಮುಂದಿನ ಐದು ವರ್ಷಗಳಲ್ಲಿ, ಎರಡು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪ್ರತಿ ನಗರಗಳಲ್ಲೂ ಅರ್ಬನ್ ಸಹಕಾರಿ ಬ್ಯಾಂಕುಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಹೇಳಿದರು. ನವದೆಹಲಿಯಲ್ಲಿ ಸೋಮವಾರ ಆರಂಭವಾದ ಅರ್ಬನ್ ಕೋ ಆಪರೇಟಿವ್ ಬ್ಯಾಂಕುಗಳ ಮತ್ತು ಕ್ರೆಡಿಟ್ ವಲಯದ ಸೊಸೈಟಿಗಳ ಅಂತಾರಾಷ್ಟ್ರೀಯ ಸಮ್ಮೇಳನ “ಕೋ-ಆಪ್ ಕುಂಭ್ 2025” ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ವಲಯವನ್ನು ಆಧುನೀಕರಿಸಲು, ಅದರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಹಕಾರ ಸಚಿವಾಲಯವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ ಸಚಿವರು, ಈ ಅಂತಾರಾಷ್ಟ್ರೀಯ ಸಮ್ಮೇಳನದ ‘ದೆಹಲಿ…
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತಗೊಂಡ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಇವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಸೋಮವಾರ ಗೌರವಿಸಿ ಅಭಿನಂದಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ಪುಷ್ಪಲತಾ ಎಸ್.ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
