Author: admin

ಭಾರತದಲ್ಲಿ ಕ್ಷೀರೋತ್ಪಾದನೆ ಹೆಚ್ಚಿಸಿ, ಹಾಲಿನ ಅರಿವು ಮೂಡಿಸಿದ ಸಾಧನೆ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಹಾಲು ಎಂದರೆ ಅದು ಸಂಪೂರ್ಣ ಆಹಾರ ಎಂದು ಪರಿಗಣಿಸಲಾಗುತ್ತದೆ. ಹಸುವಿನ ಹಾಲಿನಲ್ಲಿ ದೇಹವನ್ನು ಪೋಷಿಸುವ ಎಲ್ಲಾ ಪೂರಕ ಅಂಶಗಳಿವೆ ಎಂಬುದು ಜನಜನಿತ. ಹಸುವಿನ ಹಾಲು ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಗತ್ಯ ಆಹಾರ. ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ವೈದ್ಯರು ಪ್ರತಿನಿತ್ಯ ಹಾಲು ಕುಡಿಯಲು ಶಿಫಾರಸು ಮಾಡುತ್ತಾರೆ. ಹಾಲಿನಿಂದ ನಮಗೆ ಸಿಗಬಹುದಾದ ಆರೋಗ್ಯ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ತಿಳಿಸಲು ಮತ್ತು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸಲು ಕ್ಷೀರಕ್ರಾಂತಿಯ ಪಿತಾಮಹರಾದ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನವಾದ ನವೆಂಬರ್ 26ರಂದು ಭಾರತದಲ್ಲಿ ರಾಷ್ಟ್ರೀಯ ಹಾಲು ದಿನ ಎಂದು ಆಚರಿಸಲಾಗುತ್ತಿದೆ. 2023-24ರ ಅಂಕಿ ಅಂಶಗಳ ಪ್ರಕಾರ, ಭಾರತವು ವಿಶ್ವದ ಅತಿ ದೊಡ್ಡ ಹಾಲು ಉತ್ಪಾದಕ ರಾಷ್ಟ್ರವಾಗಿ ಮೂಡಿಬಂದಿದೆ. ಜಾಗತಿಕ ಹಾಲು ಉತ್ಪಾದನೆಯಲ್ಲಿ ಶೇಕಡಾ 24ರಷ್ಟು ಪಾಲು ಭಾರತದ್ದೇ ಆಗಿದೆ. 2023-24ರ ಅವಧಿಯಲ್ಲಿ ಹಾಲು ಉತ್ಪಾದನೆಯು ಸುಮಾರು 4%…

Read More

ಮಂಗಳೂರು: ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವತಿಯಿಂದ 14ನೇ ಎಟಿಎಂ ಅನ್ನು ಶನಿವಾರ ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್‌ನಲ್ಲಿ ಉದ್ಘಾಟಿಸಲಾಯಿತು. ಗುರುವಾಯೆನೆಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಉದ್ಘಾಟಿಸಿದರು. ಎಟಿಎಂ ಅನ್ನು ಬದ್ಯಾರ್‌ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ ಫಾ| ರೋಶನ್ ಕ್ರಾಸ್ತ ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಉಜಿರೆಯ ಅನುಗ್ರಹ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ಫಾ| ವಿಜಯ್ ಲೋಬೊ ನೆರವೇರಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಹೋಲಿ ರೆಡಿಮರ್ ಅಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ಕ್ಲಿಫರ್ಡ್ ಪಿಂಟೊ ಅತಿಥಿಯಾಗಿದ್ದರು. ಸಹಕಾರ ರತ್ನ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬೆಳ್ತಂಗಡಿ ಶಾಖೆಯ ಗ್ರಾಹಕರು ಶಾಖೆಯ ಪ್ರಾರಂಭದ ವರ್ಷದಲ್ಲಿ 10 ಕೋಟಿ ರೂ. ವಹಿವಾಟು ಸಾಧಿಸಲು ನೀಡಿದ ಬೆಂಬಲಕ್ಕಾಗಿ ಧನ್ಯವಾದ…

Read More

ಉಡುಪಿಯಲ್ಲಿ ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನಅನಿಲ್‌ ಲೋಬೊ ಅಭಿಪ್ರಾಯ ಮಂಗಳೂರು: ಎಂಸಿಸಿ ಬ್ಯಾಂಕಿನ ಉಡುಪಿ ಶಾಖೆಯ ಗ್ರಾಹಕರ ನಿರಂತರ ಬೆಂಬಲದಿಂದ ಶಾಖೆಯ ಪ್ರಗತಿ ದಾಖಲಾಗಿದ್ದು, ಇದು ಇಲ್ಲಿ ಎಟಿಎಂ ಸೌಲಭ್ಯವನ್ನು ನೀಡಲು ಪ್ರಮುಖ ಪಾತ್ರ ವಹಿಸಿದೆ. ಈ ಬೆಳವಣಿಗೆಯನ್ನು ಗ್ರಾಹಕರು ಮತ್ತು ಬ್ಯಾಂಕಿನ ಸಾಮೂಹಿಕ ಶಕ್ತಿ, ಏಕತೆ ಮತ್ತು ನಂಬಿಕೆಯ ಮೂಲಕ ಸಾಧಿಸಲಾಗಿದೆ. ಪ್ರೀತಿ, ಸಮರ್ಪಣಾ ಭಾವ ಮತ್ತು ಪ್ರಾಮಾಣಿಕತೆ ಇರುವಲ್ಲಿ ಯಶಸ್ಸು ಸ್ವಾಭಾವಿಕವಾಗಿರುತ್ತದೆ ಎಂದು ಎಂಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್‌ ಲೋಬೊ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಎಂಸಿಸಿ ಬ್ಯಾಂಕಿನ 15ನೇ ಎಟಿಎಂ ಅನ್ನು ಭಾನುವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್ ಭವಿಷ್ಯದ ಬಗ್ಗೆ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದು, ಜನರ ಹಣದ ಜವಾಬ್ದಾರಿ ಮತ್ತು ಹಣಕಾಸಿನ ವಹಿವಾಟುಗಳನ್ನು ವಿವೇಕದಿಂದ ನಿರ್ವಹಿಸುವುದನ್ನು ನೋಡಿಕೊಳ್ಳುಲಾಗುತ್ತಿದೆ. ಸಾಲವನ್ನು ಎಚ್ಚರಿಕೆಯಿಂದ ನೀಡಬೇಕು ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸಾಲಗಳ ನಿಯಮಿತ…

Read More

ಮಂಗಳೂರು: ಬಹುನಿರೀಕ್ಷಿತ ಕ್ಯಾಂಪ್ಕೋ ಚುನಾವಣಾ ಪ್ರಕ್ರಿಯೆಯು ಮುಗಿದು ಮತ ಎಣಿಕೆ ಮಂಗಳವಾರ ನಡೆದಿದ್ದು ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಭಾರತಿಯಿಂದ ಸ್ಪರ್ಧಿಸಿದ್ದ ಮುರಳಿಕೃಷ್ಣ ಕೆ.ಎನ್(2261 ಮತ), ಪುರುಷೋತ್ತಮ್ ಭಟ್(2249), ಮಹೇಶ್ ಚೌಟ(2216), ಎಸ್ ಆರ್ ಸತೀಶ್ಚಂದ್ರ (2181), ದಯಾನಂದ ಹೆಗ್ಡೆ (2163) ಮತ್ತು ಎ.ವಿ.ತೀರ್ಥರಾಮ(2052) ಮೇಲುಗೈ ಸಾಧಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಸತ್ಯನಾರಾಯಣ ಎಂ.ಜಿ 620, ರಾಮ ಪ್ರತೀಕ್ 623 ಮತ ಪಡೆದಿದ್ದಾರೆ. ಇಂದು ಮತ ಎಣಿಕೆ ನಡೆದರೂ, ಫಲಿತಾಂಶದ ಅಧಿಕೃತ ಘೋಷಣೆ ಶುಕ್ರವಾರ ನಡೆಯಲಿದೆ. ಕ್ಯಾಂಪ್ಕೋ ಆಡಳಿತ ಮಂಡಳಿಯ 19 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಉಳಿದ ಆರು ಸಾಮಾನ್ಯ ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು. ಕರ್ನಾಟಕ ರಾಜ್ಯದ 10 ಹಾಗೂ ಕೇರಳ ರಾಜ್ಯದ ಒಂಬತ್ತು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಕೇರಳದ ಎಲ್ಲಾ ಒಂಬತ್ತು ಹಾಗೂ ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಕರ್ನಾಟಕದಿಂದ…

Read More

ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್‌ 26ರ ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್‌ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ…

Read More

ಕುಂದಾಪುರ: ಕುಂದಾಪುರ ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 2025-26ರಿಂದ 2029-30ರ ತನಕದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಸ್. ಸಚ್ಚಿದಾನಂದ ಚಾತ್ರ, ಉಪಾಧ್ಯಕ್ಷರಾಗಿ ವಿವೇಕ್ ಯು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಇದಕ್ಕೆ ಮೊದಲು ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾ ನಿರ್ವಚನಾಧಿಕಾರಿ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಸಹಾಯಕ ನಿರ್ದೇಶಕರಾದ ವೇಣುಗೋಪಾಲ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಎಸ್.ಸಚ್ಚಿದಾನಂದ ಚಾತ್ರ , ವಿವೇಕ್ ಯು, ಬಿ ಕುಷ್ಠ ನಾಯ್ಕ , ಗಾಯತ್ರಿ ಕಾರಂತ್, ಸುಪ್ರೀತ್ ಎಸ್ ಚಾತ್ರ, ಪ್ರಭಾಕರ ಪೈ, ಪಿ. ಸುಬ್ರಾಯ ಹೆಬ್ಬಾರ್, ನಟರಾಜ್ ಹೆಚ್ , ನವೀನ್ ಚಾತ್ರ , ನಾಗೇಶ್ ರಾವ್ , ರವೀಂದ್ರ ಕನ್ನಂತ, ಮಹಿಳಾ ಮೀಸಲು ಸ್ಥಾನದಿಂದ ಅನಿತಾ ಶಾಸ್ತ್ರಿ ಸುಮಿತ್ರಾ ಬಾಯಿ, ಪರಿಶಿಷ್ಟ ಜಾತಿಯಿಂದ ಟಿ.ರಾಮ, ಪರಿಶಿಷ್ಟ ಪಂಗಡದಿಂದ ಶರಶ್ಚಂದ್ರ ನಾಯ್ಕ್, ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ಚಂದ್ರಕಾಂತ್ ಖಾರ್ವಿ, ಪುಪ್ಪಾ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್ ಉಜಿರೆ ಶಾಖೆಯಲ್ಲಿ ಡಾ. ಎಸ್. ಆರ್. ಹರೀಶ್ ಆಚಾರ್ಯ ಅಭಿಮತ ಬೆಳ್ತಂಗಡಿ: ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆ ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿ. ನಾವು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಹಸ್ತಾಂತರಿಸಬೇಕಾದರೆ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರ ಭಾಗಿದಾರಿಕೆ ಬೇಕು. ಸಾಮಾಜಿಕ ಸಂಘ ಸಂಸ್ಥೆಗಳು ಸ್ವಚ್ಛತೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿಯನ್ನು ಮೂಡಿಸುವತ್ತ ಕಾರ್ಯಪ್ರವೃತರಾಗಬೇಕು ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ಆಶ್ರಯದಲ್ಲಿ “ ಸ್ವಚ್ಛತಾ ಹೀ ಸೇವಾ “ ಧ್ಯೇಯದೊಂದಿಗೆ ಭಾನುವಾರ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೆಪೇಟೆ ಇದರ ಅಧ್ಯಕ್ಷ ಅಬುಬಕ್ಕರ್ ಯು. ಹೆಚ್ ಸುಪ್ರೀಮ್ ಮಾತನಾಡಿ ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆಜೊತೆಗೆ ಸ್ವಚ್ಛತೆಯಂತಹ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ…

Read More

ವಿಜಯಪುರ: ಇಲ್ಲಿನ ಶ್ರೀ ಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ಸಭಾಂಗಣದಲ್ಲಿ ಸಹಕಾರ ಭಾರತಿಯ ವಿಶೇಷ ಸಭೆ ಶುಕ್ರವಾರ ಜರುಗಿತು. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಪ್ರಮುಖ ನಾಯಕರು, ಕಾರ್ಯಕರ್ತರು ಮತ್ತು ಸಂಘಟನಾ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಭಾರತಿ ಮಹಿಳಾ ಪ್ರಕೋಷ್ಠದ ರಾಷ್ಟ್ರೀಯ ಮುಖ್ಯಸ್ಥೆ ಡಾ. ರೇವತಿ ಶೆಂಡೂರ್ನಿಕರ್ ಅವರು ಸಹಕಾರ ಭಾರತಿಯ ಚಟುವಟಿಕೆಗಳು, ಉದ್ದೇಶಗಳು ಮತ್ತು ಬಲವರ್ಧನೆಯ ಕುರಿತು ಮಾರ್ಗದರ್ಶನ ನೀಡಿದರು. ಸಹಕಾರ ಚಳವಳಿಯ ನವೀನ ದಿಕ್ಕುಗಳನ್ನು ವಿಶ್ಲೇಷಿಸಿ, ಸಂಘಟನೆಯ ಮುಂದಿನ ಕಾರ್ಯಯೋಜನೆಗೆ ಸಂಬಂಧಿಸಿದಂತೆ ಅವರು ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಸಭೆಯಲ್ಲಿ ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾದ ಜಿ.ಎನ್. ಪಾಟೀಲ, ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಡಾ. ಎಂ.ಎಸ್. ದಡ್ಡೇನವರ, ವಿಜಯಪುರ ಜಿಲ್ಲಾಧ್ಯಕ್ಷರಾದ ಹರ್ಷ ಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ: ಅಶೋಕ ಜಿಗಳೂರ, ವಿಜಯಪುರ ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲ, ವಿಜಯಪುರ ಸಂಘಟನಾ ಕಾರ್ಯದರ್ಶಿ ದೀಪಕ್ ಶಿಂತ್ರೆ, ಬಾಗಲಕೋಟೆ ಜಿಲ್ಲಾ ಮಹಿಳಾ ಸಂಚಾಲಕಿ ಶೈಲಜಾ ಎಸ್. ಸಂಗಳದ, ಸಹ ಸಂಚಾಲಕಿ: ಸವಿತಾ…

Read More

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಎಂಡಿಸಿಸಿಬಿ) ನೂತನ ಅಧ್ಯಕ್ಷರಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ರಾಜ್ಯದ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿಯವರ ಪುತ್ರ ಸಿ.ಸಚಿನ್‌ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮದ್ದೂರಿನ ಸಿ.ಚಲುವರಾಜು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t 12 ನಿರ್ದೇಶಕರ ಬಲದ ಎಂಡಿಸಿಸಿ ಬ್ಯಾಂಕ್‌ನಲ್ಲಿ ಒಬ್ಬರಷ್ಟೇ ಜೆಡಿಎಸ್‌ ಬೆಂಬಲಿತ ನಿರ್ದೇಶಕರಿದ್ದು, ಉಳಿದ 11 ಮಂದಿಯೂ ಕಾಂಗ್ರೆಸ್‌ ಬೆಂಬಲಿತರು. ಹೀಗಾಗಿ ಕಾಂಗ್ರೆಸ್‌ ಬೆಂಬಲಿಗರ ಪಡೆಗೆ ಅಧಿಕಾರ ಸಿಗುವುದು ಖಚಿತವಾಗಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿತ್ತು. ಕಡೆಗೆ ನಾಗಮಂಗಲ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಸಿ.ಸಚಿನ್‌ ಚಲುವರಾಯಸ್ವಾಮಿ ಅವರ ರಂಗಪ್ರವೇಶವಾಯಿತು. ಬೆಂಗಳೂರಿನ ಕುಮಾರಕೃಪದಲ್ಲಿ ಸಚಿವ ಎನ್‌. ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಜಿಲ್ಲೆಯ ಎಲ್ಲ ಕಾಂಗ್ರೆಸ್‌ ಶಾಸಕರು, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಚಿನ್‌ ಅವರ ಆಯ್ಕೆಯನ್ನೇ ಅಂತಿಮಗೊಳಿಸಲಾಯಿತು. ಉಪಾಧ್ಯಕ್ಷ ಸ್ಥಾನವನ್ನು ಮದ್ದೂರಿಗೆ ಕೊಡಲು ತೀರ್ಮಾನಿಸಿ, ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು…

Read More

ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯ 2026ನೇ ಸಾಲಿನ ಕ್ಯಾಲೆಂಡರನ್ನು ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬಿಡುಗಡೆ ಮಾಡಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿ ಆಶೀರ್ವದಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್, ನಿರ್ದೇಶಕರುಗಳಾದ ಗೌತಮ್ ಜೈನ್, ಉಮಾನಾಥ್ ಜೆ. ಶೆಟ್ಟಿಗಾರ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಸಿಬ್ಬಂದಿಗಳಾದ ಅಕ್ಷತಾ ಶೆಟ್ಟಿ, ಲೋಲಾಕ್ಷಿ, ಪ್ರತೀಕ್ ದೇವಾಡಿಗ ಮತ್ತು ಪ್ರಕಾಶಚಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More