Author: admin

ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಮೂಲಭೂತವಾಗಿ ಒಂದು ಆರ್ಥಿಕ ಸಂಸ್ಥೆ. ಆದರೆ ಆರ್ಥಿಕ ಕಾರ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿಯಾಗಿಯೂ ಕಾರ್ಯತತ್ಪರವಾಗಿರುವುದು ಅತ್ಯಂತ ಸಂತಸದ ವಿಚಾರ. ಸ್ವಚ್ಛತೆಯಂತಹ ಸಮಾಜದ ಮೂಲಭೂತ ಸಂಗತಿಗಳನ್ನು ಕೈಗೆತ್ತಿಕೊಂಡು ಸಾಮಾಜಿಕ ಜಾಗೃತಿಯ ಸ್ವಚ್ಛ ಭಾರತ್ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ರೊಟೇರಿಯನ್ ಪಿಡಿಜಿ ಡಾ. ದೇವದಾಸ್ ರೈ ಹೇಳಿದರು. ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ “ಸ್ವಚ್ಛತಾ ಹೀ ಸೇವಾ” ಧೈಯದೊಂದಿಗೆ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ರೋಟರಿ ಕ್ಲಬ್ ಮಂಗಳೂರು ಕೇಂದ್ರ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ ಅವರು ಸ್ವಚ್ಛ ಭಾರತ್ ನಂತಹ ಸಾಮಾಜಿಕ ಕಾರ್ಯಗಳು ಜನರ ಪರಿಣಾಮಕಾರಿ ಭಾಗೀದಾರಿಕೆಯಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ. ಅದುದರಿಂದ ವಿಶ್ವಕರ್ಮ ಬ್ಯಾಂಕ್ ಆಯೋಜಿಸಿರುವ ಈ ಸಾಮಾಜಿಕ ಕಾರ್ಯದಲ್ಲಿ ನಮ್ಮಂತಹ ಸಂಘಟನೆಗಳು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ…

Read More

ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಎರಡು ದಿನಗಳ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕಡಬ ತಾಲೂಕು ಪತ್ರಕರ್ತರ ಸಂಘ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಸಮಾಜಕ್ಕೆ ಹತ್ತಿರವಾಗಿದೆ, ಪತ್ರಕರ್ತರು ಅಂಚೆ ಇಲಾಖೆಯ ಸಹಯೋಗದೊಂದಿಗೆ ಆಧಾರ್ ಮೇಳ ಮಾಡುತ್ತಿರುವುದು ಉತ್ತಮ ಕಾರ್ಯ, ಅಂಚೆ ಇಲಾಖೆ ಮುಂಚೆಯಿಂದಲೂ ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ, ಇದೀಗ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಆಧಾರ್ ನೋಂದಣಿ, ತಿದ್ದುಪಡಿ , ವಿಮಾ ಯೋಜನೆಗಳನ್ನು ಜನರಿಗೆ ನೀಡುತ್ತಾ ಜನಸ್ನೇಹಿ ಇಲಾಖೆಯಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

Read More

ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ವಿಧಾನ ಪರಿಷತ್‌ ಮಾಜಿ ಸದಸ್ಯ, ಹಿರಿಯ ವಕೀಲರಾದ ಮೋನಪ್ಪ ಭಂಡಾರಿ ಅಭಿಪ್ರಾಯ ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ತನ್ನ ಸ್ಥಾಪನಾ ದಿನದ ಅಂಗವಾಗಿ ಜನರಿಗೆ ಉಪಯೋಗವಾಗುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕೆಲಸ. ತಮ್ಮ ಸಾಮಾಜಿಕ ಕೆಲಸದ ನಿಟ್ಟಿನಲ್ಲಿ ಶ್ರೀ ಪೂರ್ಣಾನಂದ ಸಹಕಾರಿ ಸಂಘವು ವೈದ್ಯಕೀಯ ಶಿಬಿರ ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಹಿರಿಯ ವಕೀಲರಾದ ಮೋನಪ್ಪ ಭಂಡಾರಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಹಂಪನಕಟ್ಟೆಯ ಮಿನಿ ವಿಧಾನಸೌಧ ಸಮೀಪದ ಎನ್‌ಜಿಒ ಕಟ್ಟಡದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಅಂಗವಾಗಿ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ಶಿಬಿರ ಹಾಗೂ ಅಂಚೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂಚೆ ಅಪಘಾತ ಮತ್ತು ಆರೋಗ್ಯ ವಿಮೆ ನೋಂದಣಿ…

Read More

ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸ್ಥಾಪನಾ ದಿನಚಾರಣೆ ಅಂಗವಾಗಿ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಸಹಯೋಗದೊಂದಿಗೆ ನವೆಂಬರ್‌ 7ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ತನಕ ಉಚಿತ ವೈದ್ಯಕೀಯ ಶಿಬಿರ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶಿಬಿರವು ಹಂಪನಕಟ್ಟೆಯ ಮಿನಿ ವಿಧಾನಸೌಧದ ಸಮೀಪದ ಎನ್‌ಜಿಒ ಕಟ್ಟಡದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 12.30ರ ತನಕ ನೋಂದಣಿ ನಡೆಯಲಿದೆ. ಸಾಮಾನ್ಯ ರೋಗ ವಿಭಾಗ, ಕಣ್ಣಿನ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಎಲುಬುಮತ್ತು ಕೀಲುರೋಗ ವಿಭಾಗಗಳಲ್ಲಿ ತಪಾಸಣೆ ನಡೆಯಲಿದೆ. ಬಿಪಿ, ಮಧುಮೇಹ ಉಚಿತ ತಪಾಸಣೆ ನಡೆಯಲಿದ್ದು, ಅಗತ್ಯ ಇದ್ದವರಿಗೆ ವೈದ್ಯರ ಸೂಚನೆಯ ಮೇರೆಗೆ ಉಚಿತ ಇಸಿಜಿ ತಪಾಸಣೆ ಕೂಡ ಮಾಡಲಾಗುವುದು. ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಕನ್ನಡಕ ಉಚಿತ ವಿತರಣೆ ಮಾಡಲಾಗುವುದು. ಶಿಬಿರದಲ್ಲಿ ತಪಾಸಣೆ ಉಚಿತವಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಕೆಎಂಸಿ ಆಸ್ಪತ್ರೆಯ ಹಸಿರು…

Read More

ವಿಟ್ಲ: ಇಲ್ಲಿನ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ, ಉಪಾಧ್ಯಕ್ಷರಾಗಿ ಬಾಬು ಕೊಪ್ಪಳ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ -ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಸಂಘದ ನಿರ್ದೇಶಕರುಗಳಾಗಿ ಡಾ.ಗೀತಪ್ರಕಾಶ್ ಎ, ರಾಘವ ಪೂಜಾರಿ, ಜಗದೀಶ್ ಪಾಣೆಮಜಲು, ಅಭಿಜಿತ್ ಜೆ, ಸಂಜೀವ ಪೂಜಾರಿ ಎಂ, ರವಿ ಬಿ.ಕೆ, ಮಾಧವ ಪೂಜಾರಿ, ಶ್ರೀಧರ ಬಿ, ಪ್ರಕಾಶ್ ಕೆ, ವನಿತಾ ಚಂದ್ರಹಾಸ ಮತ್ತು ಶ್ವೇತಾ ಪದ್ಮನಾಭ ಇವರು ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ವಿಲಾಸ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ ಪಿ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮೂಡುಬಿದಿರೆಯಲ್ಲಿ ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟಿಸಿ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಮ್ಯಾನೇಜಿಂಗ್ ಟ್ರಸ್ಟ್ ವಿವೇಕ್ ಆಳ್ವ ಅಭಿಪ್ರಾಯ ಮೂಡುಬಿದಿರೆ: ಬಂಟ ಸಮುದಾಯದ ಸಮಾನಮನಸ್ಕರ ಹೆಮ್ಮೆಯ ಆರ್ಥಿಕ ವ್ಯವಹಾರ ಸಂಸ್ಥೆಯಾಗಿ ಹುಟ್ಟಿಕೊಂಡ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಆರ್ಥಿಕ ಶಿಸ್ತು, ಬದ್ಧತೆಯ ವ್ಯವಹಾರಗಳಿಂದ ಎಲ್ಲ ಸಮುದಾಯಗಳ ವಿಶ್ವಾಸಾರ್ಹ ಸಹಕಾರಿ ಸಂಸ್ಥೆಯಾಗಿ ಬೆಳೆಯುತ್ತಿರುವುದು ಶ್ಲಾಘನೀಯ. 20 ವರ್ಷಗಳಲ್ಲಿ ಅಷ್ಟೇ ಸಂಖ್ಯೆಯ ಶಾಖೆಗಳನ್ನು ಹೊಂದಿರುವ ಈ ಸೊಸೈಟಿಯು ಶರವೇಗದ ಬೆಳವಣಿಗೆಯಿಂದ 50 ಶಾಖೆಗಳನ್ನು ತೆರೆಯುವಂತಾಗಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ ಆಳ್ವ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಇಲ್ಲಿನ ಪುರಸಭಾ ಕಾರ್ಯಾಲಯದೆದುರಿನ ಫಾರ್ಚ್ಯೂನ್ ನೀತಿ ಹೈಟ್ಸ್ ಕಟ್ಟಡದಲ್ಲಿ ಸ್ಥಳಾಂತರಿತ, ಹವಾನಿಯಂತ್ರಿತ `ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಶಾಖೆಯ ನೂತನ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಉದ್ಯಮಿ ಕೆ. ಶ್ರೀಪತಿ ಭಟ್ ಮುಖ್ಯ ಅತಿಥಿಯಾಗಿ ಮಾತನಾಡಿ, ಅವಿಭಜಿತ ದ.ಕ.ಜಿಲ್ಲೆಯ ಕೇಂದ್ರ ಸ್ಥಾನದಲ್ಲಿದ್ದು ವೇಗವಾಗಿ ಪ್ರಗತಿ ಸಾಧಿಸುತ್ತಿರುವ…

Read More

ಮೂಲ್ಕಿ ಶಾಖೆಯ ಗ್ರಾಹಕರ ಸಭೆಯಲ್ಲಿ ಸಂಘದ ಸದಸ್ಯೆ ಸರೋಜಿನಿ ಶ್ಲಾಘನೆ ಮೂಲ್ಕಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲ್ಕಿ ಶಾಖೆಯು ಪ್ರಾರಂಭವಾದ ದಿನದಿಂದ ಇಂದಿನವರೆಗೂ ಉತ್ತಮ ರೀತಿಯಲ್ಲಿ ಗ್ರಾಹಕ ಸ್ನೇಹಿ ವ್ಯವಹಾರ ನಡೆಸುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತಮ್ಮ ಗ್ರಾಹಕರಿಗೆ ತ್ವರಿತಗತಿಯ ಸೇವೆಯನ್ನು ಒದಗಿಸುತ್ತಿದೆ” ಎಂದು ಸಂಘದ ಸದಸ್ಯರಾದ ಸರೋಜಿನಿ ಶ್ಲಾಘಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಗ್ರಾಹಕರ ಸಭೆಯಲ್ಲಿ ಅವರು ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶೀನ ಪೂಜಾರಿ, ಎಚ್.ವಾಸು ಪೂಜಾರಿ, ಸರೋಜಿನಿ, ಕುಶಾಲ ಎಸ್.ಕುಕ್ಯಾನ್ ಹಾಗೂ ಪ್ರಕಾಶ್ ಸುವರ್ಣ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಶೀನ ಪೂಜಾರಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಡ್‌ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.15 ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ…

Read More

ಮಂಗಳೂರು: ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಹಾಗೂ ವಜ್ರಮಹೋತ್ಸವದ ಸಮಾರೋಪ ಸಮಾರಂಭ ನವಂಬರ್‌ 9ರಂದು ಭಾನುವಾರ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿಶ್ವಸೌಧ ಕಟ್ಟಡ ನವೀಕರಣಗೊಂಡಿದ್ದು ಆಡಳಿತ ಕಚೇರಿಯ ಬಳಿ ನ.9ರಂದು ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಟಪಾಡಿ -ಪಡುಕುತ್ಯಾರು ವೇಣುಗಿರಿಯ ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಮತ್ತು ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೆಮಾದನಹಳ್ಳಿ, ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು ಹಾಸನ ಇಲ್ಲಿನ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳವರು ದೀಪ ಪ್ವಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಉದ್ಘಾಟಿಸಲಿದ್ದಾರೆ. ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ…

Read More

ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜನೆ ಮಂಡ್ಯ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಮತ್ತು ಸಹಕಾರ ಕುರಿತು ಸಂವಾದ ಕಾರ್ಯಕ್ರಮ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ಮಂಡ್ಯದ ಶಾಸಕ ಪಿ.ರವಿಕುಮಾರ್ ಗೌಡ ಕಾರ್ಯಕ್ರಮದ ಉದ್ಘಾಟಿಸಿದರು. ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ಗೌರವ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈ ಶುಗರ್ ಮಂಡ್ಯದ ಮುಖ್ಯ ಹಣಕಾಸು ಅಧಿಕಾರಿ ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಖಾದರ್ ಪಾಷಾ, ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಗುರುರಾಜ್ ಬಿ.ಟಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಮೈಸೂರು ಪ್ರಾಂತಿಯ ಅಧಿಕಾರಿ ಗುರುಪ್ರಸಾದ್ ಬಂಗೇರ ಸ್ವಾಗತಿಸಿದರು. ನಂತರ ಸಹಕಾರ ಕ್ಷೇತ್ರದ ಪರಿಚಯ ಹಾಗೂ ಯುವಕರ ಪಾತ್ರದ ಕುರಿತು…

Read More

ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಶ್ಲಾಘನೆ ಮಂಗಳೂರು: ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯವು ಅಡಕೆಯ ಮೇಲೆ ಸಂಶೋಧನಾಧಾರಿತ ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಅಡಕೆ ಬೆಳೆಗಾರರ ಹಿತರಕ್ಷಕ, ಬಹುರಾಜ್ಯ ಸಹಕಾರ ಸಂಸ್ಥೆ-ಕ್ಯಾಂಪ್ಕೊ ಸ್ವಾಗತಿಸಿದೆ. ಈ ಅಧ್ಯಯನದಲ್ಲಿ ಅಡಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ ಗುಣಗಳನ್ನು ಹೊಂದಿವೆ ಎಂಬ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಯೆನೆಪೋಯ ವಿಶ್ವವಿದ್ಯಾಲಯವು ಅಡಕೆ ಮೇಲಿನ ಈ ಮಹತ್ವದ ಅಧ್ಯಯನ ಕೈಗೊಂಡಿರುವುದನ್ನು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಯವರು ಸ್ವಾಗತಿಸಿ ಶ್ಲಾಘಿಸಿದ್ದಾರೆ. ಅಧ್ಯಯನದ ಪ್ರಕಾರ, ಅಡಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುತ್ತವೆ ಹಾಗೂ ಇದು ಸಾಮಾನ್ಯ ಕೋಶಗಳಿಗೆ ಹಾನಿಯುಂಟು ಮಾಡುವುದಿಲ್ಲ. ಈ ಮಹತ್ವದ ಫಲಿತಾಂಶವು, ಸಾಂಪ್ರದಾಯಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ ಎಂಬ ಜನಸಾಮಾನ್ಯರ ನಂಬಿಕೆಗೆ ವೈಜ್ಞಾನಿಕ ಸಾಕ್ಷ್ಯಾಧಾರವನ್ನು ಒದಗಿಸಿದಂತಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಇತ್ತೀಚೆಗೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ವರ್ಗೀಕರಿಸಿರುವುದು ಕಪೋಲಕಲ್ಪಿತ ಎಂಬ ಕ್ಯಾಂಪ್ಕೊದ ಪ್ರತಿಪಾದನೆಗೆ ಯೆನೆಪೋಯ…

Read More