Author: admin

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ, ಗುರುಕೃಪಾ ಸೆಂಟ್ರಲ್ ಸ್ಕೂಲ್, ಬಳ್ಕೊಟ್ಟು, “ನಿನಾದ” ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಪಾವಂಜೆ ಸಹಯೋಗದಲ್ಲ ಪಾವಂಜೆಯ ರಂಗಮಂದಿರ ವಠಾರದಲ್ಲಿ ಕಾರಂತರ ಚಿಂತನೆಯೊಂದಿಗೆ ನಂದಿನಿ ನದಿಯ ತಟದಲ್ಲಿ ಭತ್ತದ ಕೃಷಿಯ ಸುತ್ತ ಕಾರ್ಯಕ್ರಮವು ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಇಂದಿನ ಯುವ ಪೀಳಿಗೆಗೆ ಕೃಷಿ ಪದ್ಧತಿ ಹಾಗೂ ಸಂಪ್ರದಾಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಅತೀ ಅಗತ್ಯವಾಗಿದ್ದು, ನಮ್ಮ ನಾಡು ಕಂಡ ಶ್ರೇಷ್ಠ ಕವಿ, ಪರಿಸರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ ಕಾರಂತರ  ಚಿಂತನೆಯೊಂದಿಗೆ ಕೃಷಿ ಬದುಕಿನ ಅಧ್ಯಯನ ಕಾರ್ಯಕ್ರಮದ  ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು, ವಿದ್ಯಾರ್ಥಿಗಳಿಗೆ ಪ್ರಕೃತಿಯ ಮಹತ್ವ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ಟ್ರಸ್ಟ್ ವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ವಿದ್ಯಾರ್ಥಿಗಳು ಪ್ರಕೃತಿಯ ರಕ್ಷಣೆಯ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಉಡುಪಿ: ನಾವು ಬಾಳಿ ಬದುಕುವ ಪರಿಸರವನ್ನು ಮುಂದಿನ ಪೀಳಿಗೆಗೆ ಸಮೃದ್ಧಗೊಳಿಸಿ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದು. ಸ್ವಚ್ಛ ಪರಿಸರವನ್ನು ನಿರ್ಮಿಸುವರೇ ನಮ್ಮ ಕಸ, ನಮ್ಮ ಹೊಣೆ ಎಂಬ ಸಾಮಾಜಿಕ ಜವಾಬ್ದಾರಿಯನ್ನು ನಾವು ಹೊರಬೇಕಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದಂತೆ ಭಾನುವಾರ ನಡೆದ 6ನೇ “ಸ್ವಚ್ಛ ಭಾರತ್ “– ಶ್ರಮದಾನದ ಸಂದರ್ಭದಲ್ಲಿ ಅವರು ಮಾತನಾಡಿದರು. ಗುರು ಸೇವಾ ಪರಿಷತ್ ಉಡುಪಿ ಮಹಾಮಂಡಲದ ಅಧ್ಯಕ್ಷರಾದ ಸುಧಾಕರ ಆಚಾರ್ಯ ಮತ್ತು ಉಡುಪಿ ಜಿಲ್ಲಾ ಕಾರ್ಪೆಂಟರ್ಸ್ ಯೂನಿಯನ್ ಇದರ ಕಾರ್ಯದರ್ಶಿ ಜಯಕರ ಆಚಾರ್ಯ ಇವರು ಹಸಿರು ನಿಶಾನೆ ತೋರಿ ಶಮದಾನಕ್ಕೆ ಚಾಲನೆ ನೀಡಿದರು. ಉಡುಪಿಯ ಅಂಜುಮಾನ್ ರಸ್ತೆ ಹಾಗೂ ಸಿಟಿ ಬಸ್‌ಸ್ಟ್ಯಾಂಡ್‌ ಪರಿಸರದಲ್ಲಿ ಸ್ವಚ್ಛತೆಯ ಕಾರ್ಯ…

Read More

ಐಸಿಎ ವಿಶ್ವ ಸಹಕಾರಿ ಮಾನಿಟರ್‌ನಲ್ಲಿ ಭಾರತೀಯ ಸಹಕಾರಿ ಸಂಸ್ಥೆಗಳ ಪ್ರಾಬಲ್ಯ ನವದೆಹಲಿ: ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟ (ಐಸಿಎ) ಮತ್ತು ಯುರೋಪಿಯನ್ ಸಂಶೋಧನಾ ಸಂಸ್ಥೆ ಸಹಕಾರಿ ಮತ್ತು ಸಾಮಾಜಿಕ ಉದ್ಯಮಗಳು (ಯುರಿಕ್ಸ್‌ಇ) ಬಿಡುಗಡೆ ಮಾಡಿರುವ ವಿಶ್ವ ಸಹಕಾರಿ ಮಾನಿಟರ್ (ಡಬ್ಲ್ಯುಸಿಎಂ) 2025ರ ಶ್ರೇಯಾಂಕದಲ್ಲಿ ಭಾರತೀಯ ಸಹಕಾರಿ ಸಂಸ್ಥೆಗಳು ಅಗ್ರಸ್ಥಾನ ಪಡೆದಿದ್ದು ಭಾರತದ ಸಹಕಾರಿ ವಲಯಕ್ಕೆ ಜಾಗತಿಕ ಮನ್ನಣೆ ದೊರಕಿಸಿದೆ. ಭಾರತದ ಸಹಕಾರ ವಲಯದ ಅಗ್ರ ಡೈರಿ ಸಂಸ್ಥೆ ಅಮುಲ್‌ ಜಾಗತಿಕ ಶ್ರೇಯಾಂಕದಲ್ಲಿ ನಂಬರ್‌ ಒನ್‌ ಸ್ಥಾನ ಪಡೆದಿದ್ದು ಇಫ್ಕೋ ಎರಡನೇ ಸ್ಥಾನದಲ್ಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವ ಸಾಮಾಜಿಕ ಶೃಂಗಸಭೆಯ ಮುನ್ನಾದಿನ ದೋಹಾದಲ್ಲಿ ಅನಾವರಣಗೊಂಡ ವರದಿಯ 13ನೇ ಆವೃತ್ತಿಯು, ಜನ-ಕೇಂದ್ರಿತ, ಅಂತರ್ಗತ ಮತ್ತು ಸುಸ್ಥಿರ ವ್ಯವಹಾರ ಮಾದರಿಗಳ ಮೂಲಕ ಜಾಗತಿಕ ಆರ್ಥಿಕತೆಯನ್ನು ಪರಿವರ್ತಿಸುವಲ್ಲಿ ಸಹಕಾರಿ ಸಂಸ್ಥೆಗಳ ಬೆಳೆಯುತ್ತಿರುವ ಶಕ್ತಿಯನ್ನು ಪರಿಗಣಿಸಿ ಈ ಪಟ್ಟಿ ಬಿಡುಗಡೆ ಮಾಡಿದೆ. 2023ರ ಆರ್ಥಕ ವರ್ಷದಲ್ಲಿ ಜಗತ್ತಿನಾದ್ಯಂತ ಟಾಪ್ 300 ಸಹಕಾರಿ ಸಂಸ್ಥೆಗಳು ಮತ್ತು ಪರಸ್ಪರ ಉದ್ಯಮಗಳು ಒಟ್ಟಾಗಿ 2.79 ಟ್ರಿಲಿಯನ್…

Read More

ಬಹೂಪಯೋಗಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಡೈರಿ, ಮೀನುಗಾರಿಕಾ ಸಹಕಾರ ಸಂಘಗಳ ಸ್ಥಾಪನೆಗೆ ಸರ್ಕಾರ ಆಸಕ್ತ ನವದೆಹಲಿ: ಪ್ರತಿಯೊಂದು ಗ್ರಾಮ ಮತ್ತು ಪಂಚಾಯತ್‌ಗಳಿಗೆ ಸಹಕಾರಿ ಆಂದೋಲನವನ್ನು ವಿಸ್ತರಿಸುವ ಯೋಜನೆಯ ಭಾಗವಾಗಿ, ಭಾರತ ಸರ್ಕಾರವು ಹೊಸ ಬಹೂಪಯೋಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (PACS), ಡೈರಿ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ರಾಷ್ಟ್ರವ್ಯಾಪಿ ಯೋಜನೆ ಜಾರಿಗೊಳಿಸುತ್ತಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಸೇ ಸಮೃದ್ಧಿ (ಸಹಕಾರದ ಮೂಲಕ ಸಮೃದ್ಧಿ) ಎಂಬ ದೃಷ್ಟಿಕೋನದಡಿ ಪ್ರಾರಂಭಿಸಲಾದ ಈ ಯೋಜನೆಯನ್ನು ನಬಾರ್ಡ್‌, ಎನ್‌ಡಿಡಿಬಿ, ಎನ್‌ಎಫ್‌ಡಿಬಿ ಮತ್ತು ವಿವಿಧ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ನಡೆಸಲಾಗುತ್ತಿದೆ. ಈ ಯೋಜನೆ 2023ರ ಫೆಬ್ರವರಿ 15ರಂದು ಪ್ರಾರಂಭವಾಗಿದ್ದು, ಆ ಬಳಿಕ ದೇಶಾದ್ಯಂತ 29,199 ಹೊಸ ಸಹಕಾರ ಸಂಘಗಳನ್ನು ನೋಂದಾಯಿಸಲಾಗಿದೆ. ಸರ್ಕಾರದ ಈ ಕ್ರಮವು ಸಮಗ್ರ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವುದು, ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವುದು ಮತ್ತು ಸಹಕಾರಿ ಚೌಕಟ್ಟಿನ ಮೂಲಕ ತಳಮಟ್ಟದ ಹಣಕಾಸು ಮತ್ತು ಉತ್ಪಾದನಾ ಜಾಲಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಹೊಸದಾಗಿ ಸ್ಥಾಪಿಸಲಾದ…

Read More

ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ವಿಷಯದಲ್ಲಿ ಕಾರ್ಯಕ್ರಮ: ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾಹಿತಿ ಮಂಗಳೂರು: ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸ ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯ ಇರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದ್ದರ ದ್ಯೋತಕವಾಗಿ ಪ್ರತಿವರ್ಷ ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ” ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಮಂಗಳೂರಿನಲ್ಲಿ ನವೆಂಬರ್‌ 16ರಂದು ಭಾನುವಾರ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ವಿಷಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಪಂಡಿತ್ ನೆಹರೂರವರ ಜನ್ಮದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ರಾಜ್ಯಮಟ್ಟದಲ್ಲಿ ನಡೆಯಲಿದೆ.…

Read More

ನವೆಂಬರ್‌ 2ರಂದು ಮಂಗಳೂರು ಪುರಭವನದಲ್ಲಿ ಕಾರ್ಯಕ್ರಮ, ಸ್ಮರಣ ಸಂಚಿಕೆ ಬಿಡುಗಡೆ, ಸನ್ಮಾನ ಮಂಗಳೂರು: ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನವೆಂಬರ್‌ 2ರಂದು ಭಾನುವಾರ ನಡೆಯಲಿದೆ. ಸಂಜೆ 4 ಗಂಟೆಗೆ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದ್ದು, ಇದೇ ವೇಳೆ ಸ್ಮರಣ ಸಂಚಿಕೆ ಬಿಡುಗಡೆ, ಸನ್ಮಾನ ಕಾರ್ಯಕ್ರಮ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವೂ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಂಜೆ 4 ಗಂಟೆಗೆ ಸಂಘದ ಅಧ್ಯಕ್ಷರಾದ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಧರ್ಮಪ್ರಾಂತದ ಬಿಷಪ್‌ ಅತಿವಂದನೀಯ ಫಾ.ಡಾ.ಪೀಟರ್‌ ಪಾವ್ಲ್‌ ಸಲ್ಡಾನ್ಹಾ ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಸ್ಮರಣಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌ ಗೌರವ ಉಪಸ್ಥಿತರಿರಲಿದ್ದಾರೆ. ಎಂಸಿಸಿ ಬ್ಯಾಂಕ್‌…

Read More

ಕೊಪ್ಪಳ: ಕೊಪ್ಪಳ ಜಿಲ್ಲಾ ಸಹಕಾರಿ ಯೂನಿಯನ್‌ನ ಪ್ರಥಮ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಈಗಲೂ ಜಿಲ್ಲಾಧ್ಯಕ್ಷರಾಗಿರುವ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಕೊಪ್ಪಳದ ಸಹಕಾರಿ ಸಾಧಕ ಶೇಖರ ಗೌಡ ಮಾಲಿಪಾಟೀಲ ಅವರಿಗೆ ಈ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಗುರುವಾರ ಸಂಜೆ ರಾಜ್ಯ ಸರ್ಕಾರ ಪ್ರಕಟಿಸಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಶೇಖರ ಗೌಡ ಮಾಲಿ ಪಾಟೀಲರಿಗೆ ಪ್ರಶಸ್ತಿ ಘೋಷಣೆಯಾಗಿದ್ದು ಸಹಕಾರಿ ಕ್ಷೇತ್ರದಲ್ಲಿ ಈ ಬಾರಿಯೂ ಒಬ್ಬರನ್ನು ಮಾತ್ರ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. 1997ರಲ್ಲಿ ಜೆ.ಹೆಚ್‌ ಪಟೇಲ್‌ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರಚನೆಯಾದ ಕೊಪ್ಪಳ ಜಿಲ್ಲೆಗೆ ಮೊದಲ ಸಲ ಜಿಲ್ಲಾ ಸಹಕಾರಿ ಯೂನಿಯನ್‌ ರಚನೆಯಾದಾಗ ಮಾಲಿ ಪಾಟೀಲರು ಮೊದಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೂಲತಃ ಕುಷ್ಟಗಿ ತಾಲೂಕಿನ ಸಣ್ಣ ಹಳ್ಳಿಯವರಾದ ಶೇಖರ ಗೌಡರು, 1997ರಿಂದ 2025ರ ತನಕವೂ ಕೊಪ್ಪಳ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಹೋರಾಟ, ಸಾಹಿತ್ಯ, ಸಹಕಾರ ಇತ್ಯಾದಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸದಾ ಕ್ರಿಯಾಶೀಲರಾಗಿ…

Read More

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ ಕಾರ್ಕಳ: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ವರ್ತಮಾನದ ಅಗತ್ಯಕ್ಕೆ ತಕ್ಕಂತಿಲ್ಲ, ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯ ಎಂದು ರಾಜ್ಯ ಹೈಕೋರ್ಟ್ ಹೇಳಿರುವುದು ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯಪಟ್ಟಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ನ್ಯಾಯಮೂರ್ತಿ ಸೂರಜ್ ಗೋವಿಂದರಾಜ ಅವರಿದ್ದ ಏಕಸದಸ್ಯ ನ್ಯಾಯಪೀಠವು ಇತ್ತೀಚೆಗೆ ರಿಟ್ ಅರ್ಜಿಯೊಂದರ ವಿಚಾರಣೆಯ ಸಂದರ್ಭ ಕರ್ನಾಟಕ ಸಹಕಾರ ಸಂಘಗಳ (ಕೆಪಿಎಸ್) ಕಾಯ್ದೆ_1959 ಈವರೆಗೆ ಆಡಳಿತ ನಡೆಸಿರುವ ಸರಕಾರಗಳು ಹಲವು ತಿದ್ದುಪಡಿಗಳನ್ನು ತಂದಿದ್ದರೂ, ಅಸ್ಪಷ್ಟತೆಗಳು ಇನ್ನೂ ಉಳಿದಿರುವುದನ್ನು ಗಮನಿಸಿದೆ. ಕಾಯ್ದೆಯ ಅಡಿಯಲ್ಲಿ ಬರುವ ಸದಸ್ಯತ್ವದ ಹಕ್ಕುಗಳು, ಅನರ್ಹತೆ, ಮತದಾರರ ಪಟ್ಟಿ ಸಿದ್ದಪಡಿಸುವುದು, ಕಾಲಕಾಲಕ್ಕೆ ಚುನಾವಣೆ ನಡೆಸುವುದು, ಲೆಕ್ಕಪರಿಶೋಧನೆ ಮತ್ತು ಆಡಳಿತ ಅಧಿಕಾರಿ ನೇಮಕಾತಿಗೆ ಸಂಬಂಧಿಸಿದ ಹಲವು ನಿಯಮಗಳಲ್ಲಿ ಸಂಘರ್ಷದ ಅಂಶಗಳಿವೆ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಪಿಎಸ್ ಕಾಯಿದೆಗೆ ತಾರ್ಕಿಕವಾಗಿ ಸಮಗ್ರ ತಿದ್ದುಪಡಿ…

Read More

ಮುಡಿಪು ಶಾಖೆಯ ಗ್ರಾಹಕರ ಸಭೆಯಲ್ಲಿ ನವೀನ್‌ಚಂದ್ರ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಂಘದ ಸದಸ್ಯರಾದ ನವೀನ್‌ಚಂದ್ರ ಶ್ಲಾಘಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಹಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಸಭೆಯನ್ನು ಸಂಘದ ಸದಸ್ಯರಾದ ನವೀನ್‌ಚಂದ್ರ, ಕಾಶೀಮ್ ಕೆ, ಕ್ಯಾತರಿನ್ ಡಿಸೋಜ ಹಾಗೂ ದುಶ್ಯಂತ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಕಾಸಿಮ್ ಕೆ ಮಾತನಾಡಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಮುಡಿಪು ಶಾಖೆಯು ಒಂಬತ್ತನೇ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆಯಲ್ಲಿ ನಿರ್ಣಯ ಬೆಳ್ತಂಗಡಿ: ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಕೆಯ ಔಷಧೀಯ ಮೌಲ್ಯಗಳ ಮಾಹಿತಿ ನೀಡುವ ಜತೆಗೆ, ಅಡಕೆಯ ಅಧ್ಯಯನದ ಮಾಹಿತಿ ಹಾಗೂ ಕೃಷಿಕರ ಬದುಕಿನ ಮಾಹಿತಿ ನೀಡಲು ವ್ಯವಸ್ಥೆಯಾಗಬೇಕು ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‌ಡಿಎಫ್) ಸಭೆಯಲ್ಲಿ ನಿರ್ಧರಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಅಡಕೆ ಹಾನಿಕಾರಕ ಅಲ್ಲ ಎಂಬ ಅಂಶ ಈಗಾಗಲೇ ಅಧ್ಯಯನದಿಂದ ಹೊರಬಂದಿದ್ದು, ಎಆರ್‌ಡಿಎಫ್‌ ಹಾಗೂ ಜೆಡ್ಡು ಆಯುರ್ವೇದ ಸಂಸ್ಥೆ ಈ ಬಗ್ಗೆ ಮಾಡಿರುವ ಅಧ್ಯಯನ ಅಂತಾರಾಷ್ಟ್ರೀಯ ಜರ್ನಲ್‌ನಲ್ಲೂ ಪ್ರಕಟವಾಗಿದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತರಲಾಯಿತು. ವಿದೇಶಿ ಅಡಕೆ ಆಮದು ತಡೆಗೆ, ಅಡಕೆ ಗುಣಮಟ್ಟದ ಮಾಹಿತಿ ಅಗತ್ಯ. ಈಗಾಗಲೇ 63ಕ್ಕೂ ಹೆಚ್ಚು ವಿದೇಶಿ ಅಡಕೆಯ ಸ್ಯಾಂಪಲ್…

Read More