Author: admin
ಬೆಳ್ತಂಗಡಿ: ಮಂಗಳೂರಿನ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಬೆಳ್ತಂಗಡಿ ಚರ್ಚ್ ಬಳಿಯ ನೊರೋನಾ ಕಾಂಪ್ಲೆಕ್ಸ್ನಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಲಕ್ಷ್ಮಣ್ ಕರಾವಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಕಳೆದ ಮೂವತ್ತು ವರ್ಷಗಳಿಂದ ಉತ್ತಮವಾಗಿ ಪ್ರಗತಿ ಕಂಡಿದ್ದು ಸೊಸೈಟಿಯ ಶಾಖೆಗಳ ವಿಸ್ತರಣೆಗೆ ಯೋಜನೆ ಹಮ್ಮಿಕೊಳ್ಳಬೇಕು. ಪ್ರತಿ ಎರಡು ವರ್ಷಕ್ಕೊಮ್ಮೆ ಒಂದು ಶಾಖೆಯಂತೆ ಹತ್ತರಿಂದ ಹದಿನೈದು ಶಾಖೆಗಳು ಶೀಘ್ರ ಆಗಬೇಕಿದೆ. ಬೆಳ್ತಂಗಡಿಯಲ್ಲಿ ಆರಂಭಗೊಂಡ ಶಾಖೆ ಕೋಟಿ ರೂ.ಗೂ ಹೆಚ್ಚು ವ್ಯವಹಾರ ನಡೆಸಿ ಪ್ರಗತಿಪಥದಲ್ಲಿ ಸಾಗುವಂತಾಗಲಿ ಎಂದು ಶುಭ ಹಾರೈಸಿದರು. ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್ ಕೆ ಅಧ್ಯಕ್ಷತೆ ವಹಿಸಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಂಪ್ಯೂಟರೀಕರಣ ವ್ಯವಸ್ಥೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿ ಕಿಶೋರ್ ಪೂಜಾರಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ|ಇಮ್ರಾನ್ ಪಾಷಾ ಮಾತನಾಡಿ ಆತ್ಮಶಕ್ತಿ…
ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಪಡುಬಿದ್ರಿ: ವಾಣಿಜ್ಯ ಬ್ಯಾಂಕ್ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘಗಳು ಜನರ ಅಭಿವೃದ್ಧಿಗೆ ಇರುವ ಏಕೈಕ ಸಂಸ್ಥೆಗಳಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಸಹಭಾಗಿತ್ವದಲ್ಲಿ ಭಾನುವಾರ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಮಾತನಾಡಿದರು. ಸರಳವಾಗಿ, ತ್ವರಿತವಾಗಿ ಜನರಿಗೆ ಸಾಲ ನೀಡುವಂತಹ ವ್ಯವಸ್ಥೆಯಿರುವ ಸಂಸ್ಥೆಯೆಂದರೆ ಸಹಕಾರಿ ಸಂಸ್ಥೆ ಎಂದು ಹೇಳಲು ಸಂತೋಷವಾಗುತ್ತದೆ. ಇಲ್ಲಿನ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಮತ್ತು ಸೊಸೈಟಿ ಆರಂಭದ ಮೂಲಕ ಹೆಮ್ಮೆ ತರುವಂತಹ ಕೆಲಸ ಮಾಡಿದೆ. ಇಲ್ಲಿನ ಸೊಸೈಟಿ ಕಟ್ಟಡಕ್ಕೆ 10 ಲಕ್ಷ, ಬಂಟರ ಸಂಘಕ್ಕೆ ಲಿಫ್ಟ್…
ಉಡುಪಿ: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎ0 ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಉದ್ಘಾಟಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ ಧರ್ಮಗುರು ರೆ.ಡಾ.ರಾಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ ಒ ಮತ್ತು ತೊಟ್ಟಂ ಚರ್ಚ್ ಧರ್ಮಗುರು ರೆ.ಫಾ.ಡೆನಿಸ್ ಡೇಸಾ ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿ0ದ ಮೊದಲ ಹಣ ಹಿಂಪಡೆದರು. ಸೇಫ್ ರೂಮ್ ಅನ್ನು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂದನೀಯ ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಇ-ಸ್ಟಾಂಪಿ0ಗ್ ಸೌಲಭ್ಯವನ್ನು ಸುಬ್ರಹ್ಮಣ್ಯ ನಗರದ ಸೇಂಟ್ ಪಾಲ್ ಚರ್ಚ್ ಸಭಾಪಾಲಕರಾದ ರೆವೆರೆಂಡ್ ಕಿಶೋರ್ ಕುಮಾರ್ ಉದ್ಘಾಟಿಸಿದರು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಮತ್ತು ಉಡುಪಿ ಧರ್ಮಪ್ರಾಂತ್ಯದ ವಿಕಾರ್…
ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ಆಲಂಕಾರಿನಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಟಾಟನೆ ಕಡಬ: ತಾಲೂಕಿನ ಆಲಂಕಾರಿನಲ್ಲಿ ಭಾನುವಾರ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ 17ನೇ ಶಾಖೆಯನ್ನು ಉದ್ಘಾಟಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು, ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಈಡೇರಿಸುವಲ್ಲಿ ಸಹಕಾರಿ ಸಂಘಗಳು ಅನನ್ಯ ಪಾತ್ರ ವಹಿಸುತ್ತವೆ. ಸಹಕಾರಿ ಸಂಸ್ಥೆಗಳು ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತವೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಂಸ್ಥೆಯಾಗಿ ಬೆಳೆಯಬೇಕಾದರೆ ಸಂಘದ ನೌಕರ ವೃಂದ ಜನಸಾಮಾನ್ಯರ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕೆಲಸ ಮಾಡಬೇಕು. ಸಮಾಜ ಸೇವಾ ಸಹಕಾರಿ ಬ್ಯಾಂಕ್ ಈ ನಿಟ್ಟಿನಲ್ಲಿ ಕೆಲಸ ಮಾಡಿರುವುದರಿಂದ 17 ಶಾಖೆಗಳನ್ನು ತೆರೆಯುವಂತಾಗಿದೆ ಎಂದು ಹೇಳಿದರು. ವ್ಯಾವಹಾರಿಕವಾಗಿ ಬೆಳೆಯುತ್ತಿರುವ ಆಲಂಕಾರಿನಲ್ಲಿ ಆರಂಭಗೊಂಡ ಸಮಾಜ ಸೇವಾ ಸಹಕಾರಿ ಸಂಸ್ಥೆಯು ಇಲ್ಲಿನ ಜನರ ಆರ್ಥಿಕ…
ಬಂಟ್ವಾಳ: ಸ್ವಾತಂತ್ರ್ಯ ಯೋಧ, ಸಮಾಜರತ್ನ ಡಾ|ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ 1981ರಲ್ಲಿ ಬಂಟ್ವಾಳದಲ್ಲಿ ಸ್ಥಾಪನೆಯಾದ ಸಮಾಜ ಸೇವಾ ಸಹಕಾರಿ ಸಂಘದ ಹದಿನೇಳನೇ ಶಾಖೆಯು ಕಡಬ ತಾಲೂಕಿನ ಆಲಂಕಾರಿನಲ್ಲಿ ಅಕ್ಟೋಬರ್ 5ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಆಲಂಕಾರಿನ ಮಾತೃಕೃಪಾ ಕಾಂಪ್ಲೆಕ್ಸ್ನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ|ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಮಾಜ ಸೇವಾ ಸಹಕಾರಿ ಸಂಘ ನಿ ಇದರ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಠೇವಣಿ ಪತ್ರ…
ಮಣಿಪಾಲದ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಸಾಧನೆ ಉಡುಪಿ: ಸಹಕಾರಿ ಕ್ಷೇತ್ರದ ಕೆಲಸದ ಜೊತೆಜೊತೆಗೆ ಹವ್ಯಾಸವಾಗಿ ಮಾಡುತ್ತಿದ್ದ ಛಾಯಾಗ್ರಹಣದ ಕಲೆ ರಾಜ್ಯ ಪ್ರಶಸ್ತಿಯನ್ನೇ ತಂದಿತ್ತಿದೆ. ಶುಕ್ರವಾರ ಪ್ರಕಟಿಸಲಾದ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ಉತ್ತಮ ಛಾಯಾಗ್ರಹಣ ವಿಭಾಗದಲ್ಲಿ ಉಡುಪಿ ಮಣಿಪಾಲದ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಹಿರೇಬೆಟ್ಟು ಅವರಿಗೆ ಪ್ರಶಸ್ತಿ ಲಭಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸ್ಯಾಂಡಲ್ವುಡ್ ಮತ್ತು ಬಾಲಿವುಡ್ನಲ್ಲಿ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಕರಾವಳಿಯಿಂದ ವಲಸೆ ಹೋಗಿ ಸಾಧನೆ ಮಾಡಿದ್ದಾರೆ. ಅಂಥದೇ ಸಾಲಿಗೆ ಹಿರೇಬೆಟ್ಟುವಿನ ಭುವನೇಶ್ ಪ್ರಭು ಸೇರಿದ್ದಾರೆ. ಈ ಹಿಂದೆ ಕರಾವಳಿ ಭಾಗದ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ‘ಜ್ಞಾನದಾಸರೆ’ ಎಂಬ ಕಿರುಚಿತ್ರ ಆಯ್ಕೆಯಾಗಿ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶನಗೊಂಡು ಅದರ ವಿಮರ್ಶೆ ನಡೆದಾಗ ಪ್ರೇಕ್ಷಕರೊಬ್ಬರು ಅದರ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಅಂದು ಆಗಿದ್ದ ಅವಮಾನವನ್ನು ಲೆಕ್ಕಿಸದೆ ಅದರ ಮುಂದಿನ ವರ್ಷ ಮತ್ತೊಮ್ಮೆ ನಡೆದ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ…
ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿವೇತನ, ಸಹಾಯಧನ ವಿತರಣೆ, ದಾನಿಗಳಿಗೆ ಸಮ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆಯೊಂದಿಗೆ ಸಿರಿಮುಡಿ ದತ್ತಿನಿಧಿ ವಿತರಣಾ ಸಮಾರಂಭ ಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಡುಬಿದ್ರಿ ಇದರ ಉದ್ಘಾಟನೆ ಅ.5ರಂದು ಪಡುಬಿದ್ರಿ ಬಂಟರ ಭವನದ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಜರಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಿರಿಮುಡಿ ದತ್ತಿನಿಧಿ ಇದೀಗ 1.31 ಕೋಟಿ ರೂ.ನಷ್ಟು ಆರ್ಥಿಕ ಸಂಚಯನವನ್ನು ಹೊಂದಿದೆ. ಇದರ ಜತೆಗೆ ಬಂಟ್ಸ್ ವೆಲ್ಫೆರ್ ಟ್ರಸ್ಟ್ ಕೂಡ ಕೈಜೋಡಿಸುತ್ತಿದ್ದು, ಪ್ರಸಕ್ತ ವರ್ಷ ಸುಮಾರು 17 ಲಕ್ಷ ರೂ. ಸಹಾಯಧನ ವಿತರಣೆಯಾಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೊಸೈಟಿಯು ಸುಮಾರು 50 ಲಕ್ಷ ರೂ. ವೆಚ್ಚದ ಸ್ವಂತ ಕಟ್ಟಡದಲ್ಲಿ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಕಾರ್ಯಾಚರಿಸಲು ಸಿದ್ಧವಾಗಿದೆ. ಉದ್ಯಮಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಸದಾನಂದ…
ಮೂಲ್ಕಿ: ಕೇವಲ ಮೂರು ಸಿಬ್ಬಂದಿಗಳ ಮೂಲಕ ಪ್ರಾರಂಭಗೊಂಡು ಇದೀಗ 22 ಸಿಬ್ಬಂದಿಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. ಸೊಸೈಟಿಯು ಅಭಿವೃದ್ಧಿಯತ್ತ ಸಾಗಬೇಕಾದರೆ ಸಿಬ್ಬಂದಿಗಳ ಶ್ರಮ ಮುಖ್ಯವಾಗಿತ್ತು. ಇಂತಹ ಸಿಬ್ಬಂದಿಗಳ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿ ಆಗಿದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ ಬರ್ನಾಡ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ಇತ್ತೀಚೆಗೆ ಸೊಸೈಟಿಯ ಸಿಬ್ಬಂದಿಗಳಿಗೆ ತಲಾ ಮೂರು ಲಕ್ಷದ ಆರೋಗ್ಯ ವಿಮೆಯ ಪಾಲಿಸಿ ವಿತರಿಸಿ ಮಾತನಾಡುತ್ತಿದ್ದರು. ನಿರ್ದೇಶಕರುಗಳಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೀದರ್: ಇಲ್ಲಿನ ಡೆವಲಪ್ಮೆಂಟ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಆರನೇ ವಾರ್ಷಿಕ ಮಹಾಸಭೆ ಶಿವಕುಮಾರ ಶಟಕಾರ್ ಇವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸರಸ್ವತಿ ಮತ್ತು ಲಕ್ಷ್ಮೀ ಪೂಜೆಯ ನಂತರ ರವೀಂದ್ರನಾಥ ಮುಳಗೆ ಸದಸ್ಯರನ್ನು ಸ್ವಾಗತಿಸಿದರು. ಅಗಲಿದ ಸದಸ್ಯರಾದ ನಂದಕುಮಾರ್ ಸಂತಪೂರ್ಕರ್ ಹಾಗೂ ಇತರ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಸೂಚಿಯನ್ನು ರವೀಂದ್ರನಾಥ್ ಮುಳಗೆ ಓದಿದರು. ಕಳೆದ ವರ್ಷದ ವಾರ್ಷಿಕ ಮಹಾಸಭೆಯ ನಡವಳಿಕೆ ಹಾಗೂ ಪ್ರಸಕ್ತ ಸಾಲಿನ ವರದಿಯನ್ನು ಓದಿ ತಿಳಿಸಲಾಯಿತು. ವರದಿ ಸಾಲಿನಲ್ಲಿ 651 ಸದಸ್ಯರಿಂದ 60 ಜನ ಹೊಸ ಸದಸ್ಯ ಸೇರಿಸಿಕೊಂಡು ವರ್ಷಾಂತಕ್ಕೆ 702 ಜನ ಸದಸ್ಯರು ಇದ್ದು, ರೂಪಾಯಿ 43.93 ಲಕ್ಷ ರೂ. ಶೇರು ಬಂಡವಾಳ, 508.38 ಲಕ್ಷ ರೂ. ಠೇವಣಿ ಸಂಗ್ರಹಿಸಲಾಗಿದ್ದು 411.50 ಲಕ್ಷ ರೂ. ಸಾಲ ವಿತರಿಸಲಾಗಿದೆ. 190.01 ಲಕ್ಷ ರೂ. ಹೂಡಿಕೆ ಮಾಡಲಾಗಿದೆ. ಒಟ್ಟು ವ್ಯವಹಾರ 920 ಲಕ್ಷ ರೂ. ಇದ್ದು 11.80 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಮಹಾಸಭೆಯಲ್ಲಿ ಬೀದರ್…
