Author: admin

ಮಂಗಳೂರು: ರಾಜ್ಯೋತ್ಸವ, ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮ ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಗಂಜಿಮಠ ಮುಖ್ಯ ರಸ್ತೆಯ ವೈಕುಂಠ ಪ್ರಭು ಕಾಂಪ್ಲೆಕ್ಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಆಡಳಿತ ಮಂಡಳಿ ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ದಿವಾಕರ್ ಬಿ. ಪಿ., ಗೋಪಾಲ್ ಎಂ, ಚಂದ್ರಾವತಿ, ಉಮಾವತಿ, ಸಲಹಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ದೀಪಾವಳಿ ಆಚರಣೆಯಲ್ಲಿ ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್‌ ಲೋಬೋ ಅಭಿಪ್ರಾಯ ಮಂಗಳೂರು: ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಅನಿಲ್‌ ಲೋಬೋ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಭಾಗವಹಿಸಿದ್ದರು. ನಜ್ಮಾ ಫಾರೂಕ್ ಮತ್ತು ಅನಿಲ್ ಲೋಬೊ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅಧ್ಯಕ್ಷೀಯ ಸಂದೇಶ ನೀಡಿ, ದೀಪಾವಳಿ ಕೇವಲ ಬೆಳಕಿನ ಹಬ್ಬವಲ್ಲ, ಏಕತೆ, ಕೃತಜ್ಞತೆ ಮತ್ತು ನವೀಕರಣದ ಆಚರಣೆಯಾಗಿದೆ. ಎಂಸಿಸಿ ಬ್ಯಾಂಕ್, ಸಮುದಾಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದ್ದರೂ, ಎಲ್ಲಾ ಸಮುದಾಯಗಳ ಜನರಿಗೆ ಸೇವೆ ಒದಗಿಸುತ್ತಿದೆ. ಎಂಸಿಸಿ ಬ್ಯಾಂಕ್ ಮಂಗಳೂರು ಶಾಖೆಯಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಎಲ್ಲಾ 21…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಸದಸ್ಯರಾದ ರೊನಾಲ್ಡ್ ಜೋಸೆಫ್ ಸಲ್ದಾನ್ಹ, ರಂಜಿತ್ ಎಂ. ಹಾಗೂ ಜವಹಾರ್ ಲಾಲ್ ವಿಠಲ್‌ಜೀ ದೀಪ ಪ್ರಜ್ವಲನೆ ಮಾಡಿ ಸಭೆಯನ್ನು ಉದ್ಘಾಟಿಸಿದರು. ರೊನಾಲ್ಡ್ ಜೋಸೆಫ್ ಸಲ್ದಾನ್ಹ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ. ಒಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಇನ್ನೊಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್. ಸಂಘವು ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯೇ ಸಂಘವು ಇವತ್ತು ಈ ಮಟ್ಟಕ್ಕೆ ಬೆಳೆಯಲು ಮುಖ್ಯ ಕಾರಣ ಎಂದು ಹೇಳಿದರು. ಸಂಘದ ಸದಸ್ಯ ಕೃಷ್ಣಪ್ಪ ಪೂಜಾರಿ ಎಂ ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಬೋಳಾರದಲ್ಲಿ ನೂತನ ಶಾಖೆ ತೆರೆಯುವಂತೆ ವಿನಂತಿಸಿದರು. ಸದಸ್ಯ ರಂಜಿತ್ ಮಾತನಾಡಿ ಆತ್ಮಶಕ್ತಿ…

Read More

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 18ನೇ ನೂತನ ಶಾಖೆ ಅಕ್ಟೋಬರ್ 22ರಂದು ಕಡಬದ ಸಂತೆಕಟ್ಟೆ ಮುಖ್ಯರಸ್ತೆಯ ಚಾಚಾ ಕಾಂಪ್ಲೆಕ್ಸ್‌ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ತಾಳ್ತಜೆ ವಸಂತ ಕುಮಾರ್‌ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾದ ಭಾಸ್ಕರ ಎಂ.ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ಪಟ್ಟಣ ಪಂಚಾಯತ್‌ ಸದಸ್ಯರಾದ ಗುಣವತಿ ರಘುರಾಮ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ತಮನ್ನ ಜಬೀನ್‌, ಕಡಬ ಪಟ್ಟಣ ಪಂಚಾಯತ್‌ ಸದಸ್ಯ ಕೆ.ಎಂ ಹನೀಫ್‌, ಕಟ್ಟಡದ ಮಾಲೀಕರೂ,ಕಡಬ ಪಟ್ಟಣ ಪಂಚಾಯತ್‌ ಸದಸ್ಯರೂ ಆದ ಸೈಮಾನ್‌, ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಕೆ.ಎಸ್‌, ಪುತ್ತೂರು ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷರಾದ ಪುಲಸ್ತ್ಯಾ ರೈ, ದ.ಕ. ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಪಿ.ಪಿ ವರ್ಗೀಸ್‌, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ…

Read More

ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಕಾರ್ಕಳ: ಯಾವುದೇ ಆರ್ಥಿಕ ಸಂಸ್ಥೆಗೆ ವ್ಯಾವಹಾರಿಕ ಬದ್ಧತೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುತ್ತದೆ. ಈ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಆಶಯದಂತೆ ನಡೆದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ ಪ್ರಯುಕ್ತ ಸ್ವಚ್ಛ ಪರಿಸರ ರೂಪಿಸಲು ಪ್ರತಿಯೊಬ್ಬರೂ ಭಾಗಿದಾರಿಕೆ ವಹಿಸುವ ಅಗತ್ಯವಿದೆ. ಆದುದರಿಂದ ಸ್ವಚ್ಛತೆಯ ಮೂಲಭೂತ ಕರ್ತವ್ಯಗಳಲ್ಲಿ ನಾವೆಲ್ಲರೂ ಒಂದಾಗಬೇಕಾಗಿದೆ. ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮೂಲಮಂತ್ರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ನಿ ಇದರ 2025-29ನೇ ಸಾಲಿನ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಹಾಗೂ ಉಪಾಧ್ಯಕ್ಷರಾಗಿ ಎ.ಕೃಷ್ಣ ಭಟ್‌ ಇವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ನಿರ್ದೇಶಕರಾಗಿ ಜಯಪ್ರಕಾಶ್, ಸುಪ್ರೀತ್ ಜೆ.ಕೆ., ಸದಾಶಿವ ಅಮೀನ್, ಸುಂದರ ಸಾಲ್ಯಾನ್, ಪೂರ್ಣಿಮ ಬಿ ರಾವ್, ವಿಜೇತಾ ಎಸ್ ರಾವ್, ಲತಾ ಎನ್ ಆಳ್ವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿಕೊಟ್ಟರು. ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಲಿಮಿಟೆಡ್‌ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛ ಭಾರತ್‌ ಕಾರ್ಯಕ್ರಮವು ಅ.19ರಂದು ಬ್ಯಾಂಕಿನ ಕಾರ್ಕಳ ಮತ್ತು ಉಡುಪಿ ಶಾಖೆಗಳಲ್ಲಿ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಎರಡು ಶಾಖೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು ಬ್ಯಾಂಕಿನ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಉಡುಪಿ ಶಾಖೆಯ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಬೆಳಗ್ಗೆ 7.30ರಿಂದ 9ರ ತನಕ ಸ್ವಚ್ಛತಾ ಕಾರ್ಯ ನಡೆಯಲಿದೆ. ಕಾರ್ಕಳ ಶಾಖೆಯ ವತಿಯಿಂದ ಕೃಕಳ ಅನಂತಶಯನ ರಸ್ತೆಯಲ್ಲಿ ಬೆಳಗ್ಗೆ 7.30ರಿಂದ 9ರ ತನಕ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಕೆ.ಜಿ.ಗೆ 351 ರೂ.ಗಿಂತ ಕಡಿಮೆ ಮೌಲ್ಯದ ಉತ್ಪನ್ನಕ್ಕೆ ನಿಷೇಧ ಮಂಗಳೂರು: ವಿದೇಶಗಳಿಂದ ಹುರಿದ ರೂಪದಲ್ಲಿ ಕನಿಷ್ಠ ದರದಲ್ಲಿ ಅಡಕೆ ಆಮದಾಗುತ್ತಿದ್ದ ಹಿನ್ನೆಲೆಯಲ್ಲಿ ದೇಶದ ಆಂತರಿಕ ಮಾರುಕಟ್ಟೆಯಲ್ಲಿ ಅಡಕೆ ದರ ಇಳಿಕೆಯಾಗಿತ್ತು. ಇದನ್ನು ತಪ್ಪಿಸಲು ಸರ್ಕಾರ ಆಮದು ಬೆಲೆ ಕೆ.ಜಿ.ಗೆ 351 ರೂ. ನಿಗದಿಪಡಿಸಿ ಬೆಲೆ ಇಳಿಕೆಗೆ ಕಡಿವಾಣ ಹಾಕಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಈ ಕುರಿತು ಅಧಿಸೂಚನೆ ಹೊರಡಿಸಿರುವ ವಿದೇಶಿ ವ್ಯಾಪಾರ ನಿರ್ದೇಶನಾಲಯ, 351 ರೂ.ಗಳಿಗಿಂತ ಕಡಿಮೆ ಸಿಐಎಫ್ ಮೌಲ್ಯ ಹೊಂದಿರುವ ಹುರಿದ ಅಡಕೆ ಆಮದನ್ನು ನಿಷೇಧಿಸಲಾಗಿದೆ. ಆದರೆ ಈ ನಿಷೇಧ ವಿಶೇಷ ಆರ್ಥಿಕ ವಲಯದಲ್ಲಿರುವ ಶೇ.100 ಪ್ರತಿಶತ ರಫ್ತು ಆಧಾರಿತ ಘಟಕಗಳ ಆಮದುಗಳಿಗೆ ಮತ್ತು ಮುಂಗಡ ಅಧಿಕಾರ ಯೋಜನೆಯಡಿ ಆಮದು ಮಾಡಿಕೊಳ್ಳುವವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ. ವಿದೇಶದಿಂದ ಕಡಿಮೆ ಬೆಲೆಗೆ ಆಮದಾಗುತ್ತಿದ್ದ ಅಡಕೆ ರಾಜ್ಯದ ಬೆಳೆಗಾರರನ್ನು ಕಂಗೆಡಿಸಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಭೀತಿ ಎದುರಾಗಿತ್ತು. ಇದರಿಂದ ಆಮದು ಬೆಲೆ ಹೆಚ್ಚಿಸುವಂತೆ ಕ್ಯಾಂಪ್ಕೊ ಸಹಿತ ಹಲವು ಸಂಘಟನೆಗಳು ಒತ್ತಾಯಿಸಿದ್ದವು. ಇದೀಗ ಕೇಂದ್ರದ ಈ…

Read More

ಮಂಗಳೂರು: ಇಲ್ಲಿನ ಜೈಲು ರಸ್ತೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಸಾಕಣೆದಾರರ ವಿವಿಧೋದ್ದೇಶ ಸಹಕಾರಿ ಸಂಘದ 2025ರಿಂದ 2030ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಯಾನಂದ ಅಡ್ಯಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ನಿರ್ದೇಶಕರ ಚುನಾವಣೆಯು ಇತ್ತೀಚೆಗೆ ನಡೆದಿದ್ದು ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಸಹಕಾರ ಭಾರತಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನಂತರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ದಯಾನಂದ ಅಡ್ಯಾ‌ರ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಗಣೇಶ್ ಕೆ., ಅರುಣ್ ಕುಮಾರ್, ಪಾರ್ವತಿ ಭೋಜರಾಜ್, ಸುಜಯ ಹೇಮಚಂದ್ರ, ಶ್ರೀನಿವಾಸ, ಪ್ರಭಾಮಾಲಿನಿ, ದಿನೇಶ, ನೀಲಪ್ಪ ನಾಯ್ಕ ಆಯ್ಕೆಯಾಗಿದ್ದಾರೆ. ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ನಡೆಸಿಕೊಟ್ಟರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬಿ.ಎನ್.ಸದಾನಂದ ಉಪಾಧ್ಯಕ್ಷರಾಗಿ ಆಯ್ಕೆ ಮೈಸೂರು: ಸಹಕಾರ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿರುವ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್‌ ಗೌಡ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿ ಯೂನಿಯನ್‌ ನಿರ್ದೇಶಕರಾಗಿ ಆಯ್ಕೆಯಾದ ಅವರು ಮೊದಲ ಆಯ್ಕೆಯಲ್ಲೇ ಅಧ್ಯಕ್ಷರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿ.ಡಿ ಹರೀಶ್‌ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಬಿ.ಎನ್‌ ಸದಾನಂದ ಅವರನ್ನು ಆರಿಸಲಾಯಿತು. ನಿರ್ದೇಶಕರಾಗಿ ಶಾಸಕ ಜಿ.ಟಿ.ದೇವೇಗೌಡ, ಮುಡಾ ಮಾಜಿ ಅಧ್ಯಕ್ಷ ಹೆಜ್.ವಿ.ರಾಜೀವ್, ಕೆ.ಎಸ್.ಕುಮಾ‌ರ್‌, ಶಿವಗಾಮಿ, ಪ್ರಶಾಂತ್‌ ತಾತಾಚಾರ್, ಸೋಮಶೇಖರ್, ಕೆ.ಉಮಾಶಂಕರ್, ಎ.ಟಿ.ಸೋಮಶೇಖರ್, ಕುರಹಟ್ಟಿ ಮಹೇಶ್, ಹನಮನಾಳ ಸಿದ್ದೇಗೌಡ, ಕೆ.ಕುಮಾ‌ರ್, ಮಲ್ಲಣ್ಣ, ಬಿ.ಎನ್. ಸದಾನಂದ ಮರ್ಚಂಟ್ಸ್‌ ಬ್ಯಾಂಕ್ ಆನಂದ್, ಬಿ.ವಿ.ಗುರುರಾಜ್ ಸೇರಿ ಒಟ್ಟು 15 ಮಂದಿ ಆಯ್ಕೆಯಾಗಿದ್ದಾರೆ. 15 ಸದಸ್ಯರ ಪೈಕಿ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆದು ಉಳಿದ ಎಲ್ಲಾ ಕ್ಷೇತ್ರದಲ್ಲಿ ಅವಿರೋಧ ಆಯ್ಕೆ…

Read More