Author: admin

ಬ್ಯಾಂಕ್‌ಗಳ ಮೆಗಾ ವಿಲೀನಕ್ಕೆ ಇನ್ನೊಂದು ಸುತ್ತಿನ ಸಿದ್ಧತೆ, ಮರೆಯಾಗಲಿವೆಯೇ ಹಲವು ಬ್ಯಾಂಕುಗಳು? ನವದೆಹಲಿ: ಸಾರ್ವಜನಿಕ ವಲಯದ ಹಲವು ಬ್ಯಾಂಕುಗಳು ದೊಡ್ಡ ಪ್ರಮಾಣದಲ್ಲಿ ವಿಲೀನಗೊಂಡು ಇನ್ನೂ ಹತ್ತು ವರ್ಷಗಳು ಸಂದಿಲ್ಲ, ಅಷ್ಟರಲ್ಲೇ ಮತ್ತೊಂದು ಸುತ್ತಿನ ಬ್ಯಾಂಕುಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತೊಂದು ಹಂತದ ದೊಡ್ಡ ಪ್ರಮಾಣದ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ ಸಣ್ಣ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ದೊಡ್ಡ ಬ್ಯಾಂಕುಗಳೊಂದಿಗೆ ವಿಲೀನಗೊಳಿಸುವ ಮಹತ್ವದ ಯೋಜನೆಯನ್ನು ರೂಪಿಸಿದೆ ಎನ್ನಲಾಗಿದೆ. ಒಂದು ವೇಳೆ ಇದು ಕಾರ್ಯಗತಗೊಂಡರೆ ದೇಶದ ಬ್ಯಾಂಕಿಂಗ್ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗಲಿದ್ದು, 2027ರೊಳಗೆ ಈ ವಿಲೀನ ಪ್ರಕ್ರಿಯೆಯನ್ನು ಅಂತಿಮಗೊಳಿಸುವ ಗುರಿ ಇದೆ ಎನ್ನಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಡಿಮೆ ಸಂಖ್ಯೆಯ, ಆದರೆ ಆರ್ಥಿಕವಾಗಿ ಬಲಿಷ್ಠವಾಗಿರುವ ಬ್ಯಾಂಕ್‌ಗಳನ್ನು ರಚಿಸಿ, ದೇಶದ ಮುಂದಿನ ಹಂತದ ಸಾಲ ವಿಸ್ತರಣೆ ಮತ್ತು ಆರ್ಥಿಕ ಸುಧಾರಣೆಗಳಿಗೆ ಬೆಂಬಲ ನೀಡುವುದು ಈ ವಿಲೀನದ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಮೂಲಗಳ ಪ್ರಕಾರ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (ಐಒಬಿ), ಸೆಂಟ್ರಲ್ ಬ್ಯಾಂಕ್ ಆಫ್…

Read More

ಉಡುಪಿ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಕುಂದಾಪುರದ ಜನಶ್ರೀ ಸೌಹಾರ್ದ ಸಹಕಾರಿ ಸಂಘದ ಜಗನ್ನಾಥ ಶೆಟ್ಟಿ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿರಿಯಾರದ ಜೈಗಣೇಶ್‌ ಸೌಹಾರ್ದ ಸಹಕಾರಿ ಸಂಘದ ಅಶೋಕ್‌ ಪ್ರಭು ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು. ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹಿತ್‌ ಜಿ.ಸಾಲ್ಯಾನ್‌ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜನಾಥ ಎಸ್‌.ಕೆ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಉಪಸ್ಥಿತರಿದ್ದರು. ನಿರ್ದೇಶಕರಾಗಿ ಉಡುಪಿ ವಲಯದಿಂದ ಸುಧೀರ್‌ ನಾಯಕ್‌ -ಹಂಸ ಚೈತನ್ಯ ಸೌಹಾರ್ದ ಸಹಕಾರಿ ಸಂಘ ಉಡುಪಿ, ಬಿ.ಮಧುಸೂದನ್‌ ನಾಯಕ್‌ -ನಿರ್ಮಾಣ್‌ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಡುಪಿ, ಸುಧಾಕರ ಕೆ. ಮುಳೂರು – ಅನಂತಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಉಡುಪಿ, ರಾಮ್‌ ವಿ.ಕುಂದರ್‌ -ಶ್ರೀರಸ್ತು ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಉಡುಪಿ, ಕಾಪು ವಲಯದಿಂದ ನವೀನ್‌ಚಂದ್ರ ಎಸ್‌.ಸುವರ್ಣ – ಅಡ್ವೆ ವಿವಿಧೋದ್ದೇಶ…

Read More

ನವದೆಹಲಿ: ಭಾರತದ ಸಹಕಾರಿ ಚಳವಳಿಯ ಭವಿಷ್ಯದ ಬಗ್ಗೆ ಹೊಸ ಚಿಂತನೆ ಸೃಜಿಸುವ ಪ್ರಯತ್ನವೊಂದರಲ್ಲಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು (NCDC), MyGov ಸಹಭಾಗಿತ್ವದಲ್ಲಿ “ಬದಲಾಗುತ್ತಿರುವ ಕಾಲದಲ್ಲಿ ಸಹಕಾರಿ ಸಂಸ್ಥೆಗಳ ಹೆಚ್ಚುತ್ತಿರುವ ಮಹತ್ವ” (“Increasing Significance of Cooperatives in Changing Times.”) ಎಂಬ ವಿಷಯದ ಕುರಿತು ರಾಷ್ಟ್ರವ್ಯಾಪಿ ಪ್ರಬಂಧ ಸ್ಪರ್ಧೆ ಆಯೋಜಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿಯ ನಾಗರಿಕರು ಮುಕ್ತವಾಗಿ ಭಾಗವಹಿಸಬಹುದು. ವೇಗವಾಗಿ ವಿಕಸನಗೊಳ್ಳುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ಸಹಕಾರಿ ಸಂಸ್ಥೆಗಳು ವಿವಿಧ ಸಮುದಾಯಗಳಿಗೆ ಹೇಗೆ ಹೊಂದಿಸಿಕೊಳ್ಳಬಹುದು, ವಿಸ್ತರಿಸಬಹುದು ಮತ್ತು ಸಬಲೀಕರಣಗೊಳಿಸಬಹುದು ಎಂಬುದರ ಕುರಿತು ಮೂಲ ವಿಚಾರಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದೆ. ಸಹಕಾರಿ ಕ್ಷೇತ್ರವು ಸಮಗ್ರ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಸ್ಥಳೀಯ ಸ್ವಾವಲಂಬನೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಎನ್‌ಸಿಡಿಸಿ ಪ್ರತಿಪಾದಿಸುತ್ತದೆ. ಕೃಷಿ, ಹೈನುಗಾರಿಕೆ, ವಸತಿ, ಸಾಲ, ಮೀನುಗಾರಿಕೆ ಮತ್ತು ಸೇವೆಗಳಂತಹ ಕ್ಷೇತ್ರಗಳು, ನೀತಿಗಳು ಮತ್ತು ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿರುವ ಸಮಯದಲ್ಲಿ, ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಬಗ್ಗೆ…

Read More

ಅಧ್ಯಕ್ಷರಾಗಿ ಪ್ರಶಾಂತ್‌ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್‌ ಕುಮಾರ್‌ ಆಯ್ಕೆ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್‌ಕಾಮ್ಸ್‌) ಮಂಗಳೂರು ಇದರ ಅಧ್ಯಕ್ಷರಾಗಿ ಪ್ರಶಾಂತ್‌ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್‌ ಕುಮಾರ್‌ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಮಂಗಳೂರು ಹಾಪ್‌ಕಾಮ್ಸ್‌ ಆಡಳಿತ ಕಿಸಾನ್ ಸಂಘ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ ಲಭಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ನಿರ್ದೇಶಕ ಮಂಡಳಿಗೆ ಇತ್ತೀಚೆಗೆ ಅವಿರೋಧ ಆಯ್ಕೆ ನಡೆದಿತ್ತು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್‌ ಇವರು ನಡೆಸಿಕೊಟ್ಟರು. ಸಭೆಯಲ್ಲಿ ನಿರ್ದೇಶಕರಾದ ಜಯಪ್ರಕಾಶ್‌ ಕೂಜುಗೋಡು, ಜಯಕುಮಾರ್‌ ಪರ್ಕಳ, ಹರೀಶ್‌, ಯಶೋದರ ಶೆಟ್ಟಿ ಬಿ., ಕೆ.ಲಕ್ಷ್ಮೀನಾರಾಯಣ ಉಡುಪ, ಸೀತಾರಾಮ ಗಾಣಿಗ, ರತ್ನರಾಜ್‌ ಪಿ., ಅನಂತಪದ್ಮನಾಭ ಉಡುಪ ಕೆ., ವಿಜಯ ರೈ, ಚೀಂಪ, ಸುಂದರ ನಾಯ್ಕ, ಮಮತಾ ಎಂ.ಶೆಟ್ಟಿ, ಸುಭದ್ರಾ ರಾವ್‌ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಪ್ರವೀಣ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು…

Read More

ಮಂಗಳೂರು: ಇಲ್ಲಿನ ಜನತಾ ಬಜಾರ್‌ (ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ) ಆಡಳಿತ ಮಂಡಳಿಗೆ ಭಾನುವಾರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲೂ ಆಯ್ಕೆಯಾಗಿದ್ದಾರೆ. 14 ಸ್ಥಾನಗಳ ಪೈಕಿ 13 ಮಂದಿ ಅವಿರೋಧ ಆಯ್ಕೆಯಾಗಿದ್ದು, ಒಂದು ಸ್ಥಾನಕ್ಕೆ ಚುನಾವಣೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಎ ಕೆಟಗರಿಯಿಂದ ದಿನೇಶ್‌ ಹೆಗ್ಡೆ, ಸಿ ಕೆಟಗರಿಯಿಂದ ಪುರುಷೋತ್ತಮ ಭಟ್‌, ಪ್ರಸನ್ನ, ಮೋಹನ್‌ ಕುಂಬ್ಳೇಕರ್‌, ಹಿಂದುಳಿದ ವರ್ಗ ಶಾಂತಾ ಆರ್‌, ಉದಯ ಮಾದೋಡಿ, ಪರಿಶಿಷ್ಟ ಜಾತಿ ಭಾಗೀರಥಿ ಮುರುಳ್ಯ, ಪರಿಶಿಷ್ಟ ಪಂಗಡ ಪಕೀರಪ್ಪ, ಮಹಿಳಾ ವಿಭಾಗ ಮದಲಾಕ್ಷಿ, ಸುಜಯ ಹೇಮಚಂದ್ರ, ಎಫ್‌ ಕೆಟಗರಿಯಿಂದ ಬಿ.ಜನಾರ್ದನ, ನವೀನ್‌ ಬಾಳುಗೋಡು, ಶಶಿಧರ ಶೆಟ್ಟಿ ಮತ್ತು ದಯಾನಂದ ಅಡ್ಯಾರ್‌ ಆಯ್ಕೆಯಾಗಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ವಿಶ್ವಕರ್ಮ ಬ್ಯಾಂಕ್‌ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಮತ ಮಂಗಳೂರು: ಸ್ವಚ್ಛತೆಯ ಕಾರ್ಯ ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ನಮ್ಮ ಮನೆ ಮಾತ್ರವಲ್ಲ, ನಮ್ಮ ನಾಗರೀಕ ಪರಿಸರದ ಜವಾಬ್ಧಾರಿಯು ನಮ್ಮೆಲ್ಲರ ವೈಯಕ್ತಿಕ ಜವಾಬ್ದಾರಿಯಾಗಿದೆ. ಆದುದರಿಂದ ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮಂತ್ರದಂತೆ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವ ಕಾರ್ಯದಲ್ಲಿ ನಾವು ಮುಂದುವರಿಯಬೇಕಾಗಿದೆ ಎಂದು ಡಾ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಸ್ವಯಂಸೇವಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಕಾರ್ಯಕ್ರಮದ “ಸ್ವಚ್ಛತಾ ಹೀ ಸೇವಾ “ ಎಂಬ ಧ್ಯೇಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕ್ ತನ್ನ ಸ್ವರ್ಣ ಜಯಂತಿಯ ಹಿನ್ನಲೆಯೊಳಗೆ ಎಲ್ಲಾ ಶಾಖೆಗಳು ಮತ್ತು ಅದರ ಗ್ರಾಹಕರೊಂದಿಗೆ ಈ ಆಂದೋಲನದಲ್ಲಿ ಕೈಜೋಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹೇಳಿದರು. ವಿಶ್ವಕರ್ಮ ಸಹಕಾರ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ನಲ್ಲಿ ನಮ್ಮ ಬ್ಯಾಂಕ್‌ ದಿನಾಚರಣೆಯಲ್ಲಿ ವಿದ್ವಾನ್ ಎನ್.ದಾಮೋದರ ಶರ್ಮ ವಿಶ್ಲೇಷಣೆ ಮಂಗಳೂರು: ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅವಗುಣಗಳು ಹೇಗೆ ಇರುತ್ತವೆಯೋ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಧನಾತ್ಮಕ ಸಂಗತಿಗಳಿಂದ ಕೂಡಿದ ಉತ್ತಮ ಗುಣಗಳು ಕೂಡ ಇರುತ್ತವೆ. ನಾವು ಅವಗುಣಗಳ ಬಗ್ಗೆ ಮಾತನಾಡದೇ ಅವರ ಒಳ್ಳೆಯ ಗುಣಗಳನ್ನು ಗುರುತಿಸಿ ಅನುಸರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ನಾವು ಕೆಲಸ ನಿರ್ವಹಿಸುವ ಪರಿಸರವನ್ನು ಆರೋಗ್ಯಪೂರ್ಣವಾಗಿಸಲು ಸಾಧ್ಯ. ಆದುದರಿಂದ ಧನಾತ್ಮಕ ಚಿಂತನೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ವಾಗ್ಮಿ ಎನ್.ದಾಮೋದರ ಶರ್ಮ ಅಭಿಪ್ರಾಯಪಟ್ಟರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಭಾನುವಾರ ನಮ್ಮ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಸಂಸ್ಥೆಯ ಬೆಳವಣಿಗೆಯಲ್ಲಿ ಸಿಬ್ಬಂದಿಗಳ ಪಾತ್ರ ಅತ್ಯಂತ ಗುರುತರವಾದುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಕಲಿಕೆ ಮತ್ತು ಅಧ್ಯಯನದ ಮೂಲಕ ನಮ್ಮ ಸಾಮರ್ಥ್ಯವನ್ನು ಸಕಾಲಿಕವಾಗಿ ಬೆಳೆಸಿಕೊಳ್ಳುವುದು ಹಾಗೂ ಅದನ್ನು ಪ್ರಸ್ತುತತೆಗೆ ಅನುಗುಣವಾಗಿ ಬಳಸಿಕೊಳ್ಳುವ ಕಾರ್ಯ ಮಾಡಬೇಕು. ಆಗ ಸಾಂಸ್ಥಿಕ ಬೆಳವಣಿಗೆ ಹೇಗೆ ಸಾಧ್ಯವಾಗತ್ತದೋ ಹಾಗೆಯೇ ಸಿಬ್ಬಂದಿಗಳ…

Read More

ಗ್ರಾಹಕರ ಸಮಾವೇಶದಲ್ಲಿ ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಅಭಿಪ್ರಾಯ ಪುತ್ತೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್  ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಪ್ರಯುಕ್ತ ಪುತ್ತೂರು ಶಾಖೆಯ ಸದಸ್ಯ ಗ್ರಾಹಕರ ಸಮಾವೇಶ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯರು, ಸದಸ್ಯ ಗ್ರಾಹಕರಿಗೆ ಎರಡು ಲಕ್ಷ ರೂ.ನ ವಿಮೆ ಮಾಡಿಸಲಾಗಿದೆ. ಗ್ರಾಹಕರು ಹಾಗೂ ಬ್ಯಾಂಕಿನ ಬಾಂಧವ್ಯ ಹೀಗೆಯೇ ಮುಂದುವರಿಯಲಿ. ಸಂಸ್ಥೆಯ ಬೆಳವಣಿಗೆಗೆ ಗ್ರಾಹಕರು ಕಾರಣರಾಗಿದ್ದೀರಿ ಎಂದು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮುಖ್ಯ ಅತಿಥಿಯಾಗಿದ್ದ ಚಿದಾನಂದ ಬೈಲಾಡಿ ಮಾತನಾಡಿ, ಸಹಕಾರ ಬ್ಯಾಂಕ್‌ಗಳು ಕರಾವಳಿಯ ಗ್ರಾಹಕರ ಜೀವನಾಡಿಯಾಗಿ ಕೆಲಸ ನಿರ್ವಹಿಸುತ್ತಿವೆ. ಈ ಸಂಬಂಧವನ್ನು ಕೃಷ್ಣ -ಕುಚೇಲರಿಗೆ ಹೋಲಿಸಬಹುದು. ಕೃಷ್ಣ ಹಾಗೂ ಕುಚೇಲರ ನಡುವೆ ಇದ್ದ ಸಮಾನತೆಯನ್ನು ಇಲ್ಲಿ ನಾವು ಕಾಣಬಹುದು. ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯು ಗ್ರಾಹಕರನ್ನು ದೇವರ ಹಾಗೆ ಕಾಣುತ್ತಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರ ಪರಿಣಾಮ ಸೊಸೈಟಿ 5 ಬಾರಿ ಸಾಧನಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಯನ್ನು…

Read More

ಸಿಬ್ಬಂದಿ, ನೌಕರರ ನೇಮಕಾತಿ, ವರ್ಗಾವಣೆಗೆ ಸಂಬಂಧಿಸಿದ ಕಾಯ್ದೆ ತಿದ್ದುಪಡಿ ಕಾನೂನುಬಾಹಿರ ಎಂದಿದ್ದ ಕೋರ್ಟ್‌, ಹೈಕೋರ್ಟ್‌ಗೆ ಮೇಲ್ಮನವಿ ಬೆಂಗಳೂರು: ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೌಕರರ ನೇಮಕಾತಿ, ವರ್ಗಾವಣೆ, ಶಿಸ್ತುಕ್ರಮದ ಅಧಿಕಾರ ಈ ವಿಷಯಗಳಲ್ಲಿ ರಾಜ್ಯ ಸರ್ಕಾರವು ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಈ ವಿಷಯದಲ್ಲಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ರಾಜ್ಯ ಸರಕಾರ ಇದೀಗ ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಅದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೇಮಕಾತಿಗೆ ಸಂಬಂಧಿಸಿದ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ, ಅವರ ವಿರುದ್ಧ ಆರೋಪಗಳು ಕೇಳಿ ಬಂದಾಗ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸರಕಾರ ಮೊಟಕುಗೊಳಿಸಿತ್ತು ಇದರ ವಿರುದ್ಧ ಸಹಕಾರ ಸಂಘಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಸರಕಾರದ ಕ್ರಮ ಕಾನೂನುಬಾಹಿರವೆಂದು ಸಾರಿದ್ದ ನ್ಯಾಯಾಲಯ ಸಹಕಾರ ಸಂಘಗಳ ಪರವಾಗಿ ಕಳೆದ ವರ್ಷ ತೀರ್ಪು ನೀಡಿತ್ತು. ಆ ತೀರ್ಪು ರದ್ದುಪಡಿಸುವಂತೆ…

Read More

ಸರ್ಕಾರಗಳಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ : ಹೈಕೋರ್ಟ್ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ಸಿಬ್ಬಂದಿಗಳೂ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರ ವಿರುದ್ಧ ದಾಖಲಾಗಿರುವ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಪ್ರಕರಣದ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆಯೂ ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್, ತಮ್ಮದು ಸರ್ಕಾರಿ ಸಂಸ್ಥೆಯಲ್ಲ ಎಂದು ಆ ಸಂಘ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಕೃಷಿ, ಕೈಗಾರಿಕೆ, ಬ್ಯಾಂಕಿಂಗ್, ವ್ಯಾಪಾರದಲ್ಲಿ ತೊಡಗಿರುವ ಸಹಕಾರಿ ಸಂಘದ ಅಧ್ಯಕ್ಷ,…

Read More