Author: admin

ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ಅರಸೀಕೆರೆ: ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ, ಮಾಡಾಳು ಶ್ರೀ ನಿರಂಜನ ಪೀಠದ ಪೀಠಾಧ್ಯಕ್ಷರಾದ ರುದ್ರಮುನಿ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮ ನಿರಂಜನ ಪೀಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಮೊದಲನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೆ ಉತ್ತಮ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುವುದಲ್ಲದೆ ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಕೂಡ ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ…

Read More

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಬಂಟ್ವಾಳ: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಅಡಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಸಹಕಾರಿಗಳು ಮತ್ತು ಗ್ರಾಹಕರಿಗೆ ದೇಶೀಯ ಉತ್ಪನ್ನಗಳ ಉತ್ಪಾದನೆ, ಬಳಕೆಗೆ ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಿದಾಗ ಭಾರತದ ಜಿಡಿಪಿ ಏರಿಕೆಯಾಗಿ ಪ್ರಾಥಮಿಕ ಸಹಕಾರ ಸಂಘಗಳು ಬಲವರ್ಧನೆಯಾಗುವುದರೊಂದಿಗೆ ಭಾರತ ಜಗತ್ತಿನಲ್ಲಿಯೇ ಅಗ್ರರಾಷ್ಟ್ರವಾಗಿ ಹೊರ ಹೊಮ್ಮಲ್ಲಿದ್ದು ಸಹಕಾರ ಸಂಘಗಳು ದೇಶೀಯ ಉತ್ಪನ್ನಗಳ ಉತ್ಪಾದನೆ ಮತ್ತು ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಿದ ಸಂಘದ 2024-25ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ನವರಾತ್ರಿಯ ಸಂದರ್ಭಕ್ಕೆ ಬೇಕಾಗುವಂತ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ 5000 ಪ್ರಸಾದ ನೀಡುವ ಕೈಚೀಲಗಳು ಮತ್ತು ಭಕ್ತರಿಗೆ ದೇವಸ್ಥಾನದಲ್ಲಿ ಊಟಕ್ಕೆಂದು 500 ಸ್ಟೀಲ್ ತಟ್ಟೆಗಳನ್ನು ಶುಕ್ರವಾರ ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣ ಐತಾಳ್ ಅವರಿಗೆ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರು ದೇವಸ್ಥಾನಕ್ಕೆ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಶ್ರೀಶಾ ಸೊಸೈಟಿಯು ಆರಂಭವಾಗಿ ಆರು ವರ್ಷಗಳಾದ ಶುಭವಸರದಲ್ಲಿ ಮಂಗಳೂರಿನ ಗ್ರಾಮದೇವತೆ ಮಂಗಳಾದೇವಿಯ ಭಕ್ತರಿಗೆ ಅನುಕೂಲವಾಗುವಂತ ಊಟದ ತಟ್ಟೆಗಳನ್ನು ಹಾಗೂ ದೇವರ ಪ್ರಸಾದ ನೀಡಲು ಚೀಲಗಳನ್ನು ದೇವಸ್ಥಾನಕ್ಕೆ ನೀಡಲು ಅವಕಾಶ ದೊರಕಿದ್ದು ನಮ್ಮ ಸೌಭಾಗ್ಯ. ಶ್ರೀ ಮಂಗಳಾದೇವಿಯು ನಮ್ಮ ನಿಮ್ಮನ್ನೆಲ್ಲಾ ಸಕಲ ಸೌಭಾಗ್ಯಗಳನ್ನಿತ್ತು ಅನುಗ್ರಹಿಸಲಿ ಎಂದು ಮಾತೆಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅರುಣ ಐತಾಳ್ ಅವರು ಶ್ರೀಶಾ ಸೌಹಾರ್ದ ಸೊಸೈಟಿಯ ಈ ದೊಡ್ಡ ಕೊಡುಗೆ ದೇವಸ್ಥಾನಕ್ಕೆ ತುಂಬಾ…

Read More

ಪುತ್ತೂರು: ಅತೀ ಹೆಚ್ಚು ಅಡಕೆ ಖರೀದಿ ಮಾಡಿದ ಸಾಧನೆಗಾಗಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳೂರಿನ ಬೈಕಂಪಾಡಿಯಲ್ಲಿ ಕೆ.ಸೀತಾರಾಮ ರೈ ಸವಣೂರು ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಾಸ್ ಲಿಮಿಟೆಡ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಗೌರವಾರ್ಪಣೆ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸವಣೂರು ಮಾಸ್ ಅಡಕೆ ಖರೀದಿ ಕೇಂದ್ರಕ್ಕೆ ಅಡಕೆ ಮಾರಾಟ ಮಾಡಿ ಈ ಸಾಧನೆಗೆ ಕಾರಣಕರ್ತರಾಗಿರುವ ಅಡಕೆ ಬೆಳೆಗಾರರ ಪರವಾಗಿ ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಗೌರವಾರ್ಪಣೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚೇತನ್ ಕೋಡಿಬೈಲು, ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಮಾಸ್ ಶಾಖೆ ಅಡಕೆ ಖರೀದಿ ಕೇಂದ್ರದ ಶಾಖಾಧಿಕಾರಿ ಯತೀಶ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ನಗರದ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕಿನ 101ನೇ ವಾರ್ಷಿಕ ಸಾಮಾನ್ಯ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಶ್ರೀ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆಯಿತು. ಬ್ಯಾಂಕಿನ ಸ್ಥಿರಾಸ್ತಿ ಮೌಲ್ಯಮಾಪಕ ಅಶೋಕ್ ಕುಮಾ‌ರ್, ಆತ್ಮಶಕ್ತಿ ಪತ್ರಿಕೆಯ ಸಂಪಾದಕ ವಾಮನ್ ಕುದ್ರೋಳಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಾಜಿ ಸಿಬ್ಬಂದಿ ಅಶೋಕ್, ಕರ್ಣಾಟಕ ಬ್ಯಾಂಕಿನ ಮಾಜಿ ಸಿಬ್ಬಂದಿ ದಿನೇಶ್ ಅಂಚನ್ ಹಾಗೂ ಬ್ಯಾಂಕಿನ ಸದಸ್ಯರಾದ ಸಂಧ್ಯಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.  https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕ್ 2024-25ನೇ ಸಾಲಿನಲ್ಲಿ 211.55 ಲಕ್ಷ ರೂ. ನಿರ್ವಹಣಾ ಲಾಭ ಹಾಗೂ 95.50 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನಲ್ಲಿ ಒಟ್ಟು 23,498 ಮಂದಿ ಪಾಲುದಾರ ಸದಸ್ಯರಿದ್ದು, 900.92 ಲಕ್ಷ ರೂ. ಪಾಲು ಬಂಡವಾಳ ಮತ್ತು 18,508.78 ಲಕ್ಷ ರೂ. ಠೇವಣಿಯಿದ್ದು ದುಡಿಯುವ ಬಂಡವಾಳ 21,394.06 ಲಕ್ಷ ರೂ. ಇರುತ್ತದೆ. ಈ ಕುರಿತ ಸಂಪೂರ್ಣ ವರದಿಯನ್ನು ಬ್ಯಾಂಕಿನ ಪ್ರಭಾರ ಜನರಲ್ ಮ್ಯಾನೇಜರ್‌…

Read More

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಹಾಸಭೆಯಲ್ಲಿ ಅಧ್ಯಕ್ಷ ಭಾಸ್ಕರ ದೇವಸ್ಯ ಹೇಳಿಕೆ ಮಂಗಳೂರು: ರಾಜ್ಯ ಸರ್ಕಾರದ ಕೆಲವು ಹೊಸ ನೀತಿಗಳಿಂದಾಗಿ ಸೌಹಾರ್ದ ಸಹಕಾರಿ ಸಂಘಗಳಿಗೂ ಸಮಸ್ಯೆ ಉಂಟಾಗಿದೆ. ಇವುಗಳ ವಿರುದ್ಧ ಹೋರಾಟ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯು ಸದಾಕಾಲ ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಹೇಳಿದರು.‌ https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷದಿಂದ ಹೊಸ ಆಡಳಿತ ಸಮಿತಿ ರಚನೆಯಾದ ಬಳಿಕ ಒಕ್ಕೂಟಕ್ಕೆ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅದು ನಡೆಯಲಿಲ್ಲ. ಈ ವರ್ಷ ಶೇ.೧೦೦ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಎಲ್ಲ ಸೌಹಾರ್ದ ಸಂಘಗಳೂ ಜಿಲ್ಲಾ ಒಕ್ಕೂಟದಲ್ಲಿ ಸದಸ್ಯತ್ವ ಪಡೆದು ಬಲಶಾಲಿಯಾಗಿ ರೂಪುಗೊಳ್ಳಬೇಕು ಎಂದು ಅವರು ಹೇಳಿದರು.…

Read More

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಆಶೀರ್ವಚನ ವಿಟ್ಲ: ಸಹಕಾರ ತತ್ವದಲ್ಲಿ ಜೀವನದ ಸತ್ವ ಅಡಗಿದೆ. ವ್ಯವಹಾರದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇದ್ದಾಗ ಬೆಳವಣಿಗೆ ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಹಕಾರಿಗಳು ಇದ್ದಾಗ ಸಹಕಾರಿ ಸಂಘಗಳು ಯಶಸ್ವಿಯಾಗಿ ಬೆಳೆಯುತ್ತವೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘವು ಉನ್ನತ ಸ್ಥಾನಕ್ಕೇರಿದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ 2,227 ಕೋಟಿ ರೂ. ವ್ಯವಹಾರ ನಡೆಸಿದ್ದು, 5.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ…

Read More

ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ: ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಮಾಹಿತಿ ಮೂಡುಬಿದಿರೆ: ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘವು 2024-25ನೇ ಸಾಲಿನಲ್ಲಿ 474 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, 3.26 ಕೋಟಿ ರೂ. ಲಾಭ ಗಳಿಸಿದ್ದು ಸತತ ಏಳನೇ ವರ್ಷವೂ ಶೇ.25 ಲಾಭಾಂಶ ಘೋಷಿಸಲಾಗುತ್ತಿದೆ. ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ ಕಾಯ್ದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳುವಾಯಿ ಖಂಡಿಗ ಗ್ರೀನ್ಸ್ ಮಲ್ಟಿಪರ್ಪಸ್ ಹಾಲ್‌ನಲ್ಲಿ ಇತ್ತೀಚೆಗೆ ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ 2024-25ರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳುವಾಯಿಯಲ್ಲಿ ಪ್ರಧಾನ ಕಚೇರಿ, ಕೆಸರುಗದ್ದೆ, ಮೂಡುಮಾರ್ನಾಡು, ದರೆಗುಡ್ಡೆ, ಪಡುಮಾರ್ನಾಡುಗಳಲ್ಲಿ ಶಾಖೆಗಳನ್ನು ಹೊಂದಿದೆ. 7,505 ಸದಸ್ಯ ಬಲ ಇದ್ದು, 108.29 ಕೋಟಿ ರೂ. ಠೇವಣಿ ಸಂಗ್ರಹ, 100.19 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಶೇ.98.65 ಸಾಲ ಮರುಪಾವತಿಯಾಗಿದೆ ಎಂದು ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದರು. ಮುಂದಿನ ಸಾಲಿನಲ್ಲಿ 120 ಕೋಟಿ ರೂ. ಠೇವಣಿ ಸಂಗ್ರಹ, 110 ಕೋಟಿ…

Read More

ಮೈಸೂರು: ಇತ್ತೀಚೆಗೆ ನಡೆದ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ 71ನೇ ವಾರ್ಷಿಕ ಮಹಾಸಭೆಯಲ್ಲಿ ಮೈಸೂರು ಜಯನಗರದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಎಂದು ಗುರುತಿಸಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಪ್ತರ್ಷಿ ಸೌಹಾರ್ದ ಸಹಕಾರಿಯ ಪರವಾಗಿ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎ.ಪುರುಷೋತ್ತಮ ಇವರಿಗೆ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್, ಗೌರವ ಖಜಾಂಚಿ ಕೃಷ್ಣವೇಣಿ ಎಂ.ಜಿ, ನಿರ್ದೇಶಕರಾದ ಎನ್.ನಾಗಚಂದ್ರ, ಹೆಚ್.ವಿ.ಸುಬ್ಬಣ್ಣ, ಬಸವಣ್ಣ, ಲಕ್ಷ್ಮಿದೇವಿ, ಮುತ್ತುರಾಜ್, ಜಿ.ಕೀರ್ತಿಪ್ರಕಾಶ್ ಹಾಗೂ ಎಂ.ಹನುಮಂತಯ್ಯ ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬೆಂಗಳೂರು: ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ಗುರುವಾರ ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬೆಂಗಳೂರು ನಾಲ್ಕನೇ ವಲಯದ ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ತರಬೇತಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಎಸ್.ಗುಂಡೂರಾವ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬಿ.ಹೆಚ್.ಕೃಷ್ಣರೆಡ್ಡಿ, ಮಂಜುನಾಥ್ ಭಾಗವಹಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರು ಪ್ರಾಂತೀಯ ಅಧಿಕಾರಿ ಶ್ರೀಧರ್ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಸಹಕಾರಿಗಳ ಚುನಾವಣಾ ಪೂರ್ವ ತಯಾರಿ ಕುರಿತು ಸಹಕಾರ ಇಲಾಖೆಯ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. 58 ಸೌಹಾರ್ದ ಸಹಕಾರಿಗಳಿಂದ 77 ಜನರು…

Read More