Author: admin

ಉಡುಪಿ: ಇಲ್ಲಿನ ಪರ್ಕಳ ಮುಖ್ಯ ರಸ್ತೆಯ ಪಾಂಡುರಂಗ ಟವರ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಪಾರ್ಶ್ವದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಶ್ರೀದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಅಕ್ಟೋಬರ್‌ 12ರಂದು ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪರ್ಕಳ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಅಶೋಕ್‌ ಕಾಮತ್‌ ಕೊಡಂಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುರೇಶ್‌ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್‌, ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮಂಗಳೂರಿನ ಜಂಟಿ ನಿರ್ದೇಶಕ ಗೋಕುಲ್‌ದಾಸ್‌ ಕಾಮತ್‌, ಉಡುಪಿ ಜಿಲ್ಲಾ ಸಹಕಾರಿ…

Read More

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮತ್ತು ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್‌ ೧೧ರಂದು ಶನಿವಾರ ಬೆಳಗ್ಗೆ ೧೦ರಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್‌ ಸೂರಿಂಜೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್‌ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ…

Read More

ಕಾರವಾರ: ಇಲ್ಲಿನ ಕಾರವಾರ ಅರ್ಬನ್ ಬ್ಯಾಂಕ್‌ಗೆ ಲಿಕ್ವಿಡೇಟರ್ (ಸಮಾಪನಾಧಿಕಾರಿ) ಅನ್ನು ನೇಮಕ ಮಾಡಲಾಗಿದ್ದು, ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಆದೇಶದ ತನಕ ಈ ಬ್ಯಾಂಕ್‌ನ ಕಾರ್ಯಚಟುವಟಿಕೆಗಳು ಲಿಕ್ವಿಡೇಟರ್‌ ಅವರ ನೇತೃತ್ವದಲ್ಲೇ ತೆರೆಯಲಿದ್ದು, ಸಾಲ ವಸೂಲಿ ಹಾಗೂ ಇತರ ಕಾರ್ಯಗಳೂ ಈ ಹಿಂದಿನಂತೆ ನಡೆಯಲಿದೆ ಎಂದು ಲಿಕ್ವಿಡೇಟರ್ ಮಾಹಿತಿ ನೀಡಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಳೆದ ಜುಲೈ 22ರಂದು ಕಾರವಾರ ಅರ್ಬನ್ ಬ್ಯಾಂಕ್‌ನ ಲೈಸನ್ಸ್ ರದ್ದು ಮಾಡಿ ರಿಸರ್ವ್‌ ಬ್ಯಾಂಕ್‌ ಆದೇಶ ಹೊರಡಿಸಿತ್ತು. ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದ್ದರಿಂದ ಬ್ಯಾಂಕಿನ ನಿರಂತರ ಕಾರ್ಯಾಚರಣೆಯು ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದ ಆರ್‌ಬಿಐ, ಲಿಕ್ವಿಡೇಟರ್‌ ಅನ್ನು ನೇಮಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿತ್ತು. ಅದರಂತೆ ಅಂಕೋಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಮಮತಾ ನಾಯಕ್‌ ಅವರು ಲಿಕ್ವಿಡೇಟರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿದ ನಂತರ ಮಾತನಾಡಿರುವ ಮಮತಾ ನಾಯಕ್‌, ಬ್ಯಾಂಕ್‌ನಲ್ಲಿ ಠೇವಣಿ ಇಟ್ಟವರಿಗೆ ಗರಿಷ್ಠ 5 ಲಕ್ಷದವರೆಗೆ…

Read More

ಬೆಳ್ತಂಗಡಿ: ಮಂಗಳೂರಿನ ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಬೆಳ್ತಂಗಡಿ ಚರ್ಚ್‌ ಬಳಿಯ ನೊರೋನಾ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಲಕ್ಷ್ಮಣ್‌ ಕರಾವಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯು ಕಳೆದ ಮೂವತ್ತು ವರ್ಷಗಳಿಂದ ಉತ್ತಮವಾಗಿ ಪ್ರಗತಿ ಕಂಡಿದ್ದು ಸೊಸೈಟಿಯ ಶಾಖೆಗಳ ವಿಸ್ತರಣೆಗೆ ಯೋಜನೆ ಹಮ್ಮಿಕೊಳ್ಳಬೇಕು. ಪ್ರತಿ ಎರಡು ವರ್ಷಕ್ಕೊಮ್ಮೆ ಒಂದು ಶಾಖೆಯಂತೆ ಹತ್ತರಿಂದ ಹದಿನೈದು ಶಾಖೆಗಳು ಶೀಘ್ರ ಆಗಬೇಕಿದೆ. ಬೆಳ್ತಂಗಡಿಯಲ್ಲಿ ಆರಂಭಗೊಂಡ ಶಾಖೆ ಕೋಟಿ ರೂ.ಗೂ ಹೆಚ್ಚು ವ್ಯವಹಾರ ನಡೆಸಿ ಪ್ರಗತಿಪಥದಲ್ಲಿ ಸಾಗುವಂತಾಗಲಿ ಎಂದು ಶುಭ ಹಾರೈಸಿದರು. ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್‌ ಕೆ ಅಧ್ಯಕ್ಷತೆ ವಹಿಸಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಂಪ್ಯೂಟರೀಕರಣ ವ್ಯವಸ್ಥೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿ ಕಿಶೋರ್ ಪೂಜಾರಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ|ಇಮ್ರಾನ್ ಪಾಷಾ ಮಾತನಾಡಿ ಆತ್ಮಶಕ್ತಿ…

Read More

ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಪಡುಬಿದ್ರಿ: ವಾಣಿಜ್ಯ ಬ್ಯಾಂಕ್‌ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘಗಳು ಜನರ ಅಭಿವೃದ್ಧಿಗೆ ಇರುವ ಏಕೈಕ ಸಂಸ್ಥೆಗಳಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಸಹಭಾಗಿತ್ವದಲ್ಲಿ ಭಾನುವಾರ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಮಾತನಾಡಿದರು. ಸರಳವಾಗಿ, ತ್ವರಿತವಾಗಿ ಜನರಿಗೆ ಸಾಲ ನೀಡುವಂತಹ ವ್ಯವಸ್ಥೆಯಿರುವ ಸಂಸ್ಥೆಯೆಂದರೆ ಸಹಕಾರಿ ಸಂಸ್ಥೆ ಎಂದು ಹೇಳಲು ಸಂತೋಷವಾಗುತ್ತದೆ. ಇಲ್ಲಿನ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಮತ್ತು ಸೊಸೈಟಿ ಆರಂಭದ ಮೂಲಕ ಹೆಮ್ಮೆ ತರುವಂತಹ ಕೆಲಸ ಮಾಡಿದೆ. ಇಲ್ಲಿನ ಸೊಸೈಟಿ ಕಟ್ಟಡಕ್ಕೆ 10 ಲಕ್ಷ, ಬಂಟರ ಸಂಘಕ್ಕೆ ಲಿಫ್ಟ್‌…

Read More

ಉಡುಪಿ: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎ0 ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಉದ್ಘಾಟಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ ಧರ್ಮಗುರು ರೆ.ಡಾ.ರಾಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ ಒ ಮತ್ತು ತೊಟ್ಟಂ ಚರ್ಚ್ ಧರ್ಮಗುರು ರೆ.ಫಾ.ಡೆನಿಸ್ ಡೇಸಾ ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿ0ದ ಮೊದಲ ಹಣ ಹಿಂಪಡೆದರು. ಸೇಫ್ ರೂಮ್ ಅನ್ನು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂದನೀಯ ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಇ-ಸ್ಟಾಂಪಿ0ಗ್ ಸೌಲಭ್ಯವನ್ನು ಸುಬ್ರಹ್ಮಣ್ಯ ನಗರದ ಸೇಂಟ್ ಪಾಲ್ ಚರ್ಚ್ ಸಭಾಪಾಲಕರಾದ ರೆವೆರೆಂಡ್ ಕಿಶೋರ್ ಕುಮಾರ್ ಉದ್ಘಾಟಿಸಿದರು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಮತ್ತು ಉಡುಪಿ ಧರ್ಮಪ್ರಾಂತ್ಯದ ವಿಕಾರ್…

Read More

ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ಆಲಂಕಾರಿನಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಟಾಟನೆ ಕಡಬ: ತಾಲೂಕಿನ ಆಲಂಕಾರಿನಲ್ಲಿ ಭಾನುವಾರ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ 17ನೇ ಶಾಖೆಯನ್ನು ಉದ್ಘಾಟಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು, ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಈಡೇರಿಸುವಲ್ಲಿ ಸಹಕಾರಿ ಸಂಘಗಳು ಅನನ್ಯ ಪಾತ್ರ ವಹಿಸುತ್ತವೆ. ಸಹಕಾರಿ ಸಂಸ್ಥೆಗಳು ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತವೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಂಸ್ಥೆಯಾಗಿ ಬೆಳೆಯಬೇಕಾದರೆ ಸಂಘದ ನೌಕರ ವೃಂದ ಜನಸಾಮಾನ್ಯರ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕೆಲಸ ಮಾಡಬೇಕು. ಸಮಾಜ ಸೇವಾ ಸಹಕಾರಿ ಬ್ಯಾಂಕ್ ಈ ನಿಟ್ಟಿನಲ್ಲಿ ಕೆಲಸ ಮಾಡಿರುವುದರಿಂದ 17 ಶಾಖೆಗಳನ್ನು ತೆರೆಯುವಂತಾಗಿದೆ ಎಂದು ಹೇಳಿದರು. ವ್ಯಾವಹಾರಿಕವಾಗಿ ಬೆಳೆಯುತ್ತಿರುವ ಆಲಂಕಾರಿನಲ್ಲಿ ಆರಂಭಗೊಂಡ ಸಮಾಜ ಸೇವಾ ಸಹಕಾರಿ ಸಂಸ್ಥೆಯು ಇಲ್ಲಿನ ಜನರ ಆರ್ಥಿಕ…

Read More

ಬಂಟ್ವಾಳ: ಸ್ವಾತಂತ್ರ್ಯ ಯೋಧ, ಸಮಾಜರತ್ನ ಡಾ|ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ 1981ರಲ್ಲಿ ಬಂಟ್ವಾಳದಲ್ಲಿ ಸ್ಥಾಪನೆಯಾದ ಸಮಾಜ ಸೇವಾ ಸಹಕಾರಿ ಸಂಘದ ಹದಿನೇಳನೇ ಶಾಖೆಯು ಕಡಬ ತಾಲೂಕಿನ ಆಲಂಕಾರಿನಲ್ಲಿ ಅಕ್ಟೋಬರ್‌ 5ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಆಲಂಕಾರಿನ ಮಾತೃಕೃಪಾ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ|ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಮಾಜ ಸೇವಾ ಸಹಕಾರಿ ಸಂಘ ನಿ ಇದರ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಠೇವಣಿ ಪತ್ರ…

Read More

ಮಣಿಪಾಲದ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಸಾಧನೆ ಉಡುಪಿ: ಸಹಕಾರಿ ಕ್ಷೇತ್ರದ ಕೆಲಸದ ಜೊತೆಜೊತೆಗೆ ಹವ್ಯಾಸವಾಗಿ ಮಾಡುತ್ತಿದ್ದ ಛಾಯಾಗ್ರಹಣದ ಕಲೆ ರಾಜ್ಯ ಪ್ರಶಸ್ತಿಯನ್ನೇ ತಂದಿತ್ತಿದೆ. ಶುಕ್ರವಾರ ಪ್ರಕಟಿಸಲಾದ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ಉತ್ತಮ ಛಾಯಾಗ್ರಹಣ ವಿಭಾಗದಲ್ಲಿ ಉಡುಪಿ ಮಣಿಪಾಲದ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ್ ಪ್ರಭು ಹಿರೇಬೆಟ್ಟು ಅವರಿಗೆ ಪ್ರಶಸ್ತಿ ಲಭಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ನಲ್ಲಿ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಕರಾವಳಿಯಿಂದ ವಲಸೆ ಹೋಗಿ ಸಾಧನೆ ಮಾಡಿದ್ದಾರೆ. ಅಂಥದೇ ಸಾಲಿಗೆ ಹಿರೇಬೆಟ್ಟುವಿನ ಭುವನೇಶ್ ಪ್ರಭು ಸೇರಿದ್ದಾರೆ. ಈ ಹಿಂದೆ ಕರಾವಳಿ ಭಾಗದ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ‘ಜ್ಞಾನದಾಸರೆ’ ಎಂಬ ಕಿರುಚಿತ್ರ ಆಯ್ಕೆಯಾಗಿ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶನಗೊಂಡು ಅದರ ವಿಮರ್ಶೆ ನಡೆದಾಗ ಪ್ರೇಕ್ಷಕರೊಬ್ಬರು ಅದರ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಅಂದು ಆಗಿದ್ದ ಅವಮಾನವನ್ನು ಲೆಕ್ಕಿಸದೆ ಅದರ ಮುಂದಿನ ವರ್ಷ ಮತ್ತೊಮ್ಮೆ ನಡೆದ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ…

Read More