Author: admin
ನಿರಂತರ ಅಭಿವೃದ್ಧಿ ಪಥದಲ್ಲಿ ಮುನ್ನಡೆ: ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿಕೆ ಉಳ್ಳಾಲ: ದ.ಕ. ಜಿಲ್ಲೆಯ ಪ್ರತಿಷ್ಠಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ 952 ಕೋಟಿ ರೂ.ಗಳ ವ್ಯವಹಾರ ನಡೆಸಿದ್ದು 1.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ವರ್ಷದಿಂದ ವರ್ಷಕ್ಕೆ ಸಂಘವು ನಿರಂತರ ನಿರಂತರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರು, ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿಗಳ ಅವಿರತ ಸೇವೆಯಿಂದಾಗಿ ಸಂಘವು ನಿರಂತರವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ‘ಎ’ ತರಗತಿಯ 6,665 ಸದಸ್ಯರನ್ನು ಹೊಂದಿದ್ದು 2.63 ಕೋಟಿ ರೂ. ಗಳ ಪಾಲು ಬಂಡವಾಳವನ್ನು ಹೊಂದಿದೆ. 444 ಕೋಟಿ ರೂ. ಠೇವಣಿ ಸಂಗ್ರಹಿಸಿ 424 ಕೋಟಿ ರೂ.…
ಮಂಗಳೂರು: ಮಂಗಳೂರಿನ ಬಿಜೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ 30ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಪೊಲೀಸ್ ಲೇನ್ ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷೀಯ ಭಾಷಣ ಮಾಡಿದ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು, 2024-25ರಲ್ಲಿ ಠೇವಣಿ ಸಂಗ್ರಹಣೆಯಲ್ಲಿ ಶೇಖಡಾ 17 ಮತ್ತು ಸಾಲ ನೀಡುವಿಕೆಯಲ್ಲಿ ಶೇಖಡಾ 28 ಹೆಚ್ಚುವರಿ ದಾಖಲಾಗಿದ್ದು, ಒಟ್ಟು 1.20 ಕೋಟಿ ರೂ. ಷೇರು ಬಂಡವಾಳವನ್ನು ಹೊಂದಿದೆ. 129 ಕೋಟಿ ರೂಪಾಯಿಗಳ ವ್ಯವಹಾರ ಮಾಡಿದ್ದು, ರೂ. 42,81,085.96 ನಿವ್ವಳ ಲಾಭ ಗಳಿಸಿದೆ. ಲೆಕ್ಕ ಪರಿಶೋಧನೆಯಲ್ಲಿ ‘ಎ’ ಶ್ರೇಣಿಯಲ್ಲಿದೆ ಎಂದು ತಿಳಿಸಿದರು. ಕಾರ್ಯದರ್ಶಿ ಉದಯ ಆರ್ ಸಂಘದ ವಾರ್ಷಿಕ ವರದಿ, ಲೆಕ್ಕಪತ್ರಗಳು ಮತ್ತು ಅನುಪಾಲನಾ ವರದಿಯನ್ನು ಸಭೆಗೆ ಮಂಡಿಸಿದರು. ವಿಶೇಷ ಅಭಿನಂದನಾ ಕಾರ್ಯಕ್ರಮ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕೆಲಸ ನಿರ್ವಹಿಸಿದ್ದ ಹಾಗೂ ತನ್ನ ವಿಶೇಷ ಸಮಾಜಸೇವೆಯ ಮೂಲಕ ಸಾವಿರಾರು…
ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬೆಂಗಳೂರು ಇದರ ಆರನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಂಗಳೂರಿನ ರಾಜಾಜಿನಗರದ ಮಹಾಗಣಪತಿನಗರದ ಬನವಾಸಿ ಸಭಾಂಗಣದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಅಕ್ಕಿಯವರು ಮಾತನಾಡಿ ಸಹಕಾರಿಯು ಒಟ್ಟು 1733 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ರೂ.24,83,260.11 ನಿವ್ವಳ ಲಾಭ ದಾಖಲಿಸಿದೆ. ಪ್ರಸಕ್ತ ಸಾಲಿನಲ್ಲಿ 14% ಡಿವಿಡೆಂಡ್ ಹಂಚಿಕೆ ಮಾಡಲಾಗುತ್ತಿದೆ. ಬನವಾಸಿ ಸೌಹಾರ್ದ ಸಹಕಾರಿ ಸಂಘವು 2020ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಬನವಾಸಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಮಂಜುನಾಥ.ಎನ್, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಬಾಬು ಎಸ್ ಕುಂಬಾರ್, ಅನಿಲ್ ಕುಮಾರ್ ಬಿ.ಉಲ್ಲಾಳ, ಡಿ.ಎಂ.ಭತ್ತದ್, ಭೀಮಪ್ಪ, ಮೇಘ ವರುಣ್, ರೂಪಶ್ರೀ, ತುಳಸಿರಾಮ್ ಮೌರ್ಯ, ಶೋಭರಾಣಿ ಎಂ, ಜಮುನ ಕುಲಕರ್ಣಿ, ದ್ಯಾಮಪ್ಪ ಎಚ್.ಎಂ ಮತ್ತು ಆಡಳಿತಾಧಿಕಾರಿಗಳಾದ ಶಂಬಯ್ಯ.ಕೆ.ಎಲ್ ಹಾಗೂ ಸಹಕಾರಿಯ ಸಿಬ್ಬಂದಿ ವರ್ಗದವರು, ಸದಸ್ಯರುಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ…
ಬ್ಯಾಂಕಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಇಲ್ಲಿನ ಕಾರ್ಸ್ಟ್ರೀಟ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಬ್ಯಾಂಕಿನ ಉಪವಿಧಿಗಳಿಗೆ, ನೇಮಕಾತಿ ನಿಯಮಗಳಿಗೆ, ನೌಕರರ ಸೇವಾ ನಿಬಂಧನೆಗಳಿಗೆ ಹಾಗೂ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ನಿಯಮಗಳು 1960ರ ಉಪಬಂಧಗಳಿಗೆ ಒಳಪಟ್ಟಿರುತ್ತದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶಾಖಾ ವ್ಯವಸ್ಥಾಪಕರು( 2 ಹುದ್ದೆ), ಸಹಾಯಕ ಶಾಖಾ ವ್ಯವಸ್ಥಾಪಕರು (1 ಹುದ್ದೆ), ಸಾರ್ವಜನಿಕ ಸಂಪರ್ಕಾಧಿಕಾರಿ (1 ಹುದ್ದೆ), ಕಿರಿಯ ಸಹಾಯಕರು (16 ಹುದ್ದೆಗಳು) ಮತ್ತು ಅಟೆಂಡರ್ (3 ಹುದ್ದೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಖಾ ವ್ಯವಸ್ಥಾಪಕ ಹುದ್ದೆಗೆ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಎಂಎ ಅರ್ಥಶಾಸ್ತ್ರ, ಎಂಕಾಂ ಅಥವಾ ಎಂ.ಬಿ.ಎ. ಸ್ನಾತಕೋತ್ತರ ಪದವಿ ಪಡೆದಿರಬೇಕು. ಬ್ಯಾಂಕಿಂಗ್ ಯಾ ಹಣಕಾಸು ವಿಷಯದಲ್ಲಿ ಯಾವುದೇ ಡಿಪ್ಲೊಮಾ ಪದವಿ, ಬ್ಯಾಂಕಿಂಗ್ ಯಾ ಹಣಕಾಸು ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಇರಬೇಕು. ಸಹಾಯಕ ಶಾಖಾ ವ್ಯವಸ್ಥಾಪಕ ಹುದ್ದೆಗೆ…
ಸೆ.19ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ವಾರ್ಷಿಕ ಮಹಾಸಭೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ವಾರ್ಷಿಕ ಮಹಾಸಭೆಯು ಸೆ.19ರ ಶುಕ್ರವಾರ ಬೆಳಗ್ಗೆ 10.30ಕ್ಕೆ ಗಂಟೆಗೆ ಉದಯ ಸಹಕಾರ ಭವನ ಹನುಮಂತನಗರ ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಎಲ್ಲರೂ ಪಾಲ್ಗೊಳ್ಳುವಂತೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ವೈ.ಕುಮಾರ್, ಉಪಾಧ್ಯಕ್ಷರಾಗಿ ಎಸ್.ಎನ್ ಶಂಕರಮೂರ್ತಿ, ನಿರ್ದೇಶಕರಾಗಿ ಎನ್.ಚಂದ್ರಶೇಖರ್, ಬಿ.ಎನ್ ನಾಗಮಣಿ, ಟಿ.ಹೆಚ್ ಕರಿಯಪ್ಪ, ಹೆಚ್.ಕೆ ಶ್ರೀನಿವಾಸ್, ಎ.ಚಿಕ್ಕಯ್ಯ, ಎ.ಎಸ್ ಜಯಕುಮಾರ್, ಎಚ್.ವಿ ಕುಮಾರ್ ಮೂರ್ತಿ, ಇ.ಎಸ್ ನಟರಾಜ್, ಎಂ.ವಿ ರಂಗನಾಥ್, ಎಸ್.ಲಿಂಗೇಶ್ ಕುಮಾರ್, ಜಿ.ಕೃಷ್ಣಾ ರೆಡ್ಡಿ(ವೃತ್ತಿಪರ ನಿರ್ದೇಶಕರು) ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಎಂ.ಎಚ್ ಕವಿತಾ ಅವರಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೆಂಗಳೂರು: ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತ ಬೆಂಗಳೂರು ಇದರ 9ನೇ ವಾರ್ಷಿಕ ಮಹಾಸಭೆ ಭಾನುವಾರ ದ್ವಾರಕಾ ನಗರ ಸಮುದಾಯ ಭವನ ಚಿಕ್ಕಬಾಣಾವರದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಲೋಕೇಶ್ ಎಸ್ ಎಸ್ ಮಾತನಾಡಿ ಸಹಕಾರಿಯು ಒಟ್ಟು 919 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 14.61 ಲಕ್ಷ ರೂ. ನಿವ್ವಳ ಲಾಭ ದಾಖಲಿಸಿದೆ ಎಂದು ಮಾಹಿತಿ ನೀಡಿದರು. ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿಯು 2017ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಯೋಗಾನಂದ ಮೂರ್ತಿ ಎನ್ ವಿ, ಕೈಲಾಸ್ ಮೂರ್ತಿ ಜಿಎಸ್, ಶಿವಗಂಗಾಧರ್ ಯು, ಲಕ್ಷ್ಮೀಪತಿ ಕೆ, ಶೋಭಾ, ಪುಷ್ಪಲತಾ ಎಚ್ಎಂ, ಗಾಯತ್ರಿ ಮತ್ತು ಗೀತಾ ಮತ್ತಿತರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ಕೊಲ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕೊಲ್ಯ ಇದರ ಎಂಟನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ವಾರ್ಷಿಕ ಸಾಮಾನ್ಯ ಸಭೆಯನ್ನು ಸಹಕಾರಿಯ ಅಧ್ಯಕ್ಷರಾದ ರಮೇಶ್ ಕೆ ಮತ್ತು ಉಪಾಧ್ಯಕ್ಷರಾದ ಭರತ್ ಪಿ ಉದ್ಘಾಟಿಸಿದರು. ಸಹಕಾರಿಯು ಕಳೆದ 2024-25ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಒಟ್ಟು 1.32 ಕೋಟಿ ರೂ. ಠೇವಣಿ ಹೊಂದಿದ್ದು ಸದಸ್ಯರಿಗೆ ಒಟ್ಟು 1 ಕೋಟಿಗಿಂತಲೂ ಹೆಚ್ಚು ವಿವಿಧ ರೀತಿಯ ಸಾಲ ನೀಡಲಾಗಿದೆ. ಈ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿಯ ನಿರ್ದೇಶಕರಾದ ಶಶಿಧರ ಶೆಟ್ಟಿ ಕೆರಮ, ಡಾ.ಶ್ರೀನಿವಾಸ ಮೂಲ್ಯ, ವಿಶಾಲ್, ಪ್ರಕಾಶ್ ಎಚ್, ಲಿಂಗಪ್ಪ ಪೂಜಾರಿ, ನಿರ್ಮಲ, ಸೌಮ್ಯ, ಅನಿಲ್ ಕುಮಾರ್, ರಂಜಿತ್ ಕುಮಾರ್, ತುಳಸಿ, ಸಹಕಾರಿಯ ಕಾನೂನು ಸಲಹೆಗಾರರು, ಸಹಕಾರಿಯ ಸಿಬ್ಬಂದಿ ರಮಿತಾ ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು. ಈ ಸಭೆಯ ಸಹಕಾರಿಯ ವಾರ್ಷಿಕ ವರದಿಯನ್ನು ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರಾದ ಅಕ್ಷಯ ಮಂಡಿಸಿದರು. ನಿರ್ದೇಶಕರಾದ ಶಶಿಧರ ಶೆಟ್ಟಿಯವರು ಸರಕಾರದಿಂದ…
ವಾರ್ಷಿಕ ಮಹಾಸಭೆಯಲ್ಲಿ ರಾಜ್ಯಮಟ್ಟದ ಸದಸ್ಯ ಶಿಕ್ಷಕರು, ಜಿಲ್ಲಾಮಟ್ಟದ 12 ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಸಂಘದ ಸದಸ್ಯ ಶಿಕ್ಷಕರಿಗೆ ಸನ್ಮಾನ ವಿಟ್ಲ: ಅಧ್ಯಾಪಕರ ಸಹಕಾರಿ ಸಂಘ (ನಿ) ವಿಟ್ಲ ಇದರ ವಾರ್ಷಿಕ ಮಹಾಸಭೆ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ನಾಯಕ್ ಕೆ. ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ ಸುವರ್ಣ ರಂಗಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ರಮೇಶ್ ನಾಯಕ್ ಕೆ ಸ್ವಾಗತಿಸಿ, ಅಧ್ಯಕ್ಷ ಭಾಷಣ ಮಾಡಿದರು. ಸಂಘವು ವರದಿ ಸಾಲಿನಲ್ಲಿ 661 ಕೋಟಿ ರೂ. ವ್ಯವಹಾರ ನಡೆಸಿದ್ದು, 2.09 ಕೋಟಿ ರೂ. ಲಾಭ ಗಳಿಸಿದೆ. 5.57 ಕೋಟಿ ರೂಪಾಯಿ ಪಾಲು ಬಂಡವಾಳ ಹೊಂದಿದೆ. ವರ್ಷಾಂತ್ಯಕ್ಕೆ 4,906 “ಎ” ತರಗತಿ ಸದಸ್ಯರಿದ್ದು, 209 ಕೋಟಿ ರೂ. ಠೇವಣಿ ಹೊಂದಿರುತ್ತದೆ. 192.39 ಕೋಟಿ ಹೊರಬಾಕಿ ಸಾಲ ಇದ್ದು, ಲೆಕ್ಕಪರಿಶೋಧನೆಯಲ್ಲಿ ಸಂಘವು “ಎ” ಶ್ರೇಣಿಯನ್ನು ಪಡೆದುಕೊಂಡಿದೆ. ಸಂಘವು ಪ್ರಗತಿಪಥದಲ್ಲಿ ಮುನ್ನಡೆಯಲು ಸದಸ್ಯರ ಮತ್ತು ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ದ.ಕ.ಜಿಲ್ಲಾ…
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಶ್ಲಾಘನೆ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ-ಧನಸಹಾಯ ವಿತರಣೆ ಪುತ್ತೂರು: ಆರ್ಥಿಕವಾಗಿ ಹಿಂದುಳಿದ ಸರಕಾರಿ ಪ್ರಾಥಮಿಕ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ವರ್ಷಂಪ್ರತಿಯಂತೆ ಸಂಘದ ‘ಧರ್ಮಾರ್ಥ’ ಮತ್ತು ‘ವಿದ್ಯಾಸಂಸ್ಥೆʼ ನಿಧಿಯಿಂದ ಧನಸಹಾಯ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲೊಟ್ಟು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸವಣೂರು ಸೀತಾರಾಮ ರೈಯವರು ತಮ್ಮ ಬಾಲ್ಯ ಜೀವನದಲ್ಲಿ ತುಂಬಾ ಕಷ್ಟಪಟ್ಟು ಓದಿ, ಇಂದು ಉನ್ನತವಾದ ಸ್ಥಾನದಲ್ಲಿದ್ದಾರೆ. ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಿಗಲೆಂಬ ನಿಟ್ಟಿನಲ್ಲಿ ಅವರು ತಮ್ಮ ಆದರ್ಶ ಸಹಕಾರ ಸಂಸ್ಥೆಯ ಮೂಲಕ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭ ಮಾಡಿರುವುದು…
ಮಂಗಳೂರು: ಬೋಳಾರ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ 14ನೇ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಶ್ರೀ ಮಂಗಳಾದೇವಿ ದೇವಸ್ಥಾನದ ಬಳಿ ಇರುವ ಶ್ರೀದೇವಿ ನಿಲಯದಲ್ಲಿ ಸಹಕಾರಿಯ ಅಧ್ಯಕ್ಷರಾದ ನವೀನ್ ಶೆಟ್ಟಿ ಕುತ್ತಾರುಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಉಪಾಧ್ಯಕ್ಷರಾದ ಬಿ.ರಮಾನಂದ ಪೂಜಾರಿ, ಸ್ವಾಗತಿಸಿ ಅಧ್ಯಕ್ಷರ ಭಾಷಣ ನೆರವೇರಿಸಿದರು. ನಿರ್ದೇಶಕರಾದ ವರುಣ್ ರಾಜ್ ಅಂಬಟ್ ವಾರ್ಷಿಕ ವರದಿ ಮಂಡಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮನಾಥ ಬಿ ಇವರು 2024-25ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕರಾದ ಕೃಷ್ಣಮೂರ್ತಿ ಐತಾಳ್ 2025-26ನೇ ಸಾಲಿನ ಮುಂಗಡ ಬಜೆಟ್ ಮಂಡಿಸಿದರು. ಸೊಸೈಟಿಯು ವರದಿ ಸಾಲಿನಲ್ಲಿ 38 ಕೋಟಿ ರೂ. ವ್ಯವಹಾರ ಮಾಡಿದ್ದು, 13,55,645.43 ಲಾಭಾಂಶ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಿಸಲಾಯಿತು. ಸಹಕಾರಿಯ ನಿರ್ದೇಶಕರಾದ ಸುಜಿತ್ ಕುಮಾರ್, ರೊನಾಲ್ಡ್ ಡಿಸೋಜ, ಉದಯ್ ಕುಮಾರ್, ರಾಜೇಂದ್ರ ವಿಠ್ಠಲ್, ಮಮತಾ ಮನೋಜ್ ಕುಮಾರ್ ಮತ್ತು ಉಷಾ ಎಸ್ ರಾವ್ ಹಾಗೂ ಹಿರಿಯ ಸದಸ್ಯರಾದ ಬಿ.ವಿಠ್ಠಲ್ ಪೂಜಾರಿ, ಶ್ರೀ ಮೋನಪ್ಪ ಅಂಚನ್ ಮತ್ತು ಬಿ.ಪ್ರೇಮ್…
