Author: admin
ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿವೇತನ, ಸಹಾಯಧನ ವಿತರಣೆ, ದಾನಿಗಳಿಗೆ ಸಮ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆಯೊಂದಿಗೆ ಸಿರಿಮುಡಿ ದತ್ತಿನಿಧಿ ವಿತರಣಾ ಸಮಾರಂಭ ಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಡುಬಿದ್ರಿ ಇದರ ಉದ್ಘಾಟನೆ ಅ.5ರಂದು ಪಡುಬಿದ್ರಿ ಬಂಟರ ಭವನದ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಜರಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಿರಿಮುಡಿ ದತ್ತಿನಿಧಿ ಇದೀಗ 1.31 ಕೋಟಿ ರೂ.ನಷ್ಟು ಆರ್ಥಿಕ ಸಂಚಯನವನ್ನು ಹೊಂದಿದೆ. ಇದರ ಜತೆಗೆ ಬಂಟ್ಸ್ ವೆಲ್ಫೆರ್ ಟ್ರಸ್ಟ್ ಕೂಡ ಕೈಜೋಡಿಸುತ್ತಿದ್ದು, ಪ್ರಸಕ್ತ ವರ್ಷ ಸುಮಾರು 17 ಲಕ್ಷ ರೂ. ಸಹಾಯಧನ ವಿತರಣೆಯಾಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೊಸೈಟಿಯು ಸುಮಾರು 50 ಲಕ್ಷ ರೂ. ವೆಚ್ಚದ ಸ್ವಂತ ಕಟ್ಟಡದಲ್ಲಿ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಕಾರ್ಯಾಚರಿಸಲು ಸಿದ್ಧವಾಗಿದೆ. ಉದ್ಯಮಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಸದಾನಂದ…
ಮೂಲ್ಕಿ: ಕೇವಲ ಮೂರು ಸಿಬ್ಬಂದಿಗಳ ಮೂಲಕ ಪ್ರಾರಂಭಗೊಂಡು ಇದೀಗ 22 ಸಿಬ್ಬಂದಿಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. ಸೊಸೈಟಿಯು ಅಭಿವೃದ್ಧಿಯತ್ತ ಸಾಗಬೇಕಾದರೆ ಸಿಬ್ಬಂದಿಗಳ ಶ್ರಮ ಮುಖ್ಯವಾಗಿತ್ತು. ಇಂತಹ ಸಿಬ್ಬಂದಿಗಳ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿ ಆಗಿದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ ಬರ್ನಾಡ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ಇತ್ತೀಚೆಗೆ ಸೊಸೈಟಿಯ ಸಿಬ್ಬಂದಿಗಳಿಗೆ ತಲಾ ಮೂರು ಲಕ್ಷದ ಆರೋಗ್ಯ ವಿಮೆಯ ಪಾಲಿಸಿ ವಿತರಿಸಿ ಮಾತನಾಡುತ್ತಿದ್ದರು. ನಿರ್ದೇಶಕರುಗಳಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೀದರ್: ಇಲ್ಲಿನ ಡೆವಲಪ್ಮೆಂಟ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಆರನೇ ವಾರ್ಷಿಕ ಮಹಾಸಭೆ ಶಿವಕುಮಾರ ಶಟಕಾರ್ ಇವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸರಸ್ವತಿ ಮತ್ತು ಲಕ್ಷ್ಮೀ ಪೂಜೆಯ ನಂತರ ರವೀಂದ್ರನಾಥ ಮುಳಗೆ ಸದಸ್ಯರನ್ನು ಸ್ವಾಗತಿಸಿದರು. ಅಗಲಿದ ಸದಸ್ಯರಾದ ನಂದಕುಮಾರ್ ಸಂತಪೂರ್ಕರ್ ಹಾಗೂ ಇತರ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಸೂಚಿಯನ್ನು ರವೀಂದ್ರನಾಥ್ ಮುಳಗೆ ಓದಿದರು. ಕಳೆದ ವರ್ಷದ ವಾರ್ಷಿಕ ಮಹಾಸಭೆಯ ನಡವಳಿಕೆ ಹಾಗೂ ಪ್ರಸಕ್ತ ಸಾಲಿನ ವರದಿಯನ್ನು ಓದಿ ತಿಳಿಸಲಾಯಿತು. ವರದಿ ಸಾಲಿನಲ್ಲಿ 651 ಸದಸ್ಯರಿಂದ 60 ಜನ ಹೊಸ ಸದಸ್ಯ ಸೇರಿಸಿಕೊಂಡು ವರ್ಷಾಂತಕ್ಕೆ 702 ಜನ ಸದಸ್ಯರು ಇದ್ದು, ರೂಪಾಯಿ 43.93 ಲಕ್ಷ ರೂ. ಶೇರು ಬಂಡವಾಳ, 508.38 ಲಕ್ಷ ರೂ. ಠೇವಣಿ ಸಂಗ್ರಹಿಸಲಾಗಿದ್ದು 411.50 ಲಕ್ಷ ರೂ. ಸಾಲ ವಿತರಿಸಲಾಗಿದೆ. 190.01 ಲಕ್ಷ ರೂ. ಹೂಡಿಕೆ ಮಾಡಲಾಗಿದೆ. ಒಟ್ಟು ವ್ಯವಹಾರ 920 ಲಕ್ಷ ರೂ. ಇದ್ದು 11.80 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಮಹಾಸಭೆಯಲ್ಲಿ ಬೀದರ್…
ವಿಶೇಷ ತರಬೇತಿ ಶಿಬಿರದಲ್ಲಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ನಿಂದ ಬೇರೆ ಬೇರೆ ವಿಷಯದಲ್ಲಿ ತರಬೇತಿಗಳನ್ನು ನಡೆಸಲಾಗುತ್ತಿದೆ. ತರಬೇತಿ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗುತ್ತದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯಪಟ್ಟರು. https://chat.whatsapp.com/JVAtKKe2M19AFO3W5629ZS?mode=ems_copy_t ದ.ಕ. ಸಹಕಾರಿ ಹಾಲು ಒಕ್ಕೂಟದ ಡಾ.ವರ್ಗೀಸ್ ಕುರಿಯನ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹಾಗೂ ಮೂಡುಬಿದರೆ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಡೆದ ವಿಶೇಷ ತರಬೇತಿ ಶಿಬಿರದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಕ್ಷೀರ ಕ್ರಾಂತಿಯಲ್ಲಿ ಹೈನುಗಾರರ ಪಾತ್ರ ಮಹತ್ವದ್ದಾಗಿದೆ. ರಾಸುಗಳ ಖರೀದಿಗೆ ಒಂದು…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ೧೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ ಪಡೀಲ್ ಬೈರಾಡಿಕೆರೆ ಹತ್ತಿರದ ಆತ್ಮಶಕ್ತಿ ಸೌಧದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಜೋಸೆಪ್ ತಿಯೋದರ್ ಉದ್ಘಾಟಿಸಿದರು. ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಇದರ ವೈದ್ಯರಾದ ಡಾ.ಪ್ರವೀಣ್ ಜೋಡಳ್ಳಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಚಿತ್ತರಂಜನ್ ಬೋಳಾರ್ರವರ ಮುಂದಾಳತ್ವದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುತ್ತಿದೆ. ಜನರು ಶಿಬಿರದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದರು. ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ…
ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ಸಾಮಾಜಿಕ ಕಳಕಳಿ, ಸಮಾಜಮುಖಿ ಕೆಲಸ, ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯಕ್ರಮ ಆಯೋಜಿಸುವ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್.ಗುರುರಾಜ್ ಅವರನ್ನು ಭಾನುವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕದಲ್ಲಿ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷಗಳಾದ ಹಿನ್ನೆಲೆಯಲ್ಲಿ ಭಾನುವಾರ ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದಲ್ಲಿ ಶ್ರೀಶಾ ಸೌಹಾರ್ದ ಸಹಕಾರಿಯಿಂದ ಆಯೋಜಿಸಿದ ಕ್ಯಾ.ಪ್ರಾಂಜಲ್ ಸ್ಮರಣಾಂಜಲಿ ಹಾಗೂ 25 ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು 25 ಮಂದಿಗೆ ವೀಲ್ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಶ್ರೀಶಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್ ಗುರುರಾಜ್ ಅವರನ್ನು ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಅಧ್ಯಕ್ಷ ನಂಜನ ಗೌಡ ಇವರು ಸನ್ಮಾನಿಸಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ್ ಎಸ್.ಕೆ., ಭಾರತಿ ಜಿ ಭಟ್, ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ, ಶಾರದಾ ವಿದ್ಯಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ರಾಷ್ಟ್ರೀಯ ಸ್ವಯಂಸೇವಕ…
ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಹಾಲ್ನಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಅಧ್ಯಕ್ಷ ಚಂದ್ರಶೇಖರ್ ಕೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ 2024-25 ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರ, ಬಜೆಟ್ ಮಂಡಿಸಿದರು. ಸೊಸೈಟಿಯ ಲಾಭದಲ್ಲಿ ಶೇ.20 ಡಿವಿಡೆಂಡ್ ಘೋಷಿಸಲಾಯಿತು. ಹಾಲಿ ಸಾಲಿನಲ್ಲಿ ಗರಿಷ್ಠ ಲಾಭ ಗಳಿಕೆ, ಠೇವಣೆ, ಸಾಲ ಸೌಲಭ್ಯ ಕಳೆದ ಸಾಲಿಗೆ ಹೋಲಿಸಿದಾಗ ಶೇ.29 ವೃದ್ಧಿಯಾಗಿದ್ದು, ವಾರ್ಷಿಕ ವಹಿವಾಟಿನಲ್ಲಿ ಗರಿಷ್ಠ ವೃದ್ಧಿಯ ದಾಖಲೆ ಮಾಡಿರುವುದನ್ನು ಸಭೆಯಲ್ಲಿ ಪ್ರಶಂಶಿಸಲಾಯಿತು. ಸೊಸೈಟಿಯು ಹಾಲಿ ನಾಲ್ಕು ಶಾಖೆಗಳನ್ನು ಹೊಂದಿದ್ದು ಮಂಗಳೂರು, ಸುರತ್ಕಲ್, ಉಡುಪಿ, ಬಂಟ್ವಾಳದ ಎಲ್ಲ ಶಾಖೆಗಳೂ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿವೆ. ಐದನೇ ಶಾಖೆಯನ್ನು ಬೆಳ್ತಂಗಡಿಯಲ್ಲಿ ತೆರೆದು ವ್ಯವಹಾರ ಆರಂಭಗೊಂಡಿದ್ದು ಅಧಿಕೃತ ಉದ್ಘಾಟನೆ ಅಕ್ಟೋಬರ್ ಒಂದರಂದು ನಡೆಯಲಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಸಂಸ್ಥೆಯು ಸತತ ಲಾಭ ಗಳಿಸುತ್ತ ಆಡಿಟ್…
ಶ್ರೀಶಾ ಸೌಹಾರ್ದ ಸಹಕಾರಿ ಸಂಸ್ಥೆಯಿಂದ ಕ್ಯಾ.ಪ್ರಾಂಜಲ್ ಸ್ಮರಣಾoಜಲಿ, 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ವೀಲ್ ಚೇರ್ ಕೊಡುಗೆ
ಸಮಾಜಕ್ಕಾಗಿ ದುಡಿಯುವ, ದೇಶಸೇವೆ ಮಾಡುವ ಮನೋಭಾವವಿದ್ದರೆ ಅದುವೇ ಮಹಾನ್ ಸೇವೆ: ಪ್ರಾಂಜಲ್ ತಂದೆ ಎಂ ವೆಂಕಟೇಶ್ ಅಭಿಪ್ರಾಯ ಮಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷಗಳು ಆಗಿರುವ ಶುಭ ಸಂದರ್ಭದಲ್ಲಿ ಮಂಗಳೂರಿನ ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿಭಿನ್ನ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು. ವಿಶೇಷ ಕಾರ್ಯಕ್ರಮದ ಅಂಗವಾಗಿ ದೇಶಸೇವೆಯ ಕೈಂಕರ್ಯದಲ್ಲಿ ವೀರಮರಣವನ್ನಪ್ಪಿದ ಕ್ಯಾ.ಪ್ರಾಂಜಲ್ ಅವರ ಸ್ಮರಣೆಗಾಗಿ ಪ್ರಾಂಜಲ್ ಸ್ಮರಣಾoಜಲಿ ಹಮ್ಮಿಕೊಳ್ಳಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಇದೇ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ 25 ಜನರಿಗೆ ವೀಲ್ ಚೇರ್ಗಳನ್ನು, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ 25 ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ತಲಾ 100 ಪುಸ್ತಕಗಳ ವಿತರಣೆಯೂ ನಡೆಯಿತು. ಪ್ರಾಂಜಲ್ ಅವರ ತಂದೆ ಎಂಆರ್ಪಿಎಲ್ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್ ಮಾತನಾಡಿ, ನಮ್ಮ ಮಗನ ಮೂಲಕ ಸೈನ್ಯದ ಸೇವೆಯ ಕಾರ್ಯ ಮಾಡುವ ನಮ್ಮ ಕನಸುಗಳು ನೆರವೇರಿದೆ. ಬಹುಮುಖ್ಯವಾಗಿ ನಾವು ಸೈನಿಕರಲ್ಲವಾದರೂ ಸಮಾಜಕ್ಕಾಗಿ…
ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಬ್ಯಾಂಕಿನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷ ಎ.ಲೋಕೇಶ್ ಭಂಡಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕ್ ವರದಿ ಸಾಲಿನಲ್ಲಿ 1010 ಕೋಟಿ ರೂ. ವ್ಯವಹಾರ ನಡೆಸಿದೆ. ಪಾಲು ಬಂಡವಾಳ 4.47 ಕೋಟಿ ರೂ. ಠೇವಣಿ 191 ಕೋಟಿ ರೂ. ಹೊಂದಿದೆ. 157 ಕೋಟಿ ರೂ. ಸಾಲ ನೀಡಿದ್ದು, 2,63,56,187.61 ರೂ. ಲಾಭ ಗಳಿಸಿದೆ ಎಂದು ಹೇಳಿ ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರನೀಡಿ ಗೌರವಿಸಲಾಯಿತು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಪ್ರೀತಮ್ ಪಿ.ಪೂಜಾರಿ ಅವರು ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದರು. ಬ್ಯಾಂಕಿನ ಉಪಾಧ್ಯಕ್ಷ ಎಸ್.ಧನಂಜಯ ಬಂಗೇರ, ನಿರ್ದೇಶಕರಾದ ಪ್ರೇಮಾ, ಸುಮಂತ್ ರಾವ್, ನೇಮಿರಾಜ್ ಶೆಟ್ಟಿ, ಶ್ರೀರಂಜಿನಿ ಬಿ.ವಿಟ್ಠಲ ಶೆಟ್ಟಿ, ಗಣೇಶ್ ಶೆಟ್ಟಿ, ಸಿತೇಶ್ ಕೊಂಡೆ, ಶರ್ಮಿಳಾ ಮೊದಲಾದವರು ಉಪಸ್ಥಿತರಿದ್ದರು. ನಿರ್ದೇಶಕ ಸುಮಂತ್ ರಾವ್ ವಂದಿಸಿದರು. ನಿಮ್ಮ ಸಂಸ್ಥೆಗಳ…
ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾಗಿ ನೇಮಕ
ಬೆಳ್ತಂಗಡಿ; ವಿಧಾನ ಪರಿಷತ್ ಮಾಜಿ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಇವರನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಖಾಲಿ ಇದ್ದ ೩೯ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರ ಮೆಸ್ಕಾಂಗೆ ಹರೀಶ್ ಕುಮಾರ್ ಅವರನ್ನು ನೇಮಕ ಮಾಡಿದೆ. 1978ರಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ ಹರೀಶ್ ಕುಮಾರ್ ಅವರು, 1978 ರಲ್ಲಿ ನಡೆದ ಐತಿಹಾಸಿಕ ಚಿಕ್ಕಮಗಳೂರು ಉಪಚುನಾವಣೆಯಲ್ಲಿ (ಇಂದಿರಾ ಗಾಂಧಿ ಸ್ಪರ್ಧಿಸಿದ್ದರು) ಕೆಲಸ ಮಾಡಿದ್ದರು. ಬಳಿಕ ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ (1980-1984), ಬೆಳ್ತಂಗಡಿ ಭೂ ನ್ಯಾಯಮಂಡಳಿ ಸದಸ್ಯರಾಗಿ (1981-1983) ನೇಮಕಗೊಂಡಿದ್ದರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಅವಧಿಗೆ (1984-1986 ಮತ್ತು 2004-2017) ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, (1986-1990), ಜಿಲ್ಲಾ ಪರಿಷತ್ ಸದಸ್ಯರಾಗಿ (1987-1992)…
