Author: admin
ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಈ ಸೌಲಭ್ಯ ಅಳವಡಿಸಲು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕರೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗ್ರಾಹಕರ ಅನುಕೂಲಕ್ಕಾಗಿ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಆರಂಭಿಸಿದ್ದು, ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಈ ಸೌಲಭ್ಯ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು. ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು, ಇದೀಗ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ -ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಆರಂಭಿಸಿದೆ. ಈ ಸೇವೆಯ ಮೂಲಕ ಎಸ್ಸಿಡಿಸಿಸಿ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ…
ಮೀನುಗಾರಿಕಾ ಸಹಕಾರಿ ವಲಯದ ರೂಪಾಂತರ ಪ್ರಕ್ರಿಯೆ ವೇಗ, 1,000 ಮೀನುಗಾರಿಕಾ ಸಹಕಾರ ಸಂಘಗಳು ಪಟ್ಟಿಗೆ ನವದೆಹಲಿ: ಮೀನುಗಾರರು ಮತ್ತು ಮೀನು ರೈತರ ಆರ್ಥಿಕ ಸಬಲೀಕರಣ, ಮಾರುಕಟ್ಟೆ ಪ್ರವೇಶ ಮತ್ತು ಸಾಂಸ್ಥಿಕ ಬಲವರ್ಧನೆಯ ಮೇಲೆ ಗಮನ ಕೇಂದ್ರೀಕರಿಸಿರುವ ಕೇಂದ್ರ ಸರ್ಕಾರವು, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್ವೈ) ಅಡಿಯಲ್ಲಿ ಅಸ್ತಿತ್ವದಲ್ಲಿರುವ ಸಹಕಾರಿ ಸಂಘಗಳನ್ನು ಮೀನು ರೈತರ ಉತ್ಪಾದಕ ಸಂಸ್ಥೆಗಳಾಗಿ (ಎಫ್ಎಫ್ಪಿಒ) ಪರಿವರ್ತಿಸುವ ಮೂಲಕ ಭಾರತದ ಮೀನುಗಾರಿಕಾ ಸಹಕಾರಿ ವಲಯದ ರೂಪಾಂತರಕ್ಕೆ ವೇಗ ನೀಡುವ ಪ್ರಕ್ರಿಯೆ ಆರಂಭಿಸಿದೆ. https://chat.whatsapp.com/FCEnlTkAKCC0MGPhXtX4i4 ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಲಲನ್ ಸಿಂಗ್ ಯಾನೆ ರಾಜೀವ್ ರಂಜನ್ ಸಿಂಗ್ ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿರುವ ಮೀನುಗಾರಿಕೆ ಇಲಾಖೆಯು ಮಾರ್ಚ್ 2023ರಲ್ಲಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು (ಎನ್ಸಿಡಿಸಿ) ಕರಾವಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಸ್ತಿತ್ವದಲ್ಲಿರುವ 1,000 ಪ್ರಾಥಮಿಕ ಮೀನುಗಾರಿಕೆ ಸಹಕಾರ ಸಂಘಗಳನ್ನು…
ತುಂಬೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಐದನೇ ವಾರ್ಷಿಕೋತ್ಸವದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವು ಭಾನುವಾರ ತುಂಬೆಯ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೋದಯ ಮಿತ್ರ ಕಲಾವೃಂದ ತುಂಬೆ, ಆಶೀರ್ವಾದ ಸೇವಾ ಸಂಘ ಮತ್ತು ಮಹಿಳಾ ಸೇವಾ ಸಂಘ ತುಂಬೆ, ಯುವಶಕ್ತಿ ಮಜಿ-ತುಂಬೆ ಹಾಗೂ ಶ್ರೀ ಪಿಲಿಚಂಡಿ ತಾಯೇಶ್ವರಿ ಸೇವಾ ಸಮಿತಿ ತಂಜಕರಿಯ, ತುಂಬೆ ಇವರ ಜಂಟಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಮಾಜದ ಆರೋಗ್ಯದ ಸದುದ್ದೇಶ ಇಟ್ಟುಕೊಂಡು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸಂಘದ ಅಧ್ಯಕ್ಷರಾದ…
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಬೆಂಗಳೂರು ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಅಶೋಕ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ ಇವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಅಶ್ವಥ್ ನಾರಾಯಣ್ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪುಂಡಲಿಕ್ ಸಾಧೂರೆರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ತರಬೇತಿ ಕಾರ್ಯಕ್ರಮದಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಕುರಿತು ಅತಿಥಿ ಉಪನ್ಯಾಸವನ್ನು ಬಸವನಗುಡಿ ಪದವಿಪೂರ್ವ ಕಾಲೇಜಿನ…
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ., ಬಿ.ಸಿ. ರೋಡ್, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಫೆಬ್ರವರಿ 21ರ ಶನಿವಾರ ಬೆಳಗ್ಗೆ ಪೂರ್ವಾಹ್ನ 9ರಿಂದ ಬಿ.ಸಿ.ರೋಡ್ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ…
ವಿಜಯಪುರ: ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ವಿಜಯಪುರ ಮಹಾನಗರದ ಆನಂದ ನಗರ ಬಿಎಲ್ಡಿಇ ಇಂಜಿನಿಯರಿಂಗ್ ಕಾಲೇಜಿನ ಎದುರುಗಡೆಯ ಭಾವಸಾರ ಕ್ಷತ್ರಿಯ ಸಭಾಭವನದಲ್ಲಿ ಫೆಬ್ರವರಿ 18ರಂದು ಬೆಳಗ್ಗೆ 10.30ಕ್ಕೆ ಸೌಹಾರ್ದ ಸಹಕಾರಿಗಳ ಸಮಾವೇಶ ಏರ್ಪಡಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಷಣ್ಮುಖಾರೂಡ ಮಠ ವಿಜಯಪುರ ಮತ್ತು ಹುಬ್ಬಳಿಯ ಶಾಂತಾಶ್ರಮದ ಪರಮಪೂಜ್ಯ ಶ್ರೀ ಅಭಿನವ ಸಿದ್ಧಾರೂಢ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಹಿರಿಯ ಸಹಕಾರಿಗಳೂ, ಮಾರ್ಗದರ್ಶಕರಾದ ಅರವಿಂದ ಜಿ.ದೇಶಪಾಂಡೆ ಹಾಗೂ ರಮೇಶ ವೈದ್ಯ ಮಾರ್ಗದರ್ಶನ ಮಾಡಲಿದ್ದಾರೆ. ಸೌಹಾರ್ದ ಫೆಡರಲ್ ಅಧ್ಯಕ್ಷ ನಂಜನಗೌಡ ಮತ್ತು ಸಹಕಾರ ಭಾರತಿ ಅಧ್ಯಕ್ಷ ಪ್ರಭುದೇವ ಮಾಗನೂರ ಉಪಸ್ಥಿತರಿರುವರು. ವಿಜಯಪುರ ಜಿಲ್ಲೆಯ ಸಹಕಾರಿಗಳಾದ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ವಿಧಾನಸಭಾ ಸದಸ್ಯರಾದ ಅರುಣ ಶಹಾಪುರ ಉಪಸ್ಥಿತರಿರುವರು. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಭಾಗ್ಯಶ್ರೀ ಕುಂಬಾರ, ಸಹಕಾರ ಭಾರತಿಯ…
ಕಾರ್ಕಳ: ಮುಂದಿನ ಪೀಳಿಗೆಗೆ ಪರಿಸರವನ್ನು ಸಮೃದ್ಧಗೊಳಿಸಿ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಸ್ವಚ್ಛ ಪರಿಸರವನ್ನು ನಿರ್ಮಿಸುವ ಜವಾಬ್ದಾರಿಯನ್ನು ನಾವು ಹೊರಬೇಕಾಗಿದೆ ಮತ್ತು ಮಕ್ಕಳು ಹಾಗೂ ಯುವಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಇಂದೇ ಮಾಡಬೇಕು. ಈ ಮೂಲಕ ಸ್ವಚ್ಛ ಪರಿಸರವನ್ನು ಮುಂದಿನ ಸಮಾಜಕ್ಕೆ ಹಸ್ತಾಂತರಿಸಬೇಕಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಭರತ್ ನಿಡ್ಪಳ್ಳಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದಂತೆ ನಡೆದ 28ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಹೇಳಿದರು. ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಗುಣವರ್ಮ ಜೈನ್ ಹಾಗೂ ಎಸ್ವಿಟಿ ವಿದ್ಯಾಕೇಂದ್ರದ ಸ್ಕೌಟ್ಸ್ ಆಂಡ್ ಗೈಡ್ಸ್ ಯೋಜನಾಧಿಕಾರಿ ಅಕ್ಷತಾ ಪ್ರಶಾಂತ್ ಆಚಾರ್ಯ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾರ್ಕಳದ ಆನೆಕೆರೆ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಸ್ವಚ್ಛ ಬ್ರಿಗೇಡ್…
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಅಭಿಪ್ರಾಯ ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಹಕಾರ ಕ್ಷೆತ್ರದಿಂದ ರೈತರಿಗೆ, ಕೃಷಿಕರಿಗೆ ತ್ವರಿತವಾಗಿ ಆರ್ಥಿಕ ಸಹಕಾರವನ್ನು ಸಂಘದ ವತಿಯಿಂದ ನೀಡಿರುವುದಲ್ಲದೆ ತನ್ನ ಕಾರ್ಯವ್ಯಾಪ್ತಿಯಲ್ಲಿ ವಿವಿಧ ರೀತಿಯಲ್ಲಿ ಸಮಾಜಮುಖಿ ಸೇವೆಯೊಂದಿಗೆ ಸಮಾಜದ ಬೇಕು, ಬೇಡ ಮತ್ತು ಸಮಸ್ಯೆಗಳ ಬಗ್ಗೆ ಸರಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ಮೂಲಕ ನಿರಂತರವಾಗಿ ಸಮಾಜಸೇವೆ ಸಲ್ಲಿಸುತ್ತಿರುವ ಪ್ರಭಾಕರ ಪ್ರಭುವಿಗೆ ಅರ್ಹವಾಗಿಯೇ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ ಲಭ್ಯವಾಗಿದ್ದು ಸಮಾಜದ ಧ್ವನಿಗೆ ಸಂದ ಗೌರವವಾಗಿದೆ ಎಂದೂ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಅಭಿಪ್ರಾಯ ವ್ಯಕ್ತಪಡಿಸಿದರು. https://chat.whatsapp.com/FCEnlTkAKCC0MGPhXtX4i4 ಕನ್ನಡ ಪ್ರಭ ದಿನಪತ್ರಿಕೆ ಮತ್ತು ಏಷಿಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಕೊಡಮಾಡುವ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಲಭಿಸಿರುವ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು…
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಫೆಬ್ರವರಿ 22ರಂದು ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ
ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಫೆ.22ರಂದು ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಗಿದೆ. https://chat.whatsapp.com/FCEnlTkAKCC0MGPhXtX4i4 ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದ್ದು, ಸಾಮಾನ್ಯ ರೋಗ ವಿಭಾಗ, ಬಿ.ಪಿ. ಹಾಗೂ ಮಧುಮೇಹ ತಪಾಸಣೆ, ಎಲುಬು ಮತ್ತು ಕೀಲು ರೋಗ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಹೃದಯ ರೋಗ ವಿಭಾಗ, ಕ್ಯಾನ್ಸರ್ ರೋಗ ತಪಾಸಣೆ ವಿಭಾಗ, ಸ್ತ್ರೀ ರೋಗ ವಿಭಾಗ, ಮಕ್ಕಳ ವಿಭಾಗ, ವೈದ್ಯರು ಸೂಚಿಸಿದಲ್ಲಿ ಉಚಿತ ಇಸಿಜಿ ತಪಾಸಣೆ, ಉಚಿತ ಲಭ್ಯ ಇರುವ ಔಷಧ ವಿತರಣೆ ಇತ್ಯಾದಿ ಸೌಲಭ್ಯಗಳನ್ನು ಈ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆ ವತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ, ರಕ್ತದಾನ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರ, ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೋದಯ ಮಿತ್ರ ಕಲಾವೃಂದ ತುಂಬೆ, ಆಶೀರ್ವಾದ ಸೇವಾ ಸಂಘ ಮತ್ತು ಮಹಿಳಾ ಸೇವಾ ಸಂಘ ತುಂಬೆ, ಯುವಶಕ್ತಿ ಮಜಿ, ಶ್ರೀ ಪಿಲಿಚಂಡಿ ತಾಯೇಶ್ವರಿ ಸೇವಾ ಸಮಿತಿ ತಂಜಕರಿಯ ತುಂಬೆ ಇವರ ಜಂಟಿ ಸಹಯೋಗದೊಂದಿಗೆ ಫೆಬ್ರವರಿ 15ರಂದು ಬೆಳಗ್ಗೆ 9ರಿಂದ 12.30ರ ತನಕ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತುಂಬೆ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು…
