Author: admin
ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾದ ಹಿನ್ನೆಲೆಯಲ್ಲಿ 25 ಜನರಿಗೆ ವೀಲ್ಚೇರ್, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸೆ.28ರ ಭಾನುವಾರ ವಿಭಿನ್ನ, ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ ಬಳಿಯ ರಾಮಕೃಷ್ಣ ಮಠದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸೆ.28ರಂದು ಬೆಳಗ್ಗೆ 10ಕ್ಕೆ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮವಾಗಿ ಜಮ್ಮು ಕಾಶ್ಮೀರದ ರಜೌರಿಯಲ್ಲಿ ಎರಡು ವರ್ಷದ ಹಿಂದೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಮರಣವನ್ನಪ್ಪಿದ ಮಂಗಳೂರಿನ ಯುವಕ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV Pranjal) 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರರಾಗಿದ್ದ ಪ್ರಾಂಜಲ್, ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ನಲ್ಲಿ…
ಬ್ರಹ್ಮಾವರ: ಅನನ್ಯ ಸೌಹಾರ್ದ ಸಹಕಾರಿ ಸಂಘ ಹೇರಾಡಿ, ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆಯು ಭಾನುವಾರ ಶ್ರೀ ರುಕ್ಮಿಣಿ ಶೆಡ್ತಿ ಸ್ಮಾರಕ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹೇರಾಡಿ ಇಲ್ಲಿ ಸಂಸ್ಥೆಯ ಅಧ್ಯಕ್ಷ ಹರೀಶ್ ಕುಮಾರ್ ಇವರ ನೇತೃತ್ವದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ವರದಿ ವರ್ಷದಲ್ಲಿ ಸಂಘವು 37.68 ಕೋಟಿ ರೂ. ವಹಿವಾಟು ನಡೆಸಿದ್ದು, 13.27 ಲಕ್ಷ ರೂ. ಪಾಲು ಬಂಡವಾಳ ಹೊಂದಿದೆ. 6.14 ಕೋಟಿ ರೂಪಾಯಿ ಸಂಗ್ರಹಿಸಿ 5.86 ಕೋಟಿ ರೂ. ಸಾಲ ನೀಡಲಾಗಿದ್ದು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 17.01 ಲಕ್ಷ ರೂ. ಲಾಭ ಗಳಿಸಿದೆ. 30.18 ಲಕ್ಷ ನಿಧಿಗಳನ್ನು ಹೊಂದಿದೆ ಎಂದರು. ಸದಸ್ಯರ ಹಾಗೂ ಸಾರ್ವಜನಿಕ ಹಿತಾಸಕ್ತಿಗಾಗಿ ಸಂಘದಲ್ಲಿ ಇ -ಸ್ಟ್ಯಾಂಪ್, ಆರ್ಟಿಸಿ ನೀಡುವ ಸೌಲಭ್ಯವಿದ್ದು ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣಿ ಮಾಡಲಾಗಿದೆ. ಸಭೆಯಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಸಂಸ್ಥೆಯ ಹಿರಿಯ ಸದಸ್ಯರಾದ ರಾಜೀವ ಶೇರ್ವೆಗಾರ್ ಇವರು ನೀಡಿದರು. ಸಹಕಾರಿಯ…
ಕೋಡಿ ಕನ್ಯಾಣ: ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕೋಡಿ ಕನ್ಯಾಣದ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಶಂಭು ಪೂಜಾರಿ ಸ್ವಾಗತಿಸಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು 100 ಕೋಟಿಗೂ ಅಧಿಕ ವ್ಯವಹಾರ ನಡೆಸಿದ್ದು 16 ಲಕ್ಷ ರೂ.ಗೂ ಅಧಿಕ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡಾ 15ರಷ್ಟು ಡಿವಿಡೆಂಡ್ ವಿತರಿಸಲಾಗುತ್ತಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಸದಸ್ಯರು, ಸಿಬ್ಬಂದಿ ವರ್ಗ ಕಾರಣರಾಗಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಾರ್ಷಿಕ ಮಹಾಸಭೆಯ ಆಡಳಿತ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಲೆಕ್ಕಪರಿಶೋಧನಾ ವರದಿಯನ್ನು ವ್ಯವಸ್ಥಾಪಕ ಸಂದೀಪ್ ಕರ್ಕೇರ ವಾಚಿಸಿದರು. ಸಂಸ್ಥೆಯ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕರ್ಕೇರ ಮಂಡಿಸಿದರು. ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಸಂಸ್ಥೆಯ ಬೆಳವಣಿಗೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ…
2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಂಪನ್ನ: ರೂ. 306.32 ಲಕ್ಷ ನಿವ್ವಳ ಲಾಭ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಜರುಗಿತು. ಆತ್ಮಶಕ್ತಿ ಸಹಕಾರಿಯು ಅತ್ಯಲ್ಪ ಅವಧಿಯಲ್ಲಿ ಸಾಧಿಸಿದ ಉನ್ನತ ಪ್ರಗತಿಯನ್ನು ಸದಸ್ಯರು ಸಾಮಾನ್ಯ ಸಭೆಯಲ್ಲಿ ಪ್ರಶಂಸಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘವು ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2025-26ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 2.5 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ…
ಮಂಗಳೂರು: ಮಂಗಳೂರಿನಲ್ಲಿ ಶನಿವಾರ ನಡೆದ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ -ರೋಟರಿ ಕೋಸ್ಟಲ್ ಎಂಎಸ್ಎಂಇ ಕಾಂಕ್ಲೇವ್ -2025 ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕಲಾ ಪರಿಷತ್ನ ಖಜಾಂಚಿ, ಎ.ಜಿ ಜ್ಯುವೆಲ್ಲರಿ ವರ್ಕ್ಸ್ ಇದರ ಮಾಲೀಕರಾದ ಎ.ಜಿ ಸದಾಶಿವ ಮಂಗಳಾದೇವಿ ಇವರಿಗೆ ಪ್ರತಿಷ್ಠಿತ ಆರ್ಟಿಸನ್ ಆಫ್ ದ ಇಯರ್(ವರ್ಷದ ಅತ್ಯುತ್ತಮ ಕುಶಲಕರ್ಮಿ) ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಇವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉತ್ತಮ ಗ್ರಾಹಕರಾಗಿದ್ದು ಇವರಿಗೆ 2024-25ನೇ ಸಾಲಿನಲ್ಲಿ ವಿಶ್ವಕರ್ಮ ಬ್ಯಾಂಕ್ ದಿವಂಗತ ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದೆ. ವರ್ಷದ ಅತ್ಯುತ್ತಮ ಕುಶಲಕರ್ಮಿ ಪುರಸ್ಕಾರಕ್ಕೆ ಭಾಜನರಾದ ಎ.ಜಿ ಸದಾಶಿವ ಅವರಿಗೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಮತ್ತು ಬ್ಯಾಂಕಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೆಳ್ತಂಗಡಿ: ಸಹಕಾರ ರಂಗದಲ್ಲಿ ಅದ್ವಿತೀಯ ಸಾಧನೆಯೊಂದಿಗೆ ಪ್ರಸಕ್ತ ಸಾಲಿನಲ್ಲಿ ವಿಜಯ ಕ್ರೆಡಿಟ್ ಸಹಕಾರಿ ಸಂಘವು ರೂ.1100 ಕೋಟಿ ವಾರ್ಷಿಕವ್ಯವಹಾರ ನಡೆಸಿದ್ದು, ರೂ.3.00 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.18 ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಗುರುವಾಯನಕೆರೆ ಬಂಟರ ಸಂಘದಲ್ಲಿ ನಡೆದ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 33,245 ಸದಸ್ಯರನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 4 ಕೋಟಿ ರೂ. ಗಿಂತಲೂ ಅಧಿಕ ಪಾಲು ಬಂಡವಾಳ ಸಂಗ್ರಹಿಸಿದ್ದು, 247 ಕೋಟಿ ರೂ. ಠೇವಣಿ ಹೊಂದಿದೆ. 216 ಕೋಟಿ ರೂ.ಗಿಂತ ಅಧಿಕ ಸಾಲ ನೀಡಲಾಗಿದೆ. ಸಾಲ ವಿತರಣೆಯಲ್ಲಿ ಕಳೆದ ವರ್ಷಕ್ಕಿಂತ ಶೇ.39.71 ಹಾಗೂ ಠೇವಣಿ ಸಂಗ್ರಹದಲ್ಲಿ ಶೇ. 36.04 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು. ಸಂಸ್ಥೆಯ ಮಾರ್ಗದರ್ಶಕ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಅವರು ಸಂಘದ ಸ್ಥಾಪಕಾಧ್ಯಕ್ಷ ಜಯರಾಮ ಶೆಟ್ಟಿ ಅವರ…
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ ೨೦೨೪-೨೫ನೇ ಸಾಲಿನ ಸಹಕಾರಿ ಶಿಕ್ಷಣ ನಿಧಿಯ ಚೆಕ್ ಅನ್ನು ಬ್ಯಾಂಕಿನ ಅಧ್ಯಕ್ಷರಾದ ಹೆಚ್.ಜಗನ್ನಾಥ ಸಾಲಿಯಾನ್ ಇವರು ಕೆ.ಐ.ಸಿ.ಎಂ ಮೂಡಬಿದಿರೆ ಇದರ ಪ್ರಥಮದರ್ಜೆ ಸಹಾಯಕರಾದ ಹೊನ್ನಪ್ಪ ಇವರಿಗೆ ಹಸ್ತಾಂತರಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಈ ವೇಳೆ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆಳ್ವ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೃಷ್ಣ ಮುರಳಿ ಶ್ಯಾಮ್ ಕೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಹಾಸ ರಾಣ್ಯ ಡಿ, ಲೆಕ್ಕಾಧಿಕಾರಿಗಳಾದ ಕುಶಾಲಪ್ಪ ಶೆಟ್ಟಿ ಪಿ ಹಾಗೂ ಲೆಕ್ಕಿಗ ಚಂದ್ರಶೇಖರ ಎ ಇವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಕಟೀಲು: ನಂದಿನಿ ಪತ್ತಿನ ಸಹಕಾರ ಸಂಘ ಕಟೀಲು ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಸಂಘದ ಅಧ್ಯಕ್ಷರಾದ ಕೆ.ನೀಲಯ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಆಡಳಿತ ಕಚೇರಿಯ ವಠಾರದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ಕೆರಮ ಸ್ವಾಗತಿಸಿದರು. ಸಾಮಾನ್ಯ ಸಭೆಯ ನೋಟೀಸ್ ಅನ್ನು ಸಂಘದ ಸಿಬ್ಬಂದಿ ದಿವ್ಯಾ ಡಿ.ಅಮೀನ್ ಓದಿದರು. ಕಳೆದ ಸಾಲಿನ ಮಹಾಸಭೆಯ ನಡವಳಿಕೆಗಳನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ಕೆರಮ ಮಂಡಿಸಿದರು. ಸಂಘದ ಉಪಾಧ್ಯಕ್ಷೆ ಬಬಿತಾ ಎಂ 2024-25ನೇ ಸಾಲಿನ ಆಡಳಿತ ವರದಿ ಮಂಡಿಸಿ, 2025-26ನೇ ಸಾಲಿನ ಲೆಕ್ಕ ಪರಿಶೋಧಕರ ನೇಮಕಾತಿ ಬಗ್ಗೆ ಮಂಡಿಸಿದರು. 2025-26ನೇ ಸಾಲಿನ ಬಜೆಟ್ ಅನ್ನು ಸಂಘದ ಹಿರಿಯ ಸಿಬ್ಬಂದಿ ದಿವ್ಯಾ ಡಿ.ಅಮೀನ್ ಮಂಡಿಸಿದರು. ಕಳೆದ ಸಾಲಿನ ಬಜೆಟ್ಗಿಂತ ಹೆಚ್ಚು ಆದ ಖರ್ಚನ್ನು ಸಂಘದ ಹಿರಿಯ ನಿರ್ದೇಶಕರಾದ ಸೀತಾರಾಮ ಬಂಗೇರ ಮಂಡಿಸಿದರು. ನಿರ್ದೇಶಕರಾದ ಬಿ.ಲತಾ 2025-26ನೇ ಸಾಲಿನ ಕ್ರಿಯಾ ಯೋಜನೆಗಳನ್ನು ಮಂಡಿಸಿದರು. 2024–25ನೇ ಸಾಲಿನ ಲೆಕ್ಕ ಪರಿಶೋಧಿತ ಆರ್ಥಿಕ ತಖ್ತೆಗಳನ್ನು,…
ಮೂಡುಬಿದಿರೆ: ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಶಿರ್ತಾಡಿ ಹೋಟೆಲ್ ಶ್ರೀ ಬ್ರಹ್ಮ ರೆಸಿಡೆನ್ಸಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ವಿ.ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t 2೦12ರಲ್ಲಿ ಪ್ರಾರಂಭಗೊಂಡ ನವಮೈತ್ರಿ ಸಹಕಾರಿಯು 13 ವರ್ಷಗಳನ್ನು ಪೂರೈಸಿ ಶಿರ್ತಾಡಿ, ನಾರಾವಿ ಮತ್ತು ಅಳದಂಗಡಿಯಲ್ಲಿ ಶಾಖೆ ಹೊಂದಿ ಸದಸ್ಯ ಗ್ರಾಹಕರಿಗೆ ವ್ಯವಹಾರ ನಡೆಸಲು ಅನುಕೂಲ ಕಲ್ಪಿಸಿದೆ. ಸಹಕಾರಿಯು 20.36 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, 17.07 ಕೋಟಿ ಸದಸ್ಯ ಠೇವಣಿ ಹೊಂದಿದೆ. ಪ್ರಸಕ್ತ ವರ್ಷದಲ್ಲಿ 51.81 ಲಕ್ಷ ರೂ. ಲಾಭ ಪಡೆದುಕೊಂಡಿದೆ. ಸಹಕಾರಿ ಸಂಘವು ಸದಸ್ಯರ ಅನುಕೂಲಕ್ಕಾಗಿ ಯುನಿಕ್ಸ್ ಮೊಬೈಲ್ ಆಪ್ ಬಿಡುಗಡೆಗೊಳಿಸಿದ್ದು, ಇದರ ಮೂಲಕ ಗ್ರಾಹಕರು ಸಂಘದಲ್ಲಿನ ವ್ಯವಹಾರವನ್ನು ತಿಳಿದುಕೊಳ್ಳಬಹುದಾಗಿದೆ. ಪ್ರಸಕ್ತ ವರ್ಷದಲ್ಲಿ ಶೇಕಡ 10 ಲಾಭಾಂಶ ನೀಡಲು ಮಹಾಸಭೆಯಲ್ಲಿ ನಿರ್ಧರಿಸಲಾಗಿದೆ. ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇನ್ನೂರು ಕೋಟಿ ರೂ. ವ್ಯವಹಾರವನ್ನು ಮಾಡಿ ಮೆಚ್ಚುಗೆ ಗಳಿಸಿದೆ. ಇ ಸ್ಟ್ಯಾಂಪಿಂಗ್, ಪಹಣಿ ಪತ್ರ ಸೇವೆ,…
ಕುಂದಾಪುರ: ಇಲ್ಲಿನ ಹೊಸಾಡು ಸೇವಾ ಸಹಕಾರ ಸಂಘ ಮುಳ್ಳಿಕಟ್ಟೆ ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇವರು ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿ ಯಳೂರು ಸ್ವಾಗತಿಸಿದರು. ವರದಿ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶ ಹಂಚಿಕೆ ಮಾಡಿ ಎ ವರ್ಗದ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. ಉತ್ತಮ ಗ್ರಾಹಕರನ್ನು ಗುರುತಿಸಿ ಗೌರವಿಸಲಾಯಿತು. ಉಪಾಧ್ಯಕ್ಷರಾದ ಚಂದ್ರಶೇಖರ, ನಿರ್ದೇಶಕರಾದ ದಿನೇಶ್ ಜೋಗಿ, ಶಶಿಧರ ಅಡಿಗ, ಪ್ರದೀಪ ಬಿಲ್ಲವ, ರಾಮ ಗಾಣಿಗ, ಶರತ್ ಶೆಟ್ಟಿ, ನವೀನ್ ಫೆರ್ನಾಂಡಿಸ್, ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಿಬ್ಬಂದಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಪ್ರಶಾಂತ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
