Author: admin
ರಾಯಚೂರಿನಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸಂದೇಶ ರಾಯಚೂರು: ಆರ್ಥಿಕ ಅಭಿವೃದ್ಧಿ ಹಾಗೂ ಹೊಸ ಜೀವನೋಪಾಯಗಳನ್ನು ಸೃಷ್ಟಿಸಲು ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶಗಳಲ್ಲಿ ಆಳವಾಗಿ ವಿಸ್ತರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕತೆಯನ್ನು ಬಲಪಡಿಸಲು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವುದು ಅತ್ಯಗತ್ಯ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಪ್ರತಿಪಾದಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರಿ ಒಕ್ಕೂಟ, ಕರ್ನಾಟಕ ರಾಜ್ಯ ಬಸವೇಶ್ವರ ಮಾಧ್ಯಮ ಒಕ್ಕೂಟ ಮತ್ತು ಜಿಲ್ಲಾಮಟ್ಟದ ಸಹಕಾರಿ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಸಂದೇಶ ನೀಡಿದರು. ಗ್ರಾಮೀಣ ಭಾರತದಲ್ಲಿ ಸಹಕಾರಿ ಚಳವಳಿಯನ್ನು ಬಲಪಡಿಸುವ ಕುರಿತಂತೆ ನಡೆದ ಕಾರ್ಯಕ್ರಮದಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ತರಬೇತಿ ಸಹಕಾರಿ ಶಿಕ್ಷಣವನ್ನು ಪರಿವರ್ತಿಸುವುದು” ಎಂಬ ವಿಷಯದ…
ರಾಯಚೂರು: ರಾಯಚೂರು ತಾಲೂಕು ಕಾರ್ಯನಿರತ ಸೌಹಾರ್ದ ಸಹಕಾರಿಗಳ ನೌಕರರ ಸಂಘ, ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಸಮೂಹ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸೌಹಾರ್ದ ಕಾಯ್ದೆಯ ರಜತ ಮಹೋತ್ಸವ ಹಾಗೂ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನವೆಂಬರ್ 23ರಂದು ಭಾನುವಾರ ಬೆಳಗ್ಗೆ 10ರಿಂದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಸವೇಶ್ವರ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಹಾಗೂ ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಗುರುನಾಥ ಜಾಂತೀಕರ್ ಉದ್ಘಾಟಿಸಲಿದ್ದಾರೆ. ಮಾನ್ವಿ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಆರ್.ತಿಮ್ಮಯ್ಯ ಶೆಟ್ಟಿ ಅಧ್ಯಕ್ಷತೆ…
ಬಳ್ಳಾರಿ: ಸುಕೋ ಬ್ಯಾಂಕ್ ವತಿಯಿಂದ ಬ್ಯಾಂಕಿನ ಎಲ್ಲಾ 29 ಶಾಖೆಗಳಲ್ಲಿ ಮಹಿಳಾ ಅಧಿಕಾರಿಗಳಿಗಾಗಿ ಸಮಗ್ರ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬಳ್ಳಾರಿಯ ಸ್ಕುರುತ ನರ್ಸಿಂಗ್ ಹೋಂನ ಸ್ತ್ರೀರೋಗ ತಜ್ಞೆ ಡಾ.ರೇಣುಕಾ ಮಂಜುನಾಥ್ ಜಾಗೃತಿ ಅಧಿವೇಶನ ನಡೆಸಿದರು. ಸ್ವಯಂ ಪರೀಕ್ಷೆಯ ವಿಧಾನಗಳು, ಆರಂಭಿಕ ಪತ್ತೆ, ಸಾಮಾನ್ಯ ಲಕ್ಷಣಗಳು, ತಡೆಗಟ್ಟುವ ಲಸಿಕೆಗಳ ಕುರಿತು ಅವರು ವಿಸ್ತೃತ ಮಾಹಿತಿ ನೀಡಿ, ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕ್ಯಾನ್ಸರ್ ಪತ್ತೆಗೆ ಸಕಾಲಿಕ ತಪಾಸಣೆ ಮತ್ತು ಪೂರ್ವಭಾವಿ ಆರೋಗ್ಯ ಮೇಲ್ವಿಚಾರಣೆಯ ಅಗತ್ಯದ ಕುರಿತು ಅವರು ಮಂಡಿಸಿದ ಒಳನೋಟಗಳು ಜಾಗೃತಿ ಮೂಡಿಸಿತು. ಮುಖ್ಯ ಭಾಷಣ ಮಾಡಿದ ಸುಕೋ ಬ್ಯಾಂಕ್ ನಿರ್ದೇಶಕಿ ಸಾವಿತ್ರಿ ಎಂ, ಮಹಿಳಾ ಅಧಿಕಾರಿಗಳು ವೃತ್ತಿಪರ ಕರ್ತವ್ಯಗಳು ಮತ್ತು ವೈಯಕ್ತಿಕ ಜವಾಬ್ದಾರಿಗಳನ್ನು ನಿರ್ವಹಿಸುವಾಗ ತಮ್ಮ ಸ್ವಂತ ಆರೋಗ್ಯವನ್ನು ಹೆಚ್ಚಾಗಿ ಕಡೆಗಣಿಸುತ್ತಾರೆ, ಇದು ಗಂಭೀರ ಪರಿಸ್ಥಿತಿಗಳ ರೋಗ ನಿರ್ಣಯವನ್ನು ವಿಳಂಬಗೊಳಿಸಲು ಕಾರಣವಾಗಬಹುದು. ಈ ಬಗ್ಗೆ ಎಚ್ಚರಿಕೆ ಅಗತ್ಯ. ಮಹಿಳಾ ಉದ್ಯೋಗಿಗಳು…
ಮೂಡುಬಿದಿರೆ: ಎಲ್ಲರ ಸಹಕಾರದೊಂದಿಗೆ ನಡೆಯುತ್ತಿರುವ ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಂದು ಪಿ.ಕೆ.ಥೋಮಸ್ ಮೂಡುಬಿದಿರೆ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಇವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಮೂಡುಬಿದಿರೆ ಶಾಖೆ, ಮೌಂಟ್ ರೋಜರಿ ಆಸ್ಪತ್ರೆ ಅಲಂಗಾರು ಮತ್ತು ಲಯನ್ಸ್ ಕ್ಲಬ್ ಅಲಂಗಾರು ಇವರ ಜಂಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ ಅಂಗವಾಗಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಿಯದರ್ಶಿನಿ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮಾತನಾಡಿ, ನಮ್ಮ ಗ್ರಾಹಕರ ಸಹಕಾರದಿಂದ ಸಂಸ್ಥೆಯು ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದರ ಪರಿಣಾಮವಾಗಿ ಸಂಸ್ಥೆಯ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಂಸ್ಥೆಯು ದ.ಕ ಜಿಲ್ಲೆಯ “ಉತ್ತಮ ಪತ್ತಿನ ಸಹಕಾರ ಸಂಘ” ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗ್ರಾಹಕರ ಹಾಗೂ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸದಾ ಸಮಾಜಮುಖಿ ಸೇವೆಯಲ್ಲಿ ವಿವಿಧ ಸಂಸ್ಥೆಗಳೊಂದಿಗೆ ಸದಾ ಕೈಜೋಡಿಸಲು ನಮ್ಮ ಸಂಸ್ಥೆ ಸಿದ್ದವಾಗಿರುತ್ತದೆ ಎಂದು ಹೇಳಿದರು. ಶಿಬಿರದಲ್ಲಿ ಮೌಂಟ್ ರೋಜರಿ ಆಸ್ಪತ್ರೆಯ ನಿರ್ದೇಶಕರಾದ ಸಿಸ್ಟರ್ ಪ್ರೆಸಿಲ್ಲಾ ಡಿಮೆಲ್ಲೊ, ಲಯನ್ಸ್ ಕ್ಲಬ್…
ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮಂಗಳವಾರ ಬ್ಯಾಂಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಬ್ಯಾಂಕ್ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಹೇಳಿದರು. ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನೂತನ ಕ್ಯಾಲೆಂಡರ್ ವರ್ಷದ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಭೆಗೆ ವಿವರಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಮಲ್ಲೇಶ್ ಕುಮಾರ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, ಸಿ.ಎ. ಅರವಿಂದ ಕೃಷ್ಣ, ಗಣೇಶ ಕೌಕ್ರಾಡಿ, ಹರೀಶ ಭಿಜತ್ರೆ, ಶ್ರೀಮತಿ ಸೀಮಾ ಎ.ಎ., ಶ್ರೀಮತಿ ವೀಣಾ ಹಾಗೂ…
ಮೈಸೂರು: ಮೈಸೂರು ನಗರದ ರಾಮಕೃಷ್ಣನಗರದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ಇತ್ತೀಚೆಗೆ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ, ಸಹಕಾರಿ ಸಪ್ತಾಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಉದ್ಘಾಟನೆ ನೆರವೇರಿಸಿದರು. ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಶೆಲ್ವಪಿಳ್ಳೈ ಅಯ್ಯಂಗಾರ್ ಸಮಾರೋಪ ಭಾಷಣ ಮಾಡಿದರು. ಸಹಕಾರಿಯ ಹಿರಿಯ ಸದಸ್ಯರಿಗೆ, ಸದಸ್ಯತ್ವದ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ಸಹಕಾರಿಯ ಸದಸ್ಯರು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಸ್ಯೋತ್ಸವ ಕಾರ್ಯಕ್ರಮವನ್ನು ಜನಪ್ರಿಯ ಹಾಸ್ಯ ಕಲಾವಿದರಾದ ಮೈಸೂರು ಆನಂದ್ ಮತ್ತು ರೂಪಶ್ರೀ ಆನಂದ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಹಕಾರಿಯ ಸದಸ್ಯರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ
ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್ 26ರ ಬುಧವಾರ ಪೂರ್ವಾಹ್ನ ಗಂಟೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ…
ಹಾವೇರಿ: ಹಾವೇರಿಯಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ರಾಣೆಬೆನ್ನೂರು ತಾಲೂಕಿನ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಗತಿಯನ್ನು ಗುರುತಿಸಿ ಗೌರವಿಸಿದ ಕೆಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶಿವಕುಮಾರಗೌಡ ಎಸ್.ಪಾಟೀಲ, ನಿರ್ದೇಶಕರಾದ ಮಳ್ಳಪ್ಪ ಗೂ. ನಿಂಗಜ್ಜನವರ, ತಿರುಪತಿ ಅಜ್ಜನವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಿವಾನಂದ ಹ ಸಂಗಾಪುರ, ಕೆಸಿಸಿ ಬ್ಯಾಂಕ್ ನೌಕರ ವರ್ಗದವರು ಹಾಗೂ ಹಾವೇರಿ ಜಿಲ್ಲೆಯ ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರುದ್ರಪ್ಪ ಬರಮಪ್ಪ ತೋಟಿಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರುದ್ರಪ್ಪ ಮಾರೇರ ಪ್ರಶಸ್ತಿ ಸ್ವೀಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಲ ಅಧ್ಯಕ್ಷ ಯಶ್ಪಾಲ್ ಸುವರ್ಣ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ| ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ ಕುಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು,…
ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಇದರ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಇವರ ಶ್ರದ್ಧಾಂಜಲಿ ಸಭೆಯು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ, ದಿವಂಗತರ ಪುತ್ರ ಪಯ್ಯಾಲ್ ಶಾಂತರಾಮ ಆಚಾರ್ಯ, ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಡಿ.ಭಾಸ್ಕರ್ ಆಚಾರ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ್ ಅಡ್ಯಂತಾಯ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕ ಬಿ.ಉದಯ್ ಕುಮಾರ್ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಬ್ಯಾಂಕಿನ ಆಡಳಿತ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
