Author: admin

ತೆರಿಗೆ ಕಟ್ಟುವ ಪ್ರಕ್ರಿಯೆ ಸರಳ, ಪಾರದರ್ಶಕ ಮತ್ತು ಜನಸ್ನೇಹಿಯಾಗಿ ರೂಪು: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರ ಅಭಿಪ್ರಾಯ ಮಂಗಳೂರು: ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದಲ್ಲಿ ಜಾರಿಗೆ ಬರುತ್ತಿರುವ GST 2.0 ಸುಧಾರಣಾ ಕ್ರಮವು ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದುಕೊಡಲಿದೆ. ಇದು ತೆರಿಗೆ ಕಟ್ಟುವ ಪ್ರಕ್ರಿಯೆಯನ್ನು ಸರಳ, ಪಾರದರ್ಶಕ ಮತ್ತು ಜನಸ್ನೇಹಿಯಾಗಿ ರೂಪಿಸುವುದರ ಜೊತೆಗೆ ಮಧ್ಯಮ ವರ್ಗ ಹಾಗೂ ಕೆಳವರ್ಗದ ಜನರ ಆರ್ಥಿಕ ಹಿತಾಸಕ್ತಿಗೆ ಅನುಕೂಲಕರವಾಗಲಿದೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ದೇಶದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ಸರಕು ಮತ್ತು ಸೇವಾ ತೆರಿಗೆಯ ಹಂತಗಳನ್ನು ಕಡಿಮೆ ಮಾಡಿದ್ದು ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಗಣನೀಯವಾಗಿ ಇಳಿಕೆ ಮಾಡಿದೆ. ದೈನಂದಿನ ಬಳಕೆಯ ಹಲವಾರು ವಸ್ತುಗಳು, ಸೇವಾ ವಲಯದ ಹಲವು ಪ್ರಕಲ್ಪಗಳ ಬೆಲೆ ಇಳಿಕೆಯಾಗಲಿದ್ದು ಇದರಿಂದ ಜನಸಾಮಾನ್ಯರ ಜೀವನ ಮಟ್ಟ…

Read More

ವ್ಯವಹಾರ ವಹಿವಾಟು ₹1300 ಕೋಟಿ ದಾಟಿ ಮುನ್ನಡೆ: ಅಧ್ಯಕ್ಷ ಅನಿಲ್‌ ಲೋಬೊ ಘೋಷಣೆ ಮಂಗಳೂರು: ಎಂ.ಸಿ.ಸಿ. ಬ್ಯಾಂಕ್ 2024–25ನೇ ಹಣಕಾಸು ವರ್ಷದಲ್ಲಿ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಷೇರುದಾರರಿಗೆ 10% ಲಾಭಾಂಶ ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು. ಮಂಗಳೂರಿನ ಕೊಡಿಯಾಲ್‌ಬೈಲ್‌ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್‌ನಲ್ಲಿ ಭಾನುವಾರ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ದಾಖಲೆಯ ಕಾರ್ಯಕ್ಷಮತೆಯನ್ನು ಗಮನಕ್ಕೆ ತಂದ ಅವರು, ₹9.51 ಕೋಟಿ ನಿವ್ವಳ ಲಾಭ, ₹705.40 ಕೋಟಿ ಠೇವಣಿಗಳು (10% ಹೆಚ್ಚಳ), ₹535.49 ಕೋಟಿ ಮುಂಗಡಗಳು (25.21% ಬೆಳವಣಿಗೆ), ₹830.30 ಕೋಟಿ ದುಡಿಯುವ ಬಂಡವಾಳ (10.03% ಹೆಚ್ಚಳ), ₹32.43 ಕೋಟಿ ಷೇರು ಬಂಡವಾಳ (14.07% ಬೆಳವಣಿಗೆ), ಎನ್‌ಪಿಎ 1.40%, ಆರ್‌ಒಎ 1.15%, ಮಾರ್ಚ್ 31, 2025ರಂತೆ…

Read More

ನೂತನ ಕಟ್ಟಡದ ಉದ್ಘಾಟನೆ, ಶೇ.18 ಲಾಭಾಂಶ ಘೋಷಣೆ ಸಿಂಧನೂರು: ಇಲ್ಲಿನ ಕಿರಣ ಸ್ವ-ಸಹಾಯ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ 24ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಿಂಧನೂರಿನ ಶ್ರೀ ಚನ್ನಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸುಕೋ ಬ್ಯಾಂಕ್ ಸಂಸ್ಥಾಪಕ ಮನೋಹರ ಮಸ್ಕಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸಹಕಾರಿಗಳಿಗೆ ವಿಶೇಷವಾಗಿ, ಕಲ್ಯಾಣ ಕರ್ನಾಟಕ ಕಲಬುರಗಿ ವಿಭಾಗದಲ್ಲಿ ಸಹಕಾರ ಸಂಘಗಳ ಇನ್ನೂ ಹೆಚ್ಚಿನ ಆರ್ಥಿಕ ಅಭಿವೃದ್ಧಿಯನ್ನು ಹೊಂದಬೇಕು, ಕಾರ್ಯದಕ್ಷತೆಯಿಂದ ಮತ್ತು ಪ್ರಾಮಾಣಿಕತೆಯಿಂದ ಸದಸ್ಯರಿಗೆ ವಿಶೇಷ ಯೋಜನೆಗಳನ್ನು ಪರಿಚಯಿಸುವುದರ ಮೂಲಕ ಉಳಿತಾಯ ಹಾಗೂ ಸಾಲ ಸೌಲಭ್ಯಗಳನ್ನು ನೀಡಬೇಕು ಎಂದು ಹೇಳಿದರು. ಪಂಚಮವೇದ ಸಾವಯವ ಕೃಷಿ ತಜ್ಞರಾದ ದಯಾವತಿ ಮಸ್ಕಿ ಅವರು ಸಹಕಾರಿಯ ಸದಸ್ಯರ ಸಾವಯವ ಕೃಷಿಯಿಂದ ಸಶಕ್ತ, ಸಮೃದ್ಧಿ, ಗುಣಮಟ್ಟದ ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ತುಂಬಾ ಸಹಾಯಕಾರಿಯಾಗಿದೆ. ಸ್ವತಹ ನಾನೇ ಸಾವಯವ ಕೃಷಿಯನ್ನು ಮಾಡಿ ವಾರ್ಷಿಕವಾಗಿ ರೂ.24 ಲಕ್ಷ ಆದಾಯ ಪಡೆಯುತ್ತಿದ್ದೇನೆ ಎಂದು ತಿಳಿಸಿದರು. ನಂತರ ಸಹಕಾರಿಯ ಅಧ್ಯಕ್ಷರಾದ ಮಂಜುಳಾ…

Read More

ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ಅರಸೀಕೆರೆ: ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ, ಮಾಡಾಳು ಶ್ರೀ ನಿರಂಜನ ಪೀಠದ ಪೀಠಾಧ್ಯಕ್ಷರಾದ ರುದ್ರಮುನಿ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮ ನಿರಂಜನ ಪೀಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಮೊದಲನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೆ ಉತ್ತಮ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುವುದಲ್ಲದೆ ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಕೂಡ ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ…

Read More

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಬಂಟ್ವಾಳ: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಅಡಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಸಹಕಾರಿಗಳು ಮತ್ತು ಗ್ರಾಹಕರಿಗೆ ದೇಶೀಯ ಉತ್ಪನ್ನಗಳ ಉತ್ಪಾದನೆ, ಬಳಕೆಗೆ ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಿದಾಗ ಭಾರತದ ಜಿಡಿಪಿ ಏರಿಕೆಯಾಗಿ ಪ್ರಾಥಮಿಕ ಸಹಕಾರ ಸಂಘಗಳು ಬಲವರ್ಧನೆಯಾಗುವುದರೊಂದಿಗೆ ಭಾರತ ಜಗತ್ತಿನಲ್ಲಿಯೇ ಅಗ್ರರಾಷ್ಟ್ರವಾಗಿ ಹೊರ ಹೊಮ್ಮಲ್ಲಿದ್ದು ಸಹಕಾರ ಸಂಘಗಳು ದೇಶೀಯ ಉತ್ಪನ್ನಗಳ ಉತ್ಪಾದನೆ ಮತ್ತು ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಿದ ಸಂಘದ 2024-25ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ನವರಾತ್ರಿಯ ಸಂದರ್ಭಕ್ಕೆ ಬೇಕಾಗುವಂತ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ 5000 ಪ್ರಸಾದ ನೀಡುವ ಕೈಚೀಲಗಳು ಮತ್ತು ಭಕ್ತರಿಗೆ ದೇವಸ್ಥಾನದಲ್ಲಿ ಊಟಕ್ಕೆಂದು 500 ಸ್ಟೀಲ್ ತಟ್ಟೆಗಳನ್ನು ಶುಕ್ರವಾರ ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣ ಐತಾಳ್ ಅವರಿಗೆ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರು ದೇವಸ್ಥಾನಕ್ಕೆ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಶ್ರೀಶಾ ಸೊಸೈಟಿಯು ಆರಂಭವಾಗಿ ಆರು ವರ್ಷಗಳಾದ ಶುಭವಸರದಲ್ಲಿ ಮಂಗಳೂರಿನ ಗ್ರಾಮದೇವತೆ ಮಂಗಳಾದೇವಿಯ ಭಕ್ತರಿಗೆ ಅನುಕೂಲವಾಗುವಂತ ಊಟದ ತಟ್ಟೆಗಳನ್ನು ಹಾಗೂ ದೇವರ ಪ್ರಸಾದ ನೀಡಲು ಚೀಲಗಳನ್ನು ದೇವಸ್ಥಾನಕ್ಕೆ ನೀಡಲು ಅವಕಾಶ ದೊರಕಿದ್ದು ನಮ್ಮ ಸೌಭಾಗ್ಯ. ಶ್ರೀ ಮಂಗಳಾದೇವಿಯು ನಮ್ಮ ನಿಮ್ಮನ್ನೆಲ್ಲಾ ಸಕಲ ಸೌಭಾಗ್ಯಗಳನ್ನಿತ್ತು ಅನುಗ್ರಹಿಸಲಿ ಎಂದು ಮಾತೆಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅರುಣ ಐತಾಳ್ ಅವರು ಶ್ರೀಶಾ ಸೌಹಾರ್ದ ಸೊಸೈಟಿಯ ಈ ದೊಡ್ಡ ಕೊಡುಗೆ ದೇವಸ್ಥಾನಕ್ಕೆ ತುಂಬಾ…

Read More

ಪುತ್ತೂರು: ಅತೀ ಹೆಚ್ಚು ಅಡಕೆ ಖರೀದಿ ಮಾಡಿದ ಸಾಧನೆಗಾಗಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳೂರಿನ ಬೈಕಂಪಾಡಿಯಲ್ಲಿ ಕೆ.ಸೀತಾರಾಮ ರೈ ಸವಣೂರು ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಾಸ್ ಲಿಮಿಟೆಡ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಗೌರವಾರ್ಪಣೆ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸವಣೂರು ಮಾಸ್ ಅಡಕೆ ಖರೀದಿ ಕೇಂದ್ರಕ್ಕೆ ಅಡಕೆ ಮಾರಾಟ ಮಾಡಿ ಈ ಸಾಧನೆಗೆ ಕಾರಣಕರ್ತರಾಗಿರುವ ಅಡಕೆ ಬೆಳೆಗಾರರ ಪರವಾಗಿ ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಗೌರವಾರ್ಪಣೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚೇತನ್ ಕೋಡಿಬೈಲು, ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಮಾಸ್ ಶಾಖೆ ಅಡಕೆ ಖರೀದಿ ಕೇಂದ್ರದ ಶಾಖಾಧಿಕಾರಿ ಯತೀಶ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ನಗರದ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕಿನ 101ನೇ ವಾರ್ಷಿಕ ಸಾಮಾನ್ಯ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಶ್ರೀ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆಯಿತು. ಬ್ಯಾಂಕಿನ ಸ್ಥಿರಾಸ್ತಿ ಮೌಲ್ಯಮಾಪಕ ಅಶೋಕ್ ಕುಮಾ‌ರ್, ಆತ್ಮಶಕ್ತಿ ಪತ್ರಿಕೆಯ ಸಂಪಾದಕ ವಾಮನ್ ಕುದ್ರೋಳಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಾಜಿ ಸಿಬ್ಬಂದಿ ಅಶೋಕ್, ಕರ್ಣಾಟಕ ಬ್ಯಾಂಕಿನ ಮಾಜಿ ಸಿಬ್ಬಂದಿ ದಿನೇಶ್ ಅಂಚನ್ ಹಾಗೂ ಬ್ಯಾಂಕಿನ ಸದಸ್ಯರಾದ ಸಂಧ್ಯಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.  https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕ್ 2024-25ನೇ ಸಾಲಿನಲ್ಲಿ 211.55 ಲಕ್ಷ ರೂ. ನಿರ್ವಹಣಾ ಲಾಭ ಹಾಗೂ 95.50 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನಲ್ಲಿ ಒಟ್ಟು 23,498 ಮಂದಿ ಪಾಲುದಾರ ಸದಸ್ಯರಿದ್ದು, 900.92 ಲಕ್ಷ ರೂ. ಪಾಲು ಬಂಡವಾಳ ಮತ್ತು 18,508.78 ಲಕ್ಷ ರೂ. ಠೇವಣಿಯಿದ್ದು ದುಡಿಯುವ ಬಂಡವಾಳ 21,394.06 ಲಕ್ಷ ರೂ. ಇರುತ್ತದೆ. ಈ ಕುರಿತ ಸಂಪೂರ್ಣ ವರದಿಯನ್ನು ಬ್ಯಾಂಕಿನ ಪ್ರಭಾರ ಜನರಲ್ ಮ್ಯಾನೇಜರ್‌…

Read More

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಹಾಸಭೆಯಲ್ಲಿ ಅಧ್ಯಕ್ಷ ಭಾಸ್ಕರ ದೇವಸ್ಯ ಹೇಳಿಕೆ ಮಂಗಳೂರು: ರಾಜ್ಯ ಸರ್ಕಾರದ ಕೆಲವು ಹೊಸ ನೀತಿಗಳಿಂದಾಗಿ ಸೌಹಾರ್ದ ಸಹಕಾರಿ ಸಂಘಗಳಿಗೂ ಸಮಸ್ಯೆ ಉಂಟಾಗಿದೆ. ಇವುಗಳ ವಿರುದ್ಧ ಹೋರಾಟ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯು ಸದಾಕಾಲ ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಹೇಳಿದರು.‌ https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷದಿಂದ ಹೊಸ ಆಡಳಿತ ಸಮಿತಿ ರಚನೆಯಾದ ಬಳಿಕ ಒಕ್ಕೂಟಕ್ಕೆ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅದು ನಡೆಯಲಿಲ್ಲ. ಈ ವರ್ಷ ಶೇ.೧೦೦ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಎಲ್ಲ ಸೌಹಾರ್ದ ಸಂಘಗಳೂ ಜಿಲ್ಲಾ ಒಕ್ಕೂಟದಲ್ಲಿ ಸದಸ್ಯತ್ವ ಪಡೆದು ಬಲಶಾಲಿಯಾಗಿ ರೂಪುಗೊಳ್ಳಬೇಕು ಎಂದು ಅವರು ಹೇಳಿದರು.…

Read More

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಆಶೀರ್ವಚನ ವಿಟ್ಲ: ಸಹಕಾರ ತತ್ವದಲ್ಲಿ ಜೀವನದ ಸತ್ವ ಅಡಗಿದೆ. ವ್ಯವಹಾರದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇದ್ದಾಗ ಬೆಳವಣಿಗೆ ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಹಕಾರಿಗಳು ಇದ್ದಾಗ ಸಹಕಾರಿ ಸಂಘಗಳು ಯಶಸ್ವಿಯಾಗಿ ಬೆಳೆಯುತ್ತವೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘವು ಉನ್ನತ ಸ್ಥಾನಕ್ಕೇರಿದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ 2,227 ಕೋಟಿ ರೂ. ವ್ಯವಹಾರ ನಡೆಸಿದ್ದು, 5.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ…

Read More