Author: admin

ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ: ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಮಾಹಿತಿ ಮೂಡುಬಿದಿರೆ: ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘವು 2024-25ನೇ ಸಾಲಿನಲ್ಲಿ 474 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, 3.26 ಕೋಟಿ ರೂ. ಲಾಭ ಗಳಿಸಿದ್ದು ಸತತ ಏಳನೇ ವರ್ಷವೂ ಶೇ.25 ಲಾಭಾಂಶ ಘೋಷಿಸಲಾಗುತ್ತಿದೆ. ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ ಕಾಯ್ದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳುವಾಯಿ ಖಂಡಿಗ ಗ್ರೀನ್ಸ್ ಮಲ್ಟಿಪರ್ಪಸ್ ಹಾಲ್‌ನಲ್ಲಿ ಇತ್ತೀಚೆಗೆ ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ 2024-25ರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳುವಾಯಿಯಲ್ಲಿ ಪ್ರಧಾನ ಕಚೇರಿ, ಕೆಸರುಗದ್ದೆ, ಮೂಡುಮಾರ್ನಾಡು, ದರೆಗುಡ್ಡೆ, ಪಡುಮಾರ್ನಾಡುಗಳಲ್ಲಿ ಶಾಖೆಗಳನ್ನು ಹೊಂದಿದೆ. 7,505 ಸದಸ್ಯ ಬಲ ಇದ್ದು, 108.29 ಕೋಟಿ ರೂ. ಠೇವಣಿ ಸಂಗ್ರಹ, 100.19 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಶೇ.98.65 ಸಾಲ ಮರುಪಾವತಿಯಾಗಿದೆ ಎಂದು ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದರು. ಮುಂದಿನ ಸಾಲಿನಲ್ಲಿ 120 ಕೋಟಿ ರೂ. ಠೇವಣಿ ಸಂಗ್ರಹ, 110 ಕೋಟಿ…

Read More

ಮೈಸೂರು: ಇತ್ತೀಚೆಗೆ ನಡೆದ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ 71ನೇ ವಾರ್ಷಿಕ ಮಹಾಸಭೆಯಲ್ಲಿ ಮೈಸೂರು ಜಯನಗರದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಎಂದು ಗುರುತಿಸಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಪ್ತರ್ಷಿ ಸೌಹಾರ್ದ ಸಹಕಾರಿಯ ಪರವಾಗಿ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎ.ಪುರುಷೋತ್ತಮ ಇವರಿಗೆ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್, ಗೌರವ ಖಜಾಂಚಿ ಕೃಷ್ಣವೇಣಿ ಎಂ.ಜಿ, ನಿರ್ದೇಶಕರಾದ ಎನ್.ನಾಗಚಂದ್ರ, ಹೆಚ್.ವಿ.ಸುಬ್ಬಣ್ಣ, ಬಸವಣ್ಣ, ಲಕ್ಷ್ಮಿದೇವಿ, ಮುತ್ತುರಾಜ್, ಜಿ.ಕೀರ್ತಿಪ್ರಕಾಶ್ ಹಾಗೂ ಎಂ.ಹನುಮಂತಯ್ಯ ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬೆಂಗಳೂರು: ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ಗುರುವಾರ ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬೆಂಗಳೂರು ನಾಲ್ಕನೇ ವಲಯದ ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ತರಬೇತಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಎಸ್.ಗುಂಡೂರಾವ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬಿ.ಹೆಚ್.ಕೃಷ್ಣರೆಡ್ಡಿ, ಮಂಜುನಾಥ್ ಭಾಗವಹಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರು ಪ್ರಾಂತೀಯ ಅಧಿಕಾರಿ ಶ್ರೀಧರ್ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಸಹಕಾರಿಗಳ ಚುನಾವಣಾ ಪೂರ್ವ ತಯಾರಿ ಕುರಿತು ಸಹಕಾರ ಇಲಾಖೆಯ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. 58 ಸೌಹಾರ್ದ ಸಹಕಾರಿಗಳಿಂದ 77 ಜನರು…

Read More

ನಿರಂತರ ಅಭಿವೃದ್ಧಿ ಪಥದಲ್ಲಿ ಮುನ್ನಡೆ: ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿಕೆ ಉಳ್ಳಾಲ: ದ.ಕ. ಜಿಲ್ಲೆಯ ಪ್ರತಿಷ್ಠಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ 952 ಕೋಟಿ ರೂ.ಗಳ ವ್ಯವಹಾರ ನಡೆಸಿದ್ದು 1.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ವರ್ಷದಿಂದ ವರ್ಷಕ್ಕೆ ಸಂಘವು ನಿರಂತರ ನಿರಂತರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರು, ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿಗಳ ಅವಿರತ ಸೇವೆಯಿಂದಾಗಿ ಸಂಘವು ನಿರಂತರವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ‘ಎ’ ತರಗತಿಯ 6,665 ಸದಸ್ಯರನ್ನು ಹೊಂದಿದ್ದು 2.63 ಕೋಟಿ ರೂ. ಗಳ ಪಾಲು ಬಂಡವಾಳವನ್ನು ಹೊಂದಿದೆ. 444 ಕೋಟಿ ರೂ. ಠೇವಣಿ ಸಂಗ್ರಹಿಸಿ 424 ಕೋಟಿ ರೂ.…

Read More

ಮಂಗಳೂರು: ಮಂಗಳೂರಿನ ಬಿಜೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ 30ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಪೊಲೀಸ್ ಲೇನ್ ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷೀಯ ಭಾಷಣ ಮಾಡಿದ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್‌ ಅವರು, 2024-25ರಲ್ಲಿ ಠೇವಣಿ ಸಂಗ್ರಹಣೆಯಲ್ಲಿ ಶೇಖಡಾ 17 ಮತ್ತು ಸಾಲ ನೀಡುವಿಕೆಯಲ್ಲಿ ಶೇಖಡಾ 28 ಹೆಚ್ಚುವರಿ ದಾಖಲಾಗಿದ್ದು, ಒಟ್ಟು 1.20 ಕೋಟಿ ರೂ. ಷೇರು ಬಂಡವಾಳವನ್ನು ಹೊಂದಿದೆ. 129 ಕೋಟಿ ರೂಪಾಯಿಗಳ ವ್ಯವಹಾರ ಮಾಡಿದ್ದು, ರೂ. 42,81,085.96 ನಿವ್ವಳ ಲಾಭ ಗಳಿಸಿದೆ. ಲೆಕ್ಕ ಪರಿಶೋಧನೆಯಲ್ಲಿ ‘ಎ’ ಶ್ರೇಣಿಯಲ್ಲಿದೆ ಎಂದು ತಿಳಿಸಿದರು. ಕಾರ್ಯದರ್ಶಿ ಉದಯ ಆರ್ ಸಂಘದ ವಾರ್ಷಿಕ ವರದಿ, ಲೆಕ್ಕಪತ್ರಗಳು ಮತ್ತು ಅನುಪಾಲನಾ ವರದಿಯನ್ನು ಸಭೆಗೆ ಮಂಡಿಸಿದರು. ವಿಶೇಷ ಅಭಿನಂದನಾ ಕಾರ್ಯಕ್ರಮ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕೆಲಸ ನಿರ್ವಹಿಸಿದ್ದ ಹಾಗೂ ತನ್ನ ವಿಶೇಷ ಸಮಾಜಸೇವೆಯ ಮೂಲಕ ಸಾವಿರಾರು…

Read More

ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬೆಂಗಳೂರು ಇದರ ಆರನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಂಗಳೂರಿನ ರಾಜಾಜಿನಗರದ ಮಹಾಗಣಪತಿನಗರದ ಬನವಾಸಿ ಸಭಾಂಗಣದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಅಕ್ಕಿಯವರು ಮಾತನಾಡಿ ಸಹಕಾರಿಯು ಒಟ್ಟು 1733 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ರೂ.24,83,260.11  ನಿವ್ವಳ ಲಾಭ ದಾಖಲಿಸಿದೆ. ಪ್ರಸಕ್ತ ಸಾಲಿನಲ್ಲಿ 14% ಡಿವಿಡೆಂಡ್ ಹಂಚಿಕೆ ಮಾಡಲಾಗುತ್ತಿದೆ. ಬನವಾಸಿ ಸೌಹಾರ್ದ ಸಹಕಾರಿ ಸಂಘವು 2020ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಬನವಾಸಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಮಂಜುನಾಥ.ಎನ್, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಬಾಬು ಎಸ್ ಕುಂಬಾರ್, ಅನಿಲ್ ಕುಮಾರ್ ಬಿ.ಉಲ್ಲಾಳ, ಡಿ.ಎಂ.ಭತ್ತದ್, ಭೀಮಪ್ಪ, ಮೇಘ ವರುಣ್, ರೂಪಶ್ರೀ, ತುಳಸಿರಾಮ್ ಮೌರ್ಯ, ಶೋಭರಾಣಿ ಎಂ, ಜಮುನ ಕುಲಕರ್ಣಿ, ದ್ಯಾಮಪ್ಪ ಎಚ್.ಎಂ ಮತ್ತು ಆಡಳಿತಾಧಿಕಾರಿಗಳಾದ ಶಂಬಯ್ಯ.ಕೆ.ಎಲ್ ಹಾಗೂ ಸಹಕಾರಿಯ ಸಿಬ್ಬಂದಿ ವರ್ಗದವರು, ಸದಸ್ಯರುಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ…

Read More

ಬ್ಯಾಂಕಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಇಲ್ಲಿನ ಕಾರ್‌ಸ್ಟ್ರೀಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಬ್ಯಾಂಕಿನ ಉಪವಿಧಿಗಳಿಗೆ, ನೇಮಕಾತಿ ನಿಯಮಗಳಿಗೆ, ನೌಕರರ ಸೇವಾ ನಿಬಂಧನೆಗಳಿಗೆ ಹಾಗೂ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ನಿಯಮಗಳು 1960ರ ಉಪಬಂಧಗಳಿಗೆ ಒಳಪಟ್ಟಿರುತ್ತದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶಾಖಾ ವ್ಯವಸ್ಥಾಪಕರು( 2 ಹುದ್ದೆ), ಸಹಾಯಕ ಶಾಖಾ ವ್ಯವಸ್ಥಾಪಕರು (1 ಹುದ್ದೆ), ಸಾರ್ವಜನಿಕ ಸಂಪರ್ಕಾಧಿಕಾರಿ (1 ಹುದ್ದೆ), ಕಿರಿಯ ಸಹಾಯಕರು (16 ಹುದ್ದೆಗಳು) ಮತ್ತು ಅಟೆಂಡರ್ (3 ಹುದ್ದೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಖಾ ವ್ಯವಸ್ಥಾಪಕ ಹುದ್ದೆಗೆ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಎಂಎ ಅರ್ಥಶಾಸ್ತ್ರ, ಎಂಕಾಂ ಅಥವಾ ಎಂ.ಬಿ.ಎ. ಸ್ನಾತಕೋತ್ತರ ಪದವಿ ಪಡೆದಿರಬೇಕು. ಬ್ಯಾಂಕಿಂಗ್ ಯಾ ಹಣಕಾಸು ವಿಷಯದಲ್ಲಿ ಯಾವುದೇ ಡಿಪ್ಲೊಮಾ ಪದವಿ, ಬ್ಯಾಂಕಿಂಗ್ ಯಾ ಹಣಕಾಸು ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಇರಬೇಕು. ಸಹಾಯಕ ಶಾಖಾ ವ್ಯವಸ್ಥಾಪಕ ಹುದ್ದೆಗೆ…

Read More

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ವಾರ್ಷಿಕ ಮಹಾಸಭೆಯು ಸೆ.19ರ ಶುಕ್ರವಾರ ಬೆಳಗ್ಗೆ 10.30ಕ್ಕೆ ಗಂಟೆಗೆ ಉದಯ ಸಹಕಾರ ಭವನ ಹನುಮಂತನಗರ ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಎಲ್ಲರೂ ಪಾಲ್ಗೊಳ್ಳುವಂತೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ವೈ.ಕುಮಾರ್‌, ಉಪಾಧ್ಯಕ್ಷರಾಗಿ ಎಸ್‌.ಎನ್‌ ಶಂಕರಮೂರ್ತಿ, ನಿರ್ದೇಶಕರಾಗಿ ಎನ್‌.ಚಂದ್ರಶೇಖರ್‌, ಬಿ.ಎನ್‌ ನಾಗಮಣಿ, ಟಿ.ಹೆಚ್‌ ಕರಿಯಪ್ಪ, ಹೆಚ್‌.ಕೆ ಶ್ರೀನಿವಾಸ್‌, ಎ.ಚಿಕ್ಕಯ್ಯ, ಎ.ಎಸ್‌ ಜಯಕುಮಾರ್‌, ಎಚ್‌.ವಿ ಕುಮಾರ್‌ ಮೂರ್ತಿ, ಇ.ಎಸ್‌ ನಟರಾಜ್‌, ಎಂ.ವಿ ರಂಗನಾಥ್‌, ಎಸ್‌.ಲಿಂಗೇಶ್‌ ಕುಮಾರ್‌, ಜಿ.ಕೃಷ್ಣಾ ರೆಡ್ಡಿ(ವೃತ್ತಿಪರ ನಿರ್ದೇಶಕರು) ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಎಂ.ಎಚ್‌ ಕವಿತಾ ಅವರಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬೆಂಗಳೂರು: ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತ ಬೆಂಗಳೂರು ಇದರ 9ನೇ ವಾರ್ಷಿಕ ಮಹಾಸಭೆ ಭಾನುವಾರ ದ್ವಾರಕಾ ನಗರ ಸಮುದಾಯ ಭವನ ಚಿಕ್ಕಬಾಣಾವರದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಲೋಕೇಶ್ ಎಸ್ ಎಸ್ ಮಾತನಾಡಿ ಸಹಕಾರಿಯು ಒಟ್ಟು 919 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 14.61 ಲಕ್ಷ ರೂ. ನಿವ್ವಳ ಲಾಭ ದಾಖಲಿಸಿದೆ ಎಂದು ಮಾಹಿತಿ ನೀಡಿದರು. ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿಯು 2017ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಯೋಗಾನಂದ ಮೂರ್ತಿ ಎನ್ ವಿ, ಕೈಲಾಸ್ ಮೂರ್ತಿ ಜಿಎಸ್, ಶಿವಗಂಗಾಧರ್ ಯು, ಲಕ್ಷ್ಮೀಪತಿ ಕೆ, ಶೋಭಾ, ಪುಷ್ಪಲತಾ ಎಚ್ಎಂ, ಗಾಯತ್ರಿ ಮತ್ತು ಗೀತಾ ಮತ್ತಿತರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ಕೊಲ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕೊಲ್ಯ ಇದರ ಎಂಟನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ವಾರ್ಷಿಕ ಸಾಮಾನ್ಯ ಸಭೆಯನ್ನು ಸಹಕಾರಿಯ ಅಧ್ಯಕ್ಷರಾದ  ರಮೇಶ್ ಕೆ ಮತ್ತು ಉಪಾಧ್ಯಕ್ಷರಾದ ಭರತ್ ಪಿ ಉದ್ಘಾಟಿಸಿದರು. ಸಹಕಾರಿಯು ಕಳೆದ 2024-25ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಒಟ್ಟು 1.32 ಕೋಟಿ ರೂ. ಠೇವಣಿ ಹೊಂದಿದ್ದು ಸದಸ್ಯರಿಗೆ ಒಟ್ಟು 1 ಕೋಟಿಗಿಂತಲೂ ಹೆಚ್ಚು ವಿವಿಧ ರೀತಿಯ ಸಾಲ ನೀಡಲಾಗಿದೆ. ಈ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿಯ ನಿರ್ದೇಶಕರಾದ  ಶಶಿಧರ  ಶೆಟ್ಟಿ ಕೆರಮ, ಡಾ.ಶ್ರೀನಿವಾಸ  ಮೂಲ್ಯ, ವಿಶಾಲ್, ಪ್ರಕಾಶ್ ಎಚ್, ಲಿಂಗಪ್ಪ ಪೂಜಾರಿ, ನಿರ್ಮಲ, ಸೌಮ್ಯ, ಅನಿಲ್ ಕುಮಾರ್, ರಂಜಿತ್ ಕುಮಾರ್, ತುಳಸಿ, ಸಹಕಾರಿಯ ಕಾನೂನು ಸಲಹೆಗಾರರು, ಸಹಕಾರಿಯ ಸಿಬ್ಬಂದಿ ರಮಿತಾ ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು. ಈ  ಸಭೆಯ ಸಹಕಾರಿಯ ವಾರ್ಷಿಕ ವರದಿಯನ್ನು ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರಾದ ಅಕ್ಷಯ ಮಂಡಿಸಿದರು. ನಿರ್ದೇಶಕರಾದ ಶಶಿಧರ ಶೆಟ್ಟಿಯವರು ಸರಕಾರದಿಂದ…

Read More