Author: admin

ವಾರ್ಷಿಕ ಮಹಾಸಭೆಯಲ್ಲಿ ರಾಜ್ಯಮಟ್ಟದ ಸದಸ್ಯ ಶಿಕ್ಷಕರು, ಜಿಲ್ಲಾಮಟ್ಟದ 12 ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಸಂಘದ ಸದಸ್ಯ ಶಿಕ್ಷಕರಿಗೆ ಸನ್ಮಾನ ವಿಟ್ಲ: ಅಧ್ಯಾಪಕರ ಸಹಕಾರಿ ಸಂಘ (ನಿ) ವಿಟ್ಲ ಇದರ ವಾರ್ಷಿಕ ಮಹಾಸಭೆ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ನಾಯಕ್ ಕೆ. ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ ಸುವರ್ಣ ರಂಗಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ರಮೇಶ್ ನಾಯಕ್ ಕೆ ಸ್ವಾಗತಿಸಿ, ಅಧ್ಯಕ್ಷ ಭಾಷಣ ಮಾಡಿದರು. ಸಂಘವು ವರದಿ ಸಾಲಿನಲ್ಲಿ 661 ಕೋಟಿ ರೂ. ವ್ಯವಹಾರ ನಡೆಸಿದ್ದು, 2.09 ಕೋಟಿ ರೂ. ಲಾಭ ಗಳಿಸಿದೆ. 5.57 ಕೋಟಿ ರೂಪಾಯಿ ಪಾಲು ಬಂಡವಾಳ ಹೊಂದಿದೆ. ವರ್ಷಾಂತ್ಯಕ್ಕೆ 4,906 “ಎ” ತರಗತಿ ಸದಸ್ಯರಿದ್ದು, 209 ಕೋಟಿ ರೂ. ಠೇವಣಿ ಹೊಂದಿರುತ್ತದೆ. 192.39 ಕೋಟಿ ಹೊರಬಾಕಿ ಸಾಲ ಇದ್ದು, ಲೆಕ್ಕಪರಿಶೋಧನೆಯಲ್ಲಿ ಸಂಘವು “ಎ” ಶ್ರೇಣಿಯನ್ನು ಪಡೆದುಕೊಂಡಿದೆ. ಸಂಘವು ಪ್ರಗತಿಪಥದಲ್ಲಿ ಮುನ್ನಡೆಯಲು ಸದಸ್ಯರ ಮತ್ತು ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ದ.ಕ.ಜಿಲ್ಲಾ…

Read More

ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಶ್ಲಾಘನೆ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ-ಧನಸಹಾಯ ವಿತರಣೆ ಪುತ್ತೂರು: ಆರ್ಥಿಕವಾಗಿ ಹಿಂದುಳಿದ ಸರಕಾರಿ ಪ್ರಾಥಮಿಕ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ವರ್ಷಂಪ್ರತಿಯಂತೆ ಸಂಘದ ‘ಧರ್ಮಾರ್ಥ’ ಮತ್ತು ‘ವಿದ್ಯಾಸಂಸ್ಥೆʼ ನಿಧಿಯಿಂದ ಧನಸಹಾಯ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲೊಟ್ಟು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸವಣೂರು ಸೀತಾರಾಮ ರೈಯವರು ತಮ್ಮ ಬಾಲ್ಯ ಜೀವನದಲ್ಲಿ ತುಂಬಾ ಕಷ್ಟಪಟ್ಟು ಓದಿ, ಇಂದು ಉನ್ನತವಾದ ಸ್ಥಾನದಲ್ಲಿದ್ದಾರೆ. ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಿಗಲೆಂಬ ನಿಟ್ಟಿನಲ್ಲಿ ಅವರು ತಮ್ಮ ಆದರ್ಶ ಸಹಕಾರ ಸಂಸ್ಥೆಯ ಮೂಲಕ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭ ಮಾಡಿರುವುದು…

Read More

ಮಂಗಳೂರು: ಬೋಳಾರ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ 14ನೇ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಶ್ರೀ ಮಂಗಳಾದೇವಿ ದೇವಸ್ಥಾನದ ಬಳಿ ಇರುವ ಶ್ರೀದೇವಿ ನಿಲಯದಲ್ಲಿ ಸಹಕಾರಿಯ ಅಧ್ಯಕ್ಷರಾದ ನವೀನ್ ಶೆಟ್ಟಿ ಕುತ್ತಾರುಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಉಪಾಧ್ಯಕ್ಷರಾದ ಬಿ.ರಮಾನಂದ ಪೂಜಾರಿ, ಸ್ವಾಗತಿಸಿ ಅಧ್ಯಕ್ಷರ ಭಾಷಣ ನೆರವೇರಿಸಿದರು. ನಿರ್ದೇಶಕರಾದ ವರುಣ್ ರಾಜ್ ಅಂಬಟ್ ವಾರ್ಷಿಕ ವರದಿ ಮಂಡಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮನಾಥ ಬಿ ಇವರು 2024-25ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕರಾದ ಕೃಷ್ಣಮೂರ್ತಿ ಐತಾಳ್ 2025-26ನೇ ಸಾಲಿನ ಮುಂಗಡ ಬಜೆಟ್ ಮಂಡಿಸಿದರು. ಸೊಸೈಟಿಯು ವರದಿ ಸಾಲಿನಲ್ಲಿ 38 ಕೋಟಿ ರೂ. ವ್ಯವಹಾರ ಮಾಡಿದ್ದು, 13,55,645.43 ಲಾಭಾಂಶ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್‌ ಘೋಷಿಸಲಾಯಿತು. ಸಹಕಾರಿಯ ನಿರ್ದೇಶಕರಾದ ಸುಜಿತ್ ಕುಮಾರ್, ರೊನಾಲ್ಡ್ ಡಿಸೋಜ, ಉದಯ್ ಕುಮಾರ್, ರಾಜೇಂದ್ರ ವಿಠ್ಠಲ್, ಮಮತಾ ಮನೋಜ್ ಕುಮಾರ್ ಮತ್ತು ಉಷಾ ಎಸ್ ರಾವ್ ಹಾಗೂ ಹಿರಿಯ ಸದಸ್ಯರಾದ ಬಿ.ವಿಠ್ಠಲ್ ಪೂಜಾರಿ, ಶ್ರೀ ಮೋನಪ್ಪ ಅಂಚನ್ ಮತ್ತು ಬಿ.ಪ್ರೇಮ್…

Read More

ಸರಾಸರಿ ಹಾಲು ಉತ್ಪಾದನೆ 50 ಸಾವಿರ ಲೀಟರ್‌ನಷ್ಟು ಏರಿಕೆ: ಅಧ್ಯಕ್ಷ ಕೆ.ರವಿರಾಜ ಹೆಗ್ಡೆ ಮಾಹಿತಿ ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ 1,174 ಕೋಟಿ ರೂ. ವಹಿವಾಟು ನಡೆಸಿದ್ದು 12.79 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ ಸೋಮವಾರ ಒಕ್ಕೂಟದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಸ್ತುತ 751 ಹಾಲು ಸಂಘಗಳ ಮೂಲಕ ಪ್ರತಿದಿನ 3.97 ಲಕ್ಷ ಲೀಟರ್ ಹಾಲು ಶೇಖರಣೆ ಮಾಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಇದು 3.42 ಲಕ್ಷ ಲೀಟರ್ ಆಗಿತ್ತು. ಶೇ.16ರಷ್ಟು ಏರಿಕೆಯಾಗಿರುವುದು ಉತ್ತಮ ಬೆಳವಣಿಗೆ ಬೇಡಿಕೆ ಪ್ರಮಾಣವು 5.5 ಲಕ್ಷ ಲೀಟರ್ ಆಗಿದ್ದು, ಉಳಿಕೆ ಹಾಲನ್ನು ಹಾಸನ ಡೇರಿಯಿಂದ ಪೂರೈಸಲಾಗುತ್ತಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ತಿಂಗಳಿಗೆ ಸರಾಸರಿ 4,000 ಟನ್ ರಸಮೇವು ವಿತರಿಸುವ ಕೆಲಸ ನಡೆದಿದ್ದು, ಹಾಸನ, ಧಾರವಾಡ, ಮೈಸೂರಿನಿಂದ ಅದನ್ನು ತರಿಸಲಾಗುತ್ತಿದೆ. ಇದು ಹಾಲಿನ ಉತ್ಪಾದಕತೆ ಹೆಚ್ಚುವುದಕ್ಕೆ ಕಾರಣವಾಗಿದೆ.…

Read More

ರಾಯಚೂರು: ಶ್ರೀ ವಿಜಯ ವಿಕಾಸ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ರಾಯಚೂರು ಇದರ 2024-25ನೇ ಸಾಲಿನ ಸರ್ವ ಸದಸ್ಯರ 4ನೇ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ರಾಯಚೂರಿನ ಕೊಠಾರಿ ಫಂಕ್ಷನ್ ಹಾಲ್ ನಲ್ಲಿ ರವಿಕುಮಾರ್ ಎಂ. ಇವರ ಅಧ್ಯಕ್ಷತೆಯಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿ ಪಿತಾಮಹ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು.  ಸಹಕಾರಿಯ ನಿರ್ದೇಶಕರಾದ ಶಿವಶಂಕರ್ ಬಿ. ಶೀಲವಂತರ್ ಪ್ರಾಸ್ತಾವಿಕ ಮಾತನಾಡಿ ಸಹಕಾರಿಯ ಧ್ಯೇಯ ಉದ್ದೇಶಗಳ ಅಡಿಯಲ್ಲಿ ಸದಸ್ಯರಿಗೆ ಸಹಕಾರಿಯಲ್ಲಿನ ವಿವಿಧ ಠೇವಣಿ ಮತ್ತು ಪತ್ತಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸದಸ್ಯರ ಏಳಿಗೆಯನ್ನು ಮುಖ್ಯ ಉದ್ದೇಶವಾಗಿಸಿಕೊಂಡು ಸಹಕಾರಿಯು ಗುಣಮಟ್ಟದ ವ್ಯವಹಾರ ನಡೆಸಿಕೊಂಡು ಬರುತ್ತಿರುವುದರಿಂದ ಮತ್ತು ಸಹಕಾರಿಯಲ್ಲಿನ ಸೇವೆಗಳನ್ನು  ಸದಸ್ಯರು ಉತ್ತಮ ರೀತಿಯಲ್ಲಿ ಬಳಸಿಕೊಂಡ ಕಾರಣ  ಸಹಕಾರಿಯು ಕಡಿಮೆ ಸಮಯದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು. ಮುಖ್ಯ ಕಾರ್ಯನಿರ್ವಾಹಕರಾದ ಗಿರಿಯಪ್ಪ ಹವಾಲ್ದಾರ್, 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಸಾಮಾನ್ಯ ಸಭೆಯ…

Read More

ನವದೆಹಲಿ: ಆಂಧ್ರಪ್ರದೇಶದ ಹಿರಿಯ ಸಹಕಾರಿ ವಲ್ಲಭನೇನಿ ಸುಧಾಕರ್ ಚೌಧರಿ ಕ್ರಿಭ್ಕೋ (ಕೃಷಕ್‌ ಭಾರತಿ ಸಹಕಾರಿ ಲಿ. KRIBHCO)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅನುಭವಿ ಸಹಕಾರಿ ನಾಯಕ ಚಂದ್ರಪಾಲ್ ಸಿಂಗ್ ಯಾದವ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್‌ನ ಪದಾಧಿಕಾರಿಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಗಳು ಸೋಮವಾರ ಮುಕ್ತಾಯಗೊಂಡಿದ್ದು ಫಲಿತಾಂಶ ಘೋಷಣೆಯಾಗಿದೆ. ಎರಡೂ ಉನ್ನತ ಹುದ್ದೆಗಳಿಗೆ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾದ ಕಾರಣ ಸುಧಾಕರ್ ಚೌಧರಿ ಹಾಗೂ ಚಂದ್ರಪಾಲ್ ಸಿಂಗ್ ಯಾದವ್ ಅವಿರೋಧವಾಗಿ ಆಯ್ಕೆಯಾದರು. ಸುಗಮ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಇಬ್ಬರು ಸಚಿವರು ಎನ್‌ಸಿಯುಐ ಪ್ರಧಾನ ಕಚೇರಿಗೆ ಭೇಟಿ ನೀಡಿ ವೀಕ್ಷಕರಾಗಿ ಭಾಗವಹಿಸಿದ್ದರು. ಉತ್ತಮವಾಗಿ ಕಾರ್ಯನಿರ್ವಹಿಸುವ ಸಹಕಾರಿ ಸಂಸ್ಥೆಗಳಲ್ಲಿ ಅಧಿಕಾರದ ಸುಗಮ ವರ್ಗಾವಣೆ ಸರ್ಕಾರದ ಗುರಿಯಾಗಿರುತ್ತದೆ ಎಂದು ಉನ್ನತ ಸಹಕಾರಿ ನಾಯಕರೊಬ್ಬರು ಹೇಳಿದ್ದು, ಕ್ರಿಭ್ಕೋ ನಾಯಕತ್ವ ಬದಲಾವಣೆ ಇದಕ್ಕೆ ಉದಾಹರಣೆಯಾಗಿದೆ ಎಂದು ಅವರು ತಿಳಿಸಿದರು. ಕ್ರಿಭ್ಕೋದ ಚುನಾಯಿತ ಮಂಡಳಿಯ ಸದಸ್ಯರು ಮತ್ತು ಇಬ್ಬರು ಸಚಿವರ…

Read More

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಂಪೂರ್ಣ ಡಿಜಿಟಲೀಕರಣ: ಮಹಾಸಭೆಯಲ್ಲಿ ಹಲವು ಹೊಸ ಯೋಜನೆಗಳ ಉದ್ಘಾಟನೆ ಹಿರಿಯ ಸದಸ್ಯರಿಗೆ ಸನ್ಮಾನ; ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ವಿತರಣೆ ಪುತ್ತೂರು: ಶತಮಾನದ ಇತಿಹಾಸ ಹೊಂದಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಇದರ ಪ್ರಮುಖ ನಾಲ್ಕು ಯೋಜನೆಗಳನ್ನು ಭಾನುವಾರ ನಡೆದ 116ನೇ ಮಹಾಸಭೆಯಲ್ಲಿ ಉದ್ಘಾಟಿಸಲಾಯಿತು. ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷರಾದ ಕಿಶೋರ್ ಕೊಳತ್ತಾಯ ಎನ್ ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024-25ನೇ ಸಾಲಿನಲ್ಲಿ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಇತಿಹಾಸದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು ಠೇವಣಿ ರೂ. 74.87 ಕೋಟಿ, ಒಟ್ಟು ಸಾಲ ರೂ. 51.39 ಕೋಟಿಗಳಾಗಿದ್ದು, ಒಟ್ಟು ವ್ಯವಹಾರ ರೂ. 126.26 ಕೋಟಿ ದಾಟಿದೆ. ಈ ವರ್ಷದ ನಿವ್ವಳ ಲಾಭ ರೂ. 1.04 ಕೋಟಿ…

Read More

30 ಲಕ್ಷ ರೂ.ಗೂ ಅಧಿಕ ಲಾಭ; ಅಧ್ಯಕ್ಷ ಗಣೇಶ್‌ ಶೆಣೈ ಮಾಹಿತಿ ಮಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಉದಾತ್ತ ಧ್ಯೇಯದೊಂದಿಗೆ ಸ್ಥಾಪನೆಯಾದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು, 300 ಕೋಟಿ ರೂ. ಅಧಿಕ ವ್ಯವಹಾರ ದಾಖಲಿಸುವ ಮುಖೇನ ಅಪೂರ್ವ ಸಾಧನೆ ಮಾಡಿದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ 30 ಲಕ್ಷ ರೂ.ಗೂ ಮೀರಿ ಲಾಭ ಗಳಿಸಿದ್ದು, ಸದಸ್ಯರಿಗೆ ಈ ಬಾರಿ ಶೇ.11 ಡಿವಿಡೆಂಡ್ ನೀಡಲಿದೆ ಎಂದು ಶ್ರೀ ಪೂರ್ಣಾನಂದ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ್ ಶೆಣೈ ಘೋಷಿಸಿದರು. https://chat.whatsapp.com/EbVKVnWB6rlHT1mWtsgbch ಭಾನುವಾರ ನಡೆದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಣೇಶ್‌ ಶೆಣೈ ಅವರು, ನಮ್ಮ ಸಂಸ್ಥೆಯು 70 ಲಕ್ಷ ರೂ. ಶೇರು ಬಂಡವಾಳ, 35 ಕೋಟಿ ರೂ. ಠೇವಣಿಗಳು ಇದ್ದು, 28 ಕೋಟಿ ರೂ. ಸಾಲ ನೀಡಲಾಗಿದೆ. ಏಳು ಕೋಟಿ ರೂ. ವಿನಿಯೋಗಗಳು, 37 ಕೋಟಿ ರೂ. ದುಡಿಯುವ…

Read More

ಹಾಸನ: ಇಲ್ಲಿನ ಬಳೆಗಾರರ ಬೀವಿ(ದೊಣ್ಣೂರು ಬಾಗಿಲು ಚೌಕ, ಹೊಸಲೈನ್ ರಸ್ತೆ) ಶ್ರೀ ವಿಘ್ನೇಶ್ವರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಭಾನುವಾರ ಹಾಸನ ನಗರದ ಸುಲಗ್ನಾ ಕಲ್ಯಾಣ ಮಂಟಪದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಕೆ.ಟಿ.ಕುಮಾರಪ್ಪ ಅವರು ಮಾತನಾಡಿ, ಸಂಘವು ಒಟ್ಟು 4282 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 34.84 ಲಕ್ಷ ರೂ. ನಿವ್ವಳ ಲಾಭ ಪಡೆದಿದೆ ಎಂದು ಮಾಹಿತಿ ನೀಡಿದರು. ಶ್ರೀ ವಿಘ್ನೇಶ್ವರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2003ರ ಅಕ್ಟೋಬರ್ 1ರಂದು ಒಟ್ಟು 156 ಜನ ಸದಸ್ಯರಿಂದ ರೂ.1,56,000 ಪಾಲು ಬಂಡವಾಳದೊಂದಿಗೆ ಆರಂಭವಾಗಿ ಇಂದಿಗೆ 22 ವರ್ಷ ಪೂರ್ಣಗೊಳಿಸಿ 25ನೇ ಸಂವತ್ಸರದಲ್ಲಿ ಪಾರದರ್ಶಕ ಆಡಳಿತ ನಡೆಸುತ್ತಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು, ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಹಕಾರ ಸಂಘಗಳ ಜಂಟಿ ನಿರ್ದೇಶಕರುಗಳಿಂದ ನೀಡಲ್ಪಡುವ ಎಲ್ಲಾ ರೀತಿಯ ಆದೇಶ, ಸಲಹೆ, ಸೂಚನೆಗಳನ್ನು ಅಳವಡಿಸಿಕೊಂಡು ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. 2025ರ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಮಂಗಳೂರು ಇದರ 2024-25ನೇ ಸಾಲಿನ 31ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷೆ ಭಾರತಿ ಜಿ.ಭಟ್ ಇವರ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿತು. https://chat.whatsapp.com/EbVKVnWB6rlHT1mWtsgbch ವರ್ಷಾಂತ್ಯಕ್ಕೆ ಬ್ಯಾಂಕ್ ಒಟ್ಟು 178.08 ಲಕ್ಷ ಪಾಲು ಬಂಡವಾಳ, 297.87 ಲಕ್ಷ ಕ್ಷೇಮನಿಧಿ ಹಾಗೂ ಇತರ ನಿಧಿಗಳನ್ನು ಹೊಂದಿದೆ. ಬ್ಯಾಂಕ್ ಒಟ್ಟು 3319.67 ಲಕ್ಷ ಠೇವಣಿಯನ್ನು ಹೊಂದಿದ್ದು, ಸದಸ್ಯರಿಗೆ ವಿವಿಧ ಉದ್ದೇಶಗಳಿಗೆ ರೂ. 2117.54 ಲಕ್ಷ ಸಾಲ ನೀಡಲಾಗಿದೆ. ವರದಿ ವರ್ಷದಲ್ಲಿ ಆದಾಯ ತೆರಿಗೆ ರೂ. 4.71 ಲಕ್ಷ ಕಾಯ್ದಿರಿಸಿ ರೂ. 14.04 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಶೇ.6 ಡಿವಿಡೆಂಡ್ ಘೋಷಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಭಾರತಿ ಜಿ.ಭಟ್ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಪ್ರತಿಭಾ ಶೆಟ್ಟಿ ಉಪನಿಬಂಧನೆ ತಿದ್ದುಪಡಿ, ಲಾಭ ವಿಂಗಡನೆ, ಲೆಕ್ಕ ಪರಿಶೋಧಿತ ಆರ್ಥಿಕ ತಖ್ತೆ ಹಾಗೂ ಬಜೆಟ್‌ ಮಂಡಿಸಿದರು. ಗೌರವ ಡಾಕ್ಟರೇಟ್ ಪಡೆದ ಡಾ| ದಿವ್ಯಾರಾಣಿ ಪ್ರದೀಪ್…

Read More