Author: admin

ಸಂಪೂರ್ಣ ಡಿಜಿಟಲೀಕರಣ ಸೇರಿದಂತೆ ಹಲವು ಹೊಸತನ: ಅಧ್ಯಕ್ಷ ಕಿಶೋರ್ ಕುಮಾರ್ ಕೊಳತ್ತಾಯ ಮಾಹಿತಿ ಪುತ್ತೂರು: ಶತಮಾನ ಕಂಡಿರುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣವಾಗಿ ಡಿಜಿಟಲೀಕರಣಗೊಳ್ಳುತ್ತಿದ್ದು ಇದರ ಪ್ರಮುಖ ಯೋಜನೆಗಳಿಗೆ ಸೆ.14ರಂದು ನಡೆಯುವ 116ನೇ ವಾರ್ಷಿಕ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕೊಳತ್ತಾಯ ಎನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. https://chat.whatsapp.com/EbVKVnWB6rlHT1mWtsgbch 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು ಠೇವಣಿ ರೂ.74.87 ಕೋಟಿ, ಒಟ್ಟು ಸಾಲ ರೂ.51.39 ಕೋಟಿಗಳಾಗಿದ್ದು, ಒಟ್ಟು ವ್ಯವಹಾರ ರೂ.126.26 ಕೋಟಿ ದಾಟಿದೆ. ಈ ವರ್ಷದ ನಿವ್ವಳ ಲಾಭ ರೂ.1.04 ಕೋಟಿ ಆಗಿದೆ. ಹಲವು ಯೋಜನೆಗಳಿಗೆ ಭಾನುವಾರದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು. ಈ ಆರ್ಥಿಕ ವರ್ಷಾಂತ್ಯದೊಳಗೆ ಬ್ಯಾಂಕನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ನಮ್ಮ ಪ್ರಯತ್ನ ಸಾಗಲಿದೆ ಎಂದು ಮಾಹಿತಿ…

Read More

ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಘೋಷಣೆ ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ ವಾರ್ಷಿಕ 233.13 ಕೋಟಿ ರೂ. ವ್ಯವಹಾರ ನಡೆಸಿದ್ದು, 1.20 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ. ಮಳೆ ವಿಪರೀತವಾದ್ದರಿಂದ ಬೆಳೆಗಳಿಗೆ ಕೊಳೆ ರೋಗ ಬಂದು ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಬಂದಿದೆ. ಸರಕಾರ ಈ ಬಾರಿ ಬೆಳೆ ವಿಮೆ ಮೊತ್ತವನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು. ಸಂಘದಲ್ಲಿ 36 ಕೋಟಿ ರೂ. ಅಧಿಕ ಠೇವಣಿಯಿದ್ದು, 42 ಕೋಟಿ ರೂ. ಹೊರಬಾಕಿ ಸಾಲದಲ್ಲಿ ಶೇ.99ರಷ್ಟು ವಸೂಲಾತಿ ಮಾಡಿ ಆಡಿಟ್ ವರ್ಗಿಕರಣದಲ್ಲಿ ಎ ತರಗತಿ ಪಡೆದಿದೆ. ಈ ಸಾಧನೆಗೆ ಎಸ್‌ಸಿಡಿಸಿಸಿ…

Read More

ಕಾರ್ಕಳ: ಬೆಳ್ಮಣ್‌ನ ಕುಂಭನಿಧಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಮೊದಲನೇ ಮಹಾಸಭೆ ಇತ್ತೀಚೆಗೆ ಮುಲ್ಲಡ್ಕ ನಾನಿಲ್ತಾರಿನ ಕುಲಾಲ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷ ಕುಶ ಆರ್‌.ಮೂಲ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಬ್ರಿಜೇಶ್‌ ಕುಲಾಲ್‌ ವಾರ್ಷಿಕ ವರದಿ ಮಂಡಿಸಿದರು. ಮುಂದಿನ ಸಾಲಿನ ಅಂದಾಜು ಆಯವ್ಯಯ ಮಂಡಿಸಿ ಮಂಜೂರಾತಿ ಪಡೆಯಲಾಯಿತು. ಲೆಕ್ಕಪರಿಶೋಧಕರ ನೇಮಕಾತಿ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಸಂಘದ ಉಪಾಧ್ಯಕ್ಷ ಜಗನ್ನಾಥ ಮೂಲ್ಯ, ನಿರ್ದೇಶಕರಾದ ಜಯರಾಮ್‌ ಕುಲಾಲ್‌, ಬೊಗ್ಗು ಮೂಲ್ಯ ಬೇಲಾಡಿ, ಶಂಕರ್‌ ಮೂಲ್ಯ ಇನ್ನಾ, ಗೋಪಾಲ ಮೂಲ್ಯ, ಗಣೇಶ್‌ ಮೂಲ್ಯ, ರಾಜೇಶ್‌ ಕುಲಾಲ್‌, ದೀಪಕ್‌ ಕುಲಾಲ್‌, ಸುರೇಶ್‌ ಮೂಲ್ಯ, ನಂದಳಿಕೆ ಸುಗಂಧಿ ಮೂಲ್ಯ ಉಪಸ್ಥಿತರಿದ್ದರು. ನಿರ್ದೇಶಕ ರಮಾನಂದ ಮೂಲ್ಯ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬ್ರಿಜೇಶ್‌ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಪ್ರತಿಮಾ ಶ್ರೀಧರ್‌ ವಂದಿಸಿದರು. ಸುಶ್ಮಿತಾ ಹಾಗೂ ಆಶಾ ವರದರಾಜ್‌ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು 882.39 ಕೋಟಿ ರೂ. ವ್ಯವಹಾರ ನಡೆಸಿದ್ದು 3.29 ಕೋಟಿ ರೂ. ಲಾಭ ಗಳಿಸಿದೆ. ಈ ಪೈಕಿ ಸದಸ್ಯರಿಗೆ ಶೇ.16 ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಕಡಬದ ಅನುಗ್ರಹ ಸಭಾಭವನದಲ್ಲಿ ಇತ್ತೀಚೆಗೆ ಜರಗಿದ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ಸುಸಜ್ಜಿತ ರೈತಭವನ ನಿರ್ಮಿಸಿದರೆ ಅನುಕೂಲ ಎನ್ನುವ ಸದಸ್ಯ ನಾರಾಯಣ ಪೂಜಾರಿ ಪಾಲಪ್ಪೆ ಅವರ ಸಲಹೆಗೆ ಪ್ರತಿಕ್ರಿಯಿಸಿದ ರಮೇಶ್‌ ಕಲ್ಪುರೆ, ಆ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖರಾಗಿದ್ದೇವೆ. ಸಂಘದ ಹೆಸರಿನಲ್ಲಿ ಜಮೀನು ಖರೀದಿಸಿ ಅಲ್ಲಿ ಸುಸಜ್ಜಿತ ರೈತ ಭವನ ನಿರ್ಮಿಸುವ ಉದ್ದೇಶವಿದೆ ಎಂದು ಹೇಳಿದರು. ಸರಕಾರದ ಆದೇಶದಂತೆ ರಾಜ್ಯದ ಎಲ್ಲೆಡೆ ರೈತರಿಗೆ ಶೂನ್ಯ ಬಡ್ಡಿದರದ ಸಾಲವನ್ನು 5 ಲಕ್ಷ ರೂ. ತನಕ ಏರಿಸಿದ್ದರೂ ನಮ್ಮ ಜಿಲ್ಲೆಯ ರೈತರಿಗೆ ಅದರ ಪ್ರಯೋಜನ ದೊರೆಯುತ್ತಿಲ್ಲ ಎಂದು ಸದಸ್ಯ ಗಣೇಶ್ ಕೈಕುರೆ ಹೇಳಿದರು. ಸಯ್ಯದ್‌…

Read More

ಮಂಗಳೂರು: ಜೆಪ್ಪು ವೆಲೆನ್ಸಿಯಾದ ಸೈಂಟ್‌ ಜೋಸೆಫ್‌ ಶ್ಯಾಲಮ್‌ ಶಾಪಿಂಗ್‌ ಕಾಂಪ್ಲೆಕ್ಸ್‌ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆಯು ಸೆ.14ರಂದು ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 11ಕ್ಕೆ ಕಂಕನಾಡಿಯ ಸೈಂಟ್‌ ಅಲ್ಫೋನ್ಸಾ ಚರ್ಚ್‌ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಮನೋಜ್‌ ಪಿ.ವಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ವಿನಯಕುಮಾರ್ ಸೂರಿಂಜೆ ಅವರಿಗೆ ಗೌರವಾರ್ಪಣೆ ಸುರತ್ಕಲ್‌: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘವು 2.58 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸಂಘವು ಸತತವಾಗಿ ‘ಎ’ ಆಡಿಟ್ ವರ್ಗೀಕರಣ ಹೊಂದಿದ್ದು, ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗುವುದು ಎಂದು ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್‌ ಹೇಳಿದರು. https://chat.whatsapp.com/EbVKVnWB6rlHT1mWtsgbch ಸುರತ್ಕಲ್ ಬಂಟರ ಭವನದಲ್ಲಿ ಇತ್ತೀಚೆಗೆ ಜರಗಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು 5 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 6 ಬಾರಿ ‘ಸಾಧನಾ’ ಪ್ರಶಸ್ತಿ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು 101 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ್ದು 77 ಕೋಟಿ ರೂ. ಠೇವಣಿ ಹೊಂದಿದೆ. 0.80 ಕೋಟಿ ರೂ. ಪಾಲು ಬಂಡವಾಳ, 46 ಕೋಟಿ…

Read More

ಸಂಘದ 24ನೇ ವಾರ್ಷಿಕ ಮಹಾಸಭೆಯಲ್ಲಿ ಶೇ.13 ಡಿವಿಡೆಂಡ್ ಘೋಷಣೆ ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿ ರಾಜ್ಯಾದ್ಯಂತ 20 ಶಾಖೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 24ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪುತ್ತೂರು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷರಾದ ಎಸ್‌.ಆರ್‌.ಸತೀಶ್ಚಂದ್ರ ಅವರು, ಸಹಕಾರಿಯು ಗಣನೀಯ ಪ್ರಗತಿ ಸಾಧಿಸಲು ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ, ಸಹಕಾರಿಯ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ 20 ಶಾಖೆಗಳ ಮೂಲಕ ಸದಸ್ಯರಿಗೆ ಸೇವೆ ನೀಡುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ 2024-25ರ ಆರ್ಥಿಕ ವರ್ಷಾಂತ್ಯಕ್ಕೆ 49,257 ಸದಸ್ಯರು, ರೂ.9.99 ಕೋಟಿ ಪಾಲು ಬಂಡವಾಳವಿದೆ. ರೂ. 42.08 ಕೋಟಿ ವಿವಿಧ ನಿಧಿಗಳನ್ನು ಹೊಂದಿ ಸದೃಢವಾಗಿದೆ. ಸಹಕಾರಿಯು ತನ್ನ ಸದಸ್ಯರಿಂದ ರೂ.358 ಕೋಟಿ ಠೇವಣಾತಿ ಸಂಗ್ರಹಿಸಿ, ರೂ.330 ಕೋಟಿ ಸಾಲ ವಿತರಿಸಲಾಗಿದೆ.…

Read More

ಮಂಗಳೂರು: ಸಹಕಾರ ತತ್ವ ಸಿದ್ಧಾಂತವನ್ನಿಟ್ಟುಕೊಂಡು ಯಶಸ್ಸಿನ ಪಥದತ್ತ ಸಾಗುತ್ತಿರುವ ಅಖಿಲ ಭಾರತ ಬಿಲ್ಲವರ ಸಂಘದ ಅಂಗಸಂಸ್ಥೆ ಬಿಲ್ಲವರ ಮಹಿಳಾ ಸಂಘ ಪ್ರಾಯೋಜಿತ ಹತ್ತು ಮಂದಿ ಮಹಿಳಾ ನಿರ್ದೇಶಕಿಯರನ್ನೊಳಗೊಂಡ ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದ 18ನೇ ವಾರ್ಷಿಕ ಸಾಮಾನ್ಯ ಸಭೆ ಇತ್ತೀಚೆಗೆ ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ್ ಆರ್. ಸುವರ್ಣ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸುಮಲತಾ ನವೀನಚಂದ್ರ ಸುವರ್ಣ ಅವರ ಉಪಸ್ಥಿತಿಯಲ್ಲಿ ಜರಗಿತು. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಅಧ್ಯಕ್ಷೆ ಸುಮಲತಾ ನವೀನಚಂದ್ರ ಸುವರ್ಣ ಅವರು ಮಾತನಾಡಿ, ವಿವಿಧ ಸಾಲ ಯೋಜನೆಯ ಪ್ರಯೋಜನಗಳನ್ನು ಪಡೆದು ಸಹಕಾರಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ವಿನಂತಿಸಿ, ಸದಸ್ಯರು ನೀಡಿದ ಸೂಕ್ತ ಸಲಹೆಗಳನ್ನು ಕಾರ್ಯರೂಪಕ್ಕೆ ತರುತ್ತೇವೆಂದು ಹೇಳಿದರು. ಉಪಾಧ್ಯಕ್ಷೆ ಸುಖಲಾಕ್ಷಿ ವೈ.ಸುವರ್ಣ 2024-25ನೇ ಸಾಲಿನ ಆಡಳಿತ ಮಂಡಳಿಯ ವರದಿಯನ್ನು ಮಂಡಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪುಷ್ಟಾನಂದ ಕುಮಾರ್ 2024-25ನೇ ಸಾಲಿನ ವಾರ್ಷಿಕ ವರದಿ, ಲೆಕ್ಕ ಪರಿಶೋಧಿತ ಅರ್ಥಿಕ ತಖ್ತೆಗಳನ್ನು ಮಂಡಿಸಿದರು. ಗತವರ್ಷದ ಅಂತ್ಯಕ್ಕೆ ಸಹಕಾರಿಯು ಒಟ್ಟು 3363 ಸದಸ್ಯರಿಂದ…

Read More

ಮಂಗಳೂರು: ಇಲ್ಲಿನ ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿಯ 31ನೇ ವಾರ್ಷಿಕ ಮಹಾಸಭೆ, ಸ೦ಘದ ಅಧ್ಯಕ್ಷರಾದ ಕೆ.ಜೈರಾಜ್ ಬಿ.ರೈಯವರ ಅಧ್ಯಕ್ಷತೆಯಲ್ಲಿ ಮ೦ಗಳೂರಿನ ಉರ್ವ ಸೆ೦ಟನರಿ ಚರ್ಚ್ ಹಾಲ್‌ನಲ್ಲಿ ನಡೆಯಿತು. ಸ೦ಘವು 2024-25ನೇ ಸಾಲಿನಲ್ಲಿ ರೂ.589 ಕೋಟಿ ಠೇವಣಾತಿ ಹಾಗೂ ರೂ.505 ಕೋಟಿ ಸಾಲ ಮತ್ತು ಮುಂಗಡ ಹೀಗೆ ಒಟ್ಟು ರೂ. 1094 ಕೋಟಿ ಒಟ್ಟು ವ್ಯವಹಾರದೊಂದಿಗೆ ರೂ.16.29 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.25 ಡಿವಿಡೆ೦ಡ್‌ ನೀಡಲು ಮಹಾಸಭೆಯಲ್ಲಿ ನಿರ್ಧರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾದ ಕೆ.ಜೈರಾಜ್ ಬಿ.ರೈಯವರು 2024-25ನೇ ಸಾಲಿನ ಆಡಳಿತ ಮಂಡಳಿಯ ವರದಿ ಮತ್ತು ಕಾರ್ಯಯೋಜನೆಗಳನ್ನು ಮತ್ತು ಸದಸ್ಯರಿಂದ ಬಂದ ಪತ್ರಗಳ ವಿಷಯಗಳ ಬಗ್ಗೆ ಸಮಂಜಸ ವಿವರಗಳನ್ನು ನೀಡಿದರು. ಸಂಘ ಈವರೆಗೆ ಸಾಧಿಸಿದ ಸರ್ವತೋಮುಖ ಪ್ರಗತಿ ಗುರುತಿಸಲ್ಪಟ್ಟು ಪ್ರತಿಷ್ಠಿತ ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಸಂಘವು ಭಾಜನರಾಗಿರುವುದಕ್ಕೆ ಎಲ್ಲಾ ಸದಸ್ಯ ಭಾಂಧವರನ್ನು ಅಧ್ಯಕ್ಷರು ಅಭಿನಂದಿಸಿದರು. ಸಂಘದ ಕೇಂದ್ರ ಕಛೇರಿ ಕಟ್ಟಡದ ಕಾಮಗಾರಿ ಚುರುಕಾಗಿ ನಡಿಯುತ್ತಿದ್ದು, 2025ರ ವರ್ಷಾಂತ್ಯದೊಳಗೆ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಗುರುಪೂಜೆ ನಡೆಸಿ, ಪ್ರಸಾದ ವಿತರಣೆ ಮಾಡಿದರು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ರಮಾನಾಥ್ ಸನಿಲ್, ದಿವಾಕರ್ ಬಿ.ಪಿ, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಾಮನ್ ಕೆ ಹಾಗೂ ಸಂಘದ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More