Author: admin

ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಶಾಖೆ ಮಾರ್ಚ್ 25ರಂದು ನಡೆಯಲಿದ್ದು ಇದರಲ್ಲಿ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ಸಹಕಾರ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೆಟ್ ನ ಭಗಿನಿ ಸಮಾಜದ ಬಳಿಯಿರುವ “ಯುನಿಕ್ ಸ್ಟಿಕ್” ಕಾಂಪ್ಲೆಕ್ಸ್ ನಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳಿಸಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರುಗಿತು. ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ಎಂ. ಅರುಣ್ ಐತಾಳ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ದಿವಾಕರ್ ಬಿ.ಪಿ, ಉಮಾವತಿ, ಮುಖ್ಯ…

Read More

ಸಹಕಾರ ಸಚಿವಾಲಯದ ಅನುದಾನಗಳ ಬೇಡಿಕೆಗಳ ವರದಿ ಲೋಕಸಭೆಯಲ್ಲಿ ಮಂಡನೆ ನವದೆಹಲಿ: ಸಹಕಾರಿ ವಲಯದಲ್ಲಿ ಆಡಳಿತ, ಪಾರದರ್ಶಕತೆ ಮತ್ತು ತಳಮಟ್ಟದ ಬೆಳವಣಿಗೆಗಳನ್ನು ಹೆಚ್ಚಿಸಲು ಹಲವಾರು ಸುಧಾರಣೆಗಳುಳ್ಳ ವರದಿಯನ್ನು ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ್ದು, ಸಹಕಾರ ಸಚಿವಾಲಯದ ಅನುದಾನಗಳ ಬೇಡಿಕೆಗಳ (2026–27) ವರದಿಯನ್ನೂ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 2026–27ನೇ ಸಾಲಿನಲ್ಲಿ ಸಹಕಾರಿ ಸಚಿವಾಲಯಕ್ಕೆ 1,744.74 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು 2025–26ರ ಬಜೆಟ್ ಅಂದಾಜಿನ 1,186.29 ಕೋಟಿ ರೂ.ಗಳಿಗಿಂತ ಹೆಚ್ಚು. ದೇಶಾದ್ಯಂತ ಸಹಕಾರಿ ಉಪಕ್ರಮಗಳನ್ನು ಬಲಪಡಿಸಲು ಹಣಕಾಸು ಹಂಚಿಕೆಯ ಅತ್ಯುತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವಂತೆ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯು ಸಹಕಾರಿ ಸಚಿವಾಲಯವನ್ನು ಒತ್ತಾಯಿಸಿದೆ. ಸಮಿತಿಯು ಮಂಡಿಸಿರುವ ಪ್ರಮುಖ ಶಿಫಾರಸುಗಳಲ್ಲಿ ಸಹಕಾರಿ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದ್ದು, ಈ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಮುಂದಿಟ್ಟಿದೆ. ಸಹಕಾರಿ ಸಂಘಗಳ ಚುನಾವಣೆಗಳಲ್ಲಿ ವಿಳಂಬ ಮತ್ತು ಕೆಲವು ಸಂದರ್ಭಗಳಲ್ಲಿ ಚುನಾಯಿತ ಮಂಡಳಿಗಳನ್ನು ರದ್ದುಗೊಳಿಸುವುದರಿಂದ ಸಹಕಾರಿ ಚಳವಳಿಯ…

Read More

ವಿಶ್ವಕರ್ಮ ಬ್ಯಾಂಕ್‌ ಉಡುಪಿ ಶಾಖೆ ವತಿಯಿಂದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಆಶಯ ಉಡುಪಿ: ಸ್ವಚ್ಛ ಹಾಗೂ ಸ್ವಸ್ಥ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಕರ್ಮ ಬ್ಯಾಂಕ್ ನಿರಂತರವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸುತ್ಯರ್ಹವಾದುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಸ್ವಚ್ಛ ಉಡುಪಿ ನಿರ್ಮಾಣ ಕಾರ್ಯದಲ್ಲಿ ಭಾಗಿದಾರರಾಗಬೇಕೆಂದು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ನಡೆದ 35ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾರ್ಷಲ್ ಫ್ರೆಂಡ್ಸ್ ಇದರ ಅಧ್ಯಕ ದಿನೇಶ್ ಹಾಗೂ ಅಶ್ವಥಕಟ್ಟೆ ಫ್ರೆಂಡ್ಸ್ ಇದರ ಗೌರವ ಸಲಹೆಗಾರರಾದ ಕಿಶೋರ್ ಹಸಿರು ನಿಶಾನೆ ತೋರಿಸಿ…

Read More

ಮಂಗಳೂರು: ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘ ಮತ್ತು ಪ್ರೇರಣಾ ಸ್ವಸಹಾಯ ಸಂಘಗಳ ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಮಂಗಳವಾರ ಕಂಕನಾಡಿಯ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಮಹಿಳಾ ದಿನಾಚರಣೆ ಅಂಗವಾಗಿ ಡಾ.ಜ್ಯೋಷ್ನಾ ಪ್ರೇಮಾ ಡಿಸೋಜ ಮಂಗಳೂರು ಇವರಿಂದ ಮಹಿಳೆಯರ ಆರೋಗ್ಯ ವಿಶೇಷವಾಗಿ ಗರ್ಭಕಂಠದ ಸೋಂಕು ಮತ್ತು ಅದರ ತಡೆ ಕುರಿತು ಜಾಗೃತಿ ಹಾಗೂ ಮಹಿಳೆಯರ ಆರೋಗ್ಯದ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಪ್ರೇರಣಾ ಮಹಿಳಾ ಸೌಹಾರ್ದದ ಅಧ್ಯಕ್ಷರಾದ ಪ್ಲೇವಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ 60 ಸದಸ್ಯರು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬಂಟ್ವಾಳ: ಬಿ.ಸಿ.ರೋಡ್‌ನ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 6ರಂದು ಬಿ.ಸಿ.ರೋಡಿನ ವಿವೇಕನಗರದ ಶಕ್ತಿ ಕಾಂಪೌಂಡ್‌ನಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಬಾಲಕೃಷ್ಣ ಪ್ರಭು ಮತ್ತು ಜಯಲಕ್ಷ್ಮಿ ಪ್ರಭು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಳಿಕ ಶ್ರೀ ದೇವಿ ನೃತ್ಯಾರಾಧನಾ ಕಲಾಕೇಂದ್ರ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರೋಹಿಣಿ ಉದಯ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಬಂಟ್ವಾಳ ಇದರ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮತ್ತು ಅಪೂರ್ವ ಜ್ಯುವೆಲ್ಲರ್ಸ್ ಬಿ.ಸಿ.ರೋಡ್ ಇದರ ಮಾಲೀಕರಾದ ಸುನೀಲ್ ಬಿ. ಭಾಗವಹಿಸಿದ್ದರು. ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಪ್ರಾಸ್ತಾವಿಕ ಮಾತನಾಡಿ, ಒಂದು ವರ್ಷದಲ್ಲಿ ಸಹಕಾರಿಯ ಅಭಿವೃದ್ಧಿಯ ಬಗ್ಗೆ ವಿವರಿಸಿದರು. ಒಂದು ವರ್ಷದಲ್ಲಿ ಸಹಕಾರಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ಸಹಕಾರಿಯ ನಿರ್ದೇಶಕರಾದ ಜಯಾನಂದ…

Read More

ನವದೆಹಲಿ: ಭಾರತದಲ್ಲಿ ಪ್ರಸ್ತುತ 8.48 ಲಕ್ಷ ಸಹಕಾರ ಸಂಘಗಳು ಇದ್ದು, ಇವುಗಳ ಪೈಕಿ 3.49 ಲಕ್ಷ ಸಂಘಗಳು ಲಾಭದಾಯಕ ಸ್ಥಿತಿಯಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್‌ ಷಾ ಅವರು, ರಾಷ್ಟ್ರೀಯ ಸಹಕಾರಿ ದತ್ತಸಂಚಯದ (ಎನ್‌ಸಿಡಿ) ಮಾಹಿತಿಯ ಪ್ರಕಾರ, 8.48 ಲಕ್ಷ ಸಹಕಾರ ಸಂಘ ಪೈಕಿ 6.59 ಲಕ್ಷ ಸಹಕಾರಿ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ, 1.41 ಲಕ್ಷ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿಲ್ಲ, ಅದರಲ್ಲೂ ದೇಶಾದ್ಯಂತ 47,688 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ. ಕ್ರಿಯಾತ್ಮಕ ಸಂಘಗಳಲ್ಲಿ, 3.49 ಲಕ್ಷ ಸಹಕಾರಿ ಸಂಘಗಳು ಲಾಭದಲ್ಲಿ ನಡೆಯುತ್ತಿದ್ದರೆ, 2.11 ಲಕ್ಷ ಸಂಘಗಳು ನಷ್ಟದಲ್ಲಿವೆ. 99,325 ಸಂಘಗಳ ಲಾಭ ಅಥವಾ ನಷ್ಟದ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ದೇಶದಲ್ಲಿ ಮಹಾರಾಷ್ಟ್ರವು 2.25 ಲಕ್ಷ ಸಂಘಗಳೊಂದಿಗೆ ಅತಿ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿದೆ. ನಂತರದ ಸ್ಥಾನಗಳಲ್ಲಿ 86,519 ಸಂಘಗಳೊಂದಿಗೆ ಗುಜರಾತ್ ಮತ್ತು…

Read More

ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರೊಂದಿಗೆ ಇತರ ಕ್ಷೇತ್ರಗಳಲ್ಲೂ ಸಹಕಾರ ಕ್ಷೇತ್ರವನ್ನು ಪಸರಿಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಾಗೂ ವೈಯಕ್ತಿಕವಾಗಿಯೂ ಆರೋಗ್ಯ, ಶಿಕ್ಷಣ, ಬೇರೆ ಬೇರೆ ರೀತಿಯಲ್ಲಿ ಸಲ್ಲಿಸಿದ ಸಮಾಜಸೇವೆಯನ್ನು ಪರಿಗಣಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಸ್ವಸ್ತಿಕ್ ಸಂಭ್ರಮ ಪುರಸ್ಕಾರ 2026ನ್ನು ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ಇತ್ತೀಚೆಗೆ ನಡೆದ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಸ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಂದೇಶ ಶೆಟ್ಟಿ, ಪ್ರಮುಖರಾದ ಹರಿಯೇಂದ್ರ ಪೈ, ವಾಲ್ಟರ್ ನಂದಳಿಕೆ, ಕಿರಣ್ ಚಂದ್ರ ಪುಷ್ಪಗಿರಿ, ಜಗನ್ನಾಥ…

Read More

ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದಲ್ಲಿ ಮಾಧವ ಅಮೀನ್ ಬಣ್ಣನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀಡುತ್ತಿರುವ ಬ್ಯಾಂಕಿಂಗ್ ಸೇವೆಗಳು, ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಬ್ಯಾಂಕಿಂಗ್ ಸೇವೆಗಳಿಗೆ ಸರಿಸಮನಾಗಿದೆ ಎಂದು ಸಂಘದ ಗ್ರಾಹಕ ಮಾಧವ ಅಮೀನ್‌ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯನ್ನು ಸಂಘದ ಗ್ರಾಹಕರಾದ ಪ್ರದೀಪ್ ಕುಮಾರ್ ಸುವರ್ಣ, ವಿಶ್ವನಾಥ್ ರೆಂಜಾಳ, ಕೇಶವ ಹೆಚ್, ಬಾಲಕೃಷ್ಣ ಸುವರ್ಣ ಹಾಗೂ ದಯಾನಂದ ಎಸ್ ಅಮೀನ್ ಅವರ ಜೊತೆ ಜಂಟಿಯಾಗಿ ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯ ಪ್ರದೀಪ್ ಕುಮಾರ್ ಸುವರ್ಣ ಮಾತನಾಡಿ, ಆತ್ಮಶಕ್ತಿ ಸಹಕಾರ ಸಂಘವು ಕಡಿಮೆ ಅವಧಿಯಲ್ಲೇ ಸಾಧಿಸಿರುವ ಪ್ರಗತಿ ಶ್ಲಾಘನೀಯ. ಇಲ್ಲಿನ ಸಿಬ್ಬಂದಿ ವರ್ಗದವರ ಸೇವೆಯು ಅಮೂಲ್ಯವಾಗಿದ್ದು, ಇದು ಈ ಶಾಖೆಯಲ್ಲಿ ಸಾಕಾರಗೊಂಡಿದೆ ಎಂದರು. ವಿಶ್ವನಾಥ್ ರೆಂಜಾಳ ಮಾತನಾಡಿ, ಆತ್ಮಶಕ್ತಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ಸಂಘದ ಸದಸ್ಯರಾದ ನಾವೆಲ್ಲರೂ ಮಾಡೋಣ. ಮತ್ತಷ್ಟು ಎತ್ತರಕ್ಕೆ ಆತ್ಮಶಕ್ತಿ ವಿವಿಧೋದ್ದೇಶ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್ ಮಂಗಳೂರು ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಾಮರಸ್ಯ ಬಳಗ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ ಉದ್ಘಾಟಿಸಿ, ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ, ಪ್ರತಿನಿತ್ಯವೂ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ 95% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿ, ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಮನಾ ಶರಣ್ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಉದ್ಯೋಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡ ಮಹಿಳೆಯೇ ಆಗಿದ್ದಾರೆ. ಮಹಿಳೆಯರು ಉನ್ನತ…

Read More

ಬೈಂದೂರು ಶಾಖೆ ರೂ. 10 ಕೋಟಿ ವ್ಯವಹಾರ ಗುರಿ ಸಾಧನೆಯ ಬಗ್ಗೆ ಅಧ್ಯಕ್ಷ ಅನಿಲ್‌ ಲೋಬೊ ಹರ್ಷ ಬೈಂದೂರು: ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಅಂಗವಾಗಿ ಭಾನುವಾರ ಬೈಂದೂರು ಶಾಖೆಯ ಆವರಣದಲ್ಲಿ ಸಂಭ್ರಮಾಚರಣೆ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿಕ್ರಾಸ್ ಚರ್ಚ್‌ ಧರ್ಮಗುರುಗಳಾದ ಫಾದರ್ ವಿನ್ಸೆಂಟ್ ಕುವೆಲ್ಲೊ, ರಂಗಭೂಮಿ ಕಲಾವಿದ ಗಣೇಶ್ ಕಾರಂತ್, ಸಮಾಜ ಸೇವಕ ಫಯಾಜ್ ಅಲಿ ಮತ್ತು ಬೈಂದೂರು ಯೆಡ್ತರೆಯ ಶ್ರೀ ಧರ್ಮಸ್ಥಳ ಸ್ವಸಹಾಯ ಗುಂಪಿನ ಅಧ್ಯಕ್ಷೆ ಶೈಲಾ ಮುಖ್ಯ ಅತಿಥಿಗಳಾಗಿದ್ದರು. ಫಾದರ್‌ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ|ಎಲ್‌ರಾಯ್ ಸಲ್ಡಾನ್ಹಾ, ಶಾಖಾ ನಿರ್ದೇಶಕರಾದ ಎಲ್ರಾಯ್ ಕೆ.ಕ್ರಾಸ್ಟೊ, ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್ ಮತ್ತು ಬೈಂದೂರ್ ಶಾಖೆಯ ಹಿರಿಯ…

Read More