Author: admin
ಬಂಟ್ವಾಳ: ರಾಜ್ಯದ ಪ್ರತಿಷ್ಠಿತ ಪತ್ರಿಕೆ “ಕನ್ನಡ ಪ್ರಭ” ಹಾಗೂ ರಾಜ್ಯದ ಪ್ರಮುಖ ಸುದ್ದಿವಾಹಿನಿ “”ಏಷಿಯಾನೆಟ್ ಸುವರ್ಣನ್ಯೂಸ್” ಕೊಡಮಾಡಿದ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪಡೆದಿರುವ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರನ್ನು ಸಂಗಬೆಟ್ಟು ಗ್ರಾಮ ಪಂಚಾಯತ್ ಹಾಗೂ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಕೋಟಿಯಪ್ಪ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ಸದಸ್ಯರಾದ ಸಂದೇಶ ಶೆಟ್ಟಿ, ದಾಮೋದರ ಪೂಜಾರಿ, ಉದಯ ಪೂಜಾರಿ, ದೇವಪ್ಪ ಕರ್ಕೇರ, ಸುನೀಲ್ ಶೆಟ್ಟಿಗಾರ್, ವಿಮಲಾ ಮೋಹನ್, ಶಕುಂತಲಾ, ಶಾಂತ, ಪ್ರೇಮ, ವಿದ್ಯಾ ಪ್ರಭು, ಹೇಮಲತಾ, ಬೆನಡಿಕ್ಟ್ ಡಿಕೋಸ್ತ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್, ಸಿಬ್ಬಂದಿಗಳಾದ ಮಹಾಬಲ ನಾಯ್ಕ್, ಸುರೇಶ, ಸುಮತ, ಮಹಮ್ಮದ್ ಶಾಫಿ, ಕೇಶವತಿ, ಗ್ರಂಥಾಲಯ ಮೇಲ್ವಿಚಾರಕಿ ಶೋಭಾ, ಪ್ರಮುಖರಾದ ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಪ್ರವೀಣ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.…
ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಸುರೇಶ್ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆ
ಬಂಟ್ವಾಳ: ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಒಡಿಯೂರು ಬಂಟ್ವಾಳ ತಾಲೂಕು ಇದರ 2026-2031ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎ.ಸುರೇಶ್ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಆಡಳಿತ ಮಂಡಳಿ ನಿರ್ದೇಶಕರಾಗಿ ವೇಣುಗೋಪಾಲ ಮಾರ್ಲ, ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಗಣಪತಿ ಭಟ್ ಸೇರಾಜೆ, ಕೆ.ಸೋಮಪ್ಪ ನಾಯ್ಕ್, ಕೆ.ಮೋನಪ್ಪ ಪೂಜಾರಿ, ಎನ್.ಜಯಪ್ರಕಾಶ್ ರೈ, ಅಶೋಕ್ ಕುಮಾರ್ ಯು.ಎಸ್, ಕರುಣಾಕರ ಜೆ.ಉಚ್ಚಿಲ್, ತಾರಾನಾಥ ಶೆಟ್ಟಿ, ಗಣೇಶ್, ಭವಾನಿಶಂಕರ ಶೆಟ್ಟಿ, ಶಾರದಾಮಣಿ ರೈ, ಸರಿತಾ ಅಶೋಕ್, ದೇವಪ್ಪ ನಾಯ್ಕ ಯು. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿದ್ದ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್ ನಡೆಸಿಕೊಟ್ಟರು. ಮಂಗಳೂರಿನ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ಅಧೀಕ್ಷಕ ಎನ್.ಜೆ. ಗೋಪಾಲ ಇವರು ಸಹಕರಿಸಿದರು. ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂವೆಲ್ ಶಾಖೆಯ ಹದಿನಾಲ್ಕನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಮಂಗಳೂರು ಇದರ ಗುರುಮಂದಿರದ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಪ್ರಯುಕ್ತ ಎನ್. ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ ಮಂಗಳೂರು ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ, ಸುರತ್ಕಲ್, ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಕಂರ್ಭಿಬೈದೇದಿ ಚಾವಡಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮವನ್ನುಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ, ಕಂಕನಾಡಿ ಇದರ ಮೋಕ್ತಸರರಾದ ಚಂದ್ರನಾಥ್ ಅತ್ತಾವರ ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯವನ್ನು ನಮಗೆ ದೇವರು ಕರುಣಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಆದರೆ ಈ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರ ಬಹಳ…
ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್ ಷಾ ಮಾಹಿತಿ ನವದೆಹಲಿ: ಭಾರತದ ಮೊದಲ ಸಹಕಾರಿ ನೇತೃತ್ವದ ರೈಡ್-ಹೇಲಿಂಗ್ ವೇದಿಕೆಯಾದ ಭಾರತ್ ಟ್ಯಾಕ್ಸಿಯು ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿ ಹೊರಹೊಮ್ಮಿದೆ. ಭಾರತ್ ಟ್ಯಾಕ್ಸಿಯ ಬಳಕೆದಾರರ ಸಂಖ್ಯೆ 10 ಲಕ್ಷದ ಸಮೀಪದಲ್ಲಿದ್ದು, ಚಾಲಕರ ದಾಖಲಾತಿ ಸಂಖ್ಯೆ ಮೂರು ಲಕ್ಷ ದಾಟಿದೆ. ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮಂಗಳವಾರ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದು, ಭಾರತದ ಡಿಜಿಟಲ್ ಆರ್ಥಿಕತೆಯಲ್ಲಿ ಸಹಕಾರಿ ಉದ್ಯಮಗಳ ಹೆಚ್ಚುತ್ತಿರುವ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. https://chat.whatsapp.com/FCEnlTkAKCC0MGPhXtX4i4 ಲೋಕಸಭೆಯಲ್ಲಿ ಒದಗಿಸಿದ ಮಾಹಿತಿಯ ಪ್ರಕಾರ, ಈಗಾಗಲೇ ಭಾರತ್ ಟ್ಯಾಕ್ಸಿಯು 9.9 ಲಕ್ಷ ಗ್ರಾಹಕರನ್ನು ನೋಂದಾಯಿಸಿದೆ ಮತ್ತು “ಸಾರಥಿಗಳು” ಎಂದು ಕರೆಯಲ್ಪಡುವ ಮೂರು ಲಕ್ಷಕ್ಕೂ ಹೆಚ್ಚು ಚಾಲಕರನ್ನು ನೋಂದಣಿ ಮಾಡಿದೆ. ವೇದಿಕೆಯು ಈಗಾಗಲೇ 2.91 ಲಕ್ಷ ಸವಾರಿಗಳನ್ನು ಪೂರ್ಣಗೊಳಿಸಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಚಾಲಕರ ಭಾಗವಹಿಸುವಿಕೆ ಎರಡರಲ್ಲೂ ಸ್ಥಿರವಾದ ಏರಿಕೆಯು, ಇದರ ಜನಪ್ರಿಯತೆಯನ್ನು ಸೂಚಿಸುತ್ತದೆ ಎಂದು ಅಮಿತ್ ಷಾ ಮಾಹಿತಿ ನೀಡಿದರು.…
ಹೊಸಪೇಟೆಯಲ್ಲಿ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟಿಸಿ ಬಸವಲಿಂಗ ಸ್ವಾಮೀಜಿ ಅಭಿಪ್ರಾಯ ವಿಜಯನಗರ: ಸಮಾಜದ ಸಮಗ್ರವಾದ ಅಭಿವೃದ್ಧಿಗೆ ಸಹಕಾರಿ ಸಂಘಗಳು ಬಹಳ ಅವಶ್ಯಕ ಎಂದು ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಬಸವಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಹೊಸಪೇಟೆಯಲ್ಲಿ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಹಕಾರಿ ಸಂಘಗಳು ಸಣ್ಣ ರೈತರು, ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢಗೊಳಿಸುತ್ತದೆ ಎಂದು ಹೇಳಿದರು. ಸಂಘದ ಅಧ್ಯಕ್ಷರಾದ ಕಲ್ಗುಡಿ ಮಂಜುನಾಥ ಮಾತನಾಡಿ, ಬಡವರಿಗಾಗಿ ಸಹಕಾರಿ ಸಂಘದಿಂದ ವಿಶೇಷ ಯೋಜನೆ ಜಾರಿಗೆ ತರಲಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಂಡೂರಿನ ಪ್ರಭುದೇವರ ವಿರಕ್ತ ಮಠದ ಪ್ರಭುಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ಅಧ್ಯಕ್ಷರಾದ ಜಿ.ನಂಜನ…
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪ್ರದಾನ
ಬಂಟ್ವಾಳ: ಸಹಕಾರ ಕ್ಷೆತ್ರದಲ್ಲಿ ಗಣನೀಯ ಸಾಧನೆ ಮಾಡಿ ವಿವಿಧ ಕ್ಷೆತ್ರದಲ್ಲಿ ಸಲ್ಲಿಸಿದ ಸಮಾಜಸೇವೆಯನ್ನು ಗುರುತಿಸಿ ರಾಜ್ಯದ ಕನ್ನಡಪ್ರಭ ದಿನಪತ್ರಿಕೆ ಹಾಗೂ ರಾಜ್ಯದ ಪ್ರಮುಖ ಸುದ್ದಿವಾಹಿನಿ ಏಷಿಯಾನೆಟ್ ಸುವರ್ಣ ನ್ಯೂಸ್ ಕೊಡಮಾಡುವ ರಾಜ್ಯಮಟ್ಟದ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಭಾಜನರಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಕಳೆದ ಆರು ವರ್ಷಗಳಲ್ಲಿ ಸಹಕಾರ ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿರುವುದಲ್ಲದೆ ಸಂಘದ ವತಿಯಿಂದ ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ನೆರವು, ಅನಾರೋಗ್ಯ ವ್ಯಕ್ತಿಗಳ ಚಿಕಿತ್ಸೆ ವೆಚ್ಚಕ್ಕೆ ಸಹಕಾರ, ಕೋವಿಡ್ ಸಮಯದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಆರ್ಥಿಕ ಸಹಾಯದೊಂದಿಗೆ ಗೌರವಾರ್ಪಣೆ, ಮಹಿಳೆಯರಿಗೆ ಉಚಿತ ಸ್ವಉದ್ಯೋಗ ಟೈಲರಿಂಗ್ ತರಬೇತಿಗಳು ಸೇರಿದಂತೆ ಹತ್ತು ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಯೋಜನೆಗಳ ಬಗ್ಗೆ ಮತ್ತು ಸಾರ್ವಜನಿಕ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದು ಸಹಕಾರ ಸಂಘವನ್ನು…
ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು. ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ಹಸಿರು ನಿಶಾನೆ ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು. ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಮೊಹಿಯುದ್ದೀನ್ ಜುಮ್ಮಾ…
ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಭಾನುವಾರ ಮಂಗಳೂರು ನಗರದ ಹೊರವಲಯದ ಸೋಮೇಶ್ವರ ಕಡಲ ತಡಿಯಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಶ್ರೀಶಾ ಸೊಸೈಟಿಯ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದು, ಈ ಸ್ವಚ್ಛತಾ ಕಾರ್ಯದಲ್ಲಿ ಬೀಚ್ ನಲ್ಲಿ ಹೇರಳವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಮತ್ತು ಗ್ಲಾಸ್ ಬಾಟಲಿಗಳು, ಪ್ಲಾಸ್ಟಿಕ್ ಇತರೆ ತುಣುಕುಗಳನ್ನು ಹೆಕ್ಕಿ ಸಂಗ್ರಹಿಸಲಾಯಿತು. ಬೀಚ ನಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೆ ಶ್ರಮದಾನ ಮೂಲಕ ಪ್ಲಾಸ್ಟಿಕ್ ಮುಕ್ತಗೊಳಿಸಲಾಯಿತು. ಬೆಳಗ್ಗೆ 7 ಗಂಟೆಯಿಂದ 9ರವರಿಗೆ ನಡೆದ ಸ್ವಚ್ಛತಾ ಕಾರ್ಯದಲ್ಲಿ 20ಕ್ಕೂ ಹೆಚ್ಚು ಮೂಟೆಗಳಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ನಂತರ ಸಾಂದರ್ಭಿಕವಾಗಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ. ಎಸ್. ಗುರುರಾಜ್, ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಡಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಸ್ವಚ್ಛತೆ ಇದ್ದಲ್ಲಿ ದೇವರ ಸಾನ್ನಿಧ್ಯ ಇರುತ್ತದೆ. ಅಲ್ಲದೆ ಪರಿಸರ ಸ್ವಚ್ಛತೆಯಿಂದ ನಮ್ಮ ಸ್ವಾಸ್ತ್ಯವೂ ಹೆಚ್ಚುತ್ತದೆ. ಪ್ಲಾಸ್ಟಿಕ್ ಪರಿಸರಕ್ಕೆ ದೊಡ್ಡ ಮಾರಕ. ಅವನ್ನು ಸಮುದ್ರದ ಹಾಗೂ ನೆಲದ ಪ್ರಾಣಿ ಸಂಕುಲಗಳು…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಿರಿಯ ಸದಸ್ಯರ ಮನೆಗೆ ಬಂದು ಬ್ಯಾಂಕಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ
ಬೆಂದೂರ್ವೆಲ್ ಶಾಖೆಯ ೧೪ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆಯಲ್ಲಿ ಶಂಕರ ಶೆಟ್ಟಿ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಿರಿಯ ಸದಸ್ಯರ ಮನೆಗೆ ಬಂದು ಬ್ಯಾಂಕಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ. ಹಿರಿಯ ನಾಗರಿಕರಿಗೆ ಇದರಿಂದ ತುಂಬಾ ಪ್ರಯೋಜನವಾಗುತ್ತಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಾದ ಶಂಕರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯಲ್ಲಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಕೃತೀಶ್ ಕುಮಾರ್, ಪುಷ್ಪಲತಾ ಕೆ., ಮಾಧವ ಕೋಟ್ಯಾನ್, ಗೋಪಾಲ್ ಸುವರ್ಣ, ಕರುಣಾನಂದ ರಾವ್ ಹಾಗೂ ಅನಂತರಾಮ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಕೃತೀಶ್ ಕುಮಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಸಂಘದ ಸದಸ್ಯರಿಗೆ ಉತ್ತಮವಾದ ಸೇವೆ ನೀಡುತ್ತಿದೆ. ಬೆಂದೂರ್ವೆಲ್ ಶಾಖೆಯಲ್ಲಿ ಗ್ರಾಹಕರ ಸಂಖ್ಯೆ ಜಾಸ್ತಿ ಇದ್ದು ಇಲ್ಲಿ ಸ್ಥಳದ ಕೊರತೆ…
ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಪ್ರಚಾರ ಇಲಾಖೆಯಿಂದ ಪರಿಷ್ಕೃತ ಅಧಿಸೂಚನೆ ನವದೆಹಲಿ: ಕೇಂದ್ರ ಸರ್ಕಾರವು “ಸ್ಟಾರ್ಟ್ಅಪ್” ಪದವನ್ನು ಮರು ವ್ಯಾಖ್ಯಾನಿಸಿ, “ಡೀಪ್ ಟೆಕ್ ಸ್ಟಾರ್ಟ್ಅಪ್” ವರ್ಗವನ್ನು ಪರಿಚಯಿಸುವ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಇದರ ಅಡಿಯಲ್ಲಿ ಸಹಕಾರಿ ಸಂಘಗಳನ್ನು ಔಪಚಾರಿಕವಾಗಿ ಸ್ಟಾರ್ಟ್ಅಪ್ ಗುರುತಿಸುವಿಕೆಯ ಚೌಕಟ್ಟಿನೊಳಗೆ ತರಲಿದೆ. https://chat.whatsapp.com/FCEnlTkAKCC0MGPhXtX4i4 ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಪ್ರಚಾರ ಇಲಾಖೆ (DPIIT) ಹೊರಡಿಸಿದ ಪರಿಷ್ಕೃತ ಅಧಿಸೂಚನೆಯು 2019ರ ಸ್ಟಾರ್ಟ್ಅಪ್ ಅಧಿಸೂಚನೆಯನ್ನು ಬದಲಾಯಿಸಿದೆ. ಹೊಸ ಅಧಿಸೂಚನೆಯ ಪ್ರಕಾರ, ಭಾರತದಲ್ಲಿ ಖಾಸಗಿ ಸೀಮಿತ ಕಂಪನಿ, ಪಾಲುದಾರಿಕೆ ಸಂಸ್ಥೆ, ಸೀಮಿತ ಹೊಣೆಗಾರಿಕೆ ಪಾಲುದಾರಿಕೆ, ಬಹು-ರಾಜ್ಯ ಸಹಕಾರಿ ಸಂಘ ಅಥವಾ ಸಂಬಂಧಿತ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಸಹಕಾರಿ ಸಂಘಗಳ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಸಹಕಾರಿ ಸಂಘವಾಗಿ ನೋಂದಾಯಿಸಿದ್ದರೆ ಅದನ್ನು ಸ್ಟಾರ್ಟ್ಅಪ್ ಎಂದು ಗುರುತಿಸಲಾಗುತ್ತದೆ. ಸ್ಟಾರ್ಟ್ಅಪ್ ಆಗಿ ಅರ್ಹತೆ ಪಡೆಯಲು, ಆ ಸಂಸ್ಥೆಯು ಅದರ ಸ್ಥಾಪನೆ ಅಥವಾ ನೋಂದಣಿಯ ಹತ್ತು ವರ್ಷಗಳ ಒಳಗೆ ಇರಬೇಕು ಮತ್ತು ನೋಂದಣಿಯ…
