Author: admin
ಜಮಖಂಡಿ: ಹುನ್ನೂರ ಸೌಹಾರ್ದ ಸಹಕಾರಿ ಸಂಘದ ವತಿಯಿಂದ, ರೋಟರಿ ಸಂಸ್ಥೆ ಜಮಖಂಡಿ ಮತ್ತು ಇನ್ನರ್ವೀಲ್ ಸಂಸ್ಥೆ ಜಮಖಂಡಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಪಿಎಂಶ್ರೀ ಸರಕಾರಿ ಮಾದರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಜಾಲಿಗಿಡದವರು, ಉಪಾಧ್ಯಕ್ಷರಾದ ಸದಾಶಿವ ಸೊನ್ನದ, ನಿರ್ದೇಶಕರಾದ ಚನ್ನಪ್ಪಣ್ಣ ಬಿರಾದಾರ ಮತ್ತು ಶ್ರೀಶೈಲ ತೇಲಿಯವರು ಉಪಸ್ಥಿತರಿದ್ದರು. ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು, ಆನಂದ ದೇವರ ದೇವರು ಓಲೆಮಠ, ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ತಜ್ಞ ವೈದ್ಯರೊಂದಿಗೆ, ರೋಟರಿ ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು, ಇನ್ನರ್ವ್ಹೀಲ್ ಅಧ್ಯಕ್ಷರು ಮತ್ತು ಸದಸ್ಯರ ಜೊತೆಗೂಡಿ ಹುನ್ನೂರ ಸೌಹಾರ್ದ ಕಚೇರಿಯಿಂದ ಕಾಲ್ನಡಿಗೆ ಮೂಲಕ ಪಿಎಂಶ್ರೀ ಶಾಲೆಗೆ ಆಗಮಿಸಿದರು. ನಂತರ ಶ್ರೀ ಆನಂದ ದೇವರು ಓಲೆಮಠ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು. ಉಚಿತ ಆರೋಗ್ಯ ಶಿಬಿರದಲ್ಲಿ 625 ಜನ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಉಚಿತ ಔಷಧ…
ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ಶನಿವಾರ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್, ಉಡುಪಿ ಜಿಲ್ಲಾ ಉಪನಿಬಂಧಕರಾದ ಲಾವಣ್ಯ, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್ ಮೊದಲಾದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಸುಳ್ಯ: ಮಂಗಳೂರಿನಲ್ಲಿ ಶನಿವಾರ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25ನೇ ಸಾಲಿನಲ್ಲಿ ಸಂಘ ದಾಖಲಿಸಿದ ಅಭಿವೃದ್ಧಿ ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ.ಲಕ್ಷ್ಮೀಶ ಕೆ ಎಸ್, ನಿರ್ದೇಶಕರಾದ ಪ್ರಶಾಂತ ಕಾಪಿಲ, ಪದ್ಮಯ ಅಡ್ಯಡ್ಕ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಆರಂತೋಡು ಹಾಲು ಉತ್ಪಾದಕಾರ ಸಹಕಾರ ಸಂಘದ ಅಧ್ಯಕ್ಷರಾದ ಮೋಹನ್ ಕಿನಾಲ, ಕಾರ್ಯದರ್ಶಿ ವಿಮಲಾ ಪೈಕ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…
ಮಂಗಳೂರು: ಇಲ್ಲಿನ ಜನತಾ ಬಜಾರ್ ಬಿಲ್ಡಿಂಗ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ತುಳುನಾಡು ವಿವಿಧೋದ್ದೇಶ ಸಹಕಾರ ಸಂಘದ 16ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 11ರಂದು ನಿಗದಿಯಾಗಿದೆ. https://chat.whatsapp.com/EbVKVnWB6rlHT1mWtsgbch ಅಂದು ಮಧ್ಯಾಹ್ನ 3.30ಕ್ಕೆ ಸಭೆಯು ಜನತಾ ಬಜಾರ್ ಬಿಲ್ಡಿಂಗ್, 2ನೇ ಮಹಡಿ, ಜಿ.ಹೆಚ್.ಎಸ್. ರೋಡ್ ಹಂಪನಕಟ್ಟಾ, ಮಂಗಳೂರು ಇಲ್ಲಿ ನಡೆಯಲಿದೆ. ಇದೇ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿಯಮಿತ ಮಂಗಳೂರು ಇದರ 2024 -25ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಭಾಸ್ಕರ್ ಎಸ್.ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/EbVKVnWB6rlHT1mWtsgbch ಸಂಘದಲ್ಲಿ ಒಟ್ಟು 15,245 ಸದಸ್ಯರಿದ್ದು, 2024-25ನೇ ಸಾಲಿನಲ್ಲಿ 550 ಕೋಟಿಗೂ ಮಿಕ್ಕಿ ವಾರ್ಷಿಕ ವಹಿವಾಟು ನಡೆಸಿದೆ. ಸಂಘದಲ್ಲಿ ಒಟ್ಟು ರೂ. 8472.40 ಲಕ್ಷ ಠೇವಣಿ ಇದ್ದು ಹೊರಬಾಕಿ ಸಾಲ ರೂ. 8449.93 ಲಕ್ಷ ಇದೆ. 2024- 25ನೇ ಸಾಲಿಗೆ ರೂ. 103.09 ಲಕ್ಷ ಲಾಭ ಗಳಿಸಿದ್ದು ಶೇಕಡ 9 ಡಿವಿಡೆಂಡ್ ಘೋಷಿಸಿದೆ. ಸಂಘವು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಶಾಖೆಗಳನ್ನು ತೆರೆಯಲು ಉದ್ದೇಶಿಸಿದೆ. ಸಂಘದ ಸ್ಥಾಪಕ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ…
ಬೆಳ್ಳಾರೆ: ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುನಂದಾ ಆಳ್ವ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಕರುಣಾಕರ ಆಳ್ವ, ಭಾಸ್ಕರ ನೆಟ್ಟಾರು, ವಾಸುದೇವ ನಾಯಕ್, ಜನಾರ್ಧನ ಗೌಡ ಆರ್ವಾರ, ಬೀಯಾಳು ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಡ್ಯ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳಿಗೆ ಸದಸ್ಯತ್ವ ನೀಡಲು ಒತ್ತಾಯಿಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ ಅವರಿಗೆ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. https://chat.whatsapp.com/EbVKVnWB6rlHT1mWtsgbch ಬಳಿಕ ಮಾತನಾಡಿದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಅಧ್ಯಕ್ಷ ಬಿ.ಟಿ.ಗುರುರಾಜ್, ಜಿಲ್ಲೆಯ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಜಿಲ್ಲೆಯಾದ್ಯಂತ 35 ಸೌಹಾರ್ದ ಸಹಕಾರಿ ಸಂಘಗಳು ಸಕ್ರಿಯವಾಗಿದ್ದು, ವಾರ್ಷಿಕ 100 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದ್ದು, ಸರಿಸುಮಾರು 3,000 ಸದಸ್ಯರನ್ನು ಒಳಗೊಂಡಿದೆ. ಈ ಮೂಲಕ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿವೆ, ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಯು ದೃಷ್ಟಿಕೋನದಿಂದ ಹಾಗೂ ಜಿಲ್ಲಾ ಸೌಹಾರ್ದ ಸಹಕಾರಿಗಳ ಚಳುವಳಿ ಬಲಿಷ್ಟವಾಗಲು (ಪ್ರಬಲವಾಗಲು) ಜಿಲ್ಲಾ ಕೇಂದ್ರ ಸಹಕಾರ. ಬ್ಯಾಂಕಿನ ಸದಸ್ಯತ್ವ ಅನಿರ್ವಾವಾಗಿದೆ ಎಂದು ಒತ್ತಾಯಿಸಿದರು. ಈಗಾಗಲೇ ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ರಾಜ್ಯ ದಿನಾಂಕ 6-12-2003ರಲ್ಲಿ ಪತ್ರದ ಸಂಖ್ಯೆ ಆರ್ ಎಸ್ ಆರ್/ಸೌಕ/೧೬೪/ ಎಕ್ಸ್ ಎಂಸಿ/೨೦೦೩-೦೪ ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ರಾಜೇಶ್ ಕಾಮತ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇಂತಹ ಜನಪರ ಸೇವಾ ಕಾರ್ಯಗಳು ಶ್ಲಾಘನೀಯ. ಈ ಸಹಕಾರಿ ಸಂಘದೊಂದಿಗೆ ಸತತವಾಗಿ ಗುಣಮಟ್ಟದ ಶಿಬಿರಗಳನ್ನು ಹೆಮ್ಮೆಯಿಂದ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು. ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಇದರ ಬಿ.ಡಿ.ಒ. ಜಯಚಂದ್ರ ನಾಯಕ್ ಮಾತನಾಡಿ, ಆರೋಗ್ಯ ತಪಾಸಣೆಯು ಇಂದಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿ ಅತ್ಯಗತ್ಯ. ಆತ್ಮಶಕ್ತಿ…
ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ 9% ಲಾಭಾಂಶ ಘೋಷಣೆ ರಾಯಚೂರು: ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘ ರಾಯಚೂರು ಇದರ ಏಳನೇ ವಾರ್ಷಿಕ ಮಹಾಸಭೆ ಭಾನುವಾರ ರಾಯಚೂರಿನ ಕೊಠಾರಿ ಫಂಕ್ಷನ್ ಹಾಲ್ನಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಅಧ್ಯಕ್ಷರಾದ ಪ್ರಭುದೇವರು ಎಚ್.ಎಂ ಅಧ್ಯಕ್ಷತೆ ವಹಿಸಿದ್ದರು. 2024-25ನೇ ಸಾಲಿನಲ್ಲಿ ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘವು 17 ಲಕ್ಷ ರೂ. ಲಾಭ ಗಳಿಸಿದೆ. ಸಹಕಾರಿಯ ವ್ಯವಹಾರವು 25 ಕೋಟಿ ರೂ. ದಾಟಿದ್ದು, ದುಡಿಯವ ಬಂಡವಾಳವು 15.15 ಕೋಟಿಯಷ್ಟಿದೆ. 13.68 ಲಕ್ಷ ರೂ. ಠೇವಣಿ ಸಂಗ್ರಹ, 12.36 ಲಕ್ಷ ರೂ. ಸಾಲ ವಿತರಣೆ ಮಾಡಲಾಗಿದೆ. ಸಾಲ ವಸೂಲಾತಿ ಪ್ರಮಾಣ 97 ಪ್ರತಿಶತ ಇದೆ ಎಂದು ಅಧ್ಯಕ್ಷರು ಮಾಹಿತಿ ನೀಡಿ, ಸಹಕಾರಿಯ ಎಲ್ಲಾ ಸದಸ್ಯರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿ, ಸದಸ್ಯರಿಗೆ ಶೇ 9 ಲಾಭಾಂಶ ಘೋಷಿಸಿದರು. ಸಹಕಾರಿ ಪಿತಾಮಹರಾದ ಸಿದ್ದನಗೌಡ ಸಣ್ಣರಾಮನಗೌಡ ಕಣಗಿನಹಾಳ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಹಕಾರಿಯ ಮುಖ್ಯಕಾರ್ಯನಿರ್ವಾಹಕರಾದ ರವಿಕುಮಾರ್…
ಬಂಟ್ವಾಳ: 2024-2025ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಸಾಧನಾ ಪುರಸ್ಕಾರವನ್ನು ನೀಡಲಾಗಿದೆ. https://chat.whatsapp.com/EbVKVnWB6rlHT1mWtsgbch ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಿದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿಯವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
