Author: admin

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಭಾನುವಾರ ಮಂಗಳೂರು ಸ್ಕೋರ್ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಮಾಜಿ ಕಾರ್ಪೋರೇಟರ್ ಕೆ.ಭಾಸ್ಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಜಪ್ಪು ಆರೋಗ್ಯ ಕೇಂದ್ರದವರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಘದ ಕಾನೂನು ಸಲಹೆಗಾರ, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿದರು. ಬಿ.ಪಿ ತಪಾಸಣೆ, ಮಧುಮೇಹ ತಪಾಸಣೆ ನಡೆಸಲಾಯಿತು. ಸದಸ್ಯರ ಮನೆಗೆ ತರ್ಮಾಮೀಟರ್ ವಿತರಿಸಲಾಯಿತು. ಧನ್ವಿ ರಾವ್‌ ಪ್ರಾರ್ಥಿಸಿದರು. ಅಧ್ಯಕ್ಷ ಕೆ.ಭಾಸ್ಕರರಾವ್ ಸ್ವಾಗತಿಸಿದರು. ನಿರ್ದೇಶಕರಾದ ಸದಾಶಿವ ಅಮೀನ್ 2024-2025ನೇ ಸಾಲಿನ ವಾರ್ಷಿಕ ವರದಿ -ಲೆಕ್ಕ ಪರಿಶೋಧನಾ ವರದಿ ಮಂಡಿಸಿದ್ದು, ಅನುಮೋದನೆ ಪಡೆಯಲಾಯಿತು. ಸದಸ್ಯರ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಸೌಹಾರ್ದ ಸಹಕಾರಿ ಆಡಳಿತಾಧಿಕಾರಿ ನಂದನ್ ಸಭೆ ನಡೆಸಿಕೊಟ್ಟರು. ಮಾಜಿ ನಿರ್ದೇಶಕರಾದ ಅಮರನಾಥ್, ಶೋಭಾರಾಣಿ, ರತನ್‌ ಕುಮಾ‌ರ್, ಹಿರಿಯ ಸದಸ್ಯರಾದ ಜೆ.ಕೊರಗಪ್ಪ, ವಾರಿಜಾ, ಮೀರಾ ರವೀಂದ್ರ, ಎ.ಜೆ. ಶರ್ಮ, ಮೀನಾ ಟೆಲ್ಲಿಸ್, ಆನಂದ ಸೋನ್ಸ್, ಸತೀಶ್ ಪೆಂಗಾಲ್, ತಿಮ್ಮಪ್ಪ ಶೆಟ್ಟಿ…

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಶನಿವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಇವರು, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ ಮತ್ತು ಉಪಾಧ್ಯಕ್ಷರಾದ ಜಗದೀಶ್‌ ಪಡುಪಣಂಬೂರು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ ಜಿಲ್ಲಾ ಸಹಕಾರ ಸಂಘಗಳ…

Read More

ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ರಥಬೀದಿ, ಮಂಗಳೂರು ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ.‌ ಆಸ್ಪತ್ರೆ ಮತ್ತು ಕೆ.ಎಸ್. ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರ ಉಪಸ್ಥಿತಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಭಾನುವಾರ ಮಂಗಳಾದೇವಿ ದೇವಸ್ಥಾನದ ಬಳಿಯ ರಾಮಕೃಷ್ಣ ಆಶ್ರಮದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಉದ್ಘಾಟನಾ ಸಮಾರಂಭದಲ್ಲಿ ರಾಮಕೃಷ್ಣ ಮಿಷನ್ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜೀ ದೀಪ ಪ್ರಜ್ವಲನೆಗೈದರು. ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧಕ್ಷರಾದ ಡಾ|ಎಂ.ಮೋಹನ್ ಆಳ್ವ ಉದ್ಘಾಟಿಸಿದರು. ಕೆ.ಎಂ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ಚಕ್ರಪಾಣಿ ಎಂ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್ ಕ್ಲಬ್…

Read More

ಪುತ್ತೂರು: ಪ್ರತಿಷ್ಟಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವತೋಮುಖ ಪ್ರಗತಿಯನ್ನು ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ ಮತ್ತು ಸಿಇಒ ಚಂದ್ರಶೇಖರ ಅವರು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ಬಿ ಜಯರಾಮ ರೈ, ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿದ್ದು, 1.67 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲಾಗಿದೆ. ಸಂಘವು ಸತತವಾಗಿ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇ.99.25 ಸಾಲ ವಸೂಲಾತಿ ಸಾಧನೆ ಮಾಡಿದೆ. ನಿಮ್ಮ ಸಂಸ್ಥೆಗಳ…

Read More

ಮಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಜೊತೆಗಿನ ಉತ್ತಮ ಬಾಂಧವ್ಯವನ್ನು ಪುರಸ್ಕರಿಸಿ ಮಂಗಳೂರಿನ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸತತ ಮೂರನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ಮಹಾಸಭೆಯಲ್ಲಿ ದೈವಜ್ಞ ಸಹಕಾರಿ ಸಂಸ್ಥೆಗೆ “ಸಾಧನಾ ಪ್ರಶಸ್ತಿ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರಮಾನಂದ ಶೇಟ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ಅವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ಗಜೇಂದ್ರ ಶೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

Read More

10% ಡಿವಿಡೆಂಡ್, ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ ಮಂಗಳೂರು: ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ 110.41 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯ ಸಂಘಗಳಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ತಿಳಿಸಿದರು. ಶನಿವಾರ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 111ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ವರದಿ ವರ್ಷದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಹೊಸತನದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‌ನೆಟ್, ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ 113 ಶಾಖೆಗಳಲ್ಲಿ ದೊರೆಯುತ್ತಿದೆ. ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್‌ನಂತಹ ವಿನೂತನ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್…

Read More

ಉಡುಪಿ: ಇಲ್ಲಿನ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ಸೊಸೈಟಿಯ ಅಧ್ಯಕ್ಷರಾದ ಲೂಯಿಸ್ ಲೋಬೊ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡಿಸ್ ಅವರು, ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ, ನಿರ್ದೇಶಕರಾದ ಮ್ಯಾಕ್ಸಿಮ್ ಆರ್ ಡಿಸೋಜ, ಒನಿಲ್ ಡಿಸೋಜ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜಾರಾಮ ಭಟ್, ಭಾಸ್ಕರ್ ಕೋಟ್ಯಾನ್, ಸಹಕಾರ ಸಂಘಗಳ ದ.ಕ ಜಿಲ್ಲಾ ಉಪನಿಬಂಧಕ ಎಚ್. ಎನ್ ರಮೇಶ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು. 1997ರಲ್ಲಿ ಸ್ಥಾಪನೆಯಾದ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2025ರ ಮಾರ್ಚ್ 31ಕ್ಕೆ ಕೊನೆಗೊಂಡ ಲೆಕ್ಕಾಚಾರ ಪ್ರಕಾರ 50 ಕೋಟಿ ಠೇವಣಿ ಹೊಂದಿದ್ದು, 42 ಕೋಟಿ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಶನಿವಾರ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. https://chat.whatsapp.com/EbVKVnWB6rlHT1mWtsgbch ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ಮಂಗಳೂರಿನ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25,749.48 ಲಕ್ಷ ಹೊಂದಿದ್ದು, ರೂ.3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ. ಪ್ರಶಸ್ತಿ ವಿತರಣೆ…

Read More

ವಿಟ್ಲ : ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 4ನೇ ಬಾರಿ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದೆ. https://chat.whatsapp.com/EbVKVnWB6rlHT1mWtsgbch ಒಟ್ಟು 9 ಶಾಖೆಗಳನ್ನು ಹೊಂದಿರುವ ಅಧ್ಯಾಪಕರ ಸಹಕಾರಿ ಸಂಘವು ವಿಟ್ಲ, ಬಿ.ಸಿ.ರೋಡ್, ಪುತ್ತೂರು, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಮೂಲ್ಕಿ, ಕಡಬ ಹಾಗೂ ಮಂಗಳೂರು ಇಲ್ಲಿ ಬ್ರಾಂಚ್ ಗಳನ್ನು ಹೊಂದಿದೆ. ಸಂಘವು 2024-25ನೇ ಸಾಲಿನ ಆಡಿಟ್ ವರ್ಗಿಕರಣದಲ್ಲಿ “ಎ” ತರಗತಿ ಪಡೆದುಕೊಂಡು ಬರುತ್ತಿದ್ದು, ಸಂಘವು 2024-25ನೇ ಸಾಲಿನಲ್ಲಿ 660.58 ಕೋಟಿ ವ್ಯವಹಾರ ಮಾಡಿ, ರೂ.2.09 ಕೋಟಿ ನಿವ್ವಳ ಲಾಭ ಗಳಿಸಿದೆ. ಮಾರ್ಚ್ 2025ರ ಅಂತ್ಯಕ್ಕೆ ಒಟ್ಟು 4906 ಎ ತರಗತಿ ಸದಸ್ಯರನ್ನು ಹೊಂದಿದ್ದು, ರೂ.5.57 ಕೋಟಿ ಪಾಲು ಬಂಡವಾಳ, ರೂ.209.69 ಕೋಟಿ ಠೇವಣಿ ಹಾಗೂ ರೂ.192.39 ಕೋಟಿ ಹೊರ ಬಾಕಿ ಸಾಲವನ್ನು ಹೊಂದಿದೆ. ಮಾತ್ರವಲ್ಲದೇ ಸಂಘವು ಹಲವಾರು ವರ್ಷಗಳಿಂದ ಶೇಕಡಾ 15ಕ್ಕಿಂತ ಮೇಲಿನ ಡಿವಿಡೆಂಡನ್ನು ಸದಸ್ಯರಿಗೆ…

Read More

ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳವು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ರೂ. ವ್ಯವಹಾರ ನಡೆಸಿ 5.04 ಕೋಟಿ ರೂ. ಲಾಭ ಗಳಿಸಿದೆ. ಸಂಘದ ದುಡಿಯುವ ಬಂಡವಾಳವು 259.66 ಕೋಟಿ ರೂ. ಆಗಿದೆ. ಆಡಿಟ್ ವರ್ಗೀಕರಣದಲ್ಲಿ ಸತತ ‘ಎ’ ಶ್ರೇಣಿ ಪಡೆದಿರುತ್ತದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆ ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು, ಸತತ ನಾಲ್ಕನೇ ಬಾರಿ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕರಾದ ಭೋಜ ಮೂಲ್ಯ, ಪ್ರಶಸ್ತಿ ಸ್ವಿಕರಿಸಿದರು. ಸಂಘದ ಉಪಾಧ್ಯಕ್ಷರಾದ ಜನಾರ್ದನ ಬೊಂಡಾಲ, ನಿರ್ದೇಶಕರಾದ ಬಿ.ರಮೇಶ್ ಬಿ.ಸಾಲ್ಯಾನ್, ಸುರೇಶ್ ಕುಲಾಲ್ ಎನ್.,…

Read More