Author: admin
ನಿರಂತರ “ಎ” ಗ್ರೇಡ್ ಮಾನ್ಯತೆ, 1.70 ಕೋಟಿ ರೂ.ಗಳ ನಿವ್ವಳ ಲಾಭ ಮಂಗಳೂರು: ನಗರದ ಪ್ರತಿಷ್ಠಿತ, ಗ್ರಾಹಕ ಸ್ನೇಹಿ ಸೊಸೈಟಿ ಎಂದೇ ಜನಾನುರಾಗಿಯಾಗಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ 2024-25ನೇ ಆರ್ಥಿಕ ವರ್ಷದ ಸರ್ವಸದಸ್ಯರ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸದಸ್ಯರಿಗೆ ಶೇ.25 ಡಿವಿಡೆಂಡ್ ಘೋಷಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷರಾದ ಎಂ.ಎಸ್.ಗುರುರಾಜ್, ಕಳೆದ ವರ್ಷದ ವರದಿ ಮಂಡಿಸುತ್ತ, ಶ್ರೀಶಾ ಸೌಹಾರ್ದ ಸೊಸೈಟಿಯು ತನ್ನ ವಸ್ತುನಿಷ್ಠ ಮತ್ತು ವೃತ್ತಿಪರತೆ ಆಡಳಿತದ ಮೂಲಕ ವರ್ಷದಿಂದ ವರ್ಷಕ್ಕೆ ಉತ್ತರೋತ್ತರ ಅಭಿವೃದ್ಧಿ ಕಾಣುತ್ತಿದೆ. 2024 -25ನೇ ಸಾಲಿನಲ್ಲಿ 1.70 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿ ದಾಖಲೆ ನಿರ್ಮಿಸಿ ಸದಸ್ಯರಿಗೆ ಈ ವರ್ಷವೂ ಶೇಕಡಾ.25 ಡಿವಿಡೆಂಡ್ ನೀಡಿದೆ. ಸಾಲ ವಸೂಲಾತಿಯು 98.3% ಇದ್ದು, ಇದು ಹೆಚ್ಚಿನ ಲಾಭ ಗಳಿಕೆಯಲ್ಲಿ ಮುಖ್ಯ ಪಾತ್ರ ವಹಿಸಿದೆ. ಠೇವಣಿ ಸಂಗ್ರಹದಲ್ಲಿ 25% ಹೆಚ್ಚಳದೊಂದಿಗೆ 41 ಕೋಟಿಗೆ ತಲುಪಿದೆ. ಸಾಲ ನೀಡಿಕೆಯಲ್ಲಿ 23% ಹೆಚ್ಚಳದೊಂದಿಗೆ 32…
ತುಮಕೂರು: ಕೆಂಗಲ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ತುಮಕೂರು ಇದರ 9ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಹೊಯ್ಸಳ ಕಾನ್ಫರೆನ್ಸ್ ಹೋಟೆಲ್, ತುಮಕೂರು ಇಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಅಧ್ಯಕ್ಷರಾದ ಕೆ.ಸಿ.ರಾಮಲಿಂಗಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 2024-2025ನೇ ಸಾಲಿನಲ್ಲಿ ಸಹಕಾರಿಯು 27,50,000 ರೂ. ಲಾಭ ಗಳಿಸಿದ್ದು ಶೇಕಡಾ 12 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶಿವಸ್ವಾಮಿ ಜಿ.ಕೆ, ನಿರ್ದೇಶಕರಾದ ರಂಗೇಗೌಡ ಬಿ.ಟಿ., ಮುನಿಸ್ವಾಮಿಗೌಡ ಡಿ.ಟಿ., ನರಸಿಂಹ ಮೂರ್ತಿ ಡಿ., ಬಾಲರಾಜ್ ಟಿ.ಆರ್., ಗೋಪಾಲ ರೆಡ್ಡಿ ವೈ.ವಿ., ಜವರಯ್ಯ ಕೆ.ಟಿ., ಸುಮಿತ್ರಾ ಎಲ್.ಸಿ., ಕಮಲಾ ಕೆ., ವಿಶೇಷ ಆಹ್ವಾನಿತರಾದ ರಾಮಚಂದ್ರ ಟಿ.ಎಂ., ಶಂಕರಯ್ಯ ಜಿ.ಎಂ., ಗೋವಿಂದಯ್ಯ ಎಂ., ಕಾನೂನು ಸಲಹೆಗಾರರಾದ ಮಲ್ಲಿಕಾರ್ಜುನಯ್ಯ ಎಸ್.ಕೆ, ಆಸ್ತಿ ಮೌಲ್ಯಮಾಪಕ ರಾಧಾಕೃಷ್ಣ ರೆಡ್ಡಿ ಜಿ., ಲೆಕ್ಕಪರಿಶೋಧಕರಾದ ಮಂಜುನಾಥ ಗೌಡ, ಲೆಕ್ಕಿಗ ಚಿಕ್ಕಣ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರಂಗಪ್ಪ ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…
ರಾಜ್ಯದ ಸೌಹಾರ್ದ ಸಹಕಾರಿ ಕಾಯ್ದೆ ಮತ್ತು ಸೌಹಾರ್ದ ಚಳವಳಿಯ ರಜತ ಮಹೋತ್ಸವ ಆಚರಣೆ ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ 24ನೇ ವಾರ್ಷಿಕ ಮಹಾಸಭೆ ಹಾಗೂ ರಾಜ್ಯದ ಸೌಹಾರ್ದ ಸಹಕಾರಿ ಕಾಯ್ದೆ ಮತ್ತು ಸೌಹಾರ್ದ ಚಳವಳಿಯ ರಜತ ಮಹೋತ್ಸವ ಆಚರಣೆಯ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಆವರಣ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಉದ್ಘಾಟನಾ ಸಮಾರಂಭದಲ್ಲಿ ಸಂಗ್ರಹ ಮತ್ತು ಅಧ್ಯಯನಯೋಗ್ಯ ಸ್ಮರಣ ಸಂಚಿಕೆಯನ್ನು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಸಚಿವ ಪ್ರಲ್ಹಾದ್ ಜೋಶಿ ಬಿಡುಗಡೆ ಮಾಡಿದರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ.ಸುಧಾಕರ, ಶಾಸಕರಾದ ಬಿ.ಆರ್.ಪಾಟೀಲ್, ಸುನೀಲ್ ಪಾಟೀಲ್, ಯಶಪಾಲ್ ಸುವರ್ಣ, ಆರಗ ಜ್ಞಾನೇಂದ್ರ, ನಾಡೋಜ ಜಗದೀಶ್ ಗುಡಗುಂಟಿ, ಸಹಕಾರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎಸ್.ಬಿ.ಶೆಟ್ಟಣ್ಣವರ ಮೊದಲಾದವರು ಭಾಗವಹಿಸಿದ್ದರು. ರಾಜ್ಯದ ಸೌಹಾರ್ದ…
ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ಆರನೇ ಮಹಾಸಭೆ ಭಾನುವಾರ ಮಂಗಳೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು. https://chat.whatsapp.com/EbVKVnWB6rlHT1mWtsgbch ಈ ಸಭೆಯಲ್ಲಿ 2024-2025ನೇ ಸಾಲಿನ ಶೇ.12 ಲಾಭಾಂಶ ಘೋಷಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ರವೀಂದ್ರನಾಥ ಶೆಟ್ಟಿ, ಉಪಾಧ್ಯಕ್ಷರಾದ ದಿನಕರ ಪೂಂಜಾ, ನಿರ್ದೇಶಕರಾದ ಕೆ.ಟಿ ರೈ, ಉದಯ ಕುಮಾರ, ಟಿ.ವಿ ರೈ, ನರೇಂದ್ರನಾಥ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರರಾವ್, ಜೆ.ವಿ ಶೆಟ್ಟಿ, ಶೋಭಾ ರಾವ್, ಸದಾಶಿವ ವಿ.ಎಸ್ ಮತ್ತು ದಿನಕರ ರೈ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್ ಸಿ ಕಾರ್ಯಕ್ರಮ ನಿರ್ವಹಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಬೆಂಬಲಿಗರು ಭರ್ಜರಿ ಜಯಭೇರಿ ದಾಖಲಿಸಿದ್ದಾರೆ. ಎಲ್ಲ 14 ಸ್ಥಾನದಲ್ಲೂ ಕೆ.ಎನ್.ರಾಜಣ್ಣ ಬೆಂಬಲಿಗರು ಆಯ್ಕೆಯಾಗುವ ಮೂಲಕ ಏಳನೇ ಬಾರಿ ತುಮಕೂರು ಡಿಸಿಸಿ ಬ್ಯಾಂಕ್ನಲ್ಲಿ ರಾಜಣ್ಣ ಹಿಡಿತ ಸಾಧಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಎಂಟು ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದ್ದು ಆರು ಸ್ಥಾನಗಳಿಗೆ ಮತದಾನ ನಡೆಯಿತು. 14 ನಿರ್ದೇಶಕರ ಸ್ಥಾನಗಳ ಪೈಕಿ ಎ ಕೆಟಗರಿಯ ನಾಲ್ವರು, ಬಿ, ಸಿ, ಡಿ ಹಾಗೂ ಡಿ1 ಕೆಟಗರಿಯ ತಲಾ ಓರ್ವ ನಿರ್ದೇಶಕ ಸ್ಥಾನ ಸೇರಿ ಒಟ್ಟು ಎಂಟು ನಿರ್ದೇಶಕರ ಅವಿರೋಧ ಆಯ್ಕೆಯಾಗಿತ್ತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎ ಕೆಟಗರಿಯ ಕುಣಿಗಲ್, ತಿಪಟೂರು, ಪಾವಗಡ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ಸಿರಾ ತಾಲೂಕುಗಳ ತಲಾ ಒಂದು…
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಬೆಳ್ತಂಗಡಿ ಶ್ರೀ ಗುರುಸಾನಿಧ್ಯ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಭಗೀರಥ ಜಿ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು ಆರ್ಥಿಕ ವರ್ಷದಲ್ಲಿ ರೂ.4,84,15,079 ನಿವ್ವಳ ಲಾಭ ಗಳಿಸಿದೆ. https://chat.whatsapp.com/EbVKVnWB6rlHT1mWtsgbch ಸಂಘದ ನಿರ್ದೇಶಕ ಗಂಗಾಧರ ಮಿತ್ತಮಾರು ಸ್ವಾಗತಿಸಿದರು. ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು ಪ್ರಸ್ತಾವನೆಯೊಂದಿಗೆ ಮಹಾ ಸಭೆಯ ಕಾರ್ಯಕಲಾಪ ನಡೆಸಿದರು. ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ನಿರ್ದೇಶಕರಾದ ಸುಜಿತಾ ವಿ.ಬಂಗೇರ, ತನುಜಾ ಶೇಖರ್, ಸಂಜೀವ ಪೂಜಾರಿ, ಕೆ.ಪಿ. ದಿವಾಕರ್, ಚಂದ್ರಶೇಖರ್, ಧರ್ಣಪ್ಪ ಪೂಜಾರಿ, ಧರಣೇ0ದ್ರ ಕುಮಾರ್, ಆನಂದ ಪೂಜಾರಿ ಕೆ., ಡಾ. ರಾಜಾರಾಮ್ ಕೆ.ಬಿ, ಜಯವಿಕ್ರಮ್ ಪಿ., ಚಿದಾನಂದ ಎಲ್ದಕ್ಕ, ರಕ್ಷಿತ್ ಶಿವರಾಮ್, ಸೂರಜ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು. ಗೌರವ ಪುರಸ್ಕಾರ: ಸಮಾರಂಭದಲ್ಲಿ ವೆನ್ ಲಾಕ್ ಆಸ್ಪತ್ರೆಯ ವೈದ್ಯ ಡಾ.ಸದಾನಂದ ಪೂಜಾರಿ, ಮುಖ್ಯಮಂತ್ರಿ ಪ್ರಶಸ್ತಿ ಪುರಸ್ಕೃತ ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಪ್ರದೀಪ್ ಪೂಜಾರಿ ಇವರಿಗೆ ಗೌರವ…
ನವದೆಹಲಿ: ಹಿರಿಯ ಸಹಕಾರಿ ಮತ್ತು ಸಹಕಾರ ಭಾರತಿ ಸಂಸ್ಥಾಪಕ ಸದಸ್ಯ ಸತೀಶ್ ಮರಾಠೆ ಅವರನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ನಿರ್ದೇಶಕರ ಮಂಡಳಿಯ ಸದಸ್ಯರಾಗಿ ನೇಮಿಸಲಾಗಿದೆ. ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ಭಾರತೀಯ ರಿಸರ್ವ್ ಬ್ಯಾಂಕ್ನೊಂದಿಗೆ ಸಮಾಲೋಚಿಸಿ, ಅಧಿಸೂಚನೆಯ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಈ ನೇಮಕಾತಿ ಕಲ್ಪಿಸಿದೆ. ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕಿನ ಕೇಂದ್ರ ಮಂಡಳಿಯಲ್ಲಿ ನಿರ್ದೇಶಕರಾಗಿರುವ ಮರಾಠೆ, ಬ್ಯಾಂಕಿಂಗ್, ಸಹಕಾರಿ ಅಭಿವೃದ್ಧಿ ಮತ್ತು ಗ್ರಾಮೀಣ ಹಣಕಾಸಿನಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಫೆಬ್ರವರಿ 1, 1950ರಂದು ಜನಿಸಿದ ಸತೀಶ್ ಮರಾಠೆ ಬಾಂಬೆ ವಿಶ್ವವಿದ್ಯಾಲಯದಿಂದ ವಾಣಿಜ್ಯ ಮತ್ತು ಕಾನೂನಿನಲ್ಲಿ ಸ್ನಾತಕೋತ್ತರ ಪದವಿ (ಜನರಲ್) ಮತ್ತು ಭಾರತೀಯ ವಿದ್ಯಾ ಭವನದಿಂದ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ (ಚಿನ್ನದ ಪದಕ ವಿಜೇತ) ಪಡೆದಿದ್ದಾರೆ. ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ತಮ್ಮ ವೃತ್ತಿಜೀವನ ಪ್ರಾರಂಭಿಸಿ, ಮುಂದೆ ಜನಕಲ್ಯಾಣ ಸಹಕಾರಿ ಬ್ಯಾಂಕ್ ಲಿಮಿಟೆಡ್ನ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು.…
ಮಂಗಳೂರು: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಆ.24ರಂದು ಬೆಳಗ್ಗೆ 11ರಿಂದ ಉರ್ವಾಸ್ಟೋರ್ ನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಇದೇ ಕಾರ್ಯಕ್ರಮದಲ್ಲಿ ಐದು ಸಾಧಕರಿಗೆ ಎಸ್.ಕೆ.ಜಿ.ಐ ಪುರಸ್ಕಾರ ಪ್ರದಾನ ಮಾಡಲಾಗುವುದು. https://chat.whatsapp.com/EbVKVnWB6rlHT1mWtsgbch ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗೌರವ ಸನ್ಮಾನ ನಡೆಸಲಾಗುವುದು. ಸ್ವರ್ಣ ಶಿಲ್ಪಿ ಎನ್.ರಾಮಚಂದ್ರ ಆಚಾರ್ಯ ಕಾರ್ಕಳ, ಕಾಷ್ಠ ಶಿಲ್ಪಿ ಬಳ್ಕೂರು ಗೋಪಾಲ ಆಚಾರ್ಯ ಮಣಿಪಾಲ, ಅಯಸ್ ಶಿಲ್ಪಿ ಲೀಲಾವತಿ ಆಚಾರ್ಯ ಸುಳ್ಯ, ಎರಕ ಶಿಲ್ಪಿ ಹರೀಶ್ಚಂದ್ರ ಆಚಾರ್ಯ ಬೆಳ್ತಂಗಡಿ, ಶಿಲಾ ಶಿಲ್ಪಿ ಜನಾರ್ಧನ ಆಚಾರ್ಯ ಕಾರ್ಕಳ ಇವರಿಗೆ ಎಸ್.ಕೆ.ಜಿ.ಐ ಪುರಸ್ಕಾರ ಪ್ರದಾನ ಮಾಡಲಾಗುವುದು. ಸಂಗೀತ ಕ್ಷೇತ್ರದ ಸಾಧಕ ಯಶವಂತ ಎಸ್.ಟಿ ಮೂಡುಬಿದಿರೆ, ವಾಗ್ಮಿ ಎಸ್.ಆರ್ ದಾಮೋದರ ಶರ್ಮ ಬಾರಕೂರ್, ಕಲಾ ಕ್ಷೇತ್ರದ ಸಾಧಕ ಎ.ಟಿ ಸದಾಶಿವ ಮಂಗಳಾದೇವಿ, ವೈದಿಕ ಕ್ಷೇತ್ರದ ಸಾಧಕ ಬ್ರಹ್ಮಶ್ರೀ ಉಮೇಶ್ ತಂತ್ರಿ ಮಂಗಳೂರು, ಯಕ್ಷಗಾನ ಕ್ಷೇತ್ರದ ಕೆ.ಜೆ ಗಣೇಶ್ ಆಚಾರ್ಯ, ಉಡುಪಿ, ಚಿತ್ರಕಲಾ ಕ್ಷೇತ್ರದ ಲಕ್ಷ್ಮೀನಾರಾಯಣ…
ಬೆಂಗಳೂರು: ಈ ಹಿಂದೆ ತಿರಸ್ಕೃತಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ವಿಧಾನ ಪರಿಷತ್ನಲ್ಲಿ ಶುಕ್ರವಾರ ಮತ್ತೊಮ್ಮೆ ಮಂಡನೆಯಾಗಿ ಅನುಮೋದನೆ ಪಡೆದುಕೊಂಡಿದೆ. https://chat.whatsapp.com/EbVKVnWB6rlHT1mWtsgbch ವಿಧಾನಸಭೆಯಲ್ಲಿ ಅಂಗೀಕಾರಗೊಂಡು ಮೊದಲನೇ ಸಲ ಮಂಡನೆಯಾಗಿದ್ದ ಈ ಮಸೂದೆಗೆ ಪರಿಷತ್ನಲ್ಲಿ ಮೂರು ಮತಗಳಿಂದ ಸೋಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ತಿದ್ದುಪಡಿಯೊಂದಿಗೆ ವಿಧಾನಸಭೆ ಈ ಮಸೂದೆಯನ್ನು ಗುರುವಾರ ಮತ್ತೊಮ್ಮೆ ಅಂಗೀಕರಿಸಿತ್ತು. ಶುಕ್ರವಾರ ಮಸೂದೆಯನ್ನು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಮತ್ತೊಮ್ಮೆ ವಿಧಾನ ಪರಿಷತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುಳ್ಯಪದವು ಶಾಖೆಯ ಪ್ರಕೃತಿ ಸಹಕಾರ ಸೌಧ ಉದ್ಘಾಟನೆ ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತನ್ನ ಪಾರದರ್ಶಕ ಕಾರ್ಯ ಚಟುವಟಿಕೆಗಳ ಮೂಲಕ ಸಹಕಾರಿ ಸಂಘಗಳು ರಾಷ್ಟ್ರೀಯ ಬ್ಯಾಂಕ್ಗಳನ್ನು ಮೀರಿ ಬೆಳೆದಿದೆ. ಸಹಕಾರಿ ವ್ಯವಸ್ಥೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ನವೋದಯ ಸ್ವಸಹಾಯ ಸಂಘಗಳಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯವಾಗಿದೆ, ದೇಶ ಆರ್ಥಿಕವಾಗಿ 3ನೇ ಸ್ಥಾನಕ್ಕೆ ಹೋಗುವಲ್ಲಿ ಸಹಕಾರಿ ಸಂಘಗಳ ಕೊಡುಗೆ ಬಹಳಷ್ಟಿದೆ.ಗ್ರಾಹಕರ ವಿಶ್ವಾಸ ಗಳಿಸಿದ ಕಾರಣದಿಂದಾಗಿಯೇ ಸಹಕಾರಿ ಸಂಘಗಳು ಅದ್ಭುತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮಾಜಿ ಸಂಸದ ನಳಿನ್ಕುಮಾರ್ ಕಟೀಲು ಹೇಳಿದರು. https://chat.whatsapp.com/EbVKVnWB6rlHT1mWtsgbch ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುಳ್ಯಪದವು ಶಾಖೆಯ ನೂತನ ಕಚೇರಿ ಕಟ್ಟಡ ‘ಪ್ರಕೃತಿ ಸಹಕಾರ ಸೌಧ’ ವನ್ನು ಗುರುವಾರ ಉದ್ಘಾಟಿಸಿ, ಮಾತನಾಡಿದರು. ಸಹಕಾರ ಕ್ಷೇತ್ರದ ಅಭ್ಯುದಯಕ್ಕಾಗಿಯೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರ…
