Author: admin

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚೆಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಿ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ, ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ, ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ,…

Read More

2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವಾರ್ಷಿಕ ವ್ಯವಹಾರ: ಅಧ್ಯಕ್ಷ ತಾರಾನಾಥ ಕಾಯರ್ಗ ಮಾಹಿತಿ ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವಾರ್ಷಿಕ ವ್ಯವಹಾರ ನಡೆಸಿದ್ದು, ರೂ. 1.67 ಕೋಟಿ ಲಾಭ ಗಳಿಸಿದೆ. ಸಂಘವು ಸತತ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇಕಡಾ 99.25% ಸಾಲ ವಸೂಲಾತಿ ಮಾಡಿದೆ. ಸತತ 13 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದಲ್ಲಿ 3525 ಸದಸ್ಯರಿದ್ದು, ರೂ.5.72 ಕೋಟಿ ಪಾಲು ಬಂಡವಾಳ ಮತ್ತು ರೂ. 40.34 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. ವರದಿ ವರ್ಷದಲ್ಲಿ ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ, ಕೃಷಿಯೇತರ ಸಾಲ, ಚಿನ್ನಾಭರಣ ಈಡಿನ ಸಾಲ, ಸ್ವಸಹಾಯ ಗುಂಪು ಸಾಲ, ಇತ್ಯಾದಿಗಳಿಗೆ ರೂ.66.10 ಕೋಟಿ ಸಾಲ ವಿತರಿಸಲಾಗಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ರೂ. 34.30 ಕೋಟಿ ಸಾಲ…

Read More

ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ವರ್ಷಾಚರಣೆ ಮತ್ತು ಸ್ಥಾಪಕರ ದಿನಾಚರಣೆ ಪ್ರಯುಕ್ತ ಚಿತ್ರ ಸಿಂಚನ-2025 ಸ್ಪರ್ಧೆಯು ಸಂಸ್ಥೆಯ ಸಂಸ್ಥಾಪಕರಾದ ದೇವಮಾನವ ಪಾಲ್ಕೆ ಬಾಬುರಾಯ ಆಚಾರ್ಯ ಇವರ ಭಾವಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿದೆ. ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಕಿರಿಯರ ವಿಭಾಗ (8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ. ವರೆಗೆ) ಮತ್ತು ಹಿರಿಯರ ವಿಭಾಗ (ಮುಕ್ತ ಪ್ರವೇಶ)ದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಸ್ಪರ್ಧೆಗೆ ಸಂಬಂಧಿಸಿದ ಸೂಚನೆಗಳು: A3 ಸೈಜ್‌ ಡ್ರಾಯಿಂಗ್‌ ಶೀಟ್‌ನಲ್ಲಿ ಚಿತ್ರ ಬರೆಯಬೇಕು, ವಾಟರ್ ಕಲರ್ ಅಥವಾ ಆಕ್ರಿಲಿಕ್ ಕಲರ್ ಬಳಸಬಹುದು. ನೈಜವಾಗಿ ಬಿಡಿಸಿದ ಬಹುವರ್ಣದ ಚಿತ್ರಗಳಾಗಿರಬೇಕು. ಸೃಜನಶೀಲತೆ, ಬಣ್ಣ ಸಂಯೋಜನೆ, ಅಚ್ಚುಕಟ್ಟಾಗಿರುವಿಕೆಗೆ ಆದ್ಯತೆ ನೀಡಲಾಗುವುದು. 31-08-2025ರೊಳಗೆ ತಾವು ಬಿಡಿಸಿದ ಚಿತ್ರದಲ್ಲಿ ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿಭಾಗ ನಮೂದಿಸಿ ಎಸ್‌.ಕೆ ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌, ವಿಶ್ವ ಸೌಧ, ರಾಷ್ಟ್ರೀಯ ಹೆದ್ದಾರಿ -66, ಕೊಟ್ಟಾರ ಚೌಕಿ, ಮಂಗಳೂರು -575006 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. 08-09-2025ರಂದು ಸೋಮವಾರ…

Read More

7,768 ಹೊಸ ಪಿಎಸಿಎಸ್‌ಗಳು ಆರಂಭ: ರಾಷ್ಟ್ರೀಯ ಸಹಕಾರಿ ಡೇಟಾಬೇಸ್‌ನ ಮಾಹಿತಿ ನವದೆಹಲಿ: ಕೇಂದ್ರದಲ್ಲಿ ಸಹಕಾರ ಸಚಿವಾಲಯ ಆರಂಭವಾದ ಬಳಿಕ ದೇಶಾದ್ಯಂತ ಸಹಕಾರ ಸಂಘಗಳು ಬಲವರ್ಧನೆಗೊಳ್ಳುತ್ತಿದ್ದು, ಹೊಸದಾಗಿ ಆಂಭವಾಗುತ್ತಿರುವ ಸಹಕಾರ ಸಂಘಗಳ ಸಂಖ್ಯೆಯಲ್ಲೂ ಹೆಚ್ಚಳವಾಗತೊಡಗಿದೆ. ಸಹಕಾರ ಸಂಘಗಳ ತ್ವರಿತಗತಿಯ ಚಲನೆ ಕುರಿತ ಅಂಕಿ ಅಂಶವೊಂದರ ಪ್ರಕಾರ ದೇಶದ 93% ಗ್ರಾಮ ಪಂಚಾಯತ್‌ಗಳಲ್ಲಿ ಸಹಕಾರ ಸಂಘಗಳು ಅದರಲ್ಲೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ವ್ಯಾಪಿಸಿವೆ. https://chat.whatsapp.com/EbVKVnWB6rlHT1mWtsgbch ರಾಷ್ಟ್ರೀಯ ಸಹಕಾರಿ ಡೇಟಾಬೇಸ್ (ಎನ್‌ಸಿಡಿ) ಪ್ರಕಾರ ಭಾರತದ ಗ್ರಾಮೀಣ ಸಹಕಾರಿ ಸಾಲ ರಚನೆಯ ಬೆನ್ನೆಲುಬಾಗಿರುವ ಪ್ರಾಥಮಿಕ ಕೃಷಿ ಸಾಲ ಸಂಘಗಳು (ಪಿಎಸಿಎಸ್), ಈಗ ದೇಶದ 93%ಕ್ಕಿಂತ ಹೆಚ್ಚು ಗ್ರಾಮ ಪಂಚಾಯತ್‌ಗಳಿಗೆ ವ್ಯಾಪಿಸಿವೆ. 2025ರ ಜೂನ್ 30ರ ಅಂಕಿ ಅಂಶಗಳ ಪ್ರಕಾರ ದೇಶದ 2,69,230 ಗ್ರಾಮ ಪಂಚಾಯತ್‌ಗಳ ಪೈಕಿ 2,51,872 ಪ್ಯಾಕ್ಸ್‌ (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ)ಗಳು ಕಾರ್ಯನಿರ್ವಹಿಸುತ್ತಿವೆ. 17,358 ಗ್ರಾಮ ಪಂಚಾಯತ್‌ಗಳ ಮಾಹಿತಿ ಇನ್ನಷ್ಟೇ ದೃಢಪಡಬೇಕಿದೆ ಎಂದು ಸಂಸತ್‌ ಅಧಿವೇಶನದಲ್ಲಿ ಸಹಕಾರ ಸಚಿವ ಅಮಿತ್‌…

Read More

ಮಂಗಳೂರು: ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ವರ್ಷದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಪ್ರಫುಲ್ಲಾ ಕಾಮತ್ ಅಧ್ಯಕ್ಷತೆಯಲ್ಲಿ ವಿಠೋಭ ರುಕುಮಾಯಿ ದೇವಸ್ಥಾನದ ಸಭಾಂಗಣದಲ್ಲಿ ಬುಧವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಫುಲ್ಲಾ ಕಾಮತ್ ಮಾತನಾಡಿ ವಾರ್ಷಿಕ ವರದಿ ಮಂಡಿಸಿ ಲಾಭಾಂಶದ ವಿವರ ನೀಡಿ ಡಿವಿಡೆಂಡ್ ಘೋಷಿಸಿದರು. 2012ನೇ ಇಸವಿಯಲ್ಲಿ ಪ್ರಾರಂಭವಾದ ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ನಿರಂತರ ಲಾಭ ಗಳಿಸುತ್ತ ಪ್ರಗತಿಯ ಹಾದಿಯಲ್ಲಿ ಮುನ್ನಡೆದಿದೆ ಎಂದು ಮಾಹಿತಿ ನೀಡಿದರು. ಲೆಕ್ಕಪರಿಶೋಧಕರಾದ ಪಿ.ನರೇಂದ್ರ ಪೈ ಲೆಕ್ಕಪತ್ರ ಮಂಡಿಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಅಂದಾಜು ಆಯವ್ಯಯ ಮಂಡಿಸಿದರು. ನಿರ್ದೇಶಕರಾದ ಮಹೇಶ್ ಸುವರ್ಣ ಮುಂದಿನ ವರ್ಷದ ಕಾರ್ಯಯೋಜನೆಗಳನ್ನು ಸಭೆಯ ಮುಂದಿಟ್ಟರು. ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಸಹಕಾರಿಯ ಉಪಾಧ್ಯಕ್ಷ ಗುರುರಾಜ್, ನಿರ್ದೇಶಕರಾದ ಎಂ.ರಾಧಾಕೃಷ್ಣ ಕಾಮತ್, ಡಾ. ಜಯವಂತ ನಾಯಕ್, ಮೋಹನ್ ನಾಯಕ್, ಅನಿಲ್ ಕುಮಾರ್, ಗೌತಮ್ ಕಾಮತ್, ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ…

Read More

ವಿಧೇಯಕದ ಪರ 23, ವಿರುದ್ಧ 26 ಮತಗಳು ಚಲಾವಣೆ, ಸರ್ಕಾರಕ್ಕೆ ಮುಜುಗರ ಬೆಂಗಳೂರು: ಹಲವಾರು ತಿದ್ದುಪಡಿಗಳೊಂದಿಗೆ ವಿಧಾನಸಭೆಯಲ್ಲಿ ಮಂಗಳವಾರವಷ್ಟೇ ಮಂಡನೆಯಾಗಿದ್ದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದೆ. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆ ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಳ್ಳುವ ಮೂಲಕ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ. https://chat.whatsapp.com/EbVKVnWB6rlHT1mWtsgbch ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದರೆ, ಪರ 23 ಮತಗಳಷ್ಟೇ ಚಲಾವಣೆಯಾದವು. ಇದರಿಂದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್​ನಲ್ಲಿ ತಿರಸ್ಕೃತಗೊಂಡಂತಾಗಿದೆ. ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಚಾರವಾಗಿ ಸುದೀರ್ಘ ಚರ್ಚೆಯಾಗಿ ಅಂಗೀಕಾರಗೊಂಡಿತ್ತು. ಬುಧವಾರ ಕಾನೂನು ಸಚಿವ ಎಚ್‌.ಕೆ ಪಾಟೀಲ್​ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿದರು. ಈ ಕುರಿತು ಚರ್ಚೆಯಾಗಿ ಪ್ರತಿಪಕ್ಷಗಳು ಈ ವಿಧೇಯಕವನ್ನು ಮತಕ್ಕೆ ಹಾಕುವಂತೆ ಮನವಿ ಮಾಡಿದವು. ಸಭಾಪತಿ ಬಸವರಾಜ ಹೊರಟ್ಟಿಯವರು ವಿಧೇಯಕವನ್ನು ಮತಕ್ಕೆ ಹಾಕಲು ಮುಂದಾದರು. ಮತಕ್ಕೆ ಹಾಕುವ…

Read More

ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿಕೆ ಉಡುಪಿ: ಜಿಲ್ಲೆಯಲ್ಲಿನ 750ಕ್ಕೂ ಅಧಿಕ ಸಹಕಾರ ಸಂಘಗಳು ಜಿಲ್ಲಾ ಸಹಕಾರಿ ಯೂನಿಯನ್‌ನಲ್ಲಿ ನೋಂದಣಿಯಾಗಿದ್ದು, ಈ ಪೈಕಿ 21 ಸಹಕಾರಿ ಸಂಘಗಳನ್ನು ಮಹಿಳೆಯರೇ ಮುನ್ನಡೆಸುತ್ತಿದ್ದಾರೆ. ಸಹಕಾರ ಸಂಘಗಳಲ್ಲಿ ಜನ 4,500 ಕೋಟಿ ರೂ. ಠೇವಣಿ ಇರಿಸಿರುವುದು ಸಹಕಾರ ಸಂಘಗಳ ಬಗ್ಗೆ ಜನ ಇಟ್ಟಿರುವ ವಿಶ್ವಾಸಾರ್ಹತೆಗೆ ಸಾಕ್ಷಿ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಗಳ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಆಡಳಿತ ನಿರ್ವಹಣೆ ಕುರಿತ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜಕೀಯ ರಹಿತವಾದ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.40ರಷ್ಟು ಜನ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.…

Read More

ನವದೆಹಲಿ: ಬಹುರಾಜ್ಯ ಸಹಕಾರ ಸಂಘಗಳ ಮಂಡಳಿಗಳಲ್ಲಿ ಮಹಿಳೆಯರಿಗೆ ಎರಡು ಸ್ಥಾನಗಳು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಒಂದು ಸ್ಥಾನ ಮೀಸಲಿಡಲಾಗಿದೆ ಎಂದು ಸಹಕಾರ ಸಚಿವ ಅಮಿತ್ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ವಲಯದಲ್ಲಿ ಎಸ್‌ಸಿ-ಎಸ್‌ಟಿ ಸದಸ್ಯರ ಭಾಗವಹಿಸುವಿಕೆ ಹೆಚ್ಚಿಸುವ ಕುರಿತು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಅಮಿತ್ ಷಾ, ಎಲ್ಲ ರಾಜ್ಯಗಳಿಗೆ ವಿತರಿಸಲಾದ ಪ್ರಾಥಮಿಕ ಕೃಷಿ ಸಾಲ ಸಂಘ (ಪ್ಯಾಕ್ಸ್‌)ಗಳ ಮಾದರಿಯ ಉಪ ಕಾನೂನಿನಲ್ಲಿ ಸರ್ಕಾರ ಇದೇ ರೀತಿಯ ನಿಬಂಧನೆಗಳನ್ನು ಸೇರಿಸಲಾಗಿದೆ ಎಂದು ಹೇಳಿದರು. ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಗಣಕೀಕರಣಗೊಳಿಸಲು, ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಬಲಪಡಿಸಲು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನ ಮತ್ತು ಸಹಕಾರಿ ಸಂಸ್ಥೆಗಳಿಗೆ ಐಟಿ ಮಧ್ಯಸ್ಥಿಕೆಗಳು ಸೇರಿ ಹಲವು ಯೋಜನೆಗಳನ್ನು ಸಚಿವಾಲಯ ಜಾರಿಗೊಳಿಸುತ್ತಿದೆ. ಈ ಯೋಜನೆಗಳೂ ಸಹಕಾರಿ ಸಂಘಗಳ ರೈತ ಸದಸ್ಯರಿಗೆ ಪ್ರಯೋಜನ ನೀಡುತ್ತಿವೆ. ಇದರಲ್ಲಿ ಎಸ್‌ಸಿ-ಎಸ್‌ಟಿ ರೈತರೂ ಸೇರಿದ್ದಾರೆ ಎಂದು ಷಾ ಮಾಹಿತಿ…

Read More

ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್‌ ಕೆ ಘೋಷಣೆ ಮಂಗಳೂರು: ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಗೋಲ್ಡ್ ಪ್ಯಾಲೆಸ್ ಒನೆಕ್ಸ್ ಕಟ್ಟಡದಲ್ಲಿರುವ ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ಸಂಘವು ಒಟ್ಟು ರೂ. 20.86 ಕೋಟಿ ವ್ಯವಹಾರ ನಡೆಸಿದ್ದು, 48,17,569.57 ರೂ. ನಿವ್ವಳ ಲಾಭ ಗಳಿಸಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷ ಹರೀಶ್‌ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಬೆಳವಣಿಗೆಗೆ ಎಸ್.ಪ್ರಸಾದ್ ಗುರೂಜಿಯವರ ಮಾರ್ಗದರ್ಶನ, ಆಶೀರ್ವಾದ, ಸದಸ್ಯರ ಪ್ರೋತ್ಸಾಹ ಮತ್ತು ಸಲಹೆ, ಆಡಳಿತ ಮಂಡಳಿಯ ನಿರ್ದೇಶನ ಮತ್ತು ಸಿಬ್ಬಂದಿಗಳ ಕರ್ತವ್ಯ ನಿಷ್ಠೆ ಪ್ರಮುಖ ಕಾರಣ. ಸಂಘವು ಸಮಾಜಮುಖಿ ಕಾರ್ಯದ ಉದ್ದೇಶದಿಂದ ಇತ್ತೀಚೆಗೆ ಮೂಡುಶೆಡ್ಡೆ ಮತ್ತು ಜೆಪ್ಪಿನಮೊಗರುವಿನಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸಿದ್ದು ಪರಿಸರದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಸಂಘವು 48.17 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಹೇಳಿದರು. ಸಂಘದ ಮಾರ್ಗದರ್ಶಕ ಎಸ್.ಪ್ರಸಾದ್ ಗುರೂಜಿಯವರು ಮಾತನಾಡಿ,…

Read More

ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುಳ್ಯಪದವು ಶಾಖೆಯ ನೂತನ ಕಚೇರಿ ಪ್ರಕೃತಿ ಸಹಕಾರ ಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ಆಗಸ್ಟ್‌ 21ರಂದು ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 10 ಗಂಟೆಗೆ ಪ್ರಕೃತಿ ಸಹಕಾರ ಸೌಧ ಕಟ್ಟಡವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ನ್ಯಾಯಬೆಲೆ ಅಂಗಡಿಯನ್ನು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ರಸಗೊಬ್ಬರ ಗೋದಾಮನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎಸ್‌.ಬಿ ಜಯರಾಮ ರೈ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ.,…

Read More