Author: admin
ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳಲ್ಲಿ ಇಡಲು ಅವಕಾಶ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ಅಂಗೀಕಾರ ಬೆಂಗಳೂರು: ಸೌಹಾರ್ದ ಸಹಕಾರ ಸಂಘಗಳ ಒಟ್ಟು ಠೇವಣಿಯ ಶೇ.20ರಷ್ಟು ಮೊತ್ತವನ್ನು ರಾಜ್ಯ ಶಾಸನಬದ್ಧ ಮೀಸಲು ದ್ರವ್ಯ (ಎಸ್ಎಲ್ಆರ್) ಪ್ರಮಾಣ ರೂಪದಲ್ಲಿ ಕಾಯ್ದಿರಿಸುವ ‘ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ಮಸೂದೆ 2025 ಅನ್ನು ಮಂಗಳವಾರ ವಿಧಾನಸಭೆ ಅಂಗೀಕರಿಸಿದೆ. https://chat.whatsapp.com/EbVKVnWB6rlHT1mWtsgbch ಸೌಹಾರ್ದ ಸಹಕಾರ ಸಂಘಗಳಲ್ಲಿ ಹೆಚ್ಚಿನ ಆರ್ಥಿಕ ಶಿಸ್ತು ಮತ್ತು ಹೊಣೆಗಾರಿಕೆಯ ಮೂಲಕ ಸೌಹಾರ್ದ ಸಹಕಾರ ಸಂಘಗಳನ್ನು ಹೆಚ್ಚುವರಿ ಬಲವರ್ಧನೆಗೊಳಿಸುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಸೌಹಾರ್ದ ಸಹಕಾರಿ ಸಂಘಗಳು ತಮ್ಮಲ್ಲಿನ ಠೇವಣಿಯ ಎಲ್ಲ ಮೊತ್ತವನ್ನೂ ಸಾಲದ ರೂಪದಲ್ಲಿ ನೀಡಬಹುದಾಗಿದೆ. ಈಗ ತಿದ್ದುಪಡಿ ಮಸೂದೆಯಡಿ ಸೌಹಾರ್ದ ಸಹಕಾರಿಗಳಲ್ಲಿ ಬರುವ ಠೇವಣಿಯಲ್ಲಿ ಶೇ.20ರಷ್ಟನ್ನು ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್ಗಳಲ್ಲಿ ಠೇವಣಿ ಇಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಸಂಘಗಳಲ್ಲಿ ಅಕ್ರಮ, ವಂಚನೆ ಮತ್ತು ದುರ್ವಿನಿಯೋಗ ಮಾಡುವುದು ತಡೆಯಾಗಲಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ…
ಸಾಸ್ತಾನ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ ಸಾಸ್ತಾನ ಗೋಳಿಗರಡಿ ರಸ್ತೆಯ ದಿವ್ಯ ಕಾಂಪ್ಲೆಕ್ಸ್ನಲ್ಲಿ ಆ.20ರಂದು ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ನಾಡೋಜ ಡಾ.ಜಿ.ಶಂಕರ್ ಅವರು ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಹಾಲಾಡಿ ಶೀನಿವಾಸ ಶೆಟ್ಟಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶಂಭು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ.ಕುಂದರ್ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಪಾಂಡೇಶ್ವರದ ವಿದ್ವಾನ್ ಶ್ರೀ ವಿಜಯ ಮಂಜರ್ ಆಶೀರ್ವಚನ ನೀಡಲಿದ್ದಾರೆ. ಶಾಸಕ ಕಿರಣ್ ಕುಮಾರ್ ಕೊಡ್ಗಿ ಗಣಕೀಕೃತ ಬ್ಯಾಂಕಿಂಗ್ಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಗೋಳಿಗರಡಿ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿಠ್ಠಲ ಪೂಜಾರಿ ಗೋಳಿಗರಡಿ ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಕೋಟ ವ್ಯವಸಾಯಕ ಸೇವಾ…
ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.. ಬೆಂಗಳೂರು ಇದರ 24ನೇ ವಾರ್ಷಿಕ ಸಾಮಾನ್ಯ ಸಭೆ ಆಗಸ್ಟ್ 22ರ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ (ಗಾಯತ್ರಿ ಗ್ರಾಂಡ್), ಗೇಟ್ ನಂ.-04ನಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಸಭೆಯ ನೋಟೀಸ್, ಅಜೆಂಡಾ ಮತ್ತು ವಿವರ ಟಿಪ್ಪಣಿಗಳೊಂದಿಗೆ ಎಲ್ಲಾ ಅರ್ಹ ಸದಸ್ಯರಿಗೆ ಬಹು ಪ್ರಮಾಣದ ಅಂಚೆ ಮೂಲಕ ಕಳುಹಿಸಲಾಗಿದೆ ಮತ್ತು ಸಂಯುಕ್ತ ಸಹಕಾರಿಗೆ ಸಹಕಾರಿಗಳು ಒದಗಿಸಿರುವ ಸಹಕಾರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾಗಿದೆ. ಸಭೆಯ ಅಜೆಂಡಾ, ಟಿಪ್ಪಣಿಗಳು ಮತ್ತು ಅರ್ಹ ಸದಸ್ಯರ ಪಟ್ಟಿಯು ಸಂಯುಕ್ತ ಸಹಕಾರಿಯ ವೆಬ್ ಸೈಟ್ www.souharda.coop ನಲ್ಲಿ ಲಭ್ಯವಿದೆ. ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತಮ್ಮ ಸಹಕಾರಿಯ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯಿಸುವ ಮೂಲಕ ಓರ್ವ ಚುನಾಯಿತ ನಿರ್ದೇಶಕರನ್ನು ಡೆಲಿಗೇಟ್ ಆಗಿ ಭಾಗವಹಿಸಲು ನಿಯೋಜಿಸಬಹುದು. ಅಂತಹ ನಿರ್ದೇಶಕರು ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತನ್ನ ಸಹಕಾರಿಯ ಆಡಳಿತ ಮಂಡಳಿ ಸಭೆಯ ನಿರ್ಣಯ ಹಾಗೂ…
ಬಂಟ್ವಾಳ: ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ವಗ್ಗ ಪ್ರಸಕ್ತ ಸಾಲಿನಲ್ಲಿ ಒಟ್ಟು 349.18 ಕೋಟಿ ರೂ. ವ್ಯವಹಾರ ನಡೆಸಿದ್ದು, 1.63 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಪ್ರಮೋದ್ಕುಮಾರ್ ರೈ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸೋಮವಾರ ಸಂಘದ ನೂತನ ಸಭಾಂಗಣದಲ್ಲಿ2024-2025ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದಸ್ಯರಿಗೆ ಶೇ.25 ಡಿವಿಡೆಂಡ್ ಘೋಷಿಸಿದರು. ರೈತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2.15 ಕೋಟಿ ರೂ. ಪಾಲು ಬಂಡವಾಳ, 61.18 ಕೋಟಿ ರೂ. ಠೇವಣಿ ಹೊಂದಿದೆ. 58.35 ಕೋಟಿ ರೂ. ಸದಸ್ಯರ ಸಾಲ ಹೊರಬಾಕಿ ಇದ್ದು, ಬ್ಯಾಂಕ್ ಮತ್ತು ಇತರೆ ಸಹಕಾರಿ ಸಂಸ್ಥೆಯಲ್ಲಿ 27.03 ಕೋಟಿ ರೂ. ಹೂಡಿಕೆ ಮಾಡಲಾಗಿದ್ದು, ದುಡಿಯುವ ಬಂಡವಾಳ 93.51 ಕೋಟಿ ರೂ.ಇದೆ ಎಂದು ಮಾಹಿತಿ ನೀಡಿದರು. ಸಂಘದ ನೂತನ ಕಟ್ಟಡ ‘ಸಮೃದ್ಧಿ ಸಹಕಾರ ಸೌಧ’ ಕಳೆದ ಜನವರಿ ತಿಂಗಳಲ್ಲಿ ಲೋಕಾರ್ಪಣೆಗೊಂಡಿದ್ದು,…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಇದರ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ನಿವೇಶನದ ಭೂಮಿ ಪೂಜೆ ನೆರವೇರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷರಾದ ಪ್ರಸನ್ನಕುಮಾರ್ ಎ.ಆರ್., ನಿರ್ದೇಶಕರಾದ ಕೃಷ್ಣಾರೆಡ್ಡಿ ಬಿ.ಹೆಚ್., ಮಂಜುನಾಥ್ ಎಸ್.ಕೆ., ಭಾರತಿ ಜಿ.ಭಟ್ ಹಾಗೂ ಶಿಕ್ಷಣ, ಸಲಹಾ ಸಮಿತಿ ಸದಸ್ಯರಾದ ಹೆಚ್.ವಿ.ರಾಜೀವ್, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರಾದ ಸಿ.ಎನ್. ಪರಶಿವಮೂರ್ತಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್, ಉಪನಿಬಂಧಕರಾದ ವಿಜಯಕುಮಾರ್ , ಮೈಸೂರು ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮಂಡ್ಯ ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು ಹಾಗೂ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಪ್ರತಿನಿಧಿಗಳು, ಸಂಯುಕ್ತ ಸಹಕಾರಿಯ ತರಬೇತಿ ಅಧಿಕಾರಿ ವಿ.ಜೆ. ಕಾರಕೂನ್, ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಹಾಗೂ ಇತರೆ ಪ್ರಾಂತದ ಸಿಬ್ಬಂದಿಗಳು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…
ರಾಜ್ಯ ವಿಧಾನಸಭೆಯಲ್ಲಿ 2025ನೇ ಸಾಲಿನ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮಂಡನೆ ಸಹಕಾರ ಸಂಘಗಳ ನಿರ್ದೇಶಕರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕೆಂಬ ವಿಧೇಯಕದ ಅಂಶಕ್ಕೆ ಹಲವು ಶಾಸಕರ ವಿರೋಧ ಬೆಂಗಳೂರು: ಸಹಕಾರಿ ಸಂಘಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಎಸ್ಸಿ/ಎಸ್ಟಿ/ಒಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2025ಕ್ಕೆ ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರಕಿದೆ. ರಾಜ್ಯದ ಸಹಕಾರಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸರ್ಕಾರ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಕಲ್ಪಿಸುವುದು ಹಾಗೂ ನಾಮನಿರ್ದೇಶನ ಮಾಡುವಂತಹ ಅವಕಾಶ ಹೊಂದಿರುವ ಕಾನೂನನ್ನು ರೂಪಿಸಿದೆ. 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿದೆ. ಪ್ರತಿಪಕ್ಷ ಸದಸ್ಯರ ಆಕ್ಷೇಪ, ಆಗ್ರಹಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಧ್ವನಿಮತದಿಂದ ಈ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿದೆ. https://chat.whatsapp.com/EbVKVnWB6rlHT1mWtsgbch 2024ರಲ್ಲಿ ತಿರಸ್ಕೃತಗೊಂಡಿದ್ದ ವಿಧೇಯಕಕ್ಕೆ ತಿದ್ದುಪಡಿ ತಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿ…
2025ನೇ ಸಾಲಿನ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ಬೆಂಗಳೂರು: ರಾಜ್ಯದ ಸಹಕಾರಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸರ್ಕಾರ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಕಲ್ಪಿಸುವುದು ಹಾಗೂ ನಾಮನಿರ್ದೇಶನ ಮಾಡುವಂತಹ ಅವಕಾಶ ಹೊಂದಿರುವ ಕಾನೂನನ್ನು ರೂಪಿಸಿದೆ. 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿದೆ. ಪ್ರತಿಪಕ್ಷ ಸದಸ್ಯರ ಆಕ್ಷೇಪ, ಆಗ್ರಹಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಧ್ವನಿಮತದಿಂದ ಈ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿದೆ. https://chat.whatsapp.com/EbVKVnWB6rlHT1mWtsgbch 2024ರಲ್ಲಿ ತಿರಸ್ಕೃತಗೊಂಡಿದ್ದ ವಿಧೇಯಕಕ್ಕೆ ತಿದ್ದುಪಡಿ ತಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿ ಪರ್ಯಾಲೋಚನೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಮತ್ತು ಇತರ ಪ್ರಾಥಮಿಕ ನೆರವು ಪಡೆವ ಸಹಕಾರ ಸಂಘಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್ಸಿ/ಎಸ್ಟಿ ಇತರ ಹಿಂದುಳಿದ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ. ಈ ಮೂಲಕ ಸಹಕಾರ ಸಂಸ್ಥೆಗಳಲ್ಲಿಯೂ ಸಾಮಾಜಿಕ ನ್ಯಾಯ…
ಸುರತ್ಕಲ್: ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಹಕಾರಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಲಾಲ್ ಅಧ್ಯಕ್ಷತೆಯಲ್ಲಿ ಸುರತ್ಕಲ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ಶನಿವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸಂಘದ ಪ್ರಧಾನ ವ್ಯವಸ್ಥಾಪಕರಾದ ಸಂಜೀವ ಮೂಲ್ಯ ಇವರು ಮಂಡಿಸಿದರು. ಸಂಘವು ವಾರ್ಷಿಕ 281 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿ ರೂ. 48,68,689.60 ನಿವ್ವಳ ಲಾಭ ಗಳಿಸಿದೆ. ಸಂಘವು ೧೮ ವರ್ಷಗಳಿಂದ ನಿರಂತರ \18 ಲಾಭ ಗಳಿಸುತ್ತಿದ್ದು, ಲೆಕ್ಕ \ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿ ವರ್ಗೀಕರಣಗೊಂಡಿದೆ. ಸಂಘವು ಕ್ಲೌಡ್ ತಂತ್ರಾಂಶವನ್ನು ಹಾಗೂ ಆರ್ಟಿಜಿಎಸ್ / ನೆಫ್ಟ್ ಸೇವೆ, ವಾಹನ ವಿಮಾ ಸೌಲಭ್ಯ ಹಾಗೂ ಇ-ಸ್ಟಾಂಪಿಂಗ್ ಸೇವೆಯನ್ನು ಹೊಂದಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷರು ತಿಳಿಸಿದರು. ಪ್ರಸ್ತುತ ಸಾಲಿನಲ್ಲಿ ಸಂಘದ ವತಿಯಿಂದ ತನ್ನ ಲಾಭದಲ್ಲಿ ಸದಸ್ಯರಿಗೆ ಶೇಕಡಾ 18ರಷ್ಟು ಡಿವಿಡೆಂಡ್ ನೀಡುವುದಾಗಿ ತೀರ್ಮಾನಿಸಲಾಯಿತು. ಸಹಕಾರಿ ಸಂಘವು ತನ್ನ ಕ್ಷಿಪ್ರ ಹಾಗೂ ಪಾರದರ್ಶಕ ಬೆಳವಣಿಗೆಯ…
ಮಂಗಳೂರು: ಮಂಗಳೂರಿನ ಜೆಪ್ಪು ಮಾರ್ಗನ್ಸ್ಗೇಟ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್ನ 49ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 10.30ಕ್ಕೆ ಸಭೆ ನಿಗದಿಯಾಗಿದ್ದು, ಬ್ಯಾಂಕಿನ ಅಧ್ಯಕ್ಷ ಮಾಧವ ಬಿ.ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಸಹಕಾರ ಕ್ಷೇತ್ರದಲ್ಲಿ ಜನಸಾಮಾನ್ಯರನ್ನು ತೊಡಗಿಸಿಕೊಳ್ಳಲು ಸಹಕಾರ್ ಟ್ಯಾಕ್ಸಿ ಕೋ-ಆಪ್ ಲಿಮಿಟೆಡ್ನಿಂದ ಆಯೋಜನೆ ನವದೆಹಲಿ: ಜನಸಾಮಾನ್ಯರನ್ನು ಸಹಕಾರ ಕ್ಷೇತ್ರದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಉಪಕ್ರಮವಾಗಿ ದೇಶದ ಮೊದಲ ಸಹಕಾರಿ ಟ್ಯಾಕ್ಸಿ ಸೇವೆ, ಭಾರತ್ ಟ್ಯಾಕ್ಸಿಯ ಲೋಗೋ ಮತ್ತು ಟ್ಯಾಗ್ಲೈನ್ ಅನ್ನು ವಿನ್ಯಾಸಗೊಳಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಗೃಹ ವ್ಯವಹಾರ ಮತ್ತು ಸಹಕಾರ ಸಚಿವಾಲಯದ ಮಾರ್ಗದರ್ಶನದಲ್ಲಿ ಸಹಕಾರ ಟ್ಯಾಕ್ಸಿಯ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮುನ್ನಡೆಸುತ್ತಿರುವ ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್ ಸಹಯೋಗದೊಂದಿಗೆ ಮೈಗವ್(MyGov) ಪ್ಲಾಟ್ಫಾರ್ಮ್ ಮೂಲಕ ಈ ಸ್ಪರ್ಧೆಯನ್ನು ಪ್ರಾರಂಭಿಸಲಾಗಿದೆ. MyGovನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಸ್ಪರ್ಧೆಯ ವಿವರಗಳನ್ನು ಘೋಷಿಸಲಾಗಿದ್ದು, ಸ್ಪರ್ಧೆಗೆ ಲೋಗೋ ಮತ್ತು ಟ್ಯಾಗ್ಲೈನ್ ಕಳುಹಿಸಲು ಆಗಸ್ಟ್ 20 ರಾತ್ರಿ 8.45ರವರೆಗೆ ಅವಕಾಶವಿದೆ. ವಿಜೇತರಿಗೆ ಮುಂದಿನ ಡಿಸೆಂಬರ್ನಲ್ಲಿ ನಿಗದಿಯಾಗಿರುವ ಸಹಕಾರ್ ಟ್ಯಾಕ್ಸಿಯ ಅಧಿಕೃತ ಉದ್ಘಾಟನಾ ಕಾರ್ಯಕ್ರಮದಲ್ಲಿ 30,000 ರೂ.ಗಳ ನಗದು ಬಹುಮಾನ ನೀಡಲಾಗುವುದು. ಭಾರತ್ ಟ್ಯಾಕ್ಸಿಯನ್ನು ನ್ಯಾಯಯುತ ಮತ್ತು ಹೆಚ್ಚು ಪಾರದರ್ಶಕ ಪರಿಸರಸ್ನೇಹಿ ವ್ಯವಸ್ಥೆಯೊಂದಿಗೆ, ಓಲಾ ಮತ್ತು ಉಬರ್ನಂತಹ ಖಾಸಗಿ ಕಂಪನಿಗೆ ಪರ್ಯಾಯವಾಗಿ…
