Author: admin

ಸಹಕಾರ ಕ್ಷೇತ್ರದಲ್ಲಿ ಜನಸಾಮಾನ್ಯರನ್ನು ತೊಡಗಿಸಿಕೊಳ್ಳಲು ಸಹಕಾರ್ ಟ್ಯಾಕ್ಸಿ ಕೋ-ಆಪ್ ಲಿಮಿಟೆಡ್‌ನಿಂದ ಆಯೋಜನೆ ನವದೆಹಲಿ: ಜನಸಾಮಾನ್ಯರನ್ನು ಸಹಕಾರ ಕ್ಷೇತ್ರದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಉಪಕ್ರಮವಾಗಿ ದೇಶದ ಮೊದಲ ಸಹಕಾರಿ ಟ್ಯಾಕ್ಸಿ ಸೇವೆ, ಭಾರತ್ ಟ್ಯಾಕ್ಸಿಯ ಲೋಗೋ ಮತ್ತು ಟ್ಯಾಗ್‌ಲೈನ್ ಅನ್ನು ವಿನ್ಯಾಸಗೊಳಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಗೃಹ ವ್ಯವಹಾರ ಮತ್ತು ಸಹಕಾರ ಸಚಿವಾಲಯದ ಮಾರ್ಗದರ್ಶನದಲ್ಲಿ ಸಹಕಾರ ಟ್ಯಾಕ್ಸಿಯ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮುನ್ನಡೆಸುತ್ತಿರುವ ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್ ಸಹಯೋಗದೊಂದಿಗೆ ಮೈಗವ್(MyGov) ಪ್ಲಾಟ್‌ಫಾರ್ಮ್ ಮೂಲಕ ಈ ಸ್ಪರ್ಧೆಯನ್ನು ಪ್ರಾರಂಭಿಸಲಾಗಿದೆ. MyGovನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಸ್ಪರ್ಧೆಯ ವಿವರಗಳನ್ನು ಘೋಷಿಸಲಾಗಿದ್ದು, ಸ್ಪರ್ಧೆಗೆ ಲೋಗೋ ಮತ್ತು ಟ್ಯಾಗ್‌ಲೈನ್‌ ಕಳುಹಿಸಲು ಆಗಸ್ಟ್ 20 ರಾತ್ರಿ 8.45ರವರೆಗೆ ಅವಕಾಶವಿದೆ. ವಿಜೇತರಿಗೆ ಮುಂದಿನ ಡಿಸೆಂಬರ್‌ನಲ್ಲಿ ನಿಗದಿಯಾಗಿರುವ ಸಹಕಾರ್‌ ಟ್ಯಾಕ್ಸಿಯ ಅಧಿಕೃತ ಉದ್ಘಾಟನಾ ಕಾರ್ಯಕ್ರಮದಲ್ಲಿ 30,000 ರೂ.ಗಳ ನಗದು ಬಹುಮಾನ ನೀಡಲಾಗುವುದು. ಭಾರತ್ ಟ್ಯಾಕ್ಸಿಯನ್ನು ನ್ಯಾಯಯುತ ಮತ್ತು ಹೆಚ್ಚು ಪಾರದರ್ಶಕ ಪರಿಸರಸ್ನೇಹಿ ವ್ಯವಸ್ಥೆಯೊಂದಿಗೆ, ಓಲಾ ಮತ್ತು ಉಬರ್‌ನಂತಹ ಖಾಸಗಿ ಕಂಪನಿಗೆ ಪರ್ಯಾಯವಾಗಿ…

Read More

ಎಂಸಿಸಿ ಬ್ಯಾಂಕ್ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಅನಿಲ್‌ ಲೋಬೊ ಹೇಳಿಕೆ ಮಂಗಳೂರು: ಗ್ರಾಹಕರು ನೀಡಿದ ಅಚಲ ಬೆಂಬಲ ಮತ್ತು ಸಹಕಾರದಿಂದ ಎಂಸಿಸಿ ಬ್ಯಾಂಕ್‌ ಉನ್ನತ ಪ್ರಗತಿ ಸಾಧಿಸಿದೆ. 113 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಅನ್ನು ಬೆಂಬಲಿಸುವುದನ್ನು ಗ್ರಾಹಕರು ಮುಂದುವರಿಸಬೇಕು. ಬ್ಯಾಂಕಿನ ಪ್ರಗತಿಯೊಂದಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದು. ಸಂತೆಕಟ್ಟೆ ಮತ್ತು ದೇರಳಕಟ್ಟೆಯಲ್ಲಿ ಶೀಘ್ರ ಹೊಸ ಶಾಖೆಗಳನ್ನು ತೆರೆಯಲಾಗುವುದು ಎಂದು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್‌ ಲೋಬೊ ಹೇಳಿದರು. https://chat.whatsapp.com/EbVKVnWB6rlHT1mWtsgbch ಗ್ರಾಹಕರ ಅನುಕೂಲಕ್ಕಾಗಿ ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಭಾನುವಾರ ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರು, ಗ್ರಾಹಕರು ಮತ್ತು ನಿರ್ದೇಶಕರ ಮಂಡಳಿಯ ಬೆಂಬಲ, ವಿಶ್ವಾಸ ಹಾಗೂ ಸಿಬ್ಬಂದಿಯ ಕಠಿಣ ಪರಿಶ್ರಮವು ಬ್ಯಾಂಕನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಅನುವು ಮಾಡಿಕೊಟ್ಟಿದೆ. ಸಾಮಾಜಿಕ ಜವಾಬ್ದಾರಿ ನಿರ್ವಹಿಸುವ…

Read More

ನವದೆಹಲಿ: ಭಾರತದ ಜಾನುವಾರು ಮತ್ತು ಡೈರಿ ವಲಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ರಾಷ್ಟ್ರೀಯ ಗೋಪಾಲರತ್ನ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ (ಡಿಎಎಚ್‌ಡಿ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಆಗಸ್ಟ್ 15ರಿಂದ ಸೆಪ್ಟೆಂಬರ್ 15ರ ತನಕ ಸಾಧಕರ ಹೆಸರುಗಳನ್ನು ಶಿಫಾರಸು ಮಾಡಲು ಸೂಚಿಸಿದೆ. ನವಂಬರ್‌ 26ರಂದು ರಾಷ್ಟ್ರೀಯ ಹಾಲು ದಿನದಂದು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. https://chat.whatsapp.com/EbVKVnWB6rlHT1mWtsgbch 2021ರಲ್ಲಿ ರಾಷ್ಟ್ರೀಯ ಗೋಕುಲ್ ಮಿಷನ್ ಅಡಿಯಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳು ದೇಶೀಯ ದನ ಮತ್ತು ಎಮ್ಮೆ ತಳಿಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ನೀಡಲಾಗುತ್ತಿದ್ದು, ಡೈರಿ ರೈತರು, ಸಹಕಾರಿಗಳು, ಹಾಲು ಉತ್ಪಾದಕ ಕಂಪನಿಗಳು, ಡೈರಿ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಕೃತಕ ಗರ್ಭಧಾರಣೆಯ ತಂತ್ರಜ್ಞರನ್ನು ಈ ಪ್ರಶಸ್ತಿಗೆ ಪುರಸ್ಕರಿಸಲಾಗುತ್ತದೆ. ಅತ್ಯುತ್ತಮ ಹೈನುಗಾರ, ಅತ್ಯುತ್ತಮ ಡೈರಿ ಸಹಕಾರಿ ಮತ್ತು ಅತ್ಯುತ್ತಮ ಎಐಟಿ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಜೊತೆಗೆ ಈಶಾನ್ಯ ಭಾರತದ ಪ್ರದೇಶ ಮತ್ತು ಹಿಮಾಲಯನ್ ರಾಜ್ಯಗಳಿಗೆ ಹೆಚ್ಚುವರಿ ವಿಶೇಷ ಪ್ರಶಸ್ತಿಗಳನ್ನು…

Read More

ಕಲಬುರಗಿ: ಇಲ್ಲಿನ ಕಮಲಾಪುರದ ವಿ.ಕೆ.ಸಲಗರ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾಕಾಂತ ರಾಜಗಿರಿ, ಉಪಾಧ್ಯಕ್ಷರಾಗಿ ಶಂಭುಲಿಂಗ ರಾಮಶೆಟ್ಟಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಉಮಾಕಾಂತ ರಾಜಗಿರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಂಭುಲಿಂಗ ಎದುರಾಳಿಗಳನ್ನು ಪರಾಭವಗೊಳಿಸಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಚುನಾಯಿತರಾದರು. ರಾಜಕುಮಾರ ರಾಠೋಡ್ ಚುನಾವಣಾಧಿಕಾರಿಯಾಗಿದ್ದರು. ಚುನಾವಣಾ ಪ್ರಕ್ರಿಯೆ ಸಂದರ್ಭ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ರಾಜಗಿರೆ, ಸಂಜು ಪಾಟೀಲ್, ಹಾಲಪ್ಪ ಸಿರಗಾಪುರ, ನಾಗರಾಜ ಮೂಲಗೆ, ಬಸವರಾಜ ಅಕ್ಕಲಕೋಟ, ಸಿದ್ದಣ್ಣ ಸೌಳ್ಸೆ, ಪಂಚಾಕ್ಷರಿ ಮಠ, ಸತೀಶ ಪಾಟೀಲ, ಶಿವರಾಜ ಬಿರಬಿಟ್ಟಿ, ಸಂಗಶೆಟ್ಟಿ ಮೂಲಗೆ, ಮಲ್ಲಿಕಾರ್ಜುನ ಸೊರಡೆ, ಶಿವಾನಂದ ರಾಮಶೆಟ್ಟಿ, ಶಿವಾನಂದ ರಾಜಗಿರೆ, ಅಕ್ಷರಬಾಯಿ ಕಾಂಬ್ಳೆ, ಕುಪೇಂದ್ರ ಲೇಂಗಟಿ, ವೀರೇಶ ಒಂಟೆ, ಶಿವಾನಂದ ದಂಡೆ, ಗಣಪತರಾವ ಪಾಟೀಲ, ಶಿವಾನಂದ ಟೇಂಗಳಿ, ಲಕ್ಷ್ಮಣ ಭಂಡಾರಿ, ಜಗನ್ನಾಥ ಕಾಂಬ್ಳೆ, ಪುಂಡಲೀಕ ಪೂಜಾರಿ, ಕಾಂತಣ್ಣ ಕಣ್ಣಿ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ…

Read More

ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಮಂಗಳೂರು: ದೇಶದ ಸಂವಿಧಾನ ಪ್ರತಿಯೋರ್ವ ನಾಗರಿಕನಿಗೂ ಅವರದ್ದೇ ಆದ ಹಕ್ಕುಗಳನ್ನು ನೀಡಿದೆ. ಸಂವಿಧಾನ ನೀಡಿರುವ ಹಕ್ಕುಗಳನ್ನು ಅನುಭವಿಸುವ ಜೊತೆಗೆ ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಕೂಡಾ ನಿಭಾಯಿಸುವುದು ಅಗತ್ಯವಾಗಿದೆ. ಹಕ್ಕು ಮತ್ತು ಜವಾಬ್ದಾರಿಯಿಂದ ಕೂಡಿದ ಕರ್ತವ್ಯಗಳು ನಾಣ್ಯದ ಎರಡು ಮುಖಗಳು ಇದ್ದಂತೆ. ಇದನ್ನು ದೇಶದ ನಾಗರಿಕರು ಅರಿತರೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ನಡೆದ ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. https://chat.whatsapp.com/EbVKVnWB6rlHT1mWtsgbch ಮುಂದುವರಿದು ಮಾತನಾಡಿದ ಅವರು ಅನೇಕ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ದೀರ್ಘ ಸಮಯದ ಹೋರಾಟದ ಬಳಿಕ ನಮಗೆ ಸ್ವಾತಂತ್ರ್ಯ ಲಭಿಸಿದೆ. ನಮಗೆ ಲಭಿಸಿದ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸದೆ ದೇಶ…

Read More

ಮಂಗಳೂರು: ಪ್ರತಿಷ್ಠಿತ ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79ನೇ ಸ್ವಾತಂತ್ರ‍್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಟ್ರಸ್ಟ್‌ನ ಖಜಾಂಚಿ, ವಕೀಲ ಪದ್ಮರಾಜ್ ಆರ್. ಪೂಜಾರಿ, ನಿಕಟಪೂರ್ವ ಕಾರ್ಪೊರೇಟರ್, ವಕೀಲ ಎ.ಸಿ.ವಿನಯರಾಜ್ ಮುಖ್ಯ ಅತಿಥಿಗಳಾಗಿದ್ದರು. ಎಂಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಪ್ರೊ.ಎಡ್ಮಂಡ್ ಫ್ರಾಂಕ್ ಮತ್ತು ಮಾಜಿ ವೃತ್ತಿಪರ ನಿರ್ದೇಶಕ ಮೈಕೆಲ್ ಡಿಸೋಜ ಗೌರವ ಅತಿಥಿಗಳಾಗಿದ್ದರು. ಪದ್ಮರಾಜ್ ಆರ್.ಪೂಜಾರಿ ಧ್ವಜಾರೋಹಣ ಮಾಡಿದರು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿದರು. ಪದ್ಮರಾಜ್ ಪೂಜಾರಿ ಮಾತನಾಡಿ, ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗಗಳನ್ನು ಸ್ಮರಿಸಿ, ಭಾರತದ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದ್ದು, ಈ ಮೌಲ್ಯವನ್ನು ಅಳವಡಿಸಿಕೊಳ್ಳುವಾಗ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಹೇಳಿ, ಎಂ.ಸಿ.ಸಿ. ಬ್ಯಾಂಕಿನ ಪ್ರಗತಿ ಮತ್ತು ಬ್ಯಾಂಕ್‌ ಇಡೀ ಕರ್ನಾಟಕದಲ್ಲಿ ಉತ್ತಮ ಸೇವೆ ನೀಡುತಿರುವ…

Read More

ವಿಟ್ಲ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ನಿವೃತ್ತ ಯೋಧ ಪ್ರಕಾಶ್ ಕುಕ್ಕಿಲ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನ ಮತ್ತು ಆರ್ಥಿಕ ಸ್ವಾತಂತ್ರ್ಯ ಬಗ್ಗೆ ಮಾತನಾಡಿ ಸ್ಫೂರ್ತಿ ತುಂಬಿದರು. ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಎಚ್, ಉಪಾಧ್ಯಕ್ಷರಾದ ಮನೋರಂಜನ್ ಕೆ.ಆರ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್ ರಾವ್, ಶುಭಲಕ್ಷ್ಮೀ, ದಯಾನಂದ ಆಳ್ವ ಕೆ, ಪೂವಪ್ಪ ಎಸ್, ದಿವಾಕರ ವಿ, ಕೇಶವ ಎ, ಗೋವರ್ಧನ್ ಕುಮಾರ್ ಐ, ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್, ಸತೀಶ್ ಪಿ ಹಾಗೂ ಅತಿಥಿಗಳಾಗಿ ಶ್ರೀ ತುಳಸಿದಾಸ್ ಶೆಣೈ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣ ಮುರಳಿ ಶ್ಯಾಮ್ ಕೆ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಯೋಧರಾದ ಪ್ರಕಾಶ್ ಕುಕ್ಕಿಲ ಹಾಗೂ ತುಳಸಿದಾಸ್ ಶೆಣೈ ಇವರನ್ನು ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು. ಬ್ಯಾಂಕಿನ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯ ಡಿ ಕಾರ್ಯಕ್ರಮ…

Read More

ತಂಬಾಕು, ಅಡಕೆ ಪದಾರ್ಥಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತೆರಿಗೆ ಸೋರಿಕೆ: ವಿಧಾನಮಂಡಲದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿಕೆ ಬೆಂಗಳೂರು: ದೇಶದ ತೆರಿಗೆ ವ್ಯವಸ್ಥೆಯಲ್ಲಿ ವಂಚನೆ ಪ್ರಕರಣಗಳು ಆಗಿಂದ್ದಾಗ್ಗೆ ವರದಿಯಾಗುತ್ತಿದ್ದು, ಇದನ್ನು ತಡೆಯಲು ಕೆಲವೊಂದು ಕಠಿಣ ಕ್ರಮವನ್ನು ಜಾರಿಗೆ ತರಬೇಕಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು, ಇನ್‌ಕಮ್ ಟ್ಯಾಕ್ಸ್ ಪಾವತಿಯಲ್ಲಿ ಭಾರೀ ಮೋಸವಾಗುತ್ತಿರುವುದು ಕಂಡುಬರುತ್ತಿದ್ದು ವಂಚನೆ ಎಸಗುವ ಒಬ್ಬೊಬ್ಬರನ್ನು ಹುಡುಕಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪ್ರತಿಯೊಂದು ರಾಜ್ಯಗಳೂ ತಮ್ಮ ಪ್ರಸ್ತಾವನೆಯನ್ನು ಜಿಎಸ್‌ಟಿ ಮಂಡಳಿಗೆ ಸಲ್ಲಿಸುತ್ತವೆ. ಆ ಆಧಾರದಲ್ಲಿ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನವಾದ ನಂತರ ಎಲ್ಲಾ ರಾಜ್ಯ ಆ ಪ್ರಸ್ತಾವನೆಯನ್ನು ಅಳವಡಿಕೊಳ್ಳುವುದು ವಾಡಿಕೆ. ಈ ವ್ಯವಸ್ಥೆ ಮುಂದುವರಿದರೆ ಮಾತ್ರ ದೇಶದಲ್ಲಿ ಏಕರೂಪ ತೆರಿಗೆ ವ್ಯವಸ್ಥೆ ಉಳಿಸಿಕೊಳ್ಳಲು ಸಾಧ್ಯ. ಆ ಹಿನ್ನೆಲೆಯಲ್ಲಿ ಕರ್ನಾಟಕ ಸರಕು ಸೇವೆಗಳಿಗೆ ಸಂಬಂಧಿಸಿ ಕೆಲವು ತಿದ್ದುಪಡಿಗಳನ್ನು ತರಲಾಗಿದೆ ಎಂದು ತಿಳಿಸಿದರು.…

Read More

ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ನಿಗದಿತ ಅರ್ಹತೆಗಳನ್ನು ಪಾಲಿಸಲೇಬೇಕು: ರಾಜ್ಯಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ ನವದೆಹಲಿ: ಬಹು-ರಾಜ್ಯ ಸಹಕಾರಿ ಬ್ಯಾಂಕ್‌ಗಳ ಆಡಳಿತ ಮಂಡಳಿಗೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿಷಯದಲ್ಲಿ 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 10A (ಉಪ-ವಿಭಾಗ 2A(i)) ರ ತಿದ್ದುಪಡಿ ಮಾಡಿದ ನಿಬಂಧನೆಯ ಅನುಷ್ಠಾನವನ್ನು ಸಹಕಾರಿ ಚುನಾವಣಾ ಪ್ರಾಧಿಕಾರವು ನೋಡಿಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಆಗಸ್ಟ್ 1, 2025ರಿಂದ ಜಾರಿಗೆ ಬಂದಿರುವ ತಿದ್ದುಪಡಿಯಂತೆ ಅಧ್ಯಕ್ಷರು ಮತ್ತು ಪೂರ್ಣಾವಧಿ ನಿರ್ದೇಶಕರನ್ನು ಹೊರತುಪಡಿಸಿ ನಿರ್ದೇಶಕರ ಗರಿಷ್ಠ ನಿರಂತರ ಅಧಿಕಾರಾವಧಿಯನ್ನು ಎಂಟರಿಂದ ಹತ್ತು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಸ್ಪಷ್ಟಪಡಿಸಿದರು. ಸಹಕಾರಿ ಬ್ಯಾಂಕ್‌ಗಳಲ್ಲಿ ನಿರ್ದೇಶಕರ ಅಧಿಕಾರಾವಧಿಯ ಕುರಿತು ರಾಜ್ಯಸಭಾ ಸಂಸದ ಶಕ್ತಿಸಿನ್ಹಾ ಗೋಯಲ್‌ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಗುಜರಾತ್‌ನಾದ್ಯಂತ 145 ಅರ್ಬನ್‌ ಸಹಕಾರಿ ಬ್ಯಾಂಕ್‌ಗಳಲ್ಲಿ 876 ನಿರ್ದೇಶಕರು ಎಂಟು ವರ್ಷಗಳಿಗೂ ಹೆಚ್ಚು ಕಾಲ ಸೇವೆ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶ್ರೇಷ್ಠ ಸಾಧನೆಯನ್ನು ಗುರುತಿಸಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಉತ್ತಮ ಡಿಸಿಸಿ ಬ್ಯಾಂಕ್‌ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ರಾಜಣ್ಣ ರೆಡ್ಡಿ ಇವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌,…

Read More