Author: admin

ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಯೋಗ ದಿನ ಆಚರಣೆ ಮಂಗಳೂರು: ಇಂದಿನ ಜಗತ್ತಿನಲ್ಲಿ ಮಾನವನ ಜೀವನ ಶೈಲಿ ಬದಲಾಗುತ್ತಿದೆ. ಪರಿಸರ ಆಹಾರ ಪದ್ಧತಿ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಉದ್ಯೋಗ ಕ್ಷೇತ್ರ, ಉದ್ಯಮ ಕ್ಷೇತ್ರ ಹೆಚ್ಚು ಹೆಚ್ಚು ಒತ್ತಡ ಹೇರುತ್ತಿದೆ. ಇಂದು ಒತ್ತಡ ನಿಭಾವಣೆಯೇ ಅತ್ಯಂತ ಸವಾಲಿನದ್ದಾಗುತ್ತಿದೆ. ಯೋಗಾಧಾರಿತ ಜೀವನ ಕ್ರಮವನ್ನು ಅನುಸರಿಸಿದರೆ ಒತ್ತಡ ರಹಿತ ಜೀವನ ಸಾಧ್ಯ ಎಂದು ತರ್ಜನಿ ಕಮ್ಯುನಿಕೇಷನ್‌ನ ರಮೇಶ್ ಪ್ರಭು ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಜರುಗಿದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ನಿರಂತರ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮತೋಲನ ವೃದ್ಧಿಯಾಗುತ್ತದೆ. ನಿಯಮಿತವಾಗಿ ಯೋಗ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು ಹಾಗೂ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಯೋಗದ ಮಹತ್ವವನ್ನು ತಿಳಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ…

Read More

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿಶ್ವ ಯೋಗ ದಿನಾಚರಣೆ ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾನುವಾರ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಾನವರಲ್ಲಿ ಸಂಪತ್ತಿಗಿಂತ ಆರೋಗ್ಯ ಚೆನ್ನಾಗಿದ್ದರೆ ಏನನ್ನು ಕೂಡ ಸಾಧಿಸಬಹುದು ಎಂದು ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಯೋಗ ಶಿಕ್ಷಕರಾದ ಸುರೇಂದ್ರ ಆಚಾರ್ಯ ಮಾತನಾಡಿ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು. ಯೋಗ ಗುರು ಗಣೇಶ ಆಚಾರ್ಯ ಯೋಗಾಸನವನ್ನು ಸದಸ್ಯರು ಮತ್ತು ಸಿಬ್ಬಂದಿಯವರಿಗೆ ಕಲಿಸಿದರು. ನವೀನ್ ಕುಮಾರ್ ಮತ್ತು ಸಂಸ್ಥೆಯ ನಿರ್ದೇಶಕರಾದ ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಅಚಾರ್, ಶಶಿಕಾಂತ್ ಆಚಾರ್ಯ ಮತ್ತು ಮಲ್ಲಪ್ಪ ಎನ್. ಪತ್ತಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಕೃಷ್ಣಾಪುರ ಸಭಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸದಸ್ಯ ಗ್ರಾಹಕರು ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.…

Read More

ಬಂಟ್ವಾಳ: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರ ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆಯ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ. https://chat.whatsapp.com/FCEnlTkAKCC0MGPhXtX4i4 ಇದರಂತೆ ಅಡಿಕೆ, ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆ ವಿಮೆ ಮಾಡಲು ಪ್ರೀಮಿಯಂ ಪಾವತಿಸಲು ಪ್ರಾರಂಭವಾಗಿದ್ದು, ಬೆಳೆ ಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿ ಪ್ರೀಮಿಯಂ ಮೊತ್ತ ಪಾವತಿಸಬಹುದು. ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರೀಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು…

Read More

ಮುಂಬೈ: ಕರ್ನಾಟಕ ಮೂಲದ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್, ಆ ಬ್ಯಾಂಕಿನ ಪರವಾನಗಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಿದೆ. ತಕ್ಷಣಕ್ಕೆ ಲಿಕ್ವಿಡೇಟರ್ ನೇಮಿಸಲು ಆದೇಶ ಹೊರಡಿಸುವಂತೆ, ಕರ್ನಾಟಕ ಸಹಕಾರ ಸಂಘದ ರಿಜಿಸ್ಟ್ರಾರ್, ರಿಸರ್ವ್ ಬ್ಯಾಂಕ್ ಅನ್ನು ಕೋರಿದೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕದ ಗಡಿಭಾಗ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಲೈಸೆನ್ಸ್ ಅನ್ನು ಪರವಾನಗಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ, ಭಾರತೀಯ ರಿಸರ್ವ್ ಬ್ಯಾಂಕ್ ರದ್ದು ಮಾಡಿದೆ. ಗುರುವಾರದಿಂದ (ಜೂನ್ 18) ಯಾವುದೇ ವಹಿವಾಟು ನಡೆಸದಂತೆ ನಿರ್ಬಂಧ ಹೇರಿದೆ. ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಹದೆಗೆಟ್ಟ ಹಿನ್ನಲೆಯಲ್ಲಿ, ರಿಸರ್ವ್ ಬ್ಯಾಂಕ್ ಈ ನಿರ್ಧಾರ ತೆಗೆದುಕೊಂಡಿದೆ. ಬ್ಯಾಂಕ್ ವಹಿವಾಟು ಮುಕ್ತಾಯಗೊಳಿಸಲು, ಲಿಕ್ವಿಡೇಟರ್ ನೇಮಿಸಲು ಆದೇಶ ಹೊರಡಿಸುವಂತೆ, ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್ ರಿಸರ್ವ್ ಬ್ಯಾಂಕಿಗೆ ( RBI ) ಮನವಿ ಸಲ್ಲಿಸಿದೆ. ಭವಿಷ್ಯದಲ್ಲಿ ಮತ್ತೆ ಲಾಭ ಗಳಿಸುವ ಆಶಾಭಾವ…

Read More

ವಿಜಯಪುರ: ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಬೆಂಗಳೂರು ನಿರ್ದೇಶಕ ಗುರುನಾಥ ಜಾಂತೀಕರ ಶುಕ್ರವಾರ ಭೇಟಿ ನೀಡಿದರು. https://chat.whatsapp.com/FCEnlTkAKCC0MGPhXtX4i4 ಅವರನ್ನುಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಒಕ್ಕೂಟಕ್ಕೆ ಒಬ್ಬ ಸಹಾಯಕ ನಿಬಂಧಕರನ್ನು ಸಂಯುಕ್ತ ಸಹಕಾರಿಯಿಂದ ನೇಮಕ ಮಾಡಿಕೊಂಡು ಸಾಲ ವಸೂಲಾತಿ ಮಾಡಿಕೊಡಲು ವಿನಂತಿಸಲಾಯಿತು. ಕನಿಷ್ಠ ಒಂದು ತಿಂಗಳಲ್ಲಿ ಎರಡು ದಿನ ಬಂದು ಇಲ್ಲಿಯೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶ ಮಾಡಿಕೊಡಲು ವಿನಂತಿಸಲಾಯಿತು. ಇದಕ್ಕೆ ಸ್ಪಂದಿಸಿದ ಜಾಂತೀಕರ ಅವರು ಸಂಯುಕ್ತ ಸಹಕಾರಿಯ ಸಭೆಯಲ್ಲಿ ಚರ್ಚಿಸಿ ‌ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಸಭೆಯಲ್ಲಿ ಗುಲ್ಬರ್ಗಾ ಜಿಲ್ಲೆಯ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಅರುಣ್ ವಾರದ, ದಿಲೀಪ್‌ ಶಿಂತ್ರೆ, ಯಮನಪ್ಪ ಸಾತೀಹಾಳ, ಪರಶುರಾಮ ಚಿಂಚಲಿ, ಅರುಣ ಮಠ, ಸಿದ್ದು ಮಲ್ಲಿಕಾರ್ಜುನಮಠ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಮೂಡುಬಿದಿರೆ: ಕರಿಂಜೆಯ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಮದ್ದಡ್ಕದಲ್ಲಿ ಸಾಮಾನ್ಯ ಸೇವಾ ಕೇಂದ್ರ ಮತ್ತು ಇ-ಸ್ಟಾಂಪಿಂಗ್ ಸೌಲಭ್ಯದ ಉದ್ಘಾಟನೆ ಶುಕ್ರವಾರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಸಂಸ್ಥೆಯ ಸಂಸ್ಥಾಪಕ, ಗೌರವ ಮಾರ್ಗದರ್ಶಕರಾಗಿರುವ ಶ್ರೀ ಕ್ಷೇತ್ರ ಕರಿಂಜೆಯ ಮುಕ್ತಾನಂದ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನುಷ್ಯನ ಸ್ವಭಾವ, ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ಇರಬಹುದು, ಸ್ವಸಹಾಯ ಸಂಘದಲ್ಲಿದ್ದುಕೊಂಡು ಜಾತಿ ಮತ ಭೇದವನ್ನು ತೊರೆದು ಈ ಸಂಸ್ಥೆಯಲ್ಲಿ ನಾವು ಇದ್ದೇವೆ ಎಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರನ್ನು ಕಂಡು ತುಂಬ ಹೆಮ್ಮೆಯನ್ನುಂಟು ಮಾಡಿದೆ. ಹಾಗೆಯೇ ಇದೀಗ ಕುವೆಟ್ಟು -ಮೂಡುಬಿದಿರೆಗೆ ಗ್ರಾಮ ಸಮೃದ್ದಿ ಸಹಕಾರಿ ಸಂಘ ವಿಸ್ತರಿಸಿದೆ. ಮುಂದೆ ಮಂಗಳೂರು ಮತ್ತು ಗ್ರಾಮೀಣ ಪ್ರದೇಶವಾದ ಅಳಿಯೂರು ಗ್ರಾಮಗಳಲ್ಲಿ ಶಾಖೆಯು ಪ್ರಾರಂಭಗೊಳ್ಳಲಿದೆ. ನಮ್ಮ ಸಂಸ್ಥೆಯಿಂದ ಸದಸ್ಯರಿಗೆ ಉತ್ತಮವಾದ ಸೇವೆ ನೀಡುವ ದೃಷ್ಟಿಯಿಂದ ಸಾಮಾನ್ಯ ಸೇವಾ ಕೇಂದ್ರ ಮತ್ತು ಇ- ಸ್ಟಾಂಪಿಂಗ್ ಉದ್ಘಾಟನೆ ಮಾಡಲಾಯಿತು ಎಂದು ಹೇಳಿದರು. ಸಂಘದ ಅಧ್ಯಕ್ಷ ಸುಧಾಕರ ನೂಯಿ ಮಾತನಾಡಿ, ಸಂಸ್ಥೆಯು…

Read More

ಮಂಡ್ಯ: ಇಲ್ಲಿನ ಕೆ.ಆರ್‌ ಸಾಗರದ ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 12 ಸದಸ್ಯರಿರುವ ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಐವರು ಸದಸ್ಯರು ಗೈರುಹಾಜರಾಗಿದ್ದರು. ಹಿಂದಿನ ಅಧ್ಯಕ್ಷರು ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.ಜಗದೀಶ್ ಮತ್ತು ಲಕ್ಷ್ಮೀ ನಾಮಪತ್ರ ಸಲ್ಲಿಸಿದ್ದರು. ಮತದಾನಕ್ಕೆ ಲಕ್ಷ್ಮೀ ಸೇರಿದಂತೆ ಐವರು ಗೈರಾಗಿದ್ದ ಕಾರಣ ಡಿ.ಜಗದೀಶ್ ವಿಜೇತರಾದರು. ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ ಚುನಾವಣಾಧಿಕಾರಿಯಾಗಿದ್ದರು. ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸಿದ್ದರಾಜು, ಮಾಜಿ ಅಧ್ಯಕ್ಷ ಸುಪ್ರಿಯಾ ರವಿಕುಮಾರ್, ಮಾಜಿ ಅಧ್ಯಕ್ಷ ಬಿ.ವಿ.ಹರೀಶ್, ಸದಸ್ಯ ಪರಶುರಾಮ, ಎಂ.ಎಚ್.ಶ್ರೀನಿವಾಸ್, ಕಿರಣ್, ಗ್ರಾಮದ ಯಜಮಾನರಾದ ಶ್ರೀನಿವಾಸೇಗೌಡ, ಮುಖಂಡರಾದ ರವಿಕುಮಾರ್, ರವಿ, ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ರಜಿನಿ, ದೇವರಾಜು, ಪುನೀತ್ ಮೊದಲಾದವರು ನೂತನ ಅಧ್ಯಕ್ಷ ಡಿ.ಜಗದೀಶ್‌ ಅವರನ್ನು ಅಭಿನಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…

Read More

ಸಿಂಧನೂರು: ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಸಹಕಾರ ಚಳವಳಿ ಆರಂಭವಾದ ಬಗೆ, ಅದರ ಕಾರ್ಯಗಳು ಮತ್ತು ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಸೋಮಲಾಪುರ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಸಿಂಧನೂರಿನ ಎಕ್ಸಲೆಂಟ್ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ, ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಯುವ ಜನರಿಗೆ ಕ್ಲಸ್ಟರ್ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ, ಇತಿಹಾಸ, ಸಹಕಾರ ಸಂಘದ ರಚನೆ ಬಗ್ಗೆ ಜಾಗೃತಿ ಮೂಡಬೇಕಿದೆ. ಅದು ಇಂಥ ತರಬೇತಿಯಿಂದ ಮಾತ್ರ ಸಾಧ್ಯ ಎಂದರು. ಕಾರ್ಯದರ್ಶಿ ವೆಂಕಟರಾವ್‌ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಇಂಥ ತರಬೇತಿಗಳಲ್ಲಿ ಭಾಗವಹಿಸಿ ಅದರ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಹೊಂದಬೇಕು ಎಂದು ಸಲಹೆ ನೀಡಿದರು. ರಾಯಚೂರು…

Read More

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ಬೆಳ್ತಂಗಡಿ ಇದರ 28ನೇ ನೂತನ ಶಾಖೆಯು ಗುರುಪುರ-ಕೈಕಂಬದ ಅನಂತ ಮಹಲ್ ಕಾಂಪ್ಲೆಕ್ಸ್‌ನಲ್ಲಿ ಜೂನ್‌ 19ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ನೂತನ ಶಾಖೆಯ ಕಚೇರಿಯ ಉದ್ಘಾಟನೆಯನ್ನು ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ ಅವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ಇದರ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಭದ್ರತಾ ಕೋಶವನ್ನು ಎಸ್‌ಆರ್‌ಆರ್ ಮಸಾಲ ಇಂಡಸ್ಟ್ರೀಸ್ ಮಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶೈಲೇಂದ್ರ ವೈ.ಸುವರ್ಣ, ಗಣಕ ಯಂತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ, ಕೈಕಂಬ ಇದರ ಅಧ್ಯಕ್ಷ ವಿನೋದ್ ಮಾಡ ಅವರು ಉದ್ಘಾಟಿಸಲಿದ್ದಾರೆ. ನಿರಖು ಠೇವಣಿ ಪತ್ರವನ್ನು ಹೊಟೇಲ್ ಶ್ರೀರಾಮ್ ಕೈಕಂಬದ ಮಾಲಕ ಎಂ.ಹರಿರಾವ್, ಉಳಿತಾಯ ಖಾತೆ ಪುಸ್ತಕವನ್ನು ಗಂಜಿಮಠ ಗ್ರಾಮ ಪಂಚಾಯತ್‌ ನಿಕಟಪೂರ್ವ ಅಧ್ಯಕ್ಷೆ ಮಾಲತಿ ಎಂ.…

Read More

ಮಂಗಳೂರು: ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಬುಧವಾರ ಸ್ಥಳಾಂತರ ಮಾಡಲಾಯಿತು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಕಚೇರಿ ಸಂಕೀರ್ಣದಲ್ಲಿ ಬ್ಯಾಂಕುಗಳ ಹಾಗೆಯೇ ಜನಸಾಮಾನ್ಯರಿಗೆ ಆರ್ಥಿಕ ಸವಲತ್ತುಗಳನ್ನು ನೀಡಿ ಜನರ ಆರ್ಥಿಕ ಅಭ್ಯುದಯಕ್ಕೆ ಕೊಡುಗೆ ನೀಡುತ್ತಿರುವ ಸಹಕಾರ ಸಂಘಗಳಿಗೆ ಅವಕಾಶ ನೀಡಬೇಕು ಎಂಬ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಶ್ರೀ ರಾಮಕೃಷ್ಣ ಸೊಸೈಟಿಗೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ರಾಮಕೃಷ್ಣ ಸೊಸೈಟಿಯು ಹೆಚ್ಚು ಹೆಚ್ಚು ವಹಿವಾಟು ಮಾಡಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಅಪರ ಜಿಲ್ಲಾಧಿಕಾರಿ ರಾಜು ಕೆ. ಮಾತನಾಡಿ, ರಾಜ್ಯದಲ್ಲಿ ಸಹಕಾರ ಚಳವಳಿಯು ಗದಗದಲ್ಲಿ ಆರಂಭವಾಗಿದ್ದರೂ, ಅದು ಅತ್ಯುತ್ತಮವಾಗಿ ಪ್ರಗತಿ ಹೊಂದಿ ಜನರ ವಿಶ್ವಾಸಕ್ಕೆ ಪಾತ್ರವಾಗಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲೆಗಳಲ್ಲಿ. ಇದಕ್ಕೆ ಪೂರಕವಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್…

Read More