Author: admin

ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಬಳಿಕ ವಾಟ್ಸ್ಯಾಪ್‌ ಮೇಲೂ ವಂಚಕರ ಕಣ್ಣು..! ಮಂಗಳೂರು: ಯಾರ್ಯಾರದ್ದೋ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಖಾತೆಗಳನ್ನು ನಕಲಿಯಾಗಿ ಸೃಷ್ಟಿಸಿ ಪರಿಚಯಸ್ಥರಲ್ಲಿ ಹಣದ ಬೇಡಿಕೆ ಇಡುತ್ತಿದ್ದ ವಂಚಕರ ಜಾಲ ಇದೀಗ ವಾಟ್ಸ್ಯಾಪ್‌ ಮೇಲೂ ಕಣ್ಣು ಹಾಕಿದೆ. ವಾಟ್ಸ್ಯಾಪ್‌ ನಂಬರ್‌ ಅನ್ನೇ ಹೈಜಾಕ್ ಮಾಡಿ ಅದರಿಂದ ಸಂದೇಶ ಕಳುಹಿಸಿ ಹಣ ಪೀಕಿಸಲು ತಂತ್ರ ಹೂಡಿದ ಘಟನೆ ಮಂಗಳವಾರ ಪುತ್ತೂರಿನಲ್ಲಿ ವರದಿಯಾಗಿದೆ. https://chat.whatsapp.com/EbVKVnWB6rlHT1mWtsgbch ಪತ್ರಿಕಾ ಸಂಸ್ಥೆಯೊಂದರ ಉದ್ಯೋಗಿಯ ವಾಟ್ಸ್ಯಾಪ್‌ ಖಾತೆಯನ್ನು ಹ್ಯಾಕ್ ಮಾಡಿದ ಸೈಬರ್ ವಂಚಕರು ಅವರ ಸಂಪರ್ಕ ಪಟ್ಟಿಯಲ್ಲಿದ್ದ ಅವರ ಸ್ನೇಹಿತರಿಗೆ ತುರ್ತು ಸಂದೇಶ ರವಾನಿಸಿ ತಾನು ಕಷ್ಟದಲ್ಲಿದ್ದು, ಯುಪಿಐ ನಂಬರ್‌ ಸ್ಟ್ರಕ್‌ ಆಗಿದೆ ಎಂದು ನಂಬಿಸುವಂತೆ ಸಂದೇಶ ಕಳುಹಿಸಿ ಹಣ ನೀಡುವಂತೆ ಕೋರಿದ್ದರು. ಆ ಉದ್ಯೋಗಿಯ ಸಂಪರ್ಕದಲ್ಲಿದ್ದ 100ಕ್ಕೂ ಅಧಿಕ ಮಂದಿಗೆ ಈ ಸಂದೇಶ ರವಾನೆ ಆಗಿದ್ದು ಈ ಸಮಯದಲ್ಲಿ ವಂಚನೆಗೆ ಒಳಗಾದ ವ್ಯಕ್ತಿಯ ಮೊಬೈಲ್ ಕಾರ್ಯನಿರ್ವಹಣೆಯೂ ಕೆಲವು ಗಂಟೆ ಕಾಲ ಕಾರ್ಯಾಚರಣೆಯನ್ನೇ ನಿಲ್ಲಿಸಿತ್ತು. ವಾಟ್ಸ್ಯಾಪ್‌ ನಂಬರ್‌ ಹ್ಯಾಕ್ ಮಾಡಿ ಅವರದೇ ನಂಬರ್‌ನಲ್ಲಿ…

Read More

ಕಾರ್ಕಳ: ಸೂರ್ಯ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ ಹೆಬ್ರಿ ಇದರ ನೂತನ ಕಾರ್ಕಳ ಶಾಖೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಆಗಸ್ಟ್‌ 17 ಭಾನುವಾರ ಬೆಳಗ್ಗೆ 10 ಗಂಟೆಗೆ ಫಾರ್ಮನ್ ಲೋಟಸ್ ಕಾಂಪ್ಲೆಕ್ಸ್, ಜೋಡುರಸ್ತೆ ಕಾರ್ಕಳ ಇಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಹೋಟೆಲ್‌ ಉಷಾದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಸುನೀಲ್ ಕುಮಾರ್ ಉದ್ಘಾಟಿಸುವರು. ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ದೀಪ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್‌.ಕೆ, ಕರ್ನಾಟಕ ರಾಜ್ಯ ತೂಕ ಮತ್ತು ಅಳತೆಗಾರರ ಪರವಾನಗಿದಾರರ ಸಂಘದ ಉಪಾಧ್ಯಕ್ಷ, ಸೂರ್ಯ ಸ್ಕೇಲ್‌ನ ಸೋಮಶೇಖರ ಬಿ.ವಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ಮಾಜಿ ವತ್ತಿಪರ ನಿರ್ದೇಶಕ ಬೋಳ ಸದಾಶಿವ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌, ಹೆಬ್ರಿ ವ್ಯವಸಾಯ ಸೇವಾ…

Read More

ನವದೆಹಲಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 125 ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಅವರು ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ಮುಚ್ಚುವ ಹಂತದಲ್ಲಿರುವ 125 ಸಹಕಾರ ಸಂಘಗಳ ಪೈಕಿ ಅತೀ ಹೆಚ್ಚು 28 ಸಂಘಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿವೆ. ಹಾಸನದಲ್ಲಿ 13 ಸಂಘಗಳು, 12 ಸಂಘಗಳು ಬೆಳಗಾವಿಯಲ್ಲಿ ಇವೆ. ರಾಜ್ಯದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 64 ಸಂಘಗಳು ಈಗ ಕಾರ್ಯಾಚರಿಸುತ್ತಿಲ್ಲ ಎಂದು ಅಮಿತ್ ಷಾ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತಾ ಹೇಳಿದರು. ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ 428 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೋಂದಣಿ ಆಗಿದೆ. ಈ ಪೈಕಿ 187 ಸಂಘಗಳು ಬೆಳಗಾವಿಯೊಂದರಲ್ಲೇ ನೋಂದಣಿ ಆಗಿದೆ ಎಂದು ಅವರು ಲೋಕಸಭೆಯಲ್ಲಿ ರಾಯಚೂರು ಸಂಸದ ಕುಮಾರ ನಾಯಕ ಕೇಳಿದ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಸಭೆಯಲ್ಲಿ ಮಾರ್ಗದರ್ಶನ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್‌ನ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ ಹೆಚ್ಚಿನ ರೀತಿಯಲ್ಲಿ ಯೂನಿಯನ್ ಮೂಲಕ ಎಲ್ಲಾ ಸಹಕಾರಿ ಸಂಘಗಳಿಗೆ ಗುಣಮಟ್ಟದ ತರಬೇತಿ ಶಿಕ್ಷಣ ಒದಗಿಸಿ ಸಂಘಗಳ ಆಡಳಿತ ವ್ಯವಸ್ಥೆ ಸುಧಾರಿಸಲು ಸಲಹೆ ನೀಡಿದರು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷತೆ ವಹಿಸಿದ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಯೂನಿಯನ್‌ನ ವಾರ್ಷಿಕ ವರದಿ ಮಂಡಿಸಿ ಮಾತನಾಡಿ ಈ ವರ್ಷ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಆಗಿರುವುದರಿಂದ ಯೂನಿಯನ್ ಮುಖಾಂತರ ಉತ್ತಮ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ಎಲ್ಲಾ ಸಹಕಾರಿ ಸಂಘಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಯೋಜನೆ ಪಡೆಯಬೇಕು ಎಂದು ತಿಳಿಸಿದರು. 2024-25ನೇ ಸಾಲಿನಲ್ಲಿ 7.33 ಲಕ್ಷ ರೂ. ಲಾಭಾಂಶ ಬಂದಿದೆ. ಈ ವರ್ಷ ಯೂನಿಯನ್ನಿನ…

Read More

ಮೂಡುಬಿದಿರೆ: 109ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್‌ ಸೊಸೈಟಿಯು 2024-25ನೇ ಸಾಲಿನಲ್ಲಿ 57.33 ಕೋಟಿ ರೂ. ಆದಾಯದೊಂದಿಗೆ 10.42 ಕೋಟಿ ರೂ.ಗೂ ಅಧಿಕ ಲಾಭ ಗಳಿಸಿದ್ದು ತಮ್ಮ ಸಂಸ್ಥೆಯ ಸದಸ್ಯರಿಗೆ ಸತತ 25ನೇ ವರ್ಷವೂ ಶೇ.25 ಡಿವಿಡೆಂಡ್ ನೀಡಿದೆ. https://chat.whatsapp.com/EbVKVnWB6rlHT1mWtsgbch ಮೂಡುಬಿದಿರೆ ಸ್ಕೌಟ್ಸ್‌ ಆ್ಯಂಡ್ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಈ ವಿಷಯ ತಿಳಿಸಿದರು. ಸದಸ್ಯರ ನಂಬಿಕೆ, ವಿಶ್ವಾಸಾರ್ಹತೆಯ ನೆಲೆಯಲ್ಲಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಬದ್ಧತೆಯ ಸೇವೆಯಿಂದಾಗಿ ‘ನಮ್ಮ ಸೊಸೈಟಿʼ ಎಂಬ ಅಭಿಮಾನಕ್ಕೆ ಪಾತ್ರವಾಗಿದೆ ಎಂದು ಅವರು ಹೇಳಿದರು. ಸುದರ್ಶನ ಭಟ್ ಲೆಕ್ಕ ಪರಿಶೋಧನಾ ವರದಿ, ಲಾಭಾಂಶ ವಿಂಗಡಣೆ ವರದಿ ಮಂಡಿಸಿದರು. ಮಂಜುನಾಥ ಎಸ್. ಇವರು 2024-25ನೇ ಸಾಲಿನ ಬಜೆಟ್‌ಗಿಂತ ಜಾಸ್ತಿ ಖರ್ಚಾದ ಐವೇಜುಗಳ ಮಂಜೂರು, ಸಂತೋಷ್ ನಾಯ್ಕ 2025-26ನೇ ಸಾಲಿನ ಬಜೆಟ್ ಮಂಡನೆ ಕಲಾಪ ನಡೆಸಿಕೊಟ್ಟರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ…

Read More

ನವದೆಹಲಿ: ಕೇಂದ್ರ ಸಹಕಾರ ಸಚಿವಾಲಯದ ಮಹತ್ವಾಕಾಂಕ್ಷೆಯ ಸಹಕಾರ್‌ ಟ್ಯಾಕ್ಸಿ ಯೋಜನೆಗೆ ಪೂರಕ ಪ್ರೋತ್ಸಾಹ ಲಭಿಸಿದ್ದು ತ್ವರಿತ ಪ್ರಗತಿಯತ್ತ ದಾಪುಗಾಲಿಟ್ಟಿದೆ. ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಸಹಕಾರ್ ಟ್ಯಾಕ್ಸಿ ಭಾರತದ ಮೊದಲ ದೊಡ್ಡ-ಪ್ರಮಾಣದ, ಚಾಲಕ-ಮಾಲೀಕತ್ವದ ರೈಡ್-ಹೇಲಿಂಗ್ ವೇದಿಕೆ ಪ್ರಾರಂಭಿಸುವತ್ತ ಮುನ್ನಡೆಯುತ್ತಿದೆ. https://chat.whatsapp.com/EbVKVnWB6rlHT1mWtsgbch ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ದ ಬೆಂಬಲದೊಂದಿಗೆ ಮತ್ತು ಅಮುಲ್, ಎನ್‌ಎಎಫ್‌ಇಡಿ, ನಬಾರ್ಡ್‌, ಇಫ್ಕೋ, ಕಿಭ್ಕೋ, ಎನ್‌ಡಿಡಿಬಿ ಮತ್ತು ಎನ್‌ಸಿಇಎಲ್‌ನಂತಹ ಪ್ರಮುಖ ಸಹಕಾರಿ ಸಂಸ್ಥೆಗಳಿಂದ ಬೆಂಬಲಿತವಾದ ಈ ಸಹಕಾರಿಯು ಆರಂಭದಲ್ಲಿ ದೆಹಲಿ, ಉತ್ತರ ಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದಾದ್ಯಂತ ಕಾರ್ಯನಿರ್ವಹಿಸಲಿದೆ. ಸುಮಾರು 200 ಚಾಲಕರು ಸಹಕಾರ್‌ ಟ್ಯಾಕ್ಸಿಯಲ್ಲಿ ನೋಂದಣಿ ಮಾಡಿದ್ದಾರೆ. ನಾಲ್ಕು ರಾಜ್ಯಗಳಿಂದ ತಲಾ 50 ಚಾಲಕರು ಮತ್ತು ಸಹಕಾರಿಯು ತನ್ನ ಜಾಲವನ್ನು ವಿಸ್ತರಿಸಲು ಇತರ ಸಹಕಾರಿ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ವರದಿಯೊಂದರ ಪ್ರಕಾರ, ಪ್ರವರ್ತಕರು ಈಗಾಗಲೇ 80 ಕೋಟಿ ರೂ. ಪಾವತಿಸಲು ಬದ್ಧರಾಗಿದ್ದಾರೆ. ಉಬರ್ ಮತ್ತು ಓಲಾದಂತಹ ಖಾಸಗಿ ವ್ಯವಸ್ಥೆಗೆ ವ್ಯತಿರಿಕ್ತವಾಗಿ, ಸಹಕಾರ್ ಟ್ಯಾಕ್ಸಿಯನ್ನು ಚಾಲಕರು…

Read More

ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್ ಅಭಿಪ್ರಾಯ ಹಳೆಯಂಗಡಿ: ಸಹಕಾರಿ ಚಳವಳಿ ಕರಾವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಚಳವಳಿಯನ್ನು ಪ್ರಾರಂಭಿಸಿ ಇಂದು ಸಹಕಾರಿ ರಂಗವು ಬಲಿಷ್ಠವಾಗಿ ಇರಬೇಕಾದರೆ ಸಹಕಾರಿ ಪಿತಾಮಹ ದಿ। ಮೊಳಹಳ್ಳಿ ಶಿವರಾಯರೇ ಕಾರಣ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಎಚ್.ವಸಂತ ಬೆರ್ನಾಡ್ ಹೇಳಿದರು. ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಸೋಮವಾರ ಮೊಳಹಳ್ಳಿ ಶಿವರಾಯರ ೧45ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಪಾವಂಜೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ.ಸೂರ್ಯಕುಮಾರ ಅವರು ಮುಖ್ಯ ಅತಿಥಿಯಾಗಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಬ್ಯಾಂಕ್‌ನ ನಿರ್ದೇಶಕರಾದ ಉಮಾನಾಥ್ ಜೆ.ಶೆಟ್ಟಿಗಾರ್, ನವೀನ್ ಸಾಲ್ಯಾನ್ ಪಂಜ, ಶಾಖಾ ಪ್ರಬಂಧಕರಾದ ಪ್ರಜ್ಞಾಶ್ರೀ, ಅಭಿಷ್ಠಾ ಜೈನ್, ಸಿಬ್ಬಂದಿ ಸಿತಾರ ಕೋಟ್ಯಾನ್, ಪ್ರತೀಕ್ ಪಿ., ಅಕ್ಷಯ್, ನಂದಿತಾ ವಿ.ಪದ್ಮಶಾಲಿ, ರೇಷ್ಮಾ ಕುಮಾರಿ, ವಿನಿತಾ ವಿಲ್ಮಾ ಕೈರನ್ನ, ಪ್ರಕಾಶ್ಚಂದ್ರ…

Read More

ಮೊಳಹಳ್ಳಿ ಶಿವರಾವ್‌ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿಪ್ರಾಯ ಮಂಗಳೂರು: ಮೊಳಹಳ್ಳಿ ಶಿವರಾವ್‌ ಜನ್ಮದಿನಾಚರಣೆ ಅಂಗವಾಗಿ ಸಹಕಾರಿಗಳು ಇಂದು ತೆಗೆದುಕೊಂಡ ಪ್ರಮಾಣವಚನದಲ್ಲಿ ಬೋಧಿಸಿದಂತೆ ಸಹಕಾರಿಗಳು ನಡೆದುಕೊಂಡರೆ ದೇಶದಲ್ಲೇ ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯವಿದೆ. ಕರಾವಳಿ ಭಾಗದಲ್ಲಿ ಅದರಲ್ಲೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿ ತಳವೂರಲು ಕರಾವಳಿ ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್‌ ಅವರು ಹಾಕಿಕೊಟ್ಟ ಗಟ್ಟಿ ಅಡಿಪಾಯ ಕಾರಣ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಕರ್ನಾಟಕ ರಾಜ್ಯ  ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಹೇಳಿದರು. https://chat.whatsapp.com/EbVKVnWB6rlHT1mWtsgbch ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ದಿ.ಮೊಳಹಳ್ಳಿ ಶಿವರಾವ್‌ ಅವರ 145ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊಳಹಳ್ಳಿ ಶಿವರಾವ್‌ ಅವರು, ಸಹಕಾರ ಕ್ಷೇತ್ರವಲ್ಲದೆ ಶಿಕ್ಷಣ ಹಾಗೂ ಸ್ಥಳೀಯಾಡಳಿತ ಕ್ಷೇತ್ರಕ್ಕೂ ಕೊಡುಗೆ ಸಲ್ಲಿಸಿದ್ದಾರೆ. ಆ ಕ್ಷೇತ್ರದಲ್ಲೂ ಅನೇಕರನ್ನು ಬೆಳೆಸಿದ್ದಾರೆ. ಆದರೆ ಅವರ ಹೆಸರನ್ನು…

Read More

ಮಂಗಳೂರು: ಸಹಕಾರ ಎಂಬ ಶಬ್ಧದ ಹಿಂದೆ ಬಹಳಷ್ಟು ಅರ್ಥವಿದೆ. ಯಾವುದೇ ಕೆಲಸವಾಗಲಿ ಒಬ್ಬರಿಗೊಬ್ಬರು ಹೆಗಲಿಗೆ ಹೆಗಲು ಜೋಡಿಸಿ ದುಡಿಯುವುದೇ ಸಹಕಾರದ ತತ್ವ. ಒಂದು ಕಾಲದಲ್ಲಿ ನಮ್ಮ ಹಿರಿಯರು ಕೃಷಿ ಕೆಲಸ ಮಾಡುವಾಗ ಹೊಲ -ಗದ್ದೆಗಳಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುತ್ತಿದ್ದರು. ಒಂದು ಮನೆಯವರು ಕೃಷಿ ಕೆಲಸದಲ್ಲಿ ತೊಡಗಿದರೆಂದರೆ ಅಕ್ಕಪಕ್ಕದ ಮನೆಯವರು ಅವರಿಗೆ ಜೊತೆಯಾಗುತ್ತಿದ್ದರು. ಸಿಗುವ ಫಸಲನ್ನು ಹಂಚಿ ತಿನ್ನುವ ಕಾಲವದಾಗಿತ್ತು. ಇದುವೇ ಸಹಕಾರ ತತ್ವದ ಮೂಲವಾಗಿತ್ತು. ಈ ತತ್ವದ ಮೂಲವನ್ನೇ ಹಿಡಿದುಕೊಂಡು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಮಹಾನ್‌ ಚೇತನವೊಂದರ ಜನ್ಮವಾಗಿತ್ತು. ಅವರೇ ಕರಾವಳಿ ಭಾಗದಲ್ಲಿ ಸಹಕಾರ ತತ್ವದ ಮಂತ್ರವನ್ನು ಊರಿಂದೂರಿಗೆ ಪಸರಿಸಿದ ಮಹಾನ್‌ ಚೇತನ, ತಮ್ಮ ಸರ್ವಸ್ವವನ್ನೂ ಸಹಕಾರ ಕ್ಷೇತ್ರದ ಏಳಿಗೆಗೆ ಅರ್ಪಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಪಿತಾಮಹ ಮೊಳಹಳ್ಳಿ ಶಿವರಾಯರು. https://chat.whatsapp.com/EbVKVnWB6rlHT1mWtsgbch ಮೊಳಹಳ್ಳಿ ಶಿವರಾಯರು ಕರಾವಳಿ ಭಾಗದಲ್ಲಿ ಸಹಕಾರ ಚಳುವಳಿಯ ಹರಿಕಾರರು. ಸಹಕಾರ ತತ್ವ, ಸಹಕಾರ ಮಂತ್ರವನ್ನು ತನ್ನ ಜೀವಿತಾವಧಿಯ ಕೊನೆಯವರೆಗೂ…

Read More

ಎಂಸಿಸಿ ಬ್ಯಾಂಕ್‌ ಬೈಂದೂರು ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್‌ ಕುವೆಲ್ಲೋ ಅಭಿಪ್ರಾಯ ಬೈಂದೂರು: ಎಂಸಿಸಿ ಬ್ಯಾಂಕ್‌ ಜನರಲ್ಲಿ ಜಾತಿ, ಧರ್ಮ, ಭೇದ ನೋಡದೆ ತಮ್ಮ ಗ್ರಾಹಕರಿಗೆ ವಿಶೇಷ ಆದ್ಯತೆ ನೀಡುತ್ತಿದ್ದು ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ನಂಬಿಕೆ, ಪ್ರೀತಿ, ವಿಶ್ವಾಸ ಗಳಿಸಿ ಆದರ್ಶ ಬ್ಯಾಂಕ್‌ ಆಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಹೋಲಿಕ್ರಾಸ್‌ ಚರ್ಚ್‌ನ ಧರ್ಮಗುರು ವಂದನೀಯ ವಿನ್ಸೆಂಟ್‌ ಕುವೆಲ್ಲೋ ಹೇಳಿದರು. ಬೈಂದೂರಿನಲ್ಲಿ ಭಾನುವಾರ ಎಂಸಿಸಿ ಬ್ಯಾಂಕಿನ ನೂತನ ೨೦ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್‌ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿ, 113 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಗ್ರಾಮೀಣ ಪ್ರದೇಶಗಳಲ್ಲಿ ತನ್ನ ಶಾಖೆಗಳನ್ನು ಆರಂಭಿಸುವ ಮೂಲಕ ಜನರ ಬಳಿಗೆ ಹೋಗಿ ಸೇವೆ ಮಾಡುತ್ತಿದೆ. ಕೇವಲ ಲಾಭದ ದೃಷ್ಟಿಗಿಂತ ಮುಖ್ಯವಾಗಿ ಸೌಹಾರ್ದ, ಸಾಮರಸ್ಯ ಜೀವನದ ತತ್ವಗಳನ್ನು ಅಳವಡಿಸಿಕೊಂಡು ಸೇವೆಗೆ ಹೆಚ್ಚು ಮಹತ್ವ…

Read More