Author: admin
ಉಡುಪಿ ಸಿಂಡಿಕೇಟ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಯುನಿಗ್ಸ್ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಪ್ರಾರಂಭ
ಉಡುಪಿ: ಡಿಜಿಟಲ್ ಪರಿವರ್ತನೆಯತ್ತ ಇನ್ನೊಂದು ಹೆಜ್ಜೆ ಇಟ್ಟಿರುವ ಉಡುಪಿ ಸಿಂಡಿಕೇಟ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ತನ್ನ ನೂತನ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಯುನಿಗ್ಸ್ (UNIGS) ಅನ್ನು ಆಗಸ್ಟ್ 1, 2025ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರ ಮೂಲಕ ಸದಸ್ಯರಿಗೆ ಸುಲಭ, ಸುರಕ್ಷಿತ ಹಾಗೂ ಬಳಕೆದಾರ ಸ್ನೇಹಿ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಂತಾಗಿದೆ. https://chat.whatsapp.com/EbVKVnWB6rlHT1mWtsgbch ಈ ಹೊಸ ಯುನಿಗ್ಸ್ ಆಪ್ನ ಮೂಲಕ ಸದಸ್ಯರು ತಮ್ಮ ಖಾತಾ ವಿವರಗಳನ್ನು ನೇರವಾಗಿ ಮೊಬೈಲ್ನಲ್ಲಿ ನೋಡಬಹುದಾಗಿದೆ. ಈ ಆಪ್ನಲ್ಲಿ ರಿಯಲ್-ಟೈಂ ಬ್ಯಾಲೆನ್ಸ್ ಎಂಕ್ವೈರಿ, ವ್ಯವಹಾರ ಇತಿಹಾಸ, ತಕ್ಷಣದ ನವೀಕರಣಗಳಂತೆ ಅನೇಕ ವೈಶಿಷ್ಟ್ಯಗಳಿವೆ. ಜೊತೆಗೆ ಸದಸ್ಯರು ಮಹತ್ವದ ಸೂಚನೆಗಳನ್ನು ಪಡೆಯಬಹುದಾಗಿದ್ದು, ಗೂಗಲ್ ಪೇ ಮತ್ತು ಫೋನ್ಪೇಯಂತಹ ಪ್ಲಾಟ್ ಫಾರ್ಮ್ಗಳಿಂದ ನೇರವಾಗಿ ತಮ್ಮ ಕೋ-ಆಪರೇಟಿವ್ ಖಾತೆಗೆ ಹಣ ವರ್ಗಾಯಿಸಬಹುದಾಗಿದೆ. ಈ ಆಪ್ ಅನ್ನು ಈಗ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಆ್ಯಪ್ ಸ್ಟೋರ್ನಲ್ಲಿ ಡೌನ್ಲೋಡ್ ಮಾಡಬಹುದಾಗಿದೆ. ಸಂಸ್ಥೆಯ ನಿರ್ವಹಣಾ ಮಂಡಳಿ ಈ ಯೋಜನೆಯು…
ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್ನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್ 3ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಬೈಂದೂರಿನ ಹೋಲಿಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಲೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಸಿಯಲ್ ಸ್ಕೂಲ್ನ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ.ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಗೌರವ…
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಆರನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ಅಶಕ್ತರಿಗೆ ವೀಲ್ಚೇರ್ ಕೊಡುಗೆ ನೀಡಲು ಉದ್ದೇಶಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಮಂಗಳೂರು ತಾಲೂಕಿನ ಆರ್ಥಿಕವಾಗಿ ಹಿಂದುಳಿದ, ಸ್ವತಂತ್ರವಾಗಿ ನಡೆದಾಡಲೂ ತೀವ್ರ ತೊಂದರೆ ಅನುಭವಿಸುತ್ತಿರುವ ಹಾಗೂ ಸ್ವಂತ ಹಣದಲ್ಲಿ ಕೊಳ್ಳಲು ಅಶಕ್ತರಾಗಿರುವವರಿಗೆ ವೀಲ್ಚೇರ್ಗಳನ್ನು ನೀಡಲಾಗುತ್ತಿದೆ. ಅವಶ್ಯಕತೆ ಇದ್ದವರು ಆಗಸ್ಟ್ 15ರೊಳಗೆ ಸೊಸೈಟಿಯನ್ನು ಸಂಪರ್ಕಿಸಬಹುದು. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಗುರುರಾಜ್ ತಿಳಿಸಿದ್ದಾರೆ. ಸಂಪರ್ಕಿಸಲು ಮೊಬೈಲ್ ನಂಬರ್: 9845032598. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
2025ರ ಆಗಸ್ಟ್ 1ರಿಂದಲೇ ಅನ್ವಯ ನವದೆಹಲಿ: 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ತಿದ್ದುಪಡಿ ನಿಯಮದ ಪ್ರಕಾರ ಇನ್ಮುಂದೆ ಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಗರಿಷ್ಠ ಅವಧಿಯನ್ನು 10 ವರ್ಷಕ್ಕೆ ನಿಗದಿಪಡಿಸಿ ಭಾರತ ಸರ್ಕಾರ ಪ್ರಕಟಣೆ ಹೊರಡಿಸಿದೆ. https://chat.whatsapp.com/EbVKVnWB6rlHT1mWtsgbch ಕಾಯ್ದೆಯ ಸೆಕ್ಷನ್ 10A ಅನ್ನು ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸಲಾಗಿದ್ದು, ಅದರ ಪ್ರಕಾರ ಯುಸಿಬಿಯ ನಿರ್ದೇಶಕರು ಹತ್ತು ವರ್ಷಗಳನ್ನು ಮೀರಿದ ಅವಧಿಗೆ ನಿರಂತರವಾಗಿ ಅಧಿಕಾರ ವಹಿಸಿಕೊಳ್ಳುವಂತಿಲ್ಲ. ಸರ್ಕಾರವು ಹೊರಡಿಸಿದ ಪ್ರಕಟಣೆಯ ಪ್ರಕಾರ ಈ ತಿದ್ದುಪಡಿ 2025 ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದೆ. ನಿರ್ದೇಶಕರಾಗಿ ನಿರಂತರ 10 ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಮತ್ತೆ ಸ್ಪರ್ಧಿಸಲು ಅವಕಾಶವಾಗುವಂತೆ ಕುರಿತು ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ. ಈ ಬಗ್ಗೆ ಪಟ್ಟಣ ಸಹಕಾರಿ ಬ್ಯಾಂಕುಗಳು ತಮ್ಮ ಉಪ-ಕಾನೂನುಗಳನ್ನು ತಿದ್ದುಪಡಿ ಮಾಡಲು ಅನುವು ಮಾಡಿಕೊಡಲು ಆರ್ಬಿಐ ವಿವರವಾದ ಮಾರ್ಗಸೂಚಿಗಳನ್ನು ಹೊರತರಬೇಕಿದೆ. ಕಾನೂನು ತಜ್ಞರ ಪ್ರಕಾರ ಆಗಸ್ಟ್ 1, 2025ರ ಮೊದಲು ಹತ್ತು ವರ್ಷಗಳನ್ನು ಪೂರ್ಣಗೊಳಿಸಿದ ಯಾವುದೇ ನಿರ್ದೇಶಕರಿಗೆ…
ಕೃಷ್ಣಾಪುರದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ನಿಕಟಪೂರ್ವ ಕಾರ್ಪೊರೇಟರ್ ಲಕ್ಷ್ಮೀ ಶೇಖರ್ ದೇವಾಡಿಗ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ನಿರಂತರವಾಗಿ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ. ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಿರುವುದು ಶ್ಲಾಘನೀಯ. ಹೆಣ್ಣುಮಕ್ಕಳು ಕುಟುಂಬ ಸಾಗಿಸಲು ಆರ್ಥಿಕ ಶಕ್ತಿಯಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬೆನ್ನೆಲುಬಾಗಿ ನಿಂತಿದೆ ಎಂದು ನಿಕಟಪೂರ್ವ ಕಾರ್ಪೊರೇಟರ್ ಲಕ್ಷ್ಮೀ ಶೇಖರ್ ದೇವಾಡಿಗ ಹೇಳಿದರು. https://chat.whatsapp.com/EbVKVnWB6rlHT1mWtsgbch ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಕೃಷ್ಣಾಫುರ ಯುವಕ ಮಂಡಲ, ಯುವತಿ ಮಂಡಲ, ವನಿತಾ ಸೇವಾ ಸಮಾಜ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೃಷ್ಣಾಪುರ-ಕಾಟಿಪಳ್ಳ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಕೃಷ್ಣಾಪುರ ಯುವಕ ಮಂಡಲದ ಗೌರವಾಧ್ಯಕ್ಷ ಪ್ರಶಾಂತ್ ಮುಡಾಯಿಕೋಡಿ ಮಾತನಾಡಿ ಮನುಷ್ಯರಾಗಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್ ಅವರ 145ನೇ ಜನ್ಮದಿನ ಆಚರಣೆ ಕಾರ್ಯಕ್ರಮ ಆಗಸ್ಟ್ 4ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಮಂಗಳೂರು ಕೊಡಿಯಾಲ್ಬೈಲ್ನಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಉದಯ ಕುಮಾರ್ ಇರ್ವತ್ತೂರು ಉಪನ್ಯಾಸ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಹೊರತರಲಿರುವ ಕರಾವಳಿ ಸಹಕಾರಿ ಮಾಸಪತ್ರಿಕೆಯನ್ನು ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಎಸ್ಸಿಡಿಸಿಸಿ ಬ್ಯಾಂಕ್…
ನಾಲ್ಕು ದಶಕಗಳ ಅಪಾರ ಅನುಭವದ ಡಾ.ಉದಯಶಂಕರ್ ಅವಸ್ಥಿ ಸ್ಥಾನದಲ್ಲಿ ಜವಾಬ್ದಾರಿ ನವದೆಹಲಿ: ಇಫ್ಕೋ (ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ)ಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಜೆ ಪಟೇಲ್ ಅವರನ್ನು ನೇಮಿಸಲಾಗಿದೆ. ಇವರು ಇಫ್ಕೋದಲ್ಲಿ ನಾಲ್ಕು ದಶಕಗಳ ಕಾಲ ವ್ಯವಸ್ಥಾಪಕ ನಿರ್ದೇಶಕರಾಗಿ ಅಪಾರ ಅನುಭವ ಹೊಂದಿದ್ದ ಡಾ.ಉದಯಶಂಕರ್ ಅವಸ್ಥಿ ಅವರ ಸ್ಥಾನವನ್ನು ತುಂಬಲಿದ್ದಾರೆ. https://chat.whatsapp.com/EbVKVnWB6rlHT1mWtsgbch ವಿಶ್ವದ ಪ್ರಮುಖ ರಸಗೊಬ್ಬರ ಸಹಕಾರಿ ಸಂಸ್ಥೆ ಎನಿಸಿರುವ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ) ನಲ್ಲಿ ಸುಮಾರು ನಾಲ್ಕು ದಶಕಗಳ ವೃತ್ತಿಜೀವನದ ಅನುಭವ ಹೊಂದಿದ್ದ ಡಾ.ಅವಸ್ಥಿ ಜುಲೈ 31ರಂದು ನಿವೃತ್ತರಾಗಿದ್ದು ಅವರ ಜಾಗಕ್ಕೆ ಕೆ.ಜೆ ಪಟೇಲ್ ಹೊಸ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕವಾಗಿದೆ. ಇಫ್ಕೋ ಅಧ್ಯಕ್ಷ ದಿಲೀಪ್ಭಾಯ್ ಸಂಘಾನಿ ಅವರು ಗುರುವಾರ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇಫ್ಕೋದ ನೂತನ ಎಂ.ಡಿ ಅವರ ಆಯ್ಕೆಯನ್ನು ಘೋಷಿಸಿದರು. ಕೆ.ಜೆ ಪಟೇಲ್ ರಸಗೊಬ್ಬರ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಇದರಿಂದ ಅವರು ಇಫ್ಕೋದ ನಾವೀನ್ಯತೆ, ರೈತ…
ಬಜ್ಪೆ: ಇಲ್ಲಿನ ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಮಂಗಳೂರು ಶಾಖೆಯಲ್ಲಿ ಇ ಸ್ಟ್ಯಾಂಪ್ ಸೌಲಭ್ಯದ ಉದ್ಘಾಟನಾ ಸಮಾರಂಭವು ಆಗಸ್ಟ್ 2ರಂದು ಶನಿವಾರ ಬೆಳಗ್ಗೆ 10.30ಕ್ಕೆ ಸ್ಟೇಟ್ಬ್ಯಾಂಕ್ನ ಪಯೋನಿಯರ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೃಷ್ಣಾನಂದ ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಮೋಹನ್ದಾಸ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೋಟರಿ ವಕೀಲ ಇಸ್ಮಾಯಿಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಬಿ.ಕೃಷ್ಣಪ್ಪ) ದ.ಕ. ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ, ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷ ವಿಲಿಯಂ ಇ ಲೋಬೊ, ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್, ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಕಾನೂನು ಸಲಹೆಗಾರ ಸುಕೇಶ್ ಕುಮಾರ್, ಭುವಿ ಭೂಮಾಪನ ಭೂ ದಾಖಲೆಗಳ ಸೇವಾ ಕೇಂದ್ರದ ಜಯಕುಮಾರ್, ವಕೀಲ ಸರ್ಫರಾಜ್, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ಅಧ್ಯಕ್ಷ ಮುಜಾಫರ್ ಅಹಮ್ಮದ್, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ…
ವಿಟ್ಲ: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ವಿಟ್ಲದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಪುಣಚ ಮತ್ತು ಮಂಚಿಯಲ್ಲಿ ಶಾಖೆಗಳನ್ನು ಹೊಂದಿದೆ. 2024-25ನೇ ಆರ್ಥಿಕ ಸಾಲಿನಲ್ಲಿ ಸಂಘವು 98,74,22,869 ರೂ. ವ್ಯವಹಾರ ನಡೆಸಿದ್ದು, 44,41,355 ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಈ ಬಾರಿ ಶೇ.11 ಡಿವಿಡೆಂಡ್ ವಿತರಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಸಂಘವು ಕಳೆದ ಹತ್ತು ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ತರಗತಿ ಪಡೆದಿರುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಭಾರತೀಯ ಸೈನಿಕರಾಗಿ ಸೇವೆಗೈದ ಯೋಧರಾದ ಕ್ಯಾಪ್ಟನ್ ದಾಸಪ್ಪ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಧನಂಜಯ ಗೌಡ ನಾಯೊಟ್ಟು, ಥೋಮಸ್ ಲೋಬೊ, ಉದಯಕುಮಾರ್ ರಾವ್, ಹರೀಶ್ ಶೆಟ್ಟಿ, ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಶೇಖರ ಪರವ,…
ಅಕ್ಟೋಬರ್ನಲ್ಲಿ ಸಂತೆಕಟ್ಟೆಯಲ್ಲಿ 21ನೇ ಶಾಖೆ ಕಾರ್ಯಾರಂಭ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾಹಿತಿ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್ನ ನೂತನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್ 3ರಂದು ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯ ಉದ್ಘಾಟನೆ ಬಗ್ಗೆ ಬುಧವಾರ ಮಂಗಳೂರಿನ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ಎಂಸಿಸಿ ಬ್ಯಾಂಕ್ ಕರ್ನಾಟಕ ರಾಜ್ಯಾದ್ಯಂತ ಕಾರ್ಯವ್ಯಾಪ್ತಿ ಹೊಂದಿದ್ದು, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಚೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ. 20ನೇ ಶಾಖೆ ಬೈಂದೂರಿನಲ್ಲಿ ಮುಂದಿನ ವಾರ ಉದ್ಘಾಟನೆಗೊಳ್ಳಲಿದ್ದು, 21ನೇ ಶಾಖೆ ಅಕ್ಟೋಬರ್ 5ರಂದು ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಪ್ರಸಕ್ತ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕ್ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಕರಾವಳಿಯ ದಕ್ಷಿಣ ಕನ್ನಡ…
