Author: admin
ಬ್ಯಾಂಕ್ ಪ್ರಗತಿಗೆ ಕಾರ್ಯವಿಧಾನ, ಮೂಲಸೌಕರ್ಯ, ತಂತ್ರಜ್ಞಾನವೂ ಮುಖ್ಯ: ಫಾ!ಡೆನಿಸ್ ಡೇಸಾ ಅಭಿಪ್ರಾಯ ಉಡುಪಿ: ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಲ್ಪೆ ಶಾಖೆ ನವೀಕರಣಗೊಂಡಿದ್ದು ಅದರ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಮಲ್ಪೆಯ ಸಿಟಿಜನ್ ಸರ್ಕಲ್ನ ಮೊದಲ ಮಹಡಿಯಲ್ಲಿ ನಡೆಯಿತು. ಕೊಡವೂರು ಕೃಷಿ ಸೇವೆಗಳ ಸಹಕಾರ ಸಂಘ ಲಿಮಿಟೆಡ್ನ ಅಧ್ಯಕ್ಷ ನಾರಾಯಣ ಬಲ್ಲಾಳ್ ನವೀಕರಿಸಿದ ಬ್ಯಾಂಕ್ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ನಾವು ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿದ್ದೇವೆ. ಈ ಬ್ಯಾಂಕಿನಲ್ಲಿ ಸ್ನೇಹಪರ ಮತ್ತು ವೃತ್ತಿಪರ ವ್ಯಕ್ತಿಗಳು ಕೆಲಸ ಮಾಡುತ್ತಿದ್ದಾರೆ. ಕಳೆದ 28 ವರ್ಷಗಳಿಂದ ಈ ಬ್ಯಾಂಕ್ ಜನರಿಗೆ ಸೇವೆ ನೀಡುತ್ತಿದೆ. ‘ಕ್ಯಾಥೋಲಿಕ್’ ಎಂಬ ಹೆಸರು ಸ್ವತಃ ಸಹಾಯಶೀಲ ಮತ್ತು ಸೇವೆಯ ಸಂಕೇತವಾಗಿದೆ. ಇಂದಿನ ಕೆಲವು ಬ್ಯಾಂಕುಗಳಿಗಿಂತ ಭಿನ್ನವಾಗಿ ಕೋ ಆಪರೇಟಿವ್ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತವೆ. ರಾಷ್ಟ್ರೀಕೃತ ಬ್ಯಾಂಕಿನ ಕೆಲವು ಸಿಬ್ಬಂದಿಗೆ ಸ್ಥಳೀಯ ಭಾಷೆ ಮಾತನಾಡಲು ಸಾಧ್ಯವಾಗುವುದಿಲ್ಲ, ಆದರೆ ಈ ಸಂಸ್ಥೆಯ ಸಿಬ್ಬಂದಿ ಸ್ಪಷ್ಟ ಸಂವಹನ ಮತ್ತು ತಿಳುವಳಿಕೆ ಹೊಂದಿದ್ದು ಸಮರ್ಥ ಸಿಬ್ಬಂದಿಯ ಕಾರ್ಯದಿಂದ ಬ್ಯಾಂಕಿನ ನಿರಂತರ…
ಸಹಕಾರ್ ಸಂವಾದದಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಭರವಸೆ ನವದೆಹಲಿ: ಗುಜರಾತ್ ಮತ್ತು ರಾಜಸ್ಥಾನದಲ್ಲಿ ಒಂಟೆ ಸಾಕಣೆದಾರರಿಗೆ ಶುಭ ಸುದ್ದಿಯೊಂದನ್ನು ನೀಡಿರುವ ಕೇಂದ್ರ ಸಹಕಾರ ಸಚಿವ ಒಂಟೆ ಹಾಲಿನ ಔಷಧೀಯ ಮೌಲ್ಯವನ್ನು ಬಳಸಿಕೊಂಡು ಒಂಟೆ ಹಾಲಿಗೆ ಉತ್ತಮ ದರ ನಿಗದಿಪಡಿಸುವಂತೆ ಮಾಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಭರವಸೆ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ‘ಸಹಕಾರ್ ಸಂವಾದ’ ಕಾರ್ಯಕ್ರಮದಲ್ಲಿ ಈ ಮಹತ್ವದ ಘೋಷಣೆ ಮಾಡಿರುವ ಅಮಿತ್ ಷಾ, ಒಂಟೆ ಹಾಲಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಈ ಬಗ್ಗೆ ಈ ಮೇಲಿನ ಎರಡೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಅದರ ಮಾರುಕಟ್ಟೆಯನ್ನು ಉತ್ತೇಜಿಸುವ ಯೋಜನೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದರು. ಸಹಕಾರ ಸಚಿವಾಲಯದ ಈ ಕ್ರಮವು ಒಂಟೆ ಸಾಕುತ್ತಿರುವ ಸಮುದಾಯಗಳ ಆದಾಯ ಹೆಚ್ಚಿಸುವುದು ಮಾತ್ರವಲ್ಲದೆ ಕಡಿಮೆ ಆದಾಯದಿಂದಾಗಿ ಕ್ಷೀಣಿಸುತ್ತಿರುವ ಸ್ಥಳೀಯ ಒಂಟೆ ತಳಿಗಳ ಸಂರಕ್ಷಣೆಯನ್ನು ಬೆಂಬಲಿಸುವ ಗುರಿಯನ್ನೂ ಹೊಂದಿದೆ. ಒಂಟೆ ಹಾಲಿನ ಸಹಕಾರಿ ಸಂಸ್ಥೆಗಳನ್ನು ವೈಜ್ಞಾನಿಕ ಸಂಶೋಧನೆ ಮತ್ತು ಮಾರುಕಟ್ಟೆ…
ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮನದಾಳದ ಮಾತು ನವದೆಹಲಿ: ಗೃಹ ಸಚಿವಾಲಯವನ್ನು ಮುನ್ನಡೆಸುವುದಕ್ಕಿಂತ ಸಹಕಾರ ಸಚಿವಾಲಯದ ಸಚಿವನಾಗಿ ಕೆಲಸ ಮಾಡುತ್ತಿರುವುದು ಹೆಚ್ಚು ತೃಪ್ತಿ ತಂದುಕೊಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಮನದಾಳ ವ್ಯಕ್ತಪಡಿಸಿದ್ದಾರೆ. ಸಹಕಾರ ಸಚಿವಾಲಯವನ್ನು ಮುನ್ನಡೆಸುವುದರಲ್ಲಿ ವೈಯಕ್ತಿಕವಾಗಿ ಬಹಳ ಆಳವಾದ ತೃಪ್ತಿ ತಂದುಕೊಟ್ಟಿದೆ, ಇದು ಗೃಹ ಸಚಿವಾಲಯದಲ್ಲಿನ ತಮ್ಮ ಅಧಿಕಾರಾವಧಿಗಿಂತ ಹೆಚ್ಚು ತೃಪ್ತಿಕರವಾಗಿದೆ ಎಂದು ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಅಹಮದಾಬಾದ್ನಲ್ಲಿ ನಡೆದ ‘ಸಹಕಾರ ಸಂವಾದ’ದಲ್ಲಿ ಮಾತನಾಡಿದ ಅಮಿತ್ ಷಾ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪರಂಪರೆಯನ್ನು ಪರಿಗಣಿಸಿ ಗೃಹ ಸಚಿವಾಲಯದ ನೇತೃತ್ವವು ಪ್ರತಿಷ್ಠಿತವಾಗಿದ್ದರೂ, ಸಹಕಾರ ಸಚಿವಾಲಯವು ಬಡವರು, ರೈತರು ಮತ್ತು ಜಾನುವಾರುಗಳಿಗೆ ಹೆಚ್ಚು ನೇರ ಮತ್ತು ಅರ್ಥಪೂರ್ಣ ರೀತಿಯಲ್ಲಿ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಈ ಸಚಿವಾಲಯವು ಆರ್ಥಿಕ ಸೇರ್ಪಡೆ ಮತ್ತು ಸಮುದಾಯ-ಚಾಲಿತ ಅಭಿವೃದ್ಧಿಯ ಮೂಲಕ ತಳಮಟ್ಟದ ಸಬಲೀಕರಣಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಸಹಕಾರ ಸಚಿವಾಲಯದ ಧ್ಯೇಯವು ಸಹಕಾರಿ ಸಂಸ್ಥೆ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುವ…
ಮಂಗಳೂರು: ಶಿಕ್ಷಣ ರಂಗದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಜನಾನುರಾಗಿ ಶಿಕ್ಷಕ, ಸಜ್ಜನ ಸ್ನೇಹಶೀಲ ವ್ಯಕ್ತಿ ಕದ್ರಿ ವಿಶ್ವನಾಥ ಜೋಗಿ (72) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. https://chat.whatsapp.com/EbVKVnWB6rlHT1mWtsgbch ಮೂರು ದಶಕಗಳಿಂದ ಮಂಗಳೂರು ತಾಲೂಕಿನ ಬಲ್ಮಠ, ಕಾವೂರು, ಮೊಂಟೆಪದವು, ಗುರುಪುರ ಸರ್ಕಾರಿ ಕಾಲೇಜುಗಳಲ್ಲಿಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ೨೦೧೪ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಸುಮಾರು ೧೦ ವರ್ಷ ಕಾಲ ಮಂಗಳೂರಿನ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿದ್ದರು. ಇವರ ಅಂತಿಮ ಸಂಸ್ಕಾರ ಕದ್ರಿ ರುದ್ರಭೂಮಿಯಲ್ಲಿ ಗುರುವಾರ ನಡೆಯಿತು. ಇವರ ನಿಧನಕ್ಕೆ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಶೆಣೈ ಮೊದಲಾದವರು ಸಂತಾಪ ಸೂಚಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 20.37 ಲಕ್ಷ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್: ರವೀಂದ್ರ ಕಂಬಳಿ
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನಸಹಕಾರಿ ಮಾರಾಟ ಸಂಘದ 2024-25ನೇ ಸಾಲಿನಲ್ಲಿ 371 ಲಕ್ಷ ರೂ. ವ್ಯವಹಾರ ನಡೆಸಿದ್ದು, 20.37 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ರವೀಂದ್ರ ಕಂಬಳಿ ತಿಳಿಸಿದ್ದಾರೆ. ಮಂಗಳವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಿಸಿದರು. ಸಂಘದ ಪಾಲು ಬಂಡವಾಳ 11.64 ಲಕ್ಷ ರೂ.ಗೂ ಮೀರಿದ್ದು 2,943 ಲಕ್ಷ ರೂ. ಠೇವಣಿ ಹೊಂದಿದೆ. 3,157 ಲಕ್ಷ ರೂ. ದುಡಿಯುವ ಬಂಡವಾಳವಿದ್ದು, ಯಾವುದೇ ಬ್ಯಾಂಕಿನ ಸಾಲವಿಲ್ಲದೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರಿ ಸಂಘದಲ್ಲಿ 2,577 ಲಕ್ಷ ರೂ. ಠೇವಣಿಯನ್ನು ಹೂಡಿದೆ. 536 ಲಕ್ಷ ರೂ. ಹೊರಬಾಕಿ ಸಾಲ ನೀಡಲಾಗಿದೆ ಎಂದು ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಸಂಘವು ಪ್ರಸಕ್ತ ಸಾಲಿನ ಲೆಕ್ಕಪರಿಶೋಧನೆ ವರದಿಯಲ್ಲಿ ‘ಎ’ ವರ್ಗ ಪಡೆದಿದೆ. ಬಿ.ಮೂಡ ಗ್ರಾಮದ ಪೊನ್ನೋಡಿಯಲ್ಲಿ ಸ್ವಂತ ನಿವೇಶನದಲ್ಲಿ ಕೇಂದ್ರ…
ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಒಂದೇ ಕುಟುಂಬದ ಸದಸ್ಯರು ಸ್ಪರ್ಧಿಸುವಂತಿಲ್ಲ: ಚುನಾವಣಾ ಪ್ರಾಧಿಕಾರ ಮಹತ್ವದ ಆದೇಶ
ಸಹಕಾರಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಕೇಂದ್ರ ಸರ್ಕಾರಿ ಕೇಂದ್ರ ಸರ್ಕಾರಿ ನೌಕರರಿಗೂ ಹೊಸ ಮಾರ್ಗಸೂಚಿ ನವದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಕೇಂದ್ರೀಯ ಸಹಕಾರ ಚುನಾವಣಾ ಪ್ರಾಧಿಕಾರ, ಬಹು-ರಾಜ್ಯ ಸಹಕಾರಿ ಸಂಘಗಳ ನಿರ್ದೇಶಕರ ಮಂಡಳಿಗೆ ಒಂದೇ ಕುಟುಂಬದ ಸದಸ್ಯರು ಸ್ಪರ್ಧಿಸುವುದನ್ನು ನಿಷೇಧಿಸಲು ನಿರ್ಧರಿಸಿದೆ. https://chat.whatsapp.com/EbVKVnWB6rlHT1mWtsgbch ಸಹಕಾರ ಸಂಘಗಳಲ್ಲಿ ನ್ಯಾಯಯುತ ಪ್ರಾತಿನಿಧ್ಯ ಮತ್ತು ಪರಿಣಾಮಕಾರಿ ಆಡಳಿತವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮಹತ್ವದ ಕ್ರಮ ತೆಗೆದುಕೊಂಡಿರುವ ಸಹಕಾರಿ ಚುನಾವಣಾ ಪ್ರಾಧಿಕಾರವು ಬಹು-ರಾಜ್ಯ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರ ಮಧ್ಯೆ ನಿಕಟ ಕೌಟುಂಬಿಕ ಸಂಬಂಧಗಳಿಂದ ಉಂಟಾಗಬಹುದಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಒಂದು ಸಹಕಾರ ಸಂಘದ ಹಲವಾರು ನಿರ್ದೇಶಕರು ರಕ್ತ ಸಂಬಂಧಿಗಳಾಗಿದ್ದರೆ, ಅದು ಮಂಡಳಿಯ ಕಾರ್ಯನಿರ್ವಹಣೆಯನ್ನು ದುರ್ಬಲಗೊಳಿಸಬಹುದು ಎಂಬ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಂಡಿದೆ. ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆಯ ಸೆಕ್ಷನ್ 41(6) ರ ಅಡಿಯಲ್ಲಿ ನಿರ್ದೇಶಕರು ಮಂಡಳಿಯ ಸಭೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ, ಅಲ್ಲಿ ನಿರ್ಧಾರಗಳು ಅವರ ಸ್ವಂತ ಹಿತಾಸಕ್ತಿಗಳಿಗೆ ಸಂಬಂಧಿಸಿದ ಒಪ್ಪಂದಗಳು ಅಥವಾ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು. ಸಂಘದ ಸದಸ್ಯರಾದ ಸುಧಾಕರ್ ರಾವ್, ಯೋಗೀಶ್ ಶೆಟ್ಟಿ, ಕುಶಾಲ ಎಸ್.ಕುಕ್ಯಾನ್, ಶಿವಪ್ಪ ಶೆಟ್ಟಿ, ಪೂರ್ಣಿಮಾ ಹಾಗೂ ಸಾರಿಕಾ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸುಧಾಕರ್ ರಾವ್ ಮಾತನಾಡಿ ಪಕ್ಷಿಕೆರೆಯಲ್ಲಿ ಶಾಖೆ ತೆರೆದು ಬ್ಯಾಂಕಿಂಗ್, ವಿಮೆ, ಆರೋಗ್ಯ ಕಾರ್ಡ್ ಈ ಎಲ್ಲಾ ವ್ಯವಸ್ಥೆ ಒಂದೇ ಸೂರಿನಲ್ಲಿ ಕಲ್ಪಿಸಿದಕ್ಕೆ ಸಂಘಕ್ಕೆ ಧನ್ಯವಾದ ಸಲ್ಲಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಹೊಂದಲಿ ಎಂದು ಶುಭ ಹಾರೈಸಿದರು. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಸ್ಥೆಯು 13 ವರ್ಷಗಳಲ್ಲಿ33 ಶಾಖೆಗಳನ್ನುತೆರೆದು, ರೂ. 2,000 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಲು ಗ್ರಾಹಕರೇ ಕಾರಣ. ಸದಸ್ಯರ ಸಹಕಾರದಿಂದ ನಮ್ಮ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ನಮ್ಮ…
ನವದೆಹಲಿ: ಸಹಕಾರಿ ಕ್ಷೇತ್ರವನ್ನು ಕೌಶಲಪೂರ್ಣ ನಾಯಕತ್ವದೊಂದಿಗೆ ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯವು 2025–27ನೇ ಶೈಕ್ಷಣಿಕ ಸಾಲಿಗೆ ಎಂಬಿಎ ಪ್ರವೇಶಾತಿ ಆರಂಭಿಸಿದೆ. ಸಹಕಾರಿ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಅರ್ಥಪೂರ್ಣ ವೃತ್ತಿಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಈ ಕ್ರಮ ಸುವರ್ಣಾವಕಾಶವನ್ನು ಒದಗಿಸಲಿದೆ. https://chat.whatsapp.com/EbVKVnWB6rlHT1mWtsgbch ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯವಾಗಿ ಮೂಡಿಬಂದಿರುವ ತ್ರಿಭುವನ್ ಸಹಕಾರಿ ವಿವಿಯು ಸಾಮೂಹಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುವ ಸಂಸ್ಥೆಗಳನ್ನು ಮುನ್ನಡೆಸಲು ಅಗತ್ಯವಿರುವ ಜ್ಞಾನ, ಮೌಲ್ಯಗಳು ಮತ್ತು ವ್ಯವಸ್ಥಾಪಕ ಕೌಶಲಗಳೊಂದಿಗೆ ಯುವ ವೃತ್ತಿಪರರನ್ನು ಬಲಗೊಳಿಸುವ ಗುರಿಯನ್ನು ಹೊಂದಿದೆ. ಸಹಕಾರಿ ನೀತಿಶಾಸ್ತ್ರ, ಸುಸ್ಥಿರತೆ ಮತ್ತು ತಳಮಟ್ಟದ ನಾವೀನ್ಯತೆಯೊಂದಿಗೆ ಪ್ರಮುಖ ನಿರ್ವಹಣಾ ತತ್ವಗಳನ್ನು ಸಂಯೋಜಿಸಲು ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2025. ಅರ್ಹತಾ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು: irma.ac.in.
ಮಂಗಳೂರು: ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್ ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿ ಪಡೀಲ್ ಬೈರಾಡಿ ಕೆರೆಯ “ಆತ್ಮಶಕ್ತಿ ಸೌಧ”ದಲ್ಲಿ ಜರುಗಿತು. ಸ್ಕೂಟರ್ ಹಸ್ತಾಂತರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನಕರ್ ಕುಲಾಲ್ ನಡೆಸಿಕೊಟ್ಟರು. https://chat.whatsapp.com/EbVKVnWB6rlHT1mWtsgbch ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮತ್ತು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಗೌರವಾಧ್ಯಕ್ಷ ವಾಮನ್ ಕೆ., ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ಧನ…
ಕೋಟ: ಮಂಗಳೂರಿನ ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆ ಪ್ರಯುಕ್ತ ಬಿಲ್ಲಾಡಿ ಗ್ರಾಮದ ಬೂದಾಡಿಯ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನೆ ಹಸ್ತಾಂತರ ಮಾಡಿ ಮಾತನಾಡಿ, ವಿಶ್ವಕರ್ಮ ಸಮಾಜ ಪ್ರಾಮಾಣಿಕತೆ ಹಾಗೂ ಕಠಿಣ ದುಡಿಮೆಗೆ ಹೆಸರುವಾಸಿಯಾಗಿದೆ. ಸಂಸ್ಥೆಯ ಈ ಕಾರ್ಯಕ್ರಮ ಸಮಾಜಕ್ಕೆ ಮಾದರಿ ಎಂದರು. ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಯ ಮನೆ ಪೂರ್ತಿಯಾಗಿ ಬೀಳುವ ಸ್ಥಿತಿಯಲ್ಲಿದ್ದರಿಂದ ಅವರು ಸಂಕಷ್ಟದಲ್ಲಿದ್ದರು. ಈ ಸಂದರ್ಭ ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಸೇರಿ 7,60,000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಯ ನಿರ್ಮಾಣ ಮಾಡಿ ಕೊಡಲಾಗಿದೆ ಎಂದರು. ಶಾಸಕ ಕಿರಣ್ ಕುಮಾರ್ ಕೊಡ್ಲಿ ಶುಭ ಹಾರೈಸಿದರು. ಮನೆಯ ಮಾಲಕರಾದ ಲಲಿತಾ -ಗಣೇಶ್ ಆಚಾರ್ಯ ದಂಪತಿಗೆ ಮನೆ ಹಸ್ತಾಂತರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ…
