Author: admin

ಈ ಹುದ್ದೆ ಅಲಂಕರಿಸಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ನವದೆಹಲಿ: ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ(ಐಸಿಎ)ದ ಯುವ ಸಮಿತಿಯ ಅಧ್ಯಕ್ಷರಾಗಿ ಭಾರತದ ಹರ್ಷ ಸಂಘಾನಿ ಆಯ್ಕೆಯಾಗಿದ್ದಾರೆ. ತನ್ಮೂಲಕ ಭಾರತೀಯರೊಬ್ಬರು ಈ ಹುದ್ದೆ ಅಲಂಕರಿಸಿದ ಮೊದಲಿಗ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಅಂತಾರಾಷ್ಟ್ರೀಯ ಸಹಕಾರಿ ವರ್ಷದ ಅಂಗವಾಗಿ ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ಇತ್ತೀಚೆಗೆ ನಡೆದ ಐಸಿಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಡಿಯಲ್ಲಿ ಸ್ಥಾಪಿಸಲಾದ ಐಸಿಎ ಯುವ ಸಮಿತಿಯು ಯುವ ಸಹಕಾರಿ ನಾಯಕರನ್ನು ಪ್ರತಿನಿಧಿಸುವ ಜಾಗತಿಕ ವಿಷಯಾಧಾರಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸಹಕಾರದ ನೀತಿ ನಿರೂಪಣೆಯಲ್ಲಿ ಯುವ ಧ್ವನಿಗಳ ಪರ ವಕಾಲತ್ತು ವಹಿಸುವುದು, ಸಹಕಾರಿ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಯುವ ವೇದಿಕೆಗಳು ಮತ್ತು ವಿನಿಮಯ ಕಾರ್ಯಕ್ರಮಗಳಂತಹ ಉಪಕ್ರಮಗಳ ಮೂಲಕ ನಾಯಕತ್ವವನ್ನು ಬೆಳೆಸುವುದು ಐಸಿಎ ಸಂಸ್ಥೆಯ ಉದ್ದೇಶವಾಗಿದೆ. ಹರ್ಷ ಸಂಘಾನಿ ಅವರಿಗಿಂತ ಮೊದಲು ಈ ಯುವ ಸಮಿತಿಯ ನೇತೃತ್ವವನ್ನು ಸ್ಪೇನ್ ಮೂಲದ ಅನಾ ಅಗುಯಿರ್ ವಹಿಸಿದ್ದರು. ಅಂತಾರಾಷ್ಟ್ರೀಯ ಸಹಕಾರ ವರ್ಷ…

Read More

ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಎರಡನೇ ಮನೆ ಉಡುಪಿ ಜಿಲ್ಲೆಯ ಬೂದಾಡಿಯಲ್ಲಿ ನಿರ್ಮಾಣ ಸಮಾಜಮುಖಿ ಕೆಲಸದಲ್ಲಿ ಮತ್ತೊಮ್ಮೆ ಮುಂಚೂಣಿಯ ಕೆಲಸ ನಿರ್ವಹಿಸಿದ ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿ ಮಂಗಳೂರು: ಠೇವಣಿ ಸಂಗ್ರಹ, ಸಾಲ ವಿತರಣೆ, ವಿದ್ಯಾರ್ಥಿವೇತನ ನೀಡುವಿಕೆ, ಆರೋಗ್ಯ ತಪಾಸಣೆ, ವನಮಹೋತ್ಸವ, ಪುಸ್ತಕ ವಿತರಣೆ, ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್‌ ಸೊಸೈಟಿಗಳು ಕೂಡ ತಮ್ಮ ವಿಶೇಷ ಕಾರ್ಯಕ್ರಮಗಳಿಗೆ ಮಾನವೀಯ ಸ್ಪರ್ಶ ಹೇಗೆ ಕೊಡಬಲ್ಲವು ಎಂಬುದಕ್ಕೆ ಮಂಗಳೂರಿನ ಎಸ್‌.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿ ಮತ್ತೊಮ್ಮೆ ನಿದರ್ಶನ ಕೊಟ್ಟಿದೆ. ವಿಭಿನ್ನ ಯೋಚನೆ, ಯೋಜನೆಗಳನ್ನು ಕಾರ್ಯಗತಗೊಳಿಸಿದರೆ ಸಮಾಜ ಗುರುತಿಸುವ ಕೆಲಸ ಮಾಡಬಹುದು ಎಂಬುದನ್ನು ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ ಸಾಧಿಸಿ ತೋರಿಸಿದ್ದು, ತಮ್ಮ ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಶುಭ ಸಂದರ್ಭದಲ್ಲಿ ಬಡ ದಂಪತಿಗೆ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ. https://chat.whatsapp.com/EbVKVnWB6rlHT1mWtsgbch ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿಯು ಕ್ರಿಯಾಶೀಲ ವ್ಯವಸ್ಥಾಪನೆ, ದಕ್ಷ…

Read More

ಪುತ್ತೂರು: ಪುತ್ತೂರಿನಲ್ಲಿ ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ ಬಂದಿದ್ದು 2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದ ಕಚೇರಿಯಲ್ಲಿ ಮಂಗಳವಾರ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಶೋಭಾ ಎನ್.ಎಸ್. ಅವರ ಉಪಸ್ಥಿತಿಯಲ್ಲಿ ನಡೆಯಿತು. ನಿರ್ದೇಶಕರಾಗಿ ಅಜಿತ್ ಕುಮಾರ್, ಕೆ.ಸಂಜೀವ ನಾಯಕ್, ಕೆ.ಸಂತೋಷ್ ಕುಮಾರ್, ಚಂದ್ರಶೇಖರ ರಾವ್ ಬಪ್ಪಳಿಗೆ, ನಹುಷ ಪಿ.ವಿ., ಯು.ಪೂವಪ್ಪ, ರಾಜೇಶ್ ಬನ್ನೂರು, ಜಯರಾಜ್ ಯು., ಲೋಕೇಶ್ ಹೆಗ್ಡೆ, ಸುಧಾ ನಾಗೇಶ್ ರಾವ್ ಮತ್ತು ಎಂ.ನಾರಾಯಣ ನಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ಆಯ್ಕೆಯಾದವರನ್ನು ಕಾರ್ಯದರ್ಶಿ ಯತೀಂದ್ರನಾಥ್ ಅಭಿನಂದಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಕಾರ್ಕಳ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ಪ್ರತಿ ವಿದ್ಯಾಸಂಸ್ಥೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಜೋಡುರಸ್ತೆಯ ರಾಜಾಪುರ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಜೆಕಾರು ಪದ್ಮಗೋಪಾಲ ಎಜಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ।ಸುಧಾಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ಕಾಲರ್‌ಶಿಪ್ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ, ಅಗತ್ಯವುಳ್ಳವರಿಗೆ ಕೈಲಾದಷ್ಟು ಸಹಾಯ ಮಾಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಮಾತನಾಡಿ, ಸೊಸೈಟಿಯು ಕಳೆದ 20 ವರ್ಷಗಳಿಂದ ಶಿಕ್ಷಣ, ಆರೋಗ್ಯ ಜತೆಗೆ ಸಮಾಜಮುಖಿ ಕಾರ್ಯಗಳಿಗೆ ಸುಮಾರು ಎರಡು ಕೋಟಿ ರೂ. ಅಧಿಕ ಅನುದಾನ ವ್ಯಯಿಸಿದೆ. ಸಮಾಜದ ಸೇವೆಯ ಜತೆಗೆ ಸೊಸೈಟಿ ಕೂಡ ಅಭಿವೃದ್ಧಿ ಹೊಂದಿದೆ. ವಿದ್ಯಾರ್ಥಿಗಳಿಗೆ ನೀಡಿದ ಪ್ರೋತ್ಸಾಹದಿಂದ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ…

Read More

ಕರ್ನಾಟಕದಲ್ಲಿ ಮೊದಲ ಪ್ರಯೋಗ ಯಶಸ್ವಿ ನವದೆಹಲಿ: ಆಧುನಿಕ ಕಾಲಕ್ಕೆ ತಕ್ಕಂತೆ ಹೊಸ ಹೊಸ ಸೇವೆಗಳ ಮೂಲಕ ಗ್ರಾಹಕಸ್ನೇಹಿಯಾಗಿ ಹೊರಹೊಮ್ಮುತ್ತಿರುವ ಅಂಚೆ ಕಚೇರಿಗಳು ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಡಿಜಿಟಲ್‌ ಸ್ಪರ್ಶ ಕಂಡುಕೊಳ್ಳುತ್ತಿವೆ. ಅಂಚೆ ಕಚೇರಿಗಳಲ್ಲೂ ಮುಂದಿನ ದಿನಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಜಾರಿಗೆ ಬರಲಿದೆ. https://chat.whatsapp.com/EbVKVnWB6rlHT1mWtsgbch ಸದ್ಯ ಅಂಚೆ ಕಚೇರಿಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಜಾರಿಯಲ್ಲಿಲ್ಲ. ನಗದು ವಹಿವಾಟು ಮಾತ್ರವೇ ನಡೆಯುತ್ತಿರುವುದರಿಂದ ಬಹುತೇಕ ಅಂಚೆ ಕಚೇರಿಗಳಲ್ಲಿ ಕೌಂಟರ್‌ಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಚಿಲ್ಲರೆ ಸಮಸ್ಯೆಯೂ ಸಾಮಾನ್ಯವಾಗಿದೆ. ಇವುಗಳಿಂದ ಹೊರಬರಲು ಅಂಚೆ ಇಲಾಖೆ ಮಾಹಿತಿ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿವೆ. ನಿತ್ಯ ಲಕ್ಷಾಂತರ ಜನ ಅಂಚೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದು ಗ್ರಾಮೀಣ ಭಾಗಗಳಲ್ಲಿ ವಿಶೇಷವಾಗಿ ಮಹಿಳೆಯರು ಉಳಿತಾಯ ಖಾತೆಗಳಿಗಾಗಿ ಅಂಚೆ ಕಚೇರಿಗಳನ್ನೇ ಅವಲಂಬಿಸಿದ್ದಾರೆ. ಅಂಚೆ ಕಚೇರಿಗಳಲ್ಲಿ ವರ್ಷದ ಹಿಂದೆ ಪ್ರಾಯೋಗಿಕವಾಗಿ ಡಿಜಿಟಲ್‌ ಪಾವತಿ ವ್ಯವಸ್ಥೆ ಆರಂಭಿಸಲಾಗಿತ್ತಾದರೂ, ನೆಟ್‌ವರ್ಕ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವೈಫಲ್ಯ ಕಂಡಿದ್ದರಿಂದ ಆ ಸೇವೆಯನ್ನು ಹಿಂದೆ ಪಡೆಯಲಾಗಿತ್ತು.…

Read More

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಮತ್ತು ಫೇಮಸ್ ಯೂಥ್ ಕ್ಲಬ್ ತೋಕೂರು ಆಶ್ರಯದಲ್ಲಿ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್‌ ದಕ್ಷಿಣ ಕನ್ನಡ, ರೋಟರಿ ಕ್ಲಬ್‌ ಬೈಕಂಪಾಡಿ, ಪೂಜಾ ಎರೇಂಜರ್ಸ್‌ ಮತ್ತು ಕೇಟರರ್ಸ್‌, ಪೂಜಾ ಫ್ರೆಂಡ್ಸ್‌ ಹಳೆಯಂಗಡಿ, ತೋಕೂರು ಎಸ್‌ಎಸ್‌ ಮ್ಯೂಸಿಕ್, ಸಾರ್ವಜನಿಕ ದಂತ ಆರೋಗ್ಯ ವಿಭಾಗ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ನಿಟ್ಟೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೇಮಸ್‌ ಯೂತ್‌ ಕ್ಲಬ್‌ ಮತ್ತು ಮಹಿಳಾ ಮಂಡಳ ಹತ್ತನೇ ತೋಕೂರು ಹಳೆಯಂಗಡಿ ಇಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಉಚಿತ ದಂತ ಚಿಕಿತ್ಸಾ ಶಿಬಿರ ಭಾನುವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಗೌರವಾಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ನಿರ್ದೇಶಕ ನವೀನ್ ಸಾಲ್ಯಾನ್ ಪಂಜ ಶಿಬಿರದ ಉದ್ಘಾಟನೆ ನೆರವೇರಿಸಿದರು. ಮುಖ್ಯ ಅತಿಥಿ ಎಬಿ ಶೆಟ್ಟಿ ಕಾಲೇಜಿನ ಉಪನ್ಯಾಸಕಿ ಡಾ.ಶಿಲ್ಪಾ ಎಂ ರಾವ್ ಮಾತನಾಡಿ ಯುವ…

Read More

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ|ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ಪ್ರಾಯೋಜಕತ್ವದಲ್ಲಿ ಮುದ್ರಣಗೊಂಡ “ಬಾಳಪಥ” ಡಾ| ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಚಿಕೆ ಬಿಡುಗಡೆ ಹಾಗೂ ಅಮೂಲ್ಯ ಸ್ವಸಹಾಯ ಸಂಘದ ಸದಸ್ಯರ ಸಮ್ಮಿಲನ ಸಮಾರಂಭ ಬಂಟ್ವಾಳ ಬೈಪಾಸ್‌ನಲ್ಲಿರುವ ಸಮಾಜ ಸೇವಾ ಸಹಕಾರಿ ಭವನದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಬೆಂಗಳೂರಿನ ಸಾಮಾಜಿಕ ಧುರೀಣ ಮೋಹನದೇವ ಆಳ್ವ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ದಿ.ಅಮ್ಮೆಂಬಳ ಬಾಳಪ್ಪರು ಬಾಲ್ಯದಿಂದಿಂದಲೇ ಸತ್ಯ, ನಿಷ್ಠರಾಗಿದ್ದರಲ್ಲದೆ ಎಲ್ಲಾ ವರ್ಗದ ಜನರನ್ನು ಪ್ರೀತಿಸಿ ಜನಸ್ನೇಹಿಯಾಗಿದ್ದರು. ಅಮ್ಮೆಂಬಳ ಬಾಳಪ್ಪರು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘವು ಹಲವರ ಬದುಕಿಗೆ ಬೆಳಕಾಗಿದ್ದು, ಸಂಘವು ರಾಜ್ಯವ್ಯಾಪಿಯಾಗಿ ಬೆಳೆಯಲಿ ಎಂದು ಹಾರೈಸಿದರು. ತುಳು ನಮ್ಮ ಮಾತೃಭಾಷೆಯಾದರೆ, ಕನ್ನಡ ಭಾಷೆ ರಾಜ್ಯಕ್ಕೆ ಸಾರ್ವಭೌಮವಾಗಿದ್ದು, ದೇಶದ ಎಲ್ಲಾ ಭಾಷೆಯನ್ನು ಗೌರವಿಸಬೇಕು ಎಂದರು. ಡಾ।ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಅಮ್ಮೆಂಬಳ ಆನಂದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ರಾಣಿ ಅಬ್ಬಕ್ಕ…

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ -ಸೌಮ್ಯ ದಂಪತಿಗಳ ಐದು ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಯ ಆರೋಗ್ಯ ಚಿಕಿತ್ಸೆಯ ವೆಚ್ಚಕ್ಕಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 50 ಸಾವಿರ ರೂ. ಮೊತ್ತದ ನೆರವು ನೀಡಲಾಯಿತು. https://chat.whatsapp.com/EbVKVnWB6rlHT1mWtsgbch ರಕ್ತದ ಕ್ಯಾನ್ಸರ್‌ಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿರುವ ಮನಸ್ವಿಯ ಚಿಕಿತ್ಸೆಗೆ ನೆರವು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಮಗುವಿಗೆ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದ ಜೊತೆಯಲ್ಲಿ ಸಂಘದ ವತಿಯಿಂದ ಒಟ್ಟು 50 ಸಾವಿರ ರೂ. ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ಪೊಡುಂಬ ಮಗುವಿನ ಕುಟುಂಬಕ್ಕೆ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್…

Read More

ಹೊಸ ನಿಯಮದ ಪ್ರಕಾರ ಶೇ.200ರವರೆಗೆ ದಂಡ, ಜೈಲು ಶಿಕ್ಷೆ!! ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಆದಾಯ ಮುಚ್ಚಿಟ್ಟರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡಿತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ.200ರವರೆಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಹೊಸ ಮತ್ತು ಕಠಿಣ ನಿಯಮಗಳನ್ನು ಇಲಾಖೆ ಜಾರಿಗೆ ತಂದಿದ್ದು, ಇದರಿಂದ ಇನ್ಮುಂದೆ, ಸಣ್ಣ ತಪ್ಪುಗಳಿಗೂ ತೆರಿಗೆ ಪಾವತಿದಾರರು ದೊಡ್ಡ ಬೆಲೆ ತೆರಬೇಕಾಗುತ್ತದೆ. https://chat.whatsapp.com/EbVKVnWB6rlHT1mWtsgbch ತೆರಿಗೆದಾರರು ಸುಳ್ಳು ಕಡಿತಗಳನ್ನು (ಡಿಡಕ್ಷನ್‌ಗಳ) ತೋರಿಸಿದರೆ ಅಥವಾ ತಮ್ಮ ಆದಾಯ ಮರೆಮಾಚಿದರೆ ಪಾವತಿಸಬೇಕಾದ ತೆರಿಗೆಯ ಮೇಲೆ ಶೇ.200ರವರೆಗೆ ದಂಡ, ವಾರ್ಷಿಕ ಶೇ.24ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೆ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ನಿಮ್ಮ ಲೆಕ್ಕಪರಿಶೋಧಕರು (ಸಿಎ) ಅಥವಾ ತೆರಿಗೆ ಸಲಹೆಗಾರರು ತಪ್ಪು…

Read More

ತರಬೇತಿ ಶಿಬಿರ ಉದ್ಘಾಟಿಸಿ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್‌ ಹೇಳಿಕೆ ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಲಿ. ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಗುರುವಾರ ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್, ಜಿಲ್ಲೆಯಲ್ಲಿ ಪ್ರತಿದಿನ 4 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ ಮಾಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ವು ಹಾಲು ಉತ್ಪಾದನೆ ಆಗುತ್ತಿದೆ. ಒಕ್ಕೂಟವು ಹೆಸರುವಾಸಿಯಾಗಲು ಕಾರ್ಯನಿರ್ವಾಹಕಾರ ಉತ್ತಮ ಕಾರ್ಯವೈಖರಿ ಕಾರಣ ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ…

Read More