Author: admin

ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ -ಸೌಮ್ಯ ದಂಪತಿಗಳ ಐದು ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಯ ಆರೋಗ್ಯ ಚಿಕಿತ್ಸೆಯ ವೆಚ್ಚಕ್ಕಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 50 ಸಾವಿರ ರೂ. ಮೊತ್ತದ ನೆರವು ನೀಡಲಾಯಿತು. https://chat.whatsapp.com/EbVKVnWB6rlHT1mWtsgbch ರಕ್ತದ ಕ್ಯಾನ್ಸರ್‌ಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿರುವ ಮನಸ್ವಿಯ ಚಿಕಿತ್ಸೆಗೆ ನೆರವು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಮಗುವಿಗೆ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದ ಜೊತೆಯಲ್ಲಿ ಸಂಘದ ವತಿಯಿಂದ ಒಟ್ಟು 50 ಸಾವಿರ ರೂ. ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ಪೊಡುಂಬ ಮಗುವಿನ ಕುಟುಂಬಕ್ಕೆ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್…

Read More

ಹೊಸ ನಿಯಮದ ಪ್ರಕಾರ ಶೇ.200ರವರೆಗೆ ದಂಡ, ಜೈಲು ಶಿಕ್ಷೆ!! ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಆದಾಯ ಮುಚ್ಚಿಟ್ಟರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡಿತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ.200ರವರೆಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಹೊಸ ಮತ್ತು ಕಠಿಣ ನಿಯಮಗಳನ್ನು ಇಲಾಖೆ ಜಾರಿಗೆ ತಂದಿದ್ದು, ಇದರಿಂದ ಇನ್ಮುಂದೆ, ಸಣ್ಣ ತಪ್ಪುಗಳಿಗೂ ತೆರಿಗೆ ಪಾವತಿದಾರರು ದೊಡ್ಡ ಬೆಲೆ ತೆರಬೇಕಾಗುತ್ತದೆ. https://chat.whatsapp.com/EbVKVnWB6rlHT1mWtsgbch ತೆರಿಗೆದಾರರು ಸುಳ್ಳು ಕಡಿತಗಳನ್ನು (ಡಿಡಕ್ಷನ್‌ಗಳ) ತೋರಿಸಿದರೆ ಅಥವಾ ತಮ್ಮ ಆದಾಯ ಮರೆಮಾಚಿದರೆ ಪಾವತಿಸಬೇಕಾದ ತೆರಿಗೆಯ ಮೇಲೆ ಶೇ.200ರವರೆಗೆ ದಂಡ, ವಾರ್ಷಿಕ ಶೇ.24ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೆ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ನಿಮ್ಮ ಲೆಕ್ಕಪರಿಶೋಧಕರು (ಸಿಎ) ಅಥವಾ ತೆರಿಗೆ ಸಲಹೆಗಾರರು ತಪ್ಪು…

Read More

ತರಬೇತಿ ಶಿಬಿರ ಉದ್ಘಾಟಿಸಿ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್‌ ಹೇಳಿಕೆ ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಲಿ. ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಗುರುವಾರ ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್, ಜಿಲ್ಲೆಯಲ್ಲಿ ಪ್ರತಿದಿನ 4 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ ಮಾಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ವು ಹಾಲು ಉತ್ಪಾದನೆ ಆಗುತ್ತಿದೆ. ಒಕ್ಕೂಟವು ಹೆಸರುವಾಸಿಯಾಗಲು ಕಾರ್ಯನಿರ್ವಾಹಕಾರ ಉತ್ತಮ ಕಾರ್ಯವೈಖರಿ ಕಾರಣ ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ…

Read More

ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನ ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕು: ಅನಿಲ್‌ ಲೋಬೊ ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿತು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಈ ಉದಾತ್ತ ಕಾರ್ಯಕ್ಕೆ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ಬಡ ಮಕ್ಕಳು ಮತ್ತು ಆಶ್ರಮದ ನಿವಾಸಿಗಳ ಬಗ್ಗೆ ಔದಾರ್ಯ ಮತ್ತು ಕಾಳಜಿಯನ್ನು ತೋರಿಸಿದ್ದಕ್ಕಾಗಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಹೃದಯಸ್ಪರ್ಶಿ ಕೊಡುಗೆಗಳ ಮೂಲಕ, ಎಂಸಿಸಿ ಬ್ಯಾಂಕ್ ತನ್ನ ಸಹಾನುಭೂತಿ ಮತ್ತು ಸೇವೆಯ ಮೂಲ ಮೌಲ್ಯಗಳನ್ನು ಪ್ರದರ್ಶಿಸಿದೆ. ಸುಮಾರು ಹತ್ತು ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್‌ಬುಕ್‌ಗಳ ವಿತರಣೆ ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಬೆಂಬಲವನ್ನು ನೀಡುವುದಲ್ಲದೆ, ಕೃತಜ್ಞತೆ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪದ್ಮಶಾಲಿ ಸಮಾಜ ಸೇವಾ ಸಂಘ, ಉಲ್ಲಾಳ ಮತ್ತು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ಸೇವಾ ಯುವ ವೇದಿಕೆ, ಉಲ್ಲಾಳ ಹಾಗೂ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ, ಇವುಗಳ ಸಹಕಾರದೊಂದಿಗೆ ಜುಲೈ 6ರಂದು ಉಳ್ಳಾಲದ ಪದ್ಮಶಾಲಿ ಸಮಾಜ ಭವನದಲ್ಲಿ ಬೆಳಗ್ಗೆ 9.30ರಿಂದ 31ನೇ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ. https://chat.whatsapp.com/EbVKVnWB6rlHT1mWtsgbch ಕೆಎಂಸಿ ಅತ್ತಾವರ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಹಿರಿಯ ತಜ್ಞ ಅನುಭವೀ ವೈದ್ಯರುಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಅವಶ್ಯಕತೆ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ಎಸ್ ಗುರುರಾಜ್ ತಿಳಿಸಿದ್ದಾರೆ. ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಮೂಗು, ಗಂಟಲು, ಸ್ತ್ರೀರೋಗ ಚಿಕಿತ್ಸೆ ಇತ್ಯಾದಿ ಚಿಕಿತ್ಸೆಗಳನ್ನು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರದಲ್ಲಿ ಕೆ.ರವಿರಾಜ್ ಹೆಗ್ಡೆ ಹೇಳಿಕೆ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಮಂಗಳವಾರ ಪುತ್ತೂರು ಕೋಆಪರೇಟಿವ್ ಟೌನ್ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ತರಬೇತಿ ಉದ್ಘಾಟಿಸಿದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ಮಾತನಾಡಿ, ತರಬೇತಿ ಆಯೋಜನೆಯ ಬಗ್ಗೆ ಜಿಜ್ಞಾಸೆಯಿತ್ತು. ಆದರೆ ತರಬೇತಿಯ ಅವಶ್ಯಕತೆ ಕಳೆದ ಆಡಳಿತ ಮಂಡಳಿಯ ಚುನಾವಣೆಯ ಸಂದರ್ಭದಲ್ಲಿ ನಮಗೆ ಅರಿವಾಗಿದೆ. ಹೀಗಾಗಿ ತರಬೇತಿ ಬಹಳ ಮುಖ್ಯ. ಇಂತಹ ತರಬೇತಿಯಲ್ಲಿ ಭಾಗವಹಿಸಿದಾಗ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಮಾಹಿತಿ ಪಡೆದು ಕಾರ್ಯದಲ್ಲಿ…

Read More

ವಿಟ್ಲ: ಇಲ್ಲಿನ ಆರಕ್ಷಕ ಠಾಣೆಗೆ ಅಗತ್ಯವಿದ್ದ ಹೆಚ್.ಪಿ ಲ್ಯಾಪ್‌ಟ್ಯಾಪ್‌ ಅನ್ನು ಠಾಣಾಧಿಕಾರಿಯವರಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ವತಿಯಿಂದ ಮಂಗಳವಾರ ಪ್ರಧಾನ ಕಛೇರಿಯಲ್ಲಿ ವಿತರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಹೆಚ್, ನಿರ್ದೆಶಕರಾದ ದಯಾನಂದ ಆಳ್ವ ಕೆ, ರಾಮದಾಸ ಶೆಣೈ ವಿ, ಕೇಶವ ಎ, ಜಯಂತಿ ಹೆಚ್.ರಾವ್, ಶುಭಲಕ್ಷ್ಮಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ನವದೆಹಲಿ: ಸಹಕಾರ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆ ತ್ರಿಭುವನ್‌ ಸಹಕಾರಿ ವಿಶ್ವವಿದ್ಯಾಲಯ ಭೂಮಿಪೂಜೆ ಸಮಾರಂಭ ಆಗಸ್ಟ್‌ ತಿಂಗಳಲ್ಲಿ ಗುಜರಾತ್‌ನ ಆನಂದ್‌ನಲ್ಲಿ ನಡೆಯಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ತ್ರಿಭುವನ್‌ ಸಹಕಾರಿ ವಿವಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ, ಇದು ಭಾರತದ ಸಹಕಾರಿ ಶಿಕ್ಷಣ ಕ್ಷೇತ್ರದಲ್ಲಿ ಒಂದು ಐತಿಹಾಸಿಕ ಕ್ಷಣವಾಗಲಿದೆ ಎಂದು ತಿಳಿಸಿದ್ದಾರೆ. ಸಹಕಾರ ಸಚಿವಾಲಯವು ಈಗಾಗಲೇ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಮೊದಲ ಆಡಳಿತ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯು ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ದೇಶಾದ್ಯಂತದ ಪ್ರಮುಖ ಸಹಕಾರಿ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡಿದೆ. ತ್ರಿಭುವನ್‌ ಸಹಕಾರಿ ವಿಶ್ವವಿದ್ಯಾಲಯವು ಸಹಕಾರಿ ಶಿಕ್ಷಣ, ಸಂಶೋಧನೆ ಮತ್ತು ತರಬೇತಿಗೆ ಮಾತ್ರ ಮೀಸಲಾಗಿರುವ ಭಾರತದ ಮೊದಲ ಸಂಸ್ಥೆಯಾಗಲಿದೆ. ಭಾರತದ ಸಹಕಾರಿ ಚಳವಳಿಯನ್ನು ಪುನರುಜ್ಜೀವನಗೊಳಿಸುವ ಸರ್ಕಾರದ ಧ್ಯೇಯಕ್ಕೆ ಅನುಗುಣವಾಗಿ ಸಹಕಾರಿ ಜ್ಞಾನ ಮತ್ತು ಸಾಮರ್ಥ್ಯ…

Read More

ನವದೆಹಲಿ: ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ಸ್ಥಿತಿ ಭಾರತೀಯ ಅಕ್ಕಿ ರಫ್ತುದಾರರನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಎರಡು ದೇಶಗಳ ನಡುವಿನ ಸಂಘರ್ಷದಿಂದ ಭಾರತದ ಬಂದರುಗಳಲ್ಲಿ ಸುಮಾರು 1,00,000 ಟನ್ ಬಾಸ್ಮತಿ ಅಕ್ಕಿ ರಫ್ತಾಗದೆ ಸಿಲುಕಿಕೊಂಡಿದೆ ಎಂದು ಭಾರತೀಯ ಅಕ್ಕಿ ರಫ್ತುದಾರರ ಸಂಘ (AIREA) ತಿಳಿಸಿದೆ. ಸೌದಿ ಅರೇಬಿಯಾ ನಂತರ ಇರಾನ್, ಭಾರತದ ಬಾಸ್ಮತಿ ಅಕ್ಕಿಯ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು ಎರಡು ದೇಶಗಳ ಡುವೆ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಹಡಗುಗಳು ಮತ್ತು ವಿಮೆ ಲಭ್ಯವಿಲ್ಲದ ಕಾರಣ ಈ ಪರಿಸ್ಥಿತಿ ಉಂಟಾಗಿದೆ. https://chat.whatsapp.com/EbVKVnWB6rlHT1mWtsgbch ಭಾರತದಿಂದ ಇರಾನ್‌ಗೆ ರಫ್ತಾಗುವ ಬಾಸ್ಮತಿ ಅಕ್ಕಿಯಲ್ಲಿ ಶೇಕಡಾ 18ರಿಂದ 20ರಷ್ಟು ಅಕ್ಕಿ ಬಂದರುಗಳಲ್ಲೇ ಸಿಲುಕಿಕೊಂಡಿದೆ ಎಂದು ಅಸೋಸಿಯೇಷನ್‌ನ ಅಧ್ಯಕ್ಷ ಸತೀಶ್ ಗೋಯಲ್ ಹೇಳಿದ್ದಾರೆ. ಗುಜರಾತ್‌ನ ಕಾಂಡ್ಲಾ ಮತ್ತು ಮುಂಡ್ರಾ ಬಂದರುಗಳಲ್ಲಿ ಅಕ್ಕಿ ತುಂಬಿದ ಹಡಗುಗಳು ಲಂಗರು ಹಾಕಿವೆ. ಸದ್ಯದ ಸ್ಥಿತಿಯಲ್ಲಿ ಇರಾನ್‌ಗೆ ಹಡಗುಗಳು ಹೋಗಲು ಸಾಧ್ಯವಿಲ್ಲ. ವಿಮಾ ಕಂಪನಿಗಳು ಕೂಡ ಹಡಗುಗಳಿಗೆ ವಿಮೆ ನೀಡಲು ತಯಾರಿಲ್ಲ. ಏಕೆಂದರೆ, ವಿಮಾ…

Read More

ಉಳ್ಳಾಲ: ದ.ಕ. ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಕಿನ್ಯಾ ಗ್ರಾಮದ ಮಿನಾದಿ ಶಾಲೆಯ 110 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಕೋಟೆಕಾರು ಬ್ಯಾಂಕ್ ನಿರ್ದೇಶಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಸುರೇಖಾ ಚಂದ್ರಹಾಸ್ ಮಾತನಾಡಿ, ಕೋಟೆಕಾರು ವ್ಯವಸಾಯ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮುತುವರ್ಜಿ ವಹಿಸಿ ಐದು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಬ್ಯಾಂಕ್ ವತಿಯಿಂದ ಕಲಿಯುವ ಸಾಮಗ್ರಿಗಳ ವಿತರಣೆ ಮಾಡಲಾಗಿದೆ. ಅಂಗ್ಲಮಾಧ್ಯಮ ಶಿಕ್ಷಣಕ್ಕೆ ಮಾರು ಹೋಗುತ್ತಿರುವ ಈಗಿನ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಈ ಸೇವೆ ಒದಗಿಸುತ್ತಿದೆ. ಹೆತ್ತವರು ಮಕ್ಕಳಿಗೆ ಅಸ್ತಿ ಮಾಡದಿದ್ದರೂ ಪರವಾಗಿಲ್ಲ, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಆಶಯ ವ್ಯಕ್ತಪಡಿಸಿದರು. ಕಿನ್ಯಾ ಗ್ರಾಮ…

Read More